ಕಾಂಗ್ರೆಸ್‌ನಿಂದ ನನಗೆ ಅವಮಾನ ಆಗಿಲ್ಲ: ಜನಾರ್ದನ ಪೂಜಾರಿ

Wednesday, May 9th, 2018
janardhan-poojary

ಮಂಗಳೂರು: ನನಗೆ ಕಾಂಗ್ರೆಸ್‌ನಿಂದ ಅಪಮಾನ ಆಗಿಲ್ಲ. ಹರಿಕೃಷ್ಣ ಬಂಟ್ವಾಳ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದು ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜನರು ಬಿಜೆಪಿ ಅಭ್ಯರ್ಥಿ ಹರಿಕೃಷ್ಣರ ಮಾತು ನಂಬುವಷ್ಟು ದಡ್ಡರಲ್ಲ, ಹರಿಕೃಷ್ಣ ಯಾರು? ಪೂಜಾರಿ ಯಾರು? ಎಂದು ಜನರಿಗೆ ಗೊತ್ತಿದೆ. ಸಿದ್ದರಾಮಯ್ಯ ಬಗ್ಗೆ ಖಡಕ್ ಮಾತಾಡಿದ್ದು ಹೌದು. ಸರ್ಕಾರಕ್ಕೆ ನಾನು ಸಲಹೆ ಕೊಟ್ಟಿದ್ದೇನೆ ಅದು ತಪ್ಪೇ? ಎಂದ ಅವರು, ಸಿಎಂ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುತ್ತಾರೆ ಎಂದರು. ಆಸ್ಕರ್ ಫರ್ನಾಂಡೀಸ್ […]

ನನಗೆ ಹಿಂದೂಗಳ ಮತ ಬೇಡವೆಂದು ಎಲ್ಲಿಯೂ ಹೇಳಲಿಲ್ಲ: ರಮಾನಾಥ ರೈ

Wednesday, May 9th, 2018
hindustan

ಬಂಟ್ವಾಳ: ಬಂಟ್ವಾಳ ಕ್ಷೇತ್ರದಲ್ಲಿ ನನಗೆ ಹಿಂದೂಗಳ ಮತ ಬೇಡವೆಂದು ತಾನು ಎಲ್ಲಿಯೂ ಹೇಳಲಿಲ್ಲ. ಆದರೆ ಬಿಜೆಪಿ ಮುಖಂಡರು ನನ್ನ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಸಚಿವ ರಮಾನಾಥ ರೈ ಹೇಳಿದ್ದಾರೆ. ಬುಧವಾರ ಬಿ.ಸಿ.ರೋಡಿನಲ್ಲಿರುವ ಪಕ್ಷದ ಕಾರ್ಯಾಲಯದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಿಜೆಪಿಗೆ ಪ್ರಚಾರ ಮಾಡಲು ಯಾವುದೇ ವಿಷಯಗಳಿಲ್ಲ. ಅದಕ್ಕಾಗಿ ಈ ರೀತಿಯ ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ತಾನು ಬಂಟ್ವಾಳ ಕ್ಷೇತ್ರದ ಪುಣ್ಯ ಕ್ಷೇತ್ರಗಳಿಗೆ ಬಂದು ಆಣೆ ಪ್ರಮಾಣ ಮಾಡುತ್ತಾನೆ. ಈ […]

ದ.ಕ.ಜಿಲ್ಲೆಯ 8 ಕ್ಷೇತ್ರದಲ್ಲೂ ಕಾಂಗ್ರೆಸ್‌ಗೆ ಗೆಲುವು: ಜನಾರ್ದನ ಪೂಜಾರಿ

Wednesday, May 9th, 2018
j-r-lobo

ಮಂಗಳೂರು: ದ.ಕ. ಜಿಲ್ಲೆಯ 8 ಕ್ಷೇತ್ರದಲ್ಲೂ ಕೂಡ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಹೇಳಿದರು. ನಗರದ ಕದ್ರಿಯಲ್ಲಿರುವ ಕಾಂಗ್ರೆಸ್ ಪಕ್ಷದ ಚುನಾವಣಾ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಅವರು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ 7 ಸ್ಥಾನಗಳನ್ನು ಗೆದ್ದಿದ್ದರೆ ಈ ಬಾರಿ 8 ಸ್ಥಾನವನ್ನೂ ಗೆಲ್ಲಲಿದೆ. ಅದಕ್ಕಾಗಿ ಪಕ್ಷದ ಕಾರ್ಯಕರ್ತರು ಶಕ್ತಿಮೀರಿ ಶ್ರಮಿಸಲಿದ್ದಾರೆ ಎಂದರು. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದಲ್ಲಿ ಜೆ.ಆರ್.ಲೋಬೊ ವಿರುದ್ಧ ತೀವ್ರ ಅಪಪ್ರಚಾರ ಮಾಡಲಾಗುತ್ತಿದೆ. ಇದು […]

