ಬಿಜೆಪಿ ಸರಕಾರ ಇಕ್ಕಟ್ಟಿನಲ್ಲಿ 20 ಮಂದಿ ಬಿಜೆಪಿ ಶಾಸಕರ ಬೆಂಬಲ ವಾಪಸ್

Wednesday, October 6th, 2010
yeddyurappa

ಬೆಂಗಳೂರು : ಬಂಡಾಯದ ಬಾವುಟ ಹಾರಿಸಿರುವ  20 ಮಂದಿ ಬಿಜೆಪಿ ಶಾಸಕರು ಸರಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದ ಪತ್ರವನ್ನು ರಾಜ್ಯಪಾಲ ಹಂಸರಾಜ್ ಭಾರದ್ವಾಜ್‌ಗೆ ಸಲ್ಲಿಸಿದ್ದಾರೆ. ಆರು ಪಕ್ಷೇತರ ಶಾಸಕರು ಸೇರಿದಂತೆ ಒಟ್ಟು 20 ಮಂದಿ  ಬಿಜೆಪಿ ಶಾಸಕರು ಪಕ್ಷೇತರ ಸಚಿವ ನರೇಂದ್ರ ಸ್ವಾಮಿ ಮೂಲಕ ಬೆಂಬಲ ವಾಪಸ್ ಪಡೆದ ಪತ್ರವನ್ನು ರಾಜ್ಯಪಾಲರಿಗೆ ತಲುಪಿಸಿದ್ದಾರೆ. ಕಮಲದ  ಭಿನ್ನಮತ ಉಂಟು ಮಾಡಲು ಸಫಲರಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ  ಎಚ್ ಡಿ ಕುಮಾರಸ್ವಾಮಿ ಅವರು ಮತ್ತೊಮ್ಮೆ ರಾಜ್ಯದ […]

ಅನಧಿಕೃತ ಬಾಡಿಗೆ ಮಾಡುವ ಖಾಸಗಿ ಕ್ವಾಲಿಸ್ ವಾಹನಗಳ ಮುಟ್ಟಗೋಲು.

Wednesday, October 6th, 2010
ಖಾಸಗಿ ಕ್ವಾಲಿಸ್ ವಾಹನಗಳ ಮುಟ್ಟಗೋಲು

ಮಂಗಳೂರು: ಖಾಸಗಿ ಕಂಪೆನಿಯೊಂದರ ಪ್ರಚಾರಕ್ಕಾಗಿ ತಿಂಗಳ ಬಾಡಿಗೆಗೆ ನೀಡಲಾಗಿದ್ದ ಸುಮಾರು ಹನ್ನೆರಡು ಖಾಸಗಿ ಕ್ವಾಲಿಸ್ ವಾಹನಗಳನ್ನು ಇಂದು ಬೆಳಿಗ್ಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ಟ್ರಾಫಿಕ್ ಪೊಲೀಸರು ಮುಟ್ಟುಗೋಲು ಹಾಕಿದರು. ಮಂಗಳೂರಿನ ಫಳ್ನೀರಿನಲ್ಲಿ ಸದ್ಯದಲ್ಲೇ ಆರಂಭಗೊಳ್ಳಲಿರುವ ಜೋಯ್ ಆಲುಕಾಸ್ ಕಂಪೆನಿಯವರು ಸಂಸ್ಥೆಯ ಪ್ರಚಾರಕ್ಕಾಗಿ 20 ಕಾರುಗಳನ್ನು ನಿಗದಿಪಡಿಸಲಾಗಿದ್ದು ಅದರ ನಿರ್ವಹಣೆಯನ್ನು ಪ್ರಿಯಾ ಟ್ರಾವೆಲ್ಸ್ ನವರಿಗೆ ನೀಡಿದ್ದರು. ಕಾಂಟ್ರಾಕ್ಟುದಾರರಾದ ಪ್ರಿಯಾ ಟ್ರಾವೆಲ್ಸ್ ನ ಮಾಲಕರು ಕೆಲವೇ ಟೂರಿಸ್ಟ್ ಕಾರುಗಳನ್ನು ಗೊತ್ತು ಪಡಿಸಿ, ಇನ್ನುಳಿದ 12 ಕ್ವಾಲೀಸ್ ವಾಹನಗಳನ್ನು ಖಾಸಗಿಯವರಿಂದ […]

