ಮಿಥುನ್ ರೈ ಗೆಲ್ಲಿಸಿ, ಅಭಿವೃದ್ಧಿ ಮತ್ತು ಪಕ್ಷ ಸಂಘಟನೆಗೆ ಒತ್ತು ನೀಡಿ : ಡಿ.ಕೆ.ಶಿವಕುಮಾರ್

Monday, April 15th, 2019
Mithun-Rai

ಸುಳ್ಯ : ದಕ್ಷಿಣ ಕನ್ನಡ ಲೋಕಸಭಾ ಸದಸ್ಯನಾಗಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಎಂ.ರೈಯನ್ನು ಗೆಲ್ಲಿಸಿ, ನಾವೆಲ್ಲರೂ ಸೇರಿ ಸುಳ್ಯ ಪ್ರದೇಶವನ್ನು ಅಭಿವೃದ್ಧಿ ಮಾಡುವುದಲ್ಲದೆ ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಬಲಿಷ್ಠವಾಗಿ ಸಂಘಟಿಸೋಣ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು. ಅವರು ಸುಳ್ಯ ತಾಲೂಕಿನ ಗುತ್ತಿಗಾರು ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪರವಾಗಿ ಚುನಾವಣಾ ಪ್ರಚಾರ ನಡೆಸಿ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ಸುಳ್ಯ ಪ್ರದೇಶದ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಎಂಬುದು ತನ್ನ ಗಮನಕ್ಕೆ ಬಂದಿದ್ದು, ಈ ಬಾರಿ […]

ಎಂಡೋಪೀಡಿತ ಅಭಿಷೇಕ್, ದ್ವಿತೀಯ ಪಿ.ಯು.ಸಿ.ಯಲ್ಲಿ ಪ್ರಥಮ ಸ್ಥಾನದಲ್ಲಿ ತೇರ್ಗಡೆ

Monday, April 15th, 2019
Abhishek

ಮಂಗಳೂರು : ಅಭಿಷೇಕ್, ಎಂಡೋಪಾಲನಾ ಕೇಂದ್ರ, ಕೊಲದ ವಿದ್ಯಾರ್ಥಿ ದ್ವಿತೀಯ ಪಿ.ಯು.ಸಿ. ಕಲಾವಿಭಾಗ ದಲ್ಲಿ 63 ಶೇಕಡಾ ಅಂಕ ಪಡೆದು ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗಿರುತ್ತಾನೆ. ಶ್ರೀ ವಸಂತ ಮತ್ತು ಶ್ರೀಮತಿ ಗಂಗರತ್ನ ಇವರ ಪುತ್ರನಾದ ಅಭಿಷೇಕ್ ಕಳೆದ ವರ್ಷ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 76% ಅಂಕ ಪಡೆದು ತೇರ್ಗಡೆಯಾಗಿರುವನು. ಸೇವಾ ಭಾರತಿ (ರಿ) ಮಂಗಳೂರು ಅಭಿಷೇಕ್‌ನ ಸಾಧನೆಗೆ ಅಭಿನಂದಿಸಿದೆ. ಹಾಗೂ ಈ ಸಾಧನೆಗೈಯಲು ಸಹಕರಿಸಿದ ದ.ಕ. ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಪ್ರಾಂಶುಪಾಲರು ಸರ್ಕಾರಿ […]

ವಿಪಕ್ಷೀಯರು ಭ್ರಷ್ಟಾಚಾರದ ಮೂಲಕ ದೇಶದ ಸಂಪತ್ತನ್ನು ಕೊಳ್ಳೆ ಹೊಡೆದರು

Monday, April 15th, 2019
Vijayasankalpa

ಮಂಗಳೂರು: ಕಾಂಗ್ರೆಸ್‌-ಜೆಡಿಎಸ್‌ ಮತ್ತಿತರ ಪಕ್ಷಗಳು ವಂಶೋದಯದ ಬಗ್ಗೆಯೇ ಗಮನವನ್ನು ಕೇಂದ್ರೀಕರಿಸಿವೆ. ಆದರೆ ಬಿಜೆಪಿಯು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾ ನತೆಯ ಲಾಭ ದೊರೆಯಬೇಕೆಂಬ ಅಂತ್ಯೋದಯದ ತಣ್ತೀವನ್ನು ಹೊಂದಿದೆ. ವಂಶೋ ದಯದವರು ಅವರ ಕುಟುಂಬದ ಹಿತಾಸಕ್ತಿ ಯನ್ನೇ ನೋಡಿಕೊಳ್ಳುವರು. ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮಂಗಳೂರಿನ ಕೇಂದ್ರ ಮೈದಾನದಲ್ಲಿ ಶನಿವಾರ ಬಿಜೆಪಿ ಚುನಾವಣ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌-ಜೆಡಿಎಸ್‌ ಅವರ ಕುಟುಂಬಿಕರನ್ನು ಮಾತ್ರ ಅಧಿಕಾರಕ್ಕೆ ತರಲು ಯತ್ನಿಸುವರು ಎಂದರು. ವಿಪಕ್ಷೀಯರು ಭ್ರಷ್ಟಾಚಾರದ ಮೂಲಕ ದೇಶದ ಸಂಪತ್ತನ್ನು ಕೊಳ್ಳೆ […]