ದುರಹಂಕಾರ ಬಿಟ್ಟರೆ ಸಿದ್ದರಾಮಯ್ಯ ಉಳೀತಾರೆ: ಬಿ ಜನಾರ್ದನ ಪೂಜಾರಿ

Wednesday, May 9th, 2018
janardhan-poojary

ಮಂಗಳೂರು: ಪತ್ರಿಕಾಗೋಷ್ಠಿಗಳಿಂದ ದೂರ ಉಳಿದಿದ್ದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೆಪಿಸಿಸಿ ಅಧ್ಯಕ್ಷ ಬಿ ಜನಾರ್ದನ ಪೂಜಾರಿ ಮತ್ತೆ ಮೈಕ್ ಎತ್ತಿಕೊಂಡಿದ್ದಾರೆ. ಕಾಂಗ್ರೆಸ್ ಕಚೇರಿಗಳಿಂದ ದೂರ ಉಳಿದಿದ್ದ ಪೂಜಾರಿ ಇಂದು ಕಾಂಗ್ರೆಸ್ ಕಚೇರಿಯಲ್ಲೇ ಮಾಧ್ಯಮಗೋಷ್ಠಿ ನಡೆಸಿದರು. ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಜನಾರ್ದನ ಪೂಜಾರಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಿವಿಮಾತು ಹೇಳಿದರು. “ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಾನು ಸಲಹೆಗಳನ್ನು ಕೊಟ್ಟಿದ್ದು ನಿಜ. ದುರಹಂಕಾರಿ ಮನೋಭಾವ ಬದಲಿಸದಿದ್ದರೆ ಸೋಲುತ್ತಾರೆ ಎಂದು ಹೇಳಿದ್ದೆ. ಪಕ್ಷಕ್ಕಿಂತ ತಾನೇ ದೊಡ್ಡವನೆಂದು ನಡೆದುಕೊಂಡರೆ ಉಳಿಗಾಲವಿಲ್ಲ ಎಂದಿದ್ದೆ. ಈಗಲೂ ಹೇಳುತ್ತೇನೆ, […]

ಪೂಜಾರಿ ಅವರನ್ನು ಕಾಂಗ್ರೆಸ್ ಮತ್ತೆ ಅವಮಾನಿಸಿದೆ: ಹರಿಕೃಷ್ಣ ಬಂಟ್ವಾಳ್

Wednesday, May 9th, 2018
harikrishna-bantwal

ಮಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ಬಿ. ಜನಾರ್ದನ ಪೂಜಾರಿ ಅವರ ಕುರಿತು ಸುಳ್ಳು ಸುದ್ದಿ ಹರಡಿಸಿ ಕಾಂಗ್ರೆಸ್ ಮತ್ತೊಮ್ಮೆ ಅವರನ್ನು ಅವಮಾನಿಸಿದೆ ಎಂದು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ಕಿಡಿಕಾರಿದ್ದಾರೆ. ಮಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಚುನಾವಣೆ ಸಂದರ್ಭದಲ್ಲಿ ಜನಾರ್ದನ ಪೂಜಾರಿ ಕುರಿತು ಸುಳ್ಳು ಸುದ್ದಿ ಹರಡಿಸುವುದು ಕಾಂಗ್ರೆಸಿಗರ ಷಡ್ಯಂತ್ರ ಎಂದು ಆರೋಪಿಸಿದ್ದಾರೆ. ಕನ್ನಡ ದಿನ ಪತ್ರಿಕೆ ಉದಯವಾಣಿ ಹೆಸರಿನಲ್ಲಿ ಸುಳ್ಳು ಸುದ್ದಿಯೊಂದನ್ನು ಪೂಜಾರಿ ಅವರ ಕುರಿತು ಸೃಷ್ಠಿಸಲಾಗಿದ್ದು, ‘ಬಿಜೆಪಿಯನ್ನು ಸೋಲಿಸಲು ಕರೆ ಕೊಟ್ಟ ಪೂಜಾರಿ’ […]