ಕಟ್ಟಾ ಸುಬ್ರಹ್ಮಣ್ಯ ನಾಯ್ಡು ರಾಜಿನಾಮೆ ನೀಡಲು ಜಿಲ್ಲಾ ಕಾಂಗ್ರೆಸ್ ಆಗ್ರಹ

Tuesday, October 5th, 2010
ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕೆ.ಐ.ಎ.ಡಿ.ಬಿ ಹಗರಣದಲ್ಲಿ ಭಾಗಿಯಾಗಿರುವ ವಸತಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಟು ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಇಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಛೇರಿಯೆದುರು ಪ್ರತಿಭಟನೆ ನಡೆಸಿದರು. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಹಗರಣಗಳ ಸರಮಾಲೆಯೇ ನಡೆದಿದೆ, ಮುಖ್ಯಮಂತ್ರಿಗಳು ಅದಕ್ಕೆ ರಕ್ಷಣೆ ನೀಡುತ್ತಿದ್ದಾರೆ. ಕಟ್ಟಾ ಸುಬ್ರಹ್ಮಣ್ಯ ಹಾಗೂ ಅವರ ಮಗ ಕಟ್ಟಾ ಜಗದೀಶ್ ನಾಯ್ಡು ಅಧಿಕಾರವನ್ನು ದುರುಪಯೋಗ ಮಾಡಿ ರಾಜ್ಯದ ಸಂಪತ್ತನ್ನು ಲೂಟಿಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ […]

ಜಿಲ್ಲೆಯ ಆದಿವಾಸಿ ಜನಾಂಗದ ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿ.

Tuesday, October 5th, 2010
ಆದಿವಾಸಿ ಜನಾಂಗದ ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿ

ಮಂಗಳೂರು: ಬುಡಕಟ್ಟು ಜನರ ಹಕ್ಕುಗಳ ರಾಷ್ಟ್ರೀಯ ವೇದಿಕೆಯ ವತಿಯಿಂದ ಬೆಳ್ತಂಗಡಿ ಮತ್ತು ಮಂಗಳೂರಿನಲ್ಲಿ, ನಿನ್ನೆ ಹಾಗೂ ಇಂದು ಪ್ರತಿಭಟನಾ ಸಭೆ ನಡೆಯಿತು. ಇಂದು ಬೆಳಗ್ಗೆ ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿಯ ಮುಂಭಾಗದಲ್ಲಿ ಬುಡಕಟ್ಟು ಜನರ ವಿವಿಧ ಬೇಡಿಕೆಗಳು ಮತ್ತು ಸಮಸ್ಯೆಗಳ ಪರಿಹಾರಕ್ಕಾಗಿ ನಡೆದ ಪ್ರತಿಭಟನೆಯಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಯೋಜನೆಯ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಆದಿವಾಸಿಗಳ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯನ್ನು ಮತ್ತು ಆಕ್ರಮಣವನ್ನು ಕೂಡಲೇ ನಿಲ್ಲಿಸಬೇಕು ಎಂದು ಬುಡಕಟ್ಟು ಹಕ್ಕುಗಳ ರಾಷ್ಟ್ರೀಯ ವೇದಿಕೆಯ ಸದಸ್ಯ ಕೃಷ್ಣಪ್ಪ ಕೊಂಚಾಡಿ ಒತ್ತಾಯಿಸಿದರು. ಅರಣ್ಯ […]

ಪಾಂಡೇಶ್ವರದಲ್ಲಿ ಸುಸಜ್ಜಿತ ಅಗ್ನಿಶಾಮಕ ಕೇಂದ್ರ : ಜೀಜಾ ಮಾಥವನ್ ಹರಿಸಿಂಗ್.

