ಕೌಟುಂಬಿಕ ಆಸ್ತಿ ವಿವಾದ ; ಪಾಲಿಕೆಯ ವಾಹನ ಚಾಲಕನಿಗೆ ಮಾರಣಾಂತಿಕ ಹಲ್ಲೆ

Sunday, July 21st, 2013
MCC driver

ಮಂಗಳೂರು : ಕೌಟುಂಬಿಕ ಆಸ್ತಿ ವಿವಾದದ ಹಿನ್ನಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ವಾಹನ ಚಾಲಕ ಅಶೋಕನಗರದ ರೋಹಿತ್‌ (26) ಅವರನ್ನು ಶನಿವಾರ ಬೆಳಗ್ಗೆ ಬೈಕ್‌ನಲ್ಲಿ ಬಂದ ನಾಲ್ಕು ಮಂದಿ ಅಪರಿಚಿತರು ಮಾರಕಾಯುಧಗಳಿಂದ ಹಲ್ಲೆ ಮಾಡಿ ಕೊಲೆ ಯತ್ನ ನಡೆಸಿದ್ದಾರೆ. ರೋಹಿತ್‌ ಅವರು ಬೆಳಗ್ಗೆ ಪಾಲಿಕೆಯ ಅಧಿಕಾರಿಗಳನ್ನು ಕರೆ ತರಲು ವಾಹನ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಎರಡು ಬೈಕ್‌ಗಳಲ್ಲಿ ಬೆನ್ನಟ್ಟಿದ ನಾಲ್ವರು ಅಪರಿಚಿತರು ಲೇಡಿಹಿಲ್‌ನಲ್ಲಿ ತಡೆದು ನಿಲ್ಲಿಸಿ ಮಾರಕಾಯುಧಗಳಿಂದ ಹಲ್ಲೆ ನಡೆಸಿದರು  ಎಂದು ಆರೋಪಿಸಲಾಗಿದೆ. ಗಾಯಾಳು ರೋಹಿತ್‌ ಅವರನ್ನು ಆಸ್ಪತ್ರೆಗೆ […]

69ರ ಅಜ್ಜಿಯನ್ನು ಅತ್ಯಾಚಾರ ನಡೆಸಿ, ಚಿನ್ನಾಭರಣ ದೋಚಿದ ಯುವಕ

Tuesday, July 16th, 2013
Rapist Boy

ಮಂಗಳೂರು: ಅಜ್ಜಿಯ ಬಟ್ಟೆಯನ್ನು ಬಲವಂತದಿಂದ ಬಿಚ್ಚಿಸಿ ವಿವಸ್ತ್ರ ಗೊಳಿಸಿ ಕೋಣೆಯಲ್ಲಿ ಕೂಡಿಹಾಕಿ ಅತ್ಯಾಚಾರ ನಡೆಸಿದ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಸರಿಪಲ್ಲ ನಿವಾಸಿ ಮೇರಿ ಡಿ’ಸೋಜಾ (69)ರ  ಮನೆಗೆ ನುಗ್ಗಿದ  ಚಿಕ್ಕಬಳ್ಳಾ ಪುರ-ಚಿಂತಾಮಣಿ ನಿವಾಸಿ ನಾಗೇಶ(24) ಅಜ್ಜಿಯ ಮೇಲೆ ಅತ್ಯಾಚಾರ ನಡೆಸಿ ಬಳಿಕ ಮನೆಯಲ್ಲಿದ್ದ ಚಿನ್ನಾಭರಣ ಸೇರಿ ದಂತೆ ಬೆಲೆಬಾಳುವ ಸೊತ್ತುಗಳನ್ನು ದೋಚಿದ್ದ. ಅಜ್ಜಿಗೆ ಚೂರಿ ತೋರಿಸಿ ಕೋಣೆಯಲ್ಲಿ ಕೂಡಿಹಾಕಿ ಅತ್ಯಾಚಾರ ನಡೆಸಿದ ಬಳಿಕ ಅಜ್ಜಿ ಕೂಗಿಕೊಂಡರು, ಆಗ ಸರಿಪಲ್ಲದ ಯುವಕರು ಓಡಿಬಂದರು, ಯವಕರನ್ನು ಕಂಡಾಗ ನಾಗೇಶ […]

