ಬೈಕಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಬೊಲೆರೊ, ಓರ್ವ ಮೃತ್ಯು

Monday, February 8th, 2021
Kashi Matt Accident

ಬಂಟ್ವಾಳ : ಬೈಕ್ ಹಾಗೂ ಬೊಲೆರೊ ವಾಹನದ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕಾಶಿಮಠ ಎಂಬಲ್ಲಿ ಸೋಮವಾರ ನಡೆದಿದೆ. ಮಾಣಿ ಬರಿಮಾರು ನಿವಾಸಿ ಬಾಲಕೃಷ್ಣ (55) ಮೃತರು ಎಂದು ಗುರುತಿಸಲಾಗಿದೆ. ಬೈಕ್ ಹಾಗೂ ಬೊಲೆರೊ ವಿಟ್ಲದಿಂದ ಉಕ್ಕುಡ ಮಾರ್ಗವಾಗಿ ತೆರಳುತ್ತಿದ್ದು, ಕಾಶಿಮಠ ಸಮೀಪ ಬೊಲೆರೊ ಬೈಕಿನ ಹಿಂಭಾಗಕ್ಕೆ ಢಿಕ್ಕಿಯಾಗಿದೆ. ಈ ವೇಳೆ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರ ಬಾಲಕೃಷ್ಣ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ […]

ಕುಳಾಯಿ ಕಾರು ಅಪಘಾತ ಮಹಿಳೆ ಸಾವು, ಮೂವರಿಗೆ ಗಂಭೀರ ಗಾಯ

Thursday, February 4th, 2021
Car Accident Kulai

ಮಂಗಳೂರು : ಕುಳಾಯಿ ಸಮೀಪ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಬುಧವಾರ ರಾತ್ರಿ  ನಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತ ಮಹಿಳೆಯನ್ನು ಬೋಂದೆಲ್‌ ನಿವಾಸಿ ಸುಹಾನಾ (26) ಎಂದು ಗುರುತಿಸಲಾಗಿದೆ‌. ಕಾರಿನಲ್ಲಿ‌ ಸುಹಾನಾರ ಸಹೋದರಿ ಫಾತಿಮಾ ಶೌರೀನ್, ಸಹೋದರರಾದ ರಾಹಿಲ್ ಶಮೀಮ್ ಮತ್ತು ರಾಝಿಕ್ ಶಹಾನ್ ಗಂಭೀರ ಗಾಯಗಳಾಗಿವೆ, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುವಾರ ಚಿಕ್ಕಮಗಳೂರಿನಲ್ಲಿ ನಡೆಯಲಿರುವ ಮದುವೆ ಕಾರ್ಯಕ್ರಮಕ್ಕೆ ತೆರಳಲು ಸಿದ್ಧತೆಯಲ್ಲಿತ್ತು,  ಕಾರು […]

ಗೋವಾ ಪ್ರವಾಸ ಹೋರಾಟ ಮಿನಿ ಬಸ್ ಅಪಘಾತ, 11 ಮಹಿಳೆಯರ ದುರ್ಮರಣ, ಸಾವಿನ ಸಂಖ್ಯೆ ಏರಿಕೆ

Friday, January 15th, 2021
Goa Tour

ಧಾರವಾಡ :  ದಾವಣಗೆರೆಯಿಂದ ಮುಂಜಾನೆ ಮೂರು ಗಂಟೆಗೆ ಹೊರಟಿದ್ದ ಮಿನಿಬಸ್ ಧಾರವಾಡ ಸಮೀಪ ಟಿಪ್ಪರ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ 6 ಜನ ಸಾವನ್ನಪ್ಪಿದ್ದರು. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಐದು ಮಂದಿ ಅಸುನೀಗಿದರು. ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ದಾವಣಗೆರೆಯ ವಿದ್ಯಾನಗರ, ಎಂಸಿಸಿ ಎ ಬ್ಲಾಕ್ ಮತ್ತು ಎಂಸಿಸಿ ಬಿ ಬ್ಲಾಕ್ ನಿವಾಸಿಯ ಕೆಲ ಮಹಿಳೆಯರು ಒಂದೆಡೆ ಸೇರಿ ಎಂಜಾಯ್ ಮಾಡಲು ಗೋವಾದ ಪಣಜಿಗೆ ಖಾಸಗಿ ಮಿನಿ ಬಸ್ವೊಂದನ್ನು ಬುಕ್ ಮಾಡಿ ಪ್ರವಾಸ  ಕೈಗೊಂಡಿದ್ದರು. ಇಂದು ಬೆಳಗ್ಗೆ ಸರಿಸುಮಾರು 3 ಗಂಟೆ […]

