ಐವರು ಶಾಸಕರನ್ನು ಹನಿಟ್ರ್ಯಾಪ್ ಮೂಲಕ ಬಲೆಗೆ ಕೆಡವಿದ್ದ ಕಿಲಾಡಿಯಿಂದ ಮತ್ತೋರ್ವ ಸಚಿವರಿಗೆ 10 ಕೋಟಿ ರೂ. ಬೇಡಿಕೆ

Wednesday, November 27th, 2019
honeytrap

ಬೆಂಗಳೂರು:  ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡುವುದಾಗಿ ಬೆದರಿಕೆಯೊಡ್ಡಿ ಬಿಜೆಪಿಯ ಮಾಜಿ ಸಚಿವ ರಿಂದ  10 ಕೋಟಿ ರೂ. ಸುಲಿಗೆಗೆ ಮುಂದಾಗಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ಮೊಬೈಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪರಪ್ಪನ ಅಗ್ರಹಾರ ನಿವಾಸಿ ರಾಘವೇಂದ್ರ ಬಂಧಿತ ಆರೋಪಿ ಇತ್ತೀಚೆಗೆ ಕೆಲಸ ತೊರೆದು ಮನೆಯಲ್ಲಿಯೇ ಇದ್ದ ಎಂದು ಪೊಲೀಸರು ತಿಳಿಸಿದ್ದಾರೆ. ರಾಘವೇಂದ್ರ ತನ್ನ ಗೆಳತಿಯ ಮೂಲಕ ಹನಿಟ್ರ್ಯಾಪ್‌ಗೆ ಮಾಜಿ ಸಚಿವರೊಬ್ಬರನ್ನು ಕೆಡವಿದ್ದ. ಗೆಳತಿಯೊಂದಿಗೆ ಮಾಜಿ ಸಚಿವರು ಇರುವ ವಿಡಿಯೋ ಚಿತ್ರೀಕರಿಸಿಕೊಂಡಿದ್ದ. […]

ವಿಧವೆಯನ್ನು ಮದುವೆಯಾಗುತ್ತೇನೆಂದು ನಂಬಿಸಿ ಚಿನ್ನದ ಸರ ದೋಚಿದ ವ್ಯಕ್ತಿ

Friday, November 22nd, 2019
shadi

ಮೈಸೂರು : ವಿಧವೆಯೋರ್ವರಿಗೆ ಶಾದಿ ಡಾಟ್ ಕಾಮ್ ಮೂಲಕ ಪರಿಚಯವಾದ ವ್ಯಕ್ತಿಯೋರ್ವ ವಿವಾಹವಾಗುವುದಾಗಿ ನಂಬಿಸಿ ಮಹಿಳೆಯ ಬಳಿ ಇದ್ದ 80ಸಾವಿರ ರೂ.ಮೌಲ್ಯದ ಮಾಂಗಲ್ಯ ಸರವನ್ನು ದೋಚಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಪತಿಯನ್ನು ಕಳೆದುಕೊಂಡ ಮಹಿಳೆಯೋರ್ವರು ಮರು ಮದುವೆಯಾಗಲು ಇಚ್ಛಿಸಿದ್ದು, ಅಂತರ್ಜಾಲದ ಶಾದಿ ಡಾಟ್ ಕಾಮ್ ಮೂಲಕ ವರಾನ್ವೇಷಣೆಗಾಗಿ ಹೆಸರನ್ನು ನೋಂದಾಯಿಸಿಕೊಂಡಿದ್ದರು. ಇದನ್ನು ವೀಕ್ಷಿಸಿದ ವಿನೀತ್ ರಾಜ್ ಎಂಬಾತ ಮಹಿಳೆಯನ್ನು ಮೊಬೈಲ್ ಮೂಲಕ ಪರಿಚಯ ಮಾಡಿಕೊಂಡು ತಾನು ಚೆನ್ನೈ ನಗರದಲ್ಲಿ ವ್ಯಾಪಾರ ಮಾಡುತ್ತಿದ್ದು ನನ್ನ ಹೆಂಡತಿ ತೀರಿ ಹೋಗಿ […]

ಮಡಿಕೇರಿ ಜೈಲ್ ನಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ

Thursday, November 21st, 2019
ಮಡಿಕೇರಿ ಜೈಲ್ ನಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ

ಮಡಿಕೇರಿ : ವಿಚಾರಣಾಧೀನ ಖೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿಯ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಮೂಲತಃ ಪಿರಿಯಾಪಟ್ಟಣದ ನಿವಾಸಿ, ಸಿದ್ದರಾಜು(22) ಎಂಬಾತನೇ ಆತ್ಮಹತ್ಯೆಗೆ ಶರಣಾದ ಆರೋಪಿಯಾಗಿದ್ದಾನೆ. ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಿದ್ದರಾಜು, ಕೊಡಗು ಜಿಲ್ಲಾ ಪೊಲೀಸರಿಂದ ಬಂಧಿಸಲ್ಪಟ್ಟು ಕಳೆದ 4 ತಿಂಗಳಿಂದ ಮಡಿಕೇರಿಯ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯಾಗಿ ಬಂಧಿಯಾಗಿದ್ದ. ಇಂದು ಸಂಜೆ 5 ಗಂಟೆ ಸುಮಾರಿಗೆ ಸಿದ್ದರಾಜು, ಸೆಲ್‌ನ ಒಳಗಿನ ಶೌಚಾಲಯದ ಗೋಡೆಯಲ್ಲಿದ್ದ ನೀರಿನ ಪೈಪ್‌ಗೆ ಸ್ಕ್ರೀನ್‌ನ ಒಂದು ತುಂಡನ್ನು ಹಗ್ಗದಂತೆ ಬಳಸಿಕೊಂಡು ನೇಣು […]

ಐಎಂಎ ಜ್ಯುವೆಲ್ಲರ್ಸ್ ಮಾಲೀಕ ಮುಹಮ್ಮದ್ ಮನ್ಸೂರ್ ಖಾನ್ ದುಬೈಯಲ್ಲಿ ?

Tuesday, June 11th, 2019
ima-jewellery

ಬೆಂಗಳೂರು: ಪ್ರತಿಷ್ಠಿತ ಐಎಂಎ ಜ್ಯುವೆಲ್ಲರ್ಸ್ ಮಾಲೀಕ ಮುಹಮ್ಮದ್ ಮನ್ಸೂರ್ ಖಾನ್ ದುಬೈಗೆ ಪರಾರಿಯಾಗಿರುವ ಕುರಿತು ಸಂಶಯ ವ್ಯಕ್ತವಾಗಿದೆ. ಹೂಡಿಕೆ ಹೆಸರಿನಲ್ಲಿ ಸಹಸ್ರಾರು ಜನರಿಗೆ ವಂಚಿಸಿರುವ ಆತ ಕಳೆದ ತಿಂಗಳಾಂತ್ಯದಲ್ಲಿ ದುಬೈಗೆ ತೆರಳಿರುವುದಾಗಿ ಸ್ವತಃ ಹೂಡಿಕೆದಾರರೇ ಸಂಶಯ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾದ ಹೂಡಿಕೆದಾರರು ಮಂಗಳವಾರ ಕೂಡ ಸಹಸ್ರಾರು ಸಂಖ್ಯೆಯಲ್ಲಿ ದೂರು ನೀಡಲು ಬಂದಿದ್ದ ದೃಶ್ಯ ಶಿವಾಜಿನಗರದ ಶಾದಿ ಮಹಲ್ ನಲ್ಲಿ ಕಂಡುಬಂತು. ಪ್ರತಿಯೊಬ್ಬರ ಕಥೆಯೂ ಕರುಣಾಜನಕವಾಗಿದ್ದು, ಭವಿಷ್ಯದ ಬದುಕು ಕಟ್ಟಿಕೊಳ್ಳಲು ಹೂಡಿಕೆ ಮಾಡಿದವರು ಇದೀಗ ದಿಕ್ಕು ತೋಚದಂತಾಗಿದ್ದಾರೆ. […]

ಮಂಗಳೂರಿನ ಭೂಗತ ಪಾತಾಕಿ ಆಕಾಶ್ ಭವನ ಶರಣ್ ಬಂಧನ

Thursday, April 4th, 2019
Akashbhavan-Sharan

ಮಂಗಳೂರು: ವಿವಿಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ರೌಡಿ ಭೂಗತ ಪಾತಾಕಿ ವಿಕ್ಕಿ ಶೆಟ್ಟಿ ಸಹಚರ ಆಕಾಶ್ ಭವನ ಶರಣ್ ನನ್ನು ಪೊಲೀಸರು ಬಂಧಿಸಿದ್ದಾರೆ. ಈತನ ಮೇಲೆ ಲೈಂಗಿಕ ಕಿರುಕುಳ, ಕೊಲೆ, ಅತ್ಯಾಚಾರ, ಸುಲಿಗೆ,ಬ್ಲ್ಯಾಕ್‌ಮೈಲ್ ಸೇರಿದಂತೆ 18ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ. ಈತ ಕಳೆದ ಕೆಲವು ತಿಂಗಳುಗಳಿಂದ ಪೊಲೀಸರಿಂದ ತಲೆಮರೆಸಿಕೊಂಡು ನಾಪತ್ತೆಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಹಳೇ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಕೆಲವು ಸಮಯಗಳಿಂದ ಜೈಲಿನಲ್ಲಿದ್ದ ಶರಣ್ ಜೈಲಿನಿಂದ ಹೊರಬಂದ ಬಳಿಕ ಯುವತಿ ಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ದೂರು ದಾಖಲಾಗಿತ್ತು. ಹುಲಿವೇಷ ಕುಣಿತದ […]

