ಮಂಗಳೂರು : 19ನೇ ಯುವತಿಯ ಕೊಲೆ ಪ್ರಕರಣ ಸಾಬೀತು; ಫೆ.15 ರಂದು ಸೈನೈಡ್​ ಮೋಹನ್‌ಗೆ ಶಿಕ್ಷೆ ಪ್ರಕಟ

Thursday, February 13th, 2020
mohan

ಮಂಗಳೂರು : ಮದುವೆ ಆಗುವ ಭರವಸೆ ನೀಡಿ, ಬಳಿಕ ಅತ್ಯಾಚಾರ ಎಸಗಿ ಸೈನೈಡ್ ಬಳಕೆ ಮಾಡಿಕೊಂಡು ಹತ್ಯೆ ಮಾಡಿರುವ 19ನೇ ಯುವತಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯರ ಸರಣಿ ಹಂತಕ ಸೈನೈಡ್ ಮೋಹನ್‌ ಮೇಲಿನ ಆರೋಪ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದೆ. 2006ರಲ್ಲಿ ಮೋಹನ್ ಸಂಬಂಧಿಕರೊಬ್ಬರ ಮದುವೆಗೆ ತೆರಳಿದ್ದ ಸಂದರ್ಭ ಕೇರಳ ರಾಜ್ಯದ ಕಾಸರಗೋಡಿನ 23 ವರ್ಷದ ಯುವತಿಯ ಪರಿಚಯ ಆಗಿತ್ತು. ಆ ವೇಳೆ ಆತ ತನ್ನನ್ನು ಶಿಕ್ಷಕ ಹಾಗೂ ಆಕೆಯದ್ದೇ ಜಾತಿಯವನು […]

ಜಾಗದ ವಿವಾದ : ಕೊಲೆಯಲ್ಲಿ ಅಂತ್ಯವಾದ ಜಗಳ, ತಂದೆ-ಮಗ ಬಂಧನ

Monday, February 10th, 2020
kole

ಬೆಳ್ತಂಗಡಿ : ಜಮೀನು ವಿವಾದಕ್ಕೆ ಸಂಬಂಧಿಸಿ ನೆರೆಹೊರೆಯವರ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಇಲ್ಲಿನ ಲಾಯಿಲ ಗ್ರಾಮದ ಪುತ್ರಬೈಲು ಎಂಬಲ್ಲಿ ರವಿವಾರ ರಾತ್ರಿ ನಡೆದಿದೆ. ಲಾಯಿಲ ಗ್ರಾಮದ ಪುತ್ರಬೈಲು 1 ನೇ ಅಡ್ಡ ರಸ್ತೆಯ ನಿವಾಸಿ ಉಮೇಶ್ (48) ಕೊಲೆಯಾದ ವ್ಯಕ್ತಿ. ಇವರ ನೆರೆಮನೆಯವರಾದ ಯೋಗೀಶ್ ಮತ್ತು ಆತನ ಮಗ ಜೀವನ್ ಕೊಲೆ ಆರೋಪಿಗಳಾಗಿದ್ದಾರೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈನಲ್ಲಿ ಕೆಲಸದಲ್ಲಿದ್ದ ಉಮೇಶ್ ಸಮಗಾರ ಇತ್ತೀಚೆಗೆ ಊರಿಗೆ ಆಗಮಿಸಿದ್ದರು. ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ […]

