ಪತ್ರಕರ್ತರ ಕ್ರೀಡಾಕೂಟ 2018

Monday, December 17th, 2018
press-3

ಮಂಗಳೂರು: ಕ್ರೀಡೆ ದೈಹಿಕ ಹಾಗೂ ಮಾನಸಿಕ ಸಮತೋಲನ ಕಾಯ್ದುಕೊಳ್ಳಲು ಸಾಧ್ಯ. ಒತ್ತಡದಿಂದ ಕಾರ್ಯನಿರ್ವಹಿಸುವ ಮಾಧ್ಯಮ ಕ್ಷೇತ್ರದ ಪ್ರತಿನಿಧಿಗಳು ಕ್ರೀಡೆಯಲ್ಲಿ ತೊಡಗಿಸಿಕೊಂಡಾಗ ವೃತ್ತಿ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ದಕ್ಷಿಣ ಕನ್ನಡ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಬಿ.ಆರ್.ರವಿಕಾಂತೇ ಗೌಡ ಅಭಿಪ್ರಾಯ ಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಇದರ ವತಿಯಿಂದ ಭಾನುವಾರ ನಗರದ ಪುಟ್ಭಾಲ್ ಮೈದಾನದಲ್ಲಿ ನಡೆದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು […]

ಪಿಲಿಕುಳ ಮೃಗಾಲಯಕ್ಕೆ ಅಪರೂಪದ ಧೋಲ್ ಆಗಮನ

Monday, December 17th, 2018
dhole

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಆಂಧ್ರ ಪ್ರದೇಶದ ವಿಶಾಖಪಟ್ಟಣದಿಂದ ಎರಡು ಗಂಡು ಮತ್ತು ಎರಡು ಹೆಣ್ಣು ಧೋಲ್, ಐದು ಪೈಂಟೆಡ್ ಕೊಕ್ಕರೆ, ದೊಡ್ಡ ಜಾತಿಯ ಐದು ಅಲೆಕ್ಸ್‍ಜಾಡ್ರಿಯನ್ ಗಿಳಿಗಳನ್ನು ತರಿಸಲಾಗಿದೆ. ಪ್ರಾಣಿಗಳ ವಿನಿಮಯ ಯೋಜನೆಯನ್ವಯ ಪಿಲಿಕುಳದಲ್ಲಿ ಅಧಿಕ ಸಂಖ್ಯೆಯಲ್ಲಿರುವ ಎರಡು ಗಂಡು ಹುಲಿಗಳು, ನಲ್ಕು ಕಾಡು ಕೋಳಿಗಳು ಮತ್ತು ಒಂದು ಮೊಸಳೆಯನ್ನು ವಿಶಾಖಪಟ್ಟಣಂಗೆ ನೀಡಲಾಗಿದೆ. ಧೋಲ್‍ಲನ್ನು ಕಾಡುನಾಯಿ ಯಾ ಚೆನ್ನೆ ನಾಯಿ ಎಂದು ಕರೆಯುತ್ತಾರೆ. ಇವುಗಳು ಹಿಂಡುಗಳಲ್ಲಿ ವಾಸಿಸುತ್ತವೆ. ಹಿಂದೆ ಅರಣ್ಯಗಳಲ್ಲಿ ಸಾಮಾನ್ಯವಾಗಿ ಕಾಣಿಸುತ್ತಿತು. ಇವು ಈಗ […]

