ಕಾಸರಗೋಡು ಜಿಲ್ಲಾ ಬಿಜೆಪಿ ಸಮಿತಿ ಪುನರ್ ರಚನೆ: ಶ್ರೀಕಾಂತ್ ಜಿಲ್ಲಾಧ್ಯಕ್ಷ
Tuesday, January 19th, 2016ಕಾಸರಗೋಡು: ಬಿಜೆಪಿ ಜಿಲ್ಲಾ ಸಮಿತಿಯನ್ನು ಪುನರ್ ರಚಿಸಲಾಗಿದ್ದು,ಕಾಸರಗೋಡು ಜಿಲ್ಲಾಧ್ಯಕ್ಷರಾಗಿ ಜಿಲ್ಲಾ ಪಂಚಾಯತ್ ಸದಸ್ಯ,ಯುವ ನಾಯಕ ನ್ಯಾಯವಾದಿ ಶ್ರೀಕಾಂತ್ ರನ್ನು ನೇಮಿಸಲಾಗಿದೆ. ರಾಜ್ಯ ಸಮಿತಿ ಸದಸ್ಯರಾಗಿದ್ದ ನಗರಸಭಾ ಕೌನ್ಸಿಲರ್ ಪಿ.ರಮೇಶ್ ಹಾಗೂ ಆರ್ಎಸ್ಎಸ್ ಕಣ್ಣೂರು ವಿಭಾಗ ಕಾರ್ಯಕಾರಿ ಸಮಿತಿ ಸದಸ್ಯ ಎ.ವೇಲಾಯುಧನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ ನಿಯುಕ್ತರಾಗಿದ್ದಾರೆ. ಈ ವೇಳೆ ಬಿಜೆಪಿ ರಾಜ್ಯ ಸಮಿತಿಯನ್ನೂ ಪುನರ್ ಸಂಘಟಿಸಲಾಗಿದ್ದು, ನಾಲ್ವರು ಪ್ರಧಾನ ಕಾರ್ಯದರ್ಶಿಗಳು, ಒಂಭತ್ತು ಉಪಾಧ್ಯಕ್ಷರುಗಳು ಮತ್ತು 42 ಮಂದಿ ಪದಾಧಿಕಾರಿಗಳನ್ನು ರಾಜ್ಯಾಧ್ಯಕ್ಷ ಕುಮ್ಮನಂ ರಾಜಶೇಖರನ್ ಘೋಷಿಸಿದ್ದಾರೆ. ಕೆ.ಸುರೇಂದ್ರನ್,ಎಎನ್ ರಾಧಾಕೃಷ್ಣನ್,ಎಂ.ಟಿ.ರಮೇಶ್,ಶೋಭಾ […]