ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸೂಲಿಬೆಲೆಗೆ ದೊರೆಯುವ ಸಾಧ್ಯತೆ

Saturday, March 16th, 2024
chakravarti-sulibale

ಮಂಗಳೂರು : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸೂಲಿಬೆಲೆಗೆ ದೊರೆಯುವ ಸಾಧ್ಯತೆ ಇದೆ ಎನ್ನಲಾಗಿದ್ದು, ಹಾಲಿ ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ದೊರೆಯುವುದು ಅನುಮಾನ ಎಂಬ ಮಾತು ಕೇಳಿಬರುತ್ತಿದೆ. ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಬಿಜೆಪಿಯಿಂದ ಲೋಕಸಭೆ ಚುನಾವಣೆ ಟಿಕೆಟ್ ದೊರೆಯುವ ಸಾಧ್ಯತೆ ಇದೆ ಎಂದು ಇತ್ತೀಚೆಗೆ ವರದಿಗಳಾಗಿದ್ದವು. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇದೀಗ ಚಕ್ರವರ್ತಿ ಸೂಲಿಬೆಲೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮಾತನಾಡಿದ ಅವರು, ಚುನಾವಣೆ […]

ಕೆ.ಎಸ್‌.ಈಶ್ವರಪ್ಪ ಭೇಟಿ, ಬಿಜೆಪಿಗೆ ಬಂಡಾಯ ನಿಲ್ಲುವ ಸೂಚನೆ ನೀಡಿದ ಸತ್ಯಜಿತ್ ಸುರತ್ಕಲ್‌

Saturday, March 16th, 2024
Satyajith

ಮಂಗಳೂರು : ಈ ಬಾರಿ ಜಿಲ್ಲೆಯಲ್ಲಿ ಓಡಾಡಿ ತನ್ನ ಕಾರ್ಯಕರ್ತರನ್ನು ಸಂಘಟಿಸಿ ಹಲವು ಸಭೆಗಳನ್ನು ನಡೆಸಿ ಪಕ್ಷದ ಗಮನ ಸೆಳೆಯುವ ಪ್ರಯತ್ನ ಮಾಡಿ ವಿಫಲರಾದ ಸತ್ಯಜಿತ್ ಸುರತ್ಕಲ್‌ ಪಕ್ಷೇತರವಾಗಿ ಸ್ಪರ್ಧಿಸಿ ಬಿಜೆಪಿಗೆ ಬಂಡಾಯ ನಿಲ್ಲುವ ಸೂಚನೆ ನೀಡಿದ್ದಾರೆ. ಅದಕ್ಕಾಗಿ ಪಕ್ಷೇತರರಾಗಿ ಶಿವಮೊಗ್ಗದಿಂದ ಸ್ಪರ್ಧಿಗೆ ಸಿದ್ಧತೆ ಮಾಡಿಕೊಂಡಿರುವ ಕೆ.ಎಸ್‌.ಈಶ್ವರಪ್ಪಅವರನ್ನು ಭೇಟಿಮಾಡಿದ್ದಾರೆ. ಕೆ.ಎಸ್‌. ಈಶ್ವರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಸತ್ಯಜಿತ್ ಸುರತ್ಕಲ್ ಈಶ್ವರಪ್ಪ ಅವರ ಬೆಂಬಲಕ್ಕೆ ತಾವು ಇರುವುದಾಗಿ ಬರವಸೆ ನೀಡಿದ್ದಾರೆ. ಟಿಕೆಟ್ ಕೈ ತಪ್ಪಿದ್ದಕ್ಕಾಗಿ ಮಾಜಿ ಮುಖ್ಯಮಂತ್ರಿ […]

ಪುತ್ತೂರು ಬಿಜೆಪಿ ನಾಯಕರ ಪ್ರಬಲ ವಿರೋಧದಿಂದ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ತಡೆ

