ಶ್ರುತಿ ಹರಿಹರನ್ ವಿರುದ್ಧ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ ಅರ್ಜುನ್ ಸರ್ಜಾ

Thursday, October 25th, 2018
arjun-sarja

ಬೆಂಗಳೂರು: ನಟ ಅರ್ಜುನ್ ಸರ್ಜಾ ಹಾಗೂ ಶ್ರುತಿ ಹರಿಹರನ್ ವಿರುದ್ಧದ ಆರೋಪ, ಪ್ರತ್ಯಾರೋಪಗಳು ತಾರಕಕ್ಕೇರಿದ್ದು ಇದೀಗ ನಟ ಅರ್ಜುನ್ ಸರ್ಜಾ ಶ್ರುತಿ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಿದ್ದಾರೆ. 5 ಕೋಟಿ ರು. ಬೇಡಿಕೆ ಇಟ್ಟು ನಟಿ ಶ್ರುತಿ ಹರಿಹರನ್ ವಿರುದ್ಧ ಅರ್ಜುನ್ ಸರ್ಜಾ ಮಾನನಷ್ಟ ಪ್ರಕರಣ ದಾಖಲಿಸಿದ್ದು ದ್ರುವ ಸರ್ಜಾ ಮೂಲಕ ನಟ ಮೊಕದ್ದಮೆ ದಾಖಲು ಮಾಡಿದಾರೆ. ಶ್ರುತಿ ಆರೋಪಗಳು ಗಂಭೀರವಾಗಿದ್ದು ಅವರ ಜತೆ ಸಂಧಾನ ಸಾಧ್ಯವೇ ಇಲ್ಲ ಎಂದು ನಟ ಅರ್ಜುನ್ ಸರ್ಜಾ ಹೇಳಿದ್ದಾರೆ.ಸಧ್ಯ ಅವರು […]

ನಟ ದುನಿಯಾ ವಿಜಿಗೆ ಮತ್ತೊಂದು ಸಂಕಷ್ಟ: ಪುತ್ರಿಯಿಂದಲೇ ದುನಿಯಾ ವಿಜಿ ವಿರುದ್ಧ ದೂರು

Tuesday, October 23rd, 2018
duniya-vijay

ಬೆಂಗಳೂರು : ನಟ ದುನಿಯಾ ವಿಜಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪುತ್ರಿಯಿಂದಲೇ ದುನಿಯಾ ವಿಜಿ ಮೇಲೆ ಅವಾಚ್ಯ ಶಬ್ಧಗಳಿಂದ ನಿಂದನೆ ಆರೋಪದಡಿ ಗಿರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೊದಲನೇ ಹೆಂಡತಿ ನಾಗರತ್ನ ಪುತ್ರಿ ಮೋನಿಕಾ, ನಿನ್ನೆ ಬಟ್ಟೆಗಳನ್ನು ತರಲು ಕೀರ್ತಿಗೌಡ ಮನೆಗೆ ಹೋಗಿದ್ದಳು. ಈ ವೇಳೆ ಕೀರ್ತಿಗೌಡ, ವಿಜಯ್ ಹಾಗೂ ಕೆಲವರು ತಮ್ಮ ಮೇಲೆ ಹಲ್ಲೆ ಮಾಡಿದ್ದು, ತಲೆ ಹಾಗೂ ಕೈಗೆ ಗಾಯವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇನ್ನು ಸೆಕ್ಷನ್ 147,148 ಸೇರಿದಂತೆ ಅವಾಚ್ಯ […]

