ವರ್ಗಾವಣೆಗೊಂಡ ಜಿಲ್ಲಾಧಿಕಾರಿ ವೇಲುಸಾಮಿ ಪೊನ್ನುರಾಜ್ ಅವರಿಗೆ ನಾಗರಿಕರ ಆತ್ಮೀಯ ವಿದಾಯ.

Tuesday, October 26th, 2010
ಜಿಲ್ಲಾಧಿಕಾರಿ ವೇಲುಸಾಮಿ ಪೊನ್ನುರಾಜ್ ಅವರಿಗೆ ನಾಗರಿಕರ ಆತ್ಮೀಯ ವಿದಾಯ

ಮಂಗಳೂರು: ಸುಮಾರು ಒಂದೂವರೆ ವರ್ಷಕಾಲ ಉಡುಪಿಯಿಂದ ಮಂಗಳೂರಿಗೆ ಬಂದು ಇಲ್ಲಿ ಆಡಳಿತ ನಡೆಸಿ, ಈಗ ಶಿವಮೊಗ್ಗಕ್ಕೆ ವರ್ಗಾವಣೆಗೊಂಡು ಹೋಗುತ್ತಿರುವ ದ.ಕ (ಮಾಜಿ) ಜಿಲ್ಲಾಧಿಕಾರಿ ವಿ. ಪೊನ್ನುರಾಜ್ ಅವರಿಗೆ ಇಂದು ಹಾರ್ಧಿಕ ವಿದಾಯ, ಹಾಗೂ ಹೊಸದಾಗಿ ದಿಲ್ಲಿಯಿಂದ ಬಂದು ಇಲ್ಲಿ ಜಿಲ್ಲಾಧಿಕಾರಿಯಾಗಿರುವ ಸುಭೋಧಯಾದವ (ಐಎಎಸ್) ಅವರಿಗೆ ಸಂತೋಷಪೂರ್ವಕ ಸ್ವಾಗತ ಬಯಸುವ ಸಮಾರಂಭವೊಂದನ್ನು ಜಿಲ್ಲಾ ಕಛೇರಿಯ ಸಭಾಂಗಣದಲ್ಲಿ ಇಂದು ಮಂಗಳವಾರ ಬೆಳಿಗ್ಗೆ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ ಅವರು ನಡೆಸಿಕೊಟ್ಟರು. ಶರ್ಮರು ತಮ್ಮ ಹಿಂದಿನ ಅನುಭವಗಳನ್ನು ನೆನೆಪಿಗೆ ತಂದುಕೊಂಡು ವರ್ಗಾವಣೆಯಾಗಿ […]

ದ.ಕ. ಬಸ್ಸು ಮಾಲಕರ ಸಂಘ ಹಾಗೂ ಕೆನರಾ ಬಸ್ಸು ಮಾಲಕರ ಸಂಘದಿಂದ ಹೆದ್ದಾರಿ ದುರಸ್ತಿಗೆ ಆಗ್ರಹ

Monday, October 25th, 2010
ದ.ಕ. ಬಸ್ಸು ಮಾಲಕರ ಸಂಘ ಹಾಗೂ ಕೆನರಾ ಬಸ್ಸು ಮಾಲಕರ ಸಂಘ

ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಪಂಪುವೆಲ್ ನಿಂದ ತಲಪಾಡಿವರೆಗೆ ರಸ್ತೆಗಳಲ್ಲಿ ಭಾರಿ ಗಾತ್ರದ ಹೊಂಡಗಳು ಬಿದ್ದಿದ್ದು ರಸ್ತೆಗಳು ಹೆಚ್ಚು ಕಡಿಮೆ ಸಂಪೂರ್ಣ ಕೆಟ್ಟು ಹೋಗಿವೆ. ಮಾತ್ರವಲ್ಲದೆ ನೇತ್ರಾವತಿ ಸೇತುವೆ ಮೇಲಿನ ಕಾಂಕ್ರೀಟ್ ಅಲ್ಲಲ್ಲಿ ಹೊಂಡ ಬಿದ್ದು ಕಬ್ಬಿಣದ ರಾಡ್ಗಳು ಮೇಲೆ ಬಂದು ಮಳೆ ನೀರು ಕಾಂಕ್ರೀಟ್ನ ಒಳ ಭಾಗಕ್ಕೆ ಹರಿಯುತ್ತಿದ್ದು ಯಾವುದೇ ಸಂದರ್ಭದಲ್ಲಿ. ಸೇತುವೆ ಬಿರುಕು ಬಿದ್ದು ಅಪಾಯವಾಗುವ ಸಂಭವವಿದೆ ಎಂದು ಕೆನರಾ ಬಸ್ಸು ಮಾಲಕರ ಸಂಘದ ಅಧ್ಯಕ್ಷರಾದ ಶ್ರೀ ರಾಜವರ್ಮ ಬಲ್ಲಾಳ್ ಇಂದು ನಗರದ ವುಡ್ ಲ್ಯಾಂಡ್ಸ್ […]

