ಮುಖ್ಯಮಂತ್ರಿಯಾಗ ಬೇಕು ಎಂದು ಗೆಳೆಯರಲ್ಲಿ ಹೇಳಿಕೊಂಡಿದ್ದ ಯುವಕ, ಆತ್ಮಹತ್ಯೆಗೆ ಶರಣು

Thursday, October 8th, 2020
Youth Hangs

ಬೆಂಗಳೂರು : ಮುಖ್ಯಮಂತ್ರಿಯಾಗ ಬೇಕು ಎಂದು ಗೆಳೆಯರಲ್ಲಿ ಹೇಳಿಕೊಂಡಿದ್ದ ಯುವಕನೊರ್ವ ಕನಸು ಈಡೇರುವುದಿಲ್ಲ ಎಂದು ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಜಯನಗರದ 4ನೇ ಹಂತದಲ್ಲಿ ಬುಧವಾರ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಶಶಾಂಕ್‌ (22) ಮೃತ ದುರ್ದೈವಿ. ತನ್ನ ಬಾಡಿಗೆ ಕೊಠಡಿಯಲ್ಲಿ ಬೆಳಗ್ಗೆ ಶಶಾಂಕ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೆಲ ಹೊತ್ತಿನ ಬಳಿಕ ಆತನ ಸ್ನೇಹಿತರು ಕೊಠಡಿಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದೂವರೆ ತಿಂಗಳ ಹಿಂದೆ ತನ್ನೂರಿನಿಂದ ಉದ್ಯೋಗ […]

ಸುಳ್ಯ : ಜಾಮೀನು ಪಡೆದು ಹೊರಗೆ ಬಂದಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಗುಂಡಿಟ್ಟು ಕೊಲೆ ಮಾಡಿದ ಅಪರಿಚಿತರು

Thursday, October 8th, 2020
sampath

ಮಂಗಳೂರು: ಜಾಮೀನು ಪಡೆದು ಹೊರಗೆ ಬಂದಿದ್ದ ಕೊಲೆ ಪ್ರಕರಣದ ಆರೋಪಿಯ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿಟ್ಟು ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಸಂಪತ್‌ ಕುಮಾರ್‌ (35) ಎಂದು ಗುರುತಿಸಲಾಗಿದೆ. ಬೆಳಗ್ಗೆ 6  ಗಂಟೆ ಸುಮಾರಿಗೆ ಸಂಪತ್‌ ಅವರು ಮನೆಯಿಂದ ಹೊರಡುವ ವೇಳೆ ಅಪರಿಚಿತರು ಕಾರಿನ ಮೇಲೆ ದಾಳಿ ನಡೆಸಿದ್ದರು. ಈ ಸಂದರ್ಭ ಕಾರು ನಿಯಂತ್ರಣ ತಪ್ಪಿ  ರಸ್ತೆ ಬದಿಗೆ ಸರಿದಿದೆ. ನಂತರವೂ ಗುಂಡಿನ ಸದ್ದು ಕೇಳಿದೆ ಎಂದು ಸ್ಥಳೀಯರು  ತಿಳಿಸಿದ್ದಾರೆ.  ಸುಳ್ಯ ತಾಲೂಕಿನ ಶಾಂತಿನಗರದಲ್ಲಿ […]

ತವರಿನಿಂದ ಹಣ ತರಲು ಹೇಳಿದ ಬೆನ್ನಲ್ಲೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ 20 ರ ಮಹಿಳೆ

Wednesday, October 7th, 2020
Manjula

ಮೈಸೂರು: ಪ್ರೀತಿಸಿ ಮದುವೆಯಾದ ಮಹಿಳೆಯಲ್ಲಿ  ತವರಿನಿಂದ ಹಣ ತರಲು ಹೇಳಿದ ಬೆನ್ನಲ್ಲೇ  ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಾವನ್ನಪ್ಪಿದ ಮಹಿಳೆ 20 ವರ್ಷದ ಮಂಜುಳಾ ಎಂದು ಗುರುತಿಸಲಾಗಿದೆ. ಹಳ್ಳಿಕೆರೆಹುಂಡಿಯ ನಿವಾಸಿಯಾಗಿದ್ದ ಮಂಜುಳಾ ಮತ್ತು ಮೆಲ್ಲಹಳ್ಳಿ ಗ್ರಾಮದ ಹೇಮಂತ್ ಪ್ರೀತಿಸಿ ಮದುವೆಯಾಗಿದ್ದರು. ಕೆಲ ದಿನಗಳ ಹಿಂದೆ ಹೇಮಂತ್ ಪತ್ನಿಗೆ ತವರಿನಿಂದ ಹಣ ತರಲು ಹೇಳಿದ್ದನಂತೆ. ಮಂಜುಳಾ ತಂದೆ ಸಹ ಒಂದು ತಿಂಗಳಲ್ಲಿ ಹಣ ನೀಡುವದಾಗಿ ಹೇಳಿದ್ದರು ಎನ್ನಲಾಗಿದೆ. ಆದ್ರೆ ಮಂಜುಳಾ ಮಂಗಳವಾರ ಅನುಮಾನಾಸ್ಪದವಾಗಿ […]

