ಬೆಂಗಳೂರು : ಮಾದಕ ವಸ್ತುಗಳ ಮಾರಾಟ ದಂಧೆ ಮೇಲೆ ಮುಗಿಬಿದ್ದ ಪೊಲೀಸರು

Thursday, March 19th, 2020
drugs

ಬೆಂಗಳೂರು : ನಗರದಲ್ಲಿ ಮಾದಕ ವಸ್ತುಗಳ ಮಾರಾಟ ಜಾಲದ ಹಾವಳಿ ತೀವ್ರಗೊಂಡಿದೆ. ಇದರ ವಿರುದ್ಧ ಸಮರ ಸಾರಿರುವ ಪೊಲೀಸರು, ನಗರದಾದ್ಯಂತ 21 ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ. ಮಾದಕ ವಸ್ತುಗಳನ್ನು ಮಾರಾಟ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರು ನೀಡಿದ್ದ ಕಟ್ಟುನಿಟ್ಟಿನ ಆದೇಶ ಮೇರೆಗೆ ನಗರದಾದ್ಯಂತ ಕಾರ್ಯಾಚರಣೆ ನಡೆಸಲಾಗಿದೆ. ಬೆಂಗಳೂರು ದಕ್ಷಿಣ ವಿಭಾಗದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮಾರ್ಚ್‌ 09 ರಿಂದ ಮಾರ್ಚ್‌ 17ರವರೆಗೆ ಸತತವಾಗಿ ಕಾರ್ಯಾಚರಣೆ ಕೈಗೊಂಡು, ಮಾದಕವಸ್ತು ಸೇವನೆ […]

ಮಂಗಳೂರು : ಏಳು ಮಂದಿ ಕಳ್ಳರ ಬಂಧನ; 10 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ವಶ

Thursday, March 19th, 2020
gold

ಮಂಗಳೂರು : ಕಲ್ಲಿಕೋಟೆಯಿಂದ ಮಂಗಳೂರಿಗೆ ಕಚ್ಚಾ ಬಾರ್ ರೂಪದಲ್ಲಿ ಚಿನ್ನ, ಬೆಳ್ಳಿ ಸಾಗಾಟ ಮಾಡುತ್ತಿದ್ದ ಬಹುದೊಡ್ಡ ಜಾಲವನ್ನು ಭೇದಿಸಿರುವ ಮಂಗಳೂರು ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು, ಹಲವರನ್ನು ಬಂಧಿಸಿದ್ದಾರೆ. ಬೆಂಗಳೂರು, ಮಂಗಳೂರು ಮತ್ತು ಶಿಮೊಗ್ಗದ 40 ಅಧಿಕಾರಿಗಳನ್ನು ಒಳಗೊಂಡ ತಂಡವು ಸಮನ್ವಯ ಮತ್ತು ಸಾಹಸದ ಕಾರ್ಯಾಚರಣೆ ನಡೆಸಿ, ಏಳು ಮಂದಿಯನ್ನು ಬಂಧಿಸಿ, ಸುಮಾರು ನಾಲ್ಕು ಕೋಟಿ ರೂ. ಮೊತ್ತದ 9.3 ಕೆಜಿ ಚಿನ್ನ ಮತ್ತು ಸುಮಾರು 84 ಲಕ್ಷ ರೂ. ಮೊತ್ತದ 5.2 ಕೆಜಿ ಬೆಳ್ಳಿಯನ್ನು ವಶಪಡಿಸಿಕೊಂಡಿದ್ದಾರೆ. […]