ರೆಹನಾ ಫಾತಿಮಾಗೆ ಕೇರಳ ಮುಸ್ಲಿಂ ಜಮಾತ್ ಕೌನ್ಸಿಲ್ ಬಹಿಷ್ಕಾರ

Monday, October 22nd, 2018
Rehena fathima

ಕೊಚ್ಚಿ: ಕೇರಳದ ಬಿಎಸ್‌ಎನ್‌ಎಲ್ ಉದ್ಯೋಗಿ ಹಾಗೂ ಹೋರಾಟಗಾರ್ತಿ ರೆಹನಾ ಫಾತಿಮಾ ಅವರನ್ನು ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಿಸಲು ಯತ್ನಿಸಿ ಮುಸ್ಲಿಂರ ಮಾನ ಹರಾಜು ಮಾಡಿದಕ್ಕೆ  ಮುಸ್ಲಿಂ ಸಮುದಾಯದ ಉಚ್ಚಾಟಿಸಿದೆ. ಅಯ್ಯಪ್ಪ ದೇಗುಲ ಪ್ರವೇಶಿಸಲು ಪ್ರಯತ್ನಿಸುವ ಮೂಲಕ ಲಕ್ಷಾಂತರ ಹಿಂದು ಭಕ್ತರ ಭಾವನೆಗಳಿಗೆ ಘಾಸಿಗೊಳಿಸಿದ ಕಾರಣಕ್ಕೆ ರೆಹನಾ ಫಾತಿಮಾ ಹಾಗೂ ಆಕೆಯ ಕುಟುಂಬವನ್ನು ಅವರನ್ನುಸಮುದಾಯದಿಂದ ಬಹಿಷ್ಕರಿಸಲಾಗಿದೆ ಎಂದು ಕೇರಳ ಮುಸ್ಲಿಂ ಜಮಾತ್ ಕೌನ್ಸಿಲ್ ತಿಳಿಸಿದೆ. ‘ಕಿಸ್ ಆಫ್ ಲವ್’ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದ ರೆಹನಾ, ಬೆತ್ತಲೆಯಾಗಿ ಸಿನಿಮಾವೊಂದರಲ್ಲಿ ಕಾಣಿಸಿಕೊಂಡಿದ್ದರು. ಅಯ್ಯಪ್ಪ […]

ನಾನು ಎಷ್ಟೋ ನಟರೊಂದಿಗೆ ನಟಿಸಿದ್ದು, ಅವರೆಂದೂ ಈ ರೀತಿ ನಡೆದುಕೊಂಡಿಲ್ಲ: ಶ್ರುತಿ ಹರಿಹರನ್

Monday, October 22nd, 2018
shruti-hariharan

ಬೆಂಗಳೂರು: ನಟಿಯರ ಮೇಲಿನ‌ ದೌರ್ಜನ್ಯಕ್ಕೆ ಚಿತ್ರರಂಗದ ಫೈರ್ ಶುರುವಾಗಿದೆ. ನಟ ಅರ್ಜುನ್‌ ಸರ್ಜಾ ವಿರುದ್ಧ ಮಿ-ಟೂ ಆರೋಪ ಹಿನ್ನೆಲೆ ಇಂದು ಬೆಂಗಳೂರಿನಲ್ಲಿ ನಟಿ ಶ್ರುತಿ ಹರಿಹರನ್ ಸುದ್ದಿಗೋಷ್ಟಿ ನಡೆಸಿದರು. ಮಲ್ಲೇಶ್ವರಂನ ರೇಣುಕಾಂಬ ಥಿಯೇಟರ್‌ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಟಿ ಶೃತಿ ಹರಿಹರನ್, ನನಗೆ ಧೈರ್ಯ ನೀಡಿದ್ದು ಮಿ-ಟೂ ಅಭಿಯಾನ. ನಾನು ಎಷ್ಟೋ ನಟರೊಂದಿಗೆ ನಟಿಸಿದ್ದು, ಅವರೆಂದೂ ಈ ರೀತಿ ನಡೆದುಕೊಂಡಿಲ್ಲ. ಆದರೆ ಈ ನಟ(ಅರ್ಜುನ್ ಸರ್ಜಾ)ನೊಂದಿಗೆ ಆದ ಕೆಟ್ಟ ಅನುಭವವನ್ನು ಒಂದೂವರೆ ವರ್ಷದ ನಂತರ ಬಾಯಿ ಬಿಟ್ಟಿದ್ದೇನೆ. […]