ಅಭಿವೃದ್ಧಿಯ ಮುನ್ನಡೆಗೆ ಮತ್ತೆ ಕಾಂಗ್ರೆಸ್ ಸರ್ಕಾರ ಅನಿವಾರ್ಯ: ಪಿ. ಚಿದಂಬರಂ

Wednesday, May 9th, 2018
congress

ಮಂಗಳೂರು: ಕಾಂಗ್ರೆಸ್‌ಗೆ ಪೂರ್ಣ ಬಹುಮತ ನೀಡಲು ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಜನತೆಗೆ ಕರೆ ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ಧಿಗೋಷ್ಠಿಯಲ್ಲಿ ಮತನಾಡಿದ ಅವರು ಅಭಿವೃದ್ಧಿಯ ಮುನ್ನಡೆಗೆ ಮತ್ತೆ ಕಾಂಗ್ರೆಸ್ ಸರ್ಕಾರ ಅನಿವಾರ್ಯ. ರಾಜ್ಯದ ಅಭಿವೃದ್ಧಿ ದರ ಅತ್ಯುತ್ತಮ ಮಟ್ಟದಲ್ಲಿದೆ. ಉದ್ಯೋಗ, ಶಿಕ್ಷಣ, ಔದ್ಯಮಿಕ ವಲಯದಲ್ಲಿ ಗಮನಾರ್ಹ ಸಾಧನೆ ಮಾಡಿದೆ. ದೇಶದ ದರಕ್ಕೆ ಹೋಲಿಸಿದರೆ ಇದು ಸಾಕಷ್ಟು ಎತ್ತರದಲ್ಲಿದೆ ಎಂದು ಹೇಳಿದರು. ಸಿದ್ದರಾಮಯ್ಯ ಸರ್ಕಾರದಲ್ಲಿ ಉತ್ತಮ ಹಣಕಾಸಿನ ನಿರ್ವಹಣೆ ನೀಡಿದೆ.ಸಾಮಾಜಿಕ ವಲಯದಲ್ಲಿ ಬಜೆಟ್‌ನಲ್ಲಿ ಉತ್ತಮ ಅನುದಾನ. ಆದರೆ, ಬಿಜೆಪಿ […]

ಯು.ಟಿ. ಖಾದರ್ ಪರ ಐವನ್ ಮತ ಯಾಚನೆ

Wednesday, May 9th, 2018
u-t-kader

ಮಂಗಳೂರು: ಉಳ್ಳಾಲ ವಿಧಾನಸಭಾ ಕ್ಷೇತ್ರದ ಕಲ್ಲಾಪು, ಮುಡಿಪು, ದೇರಲಕಟ್ಟೆ ಮುಂತಾದ ಕಡೆಗಳಲ್ಲಿ ಯು.ಟಿ.ಖಾದರ್ ಪರವಾಗಿ ಸರಕಾರಿ ಮುಖ್ಯ ಸಚೇತಕ ಐವನ್ ಡಿಸೋಜಾ ಮತಯಾಚನೆ ಮಾಡಿದರು. ರಾಜ್ಯದಲ್ಲಿ ಸಚಿವರಾಗಿ ಹಾಗೂ ಸಕ್ರಿಯ ರಾಜಕೀಯದಲ್ಲಿ ತೊಡಗಿಸಿಕೊಂಡಿರುವ ಯು.ಟಿ ಖಾದರ್ ಅವರು ರಾಜ್ಯಕ್ಕೆ 2000ಕ್ಕೂ ಅಧಿಕ ಕೋಟಿ ಅನುದಾನವನ್ನು ದೊರಕಿಸಿಕೊಟ್ಟಿದ್ದಾರೆ. ಈ ಮೂಲಕ ಮಂಗಳೂರು ಕ್ಷೇತ್ರಅಭಿವೃದ್ಧಿಪಡಿಸಿದ್ದು, ಯು.ಟಿ. ಖಾದರ್ ಅವರನ್ನು ಅತ್ಯಂತ ಹೆಚ್ಚಿನ ಮತದಿಂದ ಆರಿಸಬೇಕೆಂದು ಹೇಳಿ ಕಲ್ಲಾಪು ದೇರಲಕಟ್ಟೆ, ಮುಡಿಪು ಮುಂತಾದ ಕಡೆಗಳಲ್ಲಿ ತೆರಳಿ ಮತ ಯಾಚನೆ ಮಾಡಿದರು. ಉಳ್ಳಾಲದಂತಹ ಕ್ಷೇತ್ರದಲ್ಲಿ […]

