ಗುಡಿಸಲು ಮುಕ್ತ ರಾಜ್ಯವನ್ನಾಗಿ ಪರಿವರ್ತಿಸಲು ಕ್ರಾಂತಿಕಾರಿ ಹೆಜ್ಜೆ : ಪಾಲೆಮಾರ್‌

Tuesday, August 16th, 2011
Independence Day/ಸ್ವಾತಂತ್ರೋತ್ಸವ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನೆಹರೂ ಮೈದಾನದಲ್ಲಿ ಜರಗಿದ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ರಾಜ್ಯ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೃಷ್ಣ ಜೆ. ಪಾಲೆಮಾರ್‌ ನೆರವೇರಿಸಿದರು. ತೆರೆದ ಜೀಪಿನಲ್ಲಿ ಪರೇಡ್‌ ವೀಕ್ಷಿಸಿದ ಅನಂತರ ಅವರು ಸ್ವಾತಂತ್ರೋತ್ಸವದ ಸಂದೇಶ ನೀಡಿದರು. ಕಳೆದ ಮೂರು ವರ್ಷ ಎರಡು ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ವಿವಿಧ ಯೋಜನೆಗಳ ಮೂಲಕ ಒಟ್ಟು 1,712.06 ಕೋಟಿ ರೂ. ಮಿಕ್ಕಿದ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಗ್ರಾಮೀಣ ಮಟ್ಟದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು 47.51 […]

ಹುಟ್ಟು ಹಬ್ಬದ ಹೆಸರಿನಲ್ಲಿ ಗಾಂಜಾ ಪಾರ್ಟಿ ನಡೆಸುತ್ತಿರುವ ರೆಸಾರ್ಟ್

Monday, August 15th, 2011
Resort/ ರೆಸಾರ್ಟ್

ಉಳ್ಳಾಲ : ಉಚ್ಚಿಲದ ಬೀಚ್‌ ರಸ್ತೆಯ ಮಹಾರಾಣಿ ಫಾರ್ಮ್ ನಲ್ಲಿ ರೇವ್‌ ಪಾರ್ಟಿಯನ್ನು ನಡೆಸುತ್ತಿದ್ದ ಯುವಕರಿಗೆ ಸ್ಥಳೀಯ ಬಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿ ರೆಸಾರ್ಟ್‌ನ ಸೊತ್ತುಗಳನ್ನು ದ್ವಂಸ ಮಾಡಿದ್ದಾರೆ. ಪಾರ್ಟಿ ಹೆಸರಿನಲ್ಲಿ ಮಾದಕವಸ್ತು ಸೇವಿಸಿ ತಡರಾತ್ರಿವರೆಗೆ ಯುವಕರ ಗುಂಪೊಂದು ಮೋಜು ನಡೆಸುತ್ತಿತ್ತು. ಸ್ಥಳೀಯ ಬಜರಂಗದಳದ ಸುಮಾರು 30ಕ್ಕೂ ಅಧಿಕ ಸದಸ್ಯರ ತಂಡ ರೆಸಾರ್ಟ್‌ಗೆ ಬಂದು ವಿಚಾರಣೆ ನಡೆಸಿತ್ತು. ಈ ಸಂದರ್ಭದಲ್ಲಿ ಪಾರ್ಟಿಯಲ್ಲಿದ್ದ ಯುವಕರು ಉಡಾಫೆಯಾಗಿ ವರ್ತಿಸಿದ್ದು, ಇದರಿಂದ ಕೆರಳಿದ ಬಜರಂಗ ದಳದ ಕಾರ್ಯಕರ್ತರು ಪಾರ್ಟಿಯಲ್ಲಿ ನಿರತರಾಗಿದ್ದ ಯುವಕರ […]

ತವರು ಜಿಲ್ಲೆಗೆ ಹೆಚ್ಹಿನ ಆದ್ಯತೆ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ

Monday, August 15th, 2011
CM DV Sadananda Gowda

ಮಂಗಳೂರು : ದ.ಕ ಕಾರ್ಯನಿರತ ಪತ್ರಕರ್ತರ ಸಂಘ ಭಾನುವಾರ ಪತ್ರಿಕಾ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ ನೂತನ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಮಾತನಾಡಿ ಇಂದಿನ ಪರಿಸ್ಥಿತಿಯಲ್ಲಿ ಲೋಕಾಯುಕ್ತ ಸಂಸ್ಥೆಗೆ ಹೆಚ್ಹಿನ ಜವಾಬ್ದಾರಿಯನ್ನು ಕೊಟ್ಟು, ಉತ್ಕೃಷ್ಟ ಸಂಸ್ಥೆಯಾಗಿ ಕೆಲಸ ಮಾಡವಂತೆ ಕ್ರಮ ಕೈಗೊಳ್ಳಲಾಗಿದೆ, ಅದಕ್ಕಾಗಿ ಹೆಚ್ಚಿನ ಅಧಿಕಾರ ನೀಡುವುದು ಸರಿಯಾದ ಕ್ರಮ. ಈ ಬಗ್ಗೆ ಪಕ್ಷದ ಹಿರಿಯರೊಂದಿಗೆ, ಹಿರಿಯ ಸಚಿವರರೊಂದಿಗೆ ಚರ್ಚೆ ಮಾಡಿ, ಕಾನೂನಿನ ಇತಿಮಿತಿಯೊಳಗೆ ಏನು ಮಾಡಲು ಸಾಧ್ಯ ಅನ್ನುವುದನ್ನು ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಗಳು ನುಡಿದರು. […]

ನೂತನ ಮುಖ್ಯ ಮಂತ್ರಿಯವರಿಂದ ತವರು ಜಿಲ್ಲೆಗೆ ಮೊದಲ ಭೇಟಿ

Saturday, August 13th, 2011
DV Sadananda Gowda/ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ

ಮಂಗಳೂರು : ಕರ್ನಾಟಕ ರಾಜ್ಯದ ನೂತನ ಮುಖ್ಯ ಮಂತ್ರಿ ದ.ಕ.ಜಿಲ್ಲೆಯ ಸುಳ್ಯ ತಾಲೂಕಿನ ದೇವರಗುಂಡದ ಡಿ.ವಿ.ಸದಾನಂದ ಗೌಡ ಅವರು ಮುಖ್ಯಮಂತ್ರಿಯಾಗಿ ಅಯ್ಕೆಯಾದ ಬಳಿಕ ಪ್ರಥಮ ಬಾರಿಗೆ ತವರು ಜಿಲ್ಲೆಗೆ ಭೇಟಿ ನೀಡಿದ್ದಾರೆ. ಬಜಪೆ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ 8:30ಕ್ಕೆ ಬಂದಿಳಿದ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರನ್ನು ಸಾರ್ವಜನಿಕರು, ಬಿಜೆಪಿ ಕಾರ್ಯಕರ್ತರು ಸೇರಿದಂತೆ ಜಿಲ್ಲಾಡಳಿತದ ಆಧಿಕಾರಿಗಳು ಸ್ವಾಗತಿಸಿದರು. ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಈ ಹಿಂದೆ ನಡೆಸಿದ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸುವುದಾಗಿ ಭರವಸೆ ನೀಡಿದ ಅವರು, […]