ಆಟವಾಡುತ್ತಿದ್ದ ಮಗು ಸೀಮೆ ಎಣ್ಣೆ ಸೇವಿಸಿ ಮೃತ್ಯು

Sunday, January 10th, 2021
Ruthik

ಕಾಸರಗೋಡು : ಮನೆಯಲ್ಲಿ ಆಟವಾಡುತ್ತಿದ್ದ ಮಗು ಸೀಮೆ ಎಣ್ಣೆ ಸೇವಿಸಿದ ಪರಿಣಾಮ ಮೃತಪಟ್ಟ ದಾರುಣ ಘಟನೆ ಉದುಮದಲ್ಲಿ ನಡೆದಿದೆ. ಉದುಮ ಏರೋಲ್‌ನ ದಾಸ್ ಮತ್ತು ರೇಣುಕಾ ದಂಪತಿ ಪುತ್ರ ಋತಿಕ್ ಮೃತಪಟ್ಟ ಮಗು. ಬಾಟಲಿಯಲ್ಲಿದ್ದ ಸೀಮೆಎಣ್ಣೆಯನ್ನು ಸೇವಿಸಿದ್ದು , ಮಗು ಅಸ್ವಸ್ಥವಾಗಿ ಬಿದ್ದಿದ್ದು ಸಮೀಪ ಸೀಮೆ ಎಣ್ಣೆ ತುಂಬಿದ್ದ ಬಾಟಲಿ ಪತ್ತೆಯಾಗಿತ್ತು. ತಕ್ಷಣ ಮಗುವನ್ನು ಉದುಮದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಬಳಿಕ ವೈದ್ಯರ ಸಲಹೆಯಂತೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ.

ಶಾಂಭವಿ ನದಿಯಲ್ಲಿ ಮುಳುಗಿ ಓರ್ವ ಯುವತಿ ಸಮೇತ ನಾಲ್ವರ ದುರ್ಮರಣ

Tuesday, November 24th, 2020
shambhavi river

ಮೂಡುಬಿದಿರೆ: ಮದುವೆ ಸಮಾರಂಭಕ್ಕೆ ಬಂದಿದ್ದ ಮೂವರು ಯುವಕರು ಹಾಗೂ ಯುವತಿ ಕಡಂದಲೆಯ ತುಲೆಮುಗೇರ್ ಎಂಬಲ್ಲಿ ಶಾಂಭವಿ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಂಗಳವಾರ ವರದಿಯಾಗಿದೆ. ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ  ಕಡಂದಲೆ ಶ್ರೀಧರ ಆಚಾರ್ಯ ಅವರ ಮನೆಗೆ ಮದುವೆ ಸಮಾರಂಭಕ್ಕೆ ಬಂದಿದ್ದ ಮೂವರು ಯುವಕರು ಹಾಗೂ ಯುವತಿ ಶಾಂಭವಿ ನದಿಯ ತುಲೆಮುಗೇರ್ ಎಂಬಲ್ಲಿ ನದಿಯಲ್ಲಿ ಈಜಲು ಹೋದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ವಾಮಂಜೂರು ಮೂಡುಶೆಡ್ಡೆಯ ನಿಖಿಲ್ (18) ಹಾಗೂ ಅರ್ಶಿತಾ( 20), ವೇಣೂರಿನ ಸುಬಾಸ್(19), ಬಜ್ಪೆ ಪೆರಾರದ ರವಿ […]

