ದ.ಕ.ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷರಾಗಿ ಶ್ರೀ ಹರೀಶ್ ಆಚಾರ್ ಆಯ್ಕೆ

Tuesday, June 3rd, 2014
KMF

ಮಂಗಳೂರು : ದ. ಕ. ಜಿಲ್ಲಾ ಸಹಕಾರಿ ಯೂನಿಯನ್ ನಿಯಮಿತ, ಮಂಗಳೂರು ಇದರ 2014-15 ರಿಂದ ಮುಂದಿನ 5 ಸಹಕಾರಿ ವರ್ಷಗಳಿಗೆ ಅಧ್ಯಕ್ಷರಾಗಿ ವಿಶ್ವಕರ್ಮ ಸಹಕಾರಿ ಬ್ಯಾಂಕ್ ಲಿ., ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಹರೀಶ್ ಆಚಾರ್ ಹಾಗೂ ಉಪಾಧ್ಯಕ್ಷರಾಗಿ ಶ್ರೀ ಸುಂದರ ಗೌಡ ಇಚ್ಚಿಲ (ಉಜಿರೆ ಸೇವಾ ಸಹಕಾರಿ ಸಂಘದ ಅಧ್ಯಕ್ಷರು) ಇವರುಗಳು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಶ್ರೀ ಹೊನ್ನಯ್ಯ ಇವರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿರುತ್ತಾರೆ. ನೂತನ ಆಡಳಿತ ಮಂಡಳಿಯ ಅಭಿನಂದನಾ ಸಮಾರಂಭವು ದ. ಕ. ಜಿಲ್ಲಾ ಕೇಂದ್ರ […]

ಗ್ಯಾಸ್ ಟ್ಯಾಂಕರ್ ಮತ್ತು ಟ್ರ್ಯಾಕ್ಸ್ ತೂಫಾನ್ ಡಿಕ್ಕಿ: ಮೂವರು ಸ್ಥಳದಲ್ಲೇ ಮೃತ

Tuesday, June 3rd, 2014
Shiradi Accident

ಮಂಗಳೂರು : ಗ್ಯಾಸ್ ಟ್ಯಾಂಕರ್ ಮತ್ತು ಟ್ರ್ಯಾಕ್ಸ್ ತೂಫಾನ್ ನಡುವೆ ಶಿರಾಡಿಯ ಅಡ್ಡಹೊಳೆ ಸಮೀಪ ಸೋಮವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟು, 13 ಜನರು ಗಾಯಗೊಂಡಿದ್ದಾರೆ. ತೂಫಾನ್‌ ಚಾಲಕ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ದಾವಣಗೆರೆಯ ನಿವಾಸಿಗಳು ಎಂದು ಗುರುತಿಸಲಾಗಿದೆ. ಸುಬ್ರಮಣ್ಯ ದೇವರ ದರ್ಶನ ಪಡೆದು ರಾಷ್ಟ್ರೀಯ ಹೆದ್ದಾರಿ 75ರ ಮಾರ್ಗವಾಗಿ ಉಡುಪಿಗೆ ತೆರಳುತ್ತಿದ್ದಾಗ, ಶಿರಾಡಿ ಗ್ರಾಮದ ಅಡ್ಡಹೊಳೆ ಸಮೀಪ ಸೋಮವಾರ ತೂಫಾನ್‌ ವಾಹನಕ್ಕೆ ಗ್ಯಾಸ್ ಟ್ಯಾಂಕರ್‌ ಡಿಕ್ಕಿ ಹೊಡೆದಿದೆ. ಮೃತಪಟ್ಟವರನ್ನು ತೂಫಾನ್ […]

