ಕುಂಬಳೆ ಪೊಲೀಸರಿಂದ ಗಾಂಜಾ ಸಹಿತ ವ್ಯಕ್ತಿಯ ಬಂಧನ
Tuesday, February 9th, 2016ಕುಂಬಳೆ: 470 ಗ್ರಾಂ ಗಾಂಜಾ ಸಹಿತ ಸುಳ್ಯ ಕಾಂತಮಂಗಿಲದ ದೇವರಾಯ ಎಂಬವರ ಪುತ್ರ ಶರತ್ ಕುಮಾರ್(54)ನನ್ನು ಶಿರಿಯಾ ಪರಿಸರದಿಂದ ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಸಂಜೆ ಕುಂಬಳೆ ಸಿ.ಐ ಅನೂಪ್ ಕುಮಾರ್ ಗಸ್ತು ತಿರುಗುತ್ತಿದ್ದಾಗ ಸಂಶಯಾಸ್ಪದವಾಗಿ ಶರತ್ ಕುಮಾರನನ್ನು ವಶಕ್ಕೆ ತೆಗೆಯಲಾಯಿತು.ಬಳಿಕ ನಡೆಸಿದ ತಪಾಸಣೆಯಲ್ಲಿ 470 ಗ್ರಾಂ ಗಾಂಜಾ,700 ರೂ.ನಗದು ಪತ್ತೆಹಚ್ಚಲಾಗಿದೆ.ಈ ಹಿನ್ನೆಲೆಯಲ್ಲಿ ಬಂಧಿಸಿ ದೂರು ದಾಖಲಿಸಲಾಗಿದ್ದು ಶರತ್ ಕುಮಾರ್ ನ ವಿರುದ್ದ ಸುಳ್ಯ ಠಾಣೆಯಲ್ಲಿ 2011 ರಲ್ಲಿ ಗಾಂಜಾ ಸಾಗಾಟ ಆರೋಪದ ದೂರು ದಾಖಲಿಸಲಾಗಿತ್ತೆಂದು ತಿಳಿದುಬಂದಿದೆ.