ರೊಜಾರಿಯೋ ಕೆಥೆಡ್ರಲ್‌ ಚರ್ಚ್‌ನಲ್ಲಿ 21 ಜೋಡಿಗಳ ಸಾಮೂಹಿಕ ವಿವಾಹ

Monday, May 5th, 2014
Rosario Cathedral

ಮಂಗಳೂರು : ಸೈಂಟ್‌ ವಿನ್ಸೆಂಟ್‌ ಪಾವ್ಲ್ ಸಭಾ (ಎಸ್‌.ವಿ.ಪಿ.)ದ 40ನೇ ವರ್ಷದ ಸಾಮೂಹಿಕ ವಿವಾಹ ರವಿವಾರ ರೊಜಾರಿಯೋ ಕೆಥೆಡ್ರಲ್‌ ಚರ್ಚ್‌ನಲ್ಲಿ ನಡೆಯಿತು. ಸಮಾರಂಭದಲ್ಲಿ 21 ಜೋಡಿಗಳು ಸತಿ ಪತಿಗಳಾಗಿ ದಾಂಪತ್ಯ ಜೀವನ ಪ್ರವೇಶಿಸಿದರು. ಸೈಂಟ್‌ ವಿನ್ಸೆಂಟ್‌ ಪಾವ್ಲ್ ಸಭಾ ಪರವಾಗಿ ನವ ದಂಪತಿಗಳಿಗೆ ತಲಾ 5 ಸಾವಿರ ರೂ. ಠೇವಣಿ ಪತ್ರ, ಅಡುಗೆ ಸಾಮಗ್ರಿ ಮತ್ತು ಬಟ್ಟೆ ಬರೆ ಸಹಿತ ಒಟ್ಟು 10,000 ರೂ. ಮೌಲ್ಯದ ಉಡುಗೊರೆ ನೀಡಲಾಯಿತು. ಮಂಗಳೂರು ಧರ್ಮ ಪ್ರಾಂತದ ಬಿಷಪ್‌ ರೈ| ರೆ| […]

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ’ ತುಳುಚಿತ್ರ ಮಂಗಳೂರಿನ ಜ್ಯೋತಿ ಸಿನಿಮಾ ಮಂದಿರದಲ್ಲಿ ಬಿಡುಗಡೆ

Friday, May 2nd, 2014
Narayana Guru

ಮಂಗಳೂರು: ತುಂಗಭದ್ರ ಫಿಲಮ್ಸ್‌ ಸಂಸ್ಥೆಯ ಬ್ಯಾನರ್‌ನಡಿ ತಯಾರಾದ ‘ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ’ ತುಳುಚಿತ್ರದ ಬಿಡುಗಡೆ ಸಮಾರಂಭದ ಉದ್ಘಾಟನೆಯನ್ನು ಚಿತ್ರದ ನಿರ್ಮಾಪಕ, ನಿರ್ದೇಶಕ ರಾಜಶೇಖರ ಕೋಟ್ಯಾನ್ ಅವರ ತಾಯಿ ಕಲ್ಯಾಣಿ ಯವರು ಮೇ 2, ಶುಕ್ರವಾರ ಜ್ಯೋತಿ ಸಿನಿಮಾ ಮಂದಿರದಲ್ಲಿ ನೆರವೇರಿಸಿದರು. ನಾರಾಯಣಗುರುಗಳ ಕಾಲದ ಪ್ರಾಕೃತಿಕ ಹಳ್ಳಿ ಸೊಗಡಿನ ಜನಜೀವನ ತೆರೆದಿಡುವಂತಹ ಪ್ರಯತ್ನವನ್ನು ಚಿತ್ರದಲ್ಲಿ ಮಾಡಲಾಗಿದೆ. ಮೂಲ್ಕಿ, ಕಾರ್ಕಳ, ಬಾರ್ಕೂರು, ಸುರತ್ಕಲ್‌, ಬ್ರಹ್ಮಾವರ, ಕುದ್ರೋಳಿ ಹಾಗೂ ಕೇರಳದ ಶಿವಗಿರಿಯಲ್ಲಿ ಚಿತ್ರೀಕರಣ ನಡೆಸಲಾಗಿದೆ ಎಂದು ಚಿತ್ರದ ನಿರ್ಮಾಪಕ, ನಿರ್ದೇಶಕ ರಾಜಶೇಖರ […]

