ಭಾಮಿನಿ ಮಾಸ ಪತ್ರಿಕೆ ಬಿಡುಗಡೆ

Wednesday, October 6th, 2010
ಭಾಮಿನಿ ಮಾಸ ಪತ್ರಿಕೆ ಬಿಡುಗಡೆ

ಮಂಗಳೂರು : ಭಾಮಿನಿ ಮಾಸ ಪತ್ರಿಕೆಯ ಬಿಡುಗಡೆ ಸಮಾರಂಭ ಇಂದು ಸಂಜೆ ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಸುಮಂತ್ ಎಸ್. ದೀಪ ಬೆಳಗಿಸುವ ಮೂಲಕ ನೆರವೇರಿಸಿದರು. ಭಾಮಿನಿ ಪತ್ರಿಕೆಯ ಬಿಡುಗಡೆಯನ್ನು ಆಳ್ವಾಸ ಎಜುಕೇಶನ್ ಫೌಂಡೇಶನ್ ಇದರ ಅಧ್ಯಕ್ಷ ಎಂ. ಮೋಹನ ಆಳ್ವಾ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಭಾಮಿನಿ ಮಾಸ ಪತ್ರಿಕೆ ಸುಸಂಸ್ಕೃತವಾಗಿ ಹೊರಬರಲಿ, ಓದುಗರ ಮನದಲ್ಲಿ ಭಾವೈಕ್ಯತೆ ಮೂಡಿಸಲಿ ಎಂದು ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹರಿಕೃಷ್ಣ ಪುನರೂರು […]

ಸರಕಾರದ ಯೋಜನೆಗಳು ಜನಸಾಮಾನ್ಯರ ಬಳಿಗೆ ತಲುಪುವಂತಾಗಬೇಕು : ಸಂಸದ ನಳಿನ್

Wednesday, October 6th, 2010
ಜಿಲ್ಲಾ ಸಣ್ಣ ಕೈಗಾರಿಕಾ ಸಂಘದಲ್ಲಿ `ನಾರು ಕುರಿತ ಕಾರ್ಯಗಾರ'

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಇದರ ನಾರು ಮಂಡಳಿ ಪ್ರಾದೇಶಿಕ ಕಚೇರಿ ಆಶ್ರಯದಲ್ಲಿ ಯೆಯ್ಯಾಡಿಯಲ್ಲಿ ಬುಧವಾರ ಬೆಳಿಗ್ಗೆ `ನಾರು ಕುರಿತ ಕಾರ್ಯಗಾರ’ವನ್ನು  ಸಂಸದ ನಳಿನ್ ಕುಮಾರ್ ಕಟೀಲು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಕಾರ್ಯಗಾರಗಳ ಮೂಲಕ ಸರಕಾರದ ಯೋಜನೆಗಳು ಜನಸಾಮಾನ್ಯರ ಬಳಿಗೆ ತಲುಪುವಂತಾಗಬೇಕು. ಇಂತಹ ಕಾರ್ಯಗಾರಗಳಲ್ಲಿ ಜನರು ಭಾಗವಹಿಸುವ ಮೂಲಕ ಸ್ವಂತ ಉದ್ದಿಮೆಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಉದ್ಘಾಟನೆ ಬಳಿಕ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಸರಕಾರದ ಯೋಜನೆಗಳನ್ನು ಅಧಿಕಾರಿಗಳು ಜನರಿಗೆ […]

