ಚಿಲಿಂಬಿ ಶಿರಡಿ ಸಾಯಿಬಾಬಾ ಮಂದಿರದ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ

Thursday, April 18th, 2024
ಚಿಲಿಂಬಿ ಶಿರಡಿ ಸಾಯಿಬಾಬಾ ಮಂದಿರದ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ

ಮಂಗಳೂರು : ಚಿಲಿಂಬಿ ಶಿರಡಿ ಸಾಯಿಬಾಬಾ ಮಂದಿರದಲ್ಲಿ ರಾಮನವಮಿಯ ಉತ್ಸವ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ, ಗುದ್ದಾಟ ನಡೆದ ಘಟನೆ ಗುರುವಾರ ಅಪರಾಹ್ನ ನಡೆದಿದೆ. ಸಾಯಿಬಾಬಾ ಮಂದಿರದ ಬಳಿ ಬಿಜೆಪಿ ಕಾರ್ಯಕರ್ತರು ಚುನಾವಣಾ ಪ್ರಚಾರ ಮಾಡುತ್ತಿದ್ದಾಗ ಕಾಂಗ್ರೆಸ್ಸಿಗರು ಪ್ರಚಾರ ನಡೆಸದಂತೆ ಸೂಚಿಸಿದರು ಎನ್ನಲಾಗಿದೆ. ಈ ಸಂದರ್ಭ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ, ಹೊಯ್‌ಕೈ ನಡೆಯಿತು ಎನ್ನಲಾಗಿದೆ. ಅಷ್ಟರಲ್ಲಿ ಶಾಸಕ ವೇದವ್ಯಾಸ ಕಾಮತ್ ಮತ್ತು ಕೆಪಿಸಿಸಿ ಪ್ರಧಾನ […]

ಬಾಲಿವುಡ್ ನ ನಟಿ ಶಿಲ್ಪಾ ಶೆಟ್ಟಿ ಮತ್ತು ಪತಿ ರಾಜ್ ಕುಂದ್ರಾಗೆ ಸೇರಿದ 97 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ

Thursday, April 18th, 2024
shilpa-shetty

ಮುಂಬೈ: ಬಾಲಿವುಡ್ ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಮತ್ತು ಪತಿ ರಾಜ್ ಕುಂದ್ರಾಗೆ ಸೇರಿದ ಅಂದಾಜು 97 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಿದ ಆಸ್ತಿಯಲ್ಲಿ ಮುಂಬೈನ ಪ್ರತಿಷ್ಠಿತ ಜುಹುವಿನಲ್ಲಿರುವ ಅಪಾರ್ಟ್ ಮೆಂಟ್ ಕೂಡ ಸೇರಿದೆ. 2022ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದಿ ಅಡಿ ಇಡಿ ಪ್ರಕರಣವನ್ನು ದಾಖಲಿಸಿದ್ದು, ಜಾರಿ ನಿರ್ದೇಶನಾಲಯವು 97.97 ಕೋಟಿ ರೂಪಾಯಿ ಮೊತ್ತದ ಸ್ಥಿರ ಹಾಗೂ ಚರಾಸ್ತಿಯನ್ನು ಜಪ್ತಿ ಮಾಡಿದೆ. ಜಪ್ತಿಯಾದ ಆಸ್ತಿಗಳಳ್ಲಿ […]

ತಂದೆ ಹಾಗೂ ಮಗಳ ಮುಂದೆಯೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

Wednesday, April 17th, 2024
Netravathi

ಬಂಟ್ವಾಳ : ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ‌ ನಡೆದಿದೆ. ನದಿಗೆ ಹಾರುವುದನ್ನು ಪುತ್ರಿ ಹಾಗೂ ಮಹಿಳೆಯ ತಂದೆ ತಡೆಯಲು ಯತ್ನಿಸಿದರೂ ಅವರಿಂದ ತಪ್ಪಿಸಿಕೊಂಡು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ ಯಶೋಧಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಘಟನೆಯ ಕುರಿತು ಆಕೆಯ ಪುತ್ರಿ ಸಂಪ್ರೀತಾ ನೀಡಿದ ದೂರಿನಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಶೋಧ ಅವರು ಮೂರ್ಛೆ ರೋಗದಿಂದ […]