ಮೋದಿ ಸ್ವಾಗತಿಸಲು ಶಾಸಕ ಹರೀಶ್ ಪೂಂಜಾ ಚೌಕಿದಾರ್ ಸಮವಸ್ತ್ರ

Saturday, April 13th, 2019
Harish-poonja

ಮಂಗಳೂರು :   ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ವಿಭಿನ್ನ ರೀತಿ ಯಲ್ಲಿ ಮೋದಿ ಅವರನ್ನು ಸ್ವಾಗತಿಸಲು ತಯಾರಿ ನಡೆಸಲಾಗಿದೆ. ಈ ನಡುವೆ ಚೌಕಿದಾರ್ ಸಮವಸ್ತ್ರ ಧರಿಸಿದ ಶಾಸಕ ಹರೀಶ್ ಪೂಂಜಾ ಅವರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೈ ಭಿ ಚೌಕಿದಾರ್ ಎಂದು ಬರೆದಿರುವ ಖಾಕಿ ಸಮವಸ್ತ್ರ, ಖಾಕಿ ಟೋಪಿ ಧರಿಸಿ ಬಿಜೆಪಿ ಕಾರ್ಯಕರ್ತರು ಮೋದಿ ಅವರನ್ನು ಸ್ವಾಗತಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಮೋದಿ ಕಾರ್ಯಕ್ರಮಕ್ಕೆ ಮಂಗಳೂರಿನಲ್ಲಿ ಕ್ಷಣಗಣನೆ ಆರಂಭವಾಗಿದೆ. ಪ್ರಧಾನಿ […]

ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯ- ಮತದಾನ ಜಾಗೃತಿಗಾಗಿ ಜಾಥಾ

Saturday, April 13th, 2019
Srinivasa College

ಮಂಗಳೂರು : ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯ ವಳಚ್ಚಿಲ್ ಹಾಗೂ ಎಸ್‌ವಿಇಇಪಿ ಸಮಿತಿಯ ಸಹಯೋಗದೊಂದಿಗೆ ವಿದ್ಯಾರ್ಥಿ ಸಮುದಾಯಕ್ಕೆ ಹಾಗೂ ಜನ ಸಾಮಾನ್ಯರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ನಲ್ಲಿ ಮಾನವ ಸರಪಳಿ ಹಾಗೂ ಜಾಥಾ ಕಾರ್ಯಕ್ರಮವನ್ನು ವಳಚ್ಚಿಲ್ ನಲ್ಲಿ ಹಮ್ಮಿಕೊಳ್ಳಲಾಯಿತು. ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರುಗಳು ಈ ಜಾಥಾದಲ್ಲಿ ಪಾಲ್ಗೊಂಡಿದ್ದರು. ಕಾಲೇಜಿನ ಸ್ವೀಪ್ ಘಟಕದ ಸಂಯೋಜಕರಾದ ಡಾ| ಅನಂತ ಕುಲಕರ್ಣಿಯವರು ಸ್ವಾಗತಿಸಿದರು. ಬಲವಾದ ಪ್ರಜಾಪ್ರಭುತ್ವದ ಸ್ಥಾಪನೆಗಾಗಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮತದಾನ ಕೇಂದ್ರಕ್ಕೆ ತೆರಳಿ […]

