ದ.ಕ. ಜಿಲ್ಲಾ ಸರಕಾರಿ ನೌಕರರ ಸಂಘದ ಪದಾಧಿಕಾರಿ ಹಾಗೂ ಚುನಾವಣಾ ಅಧಿಕಾರಿಗೆ 5 ಲಕ್ಷ ರೂಪಾಯಿ ದಂಡ

Saturday, December 14th, 2024
ದ.ಕ. ಜಿಲ್ಲಾ ಸರಕಾರಿ ನೌಕರರ ಸಂಘದ ಪದಾಧಿಕಾರಿ ಹಾಗೂ ಚುನಾವಣಾ ಅಧಿಕಾರಿಗೆ 5 ಲಕ್ಷ ರೂಪಾಯಿ ದಂಡ

ಮಂಗಳೂರು : ದ.ಕ. ಜಿಲ್ಲಾ ಸರಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ನಿರ್ದೇಶಕರುಗಳ ಹುದ್ದೆಗೆ ನ್ಯಾಯಾಂಗ ಇಲಾಖೆಯಿಂದ ಪ್ರತಿನಿಧಿಗಳ ಆಯ್ಕೆಗೆ ದಿನಾಂಕ 26.11.2024ರೊಳಗೆ ಚುನಾವಣೆ ನಡೆಸುವಂತೆ ಮಂಗಳೂರಿನ ಪ್ರಧಾನ ಸಿವಿಲ್ ನ್ಯಾಯಾಲಯವು ಹೊರಡಿಸಿದ ಅಜ್ಞಾಪಕ ನಿರ್ಬಂಧಕಾಜ್ಞೆಯ ಆದೇಶವನ್ನು ಪಾಲಿಸುವ ಬದಲು ಮಾನ್ಯ ಕರ್ನಾಟಕ ಹೈಕೋರ್ಟಿಗೆ ತಪ್ಪು ಮಾಹಿತಿ ನೀಡಿ ಚುನಾವಣೆ ನಡೆಸಬೇಕೆಂಬ ಆದೇಶದ ವಿರುದ್ಧ ತಡೆಯಾಜ್ಞೆ ಪಡೆದ ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘದ ಪದಾಧಿಕಾರಿ ಹಾಗೂ ಚುನಾವಣಾಧಿಕಾರಿಯ ದುರುದ್ದೇಶ ಪೂರಿತ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿದ […]

ಜನಾಕರ್ಷಣೆಯ ಕರಾವಳಿ ಉತ್ಸವ: ಸ್ಪೀಕರ್, ಉಸ್ತುವಾರಿ ಸಚಿವರ ಸೂಚನೆ

Friday, December 13th, 2024
Karavali-Utsava

ಮಂಗಳೂರು : ಈ ವರ್ಷ ನಡೆಯಲಿರುವ ಕರಾವಳಿ ಉತ್ಸವವನ್ನು ಜನಾಕರ್ಷಣೆಯ ಕಾರ್ಯಕ್ರಮವನ್ನಾಗಿ ಮಾಡಲು ಹೆಚ್ಚು ಒತ್ತು ನೀಡುವಂತೆ ಸ್ಪೀಕರ್ ಯು.ಟಿ ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಅವರು ಕರಾವಳಿ ಉತ್ಸವ ಸಿದ್ಧತೆಗಳ ಪ್ರಯುಕ್ತ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಿಂದ ವಿಡಿಯೋ ಕಾನ್ಪೆರನ್ಸ್ ಮೂಲಕ ಭಾಗವಹಿಸಿ ಮಾತನಾಡಿದರು. ಕರಾವಳಿ ಉತ್ಸವದ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಸಾಂಸ್ಕøತಿಕ ಕಲಾಪ್ರಕಾರಗಳು ಸೇರಿದಂತೆ ಸಾರ್ವಜನಿಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತಹ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು. […]

ತೊಕ್ಕೊಟ್ಟು ಸಾಯಿ ಪರಿವಾರ್ ಟ್ರಸ್ಟ್ ದೀಪಾವಳಿ ಆಹಾರ ಸಾಮಗ್ರಿ‌ ಕಿಟ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿದ ಜೀವರಕ್ಷಕ ಈಶ್ವರ್ ಮಲ್ಪೆ