ಆಯುಧ ಪೂಜೆ ಮಾಡಿ ಸಂಕಷ್ಟಕ್ಕೆ ಸಿಲುಕಿದ ಮುತ್ತಪ್ಪ ರೈ: ಸಿಸಿಬಿಯಿಂದ ವಿಚಾರಣೆ

Saturday, October 20th, 2018
muttappa-rai

ಬೆಂಗಳೂರು: ಆಯುಧ ಪೂಜೆ ದಿನ ಕತ್ತಿ, ಡ್ರಾಗರ್ ರಿವಾಲ್ವರ್ ಇಟ್ಟು ಪೂಜೆ ಮಾಡಿದ್ದ ಮಾಜಿ ಡಾನ್ ಮುತ್ತಪ್ಪ ರೈ ಇಂದು ಸಿಸಿಬಿ ಕಚೇರಿಗೆ ಹಾಜರಾಗಿ ಈ ಕುರಿತು ಸ್ಪಷ್ಟನೆ ನೀಡಲಿದ್ದಾರೆ. ಆಯುಧ ಪೂಜೆ ವೇಳೆ ಇಟ್ಟಿದ್ದ ರಿವಾಲ್ವರ್, ಬಂದೂಕುಗಳಿಗೆ ಲೈಸನ್ಸ್ ತೋರಿಸಿ ವಿಚಾರಣೆಗೆ ಹಾಜರಾಗುವಂತೆ ನಿನ್ನೆ ಸಿಸಿಬಿಯಿಂದ ರೈಗೆ ನೋಟಿಸ್ ನೀಡಲಾಗಿತ್ತು. ನೋಟಿಸ್ ತಲುಪಿದ 24 ತಾಸುಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ರೈ‌ಗೆ ಸಿಸಿಬಿ ಖಡಕ್ ಸೂಚನೆ ನೀಡಿದ್ದ ಹಿನ್ನೆಲೆ ಇಂದು ಮುತ್ತಪ್ಪ ರೈ ಎಸಿಪಿ ಮರಿಯಪ್ಪ […]

ರೆಹನಾ ಫಾತಿಮಾ ವರ್ತನೆಗೆ ನಟ ಜಗ್ಗೇಶ್ ಕಿಡಿ

Friday, October 19th, 2018
jaggesh

ಬೆಂಗಳೂರು: ಕೇರಳದಲ್ಲಿ ಕಿಸ್ ಆಫ್ ಲವ್ ವಿವಾದದ ವೇಳೆ ಬಂಧನಕ್ಕೊಳಗಾಗಿದ್ದ ವಿವಾದಿತ ಮಹಿಳೆ ರೆಹನಾ ಫಾತಿಮಾ ಪೊಲೀಸರ ಭದ್ರತೆಯೊಂದಿಗೆ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಪಡೆಯಲು ಮುಂದಾಗಿದ್ದು, ಈಗ ವಿವಾದಕ್ಕೆ ಗುರಿಯಾಗಿದೆ. ರೆಹನಾ ಫಾತಿಮಾ ಮಾಲೆ ಧರಿಸಿ ದರ್ಶನ ಪಡೆದ ನಂತರ ತನ್ನ ಫೋಟೋವನ್ನು ಸಾಮಾಜಿಕ ತಾಣದಲ್ಲಿ ಶೇರ್ ಮಾಡಿದ್ರು. ರೆಹನಾ ಅವರ ಫೋಟೋವನ್ನ ನವರಸ ನಾಯಕ ಜಗ್ಗೇಶ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ವಿನಾಶಕಾಲೆ ವಿಪರೀತ ಬುದ್ಧಿ ಅಂತ ಕಿಡಿಕಾರಿದ್ದಾರೆ. ನಟ ಜಗ್ಗೇಶ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ […]