ಚೂರಿ ಇರಿತ : ಉಳ್ಳಾಲ್ ವೈನ್ಸ್ ಉದ್ಯೋಗಿ ಆಸ್ಪತ್ರೆಯಲ್ಲಿ ಮೃತ್ಯು

Friday, April 12th, 2019
Nithin Jogi

ಮಂಗಳೂರು  : ಉಳ್ಳಾಲ ಪ್ಯಾರೀಸ್ ಜಂಕ್ಷನ್ನಿನಲ್ಲಿರುವ ಉಳ್ಳಾಲ್ ವೈನ್ಸ್ ನಲ್ಲಿ ಕೆಲಸಕ್ಕಿದ್ದ ಯುವಕನಿಗೆ ಕಳೆದ ಭಾನುವಾರ ದಂದು  ಕೋಳಿ ಬಾಲಿನಿಂದ  ಗಂಭೀರ ವಾಗಿ ಇರಿಯಲಾಗಿತ್ತು, ಆದರೆ ಗಾಯಗೊಂಡಿದ್ದ ಯುವಕ ಏ.10ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಉಳ್ಳಾಲ ಬಂಡಿ ಕೊಟ್ಯ ನಿವಾಸಿ ನಿತಿನ್ ಜೋಗಿ(35) ಮೃತ ಯುವಕ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಗವೀರಪಟ್ಣ ನಿವಾಸಿ ರಜನೀಶ್ ನನ್ನು ಬಂಧಿಸಲಾಗಿದೆ. ಉಳ್ಳಾಲ ಪ್ಯಾರೀಸ್ ಜಂಕ್ಷನ್ನಿನಲ್ಲಿರುವ ಉಳ್ಳಾಲ್ ವೈನ್ಸ್ ನಲ್ಲಿ ಕೆಲಸಕ್ಕಿದ್ದ ನಿತಿನ್, ಬಳಿ ದಿನನಿತ್ಯ ಆರೋಪಿ ರಜನೀಶ್ ಎಂಬಾತ ಬಂದು ಹರಟೆ ಮಾತನಾಡುತ್ತಿದ್ದ‌ . ಎ.07 ಭಾನುವಾರದಂದು ರಜನೀಶ್ […]

ಭರತೇಶ ವೈಭವ ಸಾರ್ವಕಾಲಿಕ ಕೃತಿ- ಡಾ.ಎನ್.ಎಸ್.ತಾರಾನಾಥ್

Friday, April 12th, 2019
Bharatesha Vaibhava

ಮಂಗಳೂರು : ಕೃತಿಯೊಂದು ಪೂರ್ವಕಾಲೀನ, ಸಮಕಾಲೀನ ಸಂಗತಿಗಳನ್ನು ಒಳಗೊಂಡರೆ ಸಾರ್ವಕಾಲಿಕ ವೆನಿಸುತ್ತದೆ. ರತ್ನಾಕರವರ್ಣಿಯ ಭರತೇಶ ವೈಭವವು ಪೂರ್ವಕಾಲಿಕವಾಗಿ ಬಂದ ಕೃತಿಗಳ ಸಾರವನ್ನು ವಿಭಿನ್ನವಾಗಿ, ನಾವೀನ್ಯವಾಗಿ ಚಿತ್ರಿತವಾಗಿದೆ. ಇದರೊಂದಿಗೆ ಕವಿ ತನ್ನ ಕಾಲದ ಮೌಲ್ಯಗಳನ್ನು, ಚಾರಿತ್ರಿಕ ವಿಚಾರಗಳನ್ನು ಹೊಂದಿಸಿಕೊಂಡಿದ್ದಾನೆ. ಹಾಗಾಗಿ ಭರತೇಶ ವೈಭವ ಕೃತಿಯೂ ಸಾರ್ವಕಾಲಿಕವೆನಿಸಿದೆ ಎಂದು ವಿಶ್ರಾಂತ ಕನ್ನಡ ಪ್ರಾಧ್ಯಾಪಕರೂ, ಸಂಶೋಧಕರೂ ಆದ ಡಾ. ಎನ್.ಎಸ್ ತಾರಾನಾಥ ನುಡಿದರು. ಅವರು ಡಾ. ಪಿ.ದಯಾನಂದ.ಪೈ- ಪಿ.ಸತೀಶ.ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ರಥಬೀದಿ ಕಾಲೇಜಿನಲ್ಲಿ ಮಹಾಕವಿ ರತ್ನಾಕರವರ್ಣಿ […]

ಕದ್ರಿ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Thursday, April 11th, 2019
Kadri Temple