Monday, October 4th, 2010
ಜೀಜಾ ಮಾಥವನ್ ಹರಿಸಿಂಗ್ ಪಾಂಡೇಶ್ವರ ಅಗ್ನಿಶಾಮಕ ಕೇಂದ್ರಕ್ಕೆ ಭೇಟಿ

ಮಂಗಳೂರು: 1942ರಲ್ಲಿ ಸ್ಥಾಪಿತವಾದ ಮಂಗಳೂರಿನ ಪಾಂಡೇಶ್ವರ ಅಗ್ನಿಶಾಮಕ ಕೇಂದ್ರವನ್ನು ಹೊಸ ವಿನ್ಯಾಸದೊಂದಿಗೆ 8 ಅಗ್ನಿಶಾಮಕ ವಾಹನಗಳನ್ನು ಇರಿಸುವಂತೆ ಇನ್ನು ಒಂದು ವರ್ಷದೊಳಗೆ ನವೀಕರಿಸಲಾಗುವುದು ಎಂದು ರಾಜ್ಯ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಅಗ್ನಿಶಾಮಕ ದಳ ಬೆಂಗಳೂರು ಇವರು ಹೇಳಿದರು. ಅವರು ಕದ್ರಿ ಅಗ್ನಿ ಶಾಮಕ ಕೇಂದ್ರಕ್ಕೆ ಬೇಟಿ ನೀಡಿದ ಬಳಿಕ, ಪಾಂಡೇಶ್ವರ ಅಗ್ನಿ ಶಾಮಕ ಕೇಂದ್ರಕ್ಕೆ ಭೇಟಿ ನೀಡಿದರು. ಅಲ್ಲಿ ಅಗ್ನಿ ಶಾಮಕ ಸಿಬ್ಬಂದಿಗಳಿಂದ ಗೌರವವಂದನೆ ಸ್ವೀಕರಿಸಿದ ಬಳಿಕ ಅಗ್ನಿ ಶಾಮಕ ಕೇಂದ್ರದ ಪರಿಶೀಲನೆ ನಡೆಸಿದರು. ಮಂಗಳೂರಿಗೆ […]

ಮಂಗಳೂರಿನಾದ್ಯಂತ ಗಾಂಧೀ ಜಯಂತಿ ಆಚರಣೆ

Saturday, October 2nd, 2010
ಮಂಗಳೂರಿನಾದ್ಯಂತ ಗಾಂಧೀ ಜಯಂತಿ ಆಚರಣೆ

ಮಂಗಳೂರು : ಭಾರತ ಸೇವಾದಳದ  ಜಿಲ್ಲಾ ಸಮಿತಿ ವತಿಯಿಂದ  ಪುರಭವನದಲ್ಲಿ  ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಜ್ಯೋತಿ ವೃತ್ತದಿಂದ ಮೆರವಣಿಗೆಯಲ್ಲಿ ಬಂದ ವಿದ್ಯಾರ್ಥಿಗಳು ಹಾಗೂ ಗಣ್ಯರು ಪುರಭವನದ ಮುಂಭಾಗದ ಗಾಂಧಿ ಪ್ರತಿಮೆಗೆ ಹಾರಾರ್ಪಣೆ ಮೂಲಕ ಗೌರವ ಸಲ್ಲಿಸಿದರು. ಸಂಸದ ನಳಿನ್ ಕುಮಾರ್ ಕಟೀಲು, ಡಿ.ಸಿ ಪೊನ್ನುರಾಜ್, ಪೊಲೀಸ ಕಮಿಷನರ್ ಸೀಮಂತ ಕುಮಾರ ಸಿಂಗ್, ದ.ಕ ಎಸ್.ಪಿ,  ಶಾಸಕ ಯುಟಿ ಖಾದರ್,   ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ , ಸುಧಾಕರ ರಾವ್ ಪೇಜಾವರ್ ಮತ್ತಿತರರುಗಾಂಧೀ ಪ್ರತಿಮೆಗೆ ಹಾರಾರ್ಪಣೆ ಗೈದು […]

