ಮಕ್ಕಳಿಗೆ ಸಂಸ್ಕೃತಿ ಸಂಸ್ಕಾರಗಳನ್ನು ಚಿಕ್ಕಂದಿನಲ್ಲೇ ಕಲಿಸಬೇಕು : ಒಡಿಯೂರು ಶ್ರೀ

Sunday, September 18th, 2011
Odiyooru Sree

ವಿಟ್ಲ : ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಮತ್ತು ಶ್ರೀ ಗುರುದೇವದತ್ತ ಸಂಸ್ಥಾನಮ್‌ ಒಡಿಯೂರು ಇದರ ಜಂಟೀ ಆಶ್ರಯದಲ್ಲಿ ಒಡಿಯೂರು ಜ್ಞಾನ ಮಂದಿರದಲ್ಲಿ ಮೂರು ದಿನಗಳ ಕವಿತಾ ರಚನಾ ಕಮ್ಮಟವನ್ನು ಒಡಿಯೂರು ಶ್ರೀ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ರವಿವಾರ ದೀಪ ಬೆಳಗಿಸಿ ಉದ್ಘಾಟಿಸಿದರು. ಉದ್ಘಾಟನೆ ಬಳಿಕ ಮಾತನಾಡಿದ ಒಡಿಯೂರು ಶ್ರೀಗಳು ಮಕ್ಕಳಿಗೆ ಸಂಸ್ಕೃತಿ ಸಂಸ್ಕಾರಗಳನ್ನು ಚಿಕ್ಕಂದಿನಲ್ಲೇ ಕಲಿಸಬೇಕು. ಮಕ್ಕಳಲ್ಲಿ ತುಳು ಭಾಷೆಯ ಪ್ರೀತಿಯನ್ನು ಬೆಳೆಸಬೇಕು. ಪ್ರತಿ ಮನೆಯಲ್ಲಿಯೂ ಸನಾತನ ತುಳು ಸಂಸ್ಕೃತಿಯನ್ನು ಬೆಳೆಸುವ ಕೆಲಸ […]

ದೋಣಿ ದುರಂತ: ನಾಪತ್ತೆಯಾದ ಮೀನುಗಾರರ ಕುಟುಂಬಗಳಿಗೆ 1 ಲ.ರೂ ಪರಿಹಾರ

Sunday, September 18th, 2011
Palemar

ಮಂಗಳೂರು: ಪಣಂಬೂರು ಸಮೀಪ ಸಂಭವಿಸಿದ ದೋಣಿ ದುರಂತದಲ್ಲಿ ನಾಪತ್ತೆಯಾದ ಮೀನುಗಾರರ ಕುಟುಂಬಗಳಿಗೆ ಸರಕಾರದ ವತಿಯಿಂದ ಪರಿಹಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಜೆ. ಪಾಲೆಮಾರ್‌ ತಿಳಿಸಿದ್ದಾರೆ. ಶನಿವಾರ ಹಳೆ ಬಂದರು ವಿನುಗಾರಿಕಾ ದಕ್ಕೆಯಲ್ಲಿ ಆಯೋಜಿಸಿದ ಸಭೆಯಲ್ಲಿ ಮಾತನಾಡಿದ ಅವರು, ಸರಕಾರ ನಾಪತ್ತೆಯಾದ ಮೀನುಗಾರರ ಕುಟುಂಬಗಳಿಗೆ ತಲಾ 1 ಲ.ರೂ. ಹಾಗೂ ಗಾಯಾಳುಗಳಿಗೆ ತಲಾ 25,000 ರೂ. ಪರಿಹಾರ ನೀಡಲಿದೆ. ಈಗಾಗಲೇ ದೋಣಿ ದುರಂತದ ವಿವರವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗಿದೆ. ಪರಿಹಾರ ನೀಡಲು ಅವರು ಒಪ್ಪಿಗೆ […]

