ಬಿಜೆಪಿಯ ದಕ್ಷಿಣ ಭಾರತದ ಮೊದಲ ಮುಖ್ಯಮಂತ್ರಿ ಯಡಿಯೂರಪ್ಪ ಭಾನುವಾರ ಪದತ್ಯಾಗ

Friday, July 29th, 2011
cm Yeddyurappa/ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು : ಲೋಕಾಯುಕ್ತ ವರದಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರು ಪ್ರಸ್ತಾಪವಾದ ಬಳಿಕ ಹುದ್ದೆ ತೊರೆಯುವಂತೆ ಹೈಕಮಾಂಡ್‌ನಿಂದ ಸೂಚನೆ ಬಂದ ಬಳಿಕ ಅವರು ಮೊದಲ ಬಾರಿ ಮೌನ ಮುರಿದು ಪಕ್ಷದ ನಿರ್ದೇಶನಕ್ಕೆ ಮಣಿದು ಭಾನುವಾರ (ಜು.31)ರಂದು ಪದತ್ಯಾಗ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಪಕ್ಷವನ್ನು ಶೂನ್ಯದಿಂದ ಕಟ್ಟಿ ಬೆಳೆಸಿದ್ದೇನೆ ಮತ್ತು ಭವಿಷ್ಯದಲ್ಲಿ ಕೂಡ ಪಕ್ಷಕ್ಕಾಗಿ ದುಡಿಯಲು ಸಿದ್ಧ ಎಂದು ಹೇಳಿದ್ದಾರೆ. ತಾನು ಬಿಜೆಪಿಯ ಶಿಸ್ತಿನ ಸಿಪಾಯಿಯಾಗಿದ್ದು, ಆಷಾಢ ಮಾಸವು ಜು.30ರಂದು ಕೊನೆಗೊಳ್ಳುತ್ತದೆ. ಅದರ ಬಳಿಕ ಆ.31ರಂದು ರಾಜೀನಾಮೆ ನೀಡುವುದಾಗಿ […]

ಮಳೆಗಾಲದ ರಜಾ-ಮಜಾ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾರಿಷಸ್‌ಗೆ

Tuesday, July 19th, 2011
yeddyurappa family/ಬಿ.ಎಸ್.ಯಡಿಯೂರಪ್ಪ ಕುಟುಂಬ

ಬೆಂಗಳೂರು : ಮಂಗಳವಾರ ಮುಂಜಾನೆ 5.55ಕ್ಕೆ ದೇವನಹಳ್ಳಿ ವಿಮಾನ ನಿಲ್ದಾಣದಿಂದ ಬಿ.ಎಸ್.ಯಡಿಯೂರಪ್ಪ ಕುಟುಂಬ ಸದಸ್ಯರ ಸಹಿತ ಮಾರಿಷಸ್‌ಗೆ ಪ್ರಯಾಣ ಬೆಳೆಸಿದ್ದಾರೆ. ಭೂಹಗರಣದ ವಿಚಾರಣೆ, ಅಕ್ರಮ ಗಣಿಯ ಅಂತಿಮ ವರದಿಯನ್ನು ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಸಲ್ಲಿಸಲು ದಿನಗಣನೆ ಆರಂಭವಾಗುತ್ತಿದ್ದ ಬೆನ್ನಲ್ಲೇ ಮುಖ್ಯಮಂತ್ರಿಗಳು ಪ್ರಯಾಣ ಬೆಳೆಸಿರುವುದು ಕುತೂಹಲಕ್ಕೆ ಎಡೆ ಮಾಡಿದೆ. ರಾಜ್ಯದಲ್ಲಿ ಸಾಕಷ್ಟು ಪ್ರವಾಹ ಪರಿಸ್ಥಿತಿ, ಭೂ ಹಗರಣದ ವಿಚಾರಣೆ ನಡೆಯುತ್ತಿದ್ದರೂ ಕೂಡ ದಿಢೀರ್ ಅಂತ ಪುತ್ರ ರಾಘವೇಂದ್ರ, ಪುತ್ರಿ, ಮೊಮ್ಮಕ್ಕಳ ಜತೆ ಮಾರಿಷಸ್ ಪ್ರವಾಸ ಕೈಗೊಂಡಿದಕ್ಕೆ ಪ್ರತಿಪಕ್ಷಗಳು ಕಿಡಿಕಾರಿವೆ. […]

ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಜಯಭೇರಿ

Tuesday, January 4th, 2011
ದ.ಕ.ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆ ಫಲಿತಾಂಶ

