ರೌಡಿ ಶೀಟರ್ ಉಮೇಶ್‌ ರೈ ಕೊಲೆ ಆರೋಪಿಗಳ ಬಂಧನ

Friday, September 24th, 2010
ದ ಕ ಎಸ್ ಪಿ ಪತ್ರಿಕಾಗೋಷ್ಠಿ

ಮಂಗಳೂರು : ರೌಡಿ ಶೀಟರ್  ತಿಂಗಳಾಡಿ ಉಮೇಶ್‌ ರೈ (36)  ಕೊಲೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಡಿ. ಅಮ್ಮಣ್ಣ ರೈ, ಅಮ್ಮಣ್ಣ ರೈ ಅವರ ಬಾವ ಈಶ್ವರಮಂಗಲ ನಿವಾಸಿ ಜಯರಾಜ ರೈ ಹಾಗೂ ಅರಿಯಡ್ಕ ನಿವಾಸಿಗಳಾದ ರಾಮಚಂದ್ರ ನಾಯ್ಕ ಮತ್ತು ರಾಮಕೃಷ್ಣ ನಾಯ್ಕ ಬಂದಿತ ಆರೋಪಿಗಳು ಎಂದು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಬ್ರಹ್ಮಣ್ಯೇಶ್ವರ ರಾವ್ ಅವರು ಇಂದು ಸುದ್ದಿಗೋಷ್ಠಿ ಯಲ್ಲಿ ತಿಳಿಸಿದ್ದಾರೆ. ಉಮೇಶ್‌ ರೈ […]

ನಗರದ ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನ ವೈದ್ಯರ ಸಾಧನೆ : ಮಹಿಳೆಯ ಹೊಟ್ಟೆಯಲ್ಲಿದ್ದ 4 ಕೆ.ಜಿ. ಗುಲ್ಮಕ್ಕೆ ಶಸ್ತ್ರಚಿಕಿತ್ಸೆ

Friday, September 24th, 2010
ಮಹಿಳೆಯ ಹೊಟ್ಟೆಯಲ್ಲಿದ 4 ಕೆ.ಜಿ. ಗುಲ್ಮ

ಬೆಂಗಳೂರು: ಮಹಿಳೆಯೊಬ್ಬರ ಹೊಟ್ಟೆಯಲ್ಲಿ 4 ಕೆ.ಜಿ. ಗಾತ್ರಕ್ಕೆ ಬೆಳೆದಿದ್ದ ಗುಲ್ಮವನ್ನು (ಸ್ಪ್ಲೀನ್) ಅಪರೂಪದ ಶಸ್ತ್ರಚಿಕಿತ್ಸೆ ಮೂಲಕ ತೆಗೆದುಹಾಕುವಲ್ಲಿ ನಗರದ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯರು ಸಫಲರಾಗಿದ್ದಾರೆ. 40 ವರ್ಷ ಪ್ರಾಯದ ಈ ಮಹಿಳೆ ತೀವ್ರ ಹೊಟ್ಟೆನೋವು ಮತ್ತು ಹಸಿವೆಯೇ ಇಲ್ಲದಿರುವಿಕೆಯ ಸ್ಥಿತಿಯೊಂದಿಗೆ ಆಸ್ಪತ್ರೆಗೆ ಬಂದಿದ್ದರು. ಮೊದಲಿಗೆ ವೈದ್ಯರು ಇದು ತೀವ್ರ ಮಲೇರಿಯಾ ಪ್ರಕರಣ ಎಂದು ಭಾವಿಸಿದ್ದರು. ಆದರೆ ಬಳಿಕ ಇದು ಗುಲ್ಮದ ಹಾನಿಕರ ಗೆಡ್ಡೆ ಎಂಬುದು ಗೊತ್ತಾಯಿತು. ಇದೊಂದು ಅಪರೂಪದ ಪ್ರಕರಣವಾಗಿದ್ದು, ನಾನ್-ಹೊಡ್ಜ್ಕಿಮ್ಸ್ ಲಿಂಫೋಮಾ […]