ಮಂಗಳೂರಿನಲ್ಲಿ 2 ಕಿ.ಮೀ. ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ರಸ್ತೆಯುದ್ದಕ್ಕೂ ಜನಸಾಗರ

Monday, April 15th, 2024
ಮಂಗಳೂರಿನಲ್ಲಿ 2 ಕಿ.ಮೀ. ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ರಸ್ತೆಯುದ್ದಕ್ಕೂ ಜನಸಾಗರ

ಮಂಗಳೂರು : ಲೋಕಸಭಾ ಚುನಾವಣೆ ಹಿನ್ನಲೆ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾನುವಾರ ಸರಿಯಾಗಿ 7.36ಕ್ಕೆ ನಾರಾಯಣ ಗುರು ವೃತ್ತದ ಬಳಿಗೆ ಆಗಮಿಸಿ 7.39ಕ್ಕೆ ನಾರಾಯಣ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡಿ ರೋಡ್ ಶೋಗಾಗಿ ಸಿದ್ಧಪಡಿಸಲಾದ ಅಲಂಕೃತ ವಾಹನವನ್ನೇರಿ ರೋಡ್ ಶೋ ಆರಂಭಿಸಿದರು. ನಾರಾಯಣಗುರು ವೃತ್ತದಿಂದ ನವಭಾರತ ವೃತ್ತದವರೆಗೆ ಅಂದರೆ ಸುಮಾರು 2 ಕಿ.ಮೀ. ರೋಡ್ ಶೋ ನಡೆಸಿದರು. ಪ್ರಧಾನಿ ಮೋದಿಗಾಗಿ ರೋಡ್ ಶೋ ನಡೆಯುವ ರಸ್ತೆಯುದ್ದಕ್ಕೂ ಸಾವಿರಾರು ಮಂದಿ ಜಮಾಯಿಸಿ ಪ್ರಧಾನಿ ಮೋದಿ ಅವರಿಗೆ […]

ನಾರಾಯಣ ಗುರುಗಳಿಗೆ ಮಾಲಾರ್ಪಣೆ ಮಾಡೋದರಲ್ಲಿ ತಪ್ಪುಇದೆಯಾ, ಉಮಾನಾಥ ಕೋಟ್ಯಾನ್ ಪ್ರಶ್ನೆ

Saturday, April 13th, 2024
Umanath-kotian

ಮಂಗಳೂರು : ನಾರಾಯಣ ಗುರುಗಳಿಗೆ ಮಾಲಾರ್ಪಣೆ ಮಾಡೋದರಲ್ಲಿ ಏನಾದರೂ ತಪ್ಪುಇದೆಯಾ ಬಿಜೆಪಿಗೆ ಮುಸ್ಲಿಂ, ಕ್ರಿಶ್ಚಿಯನ್, ಬಂಟರು, ಬಿಲ್ಲವರು, ಕುಲಾಲರು ಪ್ರತಿಯೊಂದು ಸಮಾಜ ಮತ ಚಲಾಯಿಸುತ್ತಾರೆ. ಬಿಜೆಪಿ ಭಾರತ ದೇಶದ ಪ್ರತಿಯೊಬ್ಬನ ಪಾರ್ಟಿ. ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಸಂದೇಶ ಕೊಟ್ಟಿದ್ದಾರೆ ಎಂದು ಶಾಸಕ ಹಾಗೂ ಬಿಜೆಪಿ ಮುಖಂಡ ಉಮಾನಾಥ ಕೋಟ್ಯಾನ್ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜನಾರ್ದನ ಪೂಜಾರಿ ಅವರು ನಳಿನ್ ಕುಮಾರ್ ಕಟೀಲ್ ಎದುರು ಸ್ಪರ್ಧೆಗಿಳಿದಾಗ ಜಿಲ್ಲೆಯ […]