Monday, November 18th, 2024
Sai-Parivar

ತೊಕ್ಕೊಟ್ಟು : ನಾವು ಮಾಡುತ್ತಿರುವ ಒಳ್ಳೆಯ ಕಾರ್ಯಗಳಿಂದಲೇ ಸಮಾಜ ನಮ್ಮನ್ನು ಪುರಸ್ಕರಿಸುವುದು, ಬಡತನವು ಮನುಷ್ಯನಿಗೆ ಮನುಷತ್ವದ ಪಾಠ ಬೋದಿಸುತ್ತದೆ, ಸಮುದ್ರದಲ್ಲಿ ಈಜಾಡಬೇಡಿ ಎಂದು ಬೋರ್ಡ್ ಹಾಕಿದರೂ ಅದರ ಅಡಿಯಲ್ಲಿಯೇ ಬಟ್ಟೆಕಳಚಿ ಸಮುದ್ರದಲ್ಲಿ ಈಜಾಡುವ ಸಾಹಸದಿಂದ ಸಾವನ್ನಪ್ಪುವುದು ದುರಂತ, ಇದರಿಂದ ಮನನೊಂದು ಮಾನವನ ಬದುಕನ್ನು ಬದುಕಿಸಬೇಕೆಂಬ ಪಣ ತೊಟ್ಟು 900 ಕ್ಕೂ ಅಧಿಕ ಜೀವಗಳನ್ನು ಉಳಿಸಿದ ಸಾರ್ಥಕತೆ ಇದೆ ಅದರ ಜೊತೆಯಲ್ಲಿ ಎಷ್ಟೋ ಜೀವಗಳನ್ನು ಉಳಿಸಲಾಗದಂತ ನೋವು ಕೂಡ ಇದೆ ಆದರೂ ದೃತಿಗೆಡದೆ ಸಮಾಜ ಕಾರ್ಯದಲ್ಲಿ ತೊಡಗಿಸಿರುವುದರಿಂದ ಜನರ […]

ರಾಘವೇಂದ್ರ ಅವರಿಗೆ ಪಿಎಚ್‌ಡಿ ಪ್ರಶಸ್ತಿ ಪ್ರದಾನ

Saturday, October 12th, 2024
Raghavendra

ಮಂಗಳೂರುಃ ‘ಉದ್ಯಮಶೀಲತೆ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರಃ ಒಂದು ಅಧ್ಯಯನ “ಎಂಬ ಪ್ರೌಢ ಪ್ರಬಂಧಕ್ಕಾಗಿ ವಾಣಿಜ್ಯ ವಿಭಾಗದ ಸಂಶೋಧಕ ರಾಘವೇಂದ್ರ ಅವರಿಗೆ ಮಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಆಫ್ ಫಿಲಾಸಫಿ (ಪಿಎಚ್‌ಡಿ) ಪದವಿ ನೀಡಿದೆ. ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ ನಿವೃತ್ತ ಸಹ ಪ್ರಾಧ್ಯಾಪಕ ಉದಯಕುಮಾರ್ ಎಂ.ಎ, ಸಂಶೋಧಕರಿಗೆ ಯಶಸ್ವಿಯಾಗಿ ಮಾರ್ಗದರ್ಶನ ನೀಡಿದ್ದಾರೆ

ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳನ್ನು ತುಂಬಿಸಿ: ಸಣ್ಣ ನೀರಾವರಿ ಸಚಿವ ಎನ್ ಎಸ್ ಭೋಸರಾಜು ಸೂಚನೆ

Wednesday, August 7th, 2024
bosuraju

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಿದ್ದು ಅಣೆಕಟ್ಟುಗಳು ತುಂಬಿವೆ. ನಮ್ಮ ಇಲಾಖೆಯ ವ್ಯಾಪ್ತಿಯ ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳನ್ನು ತುಂಬಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು . ಇಂದು ವಿಕಾಸಸೌಧದಲ್ಲಿ ಪಿಎಂಕೆಎಸ್‌ವೈ ಕಾಮಗಾರಿಗಳ ಪ್ರಗತಿ ಪರಿಶೀಲನೆ ಹಾಗೂ ಕೇಂದ್ರ ಅನುದಾನದ ಕುರಿತು ಚರ್ಚಿಸಲು ಕೇಂದ್ರ ಜಲ ಆಯೋಗದ ನಿರ್ದೇಶಕರು ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯ ನಡೆಸಲಾಯಿತು. ಪಿಎಂಕೆಎಸ್‌ವೈ ಕಾಮಗಾರಿಗಳ ಪ್ರಗತಿ […]

