ಮೂಡಬಿದ್ರೆಯ ಗುರು ಬಸದಿ ಪಂಚಲೋಹದ ವಿಗ್ರಹಕಳ್ಳರ ಬಂಧನ

Saturday, July 13th, 2013
Guru Basadi Idol Theft

ಮೂಡಬಿದ್ರೆ: ಜೂನ್ 17ರಂದು ರಾತ್ರಿ ಮೂಡಬಿದ್ರೆಯ ಗುರು ಬಸದಿಯಲ್ಲಿ ಬೆಲೆಬಾಳುವ ವಿಗ್ರಹಗಳನ್ನು ಕಳವು ಮಾಡಿದ್ದ ಇಬ್ಬರು ವಿಗ್ರಹಕಳ್ಳರನ್ನು ಕೋಲಾರ ಪೊಲೀಸರು ಶುಕ್ರವಾರ ಕರ್ನಾಟಕ ಮತ್ತು ಆಂಧ್ರಪ್ರದೇಶ ಗಡಿಯಲ್ಲಿ ಬಂಧಿಸಿದ್ದಾರೆ. ಕರ್ನಾಟಕ  ಗಡಿಪ್ರದೇಶವಾದ ಕರ್ನೂಲ್ ನಲ್ಲಿ ಒರಿಸ್ಸಾ ಮೂಲದ ದಾಸ್ ಮತ್ತು ಪ್ರಮೋದ್ ಎಂಬವರನ್ನು ಕೋಲಾರ ಪೊಲೀಸರು ಬಂಧಿಸಿದ್ದಾರೆ. ಶ್ರೀ ಆದಿನಾಥ ಸ್ವಾಮಿ ಪಂಚಲೋಹದ ವಿಗ್ರಹವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಪಂಚಲೋಹದ ವಿಗ್ರಹದ ಮೌಲ್ಯ ಸುಮಾರು ಒಂದು ಸಾವಿರ ಕೋಟಿ ಎಂದು ಅಂದಾಜಿಸಲಾಗಿದೆ.  ಕಳ್ಳತನವಾಗಿರುವ ಇತರ ವಿಗ್ರಹಗಳನ್ನು ಇನ್ನಷ್ಟೇ ಪತ್ತೆ […]

ತಾಯಿ ಹಾಗೂ ಪತ್ನಿಯನ್ನು ಬರ್ಬರವಾಗಿ ಕತ್ತಿಯಿಂದ ಕಡಿದು, ಆತ್ಮಹತ್ಯೆ ಮಾಡಿದ ಸುಪರ್ ಮಾರ್ಕೆಟ್ ಉದ್ಯೋಗಿ

Saturday, July 13th, 2013
Bantwala Murder

ಬಂಟ್ವಾಳ : ಸುಪರ್ ಮಾರ್ಕೆಟ್ ಉದ್ಯೋಗಿಯೊಬ್ಬ  ತನ್ನ ತಾಯಿ ಹಾಗೂ ಪತ್ನಿಯನ್ನು ಬರ್ಬರವಾಗಿ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿಯ ಕೊಡಾಜೆ ಪಂತ್ತಡ್ಕ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಕೊಡಾಜೆ ಪಂತಡ್ಕ ನಿವಾಸಿ ಅಬ್ದುಲ್ ಹಮೀದ್ ಎಂಬಾತನೇ ಈ ಕೃತ್ಯ ವೆಸಗಿ, ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕತ್ತಿಯಿಂದ ಹಲ್ಲೆಗೀಡಾಗಿ ತೀವ್ರ ಗಾಯಗಳಾಗಿರುವ ಹಮೀದ್ ಪತ್ನಿ ಅಸ್ಮಾ(28) ಹಾಗೂ ತಾಯಿ ಮರಿಯಮ್ಮ(55) ರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು […]

ಮಂಗಳೂರಿನ ರೈಲ್ವೇ ಟ್ರಾಕ್ ನಲ್ಲಿ ಚೆನ್ನೈ ಪ್ರೇಮಿಗಳಿಂದ ಆತ್ಮ ಹತ್ಯೆ ಯತ್ನ

Friday, July 12th, 2013
Chennai Lovers sucide atempt

ಮಂಗಳೂರು :  ಮಂಗಳೂರಿನ ಒಲ್ಡ್‌ಕೆಂಟ್ ಸಮೀಪದ ರೈಲ್ವೇ ಟ್ರಾಕ್ ನಲ್ಲಿ ಚೆನ್ನೈ ಮೂಲದ ಯುವಕ ಹಾಗೂ ಯುವತಿ ಆತ್ಮ ಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ಮದ್ಯಾಹ್ನ ನಡೆದಿದೆ. ಯುವಕ ಸುಮಾರು 24 ವರ್ಷ ಹಾಗೂ ಯುವತಿ ಸುಮಾರು 18 ವರ್ಷದ ಆಸುಪಾಸಿನವರಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರಿಬ್ಬರ ದೇಹದ ಮೇಲೆ ಚಾಕುವಿನಿಂದ ಇರಿದ ಗಾಯದ ಗುರುತುಗಳು ಕಂಡು ಬಂದಿದ್ದು, ಇಬ್ಬರೂ ವಿಷ ಸೇವಿಸಿದ್ದರು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಇವರಿಬ್ಬರೂ ಪ್ರೀತಿಸುತ್ತಿದ್ದು ಆತ್ಮ ಹತ್ಯೆ ಗೆ ಕಾರಣ ತಿಳಿದು ಬಂದಿಲ್ಲ. […]

ಗ್ರಾಮಾಂತರ ರಿಕ್ಷಾಗಳ ನಗರ ಪ್ರವೇಶ ವಿರೋಧಿಸಿ ವಿವಿಧ ರಿಕ್ಷಾ ಸಂಘಟನೆಗಳಿಂದ ಪ್ರತಿಭಟನೆ

Friday, July 12th, 2013
auto drivers protest

ಮಂಗಳೂರು: ಗ್ರಾಮಾಂತರ ರಿಕ್ಷಾಗಳು ಮಂಗಳೂರು ನಗರವನ್ನು ಪ್ರವೇಶಿಸುವುದನ್ನು ವಿರೋಧಿಸಿ ಮಂಗಳೂರಿನ ವಿವಿಧ ರಿಕ್ಷಾ ಚಾಲಕ ಮತ್ತು ಮಾಲಕರ ಸಂಘಟನೆಗಳು ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಶುಕ್ರವಾರ ಬೆಳಿಗ್ಗೆ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಜ್ಯೊತಿ ವೃತ್ತ ದಿಂದ ಮೆರವಣಿಗೆ ಮೂಲಕ ಬಂದು ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು. ದ.ಕ ಜಿಲ್ಲಾ ಆಟೋರಿಕ್ಷಾ ಸಮನ್ವಯ ಸಮಿತಿಯ ಅಧ್ಯಕ್ಷರಾದ ಅಲಿಹಸನ್ ಮಾತನಾಡಿ,  ಗ್ರಾಮಾಂತರ ರಿಕ್ಷಾಗಳು ಕಾನೂನು ಬಾಹಿರವಾಗಿ ನಗರದೊಳಗೆ ಪ್ರವೇಶಿಸಿ ಬಾಡಿಗೆ ಮಾಡುತ್ತಿದೆ.  ಗ್ರಾಮದಲ್ಲಿ ಸುಮಾರು 20  ಸಾವಿರ ರಿಕ್ಷಾಗಳು ಒಡಾಡುತ್ತಿವೆ. […]

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2013ನೇ ಸಾಲಿನ ಚೊಚ್ಚಲ ಬಜೆಟ್ ಮಂಡನೆ

Friday, July 12th, 2013
Siddu Budget

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ಮಧ್ಯಾಹ್ನ 12.30ಕ್ಕೆ ತಮ್ಮ ಚೊಚ್ಚಲ ಹಾಗೂ 2013ನೇ ಸಾಲಿನ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರು, ಜನರ ಅವಶ್ಯಕತೆಗಳನ್ನು ಈಡೇರಿಸುವುದು ತಮ್ಮ ಕರ್ತವ್ಯ ಎಂದು ಹೇಳಿದರು. ರಾಜ್ಯದ ಜನರ ನೀರಿಕ್ಷೆಗಳು ಹೆಚ್ಚು ಇಲ್ಲ. ಆದರೆ ಹಿಂದಿನ ಸರ್ಕಾರ ಜನರ ನಿರೀಕ್ಷೆಯನ್ನು ಹುಸಿ ಮಾಡಿದೆ. ಜನತೆಗೆ ಉತ್ತಮ ನೀರು, ಊಟ, ಮನೆ, ಮಾರುಕಟ್ಟೆ, ವಿದ್ಯುತ್ ಮತ್ತು ಉತ್ತಮ ರಸ್ತೆ ಒದಗಿಸುವುದು ನಮ್ಮ ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದರು. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜನರ […]

