ಇಂಡಿಯಾನ ಆಸ್ಪತ್ರೆಗೆ ಕೆಲಸಕ್ಕೆ ಹೋದ ಯುವತಿ ನಾಪತ್ತೆ

Tuesday, August 18th, 2020
poornima

ಮಂಗಳೂರು :  ಪಂಪ್‍ವೆಲ್ ಇಂಡಿಯಾನ ಆಸ್ಪತ್ರೆಗೆ ಕೆಲಸಕ್ಕೆಂದು ಹೋದ ಯುವತಿ ವಾಪಸ್ಸು ಮನೆಗೆ ಬಾರದೆ  ಆಗಸ್ಟ್ 13 ರಿಂದ ಕಾಣೆಯಾಗಿದ್ದಾರೆ. ಪೂರ್ಣಿಮಾ (35) ಎಂಬ ಯುವತಿ ನಾಪತ್ತೆಯಾಗಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವತಿಯ ಚಹರೆ ಇಂತಿವೆ:- ಹೆಸರು- ಪೂರ್ಣಿಮಾ, ಪ್ರಾಯ – 35 ವರ್ಷ, ಎತ್ತರ-5 ಅಡಿ, ಎಣ್ಣೆ ಕಪ್ಪು ಮೈ ಬಣ್ಣ, ಸಾಧಾರಣ ಶರೀರ, ಎದುರಿನ ಹಲ್ಲು ಹೊರಬಂದಂತೆ ಕಾಣುತ್ತದೆ. ಧರಸಿದ ಬಟ್ಟೆ-ನೀಲಿ ಬಣ್ಣದ ಟಾಪ್ ಹಾಗೂ ಜೀನ್ಸ್ ಪ್ಯಾಂಟ್ ಶರ್ಟ್, […]

ಮಂಗಳೂರು ಲೋಕಾಯುಕ್ತ ಇಲಾಖೆಯ ಚಾಲಕ ವಿಟ್ಲದ ನಿವಾಸಿ ಲಾಡ್ಜ್‌ನಲ್ಲಿ ನಿಗೂಢ ಆತ್ಮಹತ್ಯೆ..!

Thursday, August 13th, 2020
lokesh

ವಿಟ್ಲ ; ಮಂಗಳೂರು ಲೋಕಾಯುಕ್ತ ಇಲಾಖೆಯಲ್ಲಿ ಚಾಲಕರಾಗಿದ್ದ ಕೊಳ್ನಾಡು ಗ್ರಾಮದ ನಿವಾಸಿ ಚೆನ್ನರಾಯಪಟ್ಟಣದ ಲಾಡ್ಜ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ನಿಗೂಢವಾಗಿದೆ. ಕೊಳ್ನಾಡು ಗ್ರಾಮದ ಮಂಕುಡೆ ನಿವಾಸಿ ಸೀನ ಆಚಾರ್ಯರ ಪುತ್ರ ಲೋಕೇಶ್೩೫)ಮೃತಪಟ್ಟ ಚಾಲಕ. ಕಳೆದ ಕೆಲವರ್ಷಗಳಿಂದ ಮಂಗಳೂರು ಲೋಕಾಯುಕ್ತ ಇಲಾಖೆಯಲ್ಲಿ ಚಾಲಕನಾಗಿ ಕರ್ತವ್ಯದಲ್ಲಿದ್ದ ಲೋಕೇಶ್ ಮಂಗಳವಾರ ಸಂಜೆಯಿಂದ ಮೇಲಾಧಿಕಾರಿಗಳಲ್ಲಿ ಮಾಹಿತಿ ನೀಡದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದ ನಂದಗೋಕುಲ ಲಾಡ್ಜ್ ನಲ್ಲಿ ಮಂಗಳವಾರ ರಾತ್ರಿ ೧೦ಗಂಟೆಯ ಸುಮಾರಿಗೆ ಲೋಕೇಶ್ ರೂಮ್ ಪಡೆದಿದ್ದರೆನ್ನಲಾಗಿದೆ. ಬುಧವಾರ […]