ಪುಣಚಾ ಪಾಲಾಸತ್ತಡ್ಕ ದಲ್ಲಿ ಟಿಪ್ಪರ್ ಲಾರಿ ಪಲ್ಟಿ ಹೊಡೆದು ಚಾಲಕ ದಾರುಣ ಸಾವು

Wednesday, November 4th, 2020
Tipper

ವಿಟ್ಲ: ಪುಣಚಾ ಗ್ರಾಮದ ಪಾಲಾಸತ್ತಡ್ಕ ಎಂಬಲ್ಲಿ ಜಲ್ಲಿ ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಪಲ್ಟಿ ಹೊಡೆದು ಚಾಲಕ ದಾರುಣವಾಗಿ ಸಾವನ್ನಪ್ಪಿ,  ಕ್ಲೀನರ್ ಗೆ  ಗಾಯಗಳಾಗಿದೆ. ಪುಣಚಾ-ಪುತ್ತೂರು ರಸ್ತೆಯ ಪಾಲಾಸತ್ತಡ್ಕ ದಲ್ಲಿ ಬ್ರೇಕ್ ವೈಫಲ್ಲಕ್ಕೀಡಾದ ಟಿಪ್ಪರ್ ಲಾರಿ ರಸ್ತೆ ಬದಿ ಡಿಕ್ಕಿಹೊಡೆದು ಪಲ್ಟಿಯಾಗಿದೆ. ಅಪಘಾತದ ಸಂದರ್ಭ ಚಾಲಕ ರಫೀಕ್ ಟಿಪ್ಪರ್ ಲಾರಿಯಡಿಯಲ್ಲಿ ಸಿಲುಕಿ ಗಂಟೆಗಳ ಕಾಲ ಒದ್ದಾಡುತ್ತಿದ್ದರೂ ಟಿಪ್ಪರ್ ಮೇಲಕ್ಕೆತ್ತಲು ಸಾಧ್ಯವಾಗಲಿಲ್ಲ. ಬಳಿಕ ಕ್ರೇನ್ ಮೂಲಕ ಲಾರಿಯನ್ನು ಮೇಲಕ್ಕೆತ್ತಿ ದರೂ ಅಷ್ಟರಲ್ಲಾಗಲೇ ಚಾಲಕ ರಫೀಕ್ ಪ್ರಾಣ ಬಿಟ್ಟಿದ್ದಾರೆ. ಕ್ಲೀನರ್ ಗೆ ಸಣ್ಣ […]

ಹುಟ್ಟುಹಬ್ಬದ ಪಾರ್ಟಿಗೆಂದು ಕರೆಸಿ 23 ವರ್ಷದ ಯುವತಿಯನ್ನು ಅತ್ಯಾಚಾರ ಗೈದ ಕಾಮುಕರು

Sunday, October 11th, 2020
Rape Accuced

ಲಕ್ನೋ: ಹುಟ್ಟುಹಬ್ಬದ ಪಾರ್ಟಿಗೆಂದು ಕರೆದು 23 ವರ್ಷದ ಯುವತಿಯ ಮೇಲೆ ಇಬ್ಬರು ಕಾಮುಕರು ಬಾರ್ರಾದ ಸಚನ್ ಸ್ಕ್ವೇರ್‌ನಲ್ಲಿರುವ ಹೋಟೆಲ್‌ನಲ್ಲಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಕಾನ್ಪುರದಲ್ಲಿ ನಡೆದಿದೆ. ಸಂತ್ರಸ್ತೆ ಕಲ್ಯಾಣ್ಪುರದ ನಿವಾಸಿ ಯುವತಿ ದೆಹಲಿಯ ಆರೋಗ್ಯಕೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ತಾಯಿಯ ಅನಾರೋಗ್ಯದಿಂದಾಗಿ ಒಂದು ವರ್ಷದ ಹಿಂದೆ ಕೆಲಸ ಬಿಟ್ಟು ಮನೆಯಲ್ಲಿದ್ದರು. ಸಂತ್ರಸ್ತೆಯ ನೆರೆಹೊರೆಯ ಮೋನಿಕಾ ಎನ್ನುವ  ಹುಡುಗಿಯೊಬ್ಬಳು ತನ್ನ ಸಹೋದರ ಅಶಿಶ್ ಹುಟ್ಟುಹಬ್ಬದ ಪಾರ್ಟಿಗೆ ಕರೆದಿದ್ದಳು. ಆಕೆಯ ತಂದೆ ಇನ್ಸ್‌ಪೆಕ್ಟರ್ ಆಗಿದ್ದರು. ನಂತರ ಸಂತ್ರಸ್ತೆ ಪಾರ್ಟಿಗೆಂದು ಸಚನ್ ಚೌರಾಹಾದ ಸೋನಾ […]