ತಾಲಿಬಾನ್ ಉಗ್ರ ಇಹ್ಸಾನುಲ್ಲಾ ಇಹ್ಸಾನ್ ಪಾಕ್ ಜೈಲಿನಿಂದ ಪರಾರಿ

Saturday, February 8th, 2020
ugra

ಇಸ್ಲಾಮಾಬಾದ್ : 2012ರಲ್ಲಿ ಮಲಾಲಾ ಯುಸುಫ್ ಝೈ ಅವರ ಮೇಲೆ ಗುಂಡಿ ಹಾರಿಸಿದ್ದ ಮತ್ತು 2014ರಲ್ಲಿ ಪೇಶಾವರದ ಸೈನಿಕ ಶಾಲೆ ಮೇಲೆ ದಾಳಿ ನಡೆಸಿ 132 ವಿದ್ಯಾರ್ಥಿಗಳ ಸಾವಿಗೆ ಕಾರಣವಾಗಿದ್ದ ತಾಲಿಬಾನ್ ಉಗ್ರ ಇಹ್ಸಾನುಲ್ಲಾ ಇಹ್ಸಾನ್ ಪಾಕ್ ಜೈಲಿನಿಂದ ಪರಾರಿಯಾಗಿದ್ದಾನೆಂದು ವರದಿಗಳು ತಿಳಿಸಿವೆ. ಜೈಲಿನಿಂದ ತಪ್ಪಿಸಿಕೊಂಡ ಬಳಿಕ ಉಗ್ರ ಆಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ಈ ಆಡಿಯೋ ಕ್ಲಿಪ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ತಾನಿರುವ ಸ್ಥಳದ ಮಾಹಿತಿ ನೀಡದ ಉಗ್ರ, ದೇವರ ಸಹಾಯದಿಂದ ನಾನು ಭದ್ರತಾ […]

ಹೈಟೆಕ್ ರೀತಿಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಾಲ್ವರು ಆರೋಪಿಗಳ ಬಂಧನ

Saturday, February 8th, 2020
hightek

ಬೆಂಗಳೂರು : ನಗರದಲ್ಲಿ ಹೈಟೆಕ್ ರೀತಿಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕುಮಾರ್, ಭರತ್ ಕುಮಾರ್, ರಘು ಹಾಗೂ ಪ್ರಜ್ವಲ್ ಬಂಧಿತ ಆರೋಪಿಗಳು. ಬಂಧಿತರೆಲ್ಲರೂ ಬೆಂಗಳೂರು ಮೂಲದವರಾಗಿದ್ದು, ಲೊಕೆಂಟೋ ವೆಬ್ ಸೈಟ್ ಮೂಲಕ ಹೈಟೆಕ್ ಮಾದರಿಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ದಂಧೆಗೆ ಬಳಸಿಕೊಳ್ಳುವ ಹೆಣ್ಣು ಮಕ್ಕಳನ್ನು ಮುಂಬೈ ಸೇರಿದಂತೆ ದೇಶದ ವಿವಿಧ ನಗರಗಳಿಂದ ಕೆಲಸ ಕೊಡಿಸುವುದಾಗಿ ನಂಬಿಸಿ‌ ಕರೆ ತರುತ್ತಿದ್ದರು. ಬಳಿಕ‌ ಇವರ ಫೊಟೋಗಳನ್ನು ಆನ್ ಲೈನ್ ಮುಖಾಂತರ ಕಳುಹಿಸಿ ಗ್ರಾಹಕರನ್ನು‌ […]

ಕಡವೆ ಕೊಂಬುಗಳ ಶೇಖರಣೆ : ಕಕ್ಕಬ್ಬೆ ನಿವಾಸಿಯ ಬಂಧನ

Thursday, February 6th, 2020
kadave

ಮಡಿಕೇರಿ : ತೋಟದ ಲೈನ್ ಮನೆಯಲ್ಲಿ ಅಕ್ರಮವಾಗಿ ಕಡವೆಯ ಕೊಂಬುಗಳನ್ನು ಶೇಖರಿಸಿಟ್ಟು ಅದನ್ನು ಮಾರಾಟ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಅರಣ್ಯ ಸಂಚಾರಿ ದಳದ ಸಿಐಡಿ ವಿಭಾಗದ ಸಿಬ್ಬಂದಿಗಳು ಬಂಧಿಸಿದ್ದಾರೆ. ಕಕ್ಕಬ್ಬೆ ನಿವಾಸಿ, ಅಲ್ಲಿನ ಖಾಸಗಿ ತೋಟ ಒಂದರಲ್ಲಿ ಕೂಲಿ ಕಾರ್ಮಿಕನಾಗಿರುವ ಸುಬ್ರಮಣಿ ಎಂಬಾತನೇ ಬಂಧಿತ ವ್ಯಕ್ತಿಯಾಗಿದ್ದಾನೆ. ಮಡಿಕೇರಿ ಅರಣ್ಯ ಸಂಚಾರಿ ದಳದ ಸಿಐಡಿ ವಿಭಾಗಕ್ಕೆ ದೊರೆತ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಸಂದರ್ಭ ಈತ ವಾಸವಾಗಿದ್ದ ಲೈನ್ ಮನೆಯಲ್ಲಿ ೪ ಕಡವೆ ಕೊಂಬುಗಳು ಪತ್ತೆಯಾಗಿದೆ. ಕೊಂಬು […]