ಪ್ರಶ್ನೆಗಳಲೇ ಪತ್ರಕರ್ತರ ಅಸ್ತ್ರವಾಗಿದೆ: ದಿನೇಶ್ ಅಮೀನ್ ಮಟ್ಟು

Sunday, June 1st, 2014
Mattu Dinesh

ಮುಂಬಯಿ : ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳ ಮಾಧ್ಯಮ ಸಲಹಾಗಾರ, ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅವರು ಇಂದಿಲ್ಲಿ ಶನಿವಾರ ಪೂರ್ವಾಹ್ನ ಸಾಂತಕ್ರೂಜ್ ಪೂರ್ವದ ವಕೋಲ ಉತ್ಕರ್ಷ್ ನಗರ್ ಇಲ್ಲಿನ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಕಛೇರಿಗೆ ಭೇಟಿ ನೀಡಿದರು. ಕನ್ನಡಿಗರ ಪತ್ರಕರ್ತರ ಸಂಘದ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ ಅಧ್ಯಕ್ಷತೆಯಲ್ಲಿ ನಡೆಸಲಾಗಿದ್ದ ಸಭೆಯಲ್ಲಿ ಹಿರಿಯ ಪತ್ರಕರ್ತ, ಅಂಕಣಕಾರ-ಚಿಂತಕ, ರವಿ.ರಾ.ಅಂಚನ್, ಸಂಘದ ಸಲಹಾಗಾರ ಗ್ರೇಗರಿ ಎಲ್.ಡಿ’ಅಲ್ಮೇಡಾ ಮತ್ತು ಉದ್ಯಮಿ ಸುಧಾಕರ್ ಉಚ್ಚಿಲ್ ಅವರು ವೇದಿಕೆಯಲ್ಲಿ ಆಸೀನರಿದ್ದು, ದಿನೇಶ್ ಮಟ್ಟು […]

ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಕೊರಗಪ್ಪ ನಾಯ್ಕ ರಿಗೆ ಅಭಿನಂದನೆ

Saturday, May 31st, 2014
Naika

ಬಂಟ್ವಾಳ: 20ತಿಂಗಳ ಕಾಲ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಕೊರಗಪ್ಪ ನಾಯ್ಕ್ ಅವರನ್ನು ತಾಲೂಕು ಪಂಚಾಯತ್ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭ ಜಿಲ್ಲಾ ಉಪಕಾರ್ಯದರ್ಶಿ ಉಮೇಶ್, ತಾ.ಪಂ ಅಧ್ಯಕ್ಷೆ ಲಲಿತಾ ಶಿವಪ್ಪ ನಾಯ್ಕ, ಉಪಾಧ್ಯಕ್ಷ ಆನಂದ ಎ.ಶಂಭೂರು, ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ಸಿಪ್ರೀಯಂ ಮಿರಾಂಡಾ, ಜಿಲ್ಲಾ ಪಂ.ಅಧಿಕಾರಿ ಮಂಜುಳಾ, ಮ್ಯಾನೇಜರ್ ನಾಗೇಶ್, ಗೂಕುಲದಾಸ ಭಕ್ತ, ಇಂಜಿನಿಯರ್ ಗಿರೀಶ್ ಮಂಜು ವಿಟ್ಲ, ಕುಶಾಲಪ್ಪ ಗೌಡ ಉಪಸ್ಥಿತರಿದ್ದರು.

ನಳಿನ್ ಕುಮಾರ್ ಹಾಗು ಮೋದಿ ಜಯಗಳಿಸಿದ್ದಕ್ಕೆ ಕಟೀಲಿಗೆ ಪಾದಯಾತ್ರೆ ಹೊರಟ ಯುವಕ

Saturday, May 31st, 2014
Padayatre

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ನಳಿನ್ ಕುಮಾರ್ ಕಟೀಲ್ ಹಾಗೂ ಪ್ರಧಾನಿ ಮೋದಿ ಜಯಗಳಿಸಿದರೆ ಕಟೀಲು ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಪಾದಯಾತ್ರೆ ನಡೆಸುವುದಾಗಿ ಹರಕೆ ಹೊತ್ತಿದ್ದ ಪಕ್ಷದ ಸಕ್ರಿಯ ಯುವ ಕಾರ್ಯಕರ್ತ ಅವಿಷಿತ್ ರೈ ಶುಕ್ರವಾರ ಸಂಜೆ ತಮ್ಮ ಹರಕೆಯನ್ನು ಪೂರೈಸಲು ಕೊಡಿಯಾಲ್ ಬೈಲ್ ನಲ್ಲಿರುವ ಬಿಜೆಪಿ ಕಚೇರಿಯಿಂದ ಪಾದಯಾತ್ರೆ ಆರಂಭಿಸಿದರು. ನಗರದ ಅವಿಷಿತ್ ರೈ ಬಿಜೆಪಿ ಪಕ್ಷ ಹಾಗೂ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದು ಕಟೀಲ್ ಹಾಗು ಮೋದಿ ಜಯಗಳಿಸಿದಲ್ಲಿ ಪಾದಯಾತ್ರೆ ಹೊರಡುವುದಾಗಿ […]

