ಎರಡು ತಲೆ ಹಾವಿನ ಕಳ್ಳ ಸಾಗಾಟ : ಇಬ್ಬರ ಬಂಧನ

Saturday, February 22nd, 2020
mahadeshwara

ಮೈಸೂರು : ಇಲ್ಲಿಗೆ ಸಮೀಪದ ಮಲೈ ಮಹದೇಶ್ವರ ವನ್ಯ ಜೀವಿ ವಿಭಾಗಕ್ಕೆ ಸೇರಿದ ಹೂಗ್ಯಂ ವಲಯದ ಶಾಂತನೂರು ಬಯಲು ಅರಣ್ಯದಲ್ಲಿ ಇಬ್ಬರು ಐನಾತಿಗಳು ಎರಡು ತಲೆ ಹಾವನ್ನು ಹಿಡಿದಿದ್ದಾಗಲೇ ಅರಣ್ಯ ಅಧಿಕಾರಿಗಳ ಕೈಗೆ ಸಿಕ್ಕು ಬಿದ್ದಿದ್ದಾರೆ. ಇಂದು ಬೆಳಿಗ್ಗೆ ಬೀಟ್‌ ತಿರುಗುತ್ತಿರುವಾಗ ಅರಣ್ಯದೊಳಗೆ ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರು. ಸಿಬ್ಬಂದಿಗಳು ಹತ್ತಿರ ಹೋಗಿ ವಿಚಾರಿಸಿದಾಗ ಚೀಲವೊಂದರಲ್ಲಿ ಎರಡು ತಲೆ ಹಾವು ಕಂಡು ಬಂದಿತು. ಕೂಡಲೇ ವಶಕ್ಕೆ ಪಡೆದು ಮೊಕದ್ದಮೆ ದಾಖಲಿಸಿಕೊಳ್ಳಲಾಗಿದೆ ಎಂದು ವನ್ಯ ಜೀವಿ ವಿಭಾಗ […]

ಗಾಂಜಾ ಸಾಗಾಟ : ಸುಂಟಿಕೊಪ್ಪದ ನಾಲ್ವರ ಬಂಧನ; 1.50ಲಕ್ಷ ರೂ. ಮೌಲ್ಯದ ಮಾಲು ವಶ

Saturday, February 22nd, 2020
sunti-koppa

ಮಡಿಕೇರಿ : ಮೈಸೂರಿನ ಮಂಡಿ ಮೊಹಲ್ಲಾದಿಂದ ಗಾಂಜಾವನ್ನು ತಂದು ಕೊಡಗು ಜಿಲ್ಲೆಯ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತಿದ್ದ ನಾಲ್ವರನ್ನು ಬಂಧಿಸುವಲ್ಲಿ ಕುಶಾಲನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಸುಂಟಿಕೊಪ್ಪದ ಕೆ.ಇ.ಬಿ ಬಳಿಯ ನಿವಾಸಿ, ಪೈಂಟಿಂಗ್ ಕೆಲಸ ಮಾಡುವ ಅಮ್ಜದ್ ಶರೀಫ್(31), ಚೆಟ್ಟಳ್ಳಿ ರಸ್ತೆ ನಿವಾಸಿ, ಕೂಲಿ ಕೆಲಸ ಮಾಡುವ ಸಮೀರ್(30), ಅಪ್ಪಾರಂಡ ಬಡಾವಣೆ ನಿವಾಸಿ, ಪೈಟಿಂಗ್ ಕೆಲಸ ಮಾಡುತ್ತಿದ್ದ ಅಫ್ರಿದ್(27), ಕೆ.ಇ.ಬಿ ಬಳಿಯ ನಿವಾಸಿ ಪೈಂಟಿಂಗ್ ಕೆಲಸ ಮಾಡುವ ರವಿ(27) ಎಂಬವರುಗಳೇ ಬಂಧನಕ್ಕೆ ಒಳಗಾದ ಆರೋಪಿಗಳಾಗಿದ್ದಾರೆ. ಬಂಧಿತರಿಂದ 1.50ಲಕ್ಷ ರೂ.ಮೌಲ್ಯದ 6 […]