ಹಿರಿಯ ಕಲಾವಿದ ಎಂ.ಎಸ್. ಇಬ್ರಾಹಿಂ ನಿಧನ

Wednesday, October 6th, 2010
ಹಿರಿಯ ಕಲಾವಿದ ಎಂ.ಎಸ್. ಇಬ್ರಾಹಿಂ ನಿಧನ

ಮಂಗಳೂರು : ಬಹುಮುಖ ಪ್ರತಿಭೆಯ ಹಿರಿಯ ರಂಗ ಕಲಾವಿದ, ಖ್ಯಾತ ರಂಗಕರ್ಮಿ ಎಂ.ಎಸ್. ಇಬ್ರಾಹಿಂ (78) ಇಂದು ಮುಂಜಾನೆ ಮಂಗಳೂರಿನ ಅವರ ನಿವಾಸದಲ್ಲಿ ನಿಧನರಾದರು. ಹಾಸ್ಯನಟರೂ, ತುಳು ಕನ್ನಡ, ಕೊಂಕಣಿ, ಇಂಗ್ಲಿಷ್ನಲ್ಲಿ 100 ಕ್ಕೂ ಅಧಿಕ ನಾಟಕಗಳನ್ನು ರಚಿಸಿರುವ ಶ್ರೀಯುತರು, ವರ್ಣಾಲಂಕಾರ ಪ್ರವೀಣರಾಗಿದ್ದರು. ಮಣ್ಣಗುಡ್ಡೆಯ ಎಂ.ಎಸ್. ಆರ್ಟ್ಸ್ ಸಂಸ್ಥೆಯ ಸ್ಥಾಪಕಾಧ್ಯಕ್ಷರಾಗಿರುವ ಎಂ.ಎಸ್.ಇಬ್ರಾಹಿಂ ಪತ್ನಿ ಮತ್ತು ಐವರು ಮಕ್ಕಳು ಹಾಗು ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಕನ್ನಡ, ತುಳು, ಕೊಂಕಣಿ, ಇಂಗ್ಲಿಷ್ ನಾಟಕಗಳಲ್ಲಿ ನಟಿಸಿದ್ದ, ನಿರ್ದೇಶಿಸಿದ್ದ ಎಂ.ಎಸ್. ಇಬ್ರಾಹಿಂ ಅವರು […]

ಬಿಜೆಪಿ ಸರಕಾರ ಇಕ್ಕಟ್ಟಿನಲ್ಲಿ 20 ಮಂದಿ ಬಿಜೆಪಿ ಶಾಸಕರ ಬೆಂಬಲ ವಾಪಸ್

Wednesday, October 6th, 2010
yeddyurappa

ಬೆಂಗಳೂರು : ಬಂಡಾಯದ ಬಾವುಟ ಹಾರಿಸಿರುವ  20 ಮಂದಿ ಬಿಜೆಪಿ ಶಾಸಕರು ಸರಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದ ಪತ್ರವನ್ನು ರಾಜ್ಯಪಾಲ ಹಂಸರಾಜ್ ಭಾರದ್ವಾಜ್‌ಗೆ ಸಲ್ಲಿಸಿದ್ದಾರೆ. ಆರು ಪಕ್ಷೇತರ ಶಾಸಕರು ಸೇರಿದಂತೆ ಒಟ್ಟು 20 ಮಂದಿ  ಬಿಜೆಪಿ ಶಾಸಕರು ಪಕ್ಷೇತರ ಸಚಿವ ನರೇಂದ್ರ ಸ್ವಾಮಿ ಮೂಲಕ ಬೆಂಬಲ ವಾಪಸ್ ಪಡೆದ ಪತ್ರವನ್ನು ರಾಜ್ಯಪಾಲರಿಗೆ ತಲುಪಿಸಿದ್ದಾರೆ. ಕಮಲದ  ಭಿನ್ನಮತ ಉಂಟು ಮಾಡಲು ಸಫಲರಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ  ಎಚ್ ಡಿ ಕುಮಾರಸ್ವಾಮಿ ಅವರು ಮತ್ತೊಮ್ಮೆ ರಾಜ್ಯದ […]

ಅನಧಿಕೃತ ಬಾಡಿಗೆ ಮಾಡುವ ಖಾಸಗಿ ಕ್ವಾಲಿಸ್ ವಾಹನಗಳ ಮುಟ್ಟಗೋಲು.

Wednesday, October 6th, 2010
ಖಾಸಗಿ ಕ್ವಾಲಿಸ್ ವಾಹನಗಳ ಮುಟ್ಟಗೋಲು

ಮಂಗಳೂರು: ಖಾಸಗಿ ಕಂಪೆನಿಯೊಂದರ ಪ್ರಚಾರಕ್ಕಾಗಿ ತಿಂಗಳ ಬಾಡಿಗೆಗೆ ನೀಡಲಾಗಿದ್ದ ಸುಮಾರು ಹನ್ನೆರಡು ಖಾಸಗಿ ಕ್ವಾಲಿಸ್ ವಾಹನಗಳನ್ನು ಇಂದು ಬೆಳಿಗ್ಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ಟ್ರಾಫಿಕ್ ಪೊಲೀಸರು ಮುಟ್ಟುಗೋಲು ಹಾಕಿದರು. ಮಂಗಳೂರಿನ ಫಳ್ನೀರಿನಲ್ಲಿ ಸದ್ಯದಲ್ಲೇ ಆರಂಭಗೊಳ್ಳಲಿರುವ ಜೋಯ್ ಆಲುಕಾಸ್ ಕಂಪೆನಿಯವರು ಸಂಸ್ಥೆಯ ಪ್ರಚಾರಕ್ಕಾಗಿ 20 ಕಾರುಗಳನ್ನು ನಿಗದಿಪಡಿಸಲಾಗಿದ್ದು ಅದರ ನಿರ್ವಹಣೆಯನ್ನು ಪ್ರಿಯಾ ಟ್ರಾವೆಲ್ಸ್ ನವರಿಗೆ ನೀಡಿದ್ದರು. ಕಾಂಟ್ರಾಕ್ಟುದಾರರಾದ ಪ್ರಿಯಾ ಟ್ರಾವೆಲ್ಸ್ ನ ಮಾಲಕರು ಕೆಲವೇ ಟೂರಿಸ್ಟ್ ಕಾರುಗಳನ್ನು ಗೊತ್ತು ಪಡಿಸಿ, ಇನ್ನುಳಿದ 12 ಕ್ವಾಲೀಸ್ ವಾಹನಗಳನ್ನು ಖಾಸಗಿಯವರಿಂದ […]

ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಸದಸ್ಯ

Friday, October 1st, 2010
ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಸದಸ್ಯ

ಬೆಂಗಳೂರು :  ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಪುತ್ರ, ಬಿಬಿಎಂಪಿ ಸದಸ್ಯ ಜಗದೀಶ್ ನಾಯ್ಡು ಕೆಐಎಡಿಬಿ ಪ್ರಕರಣದ ಸಾಕ್ಷಿದಾರೊಬ್ಬರಿಗೆ ಗಾಂಧಿನಗರದ ಕಚೇರಿಯಲ್ಲಿ ಒಂದು ಲಕ್ಷ ರೂಪಾಯಿ ಲಂಚ ನೀಡುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಗುರುವಾರ ನಡೆದಿದೆ. ಲೋಕಾಯುಕ್ತ ಪೊಲೀಸರು ದಿಢೀರನೆ ನಡೆಸಿದ ಕಾರ್ಯಾಚರಣೆಯಲ್ಲಿ ಕಟ್ಟಾ ಜಗದೀಶ್ ನಾಯ್ಡು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವುದು ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ರಾಜಕೀಯ ಭವಿಷ್ಯದ ಮೇಲೆ ಪರಿಣಾಮ ಬೀರಿದೆ. ಬುಧವಾರ ಬಿಬಿಎಂಪಿ ಸಭೆಯಲ್ಲಿ  ಜಗದೀಶ್ ನಾಯ್ಡುವನ್ನು […]

ಅಯೋದ್ಯೆಯ ವಿವಾದಿತ ಸ್ಥಳದ ತೀರ್ಪು ಅಲಹಾಬಾದ್ ಹೈಕೋರ್ಟಿನಿಂದ ಪ್ರಕಟ

Thursday, September 30th, 2010
ಅಲಹಾಬಾದ್ ಹೈಕೋರ್ಟ್

ಲಖನೌ  : ರಾಮಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ವಿವಾದದ ತೀರ್ಪು ಹೊರಬಿದ್ದಿದೆ. 60 ವರ್ಷಗಳ ವಿವಾದಿತ 2.7 ಎಕರೆ ಭೂಮಿಯನ್ನು  ಮೂರು ವಿಭಾಗಗಳನ್ನಾಗಿ ಮಾಡಿ ಮೂರು ಅರ್ಜಿದಾರರಿಗೆ ಹಂಚಲು  ಅಲಹಾಬಾದ್ ಹೈಕೋರ್ಟಿನ ಮೂರು ನ್ಯಾಯ ಮೂರ್ತಿಗಳ ಪೀಠ ಸೂಚಿಸಿದೆ. ರಾಮಲಲ್ಲಾನ ವಿಗ್ರಹ ಇರುವ ಇರುವ ಸ್ಥಳ ರಾಮಮಂದಿರ ನಿರ್ಮಾಣಕ್ಕೆ ಬಿಡಬೇಕು ಇನ್ನುಳಿದ ಒಂದು ಭಾಗವನ್ನು ಸುನ್ನಿ ವಕ್ಫ್ ಮಂಡಳಿ ಮತ್ತು  ಮೂರನೇ ಒಂದು ಭಾಗವನ್ನು ನಿರ್ಮೋಹಿ ಅಖಾಡಕ್ಕೆ ನೀಡಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ ಸಿಬಘತ್ ಉಲ್ಲಾ ಖಾನ್, […]

ಅಯೋಧ್ಯೆಯ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ತೀರ್ಪು ಸೆಪ್ಟೆಂಬರ್ 30 ಕ್ಕೆ