ಹುಬ್ಬಳ್ಳಿಯ ರೌಡಿ ಷೀಟರ್‌ ಫ್ರೋಟ್ ಇರ್ಫಾನ್‍ ಆಸ್ಪತ್ರೆಯಲ್ಲಿ ಮೃತ

Friday, August 7th, 2020
irfan

ಹುಬ್ಬಳ್ಳಿ:  ಬೀಗರನ್ನು ಬೀಳ್ಕೊಡಲು  ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ ಗುಂಡಿನ ಸುರಿಮಳೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಹುಬ್ಬಳ್ಳಿಯ ರೌಡಿ ಷೀಟರ್‌ ಫ್ರೋಟ್ ಇರ್ಫಾನ್‍ (52) ಶುಕ್ರವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮೂಲತಃ ಉತ್ತರಕನ್ನಡ ಜಿಲ್ಲೆಯ ಇರ್ಫಾನ್ ಹೊಟ್ಟೆಪಾಡಿಗಾಗಿ ಧಾರವಾಡಕ್ಕೆ ಬಂದು ಅಲ್ಲಿಯೇ ನೆಲೆಯೂರಿ ತನ್ನ ಅಪರಾಧ ಜಗತ್ತನ್ನು ವಿಸ್ತಾರ ಮಾಡಿಕೊಂಡು ಡಾನ್ ಆಗಿದ್ದ. ಮಗನ ಮದುವೆ ಮುಗಿಸಿ ಅತಿಥಿಗಳನ್ನು ಕಳುಹಿಸಲು ರಸ್ತೆ ಬದಿಯಲ್ಲಿ ಬಂದು ನಿಂತಿದ್ದ ವೇಳೆ ಬೈಕ್‌ನಲ್ಲಿ ಬಂದ ಮೂವರು ಗುಂಡಿನ ಮಳೆಗರೆದಿದ್ದರು. ಇರ್ಫಾನ್ ತಮ್ಮ ಮಗನ ಮದುವೆ […]

ಶ್ರೀಮಂತ ವಿಚ್ಚೇದನ ಪಡೆದ ಮಹಿಳೆಯರನ್ನು ಮದುವೆ ಯಾಗುವುದಾಗಿ ನಂಬಿಸಿ ದೈಹಿಕ‌ ಸಂಪರ್ಕ ಬೆಳೆಸಿ, ಲಕ್ಷ ಹೊಡೆಯುತ್ತಿದ್ದ

Tuesday, July 21st, 2020
jaganath

ಬೆಂಗಳೂರು :   ಶ್ರೀಮಂತ ವಿಚ್ಚೇದನ ಪಡೆದ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ವೈವಾಹಿಕ ಜಾಲತಾಣವಾದ ಮ್ಯಾಟ್ರಿಮೋನಿ ಮೂಲಕ  ಮದುವೆ ಮಾಡಿಕೊಳ್ಳುವುದಾಗಿ  ನಂಬಿಸಿ  ವಂಚಿಸುತ್ತಿದ್ದ ಖತರ್ನಾಕ್ ವಂಚಕನನ್ನು ಬನಶಂಕರಿ ಪೊಲೀಸರು ಹಾಸನದಲ್ಲಿ ಬಂಧಿಸಿದ್ದಾರೆ. ಮಹೇಶ್ ಆಲಿಯಾಸ್ ಜಗನ್ನಾಥ್ ಬಂಧಿತ ಆರೋಪಿ. ಮೂಲತಃ ಬಿಜಾಪುರದವನಾಗಿದ್ದು ಹಾಸನದಲ್ಲಿ ಮನೆ ಮಾಡಿಕೊಂಡಿದ್ದ. ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ. 29 ವರ್ಷದ ಜಗನ್ನಾಥ್, ಆನ್‌ ಲೈನ್ ಮೂಲಕ ಮಹಿಳೆಯರನ್ನು ಸಂಪರ್ಕಿಸಿ  ಮದುವೆಯಾಗುವುದಾಗಿ ಹೇಳಿ ಮಹಿಳೆಯರಿಂದ ಲಕ್ಷ ಲಕ್ಷ ವಂಚಿಸಿ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿ ಸಿಮ್ […]

