ತುಳು ಚಿತ್ರ ನಿರ್ಮಾಪಕ ವಿಜಯುಕಮಾರ್‌ ಕೊಡಿಯಾಲ್‌ಬೈಲ್‌ ಜೊತೆ ಪತ್ರಿಕಾ ಸಂವಾದ

Friday, September 16th, 2011
Asal Film

ಮಂಗಳೂರು: ದ.ಕ. ಜಿಲ್ಲಾ ಪತ್ರಕರ್ತರ ಸಂಘ ನಗರದಲ್ಲಿ ಏರ್ಪಡಿಸಿದ್ದ ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ ಚಿತ್ರ ನಿರ್ಮಾಪಕ, ರಂಗ ನಿರ್ದೇಶಕ ವಿಜಯುಕಮಾರ್‌ ಕೊಡಿಯಾಲ್‌ಬೈಲ್‌ ಮಾತನಾಡಿ ತುಳು ಚಿತ್ರರಂಗದ ಅಳಿವು ಉಳಿವಿನ ಬಗ್ಗೆ ವಿವರಿಸಿದರು. ತುಳು ನಿರ್ಮಾಪಕರು ಸಂಘಟನೆಯೊಂದನ್ನು ರೂಪಿಸುವ ಅಗತ್ಯವಿದ್ದು, ಕಡಿಮೆ ವೆಚ್ಚದಲ್ಲಿ ತುಳು ಚಿತ್ರ ನಿರ್ಮಾಣ ಮಾಡಲು ಸಂಘಟನೆಯ ಮುಲಕ್ ಸಾಧ್ಯವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಕರ್ನಾಟಕ ಫಿಲ್ಮ್ ಚೇಂಬರ್‌ಗೆ ನೊಂದಾಯಿತವಾಗುವಂತೆ ತುಳು ಚಿತ್ರರಂಗದ ಸಂಘಟನೆಯೊಂದನ್ನು ರಚಿಸಬೇಕು. ಆ ಮೂಲಕ ಹಲವಾರು ಸವಲತ್ತುಗಳನ್ನು ನಾವು ಪಡೆಯಲು ಸಾಧ್ಯ. […]

ಮೀನುಗಾರಿಕಾ ದೋಣಿ ಮುಳುಗಿ 6 ಮಂದಿ ಮೀನುಗಾರರು ನಾಪತ್ತೆ

Friday, September 16th, 2011
ಮೀನುಗಾರಿಕಾ ದೋಣಿ ಮುಳುಗಿ 6 ಮಂದಿ ಮೀನುಗಾರರು ನಾಪತ್ತೆ

ಮಂಗಳೂರು: ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿ 6 ಮಂದಿ ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರಿನ ಅಳಿವೆ ಬಾಗಿಲಿನ ಸಮೀಪ ಅರಬಿ ಸಮುದ್ರದಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ. ‘ಓಶಿಯನ್‌ ಫಿಶರೀಸ್‌- 2’ ಎಂಬ ಮೀನುಗಾರಿಕಾ ದೋಣಿಯಲ್ಲಿ 8 ದಿನಗಳ ಹಿಂದೆ 7 ಜನ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಮೀನು ಹಿಡಿದು ಹಿಂದಿರುಗುತ್ತಿದ್ದಾಗ ಮಂಗಳೂರಿನ ಅಳಿವೆ ಬಾಗಿಲಿನ ಸಮೀಪ ದುರ್ಘ‌ಟನೆ ಸಂಭವಿಸಿದೆ. ದೋಣಿಯಲ್ಲಿದ್ದ ೭ಜನರ ಪೈಕಿ ದೋಣಿಯ ಚಾಲಕ ಬಳ್ಳಾರಿ ಹೊಸಪೇಟೆಯ ಕಾಂಬ್ಲಿಪುರ ಕಂಟರ್‌ಬಿನ್ನೆಯ ಶ್ರೀಕಾಂತ್‌, ಕೊಪ್ಪಳದ ನಾರಾಯಣ, ಮಂಗಳೂರು ಪಂಜಿಮೊಗರಿನ […]