ಎಲ್‌.ಕೆ. ಆಡ್ವಾಣಿ ರಥಯಾತ್ರೆ ಹಾಸ್ಯಾಸ್ಪದ : ವಿಜಯ ಕುಮಾರ್‌ ಶೆಟ್ಟಿ

Saturday, September 17th, 2011
Vijayakumar shetty

ಮಂಗಳೂರು : ಎಲ್‌.ಕೆ. ಆಡ್ವಾಣಿ ಅವರು ಭ್ರಷ್ಟಾಚಾರದ ವಿರುದ್ಧ ರಥಯಾತ್ರೆ ಕೈಗೊಂಡಿರುವುದು ಹಾಸ್ಯಾಸ್ಪದ ಎಂದು ಕಾಂಗ್ರೆಸ್‌ ಮುಖಂಡ, ಮಾಜಿ ಶಾಸಕ ವಿಜಯ ಕುಮಾರ್‌ ಶೆಟ್ಟಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ದೇಶದಲ್ಲೇ ಭ್ರಷ್ಟಾಚಾರದಲ್ಲಿ ಅಗ್ರಸ್ಥಾನದಲ್ಲಿರುವ ರಾಜ್ಯ ಕರ್ನಾಟಕ ಎಂದು ಕುಖ್ಯಾತಿಗೆ ಒಳಗಾಗಿದೆ. ಭ್ರಷ್ಟಾಚಾರದಲ್ಲಿ ತೊಡಗಿ ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮತ್ತು ಜನಾರ್ದನ ರೆಡ್ಡಿ ಇವರೆಲ್ಲ ಹಲವು ಹಗರಣಗಳಲ್ಲಿ ಭಾಗಿಯಾಗಿ ಜೈಲು ಸೇರಬೇಕಾಯಿತು. ನಗರ ಪಾಲಿಕೆಯಲ್ಲಿಯೂ ಆಡಳಿತಯಂತ್ರ ಸಂಪೂರ್ಣ ಕುಸಿದಿದೆ. ಖಾಲಿ […]

ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ನೂತನ ಅಧ್ಯಕ್ಷ ಸಾಮಗರಿಗೆ ಸನ್ಮಾನ

Saturday, September 17th, 2011
Samaga Felicitation

ಮಂಗಳೂರು,: ಪಿ.ವಿ. ಐತಾಳ ಅವರ ಇಂಗ್ಲಿಷ್‌ ಯಕ್ಷಗಾನ ತಂಡ ‘ಯಕ್ಷನಂದನ’ ವತಿಯಿಂದ ಶುಕ್ರವಾರ ನಗರದ ಪುರಭವನದಲ್ಲಿ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ನೂತನ ಅಧ್ಯಕ್ಷ ಮಲ್ಪೆ ಲಕ್ಷ್ಮೀನಾರಾಯಣ (ಎಂ.ಎಲ್‌.) ಸಾಮಗ ಅವರನ್ನು ಸನ್ಮಾನಿಸಲಾಯಿತು. ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರು ಸಮ್ಮಾನ ಸಮಾರಂಭ ಅಧ್ಯಕ್ಷತೆ ವಹಿಸಿದ್ದರು. ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರು ಆಶೀರ್ವಚನಗೈದರು. ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅವರು ಮುಖ್ಯ ಅತಿಥಿಯಾಗಿದ್ದರು. ಸಮ್ಮಾನ ಸ್ವೀಕರಿಸಿ ಮಾತನಾಡಿದ ಮಲ್ಪೆ ಸಾಮಗರು ಬಯಲಾಟ […]