ತಂದೆ ತಾಯಿಯವರನ್ನು ಕಳೆದುಕೊಂಡ ಮಕ್ಕಳ ದತ್ತು ಸ್ವೀಕಾರಕ್ಕೆ ಆಳ್ವಾಸ್ ನಿರ್ಧಾರ

Monday, December 17th, 2018
alwas-college

ಮೂಡುಬಿದಿರೆ: ಮೈಸೂರಿನ ಸುಳ್ವಾಡಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಪ್ರಸಾದದಲ್ಲಿ ವಿಷ ಪ್ರಾಶಣ ಸೇವಿಸಿ ಕೃಷ್ಣ ನಾಯ್ಕ್-ಮೈಲಿಬಾಯಿ ದಂಪತಿ ಸಾವನ್ನಪ್ಪಿದ್ದು, ಅವರ ಮೂವರು ಮಕ್ಕಳನ್ನು ದತ್ತು ಸ್ವೀಕರಿಸಲು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಿರ್ಧರಿಸಿದೆ. ಮಕ್ಕಳ ಅಭಿಪ್ರಾಯ ಪಡೆದು ಮುಂದಿನ ವ್ಯವಸ್ಥೆಯನ್ನು ಕಲ್ಪಿಸುವುದಾಗಿ ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ತಿಳಿಸಿದ್ದಾರೆ. ಮಂಗಳವಾರ ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಮೂವರು ಮಕ್ಕಳು ಹಾಗೂ ಅವರ ಸಂಬಂಧಿಕರನ್ನು ಭೇಟಿ ಮಾಡಿ, ಅವರಿಗೆ ಒಂದು ಲಕ್ಷ ರೂಪಾಯಿ ಆರ್ಥಿಕ ನೆರವು, […]

ಮಧ್ಯಪ್ರದೇಶದ 18ನೇ ಮುಖ್ಯಮಂತ್ರಿಯಾಗಿ ಕಮಲನಾಥ್ ಪ್ರಮಾಣವಚನ ಸ್ವೀಕಾರ

Monday, December 17th, 2018
kamalnath

ಭೋಪಾಲ್: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಧ್ವಜ ನೆಟ್ಟು, ಗೆಲುವಿನ ನಗೆ ಬೀರಿದ ಕಮಲನಾಥ್ ಅವರು ಇಂದು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ನ್ಯಾಷನಲ್ ಕಾನ್ಫರೆನ್ಸ್ನ ಅಧ್ಯಕ್ಷ ಫರೂಕ್ ಅಬ್ದುಲ್ಲಾ, ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್, ಮಲ್ಲಿಕಾರ್ಜು ಖರ್ಗೆ, ಆಂಧ್ರಪ್ರದೇಶ ಸಿಎಂ ಎನ್. ಚಂದ್ರಬಾಬು ನಾಯ್ಡು, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ , ಜೆಡಿಯು ನಿರ್ಮಿತ ನಾಯಕ ಶರದ್ ಯಾದವ್, ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಹಾಗೂ ಡಿಸಿಎಂ ಸಚಿನ್ ಪೈಲಟ್, ನವಜೋತ್ ಸಿಂಗ್ ಸಿಧು, […]

ಸರ್ಕಾರದಲ್ಲಿ ಯಾರ ಮೇಲೆಯೂ ಒತ್ತಡವಿಲ್ಲ: ಸಚಿವ ದೇಶಪಾಂಡೆ

Monday, December 17th, 2018
deshpande

ಬೆಳಗಾವಿ: ಯಾರ ಮೇಲೆ ಯಾರ ಒತ್ತಡವೂ ಇಲ್ಲ. ಎಲ್ಲರೂ ಪರಸ್ಪರ ವಿಶ್ವಾಸದಿಂದ ಕೆಲಸ ಮಾಡುತ್ತಿದ್ದೇವೆ ಎಂದು ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದರು. ಜೆಡಿಎಸ್ನವರಿಂದ ಕೈಶಾಸಕರಿಗೆ ಒತ್ತಡ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದೆಲ್ಲಾ ಸತ್ಯಕ್ಕೆ ದೂರವಾದ ಮಾತು. ಹಾಗೇನಾದರೂ ಅಸಮಾಧಾನಗಳಿದ್ದರೆ ಕಾಂಗ್ರೆಸ್ ಶಾಸಕಾಂಗ‌ ಪಕ್ಷದ ನಾಯಕ ಸಿದ್ದರಾಮಯ್ಯ ಅದನ್ನು ಬಗೆಹರಿಸುತ್ತಾರೆ. ಸಮ್ಮಿಶ್ರ ಸರ್ಕಾರದ ಶಾಸಕರಿಗೆ ಯಾವುದೇ ಒತ್ತಡವಿಲ್ಲ ಎಂದು ಸ್ಪಷ್ಟಪಡಿಸಿದರು. ಸಚಿವ ಸಂಪುಟ ವಿಸ್ತರಣೆ ವೇಳೆ ಯಾರು ಇರಬೇಕು, ಯಾರು ಇರಬಾರದು ಎಂದು ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ. ಕೆಲವರನ್ನು […]

