ಸೈನ್ಸ್ ಆನ್ಸರ್ ಭೂಮಿಗೆ ಪ್ರಳಯ ಬರೋದೆ ಇಲ್ಲ !

Monday, December 10th, 2012
Doomsday

ಮಂಗಳೂರು :ಬಹಳಷ್ಟು ಮಂದಿ ಕಾಲಜ್ಞಾನಿಗಳು, ಕಣಿ ಜ್ಯೋತಿಷಿಗಳು ಹಾಗೂ ಪೊಳ್ಳು ವಿಜ್ಞಾನಿಗಳು ಈ ವರ್ಷದ ಡಿಸೆಂಬರ್ 21ರಂದು ಭೂಮಿ ಪ್ರಳಯಕ್ಕೆ ಆಹುತಿಯಾಗಲಿದೆ ಎಂದು ಭವಿಷ್ಯ ನುಡಿಯುತ್ತಿದ್ದಾರೆ. ಮೆಸೊ ಅಮೆರಿಕನ್ ದೀರ್ಘ ಲೆಕ್ಕಾಚಾರದ ಕ್ಯಾಲೆಂಡರ್ ನ 5125 ವರ್ಷ ಚಕ್ರವು ಡಿಸೆಂಬರ್ 21 ರಂದು ಕೊನೆಯಾಗಲಿರುವುದೇ ಈ ವದಂತಿಗೆ ಕಾರಣ. ಪ್ರಳಯದ ಕುರಿತಾಗಿ ಭವಿಷ್ಯ ನುಡಿಯುವವರು ಕಪ್ಪುರಂಧ್ರ, ಕ್ಷುದ್ರಗ್ರಹ, ಧೂಮಕೇತು ಅಥವಾ ಅರಿವಿಗೆ ಬರದ ವಿಶ್ವದ ಸಾಧ್ಯತೆಗಳೊಂದಿಗೆ ಭೂಮಿಯು ಘರ್ಷಣೆಗೊಳಪಡುವುದರಿಂದಾಗಿ ಈ ವಿನಾಶ ಸಂಭವಿಸಲಿದೆ ಎಂದು ವಾದಿಸುತ್ತಾರೆ. ಬೃಹತ್ […]

ಲೋಕಲ್ ಹುಡುಗನ `ಕುಸಾಲ್ ಗ್’ ಚಿತ್ರ

Monday, December 10th, 2012
Kusaalugu Movie

ಮಂಗಳೂರು : ಈಗ ಕೋಸ್ಟಲ್ ವುಡ್ ನಲ್ಲಿ ಕಿರುಚಿತ್ರಗಳ ಜಮಾನ ಶುರುವಾಗಿದೆ. ತಮ್ಮದೇ ಪುಟ್ಟ ಬಂಡವಾಳ ಒಟ್ಟು ಸೇರಿಸಿ ಗ್ರಾಮೀಣ ಕಲಾವಿದರನ್ನು ಒಟ್ಟು ಹಾಕಿಕೊಂಡು ತುಳು ಭಾಷೆಯಲ್ಲಿ ಕಿರುಚಿತ್ರ ನಿರ್ಮಾಣ ಮಾಡುವ ಕೆಲಸ ನಡೆಯುತ್ತಿದೆ. ಈ ಪಟ್ಟಿಯಲ್ಲಿ ಸಂತೋಷ್ ಎಂ. ಪುಚ್ಚೇರ್ ಅವರ ನಿರ್ದೇಶನದ `ಕುಸಾಲ್ ಗ್’ ಸೇರಿಕೊಳ್ಳುತ್ತದೆ. ಕೋಸ್ಟಲ್ ವುಡ್ ಚಿತ್ರನಗರಿಯಲ್ಲಿ ಈಗ ನಿಧಾನವಾಗಿ ಬಣ್ಣದ ಹೊಳಪು ಕಾಣಿಸಿಕೊಳ್ಳುತ್ತಿದೆ. ವರ್ಷಕ್ಕೆ ಒಂದು ಅಥವಾ ಅರ್ಧ ಚಿತ್ರಗಳಲ್ಲಿ ಕಾಲ ಕಳೆಯುತ್ತಿದ್ದ ಕೋಸ್ಟಲ್ ವುಡ್ ಖಜಾನೆಗೆ ಈಗ ಭರ್ಜರಿ […]