ಮಲಬಾರ್ ಗೋಲ್ಡ್ ಸಂಸ್ಥೆಯ ಎದುರು ಭಾರತ್ ಕ್ರಾಂತಿ ಸೇನಾ ಸದಸ್ಯರಿಂದ ಪ್ರತಿಭಟನೆ

Friday, May 2nd, 2014
Kranti Sena

ಮಂಗಳೂರು: ನಗರದ ಪಳ್ನೀರ್ ಬಳಿ ಇರುವ ಮಲಬಾರ್ ಗೋಲ್ಡ್ ಸಂಸ್ಥೆಯ ಎದುರು ಭಾರತ್ ಕ್ರಾಂತಿ ಸೇನಾದ ಸದಸ್ಯರು ವಿದೇಶಗಳಿಗೆ ಅಕ್ರಮವಾಗಿ ಚಿನ್ನವನ್ನು ರವಾನೆ ಮಾಡಿಸಲು ಹಿಂದೂ ಯುವಕರನ್ನು ಮಲಬಾರ್ ಗೋಲ್ಡ್ ಸಂಸ್ಥೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಕೆಲವು ದಿನಗಳ ಹಿಂದೆ ಭಾರತ್ ಕ್ರಾಂತಿ ಸೇನಾದ ಸಂಸ್ಥಾಪಕ ಪ್ರಣವಾನಂದ ಸ್ವಾಮಿ ಅವರು ಸುದ್ದಿಗೋಷ್ಠಿ ನಡೆಸಿ ಮಲಬಾರ್ ಗೋಲ್ಡ್ ಸಂಸ್ಥೆ ವಿದೇಶಗಳಿಗೆ ಅಕ್ರಮವಾಗಿ ಚಿನ್ನವನ್ನು ಕಳ್ಳಸಾಗಾಣೆ ಮಾಡುತ್ತಿದೆ. ಇದಕ್ಕೆ ಹಿಂದೂ ಯುವಕರನ್ನು ಬಳಸಿಕೊಳ್ಳುತ್ತಿದೆ ಎಂದು ಹೇಳಿದ್ದರು. […]

