ಡ್ರಗ್ಸ್ ದಂಧೆ : ಮಂಡ್ಯದ ಮಾಜಿ ಸಂಸದರ ಮಕ್ಕಳಿಬ್ಬರಿಗೆ ಲಿಂಕ್

Saturday, September 5th, 2020
Rahul

ಮಂಡ್ಯ :  ಸಿಸಿಬಿ ವಶದಲ್ಲಿರುವ ನಟಿ ಸಂಜನಾ ಆಪ್ತ ರಾಹುಲ್ ಜತೆ ನಿರಂತರ ಸಂಪರ್ಕ ಹೊಂದಿರುವ ಶಂಕೆಯ ಮೇರೆಗೆ ಮಂಡ್ಯ ಜಿಲ್ಲೆಯ ಮಾಜಿ ಸಂಸದರ ಮಗ ಹಾಗೂ ಮಗಳಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನಲ್ಲಿ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯೊಂದರ ಮಾಲೀಕರಾಗಿರುವ ಮಾಜಿ ಸಂಸದರ ಪುತ್ರ ಸಂಜನಾ ಆಪ್ತ ರಾಹುಲ್ ಜತೆ ನಿರಂತರ ಸಂಪರ್ಕದಲ್ಲಿದ್ದು ರಾಹುಲ್‍ನ ವಾಟ್ಸ್ ಆಪ್ ಚಾಟ್, ಕಾಲ್‍ಲಿಸ್ಟ್ ನಲ್ಲಿ ಈ ಸಂಗತಿ ಬೆಳಕಿಗೆ ಬಂದಿದೆ. ಜತೆಗೆ ಪಾರ್ಟಿ, ಕ್ಲಬ್‍ಗಳಲ್ಲಿ […]

ಸ್ಯಾಂಡಲ್​ವುಡ್ ಡ್ರಗ್ಸ್ ನಂಟು : ನಟಿ ರಾಗಿಣಿ ಮತ್ತು ಸಂಜನಾ ಭಾಗಿಯಾಗಿರುವ ಶಂಕೆ

Thursday, September 3rd, 2020
Ragini

ಬೆಂಗಳೂರು : ಸ್ಯಾಂಡಲ್ವುಡ್ ಜೊತೆ  ದೊಡ್ಡ ಡ್ರಗ್ಸ್ ಜಾಲ  ಪತ್ತೆಯಾಗಿದ್ದು ಇದರಲ್ಲಿ ಯಾರ್ಯಾರು ಶಾಮೀಲಾಗಿ ದ್ದಾರೆಂದು ಮಾಹಿತಿ ಹೊರ ಬೀಳುತ್ತಿದೆ.  ಬುಧವಾರ  ನಟಿ ರಾಗಿಣಿ ಆಪ್ತ ರವಿಶಂಕರ್ ಅವರನ್ನು ವಶಕ್ಕೆ ಪಡೆದಿದ್ದ ಸಿಸಿಬಿ ಪೊಲೀಸರು ಈಗ ಮತ್ತೊಬ್ಬ ನಟಿ ಸಂಜನಾ ಗಲ್ರಾಣಿ ಅವರ ಆಪ್ತ ರೆನ್ನಲಾದ ರಾಹುಲ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಡ್ರಗ್ ಪೆಡ್ಲರ್ಗಳ ಜೊತೆ ಸಂಪರ್ಕ ಹೊಂದಿದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಪೊಲೀಸರು ರಾಹುಲ್ರನ್ನು ವಶಕ್ಕೆ ಪಡೆದರೆನ್ನಲಾಗಿದೆ. ಈ ಸಂಬಂಧ ನಟಿ ರಾಗಿಣಿ ಇಂದು ಸಿಸಿಬಿ […]

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಸಿ ಖಮರುದ್ದೀನ್ ಹಣ ಪಡೆದು ವಿರುದ್ಧ ವಂಚನೆ