ದಂಡುಪಾಳ್ಯ ಗ್ಯಾಂಗ್ ನ 11 ಮಂದಿಗೆ ಮರಣದಂಡನೆ

Friday, October 1st, 2010
ದಂಡುಪಾಳ್ಯ ಗ್ಯಾಂಗ್

ಬೆಂಗಳೂರು : ವಿಚಿತ್ರ ರೀತಿಯಲ್ಲಿ ಕೊಲೆ, ದರೋಡೆ, ಅತ್ಯಾಚಾರ ವನ್ನು ನಡೆಸುತ್ತಿದ್ದ ದಂಡುಪಾಳ್ಯ ಗುಂಪಿನ 11 ಮಂದಿಗೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಚ್.ಆರ್.ಶ್ರೀನಿವಾಸ್  ರವರು ಗುರುವಾರ ಮರಣದಂಡನೆ ಶಿಕ್ಷೆ ವಿಧಿಸಿದ್ದಾರೆ. ಕೃಷ್ಣ, ಹನುಮ ಅಲಿಯಾಸ್ ದೊಡ್ಡಹನುಮ, ಮುನಿಕೃಷ್ಣ, ವೆಂಕಟರಮಣ, ತಿಮ್ಮ ಅಲಿಯಾಸ್ ಕೋತಿ ತಿಮ್ಮ, ವೆಂಕಟೇಶ್ ಅಲಿಯಾಸ್ ಚಂದ್ರ, ಮುನಿಕೃಷ್ಣ ಅಲಿಯಾಸ್ ಕೃಷ್ಣ, ನಲ್ಲ ತಿಮ್ಮ ಅಲಿಯಾಸ್ ತಿಮ್ಮ, ಚಿಕ್ಕಮುನಿಯಪ್ಪ ಅಲಿಯಾಸ್ ಮುನಿಯಪ್ಪ, ಕ್ರಿಸಂದು, ಲಕ್ಷ್ಮಿ ಮರಣದಂಡನೆಗೆ ಒಳಗಾದವರು. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ 34ನೇ ವಿಶೇಷ ನ್ಯಾಯಾಲಯದ […]

ಅಯೋಧ್ಯೆಯ ಐತಿಹಾಸಿಕ ತೀರ್ಪಿಗಾಗಿ ಕಾತರಗೊಂಡ ದೇಶದ ಜನತೆ

Thursday, September 30th, 2010
ಅಯೋಧ್ಯೆಯ ಐತಿಹಾಸಿಕ ತೀರ್ಪು

ನವ ದೆಹಲಿ : ಹದಿನೆಂಟು ವರ್ಷದ ಹಿಂದೆ ನೆಲ ಸಮ ಗೊಂಡ ಅಯೋಧ್ಯೆಯ ವಿವಾದಿತ ರಾಮಜನ್ಮಭೂಮಿ-ಬಾಬ್ರಿ ಮಸೀದಿಗೆ ಸಂಬಧಿಸಿದ ಪ್ರಕರಣಕ್ಕೆ ಇಂದು ಅಲಹಾಬಾದ್‌ ನ್ಯಾಯಾಲಯ ತೀರ್ಪು ನೀಡಲಿದೆ. ಈ  ಐತಿಹಾಸಿಕ ತೀರ್ಪಿಗಾಗಿ  ದೇಶದ ಜನತೆ ಕಾತರರಾಗಿದ್ದಾರೆ. ಅಲಹಾಬಾದ್‌ನ ಲಕ್ನೋ ಪೀಠದ ನ್ಯಾಯಮೂರ್ತಿ ಧರಮ್ ವೀರ್ ಶರ್ಮಾ, ಎಸ್‌.ಯು ಖಾನ್ ಹಾಗೂ ಸುಧೀರ್ ಅಗರ್‌ವಾಲ್ ತೀರ್ಪು ಪ್ರಕಟಿಸಲಿದ್ದು,  ಈ ಹಿನ್ನೆಲೆಯಲ್ಲಿ ಭಾರಿ ಬಿಗಿ ಭದ್ರತೆಯನ್ನು ವಹಿಸಲಾಗಿದೆ. ನ್ಯಾಯಾಲಯದ ಆವರಣದ ಸುತ್ತಲಿನ ಪ್ರದೇಶಕ್ಕೆ ನಿರ್ಭಂಧ ಹೇರಲಾಗಿದೆ. ಹಿಂಸಾಚಾರ ಭುಗಿಲೇಳುವ ಸಾಧ್ಯತೆಗಳಿಂದಾಗಿ […]