‘ಸೇವಾ ರತ್ನ’ ಪ್ರಶಸ್ತಿ 2018

Monday, December 17th, 2018
seva-award

ಬಂಟ್ವಾಳ: ತುಂಬೆ ಗ್ರಾಮದ ಮಾಣೂರು ನಿವಾಸಿ ಅಬೂಬಕರ್ ಮುಸ್ಲಿಯಾರ್ ಹಾಗೂ ದುಲೈಕಾ ದಂಪತಿಗಳ ಪುತ್ರ ಆಶಿಕ್ ಕುಕ್ಕಾಜೆ ಅವರನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೀಸ್ & ಎವರ್ನೆಸ್ ಟ್ರಸ್ಟ್ (ರಿ.) ನಾಲ್ಕನೇ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ’ಸೇವಾ ರತ್ನ’ ಪ್ರಶಸ್ತಿ 2018 ನ್ನು ಪೀಸ್ & ಎವರ್ನೆಸ್ ಟ್ರಸ್ಟ್ ಅಧ್ಯಕ್ಷ ಅಲ್ತಾಫ್ ಬಿಳಗುಳ ಜೇಸಿ ಭವನದಲ್ಲಿ ನೀಡಿ ಗೌರವಿಸಿದರು. ಸಾಮಾಜಿಕ ತಾಣಗಳಲ್ಲಿ ಬಡ ರೋಗಿಗಳ, ಅಶಕ್ತರ ಬಗ್ಗೆ ಬರಹಗಳನ್ನು ಬರೆಯುವ ಮೂಲಕ ಬಡ ರೋಗಿಗಳ ಚಿಕಿತ್ಸೆಗೆ ಸಾಮಾಜಿಕ ಜಾಲತಾಣವನ್ನು ಉಪಯೋಗಿಸಿ […]

ವಿಷ ಪ್ರಸಾದ ಪ್ರಕರಣ: ವಿಷ ಹಾಕಿದವನ ಕುರಿತು ಸಿಕ್ಕಿತು ಮಹತ್ವದ ಸುಳಿವು

Monday, December 17th, 2018
poison

ಚಾಮರಾಜನಗರ: ಇಲ್ಲಿನ ಮಾರಮ್ಮ ದೇಗುಲದಲ್ಲಿ ನಡೆದ ವಿಷ ಪ್ರಸಾದ ದುರಂತಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವೊಂದು ಲಭ್ಯವಾಗಿದೆ. ಈ ದುರಂತದಲ್ಲಿ ಪ್ರಭಾವಿ ವ್ಯಕ್ತಿಯ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಇದರ ಕಿಂಗ್ಪಿನ್ಗಾಗಿ ಶೋಧಕಾರ್ಯ ಆರಂಭವಾಗಿದೆ. ತಮಿಳುನಾಡು ಮೂಲದ ವ್ಯಕ್ತಿಗಾಗಿ ಪೊಲೀಸರು ಬೇಟೆ ಕಾರ್ಯ ಮುಂದುವರಿಸಿದ್ದಾರೆ. ಈ ನಿಟ್ಟಿನಲ್ಲಿ ತಡರಾತ್ರಿ ತಮಿಳುನಾಡಿನ ಧರ್ಮಪುರಿಗೆ ತೆರಳಿರುವ ರಾಜ್ಯ ಪೊಲೀಸರ ಒಂದು ತಂಡದಿಂದ ಗಡಿಯಂಚಿನ ಗ್ರಾಮಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಬಂಧಿತರನ್ನ ನಿರಂತರ ವಿಚಾರಣೆಗೆ ಒಳಪಡಿಸಿರುವ ತನಿಖಾಧಿಕಾರಿಗಳು, ಈ ಸಂಜೆವರೆಗೆ ಮತ್ತಷ್ಟು ಜನರನ್ನು ಹೆಡೆಮುರಿ ಕಟ್ಟುವ […]