ಗಾಂಜಾ ಮಾರಾಟದ ನಾಲ್ವರ ಬಂಧನ , 1.50 ಗ್ರಾಂ ಗಾಂಜಾ ವಶ

Monday, July 2nd, 2018
Ganja Seller

ಮಂಗಳೂರು : ನಗರದ ಉರ್ವ ಮಾರಿಗುಡಿ ಬಳಿ ಗಾಂಜಾ ಮಾರಾಟ ಯತ್ನಿಸುತ್ತಿದ್ದ ನಾಲ್ವರನ್ನು ಪೊಲೀಸರು ಕಾರ್ಯಾಚರಣೆ ನಡೆಸಿದ ಬಂಧಿಸಿದ ಘಟನೆ ಭಾನುವಾರ ನಡೆದಿದೆ. ಬಂಧಿತರನ್ನು ಉರ್ವದ ಮಾಡರ್ನ್ ರೈಸ್‌ಮಿಲ್ ಬಳಿ ಸಿಪಿಸಿ ಕಂಪೌಂಡ್ ನಿವಾಸಿ ಮಹೇಶ್ ಯಾನೆ ಮಾಚ (24), ಬೊಕ್ಕಪಟ್ಟಣ ರಸ್ತೆಯ ಮಠದಕಣಿಯ ರೀತೇಶ್ ಯಾನೆ ರೀತು (20), ಉರ್ವ ಲಾಂಗ್‌ಲೇನ್‌ ಬಳಿಯ ಸುದರ್ಶನ್ ಎಂ. ಯಾನೆ ಸುಧಾ (24), ಅಶೋಕ್‌ನಗರದ ಪಿ.ಕೆ. ಕಂಪೌಂಡ್ ಬಳಿಯ ರೀತೇಶ್ (21) ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ […]

ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲ್ಲಲು ಸುಪಾರಿ, ರವಿ ಬೆಳಗೆರೆ ಬಂಧನ

Friday, December 8th, 2017
Ravibelagare

ಬೆಂಗಳೂರು : ಹಾಯ್ ಬೆಂಗಳೂರು ಪತ್ರಿಕೆಯ ಪ್ರಧಾನ ಸಂಪಾದಕ ರವಿ ಬೆಳೆಗೆರೆಯನ್ನು ಸಿಸಿಬಿ ಪೊಲೀಸರು ಶುಕ್ರವಾರ ಮಧ್ಯಾಹ್ನ ಬೆಂಗಳೂರಿನ ಪದ್ಮನಾಭನಗರದ ಕಚೇರಿಯಲ್ಲಿ ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಪತ್ರಕರ್ತರೊಬ್ಬರನ್ನು ಕೊಲ್ಲಲುಶಾರ್ಪ್ ಶೂಟರ್ಸ್ ಗೆ ಸುಪಾರಿ ಕೊಟ್ಟಿದ್ದ ಆರೋಪದ ಮೇಲೆ ರವಿಬೆಳಗೆರೆಯನ್ನು ಬಂಧಿಸಲಾಗಿದೆ. ಶಾರ್ಪ್ ಶೂಟರ್ ಶಶಿಧರ್ ಮುಂಡೇವಾಡಗಿ ಹಾಗೂ ಸಹಚರರು ವಿಚಾರಣೆ ವೇಳೆ ಈ ವಿಷಯ ಬಾಯ್ಬಿಟ್ಟಿದ್ದಾನೆ. ಹಾಯ್ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಅವರನ್ನು ಕೊಲ್ಲಲು ರವಿ ಬೆಳಗೆರೆ ಸುಪಾರಿ ಕೊಟ್ಟಿದ್ದರು […]