ತಾಯಿ ಹಾಗೂ ಪತ್ನಿಯನ್ನು ಬರ್ಬರವಾಗಿ ಕತ್ತಿಯಿಂದ ಕಡಿದು, ಆತ್ಮಹತ್ಯೆ ಮಾಡಿದ ಸುಪರ್ ಮಾರ್ಕೆಟ್ ಉದ್ಯೋಗಿ

Saturday, July 13th, 2013
Bantwala Murder

ಬಂಟ್ವಾಳ : ಸುಪರ್ ಮಾರ್ಕೆಟ್ ಉದ್ಯೋಗಿಯೊಬ್ಬ  ತನ್ನ ತಾಯಿ ಹಾಗೂ ಪತ್ನಿಯನ್ನು ಬರ್ಬರವಾಗಿ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿಯ ಕೊಡಾಜೆ ಪಂತ್ತಡ್ಕ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಕೊಡಾಜೆ ಪಂತಡ್ಕ ನಿವಾಸಿ ಅಬ್ದುಲ್ ಹಮೀದ್ ಎಂಬಾತನೇ ಈ ಕೃತ್ಯ ವೆಸಗಿ, ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕತ್ತಿಯಿಂದ ಹಲ್ಲೆಗೀಡಾಗಿ ತೀವ್ರ ಗಾಯಗಳಾಗಿರುವ ಹಮೀದ್ ಪತ್ನಿ ಅಸ್ಮಾ(28) ಹಾಗೂ ತಾಯಿ ಮರಿಯಮ್ಮ(55) ರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು […]

ತಲಪಾಡಿಯ ತಚ್ಚಣಿಯಲ್ಲಿ ಮಹಿಳೆಗೆ ಪಿಸ್ತೂಲು ತೋರಿಸಿ ಹಲ್ಲೆ

Wednesday, July 10th, 2013
Talapady shotout

ಮಂಗಳೂರು: ಕೇರಳ ಕೃಷಿ ಇಲಾಖೆಯ ನಿವೃತ್ತ ಅಧಿಕಾರಿ ಕೇಶವ್.ಬಿ ಅವರ ಮನೆಯೊಳಗೆ ಮಂಗಳವಾರ ಬೆಳಿಗ್ಗೆ 8.00 ಗಂಟೆ ಸುಮಾರಿಗೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆಗೆ ಪಿಸ್ತೂಲು ತೋರಿಸಿ ಬೆದರಿಸಿ ಅವರಿಗೆ ಹಲ್ಲೆ ನಡೆಸಿದ ಘಟನೆ ತಲಪಾಡಿಯ ತಚ್ಚಣಿ ಸಮೀಪದ ಮಂಡಿ ಕಟ್ಟೆಯಲ್ಲಿ ನಡೆದಿದೆ. ದುಷ್ಕರ್ಮಿಗಳಿಬ್ಬರ ಪೈಕಿ ಓರ್ವ ಏಕಾಏಕಿ ಮನೆಯೊಳಗೆ ನುಗ್ಗಿ ಅಡುಗೆ ಕೋಣೆಯಲ್ಲಿದ್ದ  ಸಾಧನಾ ಕೇಶವ್ ಅವರಿಗೆ ಪಿಸ್ತೂಲು ತೋರಿಸಿ ಬೆದರಿಸಿದ್ದನು. ಮನೆಯೊಳಗೆ `ಯಾರಿದ್ದಾರೆಂದು’ ಪ್ರಶ್ನಿಸಿದ ಬಳಿಕ ಅವರ ಮೊಬೈಲಿನಿಂದ ತಾನು […]