ಭೀಕರ ಅಪಘಾತ : ಅಂಗಡಿಗೆ ನುಗ್ಗಿದ ಲಾರಿ; ಮೂವರು ಸ್ಥಳದಲ್ಲೇ ಸಾವು

Wednesday, March 18th, 2020
anil-kumar

ಬಾಗಲಕೋಟೆ : ಬಾಗಲಕೋಟೆಯ ಕೆರೂರಿನಲ್ಲಿ ನಿನ್ನೆ ಭೀಕರ ಲಾರಿ ಅಪಘಾತ ಸಂಭವಿಸಿತ್ತು. ಮದ್ಯಸೇವನೆ ಮಾಡಿ ಚಾಲಕ ಲಾರಿ ಓಡಿಸಿದ್ದರಿಂದ ಅಪಾಘತ ಸಂಭವಿಸಿ, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅಪಘಾತದ ಬಳಿಕ ಪರಾರಿಯಾಗಿದ್ದ ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಆತನನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಅನೀಲ್ ಕುಮಾರ್ ಕಟಾಪೂರ ಎಂಬ ವ್ಯಕ್ತಿಯೇ ಅಪಘಾತ ಮಾಡಿದ ಲಾರಿ ಚಾಲಕ. ಬಂಧಿತ ಚಾಲಕ ಕೊಪ್ಪಳ ಜಿಲ್ಲೆ ಹುಲಗೇರಿ ಗ್ರಾಮದವನು. ಕೆರೂರು ಪಟ್ಟಣದಲ್ಲಿ ಮಂಗಳವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಅಂಗಡಿಗೆ ಲಾರಿ ನುಗ್ಗಿತ್ತು. […]

ಅಪ್ರಾಪ್ತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ : ಅಪರಾಧಿಗೆ ಗಲ್ಲು ಶಿಕ್ಷೆ

Saturday, March 14th, 2020
yakapura

ಕಲಬುರ್ಗಿ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಹತ್ಯೆಗೈದಿದ್ದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಕಲಬುರ್ಗಿಯ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಯಾಕಾಪುರದ ಯಲ್ಲಾಲಿಂಗ(35) ಮರಣದಂಡನೆಗೆ ಗುರಿಯಾದ ಆರೋಪಿ. ನೊಂದ ಬಾಲಕಿಯ ಕುಟುಂಬಕ್ಕೆ ಜಿಲ್ಲಾ ಕಾನೂನು ನೆರವು ಸಮಿತಿಯಿಂದ 10 ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ ನೀಡಿದೆ. ಚಾಕಲೆಟ್ ಕೊಡಿಸುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿ, ಹತ್ಯೆಗೈದಿದ್ದ ಆರೋಪಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗಿದೆ. ಗಲ್ಲು […]

ಹೆಡ್ ಕಾನ್ಸ್ಟೆಬಲ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಲು ಯತ್ನ, ಆರೋಪಿಯ ಕಾಲಿಗೆ ಗುಂಡು

Friday, March 13th, 2020
ramesh

ರಾಮನಗರ : ಚನ್ನಪಟ್ಟಣದ ಕೆ.ಹೆಚ್.ಬಿ ಕಾಲೋನಿಯಲ್ಲಿ ಇತ್ತೀಚೆಗೆ ಮನೆಗೆ ನುಗ್ಗಿ ಸುಲಿಗೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಮುಖ್ಯ ಆರೋಪಿ ರಮೇಶ್ ಅಲಿಯಾಸ್ ಜಾಕಿಯನ್ನು ಬಂಧಿಸಲಾಗಿದೆ. ಡಿಎಸ್ ಪಿ ಓಂ ಪ್ರಕಾಶ ನೇತೃತ್ವದಲ್ಲಿ ತನಿಖಾಧಿಕಾರಿ ವಸಂತ ಕುಮಾರ್ ರವರು ಮುಖ್ಯ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಮಾರ್ಚ್ 12ರ ರಾತ್ರಿ ಸುಮಾರು 12.45ರ ಸಮಯದಲ್ಲಿ ಆರೋಪಿ ರಮೇಶ್ ನನ್ನು ಕರೆದುಕೊಂಡು ತನಿಖಾಧಿಕಾರಿ ಸಿಬಿಐ ವಸಂತ್, ಪಿ.ಎಸ್.ಐ ಪ್ರಕಾಸ್ ಹಾಗೂ ಸಿಬ್ಬಂದಿಗಳು ತನಿಖೆಗೆ ಸಂಬಂಧಪಟ್ಟಂತೆ ಚಿಕ್ಕಾಮಳೂರು ಗ್ರಾಮಕ್ಕೆ ಹೋಗುತ್ತಿರುವಾಗ, ಆರೋಪಿಯು ಪೊಲೀಸ್ […]