ವಿಶೇಷ ಮಹಿಳಾ ತಹಶೀಲ್ದಾರ್ 5 ಲಕ್ಷ ರೂಪಾಯಿ ಲಂಚವನ್ನು ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ

Tuesday, October 6th, 2020
Tahashidar Lakshmi

ಬೆಂಗಳೂರು: ದಕ್ಷಿಣ ತಾಲೂಕಿನ ಕೆಜಿ ರೋಡ್‍ನಲ್ಲಿರುವ ತಹಶೀಲ್ದಾರ್ ಕಚೇರಿ ವಿಶೇಷ ಮಹಿಳಾ ತಹಶೀಲ್ದಾರ್ ಲಕ್ಷ್ಮೀ ಮತ್ತು ಕ್ಲರ್ಕ್ ಪ್ರಸನ್ನಕುಮಾರ್ ಎಸಿಬಿ ಬಲೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಸುಮಾರು 5 ಲಕ್ಷ ರೂಪಾಯಿ ಲಂಚವನ್ನು ಸ್ವೀಕರಿಸುತ್ತಿದ್ದಾಗ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಜಮೀನಿನ ಆರ್ಟಿಸಿ ಮಾಡಿಕೊಡುವುದಕ್ಕೆ ಅಧಿಕಾರಿಗಳು 7 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ.  ಇದರಲ್ಲಿ 5 ಲಕ್ಷ ತಹಶೀಲ್ದಾರ್ ಲಕ್ಷ್ಮೀಗೆ ಹಾಗೂ ಉಳಿದ ಎರಡು ಲಕ್ಷ ಕ್ಲರ್ಕ್ ಪ್ರಸನ್ನಕುಮಾರಿಗೆ ಎಂದು ಹಂಚಿಕೊಂಡಿದ್ದಾರೆ ಎನ್ನಲಾಗಿದೆ. ಎಸಿಬಿ  ಡಿವೈ ಎಸ್ಪಿ ತಮ್ಮಣ್ಣ ನೇತೃತ್ವದಲ್ಲಿ ಕಾರ್ಯಾಚರಣೆ […]

ಮಗಳಿಗೆ ಅಕ್ರಮ ಸಂಭಂದಕ್ಕೆ ಹುಟ್ಟಿದ ನವಜಾತ ಶಿಶುವನ್ನು, ಚೂರಿ, ಬ್ಲೇಡ್ ಗಳಿಂದ ಇರಿದು ಪೊದೆಗೆ ಎಸೆದ ಅಜ್ಜ-ಅಜ್ಜಿ

Saturday, October 3rd, 2020
infant killers

ಭೋಪಾಲ್:  ಊರಿನ ಯುವಕನ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಮಗಳಿಗೆ ಹುಟ್ಟಿದೆ ಎನ್ನಲಾದ ಮಗುವನ್ನು ಪಾಲಕರು ಚಾಕುವಿನಿಂದ ಇರಿದು ನಂತರ ಬ್ಲೇಡ್ ನಿಂದ ದಾಳಿ ನಡೆಸಿ ದೇವಾಲಯದ ಆವರಣ ಸಮೀಪದ ಪೊದೆ ಯಲ್ಲಿ ಇರಿಸಿದ ಪ್ರಕರಣ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನ ಅಯೋಧ್ಯ ನಗರ ಎಂಬಲ್ಲಿ ನಡೆದಿತ್ತು . ಆದರೆ ಆ ಮಗು ಯಾರದ್ದು ಎಂಬುದನ್ನು ಮೊದಲಿಗೆ ಪೊಲೀಸರಿಗೆ ಪತ್ತೆ ಹಚ್ಚಲು ಸವಾಲಾಗಿತ್ತು. ಕೊಲೆಗಾರನನ್ನು ಪತ್ತೆಹಚ್ಚಲು ಐದು ತಂಡಗಳ ಪೊಲೀಸ್ ಸಿಬ್ಬಂದಿಯನ್ನು ರಚಿಸಿ ಸುತ್ತಮುತ್ತಲಿನ ಹಲವಾರು ನರ್ಸಿಂಗ್ ಹೋಂಗಳ ಸಿಬ್ಬಂದಿಯನ್ನು ಪ್ರಶ್ನಿಸಲಾಯಿತು ಮತ್ತು ಆ  ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು […]