ದೆಹಲಿಯಲ್ಲಿ ಬಿಸು ಪರ್ಬ, ತುಳುವಿಗೆ ಸಂವಿಧಾನದ ಮಾನ್ಯತೆಗಾಗಿ ಹೋರಾಟ

Thursday, May 1st, 2014
Delhi Tulu Siri

ನವದೆಹಲಿ: ದೆಹಲಿ ಸುತ್ತಲಿನ ಪ್ರದೇಶಗಳಲ್ಲಿ ನೆಲೆಸಿರುವ ತುಳುವರು ಭಾನುವಾರ ದೆಹಲಿಯ ನೆಹರು ಪಾಕರ್್ನಲ್ಲಿ ಸೇರಿ ತುಳು ಭಾಷೆಯನ್ನು ಸಂವಿಧಾನದ ಎಂಟನೆ ಪರಿಚ್ಚೇದಕ್ಕೆ ಸೇರಿಸುವ ತಮ್ಮ ಹೋರಾಟಕ್ಕೆ ಮರುಜೀವ ನೀಡುವ ಬಗ್ಗೆತೀರ್ಮಾನಿಸಿದ್ದಾರೆ. ದೆಹಲಿ ತುಳು ಸಿರಿ ಆಯೋಜಿಸಿದ್ದ ‘ಬಿಸು ಪರ್ಬ’ ಕಾರ್ಯಕ್ರಮದಲ್ಲಿ ಸುಮಾರು 200ಕ್ಕೂ ಮಿಕ್ಕ ತುಳುವರು ಭಾಗವಹಿಸಿದ್ದರು. ದೆಹಲಿಯಲ್ಲಿ ವಿವಿಧ ವೃತ್ತಿಯಲ್ಲಿರುವ ರಾಜ್ಯದ ಕರಾವಳಿ ಭಾಗಕ್ಕೆ ಸೇರಿದ ಉತ್ಸಾಹಿಗಳು ದೆಹಲಿಯ ಬಿಸಿಲ ಧಗೆಗೆ ಸಡ್ಡು ಹೊಡೆದು `ಪರ್ಬ’ದ ಸಡಗರವನ್ನು ಅನುಭವಿಸಿದರು. ದಿನವಿಡೀ ನಡೆದ ಕಾರ್ಯಕ್ರಮದಲ್ಲಿ ಮಕ್ಕಳು, ಯುವಕರು […]

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರ ಚುನಾವಣೆಯ ಪ್ರಕ್ರಿಯೆಗಳ ಗೊಂದಲಗಳನ್ನು ಸರಿಪಡಿಸಲು ಜಿಲ್ಲಾಧಿಕಾರಿಗೆ ಮನವಿ

Wednesday, April 30th, 2014
bjp memorandum

ಮಂಗಳೂರು : ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರ ಚುನಾವಣೆಯ ಪ್ರಕ್ರಿಯೆಗಳ ಗೊಂದಲಗಳನ್ನು ಕೂಡಲೇ ಸರಿಪಡಿಸಿ ಸೂಕ್ತ ಕ್ರಮ ಕೈಗೊಳ್ಳುಬೇಕೆಂದು ಜಿಲ್ಲಾ ಬಿಜೆಪಿ ವತಿಯಿಂದ ಬುಧವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಹಿಂದಿನ ಸಹಕಾರಿ ಸಂಸ್ಥೆಗಳಿಗೆ ಚುನಾವಣೆ ನಡೆಯುವ ಸಂದರ್ಭದಲ್ಲಿ ಮಹಾಸಭೆಯ ನೋಟೀಸಿನ ಜೊತೆಯಲ್ಲಿಯೆ ಸ್ಪರ್ಧಿಸುವ ಅಭ್ಯರ್ಥಿಗಳ ಅರ್ಜಿ ಯ ನಮೂನೆಯನ್ನು ಕೂಡಾ ಕಳುಹಿಸಲಾಗುತ್ತಿತ್ತು. ಇದೀಗ ದಿನಾಂಕ 25.5.2014 ರಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ ಚುನಾವಣೆಯು ನಡೆಯಲಿದ್ದು, ಸಂಘದ ಪ್ರತಿನಿಧಿ ನಿಯೋಜಿಸುವ ಅರ್ಜಿ […]