ಹಿಂದೂ ದೇವರು ಮತ್ತು ದೇವತೆಗಳನ್ನು ಶೂಗಳ ಮೇಲೆ ಚಿತ್ರಿಸಿದ ಅಮೇರಿಕ ಶೂ ಕಂಪೆನಿ

Wednesday, September 22nd, 2010
ಹಿಂದೂ ದೇವರು ಮತ್ತು ದೇವತೆಗಳನ್ನು ಶೂಗಳ ಮೇಲೆ ಚಿತ್ರಿಸಿದ ಅಮೇರಿಕ ಶೂ ಕಂಪೆನಿ

ವಾಷಿಂಗ್ಟನ್ : ಹಿಂದೂಗಳು ಪೂಜಿಸುವ ದೇವರು ಮತ್ತು ದೇವತೆಗಳನ್ನು ಕಾಲಿಗೆ ಹಾಕುವ ಶೂಗಳಿಗೆ ಮುದ್ರಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಿ  ಹಿಂದೂ ಸಮುದಾಯದಿಂದ ತೀವ್ರ ಆಕ್ಷೇಪ ಕ್ಕೆ ಗುರಿಯಾಗಿದೆ. ಅಮೆರಿಕದ ಗಿಟಾರ್  ವಾದಕ ದಿವಂಗತ ಜಿಮಿ ಹೆಂಡ್ರಿಕ್ಸ್ ಹೆಸರಿನಲ್ಲಿ ಹಿಂದೂ ದೇವರು ಮತ್ತು ದೇವತೆಗಳನ್ನು ಮುದ್ರಿಸಿ ಮಾರುಕಟ್ಟೆಗೆ ಬಿಡುಗಡೆ ಗೊಳಿಸಲಾಗಿತ್ತು . ಹಿಂದೂಗಳ ವಿರೋಧ ಹಾಗೂ ಪ್ರತಿಭಟನೆಗೆ ಮಣಿದ ಅಮೆರಿಕ ಮೂಲದ ಶೂ ಕಂಪನಿ ಶೂಗಳನ್ನು ಮಾರಾಟ ಮಾಡದೆ ಮಾರುಕಟ್ಟೆಯಿಂದ ವಾಪಸ್ ಪಡೆದಿದೆ. ಶೂನಲ್ಲಿ ಹಿಂದೂ ದೇವರ ಚಿತ್ರಗಳನ್ನು […]

ದಕ್ಷಿಣ ಕನ್ನಡ ಜಿಲ್ಲಾ ರೈಫಲ್ ಸಂಘ ಅಸ್ತಿತ್ವಕ್ಕೆ

Wednesday, September 15th, 2010
ದಕ್ಷಿಣ ಕನ್ನಡ ಜಿಲ್ಲಾ ರೈಫಲ್ ಸಂಘ ಅಸ್ತಿತ್ವಕ್ಕೆ

ಮಂಗಳೂರು : ಇಲ್ಲಿಯವರೆಗೆ ನಾಗರೀಕ ಬಂದೂಕು ತರಬೇತಿ ಶಿಬಿರಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಆಯೋಜಿಸಲಾಗುತಿತ್ತು. ಈ ಹಿಂದಿನ ನಾಗರೀಕ ಬಂದೂಕು ತರಬೇತಿ ಶಿಬಿರ ( ಆಗಸ್ಟ್-2010) ದಲ್ಲಿ ಹೇಳಿದ್ದಂತೆ ದಿನಾಂಕ : 13.09.2010 ರಂದು ದಕ್ಷಿಣ ಕನ್ನಡ ಜಿಲ್ಲಾ ರೈಫಲ್ ಸಂಘ (Dakshina Kannada District Rifle Association) ಈ ಕೆಳಗಿನ ಲಾಂಛನದೊಂದಿಗೆ ಅಸ್ತಿತ್ವಕ್ಕೆ ಬಂದಿರುತ್ತದೆ. ಸದರಿ  ಸಂಘವನ್ನು Karnataka Societies Registration Act -1960 -1960 ರ ಅನ್ವಯ ಸಹಕಾರಿ ಸಂಘಗಳ ಉಪ […]