Saturday, August 29th, 2020
Kamaruddin

ಮಂಜೇಶ್ವರ : ಕೇರಳದ ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ಇತ್ತೀಚಿಗೆ ನಡೆದ ಉಪಚುನಾವಣೆಯಲ್ಲಿ ಆಯ್ಕೆಯಾಗಿದ್ದ ಯುಡಿಎಫ್ ಶಾಸಕ ಎಂ. ಸಿ ಖಮರುದ್ದೀನ್ ಠೇವಣಿದಾರರಿಂದ ಹಣ ಪಡೆದು ವಂಚನೆ ನಡೆಸಿರುವುದಾಗಿ ಚಂದೇರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫ್ಯಾಶನ್ ಗೋಲ್ಡ್ ಜುವೆಲ್ಲರಿ ಅಧ್ಯಕ್ಷರಾಗಿರುವ ಎಂ. ಸಿ ಖಮರುದ್ದೀನ್ ಜುವೆಲ್ಲರಿಗೆ ಠೇವಣಿ ಇರಿಸಿದ ಆರಿಫ್, ಅಬ್ದುಲ್ ಶುಕೂರ್ ಹಾಗೂ ಝುಹರಾ ಎಂಬವರು ನೀಡಿದ ದೂರಿನಂತೆ ಪೊಲೀಸರು ಮೊಕದ್ದಮೆ ದಾಖಲಿಸಿದ್ದಾರೆ. ಚೆರ್ವತ್ತೂರು ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಫ್ಯಾಶನ್ ಗೋಲ್ಡ್ ಪಯ್ಯನ್ನೂರು, ಚೆರ್ವತ್ತೂರು ಹಾಗೂ ಕಾಸರಗೋಡಿನಲ್ಲಿರುವ […]

ಲೇಡಿಸ್ ಪಿಜಿಗೆ ನುಗ್ಗಿ ಒಳವಸ್ತ್ರಗಳನ್ನು ಕದಿಯುತ್ತಿದ್ದವನಿಗೆ ಥಳಿಸಿದ ಯುವತಿಯರು

Thursday, August 27th, 2020
ladise PG

ಮಂಗಳೂರು: ಶರವು ದೇವಸ್ಥಾನದ ಬಳಿ ಇರುವ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯರ ಒಳವಸ್ತ್ರಗಳನ್ನು ಕದಿಯುತ್ತಿದ್ದ ವ್ಯಕ್ತಿಯನ್ನು ಹಿಡಿದು ಥಳಿಸಿರುವ ಘಟನೆ  ನಡೆದಿದೆ. ಮಹಿಳಾ ಪಿಜಿಗೆ ರಾತ್ರಿ ವೇಳೆ ನುಗ್ಗಿದ ಕಾಮುಕನೊಬ್ಬ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ. ಈಗಾಗಲೇ ಅನೇಕ ಬಾರಿ ಈ ರೀತಿಯ ಕೆಲಸ ಮಾಡಿದ್ದ ಈತನಿಗೆ ಬುದ್ದಿ ಕಲಿಸಬೇಕು ಎಂದು ಅಲ್ಲಿದ್ದ ಕೆಲಸಗಾರರ ಜೊತೆ ಸೇರಿ ಯುವತಿಯರು ವ್ಯಕ್ತಿಯನ್ನು ಹಿಡಿದು ಥಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ

ಪತ್ನಿ ಮತ್ತು ತಾಯಿಯನ್ನು ಕೊಂದ ಶಾಟ್‌ಪುಟ್‌ ಆಟಗಾರ

Wednesday, August 26th, 2020
iqbal Singh

ವಾಷ್ಟಿಂಗ್ಟನ್‌: ನ್ಯೂಟೌನ್‌ ಸ್ಕ್ವೇರ್‌ನ ರಾಕ್‌ವುಡ್‌ ರಸ್ತೆಯಲ್ಲಿ ಶಾಟ್‌ಪುಟ್‌ ಆಟಗಾರ ಇಕ್ಬಾಲ್‌ ಸಿಂಗ್ ಎಂಬಾತ ತಮ್ಮ ಪತ್ನಿ ಮತ್ತು ತಾಯಿಯನ್ನು ಕೊಂದು ಪೊಲೀಸರಿಗೆ ಶರಣಾಗಿದ್ದಾರೆ. 62 ವರ್ಷದ ಇಕ್ಬಾಲ್‌ ಸಿಂಗ್‌ ಬೊಪರಾಯ್‌  ಪ್ರಸ್ತುತ ಅಮೆರಿಕ ನಿವಾಸಿ. ಪೆನ್ಸಿಲ್ವೇನಿಯದ ಡೆಲಾವೇರ್‌ ಕೌಂಟಿಯ, ನ್ಯೂಟೌನ್‌ ಸ್ಕ್ವೇರ್‌ನಲ್ಲಿ ರವಿವಾರ ಬೆಳಗ್ಗೆ ಘಟನೆ ನಡೆದಿದೆ. 1983ರ ಕುವೈಟ್‌ ಏಶ್ಯನ್‌ ಆ್ಯತ್ಲೆಟಿಕ್ಸ್‌ ಚಾಂಪಿ ಯನ್‌ಶಿಪ್‌ನ ಶಾಟ್‌ಪುಟ್‌ನಲ್ಲಿ ಕಂಚಿನ ಪದಕ ಗೆದ್ದಿರುವ ಇಕ್ಬಾಲ್‌ ಸಿಂಗ್‌ ಬೊಪರಾಯ್‌ ಈಗ ಕೊಲೆ ಗಾರ!. ಆದರೆ ಕಾರಣವೇನೆಂದು ತಿಳಿದುಬಂದಿಲ್ಲ. ನ್ಯೂಟೌನ್‌ ಸ್ಕ್ವೇರ್‌ನ ರಾಕ್‌ವುಡ್‌ ರಸ್ತೆಯಲ್ಲಿರುವ ಆ ಮನೆಯ ಮೊದಲನೇ […]

ತನ್ನ ಸ್ವಂತ ಮಗಳನ್ನೇ ನೀರಿನ ತೊಟ್ಟಿಗೆ ಮುಳುಗಿಸಿ ಕೊಲೆ ಮಾಡಿರುವ ತಂದೆ ಮತ್ತು ಚಿಕ್ಕಮ್ಮ!

Wednesday, August 26th, 2020
Mahalakshmi

ಚಾಮರಾಜನಗರ : ತನ್ನ ಸ್ವಂತ ಮಗಳನ್ನೇ  ಎರಡನೇ ಹೆಂಡತಿಯ ಜೊತೆ ಸೇರಿ  ನೀರು ತುಂಬಿದ್ದ ತೊಟ್ಟಿಗೆ ಮುಳುಗಿಸಿ ಕೊಲೆ ಮಾಡಿರುವ ಅಮಾನುಷ ಘಟನೆ ಲೂಕಿನ ಸೋಮಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ತನ್ನ ಎರಡನೇ ಹೆಂಡತಿಗೆ ಮಕ್ಕಳಾಗಿಲ್ಲವೆಂಬ ಕಾರಣಕ್ಕೆ ತಂದೆ ಮತ್ತು ಚಿಕ್ಕಮ್ಮನೇ ಪುಟ್ಟ ಬಾಲಕಿಯನ್ನು ಕೊಂದು ಹಾಕಿದ್ದಾರೆ ಎಂದು ಹೇಳಲಾಗಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಪಾಪಿ ತಂದೆ ಮಹೇಶ ಹಾಗೂ ಕ್ರೂರಿ ಚಿಕ್ಕಮ್ಮ ರತ್ನಮ್ಮ ದಂಪತಿಯನ್ನು ತೆರಕಣಾಂಬಿ ಪೊಲೀಸರು ಬಂಧಿಸಿದ್ದಾರೆ. ಮಹೇಶನ ಮೊದಲ ಪತ್ನಿ, ಸೋಮಹಳ್ಳಿ ಗ್ರಾಮದ ಗೌರಮ್ಮ ಎಂಬುವರ […]

ಬ್ಯಾಂಕ್​ ಉದ್ಯೋಗಿ ಬ್ಯಾಂಕ್​ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ಯಾಕೆ ಗೊತ್ತಾ ?