ಮಂಗಳೂರು  : ಕದ್ರಿ ಶ್ರೀ ಮಂಜುನಾಥದೇವಸ್ಥಾನದಲ್ಲಿ ಮೇ 2 ರಿಂದ 11 ರವರೆಗೆ ಜರಗಲಿರುವ ಬ್ರಹ್ಮಕಲಶ, ಮಹಾರುದ್ರಯಾಗ ಹಾಗೂ ಮಹಾ ದಂಡರುದ್ರಾಭಿಷೇಕದ ಆಮಂತ್ರಣ ಪತ್ರಿಕೆಯನ್ನುತಾ 10, ಬುಧವಾರ ಬೆಳಿಗ್ಗೆ  ಶ್ರೀ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಲಾಯಿತು. ಬ್ರಹ್ಮಕಲಶೋತ್ಸವ ಸಮಿತಿಯ ಹಾಗೂ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರೂ ಆಗಿರುವ ಎ. ಜಿ. ಶೆಟ್ಟಿಯವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿಎಸ್. ಪ್ರದೀಪ್‌ಕುಮಾರ್‌ಕಲ್ಕೂರ, ದೇವಳದ ಕಾರ್ಯನಿರ್ವಹಣಾಧಿಕಾರಿಡಾ. ನಿಂಗಯ್ಯ ವಿಠಲ ದಾಸತಂತ್ರಿ, ರಾಮಣ್ಣಅಡಿಗ, ರಾಘವೇಂದ್ರಅಡಿಗ, ಶಶಿಧರ ಹೆಗ್ಡೆ, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ದಿನೇಶ್‌ದೇವಾಡಿಗ,ರಂಜನ್‌ಕುಮಾರ್, ಸುರೇಶ್‌ಕುಮಾರ್, ಹರಿನಾಥಜೋಗಿ, ರಾಘವೇಂದ್ರ […]

ಎಪ್ರಿಲ್ 13 ರ ಸಮಾವೇಶ ಹೊಸ‌ ಇತಿಹಾಸ‌ ನಿರ್ಮಿಸಲಿದೆ : ಸುನಿಲ್ ಕುಮಾರ್

Wednesday, April 10th, 2019
Sunil-Karkala

ಮಂಗಳೂರು: ಎಪ್ರಿಲ್ 13 ರಂದು ನಡೆಯುವ ಸಮಾವೇಶದ ಪೂರ್ವಭಾವಿ ತಯಾರಿ ಸಭೆಯಲ್ಲಿ ಮಾತನಾಡಿದ ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಹಾಗೂ ಕಾರ್ಕಳ‌ ಶಾಸಕ ಸುನಿಲ್ ಕುಮಾರ್ ಕರಾವಳಿಯಲ್ಲಿ ಭಾಜಪಾ ಕಾರ್ಯಕರ್ತರ ಉತ್ಸಾಹ ಮುಗಿಲು ಮುಟ್ಟಿದೆ ಎಂದು ಹೇಳಿದ್ದಾರೆ . ಭಾರತೀಯ ಜನತಾ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆದ ಮಂಗಳೂರು ನಗರ, ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,ಕಳೆದ ಬಾರಿ ನರೇಂದ್ರ ಮೋದಿ ಮಂಗಳೂರಿಗೆ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದಾಗ ದಾಖಲೆಯ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿ […]

ಮತದಾರರ ಜಾಗೃತಿಗೆ ಸಹ್ಯಾದ್ರಿ ಕಾಲೇಜ್ ಸಹಿ ಆಂದೋಲನ

Wednesday, April 10th, 2019
Sahyadri-Awareness

ಮಂಗಳೂರು  : ಮುಂಬರುವ ಲೋಕ ಸಭಾ ಚುನಾವಣೆಗಳಲ್ಲಿ ಸಕ್ರಿಯ ಪಾಲ್ಗೊಳ್ಳಲು ಮೊದಲ ಬಾರಿಗೆ ಮತದಾರರನ್ನು ಉತ್ತೇಜಿಸಲು, ಸಹ್ಯಾದ್ರಿ ಕಾಲೇಜ್ ಎನ್.ಎಸ್.ಎಸ್ ಘಟಕವು ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗೆ ಪ್ರತಿಜ್ಞೆ ಮಾಡುವ ಮತ್ತು ಕಾಲೇಜು ಕ್ಯಾಂಪಸ್ನಲ್ಲಿ ಸಹಿ ಅಭಿಯಾನವನ್ನು ಪ್ರಾರಂಭಿಸುವ ಮೂಲಕ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳನ್ನು ಮತ ಚಲಾಯಿಸಲು ಪ್ರೋತ್ಸಾಹಿಸಲು ಒಂದು ಅನನ್ಯ ಮಾರ್ಗವನ್ನು ಪ್ರಾರಂಭಿಸಿತು. ಸಹಿ ಮಾಡುವ ಮೂಲಕ ಮತ ಚಲಾಯಿಸಿ. ಗರಿಷ್ಠ ಸಂಖ್ಯೆಯ ವಿದ್ಯಾರ್ಥಿಗಳನ್ನು ಮತದಾನ ಮಾಡಲು ಉತ್ತೇಜಿಸಲು ಈ ಎರಡು ದಿನಗಳ ಪ್ರಚಾರ ಕಾರ್ಯಕ್ರಮ ಹಮ್ಮಿಕೊಂಡಿದೆ […]