ಜರ್ಮನಿಯ ಹನೌನಗರದಲ್ಲಿ 2 ಹುಕ್ಕಾಬಾರ್​​ಗಳ ಮೇಲೆ ಗುಂಡಿನ ದಾಳಿ : 8 ಜನರ ಸಾವು

Thursday, February 20th, 2020
jurmani

ಜರ್ಮನಿ : ಜರ್ಮನಿಯ ಹನೌನಗರದಲ್ಲಿ ಎರಡು ಹುಕ್ಕಾಬಾರ್ಗಳ ಮೇಲೆ ಗುಂಡಿನ ದಾಳಿ ನಡೆದು 8 ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ನಿನ್ನೆ ರಾತ್ರಿ 10 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ಹುಕ್ಕಾ ಬಾರ್ಗಳನ್ನು ಗುರಿಯಾಗಿಸಿಕೊಂಡು ಫೈರಿಂಗ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ನಡೆದ 3 ಗಂಟೆಗಳ ಬಳಿಕ ಪೊಲೀಸರು ಸ್ಥಳಕ್ಕೆ ಧಾವಿಸಿ ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ದುರಂತದಲ್ಲಿ ಸಾವನ್ನಪ್ಪಿದವರ ಬಗ್ಗೆ ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ನಗರದ ಮಧ್ಯಭಾಗದಲ್ಲಿ […]

ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸಿದ್ದ ಇಬ್ಬರು ವ್ಯಕ್ತಿಗಳ ಬಂಧನ : 58.95 ಲಕ್ಷ ರೂ. ಬೆಲೆಬಾಳುವ ಚಿನ್ನ ವಶ

Tuesday, February 18th, 2020
chinna

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸಿದ್ದ ಇಬ್ಬರು ವ್ಯಕ್ತಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು, ಬಂಧಿತರಿಂದ ಸುಮಾರು 58.95 ಲಕ್ಷ ರೂ. ಬೆಲೆಬಾಳುವ ಚಿನ್ನವನ್ನು ವಶಕ್ಕೆ ಪಡದಿದ್ದಾರೆ. ಬಂಧಿತರನ್ನು ಕೇರಳದ ಮುಹಮ್ಮದ್ ಸ್ವಾಲಿಹ್ ಹಾಗೂ ಮೊಹಮ್ಮದ್ ನಿಷಾದ್ ಎಂದು ಗುರುತಿಸಲಾಗಿದೆ. ಮೊದಲ ಪ್ರಕರಣದಲ್ಲಿ ಆರೋಪಿ ಮುಹಮ್ಮದ್ ಸ್ವಾಲಿಹ್ ಸ್ಪೈಸ್‌ಜೆಟ್ ವಿಮಾನದ ಮೂಲಕ ದುಬೈನಿಂದ ಮಂಗಳೂರಿಗೆ ಆಗಮಿಸಿದ್ದು, ಫೆಸ್ಟ್ ರೂಪದಲ್ಲಿ ಚಿನ್ನವನ್ನು ಕರಗಿಸಿ ಮಾತ್ರೆಗಳ ರೀತಿ ತಯಾರಿಸಿ ತನ್ನ […]

ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕೆಎಸ್‌ಆರ್‌ಟಿಸಿ ಕಂಡಕ್ಟರ್‌ ಬಂಧನ

Tuesday, February 18th, 2020
KSRTC-bus-conductor

ಬೆಂಗಳೂರು : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿ ಪಕ್ಕದಲ್ಲಿ ಕುಳಿತು ಉದ್ದೇಶಪೂರ್ವಕವಾಗಿ ಆಕೆಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ನಿರ್ವಾಹಕನನ್ನು ಸುಬ್ರಮಣ್ಯನಗರ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಸುಬು ಆಲಿ ತಲ್ಲೂರ ಬಂಧಿತ ನಿರ್ವಾಹಕ. ಬೆಂಗಳೂರು- ಪುತ್ತೂರು ಬಸ್‌ನಲ್ಲಿ ಫೆ. 15ರಂದು ಘಟನೆ ನಡೆದಿದೆ. ನಿರ್ವಾಹಕ ತನ್ನ ಪಕ್ಕದಲ್ಲಿ ಕುಳಿತು ಕಿರುಕುಳ ನೀಡುತ್ತಿರುವುದನ್ನು ಸಂತ್ರಸ್ತ ಯುವತಿ ವಿಡಿಯೋ ಮಾಡಿಕೊಂಡಿದ್ದು, ಪೊಲೀಸರಿಗೆ ನೀಡಿದ್ದಾರೆ. ಫೆ. 15ರಂದು ಯುವತಿ ಗೋವರ್ಧನ್‌ ಚಿತ್ರಮಂದಿರ ಸ್ಟಾಪ್‌ನಲ್ಲಿ […]