Wednesday, August 26th, 2020
Bank Employe

ಹೊಸಪೇಟೆ : ಬ್ಯಾಂಕ್ ಲೀಗಲ್ ಅಡ್ವೈಸರ್ ಆಗಿ ಕೆಲಸ ಮಾಡುತ್ತಿದ್ದ ಉದ್ಯೋಗಿ ಬ್ಯಾಂಕ್ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌ ಮಹೇಶ್ (40) ಎಂಬ ಖಾಸಗಿ ಕಂಪನಿಯ ಉದ್ಯೋಗಿಯೊಬ್ಬ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ  ಶ್ರೀರಾಮುಲು ಉದ್ಯಾನವನದ ಬಳಿ ಇರುವ ಖಾಸಗಿ ಕಂಪೆನಿಯ ಸಿಬ್ಬಂದಿ ಎಂದು ಹೇಳಲಾಗುತ್ತಿದೆ. ಮೇಲಾಧಿಕಾರಿಗಳ ಕಿರುಕುಳ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಬ್ಯಾಂಕ್ನಲ್ಲಿ ಲೀಗಲ್ ಅಡ್ವೈಸರ್ ಆಗಿ ಕೆಲಸ ಮಾಡುತ್ತಿದ್ದ ಮಹೇಶ್ಗೆ […]

ಎರಡನೇ ಬಾರೀ ಕ್ವಾರಂಟೈನ್ ಕೇಂದ್ರದಿಂದ ತಪ್ಪಿಸಿಕೊಂಡ ಕಳವು ಪ್ರಕರಣದ ಆರೋಪಿ

Monday, August 24th, 2020
shainuddin

ಕಾಸರಗೋಡು : ವಾಹನ ಕಳವು ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಗುರುತಿಸಿಕೊಂಡ ಆರೋಪಿ ಕೊರೊನಾ ಸೋಂಕಿತ  ವ್ಯಕ್ತಿ ಕ್ವಾರಂಟೈನ್ ಕೇಂದ್ರದಿಂದ ಎರಡನೇ ಬಾರೀ  ಪರಾರಿಯಾ ಘಟನೆ ನಡೆದಿದೆ. ಕಾಸರಗೋಡು ತೆಕ್ಕಿಲ್ ಮಾಂಗಾಡ್ ನ ರಂಶಾನ್ ಸೈನುದ್ದೀನ್(20) ಪರಾರಿಯಾದವನು. ಕೆಲ ದಿನಗಳ ಹಿಂದೆ ಕಣ್ಣೂರು ಎಡಕ್ಕಾಡ್ ಕ್ವಾರಂಟೈನ್ ಕೇಂದ್ರದಿಂದ ಪರಾರಿಯಾಗಿದ್ದ  ಈತನನ್ನು ಹಿಡಿದು ಬಳಿಕ ಅಂಜರ ಕಂಡಿಯಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿರಿಸಲಾಗಿತ್ತು. ಈ ಕೆಂದ್ರದಿಂದಲೂ ಈತ ತಪ್ಪಿಸಿಕೊಂಡಿದ್ದು, ಪೊಲೀಸರಿಗೆ ತಲೆ ನೋವಾಗಿ ಪರಿಣಮಿಸಿದೆ. ಈತನಿಗಾಗಿ ಶೋಧ ನಡೆಯುತ್ತಿದೆ. ಈತನನ್ನು ಎಡಕ್ಕಾಡ್ ಪೊಲೀಸರು ಬಂಧಿಸಿ ಕ್ವಾರಂಟೈನ್ […]