ಲಾಕ್ಡೌನ್ ನಿಂದ ಮನೆಯಲ್ಲೇ ಇರುತಿದ್ದ ಗಂಡನನ್ನುಕಲ್ಲುಎತ್ತಿ ಹಾಕಿ ಸಾಯಿಸಿದ ಹೆಂಡತಿ ಮತ್ತು ಗೆಳೆಯರು

Saturday, July 18th, 2020
amrutahalli

ಬೆಂಗಳೂರು : ಲಾಕ್ಡೌನ್ ನಿಂದ ಮನೆಯಲ್ಲೇ ಹೆಂಡತಿ ಜೊತೆ ಇರುತಿದ್ದ ಗಂಡನನ್ನುಇಬ್ಬರು ಚೂರಿಯಿಂದ ತಿವಿದು ಕಲ್ಲುಎತ್ತಿ ಹಾಕಿ ಸಾಯಿಸಿದ ಘಟನೆ  ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಂಡತಿಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ವ್ಯಕ್ತಿ ಸ್ನೇಹಿತನ ಜೊತೆ ಸೇರಿ ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ. ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿದ್ದ ಆರೋಪದಡಿ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹರೀಶ್ ಮೃತ ವ್ಯಕ್ತಿಯಾಗಿದ್ದು, ಆತನ ಪತ್ನಿ, ಪ್ರಿಯಕರ ಅಭಿಲಾಷ್ ಮತ್ತು ಸ್ನೇಹಿತ ರಫೀಕ್ ನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. […]

ಬೈಕ್ ನಲ್ಲಿ ಸ್ಟಂಟ್ ಮಾಡುತ್ತಿದ್ದ ಯುವಕರಿಗೆ ಬುದ್ದಿಮಾತು ಹೇಳಿದ ಕಾರು ಚಾಲಕನ ಕೊಲೆ

Tuesday, July 14th, 2020
Raghuveer Circle

ನವದೆಹಲಿ: ಬೈಕ್ ನಲ್ಲಿ ಸ್ಟಂಟ್ ಮಾಡುತ್ತಿದ್ದ ಯುವಕರಿಗೆ ಹಾಗೆ ಮಾಡಬೇಡಿ ಎಂದಿದ್ದಕ್ಕೆ ಮೂವರು ಹುಡುಗರು ಸೇರಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ. ಬುದ್ದಿಮಾತು ಹೇಳಿದ 25 ವರ್ಷದ ಯುವಕನ ಮೇಲೆ ಮೂವರು ಹುಡುಗರು ಹಲ್ಲೆ ಮಾಡಿ ಸಾಯಿಸಿರುವ ಘಟನೆ ಪಶ್ಚಿಮ ದೆಹಲಿಯ ರಘುಬಿರ್ ನಗರದಲ್ಲಿ ನಡೆದಿದೆ. ಮೃತ ಯುವಕನನ್ನು ಮನೀಶ್ ಎಂದು ಗುರುತಿಸಲಾಗಿದ್ದು ಈತ ಖಾಸಗಿ ಕಾರು ಚಾಲಕನಾಗಿದ್ದ. ಈತನನ್ನು ಕೊಂದ ಮೂವರು ಹುಡುಗರು 16-17 ವರ್ಷದವರಾಗಿದ್ದು ಅವರನ್ನು ಬಂಧಿಸಲಾಗಿದೆ. ಘಟನೆ ನಡೆದಿದ್ದು ಜುಲೈ 8ರಂದು. ಮೂವರೂ ಮನೀಶ್ […]

ಮಗಳನ್ನು ಪ್ರೀತಿಸಿ ಮದುವೆ ಮಾಡಿಕೊಂಡ ಎಂಬ ಕಾರಣಕ್ಕೆ ಯುವಕನ ಮನೆಯ ನಾಲ್ವರನ್ನು ಕೊಲೆ ಮಾಡಿದ ದುರುಳರು