ತುಳು ಚಿತ್ರ ನಿರ್ಮಾಪಕ ವಿಜಯುಕಮಾರ್‌ ಕೊಡಿಯಾಲ್‌ಬೈಲ್‌ ಜೊತೆ ಪತ್ರಿಕಾ ಸಂವಾದ

Friday, September 16th, 2011
Asal Film

ಮಂಗಳೂರು: ದ.ಕ. ಜಿಲ್ಲಾ ಪತ್ರಕರ್ತರ ಸಂಘ ನಗರದಲ್ಲಿ ಏರ್ಪಡಿಸಿದ್ದ ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ ಚಿತ್ರ ನಿರ್ಮಾಪಕ, ರಂಗ ನಿರ್ದೇಶಕ ವಿಜಯುಕಮಾರ್‌ ಕೊಡಿಯಾಲ್‌ಬೈಲ್‌ ಮಾತನಾಡಿ ತುಳು ಚಿತ್ರರಂಗದ ಅಳಿವು ಉಳಿವಿನ ಬಗ್ಗೆ ವಿವರಿಸಿದರು. ತುಳು ನಿರ್ಮಾಪಕರು ಸಂಘಟನೆಯೊಂದನ್ನು ರೂಪಿಸುವ ಅಗತ್ಯವಿದ್ದು, ಕಡಿಮೆ ವೆಚ್ಚದಲ್ಲಿ ತುಳು ಚಿತ್ರ ನಿರ್ಮಾಣ ಮಾಡಲು ಸಂಘಟನೆಯ ಮುಲಕ್ ಸಾಧ್ಯವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಕರ್ನಾಟಕ ಫಿಲ್ಮ್ ಚೇಂಬರ್‌ಗೆ ನೊಂದಾಯಿತವಾಗುವಂತೆ ತುಳು ಚಿತ್ರರಂಗದ ಸಂಘಟನೆಯೊಂದನ್ನು ರಚಿಸಬೇಕು. ಆ ಮೂಲಕ ಹಲವಾರು ಸವಲತ್ತುಗಳನ್ನು ನಾವು ಪಡೆಯಲು ಸಾಧ್ಯ. […]

ಮೀನುಗಾರಿಕಾ ದೋಣಿ ಮುಳುಗಿ 6 ಮಂದಿ ಮೀನುಗಾರರು ನಾಪತ್ತೆ

Friday, September 16th, 2011
ಮೀನುಗಾರಿಕಾ ದೋಣಿ ಮುಳುಗಿ 6 ಮಂದಿ ಮೀನುಗಾರರು ನಾಪತ್ತೆ

ಮಂಗಳೂರು: ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿ 6 ಮಂದಿ ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರಿನ ಅಳಿವೆ ಬಾಗಿಲಿನ ಸಮೀಪ ಅರಬಿ ಸಮುದ್ರದಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ. ‘ಓಶಿಯನ್‌ ಫಿಶರೀಸ್‌- 2’ ಎಂಬ ಮೀನುಗಾರಿಕಾ ದೋಣಿಯಲ್ಲಿ 8 ದಿನಗಳ ಹಿಂದೆ 7 ಜನ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಮೀನು ಹಿಡಿದು ಹಿಂದಿರುಗುತ್ತಿದ್ದಾಗ ಮಂಗಳೂರಿನ ಅಳಿವೆ ಬಾಗಿಲಿನ ಸಮೀಪ ದುರ್ಘ‌ಟನೆ ಸಂಭವಿಸಿದೆ. ದೋಣಿಯಲ್ಲಿದ್ದ ೭ಜನರ ಪೈಕಿ ದೋಣಿಯ ಚಾಲಕ ಬಳ್ಳಾರಿ ಹೊಸಪೇಟೆಯ ಕಾಂಬ್ಲಿಪುರ ಕಂಟರ್‌ಬಿನ್ನೆಯ ಶ್ರೀಕಾಂತ್‌, ಕೊಪ್ಪಳದ ನಾರಾಯಣ, ಮಂಗಳೂರು ಪಂಜಿಮೊಗರಿನ […]