ಪ್ರಧಾನಿಯವರ ರೋಡ್ ಶೋ ಬಿಲ್ಲವರಿಗೆ ಮಂಕುಬೂದಿ ಎರಚುವ ಪ್ರಯತ್ನ : ಸತ್ಯಜಿತ್ ಸುರತ್ಕಲ್

Saturday, April 13th, 2024
satyajith

ಮಂಗಳೂರು: ಕಾಂಗ್ರೆಸ್ ಪಕ್ಷದಿಂದ ಬಿಲ್ಲವರಿಗೆ ಟಿಕೆಟ್ ನೀಡಿರುವುದನ್ನು ನೋಡಿ ಬಿಲ್ಲವರು ಎಲ್ಲಿ ಬಿಜೆಪಿ ಕೈ ಬಿಡುತ್ತದೆಯೋ ಎಂಬ ಅಂಜಿಕೆಯಿಂದ ಬಿಜೆಪಿಗೆ ಮತ್ತೆ ಬ್ರಹ್ಮಶ್ರೀ ನಾರಾಯಣ ಗುರುಗಳ ನೆನಪಾಗಿದೆ. ಅದಕ್ಕಾಗಿ ಪ್ರಧಾನಿಯವರ ಮೂಲಕ ನಾರಾಯಣ ಗುರು ವೃತ್ತದಿಂದ ರೋಡ್ ಶೋಗೆ ಬಿಜೆಪಿ ಮುಂದಾಗಿದೆ, ಇದು ಸಮಾಜಕ್ಕೆ ಮಂಕುಬೂದಿ ಎರಚುವ ಪ್ರಯತ್ನವಾಗಿದೆ ಎಂದು ಬ್ರಹ್ಮಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರು, ಕೋಟಿ ಚೆನ್ನಯರ ಹೆಸರಿನಲ್ಲಿ ಬಿಲ್ಲವ ಸಮಾಜದ ಜನರ ಭಾವನೆಗಳ […]

ಕೋತಿಗಳ ಕಾಟ, ಚುನಾವಣೆಯ ಹಿನ್ನೆಲೆಯಲ್ಲಿ ವಿಟ್ಲಾ ಪೊಲೀಸರಿಗೆ ನೀಡಿದ ಕೋವಿಯನ್ನು ಮರಳಿ ಪಡೆದ ರೈತ

Friday, April 12th, 2024
nishanth-gun

ಬಂಟ್ವಾಳ : ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರೈತರೊಬ್ಬರು ತನ್ನ ಬಳಿ ಇದ್ದ ಕೋವಿಯನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ವಿಟ್ಲಾ ಪೊಲೀಸರ ವಶಕ್ಕೆ ನೀಡಿದ್ದರು. ನಿಶಾಂತ್ ಅವರು ಜಿಲ್ಲಾಧಿಕಾರಿಗೆ ಪತ್ರ ಬರೆದು ಬಂದೂಕಿನ ಅಗತ್ಯತೆ ವಿವರಿಸಿದ್ದರು. ಡಿಸಿ ಅವರ ಮನವಿಗೆ ಕಿವಿಗೊಡದ ಕಾರಣ, ನಿಶಾಂತ್ ತಮ್ಮ ಬಂದೂಕನ್ನು ವಿಟ್ಲ ಪೊಲೀಸ್ ಠಾಣೆಯಲ್ಲಿ ಠೇವಣಿ ಇಟ್ಟಿದ್ದರು. ಮಣಿಮೂಲೆ ಗೋವಿಂದ ಭಟ್ ಮತ್ತು ವಕೀಲ ಸುಬ್ರಹ್ಮಣ್ಯ ಭಟ್ ಅವರೊಂದಿಗೆ ಪೊಲೀಸರು ತಮ್ಮ ಗನ್ ಹಿಂತಿರುಗಿಸುವಂತೆ ನಿಶಾಂತ್ ಏಪ್ರಿಲ್ 1 ರಂದು ಹೈಕೋರ್ಟ್‌ಗೆ ಅರ್ಜಿ […]