ಕೇಂದ್ರ ರೈಲ್ವೇ ಮಂತ್ರಿ ಡಿ.ವಿ ಸದಾನಂದ ಗೌಡರಿಗೆ ಅಭಿನಂದಿಸಿದ ಕೆ.ಸಿ ಶೆಟ್ಟಿ

Friday, May 30th, 2014
KC Shetty

ಮುಂಬಯಿ : ನಗರದ ಹೆಸರಾಂತ ಕೈಗಾರಿಕೋದ್ಯಮಿ, ಲುಮೆನ್ಸ್ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಕುತ್ಪಾಡಿ ದೊಡ್ಡಮನೆ ಪಾಟೇಲರ ಮನೆತನದ ಕುತ್ಪಾಡಿ ಚಂದ್ರ ಶೆಟ್ಟಿ (ಕೆ.ಸಿ ಶೆಟ್ಟಿ) ಅವರು ತಮ್ಮ ಪರಿವಾರ ಮಿತ್ರ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾಗಿ ಭರ್ಜರಿ ಮತಗಳಿಂದ ಚುನಾಯಿತರಾಗಿ ಇದೀಗ ಎನ್ಡಿಎ ಸರಕಾರದ ಭಾರತ ರಾಷ್ಟ್ರದ 15ನೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂಪುಟದಲ್ಲಿ ಕೇಂದ್ರ ರೈಲ್ವೇ ಸಚಿವರಾಗಿ ಆಯ್ಕೆಯಾದ ಡಿ.ವಿ ಸದಾನಂದ ಗೌಡ ಅವರನ್ನು […]

ಬೆಲೆ ವಿಮೆ ವ್ಯಾಪ್ತಿಗೆ ಅಡಿಕೆ: ಪ್ರಸ್ತಾವನೆಗೆ ಡಿಸಿ ಸೂಚನೆ

Friday, May 30th, 2014
DC Mangalore

ಮಂಗಳೂರು : ಅಡಿಕೆ ಬೆಲೆಯನ್ನು ತೋಟಗಾರಿಕೆ ಇಲಾಖೆಯ ಮೂಲಕ ಬೆಳೆ ವಿಮೆ ವ್ಯಾಪ್ತಿಗೆ ತರುವ ಸಂಬಂಧ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ರಾಷ್ಟ್ರೀಯ ಕೃಷಿ ವಿಮಾ ಯೋಜನೆ ಮುಂಗಾರು 2014ರ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಮಾತನಾಡುತ್ತಿದ್ದರು. ಅಡಿಕೆ ಅಲ್ಲದೆ, ಕಾಳುಮೆಣಸು, ಕೋಕಾ, ಅನಾನಸು, ಗೇರು ಕೃಷಿಯನ್ನು ಬೆಳೆ ವಿಮಾ ವ್ಯಾಪ್ತಿಗೆ ತರಲು ಪ್ರಸ್ತಾವನೆ ಸಿದ್ಧಪಡಿಸುವಂತೆ ಅವರು ತೋಟಗಾರಿಕಾ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು. ಈಗಾಗಲೇ ದಕ್ಷಿಣ […]