Tuesday, September 28th, 2010
ರಾಮ ಜನ್ಮಭೂಮಿ - ಬಾಬ್ರಿ ಮಸೀದಿ

ನವದೆಹಲಿ : ಅಯೋಧ್ಯೆಯ ರಾಮ ಜನ್ಮಭೂಮಿ – ಬಾಬ್ರಿ ಮಸೀದಿ ತೀರ್ಪು ಮುಂದೂಡಲು ರಮೇಶ್ ಚಂದ್ರ ತ್ರಿಪಾಠಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ತ್ರಿಸದಸ್ಯ ವಿಶೇಷ ಪೀಠವು ಸೆಪ್ಟೆಂಬರ್ 30ರಂದು ಗುರುವಾರ ತನ್ನ ಮಹತ್ವದ ತೀರ್ಪನ್ನು ಪ್ರಕಟಿಸಲಿದೆ. ಸೆಪ್ಟೆಂಬರ್ 24ರಂದು ಅಲಹಾಬಾದ್ ಹೈಕೋರ್ಟ್ ಪ್ರಕಟಿಸಬೇಕಿದ್ದ ತೀರ್ಪಿನ ತಾತ್ಕಾಲಿಕ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತೆರವುಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಎಸ್.ಎಚ್. ಕಪಾಡಿಯಾ, ಅಫ್ತಾಬ್ ಆಲಂ ಮತ್ತು ಕೆ.ಎಸ್. ರಾಧಾಕೃಷ್ಣನ್ ನೇತೃತ್ವದ ಸರ್ವೋಚ್ಚ ನ್ಯಾಯಾಲಯದ […]

`ವಿದ್ಯಾರ್ಥಿ ವ್ಯಕ್ತಿತ್ವ ವಿಕಸನದಲ್ಲಿ ಶಿಕ್ಷಕರ ಪಾತ್ರ’ ಕಾರ್ಯಗಾರ

Monday, September 27th, 2010
ವ್ಯಕ್ತಿತ್ವ ವಿಕಸನದಲ್ಲಿ ಶಿಕ್ಷಕರ ಪಾತ್ರ ಕಾರ್ಯಗಾರ

ಮಂಗಳೂರು: ರಾಮಕೃಷ್ಣ ಮಠದ, ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಸೆಪ್ಟಂಬರ್ 27 ರಿಂದ 28 ರ ವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಯುವ ಶಿಕ್ಷಕರ ಕಾರ್ಯಗಾರವನ್ನು ಡಾ. ವಿಶ್ವನಾಥ್ ಉದ್ಘಾಟಿಸಿದರು. ಉದ್ಘಾಟನಾ ಬಳಿಕ ಮಾತನಾಡಿದ ಅವರು ದೇಶದ ಪ್ರಗತಿ ಆಗಬೇಕಿರುವುದು ಶಿಕ್ಷಕರಿಂದಲೇ ಅದಕ್ಕಾಗಿ ಇಂದಿನಿಂದಲೇ ತಯಾರಿ ಹೊಂದಬೇಕು. ಕೇವಲ ಮಾತೃ ಭಾಷೆಯಲ್ಲಿ ಮಾತ್ರ ಪಾಂಡಿತ್ಯ ಹೊಂದದೆ ಇತರ ಭಾಷೆಗಳಲ್ಲಿಯೂ ಹಿಡಿತವನ್ನು ಹೊಂದಿ ಯಾವುದೇ ಸನ್ನಿವೇಶಗಳನ್ನು ಎದುರಿಸುವ ಮನೋಭಾವ ಹೊಂದಿರಬೇಕು ಎಂದು ಅವರು ಹೇಳಿದರು. ಸ್ವಾಮಿ ಜಿತಕಾಮಾನಂದಜೀಯವರು `ಉತ್ತಮ […]

ಮಂಗಳೂರಿನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ

Monday, September 27th, 2010
ವಿಶ್ವ ಪ್ರವಾಸೋದ್ಯಮ ದಿನಾಚರಣೆ

ಮಂಗಳೂರು: ಪ್ರವಾಸೋದ್ಯಮ ಇಲಾಖೆ, ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲೆ, ಪಣಂಬೂರ್ ಬೀಚ್  ಅಭಿವೃದ್ಧಿ ಯೋಜನಾ ಸಂಸ್ಥೆ ಹಾಗೂ ಮಂಗಳೂರು ಅಸೋಸಿಯೇಷನ್ ಆಫ್ ಟ್ರಾವೆಲ್ ಏಜೆಂಟ್ಸ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪ್ರವಾಸೋಧ್ಯಮ ದಿನಾಚರಣೆ 2010ನ್ನು ಇಂದು ಬೆಳಿಗ್ಗೆ ನಗರದ ಪುರಭವನದಲ್ಲಿ ಆಚರಿಸಲಾಯಿತು. ಪ್ರವಾಸೋಧ್ಯಮ ಮತ್ತು ಜೈವಿಕ ವೈವಿಧ್ಯತೆ ಎಂಬ ಸಂದೇಶದೊಂದಿಗೆ ಆಚರಿಸಲ್ಪಟ್ಟ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನಾಗರಾಜ ಶೆಟ್ಟಿಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ತೀರ ಪ್ರದೇಶವನ್ನು ಹೊಂದಿರುವ […]