ಧರ್ಮಸ್ಥಳದಲ್ಲಿ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಬಿಡುಗಡೆ

Tuesday, July 9th, 2024
siri-dhanya-siri-sari

ಉಜಿರೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿಯನ್ನು ಧರ್ಮಸ್ಥಳದಲ್ಲಿ ಹೇಮಾವತಿ ವೀ. ಹೆಗ್ಗಡೆಯವರು ಬಡುಗಡೆಗೊಳಿಸಿ ಶುಭ ಹಾರೈಸಿದರು. ಹಿರಿಯ ಪತ್ರಕರ್ತ ಅನಂತ ಹುದಂಗಜೆ ರಚಿಸಿದ ಪುಸ್ತಕದಲ್ಲಿ ಸಿರಿಧಾನ್ಯಗಳ ಬಳಕೆಯೊಂದಿಗೆ ಆರೋಗ್ಯಭಾಗ್ಯ ರಕ್ಷಣೆ ಬಗ್ಯೆ ಸಮಗ್ರ ಮಾಹಿತಿ, ಮಾರ್ಗದರ್ಶನ ನೀಡಿದ್ದಾರೆ. ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಎಸ್.ಎಸ್. ಅನಿಲ್ ಕುಮಾರ್, ಹಣಕಾಸು ಅಧಿಕಾರಿ ಶಾಂತಾರಾಮ ಪೈ, ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್, ಹಿರಿಯ ನಿರ್ದೇಶಕ ದಿನೇಶ್ ಎಂ. , ಅಭಿನಂದನ್ ಜೈನ್ […]

ವೆನ್ಲಾಕ್ ಲಯನ್ಸ್ ಲಿಂಬ್ ಸೆಂಟರ್ ನಿಂದ 84 ಸಾವಿರ ಕೃತಕ ಅಂಗಾಂಗ ವಿತರಣೆ-ಡಾ.ಶಾಂತಾರಾಮಶೆಟ್ಟಿ

Friday, June 28th, 2024
ವೆನ್ಲಾಕ್ ಲಯನ್ಸ್ ಲಿಂಬ್ ಸೆಂಟರ್ ನಿಂದ 84 ಸಾವಿರ ಕೃತಕ ಅಂಗಾಂಗ ವಿತರಣೆ-ಡಾ.ಶಾಂತಾರಾಮಶೆಟ್ಟಿ

ಮಂಗಳೂರು ;ವೆನ್ಲಾಕ್ ಆಸ್ಪತ್ರೆಯ ಲಯನ್ಸ್ ಲಿಂಬ್ ಸೆಂಟರ್ ವತಿಯಿಂದ ಕಳೆದ 50 ವರ್ಷಗಳಲ್ಲಿ ಒಟ್ಟು 84 ಸಾವಿರ ಕೃತಕ ಕಾಲು ಸೇರಿದಂತೆ ಕೃತಕ ಅಂಗಾಂಗ ವಿತರಿಸಲಾಗಿದೆ. ಇದರಲ್ಲಿ ಶೇ.80 ಜನರಿಗೆ ವಿವಿಧ ಸಂಘಸಂಸ್ಥೆಗಳು, ದಾನಿಗಳ ನೆರವಿನಿಂದ ಪೂರ್ತಿ ಉಚಿತವಾಗಿ ಸೌಲಭ್ಯ ಒದಗಿಸಲಾಗಿದೆ ಎಂದು ಸೆಂಟರ್‌ನ ನಿರ್ದೇಶಕ, ಖ್ಯಾತ ಮೂಳೆ ತಜ್ಞ ಡಾ.ಶಾಂತಾರಾಮ ಶೆಟ್ಟಿ ತಿಳಿಸಿದರು. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡಿದರು.ದೈಹಿಕ ಊನತೆ […]