ಕಾಸರಗೋಡು ಯುವಕನ ಇರಿದು ಕೊಲೆ, ಮೂವರು ವಶಕ್ಕೆ

Wednesday, July 10th, 2013
Sabith murder

ಕಾಸರಗೋಡು: ಮೀಪುಗುರಿಯ  ಜೆ.ಪಿ. ಕಾಲನಿ ಬಳಿ ಜುಲೈ 7ರಂದು ಬಟ್ಟೆ ಅಂಗಡಿ ಉದ್ಯೋಗಿ ಟಿ.ಎ. ಸಾಬಿತ್(19)ರನ್ನು ಇರಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಪೊಲೀಸರು ಮೂವರನ್ನು ವಶಕ್ಕೆ ತೆಗೆದುಕೊಂಡು ತನಿಖೆ ಮುಂದುವರಿಸಿದ್ದಾರೆ. ಭಾನುವಾರ ಬೆಳಗ್ಗೆ ಗೆಳೆಯ ರಶೀದ್ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಇನ್ನೊಂದು ಬೈಕ್‌ನಲ್ಲಿ ಬಂದ ತಂಡವೊಂದು ಇರಿದು ಪರಾರಿಯಾಗಿತ್ತು. ತೀವ್ರವಾಗಿ ಗಾಯಗೊಂಡ ಸಾಬೀತ್  ನನ್ನು ಕೂಡಲೇ ಕಾಸರಗೋಡು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸಿದೆ ಭಾನುವಾರ ಮಧ್ಯಾಹ್ನ ಮೃತಪಟ್ಟಿದ್ದಾನೆ. ಕೃತ್ಯದಲ್ಲಿ ನೇರವಾಗಿ ಶಾಮೀಲಾಗಿದ್ದ ಅಕ್ಷಯ್ ಮತ್ತು […]

ಕಾಸರಗೋಡು ಯುವಕನ ಕೊಲೆ, 7ಮಂದಿಯ ವಿರುದ್ಧ ದೂರು ದಾಖಲು ; ಒಂದು ವಾರ ನಿಷೇಧಾಜ್ಞೆ ಜಾರಿ

Monday, July 8th, 2013
Kasaragod youth Murder

ಕಾಸರಗೋಡು : ಕಾಸರಗೋಡು ಸಮೀಪದ ವಿದ್ಯಾನಗರ, ನುಳ್ಳಿಪಾಡಿಯ ಜೆಪಿ ನಗರ ನಿವಾಸಿ ಟಿ.ಎ. ಸಾಬೀದ್(18) ತನ್ನ ಸ್ನೇಹಿತನ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳು ಇರಿದು  ಕೊಲೆ ಮಾಡಿದ  ಘಟನೆ ಭಾನುವಾರ ನಡೆದಿದೆ. ಟಿ.ಎ. ಸಾಬೀದ್ ಕಾಸರಗೋಡು ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಭಾನುವಾರ ಬೆಳಗ್ಗೆ ಗೆಳೆಯ ರಶೀದ್ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಇನ್ನೊಂದು ಬೈಕ್‌ನಲ್ಲಿ ಬಂದ ತಂಡವೊಂದು ಇರಿದು ಪರಾರಿಯಾಗಿದೆ. ತೀವ್ರವಾಗಿ ಗಾಯಗೊಂಡ ಸಾಬೀದ್ ನನ್ನು ಸ್ಥಳೀಯರು ಕೂಡಲೇ ಕಾಸರಗೋಡು ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆಗೆ […]