‘ಕಾಂಗ್ರೆಸ್ ಅಧಿಕಾರಕ್ಕೇರಿದರೆ ರಾಜ್ಯದಲ್ಲಿ ಜಿಹಾದಿ, ಗೂಂಡಾ ಕೇಂದ್ರ’: ಯೋಗಿ ಆದಿತ್ಯನಾಥ್

Wednesday, May 9th, 2018
yogi-2

ಮಂಗಳೂರು: ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಕರ್ನಾಟಕವನ್ನು ಮತ್ತೆ ಜಿಹಾದಿ, ಗೂಂಡಾ ಹಾಗೂ ಮಾಫಿಯಾಗಳ ಕೇಂದ್ರವನ್ನಾಗಿ ಮಾಡಲಿದ್ದಾರೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಿಡಿಕಾರಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಅಂಗಾರ ಪರ ಮಂಗಳವಾರ ಪ್ರಚಾರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದ ಅವರು, ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.”ಸಿದ್ಧರಾಮಯ್ಯರಿಗೆ ನಾನು ರಾಜ್ಯಕ್ಕೆ ಬರುವುದು ಇಷ್ಟವಿಲ್ಲ. ನನ್ನ ಪ್ರಚಾರ ಕಾರ್ಯವನ್ನು ವಿರೋಧಿಸುತ್ತಾರೆ. ಸಿದ್ಧರಾಮಯ್ಯ ಜಾತಿ-ಜಾತಿಗಳನ್ನು […]

ಈ ದೇಶದ ನಂ ಒನ್ ಸುಳ್ಳುಗಾರ ಪ್ರಧಾನಿ ಮೋದಿ: ರಮಾನಾಥ ರೈ

Wednesday, May 9th, 2018
ramanath-rai

ಕಡಬ: ನಮ್ಮಲ್ಲಿ ಇಬ್ಬರು ಸುಳ್ಳುಗಾರರಿದ್ದಾರೆ, ಅದರಲ್ಲಿ ಒಂದನೆ ಸುಳ್ಳುಗಾರ ಸಂಸದ ನಳಿನ್ ಕುಮಾರ್ ಕಟೀಲ್, ಮತ್ತೊಬ್ಬ ಮಹಾನ್ ಸುಳ್ಳುಗಾರ ಇದ್ದರೆ ಅವರು ಈ ದೇಶದ ಪ್ರಧಾನಿ ಮೋದಿಯವರು. ಇನ್ನು ಮುಂದೆ ಜನ ಅವರನ್ನು ನಂಬುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಅರಣ್ಯ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ಮಂಗಳವಾರ ಕಡಬ ಮೇಲಿನ ಪೇಟೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿಲ್ಲ ಎಂಬ ಕಾರಣಕ್ಕಾಗಿ ನಾನು ಈ […]

ಸಿದ್ದರಾಮಯ್ಯರಿಂದ ಕೊಲೆಗಡುಗರ ರಕ್ಷಣೆ: ಅಮಿತ್ ಶಾ ಆರೋಪ

Wednesday, May 9th, 2018
amit-shah

ಮಂಗಳೂರು: ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದವರನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಕ್ಷಣೆ ಮಾಡಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಪಾತಾಳದಲ್ಲಿದ್ದರೂ ಕೊಲೆಗಡುಕರನ್ನು ಹುಡುಕಿ ಬಂಧಿಸುತ್ತೇವೆ ಎಂದು ಹೇಳಿದ್ದಾರೆ. ನಗರದ ನವಭಾರತ್ ವೃತ್ತದಿಂದ ಡೊಂಗರಕೇರಿ ಮೂಲಕ ಕಾರ್‌ಸ್ಟ್ರೀಟ್ ತನಕ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರೊಂದಿಗೆ ರೋಡ್ ಶೋ ನಡೆಸಿದ ಬಳಿಕ ಅವರು ಮಾತನಾಡಿದರು. ಸಿದ್ದರಾಮಯ್ಯ ಸರಕಾರ ಅಭಿವೃದ್ಧಿ ವಿರೋಧಿ ಮತ್ತು ಗೂಂಡಾಗಿರಿಯ ಸರಕಾರ. ಕಾರ್ಯಕರ್ತರನ್ನು ಹತ್ಯೆ […]