ಅಯೋಧ್ಯ ವಿವಾದದ ತೀರ್ಪು ಮುಂದಕ್ಕೆ : ಜಿಲ್ಲಾಡಳಿತ ಹೊರಡಿಸಿರುವ ಆದೇಶ ರದ್ದು

Thursday, September 23rd, 2010
ಅಯೋಧ್ಯೆ

ಮಂಗಳೂರು : ರಾಮ ಜನ್ಮಭೂಮಿ- ಬಾಬ್ರಿ ಮಸೀದಿ ವಿವಾದದ ತೀರ್ಪನ್ನು ಸರ್ವೋಚ್ಚ ನ್ಯಾಯಾಲಯವು ತಡೆಹಿಡಿದ ಹಿನ್ನಲೆಯಲ್ಲಿ ಶುಕ್ರವಾರ ಪ್ರಕಟವಾಗಬೇಕಿದ್ದ ತೀರ್ಪು ಸೆಪ್ಟೆಂಬರ್ 28 ಕ್ಕೆ ಮುಂದೂಡಲಾಗಿದೆ. ರಮೇಶ್ ಚಂದ್ರ ತ್ರಿಪಾಠಿ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಹಿನ್ನಲೆಯಲ್ಲಿ ಅಲಹಾಬಾದ್ ಹೈಕೋರ್ಟಿನ ಲಕ್ನೋ ವಿಶೇಷ ಪೀಠವು ಶುಕ್ರವಾರ ಅಪರಾಹ್ನ ಪ್ರಕಟಿಸ ಬೇಕಿದ್ದ ತೀರ್ಪನ್ನು ಮುಂದೂಡಿದೆ. ತ್ರಿಪಾಠಿಯ  ಅರ್ಜಿಯನ್ನು ಮತ್ತೊಂದು ಪೀಠವು ವಿಚಾರಣೆ ನಡೆಸಲಿದ್ದು.  ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 28ಕ್ಕೆ ನ್ಯಾಯಾಲಯ ಮುಂದೂಡಿ, ಆ ತನಕ ಅಲಹಾಬಾದ್ ಹೈಕೋರ್ಟ್ ತೀರ್ಪು […]

`ಅಂಬಿಟ್ ಕಿರು ಚಲನಚಿತ್ರ ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ಪತ್ರ

Thursday, September 23rd, 2010
ಕಿರು ಚಲನಚಿತ್ರ

ಮಂಗಳೂರು : ನಗರದ ಹಂಪನಕಟ್ಟೆಯ ಗೋಕುಲ್ ಮಾರ್ಕೆಟ್  ಬಿಲ್ಡಿಂಗ್ನಲ್ಲಿರುವ ಪ್ರಸಿದ್ದ `ಅಂಬಿಟ್’ ಕಂಪ್ಯೂಟರ್ ಮತ್ತು ತಾಂತ್ರಿಕ ತರಬೇತಿ ಸಂಸ್ಥೆಯ ವತಿಯಿಂದ 64ನೇ ಸ್ವಾತಂತ್ರೋತ್ಸವದ ಅಂಗವಾಗಿ ಏರ್ಪಡಿಸಲಾದ ಪ್ರಥಮ ವಾರ್ಷಿಕ `ಅಂಬಿಟ್’ ಕಿರು ಚಲನಚಿತ್ರ (AMBIT-Short Film Competition) ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸ್ಪರ್ಧೆಯು 28 ಆಗಸ್ಟ್ 2010ರಂದು ನಡೆದಿದ್ದು ಅಂಬಿಟ್ ರಾಯಭಾರಿ ಪ್ರಸಾದ್ B.N. ರವರು ಸಂಯೋಜನಾ ಅಧಿಕಾರಿಯಾಗಿ, ಕರ್ನಾಟಕ ಸರಕಾರದ ‘ಕರ್ನಾಟಕ ಚಲನಚಿತ್ರ ಅಕಾಡೆಮಿ’ಯ ಅಧೀನ […]