ಚೆನೈ ಚಿತ್ರ ಮಂದಿರಗಳಲ್ಲಿ ಯೋಗರಾಜ್ ಭಟ್ ಡ್ರಾಮಾ ತೆರೆಗೆ

Saturday, December 8th, 2012
Drama

ಬೆಂಗಳೂರು :ಬಾಕ್ಸ್ ಆಫೀಸ್ ನಲ್ಲಿ ಗೆದ್ದ ಯೋಗರಾಜ್ ಭಟ್ ರ ಹೊಸ ಚಿತ್ರ ‘ಡ್ರಾಮಾ’ ಚೆನೈ ನ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ನಮ್ಮವು ಸಣ್ಣ ಬಜೆಟ್ ಚಿತ್ರಗಳು. ಪರಭಾಷಾ ಚಿತ್ರಗಳ ನಡುವೆ ಪೈಪೋಟಿ ಮಾಡುವುದು ಕಷ್ಟ ಎಂದು ಬಂಡಲ್ ಬಿಡುತ್ತಿದ್ದವರಿಗೆ ಯೋಗರಾಜ್ ಭಟ್ ನಿರ್ದೇಶನದ ‘ಡ್ರಾಮಾ’ ಚಿತ್ರ ಹೊಸ ದಾರಿ ತೋರಿಸಿದೆ. ಚೆನ್ನೈನ ವಿರುಗಂಬಾಕಂನ ಆರ್ಕಾಟ್ ರಸ್ತೆಯಲ್ಲಿರುವ ಫೇಮ್ ನ್ಯಾಶನಲ್ ಮಲ್ಟಿಫ್ಲೆಕ್ಸ್ ಚಿತ್ರಮಂದಿರದಲ್ಲಿ ‘ಡ್ರಾಮಾ’ ಬಿಡುಗಡೆಯಾಗಿದೆ. ಡಿಸೆಂಬರ್ 7ರಂದು ಬಿಡುಗಡೆಯಾಗಿರುವ ಈ ಚಿತ್ರ ಪ್ರತಿದಿನ 12 ಗಂಟೆಗೆ ಒಂದು […]

“ತೆಲಿಕೆದ ಬೊಳ್ಳಿ” ದೇವದಾಸ್ ಕಾಪಿಕಾಡ್ ಜೊತೆ ಸಂದರ್ಶನ

Thursday, December 6th, 2012
Telikeda Bolli

ಮಂಗಳೂರು :ಸೆಂಟ್ರಲ್ ಸಿನಿಮಾಸ್ ಬ್ಯಾನರ್ ನಡಿಯಲ್ಲಿ ಸುಮಿತ್ ಕಾಮತ್ ಅರ್ಪಿಸುವ ತುಳು ಚಲನಚಿತ್ರ `ತೆಲಿಕೆದ ಬೊಳ್ಳಿ’ ಡಿಸೆಂಬರ್ 6 ರಂದು ಬಿಡುಗಡೆಗೊಳ್ಳಲಿದೆ. ಪಿ.ಎಚ್ ವಿಶ್ವನಾಥ್ ನಿರ್ದೇಶನದಲ್ಲಿ ದೇವದಾಸ್ ಕಾಪಿಕಾಡ್ ಅವರ ಕಥೆ-ಸಂಭಾಷಣೆ-ಚಿತ್ರಕಥೆಯಲ್ಲಿ ಮೂಡಿಬಂದಿರುವ ಈ ಚಿತ್ರ ಅದ್ದೂರಿ ಬಜೆಟ್ ನಲ್ಲಿ, ಹೊಚ್ಚ ಹೊಸ ಮಾದರಿಯಲ್ಲಿ ನಿರ್ಮಿಸಲಾಗಿದೆ ಎಂದು ದೇವದಾಸ್ ಕಾಪಿಕಾಡ್ ಹೇಳಿದರು. ಸುಧೀರ್ ಕಾಮತ್ ಹಾಗೂ ಶರ್ಮಿಳ ದೇವದಾಸ್ ಕಾಪಿಕಾಡ್ ಚಿತ್ರದ ನಿರ್ಮಾಪಕರಾಗಿದ್ದು, ಗುರುಕಿರಣ್ ರವರ ಸಂಗೀತವಿದೆ, ಮದನ್ ಹರಿಣಿಯವರ ನೃತ್ಯ ಸಂಯೋಜನೆಯಿದೆ. ಆರ್. ಮಂಜುನಾಥ್ ರವರು […]