ಗಿಳಿ ಮಾರಾಟ ಆರೋಪಿ ಕಾವೂರಿನ ದೀಪಕ್‌ ಬಂಧನ

Thursday, September 15th, 2011
parrot-sale

ಮಂಗಳೂರು: ಕಾವೂರಿನ ದೀಪಕ್‌ (25) ಎಂಬಾತ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಳ ಬಳಿಯ ಅಂಗಡಿಯೊಂದರ ಬಳಿ ಕಾಡು ಗಿಳಿಗಳನ್ನು ಅಕ್ರಮವಾಗಿ ಮಾರಾಟ ಮಾಡುತಿದ್ದ ವೇಳೆ ಬುಧವಾರ ಮಂಗಳೂರು ಅರಣ್ಯ ಸಂಚಾರಿ ದಳದ ವಿಶೇಷ ಪೊಲೀಸರು ಪತ್ತೆ ಹಚ್ಚಿ ಆತನ ಬಳಿ ಇದ್ದ ಹಸಿರು ಬಣ್ಣದ 13 ಕಾಡು ಗಿಳಿಗಳನ್ನು ವಶ ಪಡಿಸಿಕೊಂಡಿದ್ದಾರೆ. ಆರೋಪಿ ದೀಪಕ್‌ ವಿರುದ್ಧ ವನ್ಯ ಜೀವಿ ಸಂರಕ್ಷಣಾ ಕಾಯ್ದೆಯನ್ವಯ ಕೇಸು ದಾಖಲಿಸಲಾಗಿದೆ. ಈ ಗಿಳಿಗಳನ್ನು ಕಾಸರಗೋಡಿನ ವ್ಯಕ್ತಿಯೊಬ್ಬರು ಪೂರೈಕೆ ಮಾಡಿರುವುದಾಗಿ ಆತ ವಿಚಾರಣೆಯ ವೇಳೆ […]

comming soon

Thursday, September 15th, 2011

comming soon

ಪರಿಸರ ನಿಯಂತ್ರಣ ಮಂಡಳಿಯ ಉಪ ಅಧಿಕಾರಿ ಲೋಕಾಯುಕ್ತ ಬಲೆಗೆ

Friday, September 9th, 2011
Lokayukta Raid/ಲೋಕಾಯುಕ್ತ ಬಲೆಗೆ

ಉಡುಪಿ: ರಾಜ್ಯ ಪರಿಸರ ನಿಯಂತ್ರಣ ಮಂಡಳಿಯ ಉಪ ಪರಿಸರ ಅಧಿಕಾರಿ ರವಿಚಂದ್ರ ಕೆ. ಅವರು ಮಣಿಪಾಲದಲ್ಲಿ ಕೈಗಾರಿಕಾ ಘಟಕವನ್ನು ಸ್ಥಾಪನೆಯ ಪರವಾನಿಗೆಗೆ ಲಂಚ ಪಡೆಯುತ್ತಿದ್ದಾಗ ಉಡುಪಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಿಸರ್ಗ ಕೋಕನೆಟ್‌ ಇಂಡಸ್ಟ್ರೀಸ್‌ ಎಂಬ ಕೈಗಾರಿಕಾ ಘಟಕವನ್ನು ಸ್ಥಾಪನೆ ಮಾಡಲು ಕುಂದಾಪುರ ತಾಲೂಕು ಯೆಡ್ಯಾಡಿ-ಮತ್ಯಾಡಿ ಗ್ರಾಮದ ಗಣೇಶ್‌ ಆನಂದ ಅವರು ನಿರಾಕ್ಷೇಪಣಾ ಪತ್ರ ಕೋರಿ ಮಣಿಪಾಲದ ಕೈಗಾರಿಕಾ ಪ್ರದೇಶದಲ್ಲಿರುವ ಪರಿಸರ ಮಾಲಿನ್ಯ ಅಧಿಕಾರಿಯವರಿಗೆ ಆ.12ರಂದು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ರೂ.5,000 ಶುಲ್ಕ ಪಾವತಿಸಿದ್ದರು. ಪರಿಸರ ಮಾಲಿನ್ಯ […]