ಎರಡು ಪ್ರತ್ಯೇಕ ಪ್ರಕರಣ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳನ ಕೈಚಳಕ; ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Monday, February 3rd, 2020
kalavu

ಮೈಸೂರು : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಮನೆಯ ಬಾಗಿಲು ಮೀಟಿ ಚಿನ್ನಾಭರಣ ಕದ್ದೊಯ್ದ ಘಟನೆ ಮೈಸೂರಿನಲ್ಲಿ ನಡೆದಿದೆ. ಮತ್ತೊಂದು ಕಡೆ ಕಳ್ಳರು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ. ಸರಸ್ವತಿಪುರಂ ಠಾಣೆಗೆ ಉಷಾ ಎಂಬವರು ದೂರು ನೀಡಿದ್ದು, 11/01/2020 ರ ಬೆಳಿಗ್ಗೆ 8.30 ರಿಂದ 29/01/2020 ರ ರಾತ್ರಿ 10.30 ರ ನಡುವೆ ಯಾರೋ ಕಳ್ಳರು ಶಾರದಾದೇವಿನಗರದ ಬಳಿ ಇರುವ ಕಾವೇರಿ ಅಪಾರ್ಟ್ ಮೆಂಟ್ ನಮ್ಮ ಮನೆಯ ಬಾಗಿಲನ್ನು […]

ಬಂಟ್ವಾಳದಲ್ಲಿ ನಟೋರಿಯಸ್ ರೌಡಿ ಮುತ್ತಾಸಿಮ್ ಭೀಕರ ಕೊಲೆ

Monday, February 3rd, 2020
murder

ಬಂಟ್ವಾಳ : ಕೇರಳದ ನಟೋರಿಯಸ್ ರೌಡಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಗ್ರಿ ಎಂಬಲ್ಲಿ ನಿಗೂಢವಾಗಿ ಕೊಲೆಯಾಗಿದ್ದಾನೆ. ಕೊಲೆಯಾದ ವ್ಯಕ್ತಿ ನಟೋರಿಯಸ್ ರೌಡಿಶೀಟರ್ ಕೇರಳ ಮೂಲದ ಮುತ್ತಾಸಿಮ್ ಯಾನೆ ತಸ್ಲೀಮ್ ಎಂದು ಗುರುತಿಸಲಾಗಿದ್ದು ಬಂಟ್ವಾಳದ ನಗ್ರಿ ಸಮೀಪದ ಗುಡ್ಡೆಯಲ್ಲಿ ಅನಾಥವಾಗಿ ಕಾರೊಂದರಲ್ಲಿ ಶವ ಪತ್ತೆಯಾಗಿದೆ. ಅಪಹರಣ ಮಾಡಿ ಕೊಲೆ ಮಾಡಿ ಬಂಟ್ವಾಳ ಸಮೀಪದ ನಗ್ರಿ ಎಂಬಲ್ಲಿ ಕಾರು ನಿಲ್ಲಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. 2017ರಲ್ಲಿ ಮಂಗಳೂರು ಹೊರವಲಯದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ […]

ಟಿಕ್‌ ಟಾಕ್‌ ವಿಡಿಯೋ ಮಾಡಿದ್ದಕ್ಕೆ ಗಂಡ ಮಾಡಿದ್ದೇನು ಗೊತ್ತಾ ?

Friday, January 31st, 2020
shrinivas

ಮೈಸೂರು : ಕೌಟುಂಬಿಕ ಕಲಹದಿಂದ ಬೇಸತ್ತಿದ್ದ ಪತಿರಾಯನೊಬ್ಬ ತನ್ನ ಪತ್ನಿಗೆ ಚಾಕುವಿನಿಂದ ಇರಿದಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಶ್ರೀನಿವಾಸ್ ಎಂಬಾತನು ಕಳೆದ 10 ವರ್ಷಗಳ ಹಿಂದೆ ಸವಿತಾ ಎಂಬುವವರನ್ನು ಮದುವೆಯಾಗಿದ್ದ. ಈ ದಂಪತಿಗೆ ಇಬ್ಬರು ಮಕ್ಕಳಿದ್ದು, ಆಗಾಗ ಇವರ ಮಧ್ಯೆ ಜಗಳ ನಡೆಯುತ್ತಲೇ ಇತ್ತಂತೆ.ಇವರಿಬ್ಬರ ಮಧ್ಯೆ ಮತ್ತೆ ಜಗಳವಾಗಿದ್ದು, ಕೋಪಗೊಂಡ ಶ್ರೀನಿವಾಸ್ ತನ್ನ ಪತ್ನಿ ಸವಿತಾ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ. ಪರಿಣಾಮ ಸವಿತಾ ಸ್ಥಳದಲ್ಲೇ ಕುಸಿದು ಬಿದ್ದಿದ್ದಾಳೆ.ಇನ್ನು ಶ್ರೀನಿವಾಸ್, ನನ್ನ ಹೆಂಡ್ತಿಯನ್ನು […]