ಅಕ್ರಮ ಗ್ಯಾಸ್ ರಿಫಿಲ್ಲಿಂಗ್ ಅಡ್ಡೆ ಮೇಲೆ ದಾಳಿ: ಮಂಗಳೂರಲ್ಲಿ ಇಬ್ಬರ ಸೆರೆ

Monday, December 17th, 2018
gas-tanker

ಮಂಗಳೂರು: ಸರ್ಕಾರಿ ಸ್ವಾಮ್ಯದ ಕಂಪನಿಗಳಿಂದ ಪೂರೈಕೆಯಾಗುವ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳಿಂದ ಅಕ್ರಮವಾಗಿ ಇತರ ಸಿಲಿಂಡರ್ಗಳಿಗೆ ರಿಫಿಲ್ಲಿಂಗ್ ನಡೆಸುತ್ತಿದ್ದ ಅಡ್ಡದ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಾರ ಹಾಗೂ ಜೆಪ್ಪುಮಾರ್ಕೆಟ್ ಪರಿಸರದಲ್ಲಿ ಈ ದಾಳಿ ನಡೆದಿದೆ. ಸರ್ಕಾರಿ ಸ್ವಾಮ್ಯದ ಕಂಪನಿಗಳಿಂದ ಪೂರೈಕೆಯಾಗುವ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳಿಂದ ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಇತರ ಸಿಲಿಂಡರ್ಗಳಿಗೆ ರಿಫಿಲ್ಲಿಂಗ್ ನಡೆಸುತ್ತಿದ್ದ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ […]

ನಾಟ್ಯಗುರು ವಿದ್ವಾನ್ ಕುದ್ಕಾಡಿ ವಿಶ್ವನಾಥ್ ರೈ ಇನ್ನಿಲ್ಲ…!

Monday, December 17th, 2018
vishwanath

ಪುತ್ತೂರು: ಹಿರಿಯ ನಾಟ್ಯಗುರು ವಿದ್ವಾಂಸ ಕಲಾಶ್ರೀ ವಿದ್ವಾನ್ ಕುದ್ಕಾಡಿ ವಿಶ್ವನಾಥ ರೈ (86) ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಸುಳ್ಯಪದವಿನಲ್ಲಿ‌ ಬಸ್ ಇಳಿದು ನಡೆದು ಹೋಗುತ್ತಿರುವಾಗ ಕುಸಿದು ಬಿದ್ದ ಅವರನ್ನು‌ ತಕ್ಷಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೆ ಅವರು ಮೃತಪಟ್ಟಿದ್ದಾರೆ. ವಿಶ್ವ ಕಲಾನಿಕೇತನ ಎಂಬ ಹೆಸರಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಭರತನಾಟ್ಯದ ಪಟ್ಟುಗಳನ್ನು ಕಲಿಸಿಕೊಟ್ಟ ಕಲಾಶ್ರೀ ಬಿರುದಾಂಕಿತ ವಿದ್ವಾನ್ ಕುದ್ಕಾಡಿ ಭರತನಾಟ್ಯ ಕ್ಷೇತ್ರದಲ್ಲಿ ಮೇರು ಪ್ರತಿಭೆಯಾಗಿದ್ದರು. ಭಾನುವಾರ ಪುತ್ತೂರಿನಲ್ಲಿ ನಡೆದ ಪುಸ್ತಕ ಹಬ್ಬದಲ್ಲಿ […]

ಕರಾವಳಿ ದೇವಸ್ಥಾನಗಳಿಗೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್..!

Monday, December 17th, 2018
yash-star

ಕೊಲ್ಲೂರು: ಕನ್ನಡ ಚಲನಚಿತ್ರ ರಂಗದ ಖ್ಯಾತ ಯುವ ನಟ ಯಶ್‌ ಅವರು ರವಿವಾರ ಕರಾವಳಿಯ ಪ್ರಮುಖ ದೇಗುಲಗಳಿಗೆ ಭೇಟಿ ನೀಡಿ ಪೂಜೆ, ಸೇವೆ ಸಲ್ಲಿಸಿದರು. ಇತ್ತೀಚೆಗೆ ಹೆಣ್ಣುಮಗುವಿನ ತಂದೆಯಾಗಿರುವ ಯಶ್‌ ಅವರ ಹೊಸ ಸಿನೆಮಾ ಬಿಡುಗಡೆಯ ಹಂತದಲ್ಲಿದೆ. ಕರಾವಳಿ ತೀರ್ಥಯಾತ್ರೆಯ ಆರಂಭದಲ್ಲಿ ಯಶ್‌ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಕೊಲ್ಲೂರು ದೇಗುಲಕ್ಕೆ ರೂ. 1.06 ಲಕ್ಷ ದೇಣಿಗೆ ನೀಡಿದರು. ಕೊಲ್ಲೂರು ದೇಗುಲದ […]