ಅಂಬರೀಷ್ ಆರೋಗ್ಯ ಸ್ಥಿರ

Saturday, February 22nd, 2014
Ambarish

ಬೆಂಗಳೂರು: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಚಿತ್ರನಟ, ವಸತಿ ಸಚಿವ ಅಂಬರೀಷ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಇಂದು ಬೆಳಗ್ಗೆ ಚಿಕಿತ್ಸೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಕ್ರಂ ಆಸ್ಪತ್ರೆಯ ಶ್ವಾಸಕೋಶ ತಜ್ಞ ಡಾ.ಸತೀಶ್ ನಾಯಕ್ ಅವರು, ಸದ್ಯ ಅಂಬರೀಷ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಇನ್ನು ಎರಡು, ಮೂರು ದಿನದಲ್ಲಿ ಸಂಪೂರ್ಣ ಗುಣಮುಖರಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಅಂಬರೀಷ್ ಅವರಿಗೆ ಈಗ ವೆಂಟಿಲೇಟರ್ ಅಳವಡಿಸಲಾಗಿದ್ದು, ವೆಂಟಿಲೇಟರ್ ಮೂಲಕವೇ […]

ಲೋಕಸಮರ: ಬಿಹಾರ, ಉ.ಪ್ರದೇಶದಲ್ಲಿ ಬಿಜೆಪಿಗೆ ಶೇ.50ರಷ್ಟು ಸ್ಥಾನ

Saturday, February 22nd, 2014
Narendra-Modi

ನವದೆಹಲಿ: ದೇಶಾದ್ಯಂತ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅಲೆಯಲ್ಲಿ ತೇಲುತ್ತಿರುವ ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಶೇ.50ರಷ್ಟು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಖಾಸಗಿ ಸುದ್ದಿ ವಾಹಿನಿ ನಡೆಸಿದ ಚುನಾವಣಾ ಸಮೀಕ್ಷೆ ಹೇಳಿದೆ. ಎಲ್ಲೆಡೆ ಯುಪಿಎ ವಿರೋಧಿ ಮತ್ತು ಮೋದಿ ಪರ ಅಲೆ ಇರುವುದರಿಂದ ಈ ಎರಡು ರಾಜ್ಯಗಳಲ್ಲಿ ಬಿಜೆಪಿ ಒಟ್ಟು 61 ಸ್ಥಾನಗಳನ್ನು ಪಡೆದುಕೊಳ್ಳಲಿದೆ. ಉತ್ತರ ಪ್ರದೇಶದಲ್ಲಿ ಒಟ್ಟು 80 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 40 ಕಡೆ ಗೆಲವು […]

ಲೋಕಸಮರದತ್ತ ನಂದನ್ ಚಿತ್ತ, ‘ಆಧಾರ್‌’ಗೆ ರಾಜಿನಾಮೆ

Friday, February 21st, 2014
Nandan-Nilekani

ನವದೆಹಲಿ: ವಿಶಿಷ್ಟ ಗುರುತಿನ ಪತ್ರ ಪ್ರಾಧಿಕಾರ(ಆಧಾರ್)ದ ಅಧ್ಯಕ್ಷ ಸ್ಥಾನಕ್ಕೆ ನಂದನ್ ನಿಲೇಕಣಿ ಅವರು ರಾಜಿನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದ ನಂದನ್ ನಿಲೇಕಣಿ ಅವರು ಯುಐಡಿಐ (ಆಧಾರ್) ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ. ಇನ್ಫೋಸಿಸ್ ಸಂಸ್ಥೆ ಸಹ ಸಂಸ್ಥಾಪಕರಾಗಿದ್ದ ನಂದನ್ ನಿಲೇಕಣಿ ಅವರನ್ನು 2009ರಲ್ಲಿ ಕೇಂದ್ರದ ಯುಪಿಎ ಸರ್ಕಾರ ‘ಆಧಾರ್‌’ ಯೋಜನೆಯ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ನಂತರ ಅವರು ತಮ್ಮ ಇನ್ಫೋಸಿಸ್ ಸಂಸ್ಥೆಯನ್ನು ತೊರೆದಿದ್ದರು. ದೇಶದ ಅತಿದೋಡ್ಡ ಗುರುತಿನ ಚೀಟಿ ಯೋಜನೆಯಾಗಿರುವ ‘ಆಧಾರ್‌’ ಯೋಜನೆ, […]