ಹಿಂದೂ ದೇವರು ಮತ್ತು ದೇವತೆಗಳನ್ನು ಶೂಗಳ ಮೇಲೆ ಚಿತ್ರಿಸಿದ ಅಮೇರಿಕ ಶೂ ಕಂಪೆನಿ

Wednesday, September 22nd, 2010
ಹಿಂದೂ ದೇವರು ಮತ್ತು ದೇವತೆಗಳನ್ನು ಶೂಗಳ ಮೇಲೆ ಚಿತ್ರಿಸಿದ ಅಮೇರಿಕ ಶೂ ಕಂಪೆನಿ

ವಾಷಿಂಗ್ಟನ್ : ಹಿಂದೂಗಳು ಪೂಜಿಸುವ ದೇವರು ಮತ್ತು ದೇವತೆಗಳನ್ನು ಕಾಲಿಗೆ ಹಾಕುವ ಶೂಗಳಿಗೆ ಮುದ್ರಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಿ  ಹಿಂದೂ ಸಮುದಾಯದಿಂದ ತೀವ್ರ ಆಕ್ಷೇಪ ಕ್ಕೆ ಗುರಿಯಾಗಿದೆ. ಅಮೆರಿಕದ ಗಿಟಾರ್  ವಾದಕ ದಿವಂಗತ ಜಿಮಿ ಹೆಂಡ್ರಿಕ್ಸ್ ಹೆಸರಿನಲ್ಲಿ ಹಿಂದೂ ದೇವರು ಮತ್ತು ದೇವತೆಗಳನ್ನು ಮುದ್ರಿಸಿ ಮಾರುಕಟ್ಟೆಗೆ ಬಿಡುಗಡೆ ಗೊಳಿಸಲಾಗಿತ್ತು . ಹಿಂದೂಗಳ ವಿರೋಧ ಹಾಗೂ ಪ್ರತಿಭಟನೆಗೆ ಮಣಿದ ಅಮೆರಿಕ ಮೂಲದ ಶೂ ಕಂಪನಿ ಶೂಗಳನ್ನು ಮಾರಾಟ ಮಾಡದೆ ಮಾರುಕಟ್ಟೆಯಿಂದ ವಾಪಸ್ ಪಡೆದಿದೆ. ಶೂನಲ್ಲಿ ಹಿಂದೂ ದೇವರ ಚಿತ್ರಗಳನ್ನು […]

ಸಿಪಿಐಎಂ ವತಿಯಿಂದ `ಶಾಂತಿಗಾಗಿ ಸೌಹಾರ್ದ ನಡಿಗೆ’

Wednesday, September 22nd, 2010
ಸಿಪಿಐಎಂ ವತಿಯಿಂದ `ಶಾಂತಿಗಾಗಿ ಸೌಹಾರ್ದ ನಡಿಗೆ'

ಮಂಗಳೂರು: ರಾಮಜನ್ಮಭೂಮಿ ಹಾಗೂ ಬಾಬರಿ ಮಸೀದಿ ವಿವಾದ ತೀರ್ಪನ್ನು ಅಲಹಾಬಾದ್ ಕೋರ್ಟ್ ಸೆಪ್ಟೆಂಬರ್ 24 ರಂದು ನೀಡುವ ಹಿನ್ನೆಲೆಯಲ್ಲಿ ಎಲ್ಲಾ ಕೋಮಿನವರು ಶಾಂತಿ ಕಾಪಾಡಬೇಕೆಂದು ಸಿಪಿಐಯಂ ನ ಕಾರ್ಯಕರ್ತರು ಗಾಂಧಿ ಪ್ರತಿಮೆಯ ಮುಂಭಾಗದಿಂದ ಡಿಸಿ ಕಛೇರಿಗೆ ಇಂದು ಬೆಳಿಗ್ಗೆ 11 ಗಂಟೆಗೆ ಕಾಲ್ನಡಿಗೆಯಲ್ಲಿ `ಶಾಂತಿಗಾಗಿ ಸೌಹಾರ್ದ ನಡಿಗೆ’ಯನ್ನು ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಪಿಐಯಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ. ಮಾಧವ್ ಅವರು ನ್ಯಾಯಾಲಯ ನೀಡುವ ತೀರ್ಪನ್ನು ಹಿಂದೂಗಳು ಮತ್ತು ಮುಸ್ಲೀಮರು ಸೌಹಾರ್ದಯುತವಾಗಿ ಸ್ವೀಕರಿಸಬೇಕು. ಕಾನೂನು ಮತ್ತು […]