ಬೆಳ್ತಂಗಡಿ : ಅಂತಾರಾಜ್ಯ ಕಳ್ಳರ ಬಂಧನ

Tuesday, April 23rd, 2013
Inter state thieves

ಬೆಳ್ತಂಗಡಿ : ಸೋಮವಾರ ಉಜಿರೆಯ ಚೆಕ್ ಪೋಸ್ಟ್ ಬಳಿ ಬೆಳ್ತಂಗಡಿ ಪೊಲೀಸರು ಮೂವರು ಅಂತಾರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಕಮಲಾನಗರದ ಗೋಪಿ ಯಾನೆ ಗೋಪಿನಾಥ್(29), ಬೆಂಗಳೂರು ಕುರುಬರ ಹಳ್ಳಿಯ ಸೂರಿ ಯಾನೆ ಸುರೇಂದ್ರ(29), ಹಾಗೂ ಚಿಕ್ಕಬಳ್ಳಾಪುರದ ಗೌರಿಬಿದನೂರು ನಿವಾಸಿ ಮಣಿ ಯಾನೆ ಮಣಿಕಂಠ (23)ಬಂಧಿತ ಆರೋಪಿಗಳು. ಬೆಳ್ತಂಗಡಿ ಎಸ್‌ಐ ಯೋಗೀಶ್ ಕುಮಾರ್ ಮತ್ತು ತಂಡ ಉಜಿರೆಯಲ್ಲಿ ಚುನಾವಣಾ ಸಂಬಂಧಿ ಕರ್ತವ್ಯದಲ್ಲಿದ್ದ ವೇಳೆ ಬೆಂಗಳೂರು ನೋಂದಣಿಯ ಕ್ವಾಲಿಸ್ ಕಾರ್‌ನಲ್ಲಿದ್ದವರನ್ನು ತಡೆದು ನಿಲ್ಲಿಸಿ ವಿಚಾರಿಸಿದ ಸಂದರ್ಭ ಆರೋಪಿಗಳು ಕಳ್ಳತನದ ಬಗ್ಗೆ […]

ಎಸಿಪಿ ಟಿ. ಆರ್‌. ಜಗನ್ನಾಥ್‌ ನೇತೃತ್ವದಲ್ಲಿ ಪ್ರಶಾಂತ್‌ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಬಂಧನ

Saturday, April 13th, 2013
Prashanth murder 4 killers arrested

ಮಂಗಳೂರು : ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಪಿ ಟಿ. ಆರ್‌. ಜಗನ್ನಾಥ್‌ ನೇತೃತ್ವದ ಪಾಂಡೇಶ್ವರ ಪೊಲೀಸ್‌ ಠಾಣೆ ಮತ್ತು ಸಿಸಿಬಿ ಘಟಕದ ಇನ್ಸ್‌ಪೆಕ್ಟರ್‌ಗಳು ನಡೆಸಿದ  ಜಂಟಿ ಕಾರ್ಯಾಚರಣೆಯಲ್ಲಿ ಪ್ರಶಾಂತ್‌ (36) ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಆದಿನಾಥೇಶ್ವರ ಟ್ರಾನ್ಸ್‌ಪೊರ್ಟ್‌ ಕಂಪೆನಿಯ ಮ್ಯಾನೇಜರ್‌ ಕುಂಜತ್ತಬೈಲ್‌ನ ಪ್ರಶಾಂತ್‌ ನನ್ನು ಆರೋಪಿಗಳು ಎಪ್ರಿಲ್ 7 ರಂದು ರಾತ್ರಿ 11.25 ರ ವೇಳೆಗೆ ನಗರದ ವೆಲೆನ್ಸಿಯಾದ ಮಂಗಳಾ ಬಾರ್‌ ಬಳಿ ಮಾರಕಾಯುಧಗಳಿಂದ ಕಡಿದು ಕೊಲೆ ಮಾದಿದ್ದರು. ಆರೋಪಿಗಳಾದ ಜಪ್ಪಿನ ಮೊಗರು […]

ಬಂದ್ಯೋಡು ವಸತಿ ಗೃಹವೊಂದರ ಮೇಲೆ ದಾಳಿ, ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ವಶ