ಮಂಗಳೂರು ವಿಶ್ವ ವಿದ್ಯಾಲಯದ ಪ್ರಾಧ್ಯಾಪಕಿ ಅನಿತಾ ರವಿಶಂಕರ್ ಲೋಕಾಯುಕ್ತ ಬಲೆಗೆ

Wednesday, December 5th, 2012
Mangalore University Professor

ಮಂಗಳೂರು :ಮಂಗಳೂರು ವಿಶ್ವ ವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ. ಅನಿತಾ ರವಿಶಂಕರ್ ರವರನ್ನು ಲಂಚ ಸ್ವೀಕಾರದ ಹಿನ್ನಲೆಯಲ್ಲಿ ಮಂಗಳವಾರ ಬಂಧಿಸಿದ್ದಾರೆ. ಪ್ರಾಧ್ಯಾಪಕಿ ಅನಿತಾ ರವಿಶಂಕರ್ ಪಿಎಚ್‌ಡಿ ಆಕಾಂಕ್ಷಿ ವಿದ್ಯಾರ್ಥಿಗಳಿಂದ ತಲಾ 5 ಸಾವಿರ ರೂಪಾಯಿಗಳನ್ನು ಸ್ವೀಕರಿಸುತ್ತಿದ್ದರೆನ್ನಲಾಗಿದೆ. ಈ ಹಿನ್ನಲೆಯಲ್ಲಿ ಪಿಎಚ್‌ಡಿ ಆಕಾಂಕ್ಷಿ ಪ್ರೇಮ ಡಿಸೋಜ ಎಂಬವರು ಪಿಎಚ್‌ಡಿಗಾಗಿ ವಿದ್ಯಾರ್ಥಿಗಳಿಂದ ಲಂಚ ಸ್ವೀಕರಿಸುವ ಉಪನ್ಯಾಸಕರಿಗೆ ಸರಿಯಾಗಿ ಪಾಠ ಕಲಿಸಬೇಕೆಂದು ಈ ಬಗ್ಗೆ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಪ್ರೇಮ ಅವರಿಗೆ ಧ್ವನಿ […]

ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ನಿಷೇಧ ಮೂರ್ಖತನದ ನಿರ್ಧಾರ

Saturday, November 24th, 2012
Plastic Bag

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ನಿಷೇಧ ಎನ್ನುವ ಬೋರ್ಡ್ ತಗಲಿಸಿ ಬಹಳ ದಿನಗಳೇ ಸರಿದು ಹೋದವು.. ಆದರೆ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಗೊತ್ತಿಲ್ಲ. ಕರ್ನಾಟಕದ ಮಟ್ಟಿಗೆ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ತಯಾರಿಸುವ ಅತಿ ಹೆಚ್ಚು ಕಂಪೆನಿಗಳು ಇರುವುದು ಮಂಗಳೂರಿನಲ್ಲಿ. ಇದಕ್ಕಾಗಿ ಉದ್ಯಮಿಗಳು ಕೋಟಿಗಳ ರೂಪದಲ್ಲಿ ಬ್ಯಾಂಕ್ ಸಾಲ ಮಾಡಿ ಬಂಡವಾಳ ಹೂಡಿದ್ದಾರೆ. ದ.ಕ. ಜಿಲ್ಲೆಯಲ್ಲಿ ಅಂದಾಜು 50ರಷ್ಟು ಪ್ಲಾಸ್ಟಿಕ್ ತಯಾರಿಕೆ ಘಟಕಗಳು ಮತ್ತು ವರ್ತಕರು ಇದ್ದಾರೆ. ಸುಮಾರು ಐದು ಸಾವಿರ ಮಂದಿ ನೇರವಾಗಿ […]