ಮಾರ್ಗನ್ಸ್ ಗೇಟ್ : ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ

Monday, March 9th, 2020
Ullal

ಉಳ್ಳಾಲ : ರೈಲ್ವೇ ಹಳಿಯಲ್ಲಿ ಯುವಕನ ಶವ ಎರಡು ಕಾಲುಗಳು ಬೇರ್ಪಟ್ಟ ಸ್ಥಿತಿಯಲ್ಲಿ ಮಾರ್ಗನ್ಸ್ ಗೇಟ್ ಎರಡನೇ ಬ್ರಿಡ್ಜ್ ನಡಿ ಭಾನುವಾರ ತಡರಾತ್ರಿ 1.30 ಸುಮಾರಿಗೆ ಬೆಳಕಿಗೆ ಬಂದಿದೆ. ಸುಮಾರು 30-35 ವರ್ಷ ಒಳಗಿನ ಯುವಕನ ಮೃತದೇಹ ಇದಾಗಿದೆ. ಸಮೀಪದಲ್ಲೇ ಬ್ಯಾಗ್ ಹಾಗೂ ಅದರೊಳಗೆ ಬಿಸ್ಲರಿ ಬಾಟಲ್ ನಲ್ಲಿ ಮದ್ಯ ಪತ್ತೆಯಾಗಿದೆ. ಧರಿಸಿದ್ದ ಪ್ಯಾಂಟಿನ ಕಿಸೆಯಲ್ಲಿ ತ್ರಿಶ್ಶೂರಿನ ಬ್ಯಾಂಕೊಂದರಲ್ಲಿ ಹಣ ಪಾವತಿಸಿದ ರಶೀದಿಯೊಂದು ಪತ್ತೆಯಾಗಿದೆ.ಪಸ್ 9 ನಲ್ಲಿ ಚಿಲ್ಲರೆ ಹಣ ಬಿಟ್ಟರೆ ಮೊಬೈಲ್ ಕೂಡಾ ಇರಲಿಲ್ಲ. ಕೇರಳದಿಂದ ಬರುವ […]

ಬೆಂಗಳೂರು : ಗುಪ್ತಾಂಗದಲ್ಲಿ 1 ಕೆಜಿ 385 ಗ್ರಾಂ ತೂಕದ ಕೊಕೇನ್‌ ಸಾಗಿಸುತ್ತಿದ್ದ ವಿದೇಶಿ ಮಹಿಳೆ ಬಂಧನ

Saturday, March 7th, 2020
cocken

ಬೆಂಗಳೂರು : ಕ್ಯಾಪ್ಸೂಲ್‌ನಂತೆ ಸಿದ್ಧಪಡಿಸಿದ ಮಾಧಕ ವಸ್ತುಗಳನ್ನು ನುಂಗಿ, ಹೊಟ್ಟೆಯೊಳಗೆ ಇರಿಸಿಕೊಂಡು ತಲುಪ ಬೇಕಾದ ಸ್ಥಳಕ್ಕೆ ತಲುಪಿದ ಬಳಿಕ ಆಪರೇಷನ್‌ ಬಳಿಕ ತೆಗೆಯುವ ಕೃತ್ಯಗಳನ್ನು ನೋಡಿದ್ದೇವೆ. ಚಾಕೋಲೆಟ್‌ನ ಸಿಪ್ಪೆಯಂತೆ ತೆಳುವಾಗಿ ಸಿದ್ಧಪಡಿಸಿ ಅಕ್ರಮ ಚಿನ್ನ ಸಾಗಿಸಿದ ಕತೆಯನ್ನು ಕೇಳಿದ್ದೇವೆ. ಆದರೆ ಗುಪ್ತಾಂಗದೊಳಗೆ ಮಾಧಕ ವಸ್ತು ಸಾಗಿಸುವ ಮೂಲಕ ಕಸ್ಚಮ್ಸ್‌ ಅಧಿಕಾರಿಗಳು ಸೇರಿ ಎಲ್ಲರನ್ನು ಬೆಚ್ಚಿ ಬೀಳಿಸಿದ ಘಟನೆಯಿದು. ಗ್ವಾಟೆಮಾಲಾ ಮೂಲದ ಮಹಿಳೆಯೊಬ್ಬರು ಗುಪ್ತಾಂಗದ ಮೂಲಕ ಬರೋಬ್ಬರಿ 8.31 ಕೋಟಿ ರೂ. ಮೌಲ್ಯದ ಕೊಕೇನ್‌ಅನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ […]