ಜನ ಸಾಮಾನ್ಯರ ಬ್ಯಾಂಕ್ ವಿಜಯಾಬ್ಯಾಂಕ್ : ಸಂಸ್ಥಾಪಕರ ದಿನಾಚರಣೆಯಲ್ಲಿ ಕೆ.ಎನ್. ವಿಜಯಪ್ರಕಾಶ್

Saturday, October 23rd, 2010
ವಿಜಯಾಬ್ಯಾಂಕ್ ಸಂಸ್ಥಾಪಕರ ದಿನಾಚರಣೆ

ಮಂಗಳೂರು: ಎಂಬತ್ತು ವರ್ಷಗಳ ಹಿಂದೆ ಅತ್ತಾವರ ಬಾಲಕೃಷ್ಣ ಶೆಟ್ಟಿ ಮತ್ತು ಮೂಲ್ಕಿ ಸುಂದರ್ ರಾಮ್ ಶೆಟ್ಟಿಯವರು ಸ್ಥಾಪಿಸಿದ ವಿಜಯಾಬ್ಯಾಂಕಿನ  ಸಂಸ್ಥಾಪಕರ ದಿನಾಚರಣೆಯನ್ನು ಇಂದು ಜ್ಯೋತಿಯಲ್ಲಿರುವ ವಿಜಯಾಬ್ಯಾಂಕ್ ನ ಪ್ರಧಾನ ಕಛೇರಿಯಲ್ಲಿ ನಡೆಸಲಾಯಿತು. ಮಂಗಳೂರು ಮಹಾನಗರಪಾಲಿಕೆಯ ಕಮಿಷನರ್ ಕೆ.ಎನ್.ವಿಜಯ ಪ್ರಕಾಶ್ ಹಾಗೂ ಬ್ಯಾಂಕಿನ ನಿರ್ದೇಶಕ ಬಿ. ಇಬ್ರಾಹಿಂ ಸಂಸ್ಥಾಪಕರ ಬಾವಚಿತ್ರಗಳಿಗೆ ಪುಷ್ಪ ಮಾಲೆ ಹಾಕುವ ಮೂಲಕ ಸಂಸ್ಥಾಪನಾ ದಿನಾಚರಣೆಗೆ ಚಾಲನೆ ನೀಡಿದರು. ಜನ ಸಾಮಾನ್ಯರಿಗೆ ವಿಜಯಾಬ್ಯಾಂಕ್ ಅಪಾರ ಕೊಡುಗೆ ನೀಡಿದೆ. ಮಂಗಳೂರು ನಗರ ಅಭಿವೃದ್ಧಿಗೂ ಪಾಲಿಕೆಯೊಂದಿಗೆ ಕೈ ಜೋಡಿಸಿದೆ […]

`ಅಂದದ ಮನೆಗೊಂದು ಚಂದದ ಬುಟ್ಟಿ,

Friday, October 22nd, 2010
ಅಂದದ ಮನೆಗೊಂದು ಚಂದದ ಬುಟ್ಟಿ

ಮಂಗಳೂರು:  ಯಂತ್ರಗಳಿಗೆ ಜೋತುಬೀಳುವ ಈಗಿನ ಸಮುದಾಯ ಕರಕುಶಲ ವಸ್ತುಗಳ ತಯಾರಿಯನ್ನು ಮರೆತು ಬಿಟ್ಟಿದ್ದಾರೆ. ಗ್ರಾಮೀಣ ಮಟ್ಟದಿಂದ ಉಗಮವಾದ ಗುಡಿಕೈಗಾರಿಕೆಗಳು ಈಗ ವಿರಳವಾಗುತ್ತಿದೆ. ಎಲ್ಲೆಂದರಲ್ಲಿ ಯಾಂತ್ರೀಕೃತ ವಸ್ತುಗಳು ಮಾರುಕಟ್ಟೆಗೆ ಬರುತ್ತಿದೆ. ಕೈ ಕೆಲಸದಿಂದಲೇ ಬುಟ್ಟಿ ತಯಾರಿಸುವ ಆಂದ್ರದ ನಾಲ್ಕು ಜನ ಯುವಕರು ಮಂಗಳೂರಿನ ಲೇಡಿಹಿಲ್ ಬಳಿ ರಸ್ತೆಯ ಪಕ್ಕದಲ್ಲಿ ಬಗೆಬಗೆಯ ಬುಟ್ಟಿಗಳನ್ನು ಯಂತ್ರಗಳು ತಯಾರಿಸುವ ಕೆಲಸಕ್ಕಿಂತ ಅಚ್ಚುಕಟ್ಟಾಗಿ ಮಾಡಿ ಮಾರಾಟ ಮಾಡುತ್ತಿದ್ದಾರೆ. ಜಾಮಿನಿ ಬೆತ್ತ, ನಾಡಿ ಬೆತ್ತಗಳ ಜೊತೆಗೆ ಪ್ಲಾಸ್ಟಿಕ್ ವಯರ್ಗಳನ್ನು ಬಳಸಿ ಮೂರರಿಂದ ನಾಲ್ಕು ದಿನಗಳಲ್ಲಿ ಬಗೆ […]

ಜಿಲ್ಲಾ ಸಶಸ್ತ್ರ ಪೊಲೀಸ್ ಇಲಾಖೆಯ ವತಿಯಿಂದ ಪೊಲೀಸ್ ಸಂಸ್ಮರಣಾ ದಿನಾಚರಣೆ:

Thursday, October 21st, 2010
ಜಿಲ್ಲಾ ಸಶಸ್ತ್ರ ಪೊಲೀಸ್ ಇಲಾಖೆಯ ವತಿಯಿಂದ ಪೊಲೀಸ್ ಸಂಸ್ಮರಣಾ ದಿನಾಚರಣೆ

ಮಂಗಳೂರು: ಜಿಲ್ಲಾ ಸಶಸ್ತ್ರ ಮತ್ತು ಪೊಲೀಸ್ ಇಲಾಖೆಯ ವತಿಯಿಂದ ಮಂಗಳೂರು ಪೊಲೀಸ್ ಮುಖ್ಯ ಕಛೇರಿಯ ಮುಂಭಾಗದಲ್ಲಿ  ಇಂದು ಬೆಳಿಗ್ಗೆ ಪೊಲೀಸ್ ಸಂಸ್ಮರಣಾ ದಿನಾಚರಣೆಯನ್ನು ಆಚರಿಸಲಾಯಿತು. ಕರ್ತವ್ಯದಲ್ಲಿರುವಾಗಲೇ ತಮ್ಮ ಪ್ರಾಣತೆತ್ತ, ಸಮಾಜದ ಹಿತಕ್ಕಾಗಿ ದುಡಿದ ಹುತಾತ್ಮರನ್ನು ಪ್ರತಿವರ್ಷ ನೆನಪಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಹುತಾತ್ಮರಿಗೆ ಗೌರವ ಸಲ್ಲಿಸಿದ ಬಳಿಕ ಹೇಳಿದರು. ಹುತಾತ್ಮ ಪೊಲೀಸ್ರಿಗೆ ವರ್ಷಕ್ಕೊಮ್ಮೆ ಗೌರವ ಸಲ್ಲಿಸುವ ಬದಲು, ಅವರಿಗೆ ಗುಡಿ ಕಟ್ಟಿ ನಿತ್ಯ ಗೌರವ ಸಲ್ಲಿಸುವಂತಾಗಬೇಕು ಎಂದು ಜಿಲ್ಲಾ ಎಸ್. […]

ದ.ಕ ಜಿಲ್ಲಾ ಬಿಜೆಪಿ ವತಿಯಿಂದ ಜೆಡಿಎಸ್ ಮತ್ತು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ.

Wednesday, October 20th, 2010
ದ.ಕ ಜಿಲ್ಲಾ ಬಿಜೆಪಿ ವತಿಯಿಂದ ಜೆಡಿಎಸ್ ಮತ್ತು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ.