Saturday, March 16th, 2024
Arun-Kumar-Puttila

ಪುತ್ತೂರು: ಬಿಜೆಪಿಗೆ ಬಂಡಾಯವಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು 3ನೇ ಸ್ಥಾನಕ್ಕೆ ತಳ್ಳಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿಗೆ ಮರು ಸೇರ್ಪಡೆಯಾಗಲು ಪುತ್ತೂರು ಬಿಜೆಪಿ ಮುಖಂಡರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಬಿಜೆಪಿ ಸೇರ್ಪಡೆ ತಡೆಹಿಡಿಯಲಾಗಿದೆ. ಪುತ್ತಿಲ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧೆ ನಡೆಸಿದ ಬಳಿಕ ಪುತ್ತಿಲ ಪರಿವಾರವನ್ನು ಸ್ಥಾಪಿಸಿಕೊಂಡು ತನ್ನ ಅಸ್ತಿತ್ವವನ್ನು ಜಿಲ್ಲಾ ಮಟ್ಟಕ್ಕೆ ವಿಸ್ತರಿಸಿಕೊಳ್ಳುವ ಪ್ರಯತ್ನ ನಡೆಸಿದ್ದರು. ಇದಕ್ಕೆ ಕಡಿವಾಣ ಹಾಕಲು ಅವರನ್ನು ಮತ್ತೊಮ್ಮೆ ಬಿಜೆಪಿಗೆ ಸೇರ್ಪಡೆಗೊಳಿಸಲು […]

ಕರ್ನಾಟಕ ತುಳು, ಕೊಂಕಣಿ, ಬ್ಯಾರಿ ಸಾಹಿತ್ಯ ಅಕಾಡೆಮಿಗಳಿಗೆ ಅಧ್ಯಕ್ಷರುಗಳ ನೇಮಕ

Saturday, March 16th, 2024
Karnataka-Academy

ಮಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯ 19ವಿವಿಧ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಿಸಿ ಕರ್ನಾಟಕ ಸರಕಾರದ ಸಚಿವಾಲಯ ಅಧೀನ ಕಾರ್ಯದರ್ಶಿ ಮುಂದಿನ ಮೂರು ವರ್ಷಗಳ ಅವಧಿಗೆ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರನ್ನಾಗಿ ಪತ್ರಕರ್ತ ತಾರಾನಾಥ ಗಟ್ಟಿ ಕಾಪಿಕಾಡ್ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರನ್ನಾಗಿ ಪೃಥ್ವಿರಾಜ್, ಕುಂಬ್ರ ದುರ್ಗಾಪ್ರಸಾದ್ ರೈ, ಮೋಹನ್ ದಾಸ್ ಕೊಟ್ಟಾರಿ, ಅಕ್ಷಯ್ ಆರ್ ಶೆಟ್ಟಿ, ಶೈಲೇಶ್ ಬಿನ್ […]

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಅಂತಾರಾಷ್ಟ್ರೀಯ ಐ.ಎಸ್.ಒ. 270011ಪ್ರಶಸ್ತಿ ಪ್ರದಾನ

Friday, March 15th, 2024
iso

ಉಜಿರೆ: ಲಂಡನ್‌ನಲ್ಲಿ ಪ್ರಧಾನಕಛೇರಿ ಹೊಂದಿರುವ ಎನ್.ಕ್ಯೂ.ಎ. ಸಂಸ್ಥೆ 2023 ರಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯವೈಖರಿ, ಪಾರದರ್ಶಕತೆ, ತಂತ್ರಜ್ಞಾನಗಳ ಬಳಕೆ, ಸುರಕ್ಷತೆ, ಬದ್ಧತೆ, ಕಾರ್ಯಕರ್ತರ ಕಾರ್ಯಕುಶಲತೆ, ವರದಿಗಳ ತಯಾರಿ ಮತ್ತು ಬಳಕೆ, ವ್ಯವಹಾರದಲ್ಲಿ ನೈಪುಣ್ಯತೆ ಮೊದಲಾದ 114 ವಿಷಯಗಳನ್ನು ಗಮನಿಸಿ ಅಂತಾರಾಷ್ಟ್ರೀಯ ಐ.ಎಸ್.ಒ. 270011 ಪ್ರಶಸ್ತಿ ಪ್ರದಾನ ಮಾಡಲು ಸಂತೋಷ ಮತ್ತು ಅಭಿಮಾನ ಉಂಟಾಗುತ್ತದೆ ಎಂದು ಎನ್.ಕ್ಯೂ.ಎ. ಸಂಸ್ಥೆಯ ಮಹಾಪ್ರಬಂಧಕ ಅಮರ್‌ದೀಪ್ ಹೇಳಿದರು.ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪ್ರತಿಷ್ಠಿತ […]