ನ್ಯಾಯಬೆಲೆ ಅಂಗಡಿಗಳ ತಪಾಸಣೆಗೆ ಡಿಸಿ ಸೂಚನೆ

Wednesday, April 30th, 2014
Ibrahim

ಮಂಗಳೂರು : ಜಿಲ್ಲೆಯಲ್ಲಿರುವ ನ್ಯಾಯಬೆಲೆ ಅಂಗಡಿಗಳ ತಪಾಸಣೆಯನ್ನು ಆಹಾರ ಇಲಾಖೆಯು ಆಗಿಂದಾಗ್ಗೆ ನಿಗದಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಸೂಚಿಸಿದ್ದಾರೆ. ಅವರು ಬುಧವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಆಹಾರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡುತ್ತಿದ್ದರು. ನ್ಯಾಯಬೆಲೆ ಅಂಗಡಿಗಳ ತಪಾಸಣೆ ಕುಂಠಿತಗೊಂಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ನ್ಯಾಯಬೆಲೆ ಅಂಗಡಿಗಳ ತೂಕದ ತಕ್ಕಡಿಗಳು ಸಮರ್ಪಕವಾಗಿ ಕಾರ್ಯವಾಗುತ್ತಿರುವುದನ್ನು ತೂಕ ಮತ್ತು ಅಳತೆ ಇಲಾಖೆಯು ನೀಡಿರುವ ಪ್ರಮಾಣಪತ್ರಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು. ಜಿಲ್ಲೆಯಲ್ಲಿ 500 ನ್ಯಾಯಬೆಲೆ ಅಂಗಡಿಗಳು ಅಸ್ತಿತ್ವದಲ್ಲಿದೆ. ನೂತನ ನ್ಯಾಯಬೆಲೆ […]

ದೇರೆಬೈಲಿನ ಕೊಂಚಾಡಿಯ ಚರ್ಚ್ ಬಳಿ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವು

Wednesday, April 30th, 2014
construction

ಮಂಗಳೂರು: ದೇರೆಬೈಲಿನ ಕೊಂಚಾಡಿಯ ಚರ್ಚ್ ಬಳಿ ಬ್ಲೂಬೇರಿಸ್ ಕಂಪೆನಿಯ ಕಟ್ಟಡ ನಿರ್ಮಾಣದ ವೇಳೆ ಮಣ್ಣು ಕುಸಿದು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿರುವ ದುರ್ಘ‌ಟನೆ ಎಪ್ರಿಲ್‌ 30ರಂದು ಸಂಭವಿಸಿದೆ. ಕಟ್ಟಡ ನಿರ್ಮಾಣಕ್ಕೆ ಮಣ್ಣು ಅಗೆಯುತ್ತಿದ್ದು ಮೇಲಿನಿಂದ ಮಣ್ಣು ಕುಸಿದು ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಮಣ್ಣಿನಡಿಯಲ್ಲಿ ಸಿಲುಕಿಕೊಂಡಿರುವ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ವ್ಯಕ್ತಿಯನ್ನು ಕಟ್ಟಡ ಕಾರ್ಮಿಕ ಬಾಗಲಕೋಟೆಯ ಕಾಶಿಯಪ್ಪ ಎಂದು ಗುರುತಿಸಲಾಗಿದೆ. ಕಾಶಯಪ್ಪ ಅವರ ಪತ್ನಿ ಮಹಾದೇವಿ ಹಾಗೂ ಸ್ವಾಮಿ ನಾಯಕ್‌ ಎನ್ನುವವರು ಗಾಯಗೊಂಡಿದ್ದು ಅವರಿಗೆ ಸ್ಥಳೀಯ […]

ಕೊಲ್ಲೂರು ಮೂಕಾಂಬಿಕೆಗೆ ರೇಶ್ಮೆ ಸೀರೆ ಸಮರ್ಪಿಸಿದ ರಾಧಿಕಾ ಕುಮಾರ ಸ್ವಾಮಿ

Sunday, April 27th, 2014
Radhika K

ಕೊಲ್ಲೂರು : ಖ್ಯಾತ ನಟಿ, ನಿರ್ಮಾಪಕಿ ರಾಧಿಕಾ ಕುಮಾರ ಸ್ವಾಮಿ ಎ. 25ರಂದು ಬೆಳಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ರೇಶ್ಮೆ ಸೀರೆಯನ್ನು ಶ್ರೀದೇವಿಗೆ ಕಾಣಿಕೆ ರೂಪದಲ್ಲಿ ಸಮರ್ಪಿಸಿದರು. ಬೆಳಗ್ಗಿನ ಜಾವ ಕುಟುಂಬದ ಸದಸ್ಯರೊಡನೆ ಆಗಮಿಸಿದ ರಾಧಿಧಿಕಾ ಅವರನ್ನು ಜೆ.ಡಿ.ಎಸ್‌. ಜಿಲ್ಲಾ ಕಾರ್ಯದರ್ಶಿ ನ್ಯಾಯವಾದಿ ಕೆ.ಎನ್‌. ಶ್ರೀಕಾಂತ ಅಡಿಗ ಕೊಲ್ಲೂರಿನಲ್ಲಿ ಸ್ವಾಗತಿಸಿದರು.