‘ವರದನಾಯಕ’ನಿಗೆ ದೊಡ್ಡ ಶಕ್ತಿ ಕಿಚ್ಚ ಸುದೀಪ್

Tuesday, November 13th, 2012
Varadanayaka

ಬೆಂಗಳೂರು :’ವರದನಾಯಕ’ ಚಿತ್ರವು ಸುದೀಪ್ ನಾಯಕತ್ವದ ಚಿತ್ರವೇ ಇರಬೇಕು ಎಂದುಕೊಳ್ಳುವಷ್ಟರ ಮಟ್ಟಿಗೆ ‘ವರದನಾಯಕ’ ಚಿತ್ರದ ಪೋಸ್ಟರುಗಳಲ್ಲಿ ಕಿಚ್ಹ ಸುದೀಪ್ ರವರೆ ರಾರಾಜಿಸುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಈ ‘ವರದನಾಯಕ’ ಚಿತ್ರದ ನಾಯಕ ಸುದೀಪ್ ಅವರಲ್ಲ, ಚಿರಂಜೀವಿ ಸರ್ಜಾ. ಚಿತ್ರದಲ್ಲಿ ಸುದೀಪ್ ನಾಯಕ ಚಿರಂಜೀವಿ ಸರ್ಜಾ ಅಣ್ಣನ ಪಾತ್ರದಲ್ಲಿ ನಟಿಸಿದ್ದಾರೆ. ಇದೇ ಹಿನ್ನೆಲೆಯಲ್ಲಿ ಕೋಟಿ ಕೋಟಿ ರೂಪಾಯಿಗಳನ್ನು ಬಿಡುಗಡೆಗೆ ಮೊದಲೇ ಚಿತ್ರ ಬಾಚಿಕೊಂಡಿದೆ. ಇಲ್ಲಿ ಚಿತ್ರದ ನಾಯಕ ಚಿರಂಜೀವಿ ಸರ್ಜಾ ಆದರೂ ಕಿಚ್ಹ ಸುದೀಪ್ ರವರೆ ಪೋಸ್ಟರ್ ಗಳಲ್ಲಿ ಮಿಂಚುತ್ತಿದ್ದಾರೆ. […]

ದೀಪಗಳ ಹಬ್ಬ ದೀಪಾವಳಿಯಲ್ಲಿ ಕತ್ತಲು ಬದುಕಿಗೆ ಬೆಳಕು ಮೂಡಲಿ

Tuesday, November 13th, 2012
Mahabaaratha

ಮಂಗಳೂರು :ಹಬ್ಬ ಎಂದಾಕ್ಷಣ ಮುಖ್ಯವಾಗಿ ನೆನಪಿಗೆ ಬರುವುದೇ ದೀಪಾವಳಿ. ಬಹುಶಃ ಪಟಾಕಿ ಸಿಡಿಸಲು ಅವಕಾಶವಿದೆ ಎಂಬ ಕಾರಣಕ್ಕೆ ಬಾಲ್ಯದಿಂದಲೂ ಮಕ್ಕಳಿಗೆ ಅತ್ಯಂತ ಪ್ರಿಯವಾಗಿ ಬಿಟ್ಟಿರುವುದೇ ಮನದಂಗಳದಲ್ಲಿ ಈ ಮನಸ್ಥಿತಿ ಚಿರಸ್ಥಾಯಿಯಾಗಲು ಕಾರಣವೂ ಇರಬಹುದು. ಸಮಾಜದ ಎಲ್ಲ ವರ್ಗದವರೂ, ಜಾತಿ-ಸಮುದಾಯದವರೂ ಭೇದ-ಭಾವ ಮರೆತು ಭ್ರಾತೃತ್ವ, ಸೌಹಾರ್ದತೆಯ ಪ್ರತೀಕವಾಗಿ ಆಚರಿಸುವ ಹಬ್ಬಗಳಲ್ಲಿ ಅತ್ಯಂತ ಪ್ರಮುಖವಾದದ್ದು ಕೂಡ ದೀಪಾವಳಿಯೇ. ಪ್ರತಿಯೊಂದು ಹಬ್ಬವೂ ತನ್ನದೇ ಆದ ಸಂದೇಶವನ್ನು ಸಾರುತ್ತದೆ. ಅದೇ ರೀತಿ ದೀಪಾವಳಿ ಕೂಡ ಅಜ್ಞಾನದ ಕತ್ತಲನ್ನು ಹೋಗಲಾಡಿಸಿಕೊಳ್ಳುವ ಮನಸ್ಸು ಬೆಳೆಸಿಕೊಳ್ಳಬೇಕೆಂಬ ಸಂದೇಶ […]