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಪ್ರಮುಖ ‌ಶಂಕಿತರಿಬ್ಬರ ಬಂಧನ

Friday, April 12th, 2024
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಪ್ರಮುಖ ‌ಶಂಕಿತರಿಬ್ಬರ ಬಂಧನ

ಬೆಂಗಳೂರು: ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಪ್ರಮುಖ ‌ಶಂಕಿತರಾದ ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್ ತಾಹಾನನ್ನು ಪಶ್ಚಿಮ ಬಂಗಾಳದಲ್ಲಿ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕ ಅರವಿಂದ್ ಬೆಲ್ಲದ್ ತಮ್ಮ ಎಕ್ಸ್ ಖಾತೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೊನೆಗೂ ಸಿಕ್ಕಿಬಿದ್ದ ಖಾನ್‌ಗ್ರೆಸ್ ಬ್ರದರ್ಸ್ ಎಂದು ಬರೆದುಕೊಂಡಿದ್ದಾರೆ. ಸುಖಾಸುಮ್ಮನೆ ಬಿಜೆಪಿ ಕರ್ಯಕರ್ತನ ಮೇಲೆ ಆರೋಪ ಹೊರಿಸಿದ್ದ @ದಿನೇಶ್ ಗುಂಡೂರಾವ್ ಅವರೇ ಎಲ್ಲಿ ಹೋದಿರಿ? ನೀವು ಕ್ಷಮೆ ಕೇಳಲೇಬೇಕು! […]

ಲೋಕಸಭಾ ಚುನಾವಣೆ ಯ ಅಭ್ಯರ್ಥಿಗಳ ಖರ್ಚು ವೆಚ್ಚಗಳ ಬಗ್ಗೆ ವಿಶೇಷ ನಿಗಾ

Friday, April 12th, 2024
election-officer

ಮಂಗಳೂರು : ಮುಕ್ತ ಹಾಗೂ ಪಾರದರ್ಶಕ ಚುನಾವಣೆಗೆ ಮಾದರಿ ನೀತಿ ಸಂಹಿತೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಹಾಗೂ ಪ್ರತಿಯೊಂದು ಘಟನೆಯನ್ನು ಸೂಕ್ಷ್ಮವಾಗಿ ಗಮನಿಸಿ ಅಭ್ಯರ್ಥಿಗಳ ವೆಚ್ಚದ ಬಗ್ಗೆ ನಿಗಾವಹಿಸಬೇಕು ಎಂದು ರಾಜ್ಯಕ್ಕೆ ನಿಯೋಜನೆಗೊಂಡ ವಿಶೇಷ ವೆಚ್ಚ ವೀಕ್ಷಕ ಬಿ. ಮುರಳೀ ಕುಮಾರ್ ಅವರು ನಿರ್ದೇಶನ ನೀಡಿದರು. ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏ.12ರ ಶುಕ್ರವಾರ 17- ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ […]

ದ್ವಿತೀಯ ಪಿ.ಯು.ಸಿ. ಫಲಿತಾಂಶ : ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಅತುತ್ತಮ ಸಾಧನೆ

Friday, April 12th, 2024
purohith-kushiben

ಪುತ್ತೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಳೆದ ಮಾರ್ಚ್ ನಲ್ಲಿ ನಡೆಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1 ರಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ. ಕಲಾ ವಿಭಾಗದಲ್ಲಿ ಪುರೋಹಿತ ಖುಷಿಬೆನ್ ರಾಜೇಂದ್ರಕುಮಾರ್ (ಉಪ್ಪಿನಂಗಡಿಯ ರಾಜೇಂದ್ರಕುಮಾರ್ ಹಾಗೂ ಮನೀಷಾಬೆನ್ ಇವರ ಪುತ್ರಿ) ಇವರು 594 ಅಂಕಗಳನ್ನು ಗಳಿಸಿಕೊಳ್ಳುವುದರ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ ಹಾಗೂ ರಾಜ್ಯಕ್ಕೆ ತೃತೀಯ ರ‍್ಯಾಂಕ್ ಗಳಿಸಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ನೇತ್ರಾ ಡಿ. […]