ಯುವ ದಸರಾದಲ್ಲಿ ಪ್ರೇಕ್ಷಕರನ್ನು ರಂಜಿಸಿದ ರಾಕಿಂಗ್‌ ಸ್ಟಾರ್ ಯಶ್, ನೇಹಾ ಕಕ್ಕರ್​​​​

Thursday, October 18th, 2018
yash

ಮೈಸೂರು: ರಾಕಿಂಗ್‌ ಸ್ಟಾರ್ ಯಶ್ ಪಂಚಿಂಗ್ ಡೈಲಾಗ್ ಹಾಗೂ ಖ್ಯಾತ ಗಾಯಕಿ ನೇಹಾ ಕಕ್ಕರ್ ಗಾಯನ ಮೋಡಿಗೆ ಯುವದಸರಾಗೆ ಸೇರಿದ್ದ ಸಮೂಹ ಕುಣಿದು ಕುಪ್ಪಳಿಸಿ ಎಂಜಾಯ್ ಮಾಡಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ಐದು ದಿನಗಳಿಂದ ಮಳೆ ಅಬ್ಬರದೊಂದಿಗೆ ಸಂಗೀತದ ಸಂಭ್ರಮದಲ್ಲಿ ತೇಲುತ್ತಿದ್ದ ಯುವಸಮೂಹ ಕೊನೆಯ ದಿನವಾದ ಬುಧವಾರ ಮತ್ತಷ್ಟು ಸಂಭ್ರಮವನ್ನು ಹೆಚ್ಚಿಸಿಕೊಂಡಿತು. ನಟ ಯಶ್ ಹಾಗೂ ಗಾಯಕಿ ನೇಹಾ ಕಕ್ಕರ್ ಅವರ ಆಗಮನಕ್ಕೆ ಇಡೀ ಸಾವಿರಾರು ಪ್ರೇಕ್ಷಕರು ಕಾದು ಕುಳಿತಿದ್ದರು. ತಮ್ಮ ನೆಚ್ಚಿನ ನಟ ಹಾಗೂ ಗಾಯಕಿ […]

ಚಿಕ್ಕಮ್ಮನ ಮೇಲೆ ಹಲ್ಲೆ ಪ್ರಕರಣ: ನಟ ರಿಷಿ ವಿರುದ್ಧ ಎಫ್​​ಐಆರ್ ದಾಖಲು..!

Wednesday, October 17th, 2018
actor-rishi

ಬೆಂಗಳೂರು: ಆಪರೇಷನ್ ಅಲಮೇಲಮ್ಮ ಚಿತ್ರದ ಮೂಲಕ ಭರವಸೆ ನಟನಾಗಿ ಗುರುತಿಸಿಕೊಂಡಿದ್ದ ಯುವನಟ ರಿಷಿ ತನ್ನ ಚಿಕ್ಕಮ್ಮನ ಮೇಲೆ ಹಲ್ಲೆ ಮಾಡಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವೇಶ್ವರ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇದೇ ತಿಂಗಳ 11 ರಂದು ಎನ್ಸಿಆರ್ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಎಫ್ಐಆರ್ ದಾಖಲಿಸಿ ರಿಷಿಯನ್ನು ಎ2 ಆರೋಪಿ ಮಾಡಿದ್ದು ತನಿಖೆ ಮುಂದುವರೆಸಿದ್ದಾರೆ. ಹಲ್ಲೆ ಮಾಡಿರುವ ಆರೋಪದಡಿಯಲ್ಲಿ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ನಟ ರಿಷಿ, ತಂದೆ ನಾಗರಾಜ್, ತಾಯಿ ಅನಲಾ ವಿರುದ್ಧ ಶಾಲಿನಿ ಗೋಪಿನಾಥ್ […]

ಮೈಸೂರು ದಸರಾ ಉತ್ಸವಕ್ಕೆ ಚಾಲನೆ ನೀಡಿದ ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿ

Thursday, October 11th, 2018
kumarswamy

ಮೈಸೂರು: ಕರ್ನಾಟಕ ಸರ್ಕಾರ ಭೂಮಿ ನೀಡಿದರೆ ಇನ್ಫೋಸಿಸ್ ವತಿಯಿಂದ ಕೊಡಗು ಜಿಲ್ಲೆಯ ಪ್ರವಾಹ ಪೀಡಿತರಿಗೆ ವಸತಿ ಕಲ್ಪಿಸಿಕೊಡಲಾಗುವುದು ಎಂದು ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ತಿಳಿಸಿದ್ದಾರೆ. ಅವರು ಇಂದು ಬೆಳಗ್ಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದೇವಿ ಚಾಮುಂಡಿಗೆ ಪುಷ್ಪಾರ್ಚನೆ ಸಲ್ಲಿಸಿ 9 ದಿನಗಳ ನವರಾತ್ರಿ ಹಾಗೂ 10ನೇ ದಿನ ವಿಜಯದಶಮಿಯ ನಾಡಹಬ್ಬಕ್ಕೆ ಅಧಿಕೃತ ಚಾಲನೆ ನೀಡಿ ಮಾತನಾಡಿದರು. ಸರ್ಕಾರ ಮಾಡುವ ಯಾವುದೇ ಕೆಲಸದಲ್ಲಿ ನಾವು ಕೈಜೋಡಿಸುವುದು ನಮ್ಮ ಕೆಲಸವಾಗಿದೆ, ನಮಗೆ ಸಮಾಜದಿಂದ ಸಿಕ್ಕಿದ ಹಣ ಮತ್ತೆ ಸಮಾಜಕ್ಕೆ […]

ಶಬರಿಮಲೆಗೆ ಮಹಿಳೆಯರು ಪ್ರವೇಶಿಸಿದರೆ ಆಭರಣ ಪೆಟ್ಟಿಗೆ ಸನ್ನಿಧಾನಕ್ಕೆ ತರುವುದಿಲ್ಲ: ಅರಮನೆ ಘೋಷಣೆ

Friday, October 5th, 2018
tiruvabharanam

ಕಾಸರಗೋಡು: ಶಬರಿ ಮಲೆ ದೇವಸ್ಥಾನದ ಹದಿನೆಂಟು ಮೆಟ್ಟಿಲುಗಳನ್ನು ದಾಟಿ ಒಂದೇ ಒಂದು ಹೆಣ್ಣು ಒಳನಡೆದರೂ ಪಂದಳ ರಾಜರ ಅರಮನೆಯಲ್ಲಿರುವ ಆಭರಣದ ಪೆಟ್ಟಿಗೆ ಮುಂದೆಂದೂ ಶಬರಿ ಮಲೆಯ ಸನ್ನಿಧಾನಕ್ಕೆ ಬರುವುದಿಲ್ಲ ತರವುದಿಲ್ಲ ಎಂದು ಅರಮನೆ ಮೂಲಗಳು ಸುತ್ತೋಲೆ ಹೊರಡಿಸಿದೆ. ದೇವಸ್ಥಾನವು ಸರಕಾರದ ಸೊತ್ತಾಗಿರಬಹುದು. ಆದರೆ ಅಯ್ಯಪ್ಪನಿಗೆ ಸಂಬಂಧಪಟ್ಟ ಆಭರಣಗಳು ನಮ್ಮ ಕುಟುಂಬದ ಸ್ವತ್ತಾಗಿರುತ್ತದೆ. ಅದನ್ನ ಬಲವಂತವಾಗಿ ಯಾರೂ ತರಿಸಿಕೊಳ್ಳಲಾಗುವುದಿಲ್ಲ. ಹೆಂಗಸರು ಪ್ರವೇಶಿಸುವ ಶಬರಿಮಲೆಗೆ ಇನ್ನು ಮುಂದೆ ಪಂದಳ ರಾಜಮನೆತನದವರು ಕಾಲಿಡುವುದಿಲ್ಲ ಎಂಬ ಪ್ರಕಟಣೆಯ ಮೂಲಕ ಕರಾರಾಗಿ ಪ್ರಕಟಿಸುತ್ತೇವೆ ಎಂದು […]