ಮಂಗಳೂರು ರಾಜೋತ್ಸವ ಆಚರಣೆಗೆ ಎಸ್.ಎಫ್.ಐ. ಕಾರ್ಯಕರ್ತರಿಂದ ಅಡ್ಡಿ; ಬಂಧನ

Thursday, November 1st, 2012
Rajyotsava Lathi Charge

ಮಂಗಳೂರು :  ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಏರ್ಪಡಿಸಿದ್ದ ರಾಜೋತ್ಸವದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ರಾಜ್ಯೋತ್ಸವದ ಸಂದೇಶ ನೀಡಲು ಪ್ರಾರಂಬಿಸುತ್ತಿದ್ದಂತೆ ಮೈದಾನದ ಹೊರಗಿನಿಂದ ರಾಜ್ಯ ಸರಕಾರದ ವಿರುದ್ದ ಘೋಷಣೆಗಳನ್ನು ಕೂಗುತ್ತ ಒಳ ಪ್ರವೇಶಿಸಿದ ಎಸ್.ಎಫ್.ಐ. ಕಾರ್ಯಕರ್ತರು, ಕನ್ನಡ ಶಾಲೆಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರಕಾರಕ್ಕೆ ರಾಜ್ಯೋತ್ಸವ ಆಚರಿಸುವ ಅರ್ಹತೆಯಿಲ್ಲ ಎಂದು ಘೋಷಣೆ ಕೂಗುತ್ತ ರಾಜೋತ್ಸವ ಆಚರಣೆಗೆ ಅಡ್ಡಿಪಡಿಸಲು ಮುಂದಾದರು. ಕಾರ್ಯಕರ್ತರು ದೆಹಲಿ ವಿಶ್ವವಿದ್ಯಾನಿಲಯದ ಉಪನ್ಯಾಸಕ ಪ್ರೊ.ಗೋವಿಂದ ತನ್ನ ವರದಿಯಲ್ಲಿ ವಿದ್ಯಾರ್ಥಿಗಳ ಕೊರತೆಯಿದೆ […]

ತೆಳ್ಳಗಾಗಲು ಆರೋಗ್ಯಕರ 10 ಟಿಪ್ಸ್

Saturday, October 27th, 2012
Weight loses tips

ದೇಹದ ತೂಕವನ್ನು ಸಮತೋಲನದಲ್ಲಿ ಇಡಬೇಕು. ದಪ್ಪವಾದರೆ ದೇಹದ ಸುಂದರ ಆಕಾರ ಹಾಳಾಗುವುದು ಮಾತ್ರವಲ್ಲ ಅನೇಕ ಕಾಯಿಲೆಗಳು ಬರಲಾರಂಭಿಸುತ್ತದೆ. ಕೆಲವರು ಸಣ್ಣಗಾಗಲು ಡಯಟ್ ಮಾಡಿ ತೆಳ್ಳಗಾಗುತ್ತಾರೆ, ಆದರೆ ಆ ಡಯಟ್ ನಿಲ್ಲಿಸಿದ ಸ್ವಲ್ಪ ದಿನದಲ್ಲಿಯೇ ಪುನಃ ದಪ್ಪಗಾಗುತ್ತಾರೆ. ಇನ್ನು ಕಟ್ಟುನಿಟ್ಟಿನಡಯಟ್ ಮಾಡಿದರಂತೂ ಪಥ್ಯದಲ್ಲಿರುವಂತೆ ಅನಿಸುವುದು, ಆದರೆ ಬಾಯಿಗೆ ರುಚಿಕರವಿಲ್ಲದೆ ಡಯಟ್ ಬಗ್ಗೆ ಬೇಸರಿಕೆ ಬಂದು ಬಿಡುತ್ತದೆ. ಆದರೆ ಈ ಕೆಳಗೆ ಸಮತೂಕಕ್ಕಾಗಿ 10 ಟಿಪ್ಸ್ ಹೇಳಲಾಗಿದೆ. ಅದನ್ನು ಪಾಲಿಸಿದರೆ ಪಥ್ಯವನ್ನು ಪಾಲಿಸಬೇಕಾಗಿಲ್ಲ, ಇಲ್ಲಿ ಹೇಳಿರುವ ಟಿಪ್ಸ್ ಗಳನ್ನು ಗಮನದಲ್ಲಿಟ್ಟು […]