ಕೌಟುಂಬಿಕ ಕಲಹಕ್ಕೆ ಇನ್ಸ್ ಪೆಕ್ಟರ್ ಸುದರ್ಶನ್ ಪತ್ನಿ ಬಲಿ

Sunday, August 28th, 2011
Shobha/ಶುಭಾ

ಬೆಂಗಳೂರು : ಕಮರ್ಷಿಯಲ್ ಸ್ಟ್ರೀಟ್ ಠಾಣೆ ಇನ್ಸ್ ಪೆಕ್ಟರ್ ಸುದರ್ಶನ್ ಎಂಬುವರ ಪತ್ನಿ ಶುಭಾ ತನ್ನ ಪತಿಯ ಸರ್ವಿಸ್ ರಿವಾಲ್ವರ್ ನಿಂದ ಶೂಟ್ ಮಾಡಿಕೊಂಡು ಶನಿವಾರ ಮಧ್ಯ ರಾತ್ರಿ ವೇಳೆ ಪ್ರಾಣ ಬಿಟ್ಟಿದ್ದಾರೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಸರಿಯಾದ ನಿರ್ಣಯ ಕೈಗೊಳ್ಳಲಾಗದೆ ಪತಿಯೊಡನೆ ಸದಾ ಜಗಳವಾಡುತ್ತಿದ್ದ ಶುಭಾ ಅವರು ಸಾವಿನಲ್ಲಿ ಪರಿಹಾರ ಕಂಡುಕೊಂಡಿದ್ದಾರೆ. ಹಾಸನ ಮೂಲದ ಶುಭಾ ಅವರು 12 ವರ್ಷದ ಹಿಂದೆ ಸುದರ್ಶನ್ ಪಿಎಸ್ ಎಂಬ ಪೊಲೀಸ್ ಅಧಿಕಾರಿಯನ್ನು ಮದುವೆಯಾಗಿದ್ದರು. ಬನಶಂಕರಿ ಮೂರನೇ ಹಂತದ ಕತ್ರಿಗುಪ್ಪೆ […]

ಯಜ್ಞಾಶೆಟ್ಟಿ ಲವ್ ಪೈಲ್ಯುರ್

Sunday, August 28th, 2011
Darma-Yajna/ನಟ ಧರ್ಮ ನಟಿ ಯಜ್ಞಾಶೆಟ್ಟಿ

ಮಂಗಳೂರು : ನಟ ಧರ್ಮ ಮತ್ತು ಕನ್ನಡದ ನಟಿ ಯಜ್ಞಾಶೆಟ್ಟಿಯೊಂದಿಗೆ ಪರಿಚಯವಾಗಿದೆ. ಬಳಿಕ ಅದು ಸ್ನೇಹ, ಪ್ರೀತಿಗೆ ತಿರುಗಿ. ಇಬ್ಬರೂ ಒಬ್ಬರನ್ನೊಬ್ಬರು ಗಾಢವಾಗಿ ಪ್ರೀತಿಸುತ್ತಿದ್ದರು ಎಂಬುದು ಗಾಂಧಿನಗರದಲ್ಲಿ ಸುದ್ದಿಯಾಗಿತ್ತು. ಖಳನಟನಾಗಿ, ಪೊಲೀಸ್ ಅಧಿಕಾರಿಯಾಗಿ ತಮ್ಮ ಪಾತ್ರಗಳಿಗೆ ಧರ್ಮ ಜೀವತುಂಬುತ್ತಿದ್ದರು. ತಮಿಳು, ಮಲಯಾಳಂ ಚಿತ್ರರಂಗದಲ್ಲಿ ಸುಮಾರು 95ಕ್ಕೂ ಹೆಚ್ಚು ಚಿತ್ರಗಳಲ್ಲಿ ಪೋಷಕ ಪಾತ್ರಗಳನ್ನು ಪೋಷಿಸಿರುವ ಧರ್ಮ ಈಗ ಧರ್ಮ ಧರ್ಮಸಂಕಟಕ್ಕೆ ಸಿಲುಕಿದ್ದಾರೆ. ಶೂಟಿಂಗ್‍ನಲ್ಲಿ ಸಮಯ ಸಿಕ್ಕಾಗಲೆಲ್ಲಾ ಧರ್ಮ ಮತ್ತು ಯಜ್ಞಾ ಫೋನಿನಲ್ಲಿ ಮಾತಾಡುತ್ತಿದ್ದರಂತೆ. ಇಬ್ಬರೂ ಮದುವೆಯಾಗಲೂ ತೀರ್ಮಾನಿಸಿದ್ದರು. ಆದರೆ […]

ಕರಾವಳಿ ಉತ್ಸವ ಮೈದಾನಿನಲ್ಲಿ ರಾಷ್ಟ್ರೀಯ ಗ್ರಾಹಕರ ಮೇಳ ಆರಂಭ

Saturday, August 27th, 2011
National Consumer Fair/ ರಾಷ್ಟ್ರೀಯ ಗ್ರಾಹಕರ ಮೇಳ

ಮಂಗಳೂರು : ನಗರದ ಕರಾವಳಿ ಉತ್ಸವ ಮೈದಾನಿನಲ್ಲಿ ಶುಕ್ರವಾರ ರಾಷ್ಟ್ರೀಯ ಗ್ರಾಹಕರ ಮೇಳವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಜೆ.ಪಾಲೆಮಾರ್‌ ಶುಕ್ರವಾರ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಈ ಬೃಹತ್‌ ಗ್ರಾಹಕ ಮೇಳವನ್ನು ಗ್ರಾಹಕರಿಗೆ ಮನರಂಜನೆ ನೀಡುವ ಹಾಗೂ ಅತ್ಯುತ್ತಮ ಗುಣಮಟ್ಟದ ವಸ್ತುಗಳನ್ನು ಖರೀದಿಸಲು ನೆರವಾಗುವಂತೆ ರೂಪಿಸಬೇಕು ಎಂದರು. ಮಂಗಳೂರಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಈ ಗ್ರಾಹಕರ ಮೇಳವನ್ನು ಏರ್ಪಡಿಸಲಾಗುತ್ತಿದೆ. ಈ ರೀತಿಯ ಉಪಯುಕ್ತ ಮೇಳಗಳನ್ನು ಪ್ರತಿವರ್ಷವೂ ಏರ್ಪಡಿಸುವ ಅಗತ್ಯವಿದೆ. ಇದು ಹೆಚ್ಚಿನ […]

ಅಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ : ಹಳೆ ಅಡಿಕೆ ಕಿಲೋ. 179 ರೂ.

Saturday, August 27th, 2011
Arecanut Bunch/ಅಡಿಕೆ

ಪುತ್ತೂರು : ಅಡಿಕೆ ಮಾರುಕಟ್ಟೆಗೆ ಸರಿಯಾಗಿ ಪೂರೈಕೆ ಆಗದಿರುವುದರಿಂದ ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಇನ್ನಷ್ಟು ಚೇತರಿಕೆ ಉಂಟಾಗಿದೆ. ಶುಕ್ರವಾರ ಹಳೆ ಅಡಿಕೆ ಕೆ.ಜಿ.ಯೊಂದರ 179 ರೂ. ಮತ್ತು ಹೊಸ ಅಡಿಕೆ ಕೆ.ಜಿ.ಯೊಂದರ 168 ರೂ.ಗಳಿಗೆ ವಿಕ್ರಯಗೊಂಡಿದೆ ಎಂದು ಕೃಷಿಕರು ಮಾಹಿತಿ ನೀಡಿದ್ದಾರೆ. ಗಡಿ ಪ್ರದೇಶ ಕಾಸರಗೋಡು ಜಿಲ್ಲೆಯ ಬಾಯಾರು, ಪೆರ್ಲ ಪ್ರದೇಶದಲ್ಲಿ ಅಡಿಕೆ ಧಾರಣೆ ಪುತ್ತೂರಿಗಿಂತ ಕೆ.ಜಿ.ಯೊಂದರ 1 ರೂ. ಹೆಚ್ಚಿತ್ತು. ಎಂಬ ಮಾಹಿತಿಗಳು ಕೂಡಾ ಕೃಷಿಕರಿಂದ ಲಭ್ಯವಾಗಿದ್ದು, ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆಯ ಪರಿಸ್ಥಿತಿ […]

ಬೈಕ್‌ನಲ್ಲಿ ಬಂದು ಐರೋಡಿ ಜುವೆಲ್ಲರ್ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು

Saturday, August 20th, 2011
Airody Jewllers/ ಐರೋಡಿ ಜುವೆಲ್ಲರ್

ಉಡುಪಿ: ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ನಗರದ ಮಸೀದಿ ರಸ್ತೆಯಲ್ಲಿರುವ ಐರೋಡಿ ಜುವೆಲ್ಲರ್ ಮೇಲೆ ಶುಕ್ರವಾರ ರಾತ್ರಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಬೈಕ್‌ನಲ್ಲಿ ಬಂದ ಯುವಕರು ಗುರುತು ಸಿಗದಂತೆ ಮುಖಕ್ಕೆ ಬಟ್ಟೆ ಧರಿಸಿದ್ದರು. ಒಬ್ಬ ಬೈಕ್‌ನಲ್ಲಿದ್ದರೆ ಇನ್ನೊಬ್ಬ ಒಳಗೆ ಪ್ರವೇಶಿಸಲು ಪ್ರಯತ್ನಿಸಿದ ತಡೆಯಲು ಯತ್ನಿಸಿದ ಕಾವಲುಗಾರ ವಿಠಲ ಎಂಬವರಿಗೂ ಗುಂಡು ಹಾರಿಸಿದ ಎನ್ನಲಾಗಿದೆ. ಘಟನೆಯಲ್ಲಿ ಒಳಗಿನ ಸಿಬಂದಿಗಳಿಗಾಗಲೀ, ಕಾವಲುಗಾರನಿಗಾಗಲೀ ಯಾವುದೇ ಅಪಾಯವಾಗಲಿಲ್ಲ. ಕಾವಲುಗಾರ ಬಗ್ಗಿದ ಕಾರಣ ಗುಂಡಿನೇಟಿನಿಂದ ಪಾರಾದ ಎನ್ನಲಾಗಿದೆ. ಪಿಸ್ತೂಲಿನಿಂದ ಹಾರಿಸಿದ ಗುಂಡಿನ ಏಟು […]