ಜಿಲ್ಲಾ ಕಾಂಗ್ರೇಸ್ ಮುಖಂಡ ಬೆಂಗ್ರೆ ಶೇಖರ್ ಸುವರ್ಣ ನಿಧನ

Friday, March 15th, 2024
shekara-Bangera

ಮಂಗಳೂರು : ಜಿಲ್ಲಾ ಕಾಂಗ್ರೇಸ್ ಮುಖಂಡ, ಸಮಾಜಸೇವಕ ಶೇಖರ್ ಸುವರ್ಣ ಬೆಂಗ್ರೆಯವರು ಹೃದಯಾಘಾತದಿಂದ ಇಂದು ಬೆಳಗ್ಗೆ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ಶ್ರೀಯುತರು ಪತ್ನಿ ಮತ್ತು ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕಾಂಗ್ರೇಸ್ ಪಕ್ಷದ ಮಂಗಳೂರು ದಕ್ಷಿಣದ ವಿಭಾಗದ ಉಪಾಧ್ಯಕ್ಷರಾಗಿ ರಾಜಕೀಯ ಸೇವೆಯನ್ನು ಮಾಡಿದ ಶ್ರೀಯುತರು ಬೆಂಗ್ರೆ ಮಹಾಜನ ಸಭಾ ಅಧ್ಯಕ್ಷರಾಗಿ ಅನೇಕ ಅಭಿವೃದ್ದಿ ಕಾರ್ಯಗಳನ್ನು ಮಾಡಿ ಜನಮನ್ನಣೆ ಪಡೆದಿದ್ದರು. ಬೆಂಗ್ರೆ ಶೇಷಾಶಯನ ಮಂದಿರ ಅಲ್ಲದೆ ಇತರ ಧಾರ್ಮಿಕ […]

“ಆಳ್ವಾಸ್ ನಿಂದ 10 ಕೋಟಿಗೂ ಮಿಕ್ಕಿದ ವಿದ್ಯಾರ್ಥಿವೇತನ” -ಡಾ.ಎಂ. ಮೋಹನ್ ಆಳ್ವ

Friday, March 15th, 2024
mohan-Alva

ಮಂಗಳೂರು: “ನಾಲ್ಕು ದಶಕಗಳಿಂದ ನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಾ ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ದತ್ತು ಸ್ವೀಕಾರ, ಸಹಾಯಧನ, ಪ್ರೋತ್ಸಾಹಧನ, ವಿವಿಧ ಶಿಷ್ಯವೇತನ, ಬಹುಮಾನ, ಪುರಸ್ಕಾರಗಳನ್ನು ನೀಡುತ್ತಾ ಬಂದಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ 10 ಕೋಟಿಗೂಅಧಿಕ ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಿಸಿದೆ” ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. “10ನೇ ತರಗತಿಯಲ್ಲಿ ಸಿಬಿಎಸ್‌ಸಿ (ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ) ಐಸಿಎಸ್‌ಇ […]

ಕೆಎಸ್ ಈಶ್ವರಪ್ಪ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ

Friday, March 15th, 2024
eswarappa

ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲೂ ತಮ್ಮ ಪುತ್ರನಿಗೆ ಟಿಕೆಟ್ ಸಿಗದ್ದಿದ್ದಕ್ಕೆ ಬಿಜೆಪಿ ವಿರುದ್ಧ ತೀವ್ರ ಆಕ್ರೋಶಗೊಂಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಪುತ್ರ ಕಾಂತೇಶ್ ಗೆ ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಪುತ್ರನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಈಶ್ವರಪ್ಪ ಇದೀಗ ಅಖಾಡಕ್ಕಿಳಿದಿದ್ದಾರೆ. ಇಂದು ಬೆಂಬಲಿಗರು, ಹಿತೈಷಿಗಳು, ಅಭಿಮಾನಿಗಳೊಂದಿಗೆ ನಗರದ ಬಂಜಾರ […]