Wednesday, April 10th, 2013
drugs mafia

ಕಾಸರಗೋಡು : ಜಿಲ್ಲೆಯಲ್ಲಿ ಗಾಂಜಾ ಸಾಗಾಣಿಕೆಯ ವಿರುದ್ದ ಪೊಲೀಸ್ ಕಾರ್ಯಾಚರಣೆ ಮುಂದುವರಿದಿದ್ದು ಬಂದ್ಯೋಡು ಬಳಿಯ ವಸತಿ ಗೃಹವೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಅಬ್ದುಲ್ ಅಜೀಝ್ ಎಂಬಾತನನ್ನು ಬಂಧಿಸಿದ್ದಾರೆ. ಬಳಿಕ ಆತನ ನೆರೆಮನೆಯ ರಿಕ್ಷಾ ಚಾಲಕ ಅಬ್ಬಾಸ್ (35) ಎಂಬಾತನ ಮನೆ ಮೇಲೆ  ದಾಳಿ ನಡೆಸಿದ ಪೊಲೀಸರು ಮನೆಯಲ್ಲಿ 3 ಗೋಣಿ ಚೀಲಗಳಲ್ಲಿ ತುಂಬಿಸಿಡಲಾಗಿದ್ದ ಗಾಂಜಾವನ್ನು ಪತ್ತೆ ಹಚ್ಚಿ ಮನೆಯಲ್ಲಿದ್ದ ಆತನ ಪತ್ನಿ ಸೆಮೀರಾ ಯಾನೆ ಸೆಮೀಮಾ(26) ಎಂಬಾಕೆಯನ್ನು ಬಂಧಿಸಿದ್ದಾರೆ. ಬಳಿಕ ಬಂಧಿತರು ನೀಡಿದ ಮಾಹಿತಿ ಮೇರೆಗೆ […]

ಪ್ರಶಾಂತ್ ಕೊಲೆ ಪ್ರಕರಣ, ಎಸಿಪಿ ಜಗನ್ನಾಥ ನೇತೃತ್ವದಲ್ಲಿ ತನಿಖೆ

Tuesday, April 9th, 2013
Prashanth murder case

ಮಂಗಳೂರು : ಆದಿನಾಥೇಶ್ವರ ಟ್ರಾನ್ಸ್‌ಪೋರ್ಟ್ ಕಂಪನಿಯ ಮ್ಯಾನೇಜರ್ ಪ್ರಶಾಂತ್ ಕೊಲೆ ಪ್ರಕರಣಕ್ಕೆ ಸಂಬಧಪಟ್ಟಂತೆ ಮಂಗಳೂರು ಗ್ರಾಮಾಂತರ ಇನ್‌ಸ್ಪೆಕ್ಟರ್ ಹಾಗೂ ಎಸಿಪಿ ಜಗನ್ನಾಥ ನೇತೃತ್ವದಲ್ಲಿ  ತಂಡಗಳನ್ನು ರಚಿಸಲಾಗಿದೆ. ರವಿವಾರ ರಾತ್ರಿ ೧೧.೨೫ ರ ವೇಳೆಗೆ ಸುಮಾರು ಆರರಿಂದ ಏಳು ಮಂದಿಯ ಹಂತಕರ ತಂಡ ಪ್ರಶಾಂತ್ ಮೇಲೆ ಗುಂಡು ಹಾರಿಸಿ ಬಳಿಕ ಮಾರಕಾಸ್ತ್ರಗಳಿಂದ ಕಡಿದು ಪರಾರಿಯಾಗಿದೆ. ಕೊಲೆ ನಡೆದ ಸ್ಥಳಕ್ಕೆ ಬೆರಳಚ್ಚು ಹಾಗೂ ಶ್ವಾನದಳತಂಡ ಭೇಟಿ ನೀಡಿ ತನಿಖೆ ನಡೆಸಿದೆ. ಪೊಲೀಸರಿಗೆ ಆರೋಪಿಗಳ ಬಗ್ಗೆ ಸ್ಪಷ್ಟ ಮಾಹಿತಿ ಲಭಿಸಿದ್ದು ಬಂಧನಕ್ಕೆ […]