ಪತ್ರಕರ್ತರ ಗ್ರಾಮ ವಾಸ್ತವ್ಯ‌ ಕಾರ್ಯಕ್ರಮ ರಾಜ್ಯಕ್ಕೆ ಮಾದರಿ-ಸ್ಪೀಕರ್ ಯು.ಟಿ.ಖಾದರ್

Monday, February 12th, 2024
Journalist

ಕೊಲ್ಲಮೊಗ್ರ: ತಮ್ಮ ಒತ್ತಡದ ಕೆಲಸದ ಮಧ್ಯೆಯೂ ಗ್ರಾಮ ವಾಸ್ಯವ್ಯ ಮಾಡಿ ಆ ಊರಿನ ಸಮಸ್ಯೆಗಳನ್ನು ಅರಿತು ಪರಿಹಾರಕ್ಕಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಪತ್ರಕರ್ತರು ಮಾಡಿದ ಗ್ರಾಮ ವಾಸ್ತವ್ಯ ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತ್, ದ.ಕ.ಪೊಲೀಸ್ ಇಲಾಖೆ, ಸುಳ್ಯ ತಾಲೂಕು ಆಡಳಿತ, ಹರಿಹರ, ಕೊಲ್ಲಮೊಗರು […]

ಜಪ್ಪಿನಮೊಗರು ಜಯ ವಿಜಯ ಜೋಡುಕರೆ ಕಂಬಳದ ಫಲಿತಾಂಶ : ವಿಡಿಯೋ

Monday, February 12th, 2024
ಜಪ್ಪಿನಮೊಗರು ಜಯ ವಿಜಯ ಜೋಡುಕರೆ ಕಂಬಳದ ಫಲಿತಾಂಶ : ವಿಡಿಯೋ

ಮಂಗಳೂರು : ಜಪ್ಪಿನಮೊಗರು ನೇತ್ರಾವತಿ ನದಿ ತಟದಲ್ಲಿ ತು 14 ನೇ ವರ್ಷದ ಜಯ ವಿಜಯ ಜೋಡುಕರೆ ಕಂಬಳವು ಯಶಸ್ವಿಯಾಗಿ ಮುಕ್ತಾಯ ಗೊಂಡಿದ್ದು ಕಂಬಳ ಕೂಟದ ಫಲಿತಾoಶ ಇಲ್ಲಿದೆ. ಕಂಬಳ ಕೂಟದಲ್ಲಿ ಒಟ್ಟು 138 ಜೊತೆ ಕೋಣಗಳು ಭಾಗವಹಿಸಿದ್ದು ಅವುಗಳಲ್ಲಿ ಕನೆಹಲಗೆ: 06 ಜೊತೆ, ಅಡ್ಡಹಲಗೆ: 05 ಜೊತೆ, ಹಗ್ಗ ಹಿರಿಯ: 13 ಜೊತೆ, ನೇಗಿಲು ಹಿರಿಯ: 28 ಜೊತೆ, ಹಗ್ಗ ಕಿರಿಯ: 16 ಜೊತೆ, ನೇಗಿಲು ಕಿರಿಯ: 70 ಜೊತೆ. ಕನೆಹಲಗೆ ವಿಭಾಗದಲ್ಲಿ ಸಮಾನ ಬಹುಮಾನ […]

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶಿಫಾರಸ್ಸು: ಪರಶುರಾಮ ಥೀಮ್‌ ಪಾರ್ಕ್‌ ಕಾಮಗಾರಿ ಸಿಐಡಿ ತನಿಖೆಗೆ : ಸಿಎಂ ಆದೇಶ

Thursday, February 8th, 2024
lakshmi-Hebbalkar

ಉಡುಪಿ: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಯಲ್ಲಿ ಆಗಿರುವ ಕಳಪೆ ಹಾಗೂ ಅವ್ಯವಹಾರದ ಬಗ್ಗೆ ತನಿಖೆಗೆ ಮುಖ್ಯಮಂತ್ರಿಗಳು ಸಿಐಡಿಗೆ ಒಪ್ಪಿಸಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರ ಶಿಫಾರಸ್ಸಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೀಗ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ಇದೇ 2ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್.‌ […]

ಮಾದಕ ವಸ್ತು ಎಂಡಿಎಂಎ ಸಾಗಾಟ, ಇಬ್ಬರ ಬಂಧನ, ಓರ್ವ ಪರಾರಿ

Thursday, February 8th, 2024
mmda

ಬಂಟ್ವಾಳ : ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಓರ್ವ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಚಿ ಗ್ರಾಮ ನಿವಾಸಿಗಳಾದ ಅಬ್ದುಲ್ ರಹೀಝ್ ಹಾಗೂ ದಾವೂದುಲ್ ಅಮೀರ್ ಬಂಧಿತ ಆರೋಪಿಗಳಾಗಿದ್ದಾರೆ. ಇನ್ನೋರ್ವ ಆರೋಪಿ ಬಂಟ್ವಾಳ ನಿವಾಸಿ ನಝೀರ್ ಪರಾರಿಯಾಗಿದ್ದಾನೆ. ಬಂಧಿತರಿಂದ 4 ಸಾವಿರ ರೂ. ಮೌಲ್ಯದ 4 ಗ್ರಾಂ 04 ಮಿ.ಗ್ರಾಂ.ತೂಕದ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಬಂಟ್ವಾಳ ನಗರ ಠಾಣಾಧಿಕಾರಿ […]

ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ನಿಧನ

Wednesday, February 7th, 2024
Padmanabha naringana

ಮಂಗಳೂರು : ಪದ್ಮನಾಭ ನರಿಂಗಾನ (77)ಅವರು ಹೃದಯಾಘಾತದಿಂದ ನಗರದ ಖಾಸಗಿ‌ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ಇವರು ಸಮಾಜಸೇವೆಯೊಂದಿಗೆ ಅನೇಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು. ಅಹಿಂದ ಜಿಲ್ಲಾಧ್ಯಕ್ಷ, ಕಾಂಗ್ರೆಸ್ ಮುಖಂಡ, ದಲಿತ ನಾಯಕ, ನರಿಂಗಾನ ಕಂಬಳ ಸಮಿತಿ ಗೌರವ ಸಲಹೆಗಾರ, ನರಿಂಗಾನ ಕಂಬಳ ಸಮಿತಿ ಗೌರವ ಸಲಹೆಗಾರ, ನರಿಂಗಾನ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದರು. ಕಳೆದ‌‌ ಬಾರಿ‌ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೂ ಭಾಜನರಾಗಿದ್ದರು. ಮೃತರುಗೆ ಪತ್ನಿ, ಇಬ್ಬರು ಪುತ್ರಿಯರು, ಪುತ್ರ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ನಿಧನಕ್ಕೆ […]

ಮಂಗಳೂರು ಮತ್ತು ಕೇರಳಕ್ಕೆ ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಸೆರೆ

Tuesday, February 6th, 2024
ಮಂಗಳೂರು ಮತ್ತು ಕೇರಳಕ್ಕೆ ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಸೆರೆ

ಮಂಗಳೂರು : ಒರಿಸ್ಸಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಹೇಂದ್ರ ಬೊಲೆರೋ ವಾಹನದಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾ ಸಾಗಾಟ ಸಾಗಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 120 ಕೆ ಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳದ ವಯನಾಡಿನ ಅನೂಪ್ ಎಂ.ಎಸ್(28), ಕೇರಳದ ಕಣ್ಣೂರಿನ ಲತೀಪ್ ಕೆ.ವಿ(36) ಬಂಧಿತರು. ಮಂಗಳವಾರ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ […]

ಸಹಕಾರ ಸಂಘದಲ್ಲಿ ನಕಲಿ ಚಿನ್ನವಿಟ್ಟು ಲಕ್ಷಾಂತರ ರೂಪಾಯಿ ವಂಚಿಸಿದ ಇಬ್ಬರಿಗೆ ಶೋಧ

Tuesday, February 6th, 2024
Kadaba

ಕಡಬ : ಸಹಕಾರ ಸಂಘದಲ್ಲಿ ನಕಲಿ ಚಿನ್ನದ ಬಳೆಗಳನ್ನು ಇಟ್ಟು ಲಕ್ಷಾಂತರ ರೂಪಾಯಿಗಳನ್ನು ಸಾಲ ಪಡೆದು ಇಬ್ಬರು ವಂಚಿಸಿರುವುದಾಗಿ ದೂರು ದಾಖಲಾಗಿದೆ. ನೆಲ್ಯಾಡಿ ಸಹಕಾರ ಸಂಘ, ಉಪ್ಪಿನಂಗಡಿಯ ಸಹಕಾರಿ ಸಂಘ, ಅಲಂಕಾರು ಸಹಕಾರಿ ಸಂಘಗಳಲ್ಲಿ ಇವರು ನಕಲಿ ಚಿನ್ನ ಅಡವಿಟ್ಟು ಲಕ್ಷಗಟ್ಟಲೆ ಹಣ ಪಡೆದ ಪ್ರಕರಣ ಬೆಳಕಿಗೆ ಬಂದಿದೆ. ಇದೇ ಆರೋಪಿಗಳು ಜ. 27 ರಂದು ನೆಲ್ಯಾಡಿಯ ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ 30 ಗ್ರಾಂ ತೂಕದ 4 ನಕಲಿ ಬಳೆಗಳನ್ನು ಅಡಮಾನವಿರಿಸಿ, 1.40 ಲಕ್ಷ ರೂ.ವನ್ನು […]

ಪುತ್ತಿಲರಿಗೆ ಸರಿಯಾದ ಸ್ಥಾನಮಾನ ನೀಡಿದ್ದಲ್ಲಿ ಬಿಜೆಪಿ ಸೇರ್ಪಡೆ, ಇಲ್ಲವಾದಲ್ಲಿ ಲೋಕಸಭೆಗೆ ಸ್ಪರ್ಧೆ