ದಕ್ಷಿಣ ಕನ್ನಡ – ಉಡುಪಿ ಲೋಕಸಭೆ ಬಿಜೆಪಿಗೆ ಭರ್ಜರಿ ಗೆಲುವು

Friday, May 16th, 2014
Nalin Kumar

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳೀನ್‌ ಕುಮಾರ್‌ ಕಟೀಲ್‌ ಅವರು 1,43,000 ಲಕ್ಷ ಮತಗಳ ಅಂತರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಜನಾರ್ದನ ಪೂಚಾರಿ ಅವರನ್ನು ಸೋಲಿಸಿದ್ದಾರೆ. ನಳೀನ್‌ ಕುಮಾರ್‌ ಕಟೀಲ್‌ ಅವರು 6,42,739 ಮತಗಳನ್ನು ಪಡೆದರೆ. ಜನಾರ್ದನ ಪೂಚಾರಿ ಅವರು 4,99,030 ಮತಗಳನ್ನು ಪಡೆದರು. ದಕ್ಷಿಣಕನ್ನಡ, ಉಡುಪಿ-ಚಿಕ್ಕಮಗಳೂರಿನಲ್ಲಿ ನರೇಂದ್ರ ಮೋದಿ ಅಲೆಗೆ ಭರ್ಜರಿ ಮತಗಳು ಬಿಜೆಪಿ ತೆಕ್ಕೆಗೆ ಬಿದ್ದಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನಳಿನ್ ಕುಮಾರ್ ಕಟೀಲು ಅವರು ಸತತ ಎರಡನೇ ಬಾರಿಗೆ […]

ಕುಡಿಯುವ ನೀರು ಪೂರೈಕೆ 962 ಕಾಮಗಾರಿಗಳಿಗೆ ರೂ.51.79 ಕೋಟಿ ವೆಚ್ಚ- ತುಳಸಿ ಮದ್ದಿನೇನಿ

Wednesday, May 7th, 2014
Maddineni

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಒಟ್ಟು 962 ಕಾಮಗಾರಿಗಳನ್ನು ಕೈಗೊಂಡು ರೂ.51.79 ಕೋಟಿ ವೆಚ್ಚದಲ್ಲಿ ಪೂರ್ಣಗೊಳಿಸಲಾಗಿದೆಯೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ತುಳಸಿ ಮದ್ದಿನೇನಿ ಅವರು ತಿಳಿಸಿದ್ದಾರೆ. ಅವರು ಇಂದು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯಸರ್ಕಾರದ ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀ ಭರತ್ ಲಾಲ್ ಮೀನಾ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲೆಯ ಬರ ಪರಿಸ್ಥಿತಿ,ಕುಡಿಯುವ ನೀರು, […]

ಮಳೆಗಾಲದ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ‘ಗ್ಯಾಂಗ್‌’ ರಚನೆ

Wednesday, May 7th, 2014
Mahabala Marla

ಮಂಗಳೂರು : ಮಳೆಗಾಲದ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ 60 ವಾರ್ಡ್‌ಗಳಲ್ಲಿ ಒಂದೊಂದು ‘ಗ್ಯಾಂಗ್‌’ ರಚನೆ ಮಾಡಬೇಕು ಎಂದು ಮೇಯರ್‌ ಮಹಾಬಲ ಮಾರ್ಲ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮಂಗಳವಾರ ಪಾಲಿಕೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ಸೋಮವಾರದಿಂದ ಗ್ಯಾಂಗ್‌’ ರಚನೆ ನಡೆಯಲಿದೆ. ಮಳೆಗಾಲ ಹತ್ತಿರವಾದ್ದರಿಂದ ತುರ್ತಾಗಿ ತೋಡು, ಚರಂಡಿಗಳ ಕೆಲಸ ಮಾಡಬೇಕು. ಪ್ರತೀ ಪಾಲಿಕೆ ಸದಸ್ಯರು ಆಯಾಯ ವಾರ್ಡ್‌ಗಳಲ್ಲಿ ಮಳೆಗಾಲ ಎದುರಿಸಲು ಸಿದ್ಧತೆ ಮಾಡಬೇಕು ಎಂದು ಅವರು ಹೇಳಿದರು. ತಾಂತ್ರಿಕ ಕಾರಣಗಳನ್ನು ನೀಡಿ ಪಾಲಿಕೆ ಅಧಿಕಾರಿಗಳು […]