ಪ್ರವಾದಿ ಬಗ್ಗೆ ಅವಹೇಳನ ಆರೋಪ : ನಾಪೋಕ್ಲುವಿನಲ್ಲಿ ದೂರು ದಾಖಲು

Tuesday, February 18th, 2020
haris

ಮಡಿಕೇರಿ : ಪ್ರವಾದಿ ಪೈಗಂಬರರು ಹಾಗೂ ಇಸ್ಲಾಂ ಧರ್ಮವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಅತುಲ್ ಕುಮಾರ್ (ಮಧುಗಿರಿ ಮೋದಿ) ಎಂಬುವವರ ವಿರುದ್ಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಹಾರಿಸ್ ನಾಪೋಕ್ಲು ಅವರು ದೂರು ದಾಖಲಿಸಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಅತುಲ್ ಕುಮಾರ್ ಎಂಬುವವರು ಮುಸಲ್ಮಾನರ ಭಾವನೆಗೆ ದಕ್ಕೆ ತರುವ ರೀತಿಯಲ್ಲಿ ಪ್ರವಾದಿ ಪೈಗಂಬರರು ಹಾಗೂ ಇಸ್ಲಾಂ ಧರ್ಮದ ಬಗ್ಗೆ ಮಾತನಾಡಿದ್ದು, ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹಾರಿಸ್ ದೂರಿನಲ್ಲಿ ತಿಳಿಸಿದ್ದಾರೆ.  

ಮೈಸೂರಿನಲ್ಲಿ ನಕಲಿ ವೈದ್ಯರ ಬಂಧನ

Saturday, February 15th, 2020
health-center

ಮೈಸೂರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ವೆಂಕಟೇಶ್‌ ನೇತೃತ್ವದ ಅಧಿಕಾರಿಗಳ ತಂಡ ಗುರುವಾರ ಇಲವಾಲ ಗ್ರಾಮದಲ್ಲಿ ಕ್ಲಿನಿಕ್‌ ನಡೆಸುತಿದ್ದ ಇಬ್ಬರು ನಕಲಿ ವೈದ್ಯರನ್ನು ಪೋಲೀಸರಿಗೆ ಒಪ್ಪಿಸಿದೆ. ಇಲ್ಲಿ ಹಲವಾರು ವರ್ಷಗಳಿಂದಲೂ ಚಾಮುಂಡೇಶ್ವರಿ ಕ್ಲಿನಿಕ್‌ ಮತ್ತು ದಿವ್ಯ ಶ್ರೀ ಹೆಲ್ತ್‌ ಕೇರ್‌ ಎಂದು ಕ್ಲಿನಿಕ್‌ ಗಳನ್ನು ನಡೆಸುತಿದ್ದ ವಿಜಯ ಕುಮಾರ್‌ ಮತ್ತು ದೇವೇಂದ್ರ ಎಂಬುವವರು ಸರ್ಕಾರದ ಯಾವುದೇ ಅನುಮತಿ ಮತ್ತು ನೋಂದಣಿ ಇಲ್ಲದೆ ಜನರಿಗೆ ಚಿಕಿತ್ಸೆ ನೀಡುತಿದ್ದರು. ಈ ಇಬ್ಬರೂ ಕೇವಲ ಪಿಯುಸಿ ಓದಿಕೊಂಡಿದ್ದು […]

ದುಷ್ಕರ್ಮಿಗಳು ಕಾಲೇಜು ವಿದ್ಯಾರ್ಥಿಯ ಮರ್ಮಾಂಗವನ್ನು ಕತ್ತರಿಸಿ ಅಮಾನವೀಯ ಕೃತ್ಯ

Saturday, February 15th, 2020
mandya

ಮಂಡ್ಯ : ದುಷ್ಕರ್ಮಿಗಳು ಕಾಲೇಜು ವಿದ್ಯಾರ್ಥಿಯೊಬ್ಬನ ಮರ್ಮಾಂಗವನ್ನು ಕತ್ತರಿಸಿರುವ ಅಮಾನವೀಯ ಕೃತ್ಯ ಪಾಂಡವಪುರ ತಾಲೂಕಿನಲ್ಲಿ ನಡೆದಿದೆ. ವಿದ್ಯಾರ್ಥಿಯು ಕೆ.ಆರ್.ಪೇಟೆ ಕಾಲೇಜು ಒಂದರಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಾಲೇಜಿಗೆ ಹೋಗಲು ಪಾಂಡವಪುರ ತಾಲೂಕಿನ ಸೀತಾಪುರ ಗೇಟ್ ಬಳಿ ನಿಂತಿದ್ದ. ಈ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ವಿದ್ಯಾರ್ಥಿಯನ್ನು ಎಲ್ಲಿಗೆ ಹೋಗ ಬೇಕು ಎಂದು ಕೇಳಿದ್ದರು. ಆಗ ವಿದ್ಯಾರ್ಥಿಯು, ನಾನು ಕೆ.ಆರ್.ಪೇಟೆಗೆ ಹೋಗಬೇಕು ಎಂದು ಹೇಳಿದ್ದರು. ಆದಕ್ಕೆ ದುಷ್ಕರ್ಮಿಗಳು, ‘ಬಾ ನಮ್ಮ ಜೊತೆ. ನಾವು ಆ ಕಡೆನೇ ಹೋಗುತ್ತಿದ್ದೇವೆ ಎಂದು ಕಾರಿನಲ್ಲಿ […]