ಲಂಚ ಸ್ವೀಕರಿಸಿದ ಇಬ್ಬರು ಅಧಿಕಾರಿಗಳಿಗೆ ನ್ಯಾಯಾಂಗ ಬಂಧನ

Saturday, August 13th, 2011
bribe officers/ ಲಂಚಾಧಿಕಾರಿ

ಮಂಗಳೂರು: ಅದಿರು ವ್ಯಾಪಾರಿಯಿಂದ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಅಧಿಕಾರಿ ವೀರಣ್ಣ ನಾಯಕ್‌ ಮತ್ತು ಲೆಕ್ಕ ಪರಿಶೋಧಕ ನರಸಿಂಹ ಅವರನ್ನು ಶುಕ್ರವಾರ ಜಿಲ್ಲಾ ಸೆಷನ್ಸ್‌ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ಆ. 26 ರ ತನಕ ನ್ಯಾಯಾಂಗ ಬಂಧನ ವಿಧಿಸಿದೆ. ಗುರುವಾರ ಸಂಜೆ ಅದಿರು ವ್ಯಾಪಾರಿ ಅತ್ತಾವರದ ಮಹಮದ್‌ ಅವರ ದಾಖಲೆ ಪತ್ರಗಳ ಕ್ಲಿಯರೆನ್ಸ್‌ಗೆ 1.5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ವೀರಣ್ಣ ನಾಯಕ್‌ ಮತ್ತು ನರಸಿಂಹ ಅವರನ್ನು ಲೋಕಾಯುಕ್ತ […]

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ನ ಪ್ರಗತಿ ಪರಿಶೀಲನೆ ಸಭೆ

Friday, August 12th, 2011
KDP meeting/ಪ್ರಗತಿ ಪರಿಶೀಲನೆ ಸಭೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ನ ಪ್ರಗತಿ ಪರಿಶೀಲನೆ ಸಭೆಯು ಶೈಲಜಾ ಭಟ್‌ ಅಧ್ಯಕ್ಷತೆಯಲ್ಲಿ ಗುರುವಾರ ಜಿಲ್ಲಾ ಪಂಚಾಯತ್‌ನ ಸಭಾಂಗಣದಲ್ಲಿ ನಡೆಯಿತು. ಹತ್ತು ವರ್ಷಗಳಲ್ಲಿ ಗ್ರಾಮೀಣಾಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅಭಿವೃದ್ಧಿಗೆ ವಿಶೇಷ ಒತ್ತು ನೀಡಿ ಗ್ರಾಮೀಣ ಆರೋಗ್ಯ, ರಸ್ತೆ, ಶಿಕ್ಷಣ ಮತ್ತು ಸಾಮಾಜಿಕವಾಗಿ ಹಿಂದುಳಿದವರ ಅಭಿವೃದ್ಧಿಗೆ ಪೂರಕವಾಗಿ ಜಿಲ್ಲಾ ಪಂಚಾಯತ್‌ನ ಇಲಾಖೆಗಳು ಕ್ರಿಯಾ ಯೋಜನೆ ರೂಪಿಸಬೇಕು ಎಂದು ಅಧ್ಯಕ್ಷರು ಸಭೆಯಲ್ಲಿ ಹೇಳಿದರು. ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಕೆ.ಎನ್‌. ವಿಜಯ್‌ಪ್ರಕಾಶ್‌ ಮಹಿಳಾ ಮತ್ತು ಮಕ್ಕಳ ಕಲ್ಯಾಣ […]

ಮೂಡಿಗೆರೆಯಲ್ಲಿ ಬೈಕ್‌ ಹಾಗೂ ಬಸ್‌ ನಡುವೆ ಢಿಕ್ಕಿ, ಒಂದು ಸಾವು, ಬಸ್ ಬಸ್ಮ

Thursday, August 11th, 2011
Bus-Accident/ಬೈಕ್‌ ಹಾಗೂ ಬಸ್‌ ಢಿಕ್ಕಿ

ಚಿಕ್ಕಮಗಳೂರು : ಚಿಕ್ಕಮಗಳೂರು-ಮೂಡಿಗೆರೆ ರಸ್ತೆಯ ದಿಣ್ಣೆಕೆರೆ -ಮಾವಿನಹಳ್ಳಿಯ ತಿರುವಿನಲ್ಲಿ ಬುಧವಾರ ಸಂಜೆ ಬೈಕ್‌ ಹಾಗೂ ಬಸ್‌ ನಡುವೆ ಢಿಕ್ಕಿ ಸಂಭವಿಸಿ ಬೈಕ್‌ ಸವಾರ ಮೃತಪಟ್ಟಿದ್ದು , ಖಾಸಗಿ ಬಸ್‌ ಸಂಪೂರ್ಣ ಸುಟ್ಟು ಕರಕಲಾಗಿದೆ. ಬಸ್‌ನಲ್ಲಿದ್ದ 70 ಕ್ಕೂ ಅಧಿಕ ಮಂದಿ ಅಪಾಯದಿಂದ ಪಾರಾಗಿದ್ದಾರೆ. ಧರ್ಮಸ್ಥಳದಲ್ಲಿ ನಡೆದ ಅನಿತಾ -ಜಗದೀಶ್‌ ಮದುವೆಗೆ ಭದ್ರಾವತಿಯಿಂದ ಖಾಸಗಿ ಬಸ್ಸಿನಲ್ಲಿ 70ಕ್ಕೂ ಅಧಿಕ ಮಂದಿ ಹೋಗಿದ್ದರು. ಇನ್ನೊಂದೆಡೆ ಶಿವಮೊಗ್ಗದ ವೀರಭದ್ರ ಕಾಲನಿಯ ನಂದೀಶ್‌ ಹಾಗು ಭೈರೇಶ್‌ ಬೈಕಿನಲ್ಲಿ ವಿಹಾರಾರ್ಥ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಬಸ್ […]

ಕಾಪು ಕಡಲ ಕಿನಾರೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲು

Thursday, August 11th, 2011
Abhijit Singh, Janakish / ಅಭಿಜಿತ್‌ ಸಿಂಗ್‌, ಜಾನಾ ಕಿಶ್‌

ಮಂಗಳೂರು : ಮಣಿಪಾಲ ಎಂ.ಐ.ಟಿಯ ಇಬ್ಬರು ವಿದ್ಯಾರ್ಥಿಗಳು ಅಲೆಗಳ ಸೆಳೆತಕ್ಕೆ ಸಮುದ್ರಪಾಲದ ಘಟನೆ ಬುಧವಾರ ಸಂಜೆ ಕಾಪು ಕಡಲ ಕಿನಾರೆಯಲ್ಲಿ ಸಂಭವಿಸಿದೆ. ನಾಲ್ವರು ವಿದೇಶಿಯರು ಮತ್ತು ಓರ್ವ ಭಾರತೀಯ ಸೇರಿದಂತೆ ಐದು ಮಂದಿ ವಿದ್ಯಾರ್ಥಿಗಳೂ ಕಾಪು ಕಡಲ ಕಿನಾರೆಗೆ ಆಗಮಿಸಿದ್ದರು. ಲೈಟ್‌ ಹೌಸ್‌ನ ಮುಂಭಾಗದಲ್ಲಿ ಕಡಲು ಸಂಪೂರ್ಣವಾಗಿ ವಿಸ್ತರಿಸಿಕೊಂಡಿರುವುದರಿಂದ ಐವರು ಕೂಡಾ ಕಡಲಿಗೆ ಇಳಿದಿದ್ದರು. ಆದರೆ ಸಮುದ್ರದ ಅಲೆಗಳ ರಭಸಕ್ಕೆ ಅಂಜಿದ ಮೂವರು ದಡದಲ್ಲೇ ಕುಳಿತರೆ, ಅಭಿಜಿತ್‌ ಸಿಂಗ್‌ (18)ಮತ್ತು ಜಾನಾ ಕಿಶ್‌ (೨೧ ಈಜುವ ಉದ್ದೇಶದಿಂದ […]

‘ಜಲಕೃಷಿ ಮತ್ತು ಜೈವಿಕ ಭದ್ರತೆ’ ಕಾರ್ಯಾಗಾರ ತರಬೇತಿ ಉದ್ಘಾಟನೆ.

Thursday, August 11th, 2011
College of Fisheries Mangalore/ ಮಂಗಳೂರು ಮೀನುಗಾರಿಕಾ ಕಾಲೇಜು

ಮಂಗಳೂರು : ಕರ್ನಾಟಕ ವೆಟರ್ನರಿ, ಎನಿಮಲ್‌ ಯಂಡ್ ಫಿಶರೀಸ್‌ ಸೈನ್ಸ್‌ ಯುನಿವರ್ಸಿಟಿ ಬೀದರ್‌ ಮತ್ತು ಮಂಗಳೂರು ಮೀನುಗಾರಿಕಾ ಕಾಲೇಜಿನ ಜಂಟಿ ಆಶ್ರಯದಲ್ಲಿ ಮೀನುಗಾರಿಕಾ ಕಾಲೇಜು ಆವರಣದಲ್ಲಿ ಬುಧವಾರ ಆರಂಭಗೊಂಡ ‘ಜಲಕೃಷಿ ಮತ್ತು ಜೈವಿಕ ಭದ್ರತೆ’ ವಿಷಯದ ಕುರಿತ ತರಬೇತಿ ಕಾರ್ಯಕ್ರಮವನ್ನು ಬೆಂಗಳೂರು ವೆಟರ್ನರಿ ಕಾಲೇಜಿನ ಡೀನ್‌ ಡಾ| ಎಸ್‌. ಯತಿರಾಜ್‌ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮೀನುಗಳಿಗೆ ತಗಲುವ ಕಾಯಿಲೆಗಳನ್ನು ಗುರುತಿಸಿ ಪ್ರಕಟಿಸಲು ಸಾಧ್ಯವಾಗುವಂತೆ ವ್ಯವಸ್ಥೆ ರೂಪಿಸಲು ಸರಕಾರದ ಮಟ್ಟದಲ್ಲಿ ಸ್ಪಷ್ಟವಾದ ನೀತಿ ರೂಪಿಸುವುದು ಅಗತ್ಯ ಎಂದು […]

ಬೆಲೆ ಏರಿಕೆಯನ್ನು ವಿರೋಧಿಸಿ ಜನವಾದಿ ಮಹಿಳಾ ಸಂಘಟನೆಯ ಪ್ರತಿಭಟನೆ

Thursday, August 11th, 2011
Janavadi Mahila Samithi /ಜನವಾದಿ ಮಹಿಳಾ ಸಂಘಟನೆ

ಮಂಗಳೂರು : ಜನವಾದಿ ಮಹಿಳಾ ಸಮಿತಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮಹಿಳೆಯರ ನೇತೃತ್ವದಲ್ಲಿ ರಾಷ್ಟ್ರವ್ಯಾಪಿ ಬೆಲೆ ಏರಿಕೆಯನ್ನು ವಿರೋಧಿಸಿ ನಡೆಯುತ್ತಿರುವ ಚಳವಳಿಯ ಅಂಗವಾಗಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಪ್ರದರ್ಶನ ನಡೆಯಿತು. ಜೆ.ಎಂ.ಎಸ್‌. ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್‌. ಲಕ್ಷ್ಮೀ, ಮಾತನಾಡಿ ಕೆ.ಜಿ.ಗೆ 2 ರೂ.ಗಳಂತೆ 35 ಕೆ.ಜಿ. ಅಕ್ಕಿ ವಿತರಿಸುವಂತೆ ಆಗ್ರಹಿಸಿದರು, ದೇಶದ ಶೇ. 77ರಷ್ಟು ಜನತೆಯ ತಲಾ ಆದಾಯ ಕೇವಲ 20 ರೂ. ಆಗಿದ್ದು, ದಿನದಿಂದ ದಿನಕ್ಕೆ ಜನತೆಯ ಕೊಳ್ಳುವ ಶಕ್ತಿ […]