ಗಿಳಿ ಮಾರಾಟ ಆರೋಪಿ ಕಾವೂರಿನ ದೀಪಕ್‌ ಬಂಧನ

Thursday, September 15th, 2011
parrot-sale

ಮಂಗಳೂರು: ಕಾವೂರಿನ ದೀಪಕ್‌ (25) ಎಂಬಾತ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಳ ಬಳಿಯ ಅಂಗಡಿಯೊಂದರ ಬಳಿ ಕಾಡು ಗಿಳಿಗಳನ್ನು ಅಕ್ರಮವಾಗಿ ಮಾರಾಟ ಮಾಡುತಿದ್ದ ವೇಳೆ ಬುಧವಾರ ಮಂಗಳೂರು ಅರಣ್ಯ ಸಂಚಾರಿ ದಳದ ವಿಶೇಷ ಪೊಲೀಸರು ಪತ್ತೆ ಹಚ್ಚಿ ಆತನ ಬಳಿ ಇದ್ದ ಹಸಿರು ಬಣ್ಣದ 13 ಕಾಡು ಗಿಳಿಗಳನ್ನು ವಶ ಪಡಿಸಿಕೊಂಡಿದ್ದಾರೆ. ಆರೋಪಿ ದೀಪಕ್‌ ವಿರುದ್ಧ ವನ್ಯ ಜೀವಿ ಸಂರಕ್ಷಣಾ ಕಾಯ್ದೆಯನ್ವಯ ಕೇಸು ದಾಖಲಿಸಲಾಗಿದೆ. ಈ ಗಿಳಿಗಳನ್ನು ಕಾಸರಗೋಡಿನ ವ್ಯಕ್ತಿಯೊಬ್ಬರು ಪೂರೈಕೆ ಮಾಡಿರುವುದಾಗಿ ಆತ ವಿಚಾರಣೆಯ ವೇಳೆ […]

ಮೈಸೂರು ದಸರಾಕ್ಕೆ ಆನೆಕಾಡಿನಿಂದ ಹೋರಾಟ ಆನೆಗಳು.

Wednesday, September 14th, 2011
Elephents Starts Travels to Mysore Dasara

ಮಡಿಕೇರಿ : ಇಲ್ಲಿನ ದುಬಾರೆಯ ಸಾಕಾನೆ ಶಿಬಿರದಲ್ಲಿದ್ದ ನಾಲ್ಕು ಆನೆಗಳಾದ ವಿಕ್ರಮ್‌, ಹರ್ಷ ಗೋಪಿ, ಕಾವೇರಿ ಆನೆಗಳು ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲು 2ನೇ ಹಂತದ ಪ್ರಯಾಣ ಬೆಳೆಸಿದೆ. ದುಬಾರೆಯ ಆನೆಕಾಡಿನ ಈ ಸಾಕಾನೆಗಳನ್ನು ಬುಧವಾರ ಬೆಳಗ್ಗೆ ಶಿಬಿರದಲ್ಲಿ ನಡೆದ ವಿಶೇಷ ಪೂಜೆಗೆ ತೊಳೆದು – ಸ್ನಾನ ಮಾಡಿಸಿ, ಹಣೆ ಹಾಗೂ ಕಾಲುಗಳಿಗೆ ಹರಳೆಣ್ಣೆ ಲೇಪನ ಮಾಡಿ ಆನೆಗಳ ಮುಖ ಹಾಗೂ ದೇಹಗಳ ಮೇಲೆ ಚಿತ್ತಾರದ ಚಿತ್ರಗಳನ್ನು ಬಿಡಿಸಿ ವಿಶೇಷವಾಗಿ ಅಲಂಕರಿಸಿ ಪೂಜಿಸಿ ಬೀಳ್ಕೊಡಲಾಯಿತು. ವಿಕ್ರಮ್‌ ಆನೆಯ […]