ರಾಜ್ಯ ಕಾಂಗ್ರೆಸ್ ಸರಕಾರ ಕಳ್ಳಕಾಕರ ಸರಕಾರವಾಗಿದೆ : ನಳಿನ್ ಕುಮಾರ್

Friday, July 12th, 2013
Bantwal BJP

ಬಂಟ್ವಾಳ: ರಾಜ್ಯ ಸರಕಾರದ ಹೊರಡಿಸಿರುವ ಪಂಚಾಯತ್ ರಾಜ್ ಅಧಿನಿಯಮ ತಿದ್ದುಪಡಿ ನೀತಿಯನ್ನು ವಿರೋಧಿಸಿ ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ವತಿಯಿಂದ ಗುರುವಾರ ಬಿ.ಸಿ ರೋಡಿನ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಅಧಿಕಾರ ಬಂದು ಎರಡು ತಿಂಗಳಲ್ಲಿಯೇ  ಪಂಚಾಯತ್ ಸದಸ್ಯರ ಹಕ್ಕನ್ನು ಮೊಟಕುಗೊಳಿಸಲು ಮುಂದಾಗಿರುವ ಕ್ರಮ ಸರಿಯಲ್ಲ, ಪಂಚಾಯತ್ ರಾಜ್ ಕಾಯಿದೆಗೆ ತಿದ್ದುಪಡಿ ತರುವ ಕರಾಳ ಮಸೂದೆಯನ್ನು ರಾಜ್ಯ ಸರಕಾರ ಜಾರಿಗೊಳಿಸಲು ಮುಂದಾಗಿರುವುದು ಅಧಿಕಾರ ವಿಕೇಂದ್ರೀಕರಣದ ವ್ಯವಸ್ಥೆಯನ್ನು ಕಿತ್ತುಗೊಳ್ಳುವ ಪ್ರಜಾತಂತ್ರ ವಿರೋಧಿ ನಿಲುವಾಗಿದೆ ಎಂದು ಸಂಸದ […]

ಯೋಜನೆಗಳ ಪ್ರಗತಿ ಲೋಪಕ್ಕೆ ಅಧಿಕಾರಿಗಳೇ ಹೊಣೆಗಾರರು ; ಕೆಡಿಪಿ ಸಭೆಯಲ್ಲಿ ರಮಾನಾಥ ರೈ

Friday, July 12th, 2013
KDP review meeting

ಮಂಗಳೂರು: ದ.ಕ. ಜಿ. ಪಂ. ಸಭಾಂಗಣದಲ್ಲಿ ಜಿಲ್ಲಾ ತ್ತೈಮಾಸಿಕ ಕೆಡಿಪಿ ಸಭೆ ಗುರುವಾರ ಸಚಿವ ರಮಾನಾಥ ರೈ ಅವರ ಅಧ್ಯಕ್ಷತೆಯಲ್ಲಿ ಜರಗಿತು. ಬಸವ ವಸತಿ ಯೋಜನೆ, ಅಂಬೇಡ್ಕರ್‌ ವಸತಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಪ್ರಗತಿ ತೀರಾ ಕಡಿಮೆಯಾಗಿದೆ. ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ ವಸತಿಗಳು ಬಡವರಿಗೆ ಸಕಾಲದಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಇದರಲ್ಲಾಗುವ ಲೋಪಕ್ಕೆ ಅಧಿಕಾರಿಗಳೇ ಹೊಣೆಗಾರರು ಎಂದು ರಾಜ್ಯ ಅರಣ್ಯ, ಪರಿಸರ ಖಾತೆ ಮತ್ತು ದ. ಕ.ಜಿಲ್ಲಾ ಉಸ್ತುವಾರಿ ಸಚಿವಬಿ. ರಮಾನಾಥ ರೈ ಎಚ್ಚರಿಸಿದ್ದಾರೆ. ರಾಜೀವ ಗಾಂಧಿ […]

ತಲಪಾಡಿ ನದಿ ತಟದಲ್ಲಿ ಮಗುವಿನ ಮೃತ ದೇಹ ಪತ್ತೆ

Thursday, July 11th, 2013
Talapady Infant Killed

ಮಂಗಳೂರು : ಕೆಲವೇ ದಿನಗಳ ಹಿಂದಷ್ಟೇ ಜನಿಸಿರಬಹುದಾದ ಪುಟ್ಟ ಮಗುವೊಂದು ತಲಪಾಡಿ ನದಿಯಲ್ಲಿ ಸತ್ತುಬಿದ್ದಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಸ್ಥಳೀಯರು ಇಂದು ಬೆಳಿಗ್ಗೆ  ನದಿ ತಟದಲ್ಲಿ ಮೃತ ಮಗುವನ್ನು ಪತ್ತೆ ಹಚ್ಚಿದರು. ಬಳಿಕ ಪಂಚಾಯತ್ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದಾರೆ. ಮಗು ಗಂಡಾಗಿದ್ದು,  ಮಗುವಿನ ದೇಹದ ಮೇಲೆ ಕೆಲವು ಗಾಯದ ಗುರುತುಗಳಿದ್ದು ಅದು ಸಾವಿನ ನಂತರ ಉಂಟಾಗಿರಬಹುದೆಂದು ಪೊಲೀಸರು ಊಹಿಸಿದ್ದಾರೆ. ಇದೀಗ ಮಗುವಿನ ಶವವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸಲಾಗಿದೆ, ಮೃತ ಮಗುವಿನ ಹೆತ್ತವರ ಬಗ್ಗೆ ಯಾವುದೇ ಸುಳಿವಿಲ್ಲ. ಈ […]

ಕಾಡಿನಿಂದ ನಾಡಿಗೆ ಬಂದು ದನ, ಕರುಗಳನ್ನು ತಿನ್ನುತ್ತಿದ್ದ ಚಿರತೆ ಅರಣ್ಯ ಇಲಾಖೆಯ ಬೋನಿಗೆ

Thursday, July 11th, 2013
leopard

ಬಂಟ್ವಾಳ: ಚೆನ್ನೈತ್ತೋಡಿ ಗ್ರಾಮದ ಅಂಗಡಿ ಪಲ್ಕೆ ಕುಲಾಲು ಎಂಬಲ್ಲಿ ಕಾಡಿನಿಂದ ನಾಡಿಗೆ ಬಂದು ದನ, ಕರುಗಳನ್ನು ತಿನ್ನುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆಯ ಬೋನಿನಲ್ಲಿ ಸಿಕ್ಕಿ ಬಿದ್ದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಮಾಧವ ಎಂಬವರ ಜಮೀನಿಗೆ ದಾಳಿ ಮಾಡುತ್ತಿದ್ದ ಈ ಚಿರತೆ ದನ, ಕರುಗಳನ್ನು ತಿಂದಿತ್ತು. ಇದರಿಂದ ಬೇಸತ್ತ ಮಾಧವ ಅವರು  ಅರಣ್ಯ ಇಲಾಖೆಯ ನೆರವಿನಲ್ಲಿ ಚಿರತೆಗೆ ಬೋನು ಇರಿಸಿದ್ದು, ನಿರೀಕ್ಷೆಯಂತೆ ನಾಯಿಯನ್ನು ತಿನ್ನಲು ಬಂದ ಚಿರತೆ ಬೋನಿನಲ್ಲಿ ಸಿಕ್ಕಿ ಬಿದ್ದಿದೆ. ಚಿರತೆ ಬೋನಿಗೆ ಸಿಕ್ಕಿಬಿದ್ದ ಸುದ್ದಿ ತಿಳಿದು […]

ನಿವೃತ್ತ ಸೈನಿಕನ ಪತ್ನಿ ತನ್ನ ಮಗಳನ್ನು ಬಾವಿಗೆ ಎಸೆದು ತಾನು ಆತ್ಮಹತ್ಯೆ !

Thursday, July 11th, 2013
Bantwal Death

ಬಂಟ್ವಾಳ:  ನಿವೃತ್ತ ಸೈನಿಕ ನವೀನ್ ಚಂದ್ರ ಎಂಬವರ ಪತ್ನಿ ಪ್ರತಿಮಾ(32) ತನ್ನ ಮಗಳು ದಿಯಾ(9) ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬಂಟ್ವಾಳ ಸಮೀಪದ ಮೆಲ್ಕಾರ್ ಎಂಬಲ್ಲಿ ನಡೆದಿದೆ. ಗುರುವಾರ ಮುಂಜಾನೆ ಈರ್ವರ ಶವ  ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ, ಕೌಟುಂಬಿಕ ವಿರಸದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತದೆಯಾದರೂ, ಸ್ಪಷ್ಟ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಮೆಲ್ಕಾರ್ ನಲ್ಲಿ ವಾಸ್ತವ್ಯ ವಿರುವ ಪ್ರತಿಮಾ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ದಾದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಗಳು ದಿಯಾ ಪಾಣೆಮಂಗಳೂರು […]