ನಟಿ ರಮ್ಯಾ ಜತೆ ಮದ್ವೆಯಾಗಿರುವುದಾಗಿ ಹೇಳಿದ್ದ ‘ಹುಚ್ಚ’ ವೆಂಕಟೇಶ್ ಬಂಧನ

Friday, February 21st, 2014
Ramya Venktesh

ಬೆಂಗಳೂರು: ಸಂಸದೆ ಹಾಗೂ ನಟಿ ರಮ್ಯಾ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ‘ಹುಚ್ಚ ವೆಂಕಟ್‌’ ಚಿತ್ರದ ನಿರ್ದೇಶಕ, ನಿರ್ಮಾಪಕ ಹಾಗೂ ನಾಯಕ ನಟ ವೆಂಕಟೇಶ್ ಅವರನ್ನು ಬೆಂಗಳೂರು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ರಮ್ಯಾ ಅವರನ್ನು ತಾನು ಬನಶಂಕರಿ ದೇವಸ್ಥಾನದಲ್ಲಿ ಮದುವೆಯಾಗಿರುವುದಾಗಿ ವೆಂಕಟೇಶ್ ಹೇಳಿಕೆ ನೀಡಿದ್ದರು. ಈ ಸಂಬಂಧ ಎರಡು ದಿನಗಳ ಹಿಂದೆ ನಟಿ ರಮ್ಯಾ ಅವರು ವೆಂಕಟೇಶ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಪೊಲೀಸರು […]

ಪರೀಕ್ಷೆಗೆ ಸೀಮಿತವಾಗದಿರಲಿ ಸಿದ್ಧತೆ

Friday, February 21st, 2014
S.Rangappa

ಮೈಸೂರು: ವಿದ್ಯಾರ್ಥಿಗಳು ಕೇವಲ ಸ್ಪರ್ಧಾತ್ಮಕ ಪರೀಕ್ಷೆಗಷ್ಟೇ ಸೀಮಿತವಾಗದೆ ಎಲ್ಲ ವಿಷಯಗಳಲ್ಲೂ ವಿಶೇಷ ಕೌಶಲ್ಯ ಬೆಳೆಸಿಕೊಂಡು ಪರಿಣತಿ ಸಾಧಿಸುವಂತೆ ಮೈಸೂರು ವಿವಿ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಕರೆ ನೀಡಿದರು. ಮೈಸೂರು ವಿವಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ವಿಶೇಷ ಘಟಕ, ವಿದ್ಯಾರ್ಥಿ ಕ್ಷೇಮಾಪಾಲನ ಕೇಂದ್ರ ಹಾಗೂ ಸಾಮರ್ಥ್ಯಾಭಿವೃದ್ಧಿ ಮತ್ತು ಉದ್ಯೋಗಾವಕಾಶಗಳ ಸೇವಾ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಗುರುವಾರ ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಏರ್ಪಡಿಸಿದ್ದ ಬೌದ್ಧಿಕ ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಕೇವಲ […]

ರಾಜೀವ್ ಹಂತಕರ ಬಿಡುಗಡೆ ಸದ್ಯಕ್ಕಿಲ್ಲ

Friday, February 21st, 2014
P.-Sathasivam

ನವದೆಹಲಿ/ಚೆನ್ನೈ: ಸದ್ಯಕ್ಕೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹಂತಕರಿಗೆ ಬಿಡುಗಡೆ ಭಾಗ್ಯ ಇಲ್ಲ… ತಮಿಳುನಾಡು ಸರ್ಕಾರದ ನಿರ್ಧಾರ ಮತ್ತು ರಾಜೀವ್ ಹಂತಕರ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಕೆ ಮಾಡಿದ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ಕುರಿತಂತೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತಮಿಳುನಾಡು ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿದೆ. ‘ಕೈದಿಗಳ ಬಿಡುಗಡೆ ಸಂಬಂಧ ತಮಿಳುನಾಡು ಸರ್ಕಾರ ಸೂಕ್ತ ವಿಧಿ ವಿಧಾನಗಳನ್ನು ಅನುಸರಿಸಿಲ್ಲ. ಹೀಗಾಗಿ ಕೋರ್ಟ್ ಜಯಲಲಿತಾ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿದೆ’ […]

ಲೋಕಸಮರ: ಶಿವಮೊಗ್ಗದಿಂದ ಗೀತಾ ಶಿವರಾಜ್ ಕುಮಾರ್ ಸ್ಪರ್ಧೆ

Friday, February 21st, 2014
Geetha-Shivaraj-Kumar

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಖ್ಯಾತ ನಟ ಶಿವರಾಜ್ ಕುಮಾರ್ ಅವರ ಪತ್ನಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಶಿವಮೊಗ್ಗ ಕ್ಷೇತ್ರ ಈ ಬಾರಿ ಜಿದ್ದಾ ಜಿದ್ದಿನ ಕಣವಾಗಿ ಮಾರ್ಪಡಲಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದು, ಅವರ ವಿರುದ್ಧ ಪ್ರಬಲ ಅಭ್ಯರ್ಥಿಗಾಗಿ ಹುಡುಕಾಟ ನಡೆಸಿದ್ದ ಜೆಡಿಎಸ್ ಅಂತಿಮವಾಗಿ ಗೀತಾ […]

ಫೇಸ್ ತೆಕ್ಕೆಗೆ ವಾಟ್ಸ್‌ಆ್ಯಪ್

Friday, February 21st, 2014
ಫೇಸ್ ತೆಕ್ಕೆಗೆ ವಾಟ್ಸ್‌ಆ್ಯಪ್

ನ್ಯೂಯಾರ್ಕ್: ವಿಶ್ವಾದ್ಯಂತ ಮೊಬೈಲ್ ಮೆಸೇಜಿಂಗ್‌ನಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ವಾಟ್ಸ್‌ಆ್ಯಪ್ ಅನ್ನು ಸಾಮಾಜಿಕ ಜಾಲತಾಣ ಫೇಸ್‌ಬುಕ್ ತನ್ನ ಮಡಿಲಿಗೆ ಸೇರಿಸಿಕೊಳ್ಳಲಿದೆ. ಬರೋಬ್ಬರಿ 12 ಲಕ್ಷ ಸಾವಿರ ಕೋಟಿ (19 ಶತಕೋಟಿ ಡಾಲರ್) ನೀಡಿ ಫೇಸ್‌ಬುಕ್ ಸ್ಥಾಪಕ ಮಾರ್ಕ್ ಝುಕರ್‌ಬರ್ಗ್ ವಾಟ್ಸ್‌ಆ್ಯಪ್ ಅನ್ನು ಖರೀದಿಸಲಿದ್ದಾರೆ. ಮೊಬೈಲ್ ತಂತ್ರಜ್ಞಾನ ವಲಯದಲ್ಲೇ ಆದ ದೊಡ್ಡ ಮೊತ್ತದ ಖರೀದಿ ಪ್ರಕ್ರಿಯೆ. ಒಪ್ಪಂದ ಪ್ರಕಾರ ಝುಕರ್‌ಬರ್ಗ್ ಮೊದಲು ವಾಟ್ಸ್‌ಆ್ಯಪ್ ಸ್ಥಾಪಕ ಜಾನ್ ಕೌಮ್‌ಗೆ  4 ಶತಕೋಟಿ ಡಾಲರ್ ನಗದಲ್ಲಿ ನೀಡಲಿದ್ದಾರೆ. ನಂತರ 12 […]