20ರ ಯುವತಿಯನ್ನು ಸಾಮೂಹಿಕ ಅತ್ಯಾಚಾರ ಎಸಗಿ, ನಾಲಗೆಯನ್ನು ಕತ್ತರಿಸಿದ ಭಯಾನಕ ಕಾಮುಕರು

Tuesday, September 29th, 2020
UPrape

ನವದೆಹಲಿ: ನಾಲ್ವರು ಕಾಮುಕರು 20 ವರ್ಷದ ಯುವತಿಯೊಬ್ಬಳನ್ನು ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೇ ಕೃತ್ಯವನ್ನು ಬೇರೆಯವರಿಗೆ ತಿಳಿಸದಂತೆ ಆಕೆಯ ನಾಲಗೆಯನ್ನು ಕತ್ತರಿಸಿ ಚಿತ್ರಹಿಂಸೆ ನೀಡಿದ್ದರು. ಆದರೆ ಕಾಮುಕರ ಪೈಶಾಚಿಕ ಕೃತ್ಯಕ್ಕೆ ಒಳಗಾದ ಯುವತಿ  ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಇಂದು ದೆಹಲಿಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಉತ್ತರ ಪ್ರದೇಶದ ಹತ್ರಾಸ್ ಗ್ರಾಮದ ನಿವಾಸಿ 20 ವರ್ಷದ ದಲಿತ ಯುವತಿ ಕುಟುಂಬದೊಂದಿಗೆ ಹುಲ್ಲು ಕತ್ತರಿಸುತ್ತಿದ್ದ ಸ್ಥಳದಿಂದ ಆಕೆಯ ದುಪ್ಪಟ್ಟಾದಿಂದ ಹೊಲಕ್ಕೆ ಎಳೆದುಕೊಂಡು ಹೋಗಲಾಗಿತ್ತು. ಅಲ್ಲದೇ ಆಕೆಯ ಮೇಲೆ ನಾಲ್ವರು ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದರು. ನಂತರ […]

ಮಹಿಳೆಯ ಚಿನ್ನದ ಸರ ಎಗರಿಸಿದ ಪ್ರಕರಣ, ಓರ್ವ ಮಹಿಳೆ ಸಹಿತ ನಾಲ್ವರು ಆರೋಪಿಗಳ ಬಂಧನ

Thursday, September 24th, 2020
Vitla Accuced

ಬಂಟ್ವಾಳ: ಮಹಿಳೆಯ ಚಿನ್ನದ ಸರ ಎಗರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಸಹಿತ ಒಟ್ಟು ನಾಲ್ವರು ಆರೋಪಿಗಳನ್ನು ವಿಟ್ಲ ಎಸ್ಐ ವಿನೋದ್ ಕುಮಾರ್ ರೆಡ್ಡಿ ನೇತೃತ್ವದ ತಂಡ ಬಂಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ತಾಲೂಕಿನ ಸವಣೂರು ನಿವಾಸಿಗಳಾದ ಮಹಮ್ಮದ್ ಶಾಕೀರ್ (23), ಮಹಮ್ಮದ್ ಇಕ್ಬಾಲ್ (24), ಕೆ.ಎ. ಮಹಮ್ಮದ್ ಯಾನೆ ಐಟಿ ಮಮ್ಮು (41) ಆರೋಪಿಗಳಿಗೆ ಸಹಕರಿಸಿದ ತಿಂಗಳಾಡಿ ನಿವಾಸಿ ಹಾಜೀರಾ (44)  ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಕುಂಬ್ರದ ಬ್ಯಾಂಕ್ ನಲ್ಲಿ ಅಡವಿಟ್ಟ ಕಳವು ಮಾಡಿದ ಚಿನ್ನ, ಆಕ್ಟೀವ್ […]