ಮಂಗಳೂರು : ಡಿ.31ರಂದು ನಡೆದ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಕ್ಷೇತ್ರಗಳ ಚುನಾವಣೆಯ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು , ದಕ್ಷಿಣ ಕನ್ನಡ ಮತ್ತು ಉಡುಪಿಯ ಜಿ.ಪಂ., ತಾ.ಪಂ. ಕ್ಷೇತ್ರಗಳಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ ಮೇಲುಗೈ ಸಾಧಿಸಿದೆ ಇಂದು ಬೆಳಿಗ್ಗೆ ಮತ ಎಣಿಕೆ ಮುಗಿದಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ 24 ಸ್ಥಾನಗಳನ್ನು  ತನ್ನದಾಗಿಸಿಕೊಂಡಿದೆ, ಕಾಂಗ್ರೆಸ್ 11 ಸ್ಥಾನಗಳನ್ನು ಪಡೆಯಿತು. ಬಂಟ್ವಾಳದಲ್ಲಿ ಜಿ.ಪಂ. ಕ್ಷೇತ್ರದಲ್ಲಿ 6ಸ್ಥಾನಗಳಲ್ಲಿ ಬಿಜೆಪಿ ,ಕಾಂಗ್ರೆಸ್ 3 ಸ್ಥಾನಗಳನ್ನು ಗಳಿಸಿದೆ. ಗೋಳ್ತಮಜಲು ಕ್ಷೇತ್ರದಲ್ಲಿ […]

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಮೈತ್ರಿ ಇಲ್ಲ: ದೇವೇಗೌಡ

Friday, December 10th, 2010
ದೇವೇಗೌಡ

ಬೆಂಗಳೂರು  : ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಯಾವುದೇ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ  ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ತಿಳಿಸಿದ್ದಾರೆ. ಕಾಂಗ್ರೆಸ್ ಜತೆಗೆ ಮೈತ್ರಿಯ ಪ್ರಶ್ನೆಯೇ ಇಲ್ಲ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದ್ದು ಎಲ್ಲಾ ಜಿಲ್ಲೆಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ ಎಂದು ದೇವೇಗೌಡ ತಿಳಿಸಿದ್ದಾರೆ. ರಾಜಕೀಯ ಪಕ್ಷವಾಗಿ ನೇರವಾಗಿ ಜನರ ಮುಂದೆ ಹೋಗುತ್ತೇವೆ. ಹೊಂದಾಣಿಕೆ ಮಾಡಿಕೊಳ್ಳದಿದ್ದರೆ ಜಾತ್ಯತೀತ ಮತ ವಿಭಜನೆಯಾಗಿ ಬಿಜೆಪಿಗೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯವಿದೆ ಎಂದು ಪತ್ರಕರ್ತರಿಗೆ ತಿಳಿಸಿದರು. ಅಭಿವೃದ್ಧಿಯೇ ಮೂಲಮಂತ್ರ ಎಂದ ಬಿಜೆಪಿ […]

ಮಂಗಳೂರು ನಗರ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರಾಗಿ ಕೆ.ಆಶ್ರಫ್ ಪದಗ್ರಹಣ

Thursday, December 9th, 2010
ನಗರ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರಾಗಿ ಕೆ.ಆಶ್ರಫ್ ಪದಗ್ರಹಣ

ಮಂಗಳೂರು : ಮಾಜಿ ಮೇಯರ್ ಕೆ. ಅಶ್ರಫ್ ಅವರು ಮಂಗಳೂರು ನಗರ ಕಾಂಗ್ರೇಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಇಂದು ಸಂಜೆ ಮಂಗಳೂರಿನ  ಭಾರತೀಯ ಸ್ಕೌಟ್ ಮತ್ತು ಗೈಡ್ಸ್ ಭವನ ಲಾಲ್ಭಾಗ್ ಇಲ್ಲಿ ನಡೆದ ಸಮಾರಂಭದಲ್ಲಿ ಹಿಂದಿನ ಮಂಗಳೂರು ಉತ್ತರ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಸುರೇಶ್ ಬಲ್ಲಾಳ್ ಇವರಿಂದ ಬಿ. ಜನಾರ್ಧನ ಪೂಜಾರಿ ಇವರ ಸಮ್ಮಖದಲ್ಲಿ ಪದಗ್ರಹಣ ನಡೆಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಕೇಂದ್ರ ಸಚಿವ ಬಿ. ಜನಾರ್ಧನ ಪೂಜಾರಿ ದೀಪ ಬೇಳಗಿಸುವುದರ ಮೂಲಕ ನೆರವೇರಿಸಿದರು. ಬಳಿಕ ಮಾತನಾಡಿದ […]