ಮನೆಯಲ್ಲಿ ಪ್ರೀತಿಗೆ ವಿರೋಧ : ಹಾರಂಗಿ ಜಲಾಶಯದ ಹಿನ್ನೀರಿಗೆ ಜಿಗಿದು ಯುವ ಪ್ರೇಮಿಗಳು ಆತ್ಮಹತ್ಯೆ

Saturday, February 15th, 2020
madikeri

ಮಡಿಕೇರಿ : ಮನೆಯಲ್ಲಿ ಪ್ರೀತಿಗೆ ವಿರೋಧ ವ್ಯಕ್ತಪಡಿಸಿ, ಬೇರೆ ಹುಡುಗನೊಂದಿಗೆ ವಿವಾಹ ನಿಶ್ಚಯಿಸಿದ ಕಾರಣ ಪ್ರೇಮಿಗಳ ದಿನದಂದೇ ಹಾರಂಗಿ ಜಲಾಶಯದ ಹಿನ್ನೀರಿಗೆ ಜಿಗಿದು ಯುವ ಪ್ರೇಮಿಗಳು ಮಾಡಿಕೊಂಡ ಘಟನೆ ಹಾರಂಗಿಯ ಇಡಿಸಿಎಲ್‌ ಘಟಕ ಸಮೀಪ ನಡೆದಿದೆ. ಮೃತರನ್ನು ಹುಣಸೂರು ತಾಲೂಕಿನ ಕೊತ್ತೆಗಾಲ ಗ್ರಾಮದ ನಾಗರಾಜುಗೌಡ ಎಂಬವರ ಪುತ್ರ ಸಚಿನ್‌(21) ಯಮಗುಂಬ ಗ್ರಾಮದ ಜಲೇಂದ್ರ ಎಂಬವರ ಪುತ್ರಿ ಸಿಂಧುಶ್ರೀ(19) ಎಂದು ಗುರುತಿಸಲಾಗಿದೆ. ಇವರಿಬ್ಬರೂ ಹುಣಸೂರು ಸರಕಾರಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಿಂದಲೂ ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ಒಂದು ವರ್ಷದಿಂದ […]

ಲಕ್ನೋ ನ್ಯಾಯಾಲಯದ ಆವರಣದಲ್ಲಿ ಸಜೀವ ಬಾಂಬ್​ ಸ್ಫೋಟ : ಹಲವರಿಗೆ ಗಾಯ

Thursday, February 13th, 2020
lacknow

ಉತ್ತರ ಪ್ರದೇಶ : ವಕೀಲರನ್ನು ಗುರಿಯಾಗಿಸಿಕೊಂಡು ಲಕ್ನೋ ನ್ಯಾಯಾಲಯದಲ್ಲಿ ಸಜೀವ ಬಾಂಬ್ ಸ್ಪೋಟಿಸಲಾಗಿದ್ದು, ಘಟನೆಯಲ್ಲಿ ಅನೇಕ ವಕೀಲರು ಗಾಯಗೊಂಡಿದ್ದಾರೆ. ಬಾಂಬ್ ಸ್ಪೋಟ ಘಟನೆ ಬಳಿಕ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಗಾಯಗೊಂಡ ವಕೀಲರನ್ನು ತಕ್ಷಣಕ್ಕೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಸಿರ್ಗಂಜ್ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದರು. ಈ ವೇಳೆ ಮೂರು ಸಜೀವ ಬಾಂಬ್ ಪತ್ತೆಯಾಗಿದೆ. ಇಲ್ಲಿನ ಜಿಲ್ಲಾ ನ್ಯಾಯಾಲಯದ ವಕೀಲ ಸಂಜೀವ್ ಲೋದಿ ಅವರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಕೂದಲೆಳೆ ಅಂತರದಲ್ಲಿ […]