ವಿಧಾನಸೌಧ ಮುಂದೆ ಒಂದೇ ಕುಟುಂಬದ 6 ಮಂದಿ ಆತ್ಮಹತ್ಯೆಗೆ ಯತ್ನ

Friday, February 21st, 2014
Vidhana-Soudha

ಬೆಂಗಳೂರು: ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ತುಮಕೂರು ಮೂಲದ ಕುಟುಂಬವೊಂದು ವಿಧಾನಸೌಧದ ಪಕ್ಕದಲ್ಲಿರುವ ವಿಕಾಸಸೌಧದ ಮುಂದೆ ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಘಟನೆ ಶುಕ್ರವಾರ ನಡೆಯಿತು. ನಿವೃತ್ತ ಎಸಿಪಿ ಸುಬ್ಬಣ್ಣ ವಿರುದ್ಧ ಕಿರುಕುಳ ಆರೋಪ ಮಾಡಿರುವ ಕುಟುಂಬ, ಇಂದು ಬೆಳಗ್ಗೆ ವಿಕಾಸಸೌಧದ ಮುಂದೆ ಕುಟುಂಬದ ಆರು ಮಂದಿ ಪೆಟ್ರೋಲ್ ಕ್ಯಾನ್ ಹಿಡಿದುಕೊಂಡು ಕಾರಿನಲ್ಲಿ ಕುಳಿತು, ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದರು. ಆದರೆ ಸ್ಥಳದಲ್ಲಿದ್ದ ಪೊಲೀಸರ ಮಧ್ಯಪ್ರವೇಶಿಸಿ ಆತ್ಮಹತ್ಯೆ ಮಾಡಿಕೊಳ್ಳದಂತೆ ಮನವೊಲಿಸಿದರು. […]

ಪದೇ ಪದೆ ಕಲಾಪ ಮುಂದೂಡಿಕೆ; ಪ್ರತಿಭಟನೆ ಮಧ್ಯೆ ತೆಲಂಗಾಣ ಬಿಲ್ ಪಾಸ್; 29ನೇ ರಾಜ್ಯ ಉದಯ

Friday, February 21st, 2014
ಪದೇ ಪದೆ ಕಲಾಪ ಮುಂದೂಡಿಕೆ; ಪ್ರತಿಭಟನೆ ಮಧ್ಯೆ ತೆಲಂಗಾಣ ಬಿಲ್ ಪಾಸ್; 29ನೇ ರಾಜ್ಯ ಉದಯ

ನವದೆಹಲಿ: ದೇಶಕ್ಕೆ ಇನ್ನೊಂದು ರಾಜ್ಯದ ಸಂತಸ. 29ನೇ ರಾಜ್ಯವಾಗಿ ತೆಲಂಗಾಣ ಉದಯಕ್ಕೆ ಗುರುವಾರ ರಾಜ್ಯಸಭೆ ಸಾಕ್ಷಿಯಾಯಿತು. ಮಂಗಳವಾರವಷ್ಟೇ ಲೋಕಸಭೆಯಲ್ಲಿ ತೆಲಂಗಾಣ ಮಸೂದೆಗೆ ಒಪ್ಪಿಗೆ ಸಿಕ್ಕಿದ್ದು, ಎರಡು ದಿನಗಳ ಹಗ್ಗಜಗ್ಗಾಟದ ನಡುವೆ ಗುರುವಾರ ರಾತ್ರಿ 08.07 ಗಂಟೆಗೆ ಹೊಸ ರಾಜ್ಯದ ಉದಯವಾಯಿತು. ಆದರೆ ಈ ಮಸೂದೆಗೆ ರಾಷ್ಟ್ರಪತಿ ಅಂಕಿತ ಬೇಕು. ಆಗಷ್ಟೇ ಈ ರಾಜ್ಯ ಉದಯವಾಗಿದೆ ಎಂಬುದು ಅಧಿಕೃತವಾಗುತ್ತದೆ. ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಮಾತಿನ ಸಮರ ನಡೆದರೂ ಕೂಡ, ಮಸೂದೆಗೆ ಬೆಂಬಲ ನೀಡುತ್ತೇವೆ ಎಂಬ […]