ಕೆ.ಪಿ.ಸಿ.ಸಿ ನೂತನ ಅಧ್ಯಕ್ಷ ಡಾ. ಜಿ. ಪರಮೇಶ್ವ ರ್ ಗೆ ಅದ್ದೂರಿ ಸ್ವಾಗತ

Tuesday, November 30th, 2010
ಕೆ.ಪಿ.ಸಿ.ಸಿ ನೂತನ ಅಧ್ಯಕ್ಷ ಡಾ. ಜಿ. ಪರಮೇಶ್ವರ್ಗೆ ಅದ್ದೂರಿ ಸ್ವಾಗತ

ಮಂಗಳೂರು: ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ  ಬಳಿಕ ಪ್ರಥಮ ಬಾರಿಗೆ ಮಂಗಳೂರಿಗೆ ಆಗಮಿಸಿದ ಡಾ. ಜಿ. ಪರಮೇಶ್ವರ್ ರವರನ್ನು ಸ್ವಾಗತಿಸಲಾಯಿತು. ಡಾ. ಜಿ. ಪರಮೇಶ್ವರವರನ್ನು ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮುಖಂಡರು ನಗರದ ಜ್ಯೋತಿ ವೃತ್ತದಿಂದ ಭವ್ಯ ಮರೆರವಣಿಗೆಯಲ್ಲಿ ಪುರಭವನಕ್ಕೆ ಕರೆ ತಂದರು. ಮೆರವಣಿಗೆ ಹೊರಡುವಾಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಮಾನಾಥ ರೈ ಡಾ. ಜಿ. ಪರಮೇಶ್ವರವರನ್ನು ಸ್ವಾಗತಿಸಿದರು. ದ.ಕ ಜಿಲ್ಲಾ ಶೈಲಿಯ ವಿವಿಧ […]

ದ.ಕ ಜಿಲ್ಲಾ ಬಿಜೆಪಿ ವತಿಯಿಂದ ಜೆಡಿಎಸ್ ಮತ್ತು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ.

Wednesday, October 20th, 2010
ದ.ಕ ಜಿಲ್ಲಾ ಬಿಜೆಪಿ ವತಿಯಿಂದ ಜೆಡಿಎಸ್ ಮತ್ತು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ.

ಮಂಗಳೂರು: ರಾಜ್ಯದ ರಾಜಕಾರಣದಲ್ಲಿ ಕುತಂತ್ರ ನೀತಿಯಿಂದ ಆಡಳಿತ ಸರಕಾರಕ್ಕೆ ತೊಂದರೆಕೊಡುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ದ.ಕ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಕಛೇರಿಯ ಎದುರು ಇಂದು ಸಂಜೆ ಪ್ರತಿಭಟನೆ ನಡೆಯಿತು. ಸ್ಪಷ್ಟ ಜನಾದೇಶದಿಂದ ಅಧಿಕಾರಕ್ಕೆ ಬಂದು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿರುವ ಬಿಜೆಪಿ ಸರಕರಾದ ಕಾರ್ಯವೈಖರಿಯನ್ನು ಕಂಡು ಸಹಿಸದ ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರು ಮಾಡುವ ಕುತಂತ್ರಗಳು ಇನ್ನು ನಡೆಯುವುದಿಲ್ಲ ರಾಜ್ಯದಲ್ಲಿ ಇನ್ನು ಐದು ವರ್ಷಗಳವರೆಗೆ ಸರಕಾರ ಅಧಿಕಾರದಲ್ಲಿರುತ್ತದೆ. ಎಂದು ಮಂಗಳೂರು ಶಾಸಕ ಎನ್. ಯೋಗೀಶ್ ಭಟ್ […]

ಜೆಡಿಎಸ್ ಶಾಸಕ ಎಂ.ಸಿ.ಅಶ್ವತ್ಥ ರಾಜೀನಾಮೆ

Friday, October 15th, 2010
ಎಂ.ಸಿ.ಅಶ್ವತ್ಥ

ಬೆಂಗಳೂರು : ಜೆಡಿಎಸ್ ಶಾಸಕರಾಗಿದ್ದ ಎಂ.ಸಿ.ಅಶ್ವತ್ಥ ಅವರು ಸ್ಪೀಕರ್ ಕೆ.ಜಿ.ಬೋಪಯ್ಯ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ಚನ್ನಪಟ್ಟಣ ಶಾಸಕ ಎಂ.ಸಿ.ಅಶ್ವತ್ಥ ಗುರುವಾರ ಈ ನಿರ್ಧಾರ ಕೈಗೊಂಡಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ತಮಿಳುನಾಡು ಪ್ರವಾಸದಲ್ಲಿದ್ದೆ. ಹಾಗಾಗಿ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ. ಪಕ್ಷದ ನಾಯಕರಿಂದ ತನಗೆ ಯಾವುದೇ ತೊಂದರೆ ಇಲ್ಲ. ಇದೀಗ ನನ್ನ ವೈಯಕ್ತಿಕ ಕಾರಣದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ. ಅ.11ರಂದು ನಡೆದ ವಿಶ್ವಾಸಮತ ಯಾಚನೆಗಾಗಲಿ, ಅ.14ರಂದು ನಡೆದು […]