ಕಾರ್ಕಳದಲ್ಲಿ 1 ಕೋಟಿಗೂ ಹೆಚ್ಚು ಮೌಲ್ಯದ ಬೃಹತ್ ಪ್ರಮಾಣದ ಅಕ್ರಮ ಸ್ಫೋಟಕ ಪತ್ತೆ

Thursday, March 27th, 2014
Explosive

ಕಾರ್ಕಳ : ಒಟ್ಟು ರೂ. 1 ಕೋಟಿಗೂ ಹೆಚ್ಚು ಮೌಲ್ಯದ ಬೃಹತ್ ಪ್ರಮಾಣದ ಅಕ್ರಮ ಸ್ಫೋಟಕ ಕಾರ್ಕಳ ತಾಲ್ಲೂಕಿನ ಮೂರು ಕಡೆ ಮಂಗಳವಾರ ಪತ್ತೆಯಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಖಚಿತ ಮಾಹಿತಿ ಮೇರೆಗೆ ಎಎಸ್‍ಪಿ ಅಣ್ಣಾಮಲೈ ನೇತೃತ್ವದ ಪೊಲೀಸ್ ಸಿಬ್ಬಂದಿ ಏಕಕಾಲಕ್ಕೆ ತಾಲ್ಲೂಕಿನ ನಕ್ರೆ ಗ್ರಾಮದ ವರ್ಣಬೆಟ್ಟು, ಪಟ್ಟಣದ ಸಮೀಪವಿರುವ ಕೋಟಿ ಚೆನ್ನಯ ಥೀಂ ಪಾರ್ಕ್ ಸಮೀಪದ ಗಂಧದ ಬಟ್ಟಿ ಎಂಬಲ್ಲಿನ ತೋಟದಲ್ಲಿ ಹಾಗೂ ತೆಳ್ಳಾರು ಸಮೀಪದ ದುರ್ಗಾ ಗ್ರಾಮದಲ್ಲಿ ನಡೆಸಿದ ದಾಳಿಯಲ್ಲಿ ಇವು ದೊರೆತಿವೆ. […]

ಸಿಐಎಸ್‍ಎಫ್ ಸಿಬ್ಬಂದಿ ಗುಂಡು ಹಾರಿಸಿ ಆತ್ಮಹತ್ಯೆ

Monday, February 24th, 2014
Sandeep-Sarkate

ಸುರತ್ಕಲ್ : ಸಿಐಎಸ್‍ಎಫ್ ಸಿಬ್ಬಂದಿಯೊಬ್ಬ ತನ್ನ ಸರ್ವಿಸ್ ರೈಫಲ್‍ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ತಡರಾತ್ರಿ ಪಣಂಬೂರು ಸಿಐಎಸ್‍ಎಫ್ ಕ್ಯಾಂಪ್‍ನಲ್ಲಿ ಸಂಭವಿಸಿದೆ. ಮಹಾರಾಷ್ಟ್ರ ನಿವಾಸಿ ಸಂದೀಪ್ ಸರ್ಕಟೆ (26) ಎಂಬವರೇ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಕೇವಲ ಎರಡು ವರುಷದ ಹಿಂದೆಯಷ್ಟೇ ಸಿಐಎಸ್‍ಎಫ್‍ಗೆ ಸೇರ್ಪಡೆಗೊಂಡಿದ್ದ ಸಂದೀಪ್ ಆರಂಭದಿಂದಲೂ ಪಣಂಬೂರು ವಿಭಾಗದಲ್ಲಿ ಕೆಲಸವನ್ನು ನಿರ್ವಹಿಸುತ್ತಿದ್ದರು. ಶುಕ್ರವಾರ ಇವರು ರಾತ್ರಿ ಪಾಳಿಯ ಕೆಲಸವನ್ನು ನಿರ್ವಹಿಸುತ್ತಿದ್ದು ತಡರಾತ್ರಿ 1.20ರ ಸುಮಾರಿಗೆ ತಮ್ಮ ಕಚೇರಿಯ ಹಿಂಭಾಗಕ್ಕೆ ತೆರಳಿ ಸರ್ವಿಸ್ ರೈಫಲ್‍ನಿಂದ ತಲೆಗೆ ಗುಂಡು […]

ಗುಂಡು ಹಾರಿಸಿಕೊಂಡು ಸಿಆರ್ ಪಿಎಫ್ ಯೋಧ ಆತ್ಮಹತ್ಯೆ

Saturday, February 22nd, 2014
CRPF-jawan

ಮಂಗಳೂರು: ಹೊಟ್ಟೆಗೆ ಗುಂಡು ಹಾರಿಸಿಕೊಂಡು ಸಿಆರ್ ಪಿಎಫ್ ಯೋಧ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಎನ್‌ಎಂಪಿಟಿಯಲ್ಲಿ ಶನಿವಾರ ನಡೆದಿದೆ. ಇಂದು ಬೆಳಗ್ಗೆ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತ ಯೋಧನನ್ನು ಮಹಾರಾಷ್ಟ್ರ ಮೂಲದ 38 ವರ್ಷದ ಕೆ.ಟಿ ಸಂದೀಪ್ ಸರ್ಕಟೆ ಎಂದು ಗುರುತಿಸಲಾಗಿದೆ. ಈ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪಣಂಬೂರ್ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.