ಮೈಸೂರು : ಹುಟ್ಟುಹಬ್ಬದ ದಿನವೇ ಬಿಜೆಪಿ ಮುಖಂಡನ ಬರ್ಬರ ಹತ್ಯೆ

Friday, March 6th, 2020
anand

ಮೈಸೂರು : ಹುಟ್ಟುಹಬ್ಬದ ದಿನವೇ ಬಿಜೆಪಿ ಮುಖಂಡನನ್ನು ಆತನ ಸ್ನೇಹಿತರೇ ಕೊಲೆ ಮಾಡಿರುವ ಘಟನೆ ಮೈಸೂರಿನ ಕುವೆಂಪುನಗರದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಬಿಜೆಪಿಯ ಮೈಸೂರು ನಗರ ಸ್ಲಂ ಮೋರ್ಚಾ ಉಪಾಧ್ಯಕ್ಷ ಆನಂದ್ ಎಂದು ಗುರುತಿಸಲಾಗಿದೆ. ಗುರುವಾರ ಆನಂದ್ ಹುಟ್ಟುಹಬ್ಬವಿದ್ದು, ಕುವೆಂಪು ನಗರದ ಲವಕುಶ ಪಾರ್ಕ್ ಬಳಿಯ ಸರ್ವಿಸ್ ಅಪಾರ್ಟ್‍ಮೆಂಟ್‍ನಲ್ಲಿ ರೂಮ್ ಮಾಡಿಕೊಂಡು ಪಾರ್ಟಿ ಮಾಡುತ್ತಿದ್ದಾಗ ಸ್ನೇಹಿತರಿಂದಲೇ ಭೀಕರವಾಗಿ ಹತ್ಯೆಯಾಗಿದ್ದಾನೆ. ಉತ್ತನಹಳ್ಳಿ ಸಮೀಪ ಖಾಸಗಿ ಕಲ್ಯಾಣ ಮಂಟಪದಲ್ಲಿ ಪಾರ್ಟಿ ಮುಗಿಸಿ ಬಂದಿದ್ದ ಆನಂದ್, ನಂತರ ವಾಪಸ್ ಬಂದು ಸರ್ವಿಸ್ […]

ಮೈಸೂರು : ತನ್ವೀರ್​ ಸೇಠ್​ ಆಪ್ತ ಸಹಾಯಕನ ಮೇಲೆ ಮಾರಣಾಂತಿಕ ಹಲ್ಲೆ

Friday, March 6th, 2020
rajani-annayya

ಮೈಸೂರು : ಕಳೆದ ಕೆಲ ದಿನಗಳ ಹಿಂದೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ನಡೆದಿತ್ತು. ಆ ಸುದ್ದಿ ಮಾಸುವ ಮುನ್ನವೇ ಇದೀಗ ಅವರ ಆಪ್ತನ ಕೊಲೆ ಯತ್ನ ಸಹ ನಡೆದಿದೆ. ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ರಜನಿ ಅಣ್ಣಯ್ಯ ಎಂಬುವವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಮೈಸೂರಿನ ಯರಗನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಗ್ರಾಮದೇವತೆಯ ಹಬ್ಬದ ವೇಳೆ ಲಾಂಗು ಬೀಸಿರುವ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ. ಕಾಂಗ್ರೆಸ್ ಮುಖಂಡರಾಗಿರುವ […]

ಬೆಂಗಳೂರು ಟೆಕ್ಕಿಗಳಿಗೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ನಾಲ್ವರು ಆರೋಪಿಗಳ ಬಂಧನ

Friday, March 6th, 2020
tekki

ಬೆಂಗಳೂರು : ಟೆಕ್ಕಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್‌ ಮಾಡಿಕೊಂಡು ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೇರಳ ಮೂಲಕ ನಾಲ್ವರು ಆರೋಪಿಗಳು ಬೆಂಗಳೂರಿನ ಟೆಕ್ಕಿಗಳನ್ನು ಗುರಿಯಾಗಿಸಿಕೊಂಡು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು. ಆಂಧ್ರ ಪ್ರದೇಶದಿಂದ ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಬೆಂಗಳೂರಿಗೆ ತಂದು ಮಾರಾಟ ಮಾಡುತ್ತಿದ್ದರು. ಈ ಕುರಿತಾದ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ […]