ದಿಢೀರ್ ಪ್ರತಿಭಟನೆ: ಆಸ್ಪತ್ರೆ ವೈದ್ಯನ ಬಂಧನ

Saturday, February 8th, 2014
Fast-to-protest

ಬಂಟ್ವಾಳ: ಬಿ.ಸಿ.ರೋಡ್‌ನ ಖಾಸಗಿ ಆಸ್ಪತ್ರೆಯಲ್ಲಿ ತುಂಬು ಗರ್ಭಿಣಿ ಚಂಚಲಾಕ್ಷಿ ಹಾಗೂ ಮಗುವಿನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಸಾವಿರಾರು ಸಾರ್ವಜನಿಕರು ಶುಕ್ರವಾರ ಸಂಜೆ ಆಸ್ಪತ್ರೆ ಮುಂಭಾಗ ದಿಢೀರನೆ ಪ್ರತಿಭಟನೆ ನಡೆಸಿದರು. ಮುಂದೆ ನಡೆಯಬಹುದಾದ ಅಪಾಯವನ್ನು ತಪ್ಪಿಸಲು ಪೊಲೀಸರು ಆಸ್ಪತ್ರೆ ವೈದ್ಯನನ್ನು ಬಂಧಿಸಿದ್ದಾರೆ. ಆಕ್ರೋಶಿತ ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಆಸ್ಪತ್ರೆಯ ವಠಾರದಲ್ಲಿ ಜಮಾಯಿಸಿ ವೈದ್ಯನ ಬಂಧನಕ್ಕೆ ಬಂಟ್ವಾಳ ನಗರ ಪೊಲೀಸರು ವಿಳಂಬ ಧೋರಣೆ ಅನುಸರಿಸಿದ್ದಾರೆಂದು ಆರೋಪಿಸಿ ಧಿಕ್ಕಾರ ಕೂಗಿದರು. ಈ ಹಂತದಲ್ಲಿ ಆಸ್ಪತ್ರೆ ವಠಾರದೊಳಗೆ ಉದ್ವಿಗ್ನ […]

2.19 ಕೆ.ಜಿ ಚಿನ್ನ ವಶ– ಇಬ್ಬರ ಸೆರೆ

Wednesday, February 5th, 2014
G-Gold-Seizure

ಮಂಗಳೂರು: ‘ಹಪ್ಪಳ ರೂಪದಲ್ಲಿ ಬಂತು ಚಿನ್ನವಿದೇಶದಿಂದ’ ಚಿನ್ನವನ್ನು ಕಳ್ಳಸಾಗಣೆ ಮಾಡಿದ ಮೂರು ಪ್ರತ್ಯೇಕ ಪ್ರಕರಣಗಳನ್ನು ಕಸ್ಟಮ್ಸ್‌ ಅಧಿಕಾರಿಗಳು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಭೇದಿಸಿದ್ದಾರೆ. ಒಟ್ಟು ₨ 65.29 ಲಕ್ಷ ಮೌಲ್ಯದ 2,191.200 ಗ್ರಾಂ (2.19 ಕೆ.ಜಿ) ಚಿನ್ನವನ್ನು ವಶಪಡಿಸಿ­ಕೊಂಡಿದ್ದಾರೆ. ಆರೋಪಿಗಳು ಈ ಬಾರಿ  ಕಳ್ಳಸಾಗಣೆ ಮಾಡಲು ಚಿನ್ನವನ್ನು ಹಪ್ಪಳ ರೂಪಕ್ಕೂ ಪರಿ ವರ್ತಿಸಿದ್ದಾರೆ. ಅದಲ್ಲದೇ ಕಾಯಿಲ್‌ ಹಾಗೂ ಸರಿಗೆ ರೂಪಕ್ಕೆ ಪರಿವರ್ತಿಸಿ ಕಳ್ಳಸಾಗಣೆ ಮಾಡಿದ ಚಿನ್ನವೂ ಕಸ್ಟಮ್ಸ್‌ ಅಧಿ­ಕಾರಿಗಳ ಕಣ್ಣಿಗೆ ಬಿದ್ದಿದೆ. ಕಾಸರಗೋಡು ಮಧೂರಿನ […]

ಲಂಚ ಪಡೆದ ಅಧಿಕಾರಿ ಬಂಧನ

Wednesday, February 5th, 2014
Arrested-bribery

ಉಡುಪಿ: ಸಬ್ಸಿಡಿ ಹಣ ಬಿಡುಗಡೆ ಮಾಡಲು ಸಣ್ಣ ಕೈಗಾರಿಕಾ ಉದ್ಯಮಿಯೊಬ್ಬರಿಂದ ₨ 10 ಸಾವಿರ ಲಂಚ ಪಡೆದ ಆರೋಪದ ಮೇಲೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಪಿ.ನಾಗೇಶ್‌ ಅವರನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಶ್ರೀಕಾಂತ್‌ ಎಂಬುವವರು ಸುಮಾರು ₨ 22 ಲಕ್ಷ ಬಂಡವಾಳದ ಕರಕುಶಲ ಕೈಗಾರಿಕೆ ಆರಂಭಿಸಲು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದರು. ಬಂಡವಾಳದ ಒಟ್ಟು ಮೊತ್ತಕ್ಕೆ ಅನುಗುಣವಾಗಿ, ಅವರಿಗೆ ₨ 8.75 ಲಕ್ಷ ಸಹಾಯಧನ ಇಲಾಖೆಯಿಂದ ಸಂದಾಯವಾಗಬೇಕಿತ್ತು. ಆದರೆ, ಸಹಾಯಧನ ಬಿಡುಗಡೆ ಮಾಡಬೇಕಾದರೆ,  […]

3ಕೆಜಿ ಚಿನ್ನ ಹೊಂದಿದ್ದ ಮಹಿಳೆ, ವ್ಯಕ್ತಿ ಬಂಧನ

Tuesday, February 4th, 2014
Hemant-Nimbalkar

ಬೆಂಗಳೂರು: ಚಿನ್ನದ ಗಟ್ಟಿ ಹಾಗೂ ಆಭರಣ ಸೇರಿದಂತೆ ಒಟ್ಟು 3 ಕೆ.ಜಿ. ಚಿನ್ನವನ್ನು ಅಕ್ರಮವಾಗಿ ಹೊಂದಿದ್ದ ವ್ಯಕ್ತಿಗಳಿಬ್ಬರನ್ನು ಮಹಾಲಕ್ಷಿ ಬಡಾವಣೆ ಪೊಲೀಸರು ಬಂಧಿಸಿದ್ದಾರೆ. ರಾಮನಗರ ಜಿಲ್ಲೆ ಕುರುಬರಹಳ್ಳಿಯ ಚೆಲುವರಾಜು ಮತ್ತು ಜಯಂತಿ ಬಂಧಿತರು. ಬಂಧಿತರಿಂದ 1 ಕೆ.ಜಿ. ತೂಕದ 1 ಚಿನ್ನದ ಗಟ್ಟಿ ಹಾಗೂ 2 ಕೆ.ಜಿ. ತೂಕದ ಚಿನ್ನಾಭರಣ ಸೇರಿದಂತೆ ಒಟ್ಟು 90 ಲಕ್ಷ ಮೌಲ್ಯದ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಅವರು ಸುದ್ದಿಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು. ಮೂಲತಃ […]

ಯುವಕನಿಂದ ಶಿಕ್ಷಕಿ ಮೇಲೆ ಆಸಿಡ್ ದಾಳಿ

Saturday, February 1st, 2014
Acid Attack

ದಾವಣಗೆರೆ: ಹರಿಹರ ತಾಲೂಕಿನ ಕೊಕ್ಕನೂರಿನ ಖಾಸಗಿ ಶಾಲೆ ಶಿಕ್ಷಕಿ ಕವಿತಾ ಎಂಬುವರ ಮೇಲೆ ಮಹೇಶ್ ಎಂಬ ಯುವಕ ಶುಕ್ರವಾರ ಆ್ಯಸಿಡ್ ದಾಳಿ ನಡೆಸಿದ್ದಾನೆ. ಮುಖ, ಕೈ, ಕಣ್ಣುಗಳಿಗೆ ಆ್ಯಸಿಡ್ ಬಿದ್ದಿದ್ದು, ಎಡಗಣ್ಣಿಗೆ ತೀವ್ರ ಘಾಸಿಯಾಗಿದೆ. ತನ್ನನ್ನು ಪ್ರೀತಿಸುವಂತೆ ಆತ ಶಿಕ್ಷಕಿಯನ್ನು ಪೀಡಿಸುತ್ತಿದ್ದ ಎನ್ನಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಶಿಕ್ಷಕಿಯನ್ನು ದಾವಣಗೆರೆಯ ಎಸ್‌ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕವಿತಾ ಜತೆಗಿದ್ದ ಎಲ್‌ಕೆಜಿ ವಿದ್ಯಾರ್ಥಿ ರಘುವಿನ ಮೇಲೂ ಆ್ಯಸಿಡ್ ಬಿದ್ದಿದೆ. ಈ ಮಗುವಿಗೆ ಬಾಪೂಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕವಿತಾ ಮತ್ತು ಮಹೇಶ್ […]

ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವ ಕ್ಲಿನಿಕ್ ಗಳಿಗೆ ದಾಳಿ, ಇಬ್ಬರು ನಕಲಿ ವೈದ್ಯರ ಬಂಧನ

Saturday, January 18th, 2014
Fake sex doctors

ಮಂಗಳೂರು: ಕರ್ನಾಟಕ ಆಯುರ್ವೇದ ಮತ್ತು ಯುನಾನಿ ಮಂಡಳಿ ಬೆಂಗಳೂರು ಅಧಿಕಾರಿಗಳು ನಗರದ ಎರಡು ಕ್ಲಿನಿಕ್ ಗಳಿಗೆ ದಾಳಿ ನಡೆಸಿ ಇಬ್ಬರು ನಕಲಿ ವೈದ್ಯರನ್ನು ಪತ್ತೆ ಹಚ್ಚಿ ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಶನಿವಾರ ನಡೆದಿದೆ. ಬಂಧಿತರನ್ನು ಸೈಯದ್ ಯೂನಿಸ್ ರಾಣಾ ರಜಪೂತ್ ಡಾ.ರಜಪೂತ್ ಡಿಸ್ಪೆನ್ಸರಿ ಕ್ಲಿನಿಕ್ ನ್ ವೈದ್ಯ ಹಾಗೂ ನಸರತ್ ಚೌಹಾನ್, ಚೌಹಾನ್ ಡಿಸ್ಪೆನ್ಸರಿ ವೈದ್ಯ ಎಂದು ಗುರುತಿಸಲಾಗಿದೆ. ಇವರಿಬ್ಬರು ಕಳೆದ ಕೆಲವು ವರ್ಷಗಳಿಂದ ನಗರದಲ್ಲಿ ಕ್ಲಿನಿಕ್ ಗಳನ್ನು ನಡೆಸುತ್ತಿದ್ದು ಇಬ್ಬರೂ ವೈದ್ಯಕೀಯ ವಿದ್ಯಾಭ್ಯಾಸ ನಡೆಸಿ […]

ವಾಜಪೇಯಿ ಆರೋಗ್ಯ ಶ್ರೀ ಯೋಜನೆ ಅತ್ಯಂತ ಪ್ರಮುಖವಾದುದುಃ ಯು.ಟಿ.ಖಾದರ್

Friday, September 13th, 2013
Vajapeyee Arogya Sree

ಮಂಗಳೂರು : ವಾಜಪೇಯಿ ಆರೋಗ್ಯ ಶ್ರೀ ಯೋಜನೆ ಅತ್ಯಂತ ಪ್ರಮುಖವಾದ ಹಾಗೂ ಮಹತ್ವದ ಯೋಜನೆಗಳಲ್ಲಿ ಒಂದಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಶುಕ್ರವಾರ ನಗರದ ಐ.ಎಂ.ಎ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿ ಸಾರ್ವಜನಿಕ ಆರೋಗ್ಯ ಸೇವೆಗಾಗಿ ಹಲವಾರು ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ, ಈ ಯೋಜನೆಯ ಮುಖ್ಯ ಉದ್ದೇಶವೆಂದರೆ ದುಬಾರಿ ವೆಚ್ಚದ ಮಾರಣಾಂತಿಕ ಕಾಯಿಲೆಗಳಾದ ಹೃದ್ರೋಗ, ಕ್ಯಾನ್ಸರ್, ನರರೋಗ ಮೂತ್ರಪಿಂಡದ ಕಾಯಿಲೆ ಮುಂತಾದ ಗಂಭೀರ ಸ್ವರೂಪದ ಆಘಾತಕಾರಿ ಕಾಯಿಲೆಗಳಿಂದ […]

ಸಿಬಿಎಸ್ಸಿ ಪಠ್ಯದಲ್ಲಿ ಝಾನ್ಸಿ ರಾಣಿಗೆ ಅವಮಾನ ಹಿಂದೂ ಜನಜಾಗೃತಿ ಸಮಿತಿ ಖಂಡನೆ

Monday, August 5th, 2013
Hindu Jana Jagruthi

ಮಂಗಳೂರು: ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಭಾನುವಾರ ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಸಿಬಿಎಸ್ ಸಿ ಪಠ್ಯದಲ್ಲಿ ಝಾನ್ಸಿ ರಾಣಿಗೆ ಅವಮಾನ ಮಾಡಿರುವುದನ್ನುದು ಖಂಡಿಸಿ ಪ್ರತಿಭಟನೆ ಸಭೆ ನಡೆಯಿತು. ಜನಜಾಗೃತಿ ಸಮಿತಿಯ ಸುಕನ್ಯ ಆಚಾರ್ಯ ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ಸಿಬಿಎಸ್ ಸಿ ಪಠ್ಯದಲ್ಲಿ ಝಾನ್ಸಿ ರಾಣಿಗೆ ಅಪಮಾನ ವಾಗುವಂತೆ ಚಿತ್ರಿಸಲಾಗಿದೆ.  ಇದಕ್ಕೆ ಕಾರಣರಾದವರ ವಿರುದ್ದ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ಲೆಕ್ಕಿಸದೆ ಹೋರಾಡಿದ ಮಹಿಳೆಯ ಅವಮಾನಿಸಿದ್ದು ಖಂಡನೀಯ ಎಂದು ಅವರು ಹೇಳಿದರು. ಉದ್ಯಮಿಜಿಲ್ಲಾ ಸಂಚಾಲಕ ಪ್ರಸನ್ನ ಕಾಮತ್, ಅನಂತ್ ಕಾಮರ್, ವಕೀಲ […]

ಮಹಿಳೆಯನ್ನು ಮಗುವಿನ ಎದುರೇ ಬರ್ಬರವಾಗಿ ಇರಿದು ಕೊಲೆ

Saturday, August 3rd, 2013
jyothi

ಬೆಂಗಳೂರು: ವೆಂಕಟಾದ್ರಿ ಲೇಔಟ್ ಎರಡನೇ ಅಡ್ಡರಸ್ತೆ  ಮಹಿಳೆಯೊಬ್ಬರನ್ನು ಅವರ ಐದು ವರ್ಷದ ಮಗುವಿನ ಎದುರೇ ಬರ್ಬರವಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಜೆ.ಪಿ.ನಗರ ಸಮೀಪ ಗುರುವಾರ ರಾತ್ರಿ ನಡೆದಿದೆ. ದುಷ್ಕರ್ಮಿಯೊಬ್ಬ ರಾತ್ರಿ  ಮನೆಗೆ ನುಗ್ಗಿ ಜ್ಯೋತಿಲಕ್ಷ್ಮಿಯ ಕತ್ತು ಮತ್ತು ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾನೆ. ಆಗ ಅವರು ಜೀವ    ರಕ್ಷಣೆಗಾಗಿ  ಕೂಗಿಕೊಂಡರು. ಈ ವೇಳೆ ನಡುಮನೆಯಲ್ಲಿ ಟಿ.ವಿ ನೋಡುತ್ತಾ ಕುಳಿತಿದ್ದ ಜಾಗೃತಿ, ತಾಯಿಯ ಚೀರಾಟ ಕೇಳಿ ಕೊಠಡಿಯೊಳಗೆ ಹೋಗಿದ್ದಾಳೆ. ಈ ಸಂದರ್ಭದಲ್ಲಿ ದುಷ್ಕರ್ಮಿ ಆಕೆಯನ್ನು ತಳ್ಳಿ ಪರಾರಿಯಾಗಿದ್ದಾನೆ. […]

ಉಡುಪಿ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

Tuesday, July 30th, 2013
udupi rape accused

ಉಡುಪಿ : ಮಣಿಪಾಲ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಯೋಗೇಶ, ಹರಿಪ್ರಸಾದ್ ಮತ್ತು ಆನಂದನನ್ನು ಇಂದು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಅವರಿಗೆ ನ್ಯಾಯಾಧೀಶರು ಆಗಸ್ಟ್ 12 ರವರೆಗೆ ನ್ಯಾಯಾಂಗ ಬಂಧನವನ್ನು ವಿಧಿಸಿದ್ದಾರೆ. ಈ ಮೂವರೂ ಆರೋಪಿಗಳನ್ನು  ಜುಲೈ 15 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅಲ್ಲಿ ನ್ಯಾಯಾಧೀಶರ ತೀರ್ಪಿನಂತೆ ಜುಲೈ 29 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು . ಕಾನೂನಿನಂತೆ ಆರೋಪಿಗಳನ್ನು ಪ್ರತೀ 15 ದಿವಸಗಳಿಗೊಮ್ಮೆ ನ್ಯಾಯಾಲಯಕ್ಕೆ ಹಾಜರುಪಡಿಸಬೇಕೆಂದು ನ್ಯಾಯಾಧೀಶರು ಸೂಚಿಸುತ್ತಾರೆ. ಅವರನ್ನು ಇಂದು ಈ […]