ರಾಜ್ಯ ಸಚಿವ ಸಂಪುಟದ ವಿಸ್ತರಣೆ : ಆರು ಮಂದಿ ಸಚಿವರಿಗೆ ಪ್ರಮಾನವಚನ

Wednesday, September 22nd, 2010
ಆರು ಮಂದಿ ನೂತನ ಸಚಿವರು

ಬೆಂಗಳೂರು : ರಾಜ್ಯ ಸರಕಾರವು ಸಚಿವ ಇಂದು ಬೆಳಗ್ಗೆ 9.30ಕ್ಕೆ ಸಂಪುಟದ ಪುನಾರಚನೆ ಮಾಡಿದೆ.  ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರು ಮಂದಿ  ಸಚಿವರಿಗೆ ರಾಜ್ಯಪಾಲರು ಪ್ರಮಾನವಚನ ಭೋದಿಸಿದರು. ನೂತನ ಸಂಪುಟದದಲ್ಲಿ ಶೋಭಾ ಕರಂದ್ಲಾಜೆ, ಸಿ.ಸಿ. ಪಾಟೀಲ, ವಿ. ಸೋಮಣ್ಣ, ಎ ನಾರಾಣಸ್ವಾಮಿ, ಎ. ರಾಮದಾಸ್ ಮತ್ತು ಸಿ. ಎಚ್. ವಿಜಯಶಂಕರ್ ಅವರು ರಾಜ್ಯಪಾಲರಿಂದ ಪ್ರಮಾನವಚನ ಸ್ವೀಕರಿಸಿದರು. ಬಿ.ಜೆ.ಪಿ ಶಾಸಕರ ಮತ್ತು ಸಚಿವರುಗಳ ಬೆದರಿಕೆ ನಡುವೆಯೂ ಸಂಪುಟ ಪುನರ್ ರಚನೆ ಇಂದು ನಡೆಯಿತು. ಶೋಭಾ ಕರಂದ್ಲಾಜೆ ಮತ್ತು ವಿ. […]

ಹಾಸ್ಯನಟ ಕೆ ಎಂ ರತ್ನಾಕರ್ ನಿಧನ

Tuesday, September 21st, 2010
ಹಿರಿಯ ಕಲಾವಿದ ಕೆ ಎಂ ರತ್ನಾಕರ್

ಮೈಸೂರು : ಹಾಸ್ಯನಟನಾಗಿ 350ಕ್ಕೂ ಹೆಚ್ಚು  ಚಿತ್ರಗಳಲ್ಲಿ ಅಭಿನಯಿಸಿದ ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಕೆ ಎಂ ರತ್ನಾಕರ್  ಇಂದು ಮಧ್ಯಾಹ್ನ ಮೈಸೂರಿನ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.  ಅವರು ಮೂತ್ರ ಜನಕಾಂಗದ ವೈಫಲ್ಯದ ಅನಾರೋಗ್ಯದಿಂದ ಅಸ್ವಸ್ಥರಾಗಿದ್ದರು. ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ  ದಾಖಲಾಗಿದ್ದರು. ಇನ್ನು ಅಭಿಮಾನಿಗಳಿಗೆ ಅವರು ಬರಿ ನೆನಪಷ್ಟೆ. ಹಾಸ್ಯನಟನಾಗಿ ಅವರದೇ ಆದ ಪ್ರೇಕ್ಷಕ ವರ್ಗವನ್ನು ನಿರ್ಮಿಸಿದ್ದಾರೆ.  ಗುರು ಶಿಷ್ಯರು, ಅಣ್ಣಯ್ಯ, ಗಡಿಬಿಡಿ ಗಂಡ, ಕೆಂಪಯ್ಯ ಐಪಿಎಸ್, ಭಕ್ತ ಕನಕದಾಸ, ಬಯಲು ದೀಪ ಸಾಹಸ ಸಿಂಹ ವಿಷ್ಣುವರ್ಧನ್  […]

ಸಮತಾದಲ್ಲಿ ಶ್ರೀಕೃಷ್ಣ ಜನ್ಮೋತ್ಸವ ಮತ್ತು ಶಿಕ್ಷಕ ದಿನಾಚರಣೆ.

Tuesday, September 21st, 2010
 ಸಮತಾದಲ್ಲಿ ಶ್ರೀಕೃಷ್ಣ ಜನ್ಮೋತ್ಸವ ಮತ್ತು ಶಿಕ್ಷಕ ದಿನಾಚರಣೆ.

ಮಂಗಳೂರು: ವಿಂಶತಿ ವರ್ಷಾಚರಣೆಯಲ್ಲಿರುವ ಸಮತಾ ಮಹಿಳಾ ಬಳಗದ ಸೆಪ್ಟೆಂಬರ್ ತಿಂಗಳ ಕಾರ್ಯಕ್ರಮವು ಶನಿವಾರ ಶ್ರೀ ಸುಬ್ರಹ್ಮಣ್ಯ ಸಭಾ ಸದನದಲ್ಲಿ ನೆರವೇರಿತು. ಕಲಾನಿಕೇತನದ ಸಂಗೀತ ಮತ್ತು ವೀಣಾ ಶಿಕ್ಷಕಿ ಶ್ರೀಮತಿ ಸಾವಿತ್ರಿ ರಾಮ್ ರಾವ್ ಮುಖ್ಯ ಅತಿಥಿಯಾಗಿದ್ದರು. ಸಮತಾದ ಸದಸ್ಯೆಯರ 12 ವರ್ಷದೊಳಗಿನ ಮಕ್ಕಳಿಗೆ ಮತ್ತು ಮೊಮ್ಮಕ್ಕಳಿಗೆ ಧಾರ್ಮಿಕ  ಚೌಕ್ಕಟ್ಟಿನೊಳಗೆ ಛದ್ಮವೇಷ ಸ್ಪರ್ಧೆ ನಡೆಯಿತು. ಭಾಗವಹಿಸಿದ ಪುಟಾಣಿಗಳಿಗೆ ನಗದು ಬಹುಮಾನ ಮತ್ತು ಸ್ಮರಣಿಕೆಗಳನ್ನು ನೀಡಲಾಯಿತು. ಆರ್ಥಿಕವಾಗಿ ತೊಂದರೆಗೀಡಾಗಿರುವ ರವೀಂದ್ರ ಎಂಬ ವಿದ್ಯಾರ್ಥಿಗೆ ಧನಸಹಾಯ ನೀಡಲಾಯಿತು. ಬಳಿಕ ಶಿಕ್ಷಕಿ ಸಾವಿತ್ರಿ […]

ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ರಾಜೀನಾಮೆ

Tuesday, September 21st, 2010
ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ರಾಜೀನಾಮೆ

ಬೆಂಗಳೂರು : ಚಿಕ್ಕಮಗಳೂರು ಶಾಸಕರಾಗಿ ಮೂರು ಬಾರಿ ಆಯ್ಕೆಯಾಗಿದ್ದ ಶಾಸಕ ಸಿ.ಟಿ.ರವಿ ಅಸಮಾಧಾನದಿಂದ ಶಾಸಕ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸುವ ಮೂಲಕ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಗೊಂಡಿದೆ. ಚಿಕ್ಕಮಗಳೂರಿನಲ್ಲಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದರೂ ಕೂಡ ಯಾವುದೇ ಬೆಲೆ ಸಿಕ್ಕಿಲ್ಲ ಎಂಬ ಅಸಮಾಧಾನದಿಂದ ಸಿ.ಟಿ.ರವಿ ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಅವರಿಗೆ ಇಂದು ಬೆಳಿಗ್ಗೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟ ಪುನಾರಚನೆ ಕುರಿತಾಗಿ ಹೈಕಮಾಂಡ್ ಜೊತೆ ಮಾತುಕತೆ […]