ಸ್ಕೂಟರ್ ಮತ್ತು ಟ್ಯಾಂಕರ್ ಡಿಕ್ಕಿ- ತಂದೆ ಮಗಳು ಸಾವು

Tuesday, September 29th, 2020
Karawar Accident

ಕಾರವಾರ: ಸ್ಕೂಟರ್ ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಮಂಗಳವಾರ  ನಡೆದಿದೆ. ಯಲ್ಲಾಪುರದ ಅರೆಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಘಟನೆ ನಡೆದಿದೆ. ವಿನೋದ್ ಕಿಂದಳಕರ್ (56) ಹಾಗೂ ಅವರ ಮಗಳು ಸುನೇಹಾ ಕಿಂದಳಕರ್ (12) ಮೃತ ದುರ್ದೈವಿಗಳು. ವಿನೋದ್ ಕಿಂದಳಕರ್ ಯಲ್ಲಾಪುರದ ಅಗ್ನಿಶಾಮಕ ದಳ ಠಾಣೆಯಲ್ಲಿ ಪ್ರಮುಖ ಅಗ್ನಿಶಾಮಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮಗಳನ್ನು ಯಲ್ಲಾಪುರದಿಂದ ತಮ್ಮ […]

ವಿವಾಹಿತ ಮಹಿಳೆ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ

Saturday, September 12th, 2020
Shilpa

ಮಂಗಳೂರು: ಮಂಗಳೂರು ಹೊರವಲಯದ ಗುರುಪುರದ ಭಜನಾ ಮಂದಿರ ಸಮೀಪದಲ್ಲಿ ವಿವಾಹಿತ ಮಹಿಳೆಯೊಬ್ಬರು ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಜ್ಪೆಯ ಜ್ಯುವೆಲ್ಲರಿ ಅಂಗಡಿ ಮಾಲೀಕರ ಪುತ್ರಿಯಾಗಿರುವ ಶಿಲ್ಪಾ (28) ನೇಣಿಗೆ ಶರಣಾದವರು. ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು. ಲಾಕ್ಡೌನ್ ಬಳಿಕ ತವರಿಗೆ ಬಂದು, ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದರು. ಪತಿ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, 11 ತಿಂಗಳ ಮಗು ಇದೆ. ಶುಕ್ರವಾರ ಘಟನೆ ನಡೆದಿದೆ. ಸಾಯುವ ಮುನ್ನ ಈಕೆಯು ಡೆತ್ ನೋಟ್ ಬರೆದಿಟ್ಟಿದ್ದಾಳೆ. ಆತ್ಮಹತ್ಯೆಗೆ ಇನ್ನೂ ನಿಖರ ಕಾರಣ […]

ಮುಂಬಯಿ ವೈದ್ಯರ ನಿರ್ಲಕ್ಷ, ಸಾಯನ್ ನಲ್ಲಿ ಒಂದೂವರೆ ತಿಂಗಳ ಗರ್ಭಿಣಿ ವಿಧಿವಶ

Monday, May 25th, 2020
Sujatha-Praveen

ಮುಂಬಯಿ : ಸಾಯನ್ ನ ನಿವಾಸಿ ಉದ್ಯಮಿ, ಕುಲಾಲ ಸಂಘ ಮುಂಬಯಿಯ ಸಕ್ರಿಯ ಕಾರ್ಯಕರ್ತ ಪ್ರವೀಣ್ ಮೂಲ್ಯ ಇವರ ಪತ್ನಿ ಸುಜಾತ ಪ್ರವೀಣ್ ಮೂಲ್ಯ (27 ) ಅವರು ಒಂದೂವರೆ ತಿಂಗಳ ಗರ್ಭಿಣಿಯಾಗಿದ್ದು 3 ದಿನಗಳ ಹಿಂದೆ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣ ಚಿಕಿತ್ಸೆಗಾಗಿ ಚೆಂಬೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಅಲ್ಲಿ ಶಸ್ತ್ರ ಚಿಕಿತ್ಸೆ ಮಾಡುವುದು ಅನಿವಾರ್ಯ ಎಂದು ಹೇಳಿದ ಕಾರಣ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಮೂರು ದಿನಗಳ ನಂತರ, ಮೇ. 24 ರಂದು ಇವರನ್ನು ಆಸ್ಪತ್ರೆಯಿಂದ […]