ಬೆಳ್ತಂಗಡಿ : ಹಲ್ಲು ನೋವಿನ ಚಿಕಿತ್ಸೆಗೆ ಬಂದ ಮಹಿಳಾ ರೋಗಿಯೊಂದಿಗೆ ಅಸಭ್ಯ ವರ್ತನೆ; ದೂರು ದಾಖಲು

Thursday, January 30th, 2020
sudhakar

ಬೆಳ್ತಂಗಡಿ : ವೈದ್ಯರೋರ್ವರು ರೋಗಿ ಜತೆ ಅಸಭ್ಯವಾಗಿ ವರ್ತನೆ ಮಾಡಿದ ಘಟನೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಜ.29 ರ ಬುಧವಾರ ನಡೆದಿದೆ. ಬೆಳ್ತಂಗಡಿ ಸರಕಾರಿ ಆಸ್ಪತ್ರೆ ದಂತ ವೈದ್ಯ ಸುಧಾಕರ ಆರೋಪಿ. ಹಲ್ಲು ನೋವಿಗೆ ಸಂಬಂಧಿಸಿ ಚಿಕಿತ್ಸೆಗೆಂದು ಬಂದ ಯುವತಿ ಜತೆ ಅಸಭ್ಯವಾಗಿ ವರ್ತಿಸಿರುವ ಕುರಿತು, ಯುವತಿ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.ಮೂಲತಃ ನೆಲ್ಯಾಡಿಯವರಾಗಿರುವ. ಡಾ. ಸುಧಾಕರ್ ಅವರು ವಿಟ್ಲ ಮತ್ತು ಬೆಳ್ತಂಗಡಿ ಆಸ್ಪತ್ರೆಯಲ್ಲಿ ಪ್ರಭಾರ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು […]

ಕುಡಿದ ಮತ್ತಿನಲ್ಲಿ ಬೈಕ್ ಚಲಾಯಿಸಿ ಯುವಕ ಕಬ್ಬಿಣದ ಸರಳುಗಳಿಗೆ ಸಿಲುಕಿ ಮೃತ್ಯು

Tuesday, January 28th, 2020
Rockey

ಮೈಸೂರು : ಕುಡಿದ ಮತ್ತಿನಲ್ಲಿ ಬೈಕ್ ಚಲಾಯಿಸಿಕೊಂಡು ಬಂದ ಯುವಕನ ನಿಯಂತ್ರಣಕ್ಕೆ ಬೈಕ್ ಸಿಗದ ಕಾರಣ ಬೈಕ್ ಕಂಪೌಂಡ್ ಗೆ ಗುದ್ದಿದ್ದು, ಕಂಪೌಂಡ್ ಗೆ ಅಳವಡಿಸಲಾದ ಕಬ್ಬಿಣದ ಸರಳುಗಳಿಗೆ ಸಿಲುಕಿ ಯುವಕ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ. ಮೃತ ಯುವಕನನ್ನು ವಿಜಯಶ್ರೀಪುರ ನಿವಾಸಿ ರಾಖಿ(20) ಎಂದು ಗುರುತಿಸಲಾಗಿದ್ದು, ಈತ ನಿನ್ನೆ ರಾತ್ರಿ ಮದ್ಯಪಾನ ಮಾಡಿ ಸ್ಪ್ಲೆಂಡರ್ ಬೈಕ್ ಚಲಾಯಿಸುತ್ತಿದ್ದ. ವಿಜಯ ನಗರ ಟ್ಯಾಂಕ್ ಕಡೆ ಬರುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡ ಬೈಕ್ ಶಾಸಕ ಜಿ.ಟಿ.ದೇವೇಗೌಡರ ಮನೆಯ ಕಂಪೌಂಡ್ […]