ಬ್ರಹ್ಮರಕೂಟ್ಲಿನ ಬಳಿ ಟೋಲ್ ಗೇಟನ್ನು ತಕ್ಷಣ ನಿಲ್ಲಿಸಬೇಕೆಂದು ಪ್ರತಿಭಟನೆ

Friday, April 25th, 2014
Toll Gate

ಬಂಟ್ವಾಳ: ಬಂಟ್ವಾಳ ತಾಲೂಕು ನಾಗರಿಕ ಹಿತರಕ್ಷಣಾ ಸಮಿತಿ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಬ್ರಹ್ಮರಕೂಟ್ಲಿನ ಬಳಿ ಕಾರ್ಯಾಚರಿಸುತ್ತಿರುವ ಟೋಲ್ ಗೇಟನ್ನು ತಕ್ಷಣ ನಿಲ್ಲಿಸಬೇಕೆಂದು ಆಗ್ರಹಿಸಿ ಶುಕ್ರವಾರ ಟೋಲ್ ಗೇಟ್ ಮುಂಬಾಗದಲ್ಲಿ ಹೆದ್ದಾರಿ ತಡೆ ಹಾಗೂ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರು ರಸ್ತೆಯಲ್ಲಿ ಕುಳಿತು ಹೆದ್ದಾರಿ ತಡೆ ನಡೆಸಿದರು ಬಳಿಕ ಪ್ರತಿಭಟನಾಕಾರರು ಟೋಲ್ ಸಂಗ್ರಹ ಕೇಂದ್ರದೆಡೆಗೆ ನುಗ್ಗಿ ಟೋಲ್ ಸಂಗ್ರಹವನ್ನು ತಡೆದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ತಾಲೂಕು ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ, ಜಿಲ್ಲಾ ಪಂಚಾಯತು ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಮಾತನಾಡಿ […]

ನೀತಿ ಸಂಹಿತೆಯ ನೆಪದಲ್ಲಿ ಜಿಲ್ಲೆಯ ಗಂಭೀರ ಸಮಸ್ಯೆಗಳಿಗೆ ಕುತ್ತು

Thursday, April 24th, 2014
Pratapa simha nayaka

ಮಂಗಳೂರು : ನೀತಿ ಸಂಹಿತೆಯ ನೆಪದಲ್ಲಿ ಜಿಲ್ಲೆಯ ಗಂಭೀರ ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ 42 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಕಾಡುತ್ತಿದ್ದು ಸರಕಾರ ತಕ್ಷಣ ಸಮಸ್ಯೆಗೆ ಸ್ಪಂದಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಪ್ರತಾಪ್ ಸಿಂಹ ನಾಯಕ್ ಒತ್ತಾಯಿಸಿದ್ದಾರೆ. ಜಿಲ್ಲಾಡಳಿತ ಮತ್ತು ಸರಕಾರ ನೀರಿನ ಸಮಸ್ಯೆಗೆ ಯಾವುದೇ ಪರಿಹಾರ ಯೋಜನೆಗಳನ್ನು ಹಾಕಿಕೊಂಡಿಲ್ಲ. ಉಳ್ಳಾಲ, ಕೊಣಾಜೆ, ಪುದು ಮುಂತಾದೆಡೆ ನೀರಿನ ಗಂಭೀರ ಸಮಸ್ಯೆಗಳಿವೆ. ಕಳೆದ ವರ್ಷ ಇದೇ ಅವಧಿಯಲ್ಲಿ 26 […]