ರೆಡ್ಡಿ ಗಳಿಗೆ ಜಾಮೀನು ನಿರಾಕರಿಸಿದ ಸಿಬಿಐ ಕೋರ್ಟ್

Tuesday, September 13th, 2011
ರೆಡ್ಡಿ ಗಳಿಗೆ ಜಾಮೀನು ನಿರಾಕರಿಸಿದ ಸಿಬಿಐ ಕೋರ್ಟ್

ಚೆನ್ನೈ : ಸಿಬಿಐ ಬಂಧನದಲ್ಲಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಸಂಬಂಧಿಕ ಶ್ರೀನಿವಾಸ ರೆಡ್ಡಿಗೆ ಮಂಗಳವಾರ ಜಾಮೀನು ನಿರಾಕರಿಸಲಾಗಿದೆ. ಸತತ ಮೂರು ದಿನಗಳ ಕಾಲ ಹೈದರಾಬಾದ್ ನಾಂಪಲ್ಲಿಯಲ್ಲಿರುವ ವಿಶೇಷ ಸಿಬಿಐ ಕೋರ್ಟಿನಲ್ಲಿ ಜಾಮೀನು ಅರ್ಜಿಯ ಕುರಿತಾಗಿ ವಾದ ವಿವಾದಗಳು ಬಲವಾಗಿಯೇ ನಡೆದಿದೆ. ಜನಾರ್ದನ ರೆಡ್ಡಿ ಪರವಾಗಿ ಘಟಾನುಘಟಿ ವಕೀಲರಾದ ಉದಯ್ ಲಲಿತ್ ಹಾಗೂ ಸಿ.ವಿ.ನಾಗೇಶ್ ಸುದೀರ್ಘವಾಗಿ ಮೂರು ದಿನಗಳ ಕಾಲ ತಮ್ಮ ಕಕ್ಷಿದಾರರಿಗೆ ಜಾಮೀನು ನೀಡಬೇಕೆಂದು ವಾದ ಮಂಡಿಸಿದ್ದರು. ಆದರೆ ಜನಾರ್ದನ ರೆಡ್ಡಿ ಪ್ರಕರಣ ಗಂಭೀರವಾಗಿದ್ದು, […]

ಧರ್ಮಸ್ಥಳದಲ್ಲಿ 13ನೇ ವರ್ಷದ ಭಜನಾ ತರಬೇತಿ ಕಮ್ಮಟದ ಉದ್ಘಾಟನೆ

Tuesday, September 13th, 2011
Darmasthala Bajana Kammata

ಬೆಳ್ತಂಗಡಿ :  ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ 13ನೇ ವರ್ಷದ ಭಜನಾ ತರಬೇತಿ ಕಮ್ಮಟದ ಉದ್ಘಾಟನಾ ಸಮಾರಂಭವನ್ನು ಸೋಮವಾರ ಹೇಮಾವತಿ ವೀ. ಹೆಗ್ಗಡೆ ಅವರು ಉದ್ಘಾಟಿಸಿದರು. ಕಮ್ಮಟ ಉದ್ಘಾಟಿಸಿದ ಹೇಮಾವತಿ ವೀ. ಹೆಗ್ಗಡೆ ಅವರು, ಭಗವಂತನ ಜತೆ ಸಂವಾದ ನಡೆಸುವ, ಭಗವಂತನನ್ನು ಒಲಿಸಿಕೊಳ್ಳುವ ಯತ್ನ ಭಜನೆ. ನಮ್ಮ ಧ್ವನಿಯನ್ನು ವಿಶ್ವದ ಧ್ವನಿ ಜತೆಗೆ ಸೇರಿಸುವ ಭಜನೆಯಿಂದ ಸಾಮಾಜಿಕ ಅಂತಸ್ತು, ಮೇಲು ಕೀಳೆಂಬ ಭಾವ ಮರೆಸಿ ಸಾಮಾಜಿಕ ಧ್ವನಿಯಾಗುತ್ತದೆ ಎಂದರು. ಅಧ್ಯಕ್ಷ ಸ್ಥಾನದಿಂದ ಮಾತನಾಡಿದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ […]