26ನೇ ಮುಖ್ಯಮಂತ್ರಿಯಾಗಿ ಡಿ.ವಿ ಸದಾನಂದ ಗೌಡ ಪ್ರಮಾಣವಚನ

Thursday, August 4th, 2011
Sadananda Gowda sworn in/ ಸದಾನಂದ ಗೌಡ ಪ್ರಮಾಣ ವಚನ

ಬೆಂಗಳೂರು : ಬಿ.ಎಸ್.ಯಡಿಯೂರಪ್ಪ ಬಣದ ದೇವರಗುಂಡ ವೆಂಕಪ್ಪಗೌಡ ಸದಾನಂದ ಗೌಡ ರಾಜ್ಯದ 26ನೇ ಮುಖ್ಯಮಂತ್ರಿಯಾಗಿ ಗುರುವಾರ ಸಂಜೆ ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಸುಬ್ರಮಣ್ಯನಗರದ ತಮ್ಮ ನಿವಾಸದಿಂದ ರಾಜಭವನಕ್ಕೆ ಬೆಂಬಲಿಗರೊಂದಿಗೆ ಕ್ರೀಂ ಕಲರ್ ಪ್ಯಾಂಟ್, ಬಿಳಿ ಬಣ್ಣದ ಅಂಗಿ, ಬ್ಲ್ಯಾಕ್ ಕಲರ್ ಶೂ ಧರಿಸಿ ಆಗಮಿಸಿದರು. ನಂತರ ಬಿ.ಎಸ್.ಯಡಿಯೂರಪ್ಪನವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಪಕ್ಷದ ಹಿರಿಯ ಮುಖಂಡರು, ಆಪ್ತರಿಗೆ ಕೈಕುಲುಕುವ ಮೂಲಕ ಅಭಿನಂದನೆ ಸ್ವೀಕರಿಸಿದರು. ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಪ್ರತಿಜ್ಞಾವಿಧಿ ಬೋಧಿಸಿದರು. ರಾಗ, ದ್ವೇಷ ಇಲ್ಲದೆ, […]

ನಾಡಿನೆಲ್ಲೆಡೆ ಶೃದ್ದಾ ಭಕ್ತಿಯ ‘ನಾಗರಪಂಚಮಿ’

Thursday, August 4th, 2011
Nagara Panchami/ನಾಗರಪಂಚಮಿ

ಮಂಗಳೂರು : ಇಂದು ದೇಶದಾದ್ಯಂತ ನಾಗರ ಪಂಚಮಿಯನ್ನು ಶೃದ್ದಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ‘ನಾಗರ ಪಂಚಮಿ’ ಕೃಷಿ ಮತ್ತು ಮಳೆಯಿಂದಾಗಿ ಸ್ಥಗಿತಗೊಂಡಿದ್ದ ನಮ್ಮ ಎಲ್ಲ ಶ್ರದ್ಧೆಯ, ಉತ್ಸಾಹದ ಆಚರಣೆಗಳೆಲ್ಲ ಮತ್ತೆ ಆರಂಭವಾಗುವ ಮೊದಲ ಹಬ್ಬ. ನಾಡಿಗೆ ದೊಡ್ಡ ಹಬ್ಬವೆಂದೇ ಪ್ರತೀತಿ. ಆಟಿ ತಿಂಗಳ ಅಮಾವಾಸ್ಯೆ ಯಂದು ಕಹಿ ಮದ್ದು ಸೇವಿಸಿ ನಮ್ಮ ಮೂಲದ ನಾಗನ ಸ್ಥಾನಕ್ಕೆ ಹೊರಡಲು ಸಿದ್ಧತೆಗಳಾಗುತ್ತವೆ. ಮುಂದೆ ಐದನೇ ದಿನ ‘ನಾಗರಪಂಚಮಿ’ ಅಥವಾ ‘ನಾಗ ಪಂಚಮಿ’. ನಾಗನಿಗೆ ಹಲವು ನಾಮಗಳಿವೆ, ಉಭಯ ಜೀವಿಗಳಲ್ಲಿ ಹೆಚ್ಚು ಶಕ್ತಿ […]

ಫಾದರ್‌ ಮುಲ್ಲರ್‌ ಮೆಡಿಕಲ್‌ ಕಾಲೇಜು ಉಪಶಮನ ನಿಗಾ ಘಟಕದ ಕಾರ್ಯಾಗಾರ

Thursday, August 4th, 2011
Father Muller Medical College workshop /ಫಾದರ್‌ ಮುಲ್ಲರ್‌ ಮೆಡಿಕಲ್‌ ಕಾಲೇಜು

ಮಂಗಳೂರು : ನಗರದ ಫಾದರ್‌ ಮುಲ್ಲರ್‌ ಮೆಡಿಕಲ್‌ ಕಾಲೇಜು ಇದರ ಗ್ರಂಥಿ ವಿಜ್ಞಾನ ಮತ್ತು ನರ್ಸಿಂಗ್ ವಿಭಾಗವು ಉಪಶಮನ ನಿಗಾ ಘಟಕದ ವಿಷಯದಲ್ಲಿ ಆಯೋಜಿಸಿದ ಕಾರ್ಯಾಗಾರವನ್ನು ಬುಧವಾರ ಅವರು ಜಿಲ್ಲಾಧಿಕಾರಿ ಡಾ| ಎನ್‌. ಎಸ್‌. ಚನ್ನಪ್ಪ ಗೌಡ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಗ್ರಾಮೀಣ ಪ್ರದೇಶದ ಬಡ ಜನರು ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಅವರಿಗೆ ವೈದ್ಯಕೀಯ ಚಿಕಿತ್ಷೆಗಳು ಸೇವೆಯಾಗಿ ಸಿಗಬೇಕು ಎಂದು ಹೇಳಿದರು. ವೈದ್ಯಕೀಯ ಕ್ಷೇತ್ರ ವಾಣಿಜ್ಯೀಕರಣಗೊಂಡಿರುವ ಕಾರಣ ಎಲ್ಲರಿಗೂ ಸಮಾನ ವೈದ್ಯಕೀಯ ಸೇವೆಗಳು ಲಭ್ಯವಾಗುತ್ತಿಲ್ಲ. […]

ಡಿ.ವಿ. ಸದಾನಂದ ಗೌಡ ಮುಖ್ಯಮಂತ್ರಿ : ಮಂಗಳೂರಿನಲ್ಲಿ ಕಾರ್ಯಕರ್ತರಿಂದ ವಿಜಯೋತ್ಸವ

Thursday, August 4th, 2011
BJP Victory/ಮಂಗಳೂರಿನಲ್ಲಿ ಕಾರ್ಯಕರ್ತರಿಂದ ವಿಜಯೋತ್ಸವ

ಮಂಗಳೂರು : ಡಿ.ವಿ. ಸದಾನಂದ ಗೌಡ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಂಬ್ರಮವನ್ನು ಕೊಡಿಯಾಲ್‌ಬೈಲ್‌ನಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪಕ್ಷ ಕಾರ್ಯಕರ್ತರು ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು. ಮುಖ್ಯಮಂತ್ರಿ ಆಯ್ಕೆಯ ಘೋಷಣೆ ಬಳಿಕ ಬಿಜೆಪಿ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿ, ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಶೈಲಜಾ ಭಟ್‌, ಶ್ರೀಕರ ಪ್ರಭು ಮೊದಲಾದವರು ಪರಸ್ಪರ ಸಿಹಿ ಹಂಚಿಕೊಂಡರು. ಬಳಿಕ ಕಚೇರಿಂದ ಹೊರಗೆ ಬಂದು ಸುರಿಯುವ ಮಳೆಯನ್ನೂ ಲೆಕ್ಕಿಸದೆ ಪಟಾಕಿ ಸಿಡಿಸಿದರು. ಡಿ.ವಿ. ಸದಾನಂದ ಗೌಡರ ಭಾವಚಿತ್ರವನ್ನು ಹಿಡಿದು ಜೈಕಾರ ಕೂಗಿದರು. […]

ದೇವರಗುಂಡ ವೆಂಕಪ್ಪ ಸದಾನಂದ ಗೌಡ ಕರ್ನಾಟಕದ 26 ನೇ ಮುಖ್ಯಮಂತ್ರಿ

Wednesday, August 3rd, 2011
DV Sadanandagowda/ದೇವರಗುಂಡ ವೆಂಕಪ್ಪ ಸದಾನಂದ ಗೌಡ

ಬೆಂಗಳೂರು : ಬಿಜೆಪಿಯ ಹಿರಿಯ ನಾಯಕ ಡಿ.ವಿ. ಸದಾನಂದ ಗೌಡ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಸೋತ ಅಭ್ಯರ್ಥಿ ಜಗದೀಶ್ ಶೆಟ್ಟರ್ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲಿನಲ್ಲಿ ಬುಧವಾರ ಮಧ್ಯಾಹ್ನ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ರಹಸ್ಯ ಮತದಾನದ ಮೂಲಕ ಡಿವಿಎಸ್ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಗೊಂಡರು. ಸದಾನಂದ ಗೌಡ ಆಯ್ಕೆ ಮೂಲಕ ನಿರ್ಗಮಿತ ಮುಖ್ಯಮಂತ್ರಿ ಯಡಿಯೂರಪ್ಪ ಬಣ ಮೇಲುಗೈ ಸಾಧಿಸಿದಂತಾಗಿದೆ. ಯಡಿಯೂರಪ್ಪ ಸಹ ಮತ ಚಲಾಯಿಸಿದರು. ಸದಾನಂದ ಗೌಡ ಪರ 62 – […]

ಮುಂಬಯಿ ಕನ್ನಡ ಸಂಸ್ಕೃತಿ ಸಮ್ಮೇಳನಾಧ್ಯಕ್ಷರಾಗಿ ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್‌

Wednesday, August 3rd, 2011
ಮುಂಬಯಿ ಕನ್ನಡ ಸಂಸ್ಕೃತಿ ಸಮ್ಮೇಳನಾಧ್ಯಕ್ಷರಾಗಿ ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್‌

ಮಂಗಳೂರು: ಮುಂಬಯಿಯಲ್ಲಿ ಆ. 6 ಮತ್ತು 7ರಂದು ನಡೆಯಲಿರುವ ಕನ್ನಡ ಸಂಸ್ಕೃತಿ ಸಮ್ಮೇಳನದ ಪತ್ರಿಕಾಗೋಷ್ಠಿ ಮಂಗಳವಾರ ಪತ್ರಿಕಾಭಾವನದಲ್ಲಿ ನಡೆಯಿತು. ಮುಂಬಯಿಯ ಬಿಲ್ಲವ ಭವನ ಸಾಂತಾಕ್ರೂಸ್‌ನಲ್ಲಿ 8ನೇ ಅಖಲ ಭಾರತ ಕನ್ನಡ ಸಂಸ್ಕೃತಿ ಸಮ್ಮೇಳನವನ್ನು ಕನ್ನಡ ಸಂಘ ಮತ್ತು ಹೃದಯ ವಾಹಿನಿ ಪತ್ರಿಕೆ ಆಯೋಜಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ. ಮಂಜುನಾಥ ಸಾಗರ್‌ ಸಮ್ಮೇಳನದ ಬಗ್ಗೆ ವಿವರಿಸಿದರು. ಸಮ್ಮೇಳನಾಧ್ಯಕ್ಷರಾಗಿ ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್‌ ಅವರನ್ನು ಆಯ್ಕೆ ಮಾಡಲಾಗಿದೆ. ಸಮ್ಮೇಳನದಲ್ಲಿ ಹೊರನಾಡು ಕನ್ನಡಿಗರ ಗೋಷ್ಠಿ, ಹಾಸ್ಯಗೋಷ್ಠಿ, ಕವಿಗೋಷ್ಠಿ, ಮಾಧ್ಯಮ ಗೋಷ್ಠಿ, ಪ್ರಶಸ್ತಿ […]

ಮಂಗಳೂರು ಕೆಎಸ್‌ಆರ್‌ಟಿಸಿ ನಿಗಮದ 50ನೇ ಸಂಸ್ಥಾಪನಾ ದಿನಾಚರಣೆ

Tuesday, August 2nd, 2011
ಮಂಗಳೂರು ಕೆಎಸ್‌ಆರ್‌ಟಿಸಿ ನಿಗಮದ 50ನೇ ಸಂಸ್ಥಾಪನಾ ದಿನಾಚರಣೆ

ಮಂಗಳೂರು: ಕೆಎಸ್‌ಆರ್‌ಟಿಸಿ ನಿಗಮವು ತನ್ನ 50ನೇ ಸಂಸ್ಥಾಪನಾ ದಿನವನ್ನು ಮಂಗಳೂರಿನ ವಿಭಾಹೀಯ ಕಚೇರಿಯಲ್ಲಿ ಸೋಮವಾರ ಆಚರಿಸಿತು. ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡಿದ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಲ್ಲಿಕಾರ್ಜುನ ಅವರು ನಗರ ವ್ಯಾಪ್ತಿಯಲಿ 4 ಸೆಟಲೈಟ್‌ ಬಸ್‌ ನಿಲ್ದಾಣಗಳ ನಿರ್ಮಾಣ ಕೋರಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಗಿದೆ, ನಗರ ಪ್ರದೇಶ ಅತ್ಯಂತ ವೇಗವಾಗಿ ಬೆಳೆಯುತ್ತಿರುವುದರಿಂದ ರಸ್ತೆಗಳು ಇನ್ನಷ್ಟು ವಿಸ್ತಾರವಾಗಬೀಕಿದೆ, ನಗರ ಪ್ರದೇಶದಲ್ಲಿ ವಹಿವಾಟುಗಳು ಜಾಸ್ತಿಯಾದ ಹಿನ್ನೆಲೆಯಲ್ಲಿ ಇನ್ನಷ್ಟು ಫ್ಲೈ ಓವರ್‌ಗಳ ನಿರ್ಮಾಣ ಕೂಡ ಅಗತ್ಯವಾಗಿದೆ. ಕಾಂಟ್ರಾಕ್ಟ್ ಕ್ಯಾರೇಜ್‌ […]

ಜಿಲ್ಲಾ ಪಂಚಾಯತ್ ಸಿಇಒ ಆಗಿ ಡಾ. ಕೆ.ಏನ್. ವಿಜಯಪ್ರಕಾಶ್‌ ಅಧಿಕಾರ ಸ್ವೀಕಾರ

Tuesday, August 2nd, 2011
KN-Vijayaprakash/ಡಾ. ಕೆ.ಏನ್. ವಿಜಯಪ್ರಕಾಶ್‌

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಆಯಕ್ತರಾಗಿ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಡಾ. ವಿಜಯಪ್ರಕಾಶ್‌ ಸೋಮವಾರ ಜಿ.ಪಂ. ಸಿಇಒ ಆಗಿ ಅಧಿಕಾರ ವಹಿಸಿಕೊಂಡರು. ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಆಡಳಿತದಲ್ಲಿ ಪಾರದರ್ಶಕತೆಗೆ ಆದ್ಯತೆ ಹಾಗೂ ಗ್ರಾಮೀಣ ಪ್ರದೇಶದ ಸಮಗ್ರ ಅಭಿವೃದ್ಧಿಯನ್ನು ಕೇಂದ್ರೀಕರಿಸಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಜ್ಯಾರಿ ಗೊಳಿಸುವುದಾಗಿ ಅವರು ಹೇಳಿದರು. ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಕುಡಿಯುವ ನೀರಿನ ಕೊರತೆ ಮತ್ತು ಉತ್ತಮ ರಸ್ತೆ ಸೌಲಭ್ಯಗಳಿಂದ ವಂಚಿತವಾಗಿವೆ. ಮೂಲ ಸೌಕರ್ಯಗಳ ಅಭಿವೃದ್ಧಿ, ಸಂಪೂರ್ಣ ನೈರ್ಮಲೀಕರಣಕ್ಕೆ […]

ಪಿಲಿಕುಳ 35ಕ್ಕಿಂತಲೂ ಅಧಿಕ ಕಾಳಿಂಗ ಸರ್ಪದ ಮರಿಗಳ ಸಂತಾನೋತ್ಪತ್ತಿ

Tuesday, August 2nd, 2011
Pilikula-Snake/ಪಿಲಿಕುಳ ಕಾಳಿಂಗ ಸರ್ಪದ ಮರಿಗಳ ಸಂತಾನೋತ್ಪತ್ತಿ

ಮಂಗಳೂರು: ಪಿಲಿಕುಳ ನಿಸರ್ಗಧಾಮ ಈಗ ಮತ್ತಷ್ಟು ಆಕರ್ಷಣೀಯವಾಗಿದೆ. ಇಲ್ಲಿನ ಡಾ| ಶಿವರಾಮ ಕಾರಂತ ಜೈವಿಕ ಉದ್ಯಾನವನದ ಕಾಳಿಂಗ ಸರ್ಪ ಸಂತಾನೋತ್ಪತ್ತಿ ಕೇಂದ್ರದಲ್ಲಿ ಎರಡೂವರೆ ತಿಂಗಳ ಹಿಂದೆ ಮೂರು ಕಾಳಿಂಗ ಸರ್ಪಗಳು ಇಟ್ಟಿದ್ದ 82 ಮೊಟ್ಟೆಗಳ ಪೈಕಿ ಇದೀಗ 35ಕ್ಕಿಂತಲೂ ಅಧಿಕ ಮರಿಗಳು ಹೊರ ಬಂದಿದ್ದು ಉದ್ಯಾವವನದ ಸರ್ಪ ಸಂತತಿ ವೃದ್ದಿಸಿದೆ. ಪಿಲಿಕುಳದಲ್ಲಿ ಒಟ್ಟು 14 ಕಾಳಿಂಗ ಸರ್ಪಗಳಲ್ಲಿ 9 ಗಂಡು, 5 ಹೆಣ್ಣು. ನಾಗಮಣಿ, ನಾಗವೇಣಿ, ರಾಣಿ ಇವು ಮೊಟ್ಟೆ ಇಟ್ಟಿರುವ ಸರ್ಪಗಳು. ಈ ಪೈಕಿ ನಾಗಿಣಿ […]

ಅಮ್ಮಂದಿರಲ್ಲಿ ಮೂಢನಂಬಿಕೆ ಅಳಿದು ಉತ್ತಮ ಅರಿವು ಮೂಡಬೇಕು :ಜಿಲಾನಿ

Monday, August 1st, 2011
paustika

ಮಂಗಳೂರು : ಎದೆಹಾಲು ಅತ್ಯುತ್ತಮ ಪೌಷ್ಠಿಕ ಆಹಾರವಾಗಿದ್ದು, ಮಗು ಹುಟ್ಟಿದ ತಕ್ಷಣ ಹಾಲುಣಿಸುವ ಬಗ್ಗೆ ತಾಯಂದಿರಿಗೆ ಮಾಹಿತಿ ನೀಡಬೇಕಾದ ಅಗತ್ಯವಿದೆ ಎಂದು ಯೆನಪೋಯ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಗುಲಾಮ್ ಜಿಲಾನಿ ಖಾದಿರಿ ಹೇಳಿದರು. ಇಂದು ಯೆನಪೋಯಾ ಕಾಲೇಜಿನ ಅಕಾಡೆಮಿಕ್ ಬ್ಲಾಕ್ ನಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಆಹಾರ ಮತ್ತು ಪೌಷ್ಠಿಕತಾ ಮಂಡಳಿ, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮುದಾಯ ಆಹಾರ ಮತ್ತು ಪೌಷ್ಠಿಕ ವಿಸ್ತರಣಾ ಘಟಕ ಬೆಂಗಳೂರು ಮತ್ತು ಯೆನಪೋಯ ಮೆಡಿಕಲ್ ಕಾಲೇಜಿನ […]