ಮಂಗಳೂರು: ರಾಜ್ಯದ ರಾಜಕಾರಣದಲ್ಲಿ ಕುತಂತ್ರ ನೀತಿಯಿಂದ ಆಡಳಿತ ಸರಕಾರಕ್ಕೆ ತೊಂದರೆಕೊಡುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ದ.ಕ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಕಛೇರಿಯ ಎದುರು ಇಂದು ಸಂಜೆ ಪ್ರತಿಭಟನೆ ನಡೆಯಿತು. ಸ್ಪಷ್ಟ ಜನಾದೇಶದಿಂದ ಅಧಿಕಾರಕ್ಕೆ ಬಂದು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿರುವ ಬಿಜೆಪಿ ಸರಕರಾದ ಕಾರ್ಯವೈಖರಿಯನ್ನು ಕಂಡು ಸಹಿಸದ ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರು ಮಾಡುವ ಕುತಂತ್ರಗಳು ಇನ್ನು ನಡೆಯುವುದಿಲ್ಲ ರಾಜ್ಯದಲ್ಲಿ ಇನ್ನು ಐದು ವರ್ಷಗಳವರೆಗೆ ಸರಕಾರ ಅಧಿಕಾರದಲ್ಲಿರುತ್ತದೆ. ಎಂದು ಮಂಗಳೂರು ಶಾಸಕ ಎನ್. ಯೋಗೀಶ್ ಭಟ್ […]

ಹಿಂದೂ ವಿರೋಧಿ ನ್ಯಾಯಾಲಯದ ಆದೇಶವನ್ನು ವಿರೋಧಿಸಿ ಪ್ರತಿಭಟನೆ.

Monday, October 18th, 2010
ಹಿಂದೂ ಜನಜಾಗೃತಿ ಸಮಿತಿ

ಮಂಗಳೂರು: ಹಿಂದೂ ಧಾರ್ಮಿಕ ಸ್ಥಳಗಳನ್ನು ಅನಧಿಕೃತವೆಂದು ತೆರವುಗೊಳಿಸುವುದು ಮತ್ತು ದೇವಸ್ಥಾನಗಳ ಸರಕಾರೀಕರಣವನ್ನು ಮಾಡಿ ಹಿಂದೂಗಳ ಧಾರ್ಮಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದನ್ನು ವಿರೋಧಿಸಿ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಛೇರಿಯ ಎದುರು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಯಿತು. ದೇವಸ್ಥಾನಗಳು, ದೈವಸ್ಥಾನಗಳು ಧರ್ಮದ ಬೆನ್ನೆಲುಬು, ಧರ್ಮ ಇದ್ದಲ್ಲಿ ದೇಶ ಇರಬಹುದು. ದೇಶ ಉತ್ತಮ ಸ್ಥಿತಿಯಲ್ಲಿರಬೇಕಾದರೆ ಧರ್ಮಾಚರಣೆಯನ್ನು ಗೌರವಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತ ಲಕ್ಷ್ಮೀಶ ಕಬಲಡ್ಕ ಪ್ರತಿಭಟನಾ ಭಾಷಣದಲ್ಲಿ ಹೇಳಿದರು. ಸಾವಿರಾರು ವರ್ಷಗಳಿಂದ ಆರಾಧಿಸಿಕೊಂಡು ಬರುತ್ತಿರುವ ದೈವ, […]

ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ತೀರ್ಥ ಉದ್ಭವ

Monday, October 18th, 2010
ತಲಕಾವೇರಿ

ಮಡಿಕೇರಿ : ಸೋಮವಾರ ಮುಂಜಾನೆ 3.11ಕ್ಕೆ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಅಪಾರ ಭಕ್ತವೃಂದಕ್ಕೆ ಕಾವೇರಿ ತೀರ್ಥರೂಪಿಣಿಯಾಗಿ ಹರಿಯುವುದರೊಂದಿಗೆ ನೆರೆದ ಭಕ್ತರಿಗೆ ದರ್ಶನವಿತ್ತಳು.  ಭಕ್ತರ ಉದ್ಘೋಷ, ಮುಗಿಲು ಮುಟ್ಟಿದ ಮಂತ್ರಘೋಷ ದೊಂದಿಗೆ ತಲಕಾವೇರಿಯಲ್ಲಿ ತಿರ್ಥೂದ್ಭವವಾಯಿತು. ನೆರೆದ ಭಕ್ತವೃಂದ ಸ್ನಾನಕೊಳದ ಸಮೀಪ ತೀರ್ಥ ಪ್ರೋಕ್ಷಣೆಗೆ ಶಿರವೊಡ್ಡಿ ಪುನೀತರಾದರು.  ತಮಿಳುನಾಡು, ಮಂಡ್ಯ, ಬೆಂಗಳೂರು ಮುಂತಾದ ಕಡೆಗಳಿಂದ ಆಗಮಿಸಿದ ಭಕ್ತರು ಭಾಗಮಂಡಲದಲ್ಲಿ ಸ್ನಾನ ಮಾಡಿ ಭಗಂಡೇಶ್ವರನ ದರ್ಶನ ಪಡೆದು ತಲಕಾವೇರಿಗೆ ಆಗಮಿಸಿದರೆ, ಇನ್ನು ಕೆಲವರು ಮೈಸೂರು ದಸರಾ ಮುಗಿಸಿ ಬಂದಿದ್ದರು. ಬ್ರಹ್ಮಕುಂಡಿಕೆಯ ಮುಂಭಾಗದ ಸ್ನಾನಕೊಳದಿಂದ […]

ಐದು ಸಾವಿರ ವರ್ಷಗಳ ಭವ್ಯ ಪರಂಪರೆಯ ಆಯುಧಪೂಜೆ ಆಚರಣೆ .

Saturday, October 16th, 2010
ಆಯುಧಪೂಜೆ.

ಮಂಗಳೂರು: ನಾಗರೀಕ ಸಂಸ್ಕೃತಿ ಆರಂಭವಾದಂದಿನಿಂದ ಜನರು ತಾವು ಉಪಯೋಗಿಸುತ್ತಿದ್ದ ಆಯುಧಗಳಿಗೆ ಪೂಜೆ ಮಾಡುತ್ತಿದ್ದರು ಎಂದು ಅನೇಕ ಮೂಲಗಳಿಂದ ನಾವು ಈಗ ತಿಳಿಯಬಹುದಾಗಿದೆ. ಸುಮಾರು 5000 ವರ್ಷಗಳ ಹಿಂದೆ ಪಾಂಡವರು 12 ವರ್ಷಗಳ ವನವಾಸವನ್ನು ಮುಗಿಸಿ, ಅಜ್ಞಾತವಾಸದ ಕೊನೆಯ ದಿನದಲ್ಲಿ ಉತ್ತರ ಗೋಗ್ರಹಣದ ಕದನದಲ್ಲಿ ಆಯುಧಗಳನ್ನು ಪೂಜಿಸಿ ಕೌರವರೊಂದಿಗೆ ಯುದ್ಧ ನಡೆಸಿದರು ಎನ್ನುವ ದಾಖಲೆಗಳು ಮಹಾಭಾರತದ ಪುಟಗಳಲ್ಲಿ ಕಾಣಸಿಗುತ್ತದೆ. ಬ್ರಹನ್ನಳೆಯಾದ ಅರ್ಜುನ ವಿರಾಟ ನಗರದ ರಾಜಕುಮಾರ ಉತ್ತರ ಕುಮಾರನೊಂದಿಗೆ ಬನ್ನಿ ಮಂಟಪದಿಂದ ಆಯುಧಗಳನ್ನು ಪೂಜಿಸಿ ಯುದ್ಧಕ್ಕೆ ಹೊರಟು ಕೌರವರನ್ನು […]

ಜೆಡಿಎಸ್ ಶಾಸಕ ಎಂ.ಸಿ.ಅಶ್ವತ್ಥ ರಾಜೀನಾಮೆ

Friday, October 15th, 2010
ಎಂ.ಸಿ.ಅಶ್ವತ್ಥ

ಬೆಂಗಳೂರು : ಜೆಡಿಎಸ್ ಶಾಸಕರಾಗಿದ್ದ ಎಂ.ಸಿ.ಅಶ್ವತ್ಥ ಅವರು ಸ್ಪೀಕರ್ ಕೆ.ಜಿ.ಬೋಪಯ್ಯ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ಚನ್ನಪಟ್ಟಣ ಶಾಸಕ ಎಂ.ಸಿ.ಅಶ್ವತ್ಥ ಗುರುವಾರ ಈ ನಿರ್ಧಾರ ಕೈಗೊಂಡಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ತಮಿಳುನಾಡು ಪ್ರವಾಸದಲ್ಲಿದ್ದೆ. ಹಾಗಾಗಿ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ. ಪಕ್ಷದ ನಾಯಕರಿಂದ ತನಗೆ ಯಾವುದೇ ತೊಂದರೆ ಇಲ್ಲ. ಇದೀಗ ನನ್ನ ವೈಯಕ್ತಿಕ ಕಾರಣದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ. ಅ.11ರಂದು ನಡೆದ ವಿಶ್ವಾಸಮತ ಯಾಚನೆಗಾಗಲಿ, ಅ.14ರಂದು ನಡೆದು […]