“ವಿದ್ಯಾರ್ಥಿಗಳು ಆಂತರಿಕವಾಗಿ ಅರಳುವಂತಾಗಲಿ”-ಡಾ. ವಿಜಯ ಸರಸ್ವತಿ

Wednesday, June 26th, 2024
vivekananda-college

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಾಣಿಜ್ಯ ಸಂಘದ ಉದ್ಘಾಟನೆಯ ಮೂಲಕ ಪ್ರಸಕ್ತ ಶೈಕ್ಷಣಿಕ ವರ್ಷದ ವಿವಿಧ ಚಟುವಟಿಕೆಗಳಿಗೆ ವಿದ್ಯುಕ್ತ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ವಿವೇಕಾನಂದ ಮಹಾವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ವಿಭಾಗದ ಮುಖ್ಯಸ್ಥರು ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕರಾದ ಡಾ. ವಿಜಯ ಸರಸ್ವತಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು “ಆಧುನಿಕ ಯುಗದಲ್ಲಿ ಸಾಕಷ್ಟು ಸಾಮಾಜಿಕ ಸ್ಥಿತ್ಯಂತರಗಳು ಆಗುತ್ತಿರುವುದನ್ನು ಕಾಣುತ್ತಿದ್ದೇವೆ. ಇದರ ಪರಿಣಾಮ ಬದಲಾದ ಭಾರತ. ವಾಣಿಜ್ಯ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆಗಳು […]

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದ ಬಿ.ಎಸ್. ಯಡಿಯೂರಪ್ಪ

Monday, June 24th, 2024
BS-Yedyurappa

ಸುಬ್ರಹ್ಮಣ್ಯ: ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದರು. ದೇವಾಲಯದ ಅರ್ಚಕರಾದ ಸತ್ಯನಾರಾಯಣ ನೂರಿತ್ತಾಯ ಅವರು ತುಲಾಭಾರ ಸೇವೆಯನ್ನು ನೆರವೇರಿಸಿದರು. ಬೆಳ್ಳಿಗ್ಗೆ ದೇವಾಲಯಕ್ಕೆ ಬಂದ ಯಡಿಯೂರಪ್ಪ ಅವರನ್ನು ಶಾಸಕಿ ಭಾಗೀರಥಿ ಮುರುಳ್ಯ ಸ್ವಾಗತಿಸಿದರು. ಮಾಜಿ ಸಚಿವ ಅಂಗಾರ, ಮೋಹನ್ ರಾಮ ಸುಳ್ಳಿ ಹಾಗೂ ದೇವಳ ಸಮಿತಿಯವರು ಇದ್ದರು. ಮಧ್ಯಾಹ್ನ ಸುಳ್ಯಕ್ಕೆ ತೆರಳುವ ಯಡಿಯೂರಪ್ಪ, ಸುಳ್ಯದ ಬಿಜೆಪಿ ಕಚೇರಿಯನ್ನು ಉದ್ಘಾಟಿಸಲಿದ್ದಾರೆ.

ಆಸ್ಟ್ರೇಲಿಯಾ ತಂಡವನ್ನು 21 ರನ್​ಗಳಿಂದ ಮಣಿಸಿದ ಅಫ್ಘಾನಿಸ್ತಾನ

Sunday, June 23rd, 2024
Afghanisthan

ವೆಸ್ಟ್​ ಇಂಡೀಸ್ : ಅರ್ನೋಸ್ ವೇಲ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್​ನ ಸೂಪರ್​ 08 ಕ್ಲ್ಯಾಶ್​ನಲ್ಲಿ ಆಲ್ರೌಂಡ್​ ಪ್ರದರ್ಶನದ ಫಲವಾಗಿ ಆಸ್ಟ್ರೇಲಿಯಾ ತಂಡವನ್ನು 21 ರನ್​ಗಳಿಂದ ಮಣಿಸಿದ ಅಫ್ಘಾನಿಸ್ತಾನ, ತಮ್ಮ ಸೆಮಿಫೈನಲ್​ ಆಸೆಯನ್ನು ಇನ್ನೂ ಜೀವಂತವಾಗಿರಿಸಿಕೊಂಡಿದೆ. 10ಕ್ಕೆ 10 ವಿಕೆಟ್​ ಉರುಳಿಸುವ ಮೂಲಕ ಚಾಂಪಿಯನ್​ ಆಗಿ ಮೆರೆದವರಿಗೆ ರಶೀದ್​ ಪಡೆ ಕೊಟ್ಟ ಶಾಕ್ ಸದ್ಯ ಕ್ರಿಕೆಟ್ ಪ್ರೇಮಿಗಳನ್ನು ಆಶ್ಚರ್ಯ ತಂದಿದೆ. ಟಾಸ್​ ಸೋತು ಮೊದಲು ಬ್ಯಾಟಿಂಗ್​ ಮಾಡಿದ ಅಫ್ಘಾನಿಸ್ತಾನದ ಆರಂಭಿಕರಾದ ರೆಹಮಾನುಲ್ಲಾ ಗುರ್ಬಾಜ್​ (60 ರನ್, 49 […]