Sunday, July 12th, 2020
sindanooru murder

ರಾಯಚೂರು : ಮಗಳನ್ನು ಪ್ರೀತಿಸಿ ಮದುವೆ ಮಾಡಿಕೊಂಡ ಎಂಬ ಕಾರಣಕ್ಕೆ ಯುವಕನ ಮನೆಯವರನ್ನೇ ಅಮಾನುಷವಾಗಿ ಕೊಲೆಗೈದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನ ಸುಕಾಲಪೇಟೆಯಲ್ಲಿ ನಡೆದಿದೆ . ಯುವಕನು ತನ್ನ ಹೆಂಡತಿಯೊಂದಿಗೆ ರಕ್ಷಣೆ ಕೋರಿ ಪೊಲೀಸ್ ಠಾಣೆಯಲ್ಲಿದ್ದ ಸಂದರ್ಭ ಯುವಕನ ಮನೆ ಬಳಿಗೆ ಬಂದ ಹೆಂಡತಿ ಮನೆಯವರು ಆತನ ತಂದೆ-ತಾಯಿ, ಅತ್ತಿಗೆ, ಇಬ್ಬರು ಅಣ್ಣಂದಿರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಯುವಕನ ಕುಟುಂಬದ ಐವರನ್ನು ಅವರ ಮನೆ ಮುಂದೆಯೇ ಭೀಕರವಾಗಿ ಹತ್ಯೆ  ಮಾಡಲಾಗಿದೆ . ಹುಡುಗನ ತಂದೆ ಈರಪ್ಪ (60), ತಾಯಿ ಸುಮಿತ್ರಮ್ಮ (55), ಸಹೋದರರಾದ ಹನುಮೇಶ (32) ಹಾಗೂ […]

ವಿಕಾಸ್ ದುಬೆ ಎನ್‌ಕೌಂಟರ್‌ ಆಗುವ ವಿಷಯ ಮೊದಲೇ ತಿಳಿದಿತ್ತು !

Friday, July 10th, 2020
vikas-dube

ನವದೆಹಲಿ: ಕಳೆದ ಶುಕ್ರವಾರ ಜುಲೈ 3, ಕುಖ್ಯಾತ ರೌಡಿ ಶೀಟರ್‌ ವಿಕಾಸ್‌ ದುಬೆಯನ್ನು ಬಂಧಿಸಲು ಪೊಲೀಸರು ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಬಿಕ್ರು ಗ್ರಾಮಕ್ಕೆ ತೆರಳಿದ್ದರು. ಆದರೆ, ಪೊಲೀಸರ ಬರುವಿಕೆ ಮಾಹಿತಿ ಪಡೆದಿದ್ದ ದುಬೆ ಗ್ಯಾಂಗ್‌, ಪೊಲೀಸರ ಮೇಲೆಯೇ ದಾಳಿ ನಡೆಸಿತ್ತು. ಏಕಾಏಕಿ ನಡೆದ ದಾಳಿಯಲ್ಲಿ ಡಿವೈಎಸ್‌ಪಿ ಸೇರಿದಂತೆ ಎಂಟು ಪೊಲೀಸರು ಹತ್ಯೆಯಾದರು. ಗುರವಾರ  ಕಾನ್ಪುರದ ಮಹಾಕಾಲ ದೇವಾಲಯದಲ್ಲಿ ಪೊಲೀಸರು ಆತನನ್ನು ವಶಕ್ಕೆ ಪಡೆಯುತ್ತಲೇ, ಈತನ ಎನ್‌ಕೌಂಟರ್‌ ಆಗುವ ಸಾಧ್ಯತೆಯನ್ನು ಮೊದಲೇ ಅರಿತಿದ್ದ ಕೆಲವರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. […]

ಸರ್ವೇಗೆ ಬಂದ ತಹಶೀಲ್ದಾರ್ ಗೆ ಚಾಕುವಿನಿಂದ ಇರಿದು ಕಾಡಿನಲ್ಲಿ ಅಡಗಿ ಕುಳಿತ ನಿವೃತ್ತ ಶಿಕ್ಷಕ

Thursday, July 9th, 2020
Tahashildhar

ಕೋಲಾರ : ನಿವೃತ್ತ ಶಿಕ್ಷಕರೊಬ್ಬರು ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರ್ ಗೆ ಚಾಕುವಿನಿಂದ ಇರಿದಿದ್ದು, ತಹಶೀಲ್ದಾರ್ ಸಾವನ್ನಪ್ಪಿರುವ ಘಟನೆ  ಬಂಗಾರಪೇಟೆ ತಾಲೂಕಿನ ಕಳವಂಚಿ ಗ್ರಾಮದಲ್ಲಿ ಗುರುವಾರ  ನಡೆದಿದೆ. ಕಳವಂಚಿ ಗ್ರಾಮಕ್ಕೆ ಸರ್ವೇ ನಡೆಸಲು ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ್ ಹೋಗಿದ್ದರು. ಈ ಸಂದರ್ಭ ನಿವೃತ್ತ ಶಿಕ್ಷಕ ವೆಂಕಟಪತಿ ಎಂಬ ವ್ಯಕ್ತಿ ಚೂರಿಯಿಂದ ತಹಶೀಲ್ದಾರ್ ಗೆ ಇರಿದಿದ್ದಾರೆ. ಗಂಭೀರ ರಕ್ತಸ್ರಾವವಾಗಿ ತಹಶೀಲ್ದಾರ್ ಸಾವನ್ನಪ್ಪಿದ್ದಾರೆ. ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಸರ್ವೇಗೆ ಬಂದಿದ್ದ ರಾಮಮೂರ್ತಿ ಹಾಗೂ ಆರೋಪಿ ವೆಂಕಟಪತಿ ಎಂಬುವರ ಜಮೀನು ಒಂದೇ ಕಡೆ […]

ಚಿಕನ್ ಕರಿಗೆ ಉಪ್ಪು ಜಾಸ್ತಿಯಾಯಿತು ಎಂದು ಹೆಂಡತಿಯನ್ನು ಕೊಲೆ ಮಾಡಿದ ಗಂಡ

Monday, May 11th, 2020
chicken-cury

ಚಿಕ್ಕಬಳ್ಳಾಪುರ  :  ಗಂಡನೊಬ್ಬ ಚಿಕನ್ ಕರಿಗೆ ಉಪ್ಪು ಜಾಸ್ತಿಯಾಯಿತು  ಎಂದು ಆರೋಪಿಸಿ ಹೆಂಡತಿಯನ್ನೇ  ಕೊಲೆ  ಮಾಡಿದ ಘಟನೆ  ಬಾಗೆಪಲ್ಲಿ ಜಿಲ್ಲೆಯ   ಹೋಶಹುಡಾಯಾ (ಉಪ್ಪಕುಂಟೆ) ಗ್ರಾಮದಲ್ಲಿ ನಡೆದಿದೆ. ಘಟನೆಗೆ  ಸಂಬಂಧಿಸಿದಂತೆ ಚೆಲೂರ್ ಪೊಲೀಸರು ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮೃತ ಮಹಿಳೆಯನ್ನು ಖಾಸಗಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿರುವ ಬಾಲಚಂದ್ರ ಚೆಲೂರು (28) ಅವರ ಪತ್ನಿ ಮಧುರಾ (24) ಎಂದು ಗುರುತಿಸಲಾಗಿದೆ. ದಂಪತಿಗೆ 11 ತಿಂಗಳ ಮಗು ಇದೆ. ಮೂಲಗಳ ಪ್ರಕಾರ, ಆಲ್ಕೊಹಾಲ್ ವ್ಯಸನಿಯಾಗಿರುವ ಬಾಲಚಂದ್ರ ಆಕೆ ಸಿದ್ಧಪಡಿಸಿದ ಮಾಂಸಾಹಾರಿ  ಪದಾರ್ಥ ತುಂಬಾ ಉಪ್ಪು […]