ಹಿರಿಯಡ್ಕ ಪೇಟೆಯಲ್ಲಿ ಹಾಡುಹಗಲೇ ನಡುರಸ್ತೆಯಲ್ಲಿ ವ್ಯಕ್ತಿಯನ್ನು ಅಟ್ಟಾಡಿಸಿ ಕೊಲೆ

Thursday, September 24th, 2020
kishan Hegde

ಉಡುಪಿ: ಎರಡು ಇನ್ನೋವಾ ಕಾರುಗಳಲ್ಲಿ ಬಂದ ತಂಡವೊಂದು ಹಿರಿಯಡ್ಕ ಪೇಟೆಯಲ್ಲಿ ಹಾಡುಹಗಲೇ ನಡುರಸ್ತೆಯಲ್ಲಿ ವ್ಯಕ್ತಿಯೋರ್ವನನ್ನು ಅಟ್ಟಾಡಿಸಿ ಮಾರಕಾಯುಧಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಪಡುಬಿದ್ರಿ ಇನ್ನಾದ  ಕಿಶನ್ ಹೆಗ್ಡೆ (42) ಕೊಲೆಯಾದ ವ್ಯಕ್ತಿ. ಈತ ರಿಯಲ್ ಎಸ್ಟೇಟ್ ಉದ್ಯಮವನ್ನು ನಡೆಸುತ್ತಿದ್ದ ಎನ್ನಲಾಗಿದೆ. ಈತನ ಮೇಲೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣಗಳಿವೆ, ರೌಡಿ-ಶೀಟರ್ ಎಂದು ಹೇಳಲಾಗಿದೆ. ಮಂಗಳೂರು ಮೂಲದ ಗ್ಯಾಂಗ್ ಒಂದು ಈ ಹತ್ಯೆ ಮಾಡಿದೆ ಎಂದು ಹೇಳಲಾಗಿದೆ. ಗುರುವಾರ ಮಧ್ಯಾಹ್ನ ಹಿರಿಯಡ್ಕ ಪೇಟೆಯ ನಡುರಸ್ತೆಯಲ್ಲಿ ತಲೆಗೆ […]

ಯುವತಿಯರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿಗಳು

Sunday, September 20th, 2020
kishor Shetty

ಮಂಗಳೂರು : ನಗರ ಅಪರಾಧ ಪತ್ತೆ ದಳ ಮತ್ತು ನಾರ್ಕೊಟಿಕ್ಸ್ ಪೊಲೀಸರು ಡ್ರಗ್ಸ್ ಸೇವನೆ ಹಾಗೂ ಸಾಗಾಟ ಆರೋಪದಲ್ಲಿ ಮಂಗಳೂರಿನಲ್ಲಿ ಶನಿವಾರ ಬೆಳಗ್ಗೆ ಬಂಧಿತರಾಗಿದ್ದ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ನ್ಯಾಯಾಲಯ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ನಗರದಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಅಕೀಲ್ ನೌಶೀಲ್ (28) ಮತ್ತು ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ (30) ಎಂಬ ಆರೋಪಿಗಳನ್ನು ಬಂಧಿಸಲಾಗಿತ್ತು. ಆರೋಪಿಗಳನ್ನು  ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಆರೋಪಿಗಳನ್ನು ಕೋವಿಡ್ ತಪಾಸಣೆಗೊಳಪಡಿಸಿದ ಬಳಿಕ […]

ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ನಟ ಮತ್ತು ಸಹಚರನನ್ನು ಬಂಧಿಸಿದ ಮಂಗಳೂರು ಸಿಸಿಬಿ ಪೊಲೀಸರು

Saturday, September 19th, 2020
kishor Shetty

ಮಂಗಳೂರು: ಖ್ಯಾತ ಡ್ಯಾನ್ಸರ್, ಬಾಲಿವುಡ್ ಚಿತ್ರದಲ್ಲಿ ನಟಿಸಿದ್ದ ಮಂಗಳೂರಿನ ಕಿಶೋರ್ ಶೆಟ್ಟಿಯನ್ನು ಡ್ರಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್,  ಮಂಗಳೂರು ಸಿಸಿಬಿ ಪೊಲೀಸರಿಂದ ಶನಿವಾರ ಬೆಳಿಗ್ಗೆ ಡ್ರಗ್ಸ್ ಸಾಗಿಸುತ್ತಿದ್ದ ಡ್ಯಾನ್ಸರ್ ಕಿಶೋರ್ ಶೆಟ್ಟಿಯನ್ನು ಬಂಧಿಸಿದ್ದಾರೆ ಎಂದು ಮಾಹಿತಿ  ನೀಡಿದರು. ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿದ್ದ ಕಿಶೋರ್ ಶೆಟ್ಟಿ, ನಂತರ ಹಿಂದಿ ಭಾಷೆಯ ಎಬಿಸಿಡಿ ಚಿತ್ರದಲ್ಲಿ ನಟಿಸಿದ್ದ. ಪ್ರಕರಣದಲ್ಲಿ ಮತ್ತೋರ್ವನನ್ನು ಬಂಧಿಸಲಾಗಿದ್ದು, ಅಕೀಲ್ ನೌಶೀಲ್ ಎಂದು […]