ಎರಡನೇ ಬಾರಿಗೆ ಬಹುಮತ ಗೆದ್ದ ಯಡಿಯೂರಪ್ಪ ಸರಕಾರ

Thursday, October 14th, 2010
ಬಿ.ಎಸ್.ಯಡಿಯೂರಪ್ಪ

ಬೆಂಗಳೂರು : ದೇಶದ ಇತಿಹಾಸದಲ್ಲೇ ಒಂದೇ ವಾರದಲ್ಲಿ ಎರಡೆರಡು ಬಾರಿ ವಿಶ್ವಾಸ ಮತ ಚಲಾಯಿಸಿ ದಕ್ಷಿಣ ಭಾರತದಲ್ಲಿ ಮೊದಲ ಭಾರಿಗೆ ಅಧಿಕಾರ ಹಿಡಿದ ಬಿ.ಎಸ್.ಯಡಿಯೂರಪ್ಪ ಸರಕಾರ ವಿಶ್ವಾಸಮತ ಯಾಚನೆಯಲ್ಲಿ ಗೆಲುವು ಸಾಧಿಸಿದೆ. ವಿಧಾನ ಸಭಾ ಸ್ಪೀಕರ್ ದ್ವನಿ ಮತದ ಮೂಲಕ ವಿಶ್ವಾಸ ಮತ ಚಲಾಯಿಸಲು ಸೂಚಿಸಿದರಾದರೂ ವಿರೋಧ ಪಕ್ಷದ ಪ್ರತಿರೋದದಿಂದಾಗಿ ತಲೆ ಎಣಿಕೆಗೆ ಸೂಚನೆ ನೀಡಿದರು. ಪರ ಹಾಗೂ ವಿರೋಧ ಪಕ್ಷಗಳ ಶಾಸಕರ ಪ್ರತಿ ಸಾಲಿನ ಮತ ಎಣಿಕೆ ಬಳಿಕ ಯಡಿಯೂರಪ್ಪ ಪರವಾಗಿ 106 ಹಾಗೂ ವಿರೋಧವಾಗಿ […]

ರಾಜ್ಯಪಾಲರು, ಕಾಂಗ್ರೆಸ್, ಜೆಡಿಎಸ್ ನಾಯಕರ ವರ್ತನೆಗೆ ದ.ಕ ಜಿಲ್ಲಾ ಬಿಜೆಪಿ ಖಂಡನೆ.

Wednesday, October 13th, 2010
ಬಿ.ಜೆಪಿಯ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿ

ಮಂಗಳೂರು:  ಕಳೆದ ಒಂದು ವಾರದ ರಾಜ್ಯದ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದಾಗ ಈ ರಾಜ್ಯದಲ್ಲಿ ಜನಾದೇಶದೊಂದಿಗೆ ಜನಪರ ಆಡಳಿತ ನೀಡುವ  ಒಂದು ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರತಿಪಕ್ಷಗಳು ಯಾವ ರೀತಿ ಕಾರ್ಯೋನ್ಮುಖವಾಗಿದೆ ಎನ್ನುವುದರ ಜ್ವಲಂತ ಸಾಕ್ಷಿಯಾಗಿದೆ. ರಾಜ ಭವನವನ್ನು ರಾಜಕೀಯ ಚಟುವಟಿಕೆಗಳ ಕೇಂದ್ರವಾಗಿರಿಸಿಕೊಂಡು ರಾಜ್ಯಪಾಲರನ್ನು ಪಕ್ಷದ ಏಜಂಟರಂತೆ ಉಪಯೋಗಿಸಿಕೊಂಡ ಕಾಂಗ್ರೆಸ್-ಜೆಡಿಎಸ್ನ ಕುತಂತ್ರ ಬಯಲಾಗಿದೆ ಎಂದು ಬಿ.ಜೆಪಿಯ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿಯವರು ಇಂದು ಬಿಜೆಪಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಸರಕಾರದ ಭಾಗವಾಗಿ ಕಾರ್ಯನಿರ್ವಹಿಸಿದ ಸಚಿವರನ್ನು, ಶಾಸಕರನ್ನು ರೆಸಾರ್ಟ್ ಗಳಲ್ಲಿ […]