Monday, February 5th, 2024
puttila-parivara

ಪುತ್ತೂರು: ಪುತ್ತಿಲ ಪರಿವಾರದ ಕಾರ್ಯಕರ್ತರ ಸಮಾಲೋಚನಾ ಸಭೆ ನಡೆದಿದ್ದು ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಇನ್ನು ಮೂರು ದಿನಗಳಲ್ಲಿ ಪುತ್ತಿಲ ಪರಿವಾರ ಬಿಜೆಪಿ ಸೇರ್ಪಡೆ ಅಥವಾ ಲೋಕಸಭೆಯಲ್ಲಿ ಸ್ಫರ್ಧಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂದು ನಿರ್ಧರಿಸುವ ಘೋಷಣೆ ಮಾಡಲಾಗಿದೆ. ಪುತ್ತಿಲರಿಗೆ ಬಿಜೆಪಿ ಪುತ್ತೂರು ಮಂಡಲ ಅಧ್ಯಕ್ಷತೆ ನೀಡದಿದ್ದಲ್ಲಿ ಮುಂದೆ ಜಿಲ್ಲೆಯಲ್ಲಿ ಮಹಾ ರಾಜಕೀಯ ವಿಪ್ಲವ ನಡೆಯಲಿದೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಎಚ್ಚರಿಕೆ ನೀಡಿದ್ದಾರೆ. ಸೋಮವಾರ ಸಂಜೆ ಪುತ್ತೂರಿನ ಕೊಟೇಚ ಹಾಲ್‍ನಲ್ಲಿ ನಡೆದ ಪುತ್ತಿಲ […]

ಒಂದೇ ಸ್ಥಳದಲ್ಲಿ 18 ಗುಳಿಗ ದೈವಗಳ ಅಬ್ಬರದ ನರ್ತನ, ತುಳುನಾಡಿನ ಇತಿಹಾಸದಲ್ಲೇ ಮೊದಲು

Monday, February 5th, 2024
Barkaje-guliga

ಮಂಗಳೂರು: ಒಂದೇ ಬಾರಿ 18 ಗುಳಿಗ ದೈವದ ಗಗ್ಗರ ಸೇವೆ ವೇಣೂರು ಸಮೀಪದ ಬರ್ಕಜೆ ನವ ಗುಳಿಗ ಕ್ಷೇತ್ರದಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಬರ್ಕಜೆ ಎಂಬಲ್ಲಿ ಈ ಬಾರಿ 18 ಗುಳಿಗನ ಅಬ್ಬರದ ನರ್ತನ ಸೇವೆಗೆ ಭಕ್ತರು ಸಾಕ್ಷಿಯಾದರು. ಬರ್ಕಜೆ ದುರ್ಗಾಪರಮೇಶ್ವರಿ ಮತ್ತು ನವ ಗುಳಿಗ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಒಂಬತ್ತು ಗುಳಿಗ ದೈವದ ನರ್ತನ ಸೇವೆ ನಡೆಯುತ್ತಿತ್ತು.‌ ಆದರೆ ಈ ಬಾರಿ ಸಂಪ್ರದಾಯದಂತೆ ಒಂಬತ್ತು ಹಾಗೂ ಸೇವೆಯಾಗಿ […]

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಕೊಳಲು ನುಡಿಸಿ ಸೇವೆ ಸಲ್ಲಿಸಿದ ವಿದೇಶಿ ಪ್ರಜೆ

Monday, February 5th, 2024
Flute-Mathew

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ವಿದೇಶಿ ಮೂಲದ ವ್ಯಕ್ತಿಯೊಬ್ಬರು ರಾತ್ರಿ ಶ್ರೀಕೃಷ್ಣನ ಶಯನೋತ್ಸವದ ವೇಳೆ ಕೊಳಲು ನುಡಿಸಿ ಸೇವೆ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದಾರೆ. ಶ್ರೀಕೃಷ್ಣ ಮಠದಲ್ಲಿ ರಾತ್ರಿ ಪಲ್ಲಕ್ಕಿಯಲ್ಲಿ ಕೃಷ್ಣನನ್ನಿಟ್ಟು ಕೊಳಲು ನುಡಿಸುತ್ತಾ ಕೊನೆಯ ಪ್ರದಕ್ಷಿಣೆ ಹಾಕಿ ನಂತರ ಯತಿಗಳು ಕೃಷ್ಣನನ್ನು ಶಯನೋತ್ಸವಕ್ಕೆ ಕೊಂಡೊಯ್ಯುವ ವೇಳೆ ಕೊಳಲು ನುಡಿಸಿ ಗಮನ ಸೆಳೆದಿದ್ದಾರೆ. ಮ್ಯಾಥ್ಯೂ ಎಂಬ ಹೆಸರಿನ ಈ ವ್ಯಕ್ತಿ ಸದ್ಯ ತನ್ನ ಹೆಸರನ್ನು ಮಾಧವ ಎಂದು ಬದಲಾಯಿಸಿಕೊಂಡಿದ್ದಾರೆ. ಇವರು ಬೆಳ್ತಂಗಡಿಯ ಹರಿದಾಸ ಡೋಗ್ರ ಎಂಬುವರ ಬಳಿ […]