ಹತ್ತನೇ ತರಗತಿಯ ವಿದ್ಯಾರ್ಥಿನಿಯರನ್ನು ಕೋಣೆಯಲ್ಲಿಸಿರಿ ಬ್ಯಾಡ್‌ ಟಚ್‌ ಮಾಡುವ ಅಧ್ಯಾಪಕ

Friday, March 15th, 2024
Guruva-Mogera

ಮೂಡುಬಿದ್ರೆ : ಹತ್ತನೇ ತರಗತಿಯ ವಿದ್ಯಾರ್ಥಿನಿಯರಿಗೆ ಕಲ್ಲಮುಂಡ್ಕೂರು ಸರ್ಕಾರಿ ಅನುದಾನಿತ ಶಾಲೆಯ ಅಧ್ಯಾಪಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಶಾಲೆಯ ಸಹ ಅಧ್ಯಾಪಕ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನಿವಾಸಿ ಗುರುವ ಮೊಗೇರಾ ಎಂದು ಗುರುತಿಸಲಾಗಿದೆ. ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿಯರಿಗೆ ಅಧ್ಯಾಪಕ ಗುರುವ ಮೊಗೇರಾ ಲೈಂಗಿಕ ಕಿರುಕುಳ ನೀಡಿರುವ ಕುರಿತು ಶಾಲೆಯ ಮುಖ್ಯೋಪಾಧ್ಯಾಯ ಸದಾನಂದ ಅವರು ಮೂಡುಬಿದ್ರೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಫೆ.28ರಂದು ಹತ್ತನೇ ತರಗತಿಯ ಕೆಲವು ವಿದ್ಯಾರ್ಥಿನಿಯರು ಬಂದು ಸಹ […]

ತಾಯಿ-ಮಗಳನ್ನು ಒಳಗೆ ಕರೆದುಕೊಂಡು ಹೋಗಿ ಸಮಸ್ಯೆ ಕೇಳಿದ್ದೇ ತಪ್ಪಾಯಿತು : ಯಡಿಯೂರಪ್ಪ

Friday, March 15th, 2024
yedyurappa

ಬೆಂಗಳೂರು : ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಪೋಕ್ಸೋ ಕಾಯ್ದೆ ದಾಖಲಾದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ್ದಾರೆ. ಒಂದು-ಒಂದೂವರೆ ತಿಂಗಳ ಹಿಂದೆ ಮಹಿಳೆಯೊಬ್ಬರು ಕಣ್ಣೀರು ಹಾಕುತ್ತಿದ್ದರು ಎಂದು ಒಳಗೆ ಕರೆದುಕೊಂಡು ಹೋಗಿ ಏನಮ್ಮಾ ಸಮಸ್ಯೆ ಎಂಂದು ತಾಯಿ-ಮಗಳು ಇಬ್ಬರನ್ನೂ ಕೇಳಿದೆ. ನಮಗೆ ತುಂಬಾ ಅನ್ಯಾಯ ಆಗಿದೆ ಎಂದು ಹೇಳಿದ್ರು. ಅಮ್ಮ-ಮಗಳ ಕತೆ ಕೇಳಿ ನಾನು ಪೊಲೀಸ್ ಕಮಿಷನರ್‌ ದಯಾನಂದ್‌ ಗೆ ಫೋನ್ ಮಾಡಿ ಮಾತನಾಡಿ. ಇವರಿಗೆ ಅನ್ಯಾಯ ಆಗಿದೆಯಂತೆ ನ್ಯಾಯ ಒದಗಿಸಿಕೊಡಿ ಎಂದು ತಾಯಿ-ಮಗಳು ಇಬ್ಬರನ್ನೂ ಕಳುಹಿಸಿಕೊಟ್ಟಿದ್ದೆ. ಅದಾದ […]