ವಾಕಿಂಗ್ ಮಾಡುತ್ತಿದ್ದ ಟ್ಯಾಕ್ಸಿ ಡ್ರೈವರ್ ಮೇಲೆ ತಲವಾರು ದಾಳಿ ನಡೆಸಿ ಕೊಲೆ

Monday, August 24th, 2020
Belthangady

ಬೆಳ್ತಂಗಡಿ : ಬೆಳಗ್ಗಿನ ವಾಕಿಂಗ್ ಮಾಡುತ್ತಿದ್ದ ಸಂದರ್ಭ ಮೂವರು ದುಷ್ಕರ್ಮಿಗಳ  ತಂಡ ದಾಳಿ ನಡೆಸಿದಾಗ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಾಸು ಸಪಲ್ಯ(65) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸೋಮವಾರ ಬೆಳಿಗ್ಗೆ ಬೆಳ್ತಂಗಡಿಯ ಜ್ಯೂನಿಯರ್ ಕಾಲೇಜ್ ರಸ್ತೆಯಲ್ಲಿ ವಾಕಿಂಗ್ ಹೋಗುತ್ತಿದ್ದ ವಾಸು ಸಪಲ್ಯ ಅವರ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿತ್ತು ಪರಿಣಾಮ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ವಾಸು ಸಪಲ್ಯ ವೃತ್ತಿಯಲ್ಲಿ ಬೆಳ್ತಂಗಡಿಯಲ್ಲಿ ಟ್ಯಾಕ್ಸಿ ವಾಹನದ ಚಾಲಕರಾಗಿ ಕೆಲಸ‌ ಮಾಡುತ್ತಿದ್ದರು. ಮಗ ಕೂಡ ಚಾಲಕ […]

ಸಹಾಯ ಮಾಡುವ ನೆಪದಲ್ಲಿ ವೃದ್ಧೆಯೊಬ್ಬರ 4.32 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ರಿಕ್ಷಾ ಚಾಲಕ

Wednesday, August 19th, 2020
gold ornament

ಮಂಗಳೂರು : ರಿಕ್ಷಾ ಚಾಲಕನೋರ್ವ ವೃದ್ಧೆಯೊಬ್ಬರ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಲಪಟಾಯಿಸಿ ಬುಧವಾರ ಪೋಲೀಸರ ಬಲೆಗೆ ಬಿದ್ದಿದ್ದಾನೆ. ಶಕ್ತಿನಗರ ನಿವಾಸಿ ಪ್ರವೀಣ್ ರಾಮನಾಯ್ಕಿ (40) ಬಂಧಿತ ಆರೋಪಿ. ಚಿಲಿಂಬಿಯ ಸಮೀಪ ವೃದ್ಧೆಯೊಬ್ಬರಿಗೆ ಸಹಾಯ ಮಾಡುವ ನೆಪದಲ್ಲಿ ಚಿನ್ನಾಭರಣ ಕಳವು ಮಾಡಿದ್ದ ಆರೋಪದಲ್ಲಿ  ಉರ್ವ ಪೊಲೀಸರು ಬುಧವಾರ ಆತನನ್ನು ಬಂಧಿಸಿದ್ದಾರೆ. ಜೂ.7ರಂದು ಚಿಲಿಂಬಿಯ ದೇವಸ್ಥಾನವೊಂದರ ಬಳಿ 72 ವರ್ಷದ ವೃದ್ಧೆಗೆ ಸಹಾಯ ಮಾಡುವ ನೆಪದಲ್ಲಿ ಈತ ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದ ಎಂದು ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣವನ್ನು ಭೇದಿಸಿದ ಪೊಲೀಸರು, ಆರೋಪಿಯನ್ನು ಬಂಧಿಸಿ […]