ಲಂಚ ಸ್ವೀಕರಿಸಿದ ಇಬ್ಬರು ಅಧಿಕಾರಿಗಳಿಗೆ ನ್ಯಾಯಾಂಗ ಬಂಧನ

Saturday, August 13th, 2011
bribe officers/ ಲಂಚಾಧಿಕಾರಿ

ಮಂಗಳೂರು: ಅದಿರು ವ್ಯಾಪಾರಿಯಿಂದ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಅಧಿಕಾರಿ ವೀರಣ್ಣ ನಾಯಕ್‌ ಮತ್ತು ಲೆಕ್ಕ ಪರಿಶೋಧಕ ನರಸಿಂಹ ಅವರನ್ನು ಶುಕ್ರವಾರ ಜಿಲ್ಲಾ ಸೆಷನ್ಸ್‌ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ಆ. 26 ರ ತನಕ ನ್ಯಾಯಾಂಗ ಬಂಧನ ವಿಧಿಸಿದೆ. ಗುರುವಾರ ಸಂಜೆ ಅದಿರು ವ್ಯಾಪಾರಿ ಅತ್ತಾವರದ ಮಹಮದ್‌ ಅವರ ದಾಖಲೆ ಪತ್ರಗಳ ಕ್ಲಿಯರೆನ್ಸ್‌ಗೆ 1.5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ವೀರಣ್ಣ ನಾಯಕ್‌ ಮತ್ತು ನರಸಿಂಹ ಅವರನ್ನು ಲೋಕಾಯುಕ್ತ […]

ಮೂಡಿಗೆರೆಯಲ್ಲಿ ಬೈಕ್‌ ಹಾಗೂ ಬಸ್‌ ನಡುವೆ ಢಿಕ್ಕಿ, ಒಂದು ಸಾವು, ಬಸ್ ಬಸ್ಮ

Thursday, August 11th, 2011
Bus-Accident/ಬೈಕ್‌ ಹಾಗೂ ಬಸ್‌ ಢಿಕ್ಕಿ

ಚಿಕ್ಕಮಗಳೂರು : ಚಿಕ್ಕಮಗಳೂರು-ಮೂಡಿಗೆರೆ ರಸ್ತೆಯ ದಿಣ್ಣೆಕೆರೆ -ಮಾವಿನಹಳ್ಳಿಯ ತಿರುವಿನಲ್ಲಿ ಬುಧವಾರ ಸಂಜೆ ಬೈಕ್‌ ಹಾಗೂ ಬಸ್‌ ನಡುವೆ ಢಿಕ್ಕಿ ಸಂಭವಿಸಿ ಬೈಕ್‌ ಸವಾರ ಮೃತಪಟ್ಟಿದ್ದು , ಖಾಸಗಿ ಬಸ್‌ ಸಂಪೂರ್ಣ ಸುಟ್ಟು ಕರಕಲಾಗಿದೆ. ಬಸ್‌ನಲ್ಲಿದ್ದ 70 ಕ್ಕೂ ಅಧಿಕ ಮಂದಿ ಅಪಾಯದಿಂದ ಪಾರಾಗಿದ್ದಾರೆ. ಧರ್ಮಸ್ಥಳದಲ್ಲಿ ನಡೆದ ಅನಿತಾ -ಜಗದೀಶ್‌ ಮದುವೆಗೆ ಭದ್ರಾವತಿಯಿಂದ ಖಾಸಗಿ ಬಸ್ಸಿನಲ್ಲಿ 70ಕ್ಕೂ ಅಧಿಕ ಮಂದಿ ಹೋಗಿದ್ದರು. ಇನ್ನೊಂದೆಡೆ ಶಿವಮೊಗ್ಗದ ವೀರಭದ್ರ ಕಾಲನಿಯ ನಂದೀಶ್‌ ಹಾಗು ಭೈರೇಶ್‌ ಬೈಕಿನಲ್ಲಿ ವಿಹಾರಾರ್ಥ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಬಸ್ […]

ಕಾಪು ಕಡಲ ಕಿನಾರೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲು

Thursday, August 11th, 2011
Abhijit Singh, Janakish / ಅಭಿಜಿತ್‌ ಸಿಂಗ್‌, ಜಾನಾ ಕಿಶ್‌

ಮಂಗಳೂರು : ಮಣಿಪಾಲ ಎಂ.ಐ.ಟಿಯ ಇಬ್ಬರು ವಿದ್ಯಾರ್ಥಿಗಳು ಅಲೆಗಳ ಸೆಳೆತಕ್ಕೆ ಸಮುದ್ರಪಾಲದ ಘಟನೆ ಬುಧವಾರ ಸಂಜೆ ಕಾಪು ಕಡಲ ಕಿನಾರೆಯಲ್ಲಿ ಸಂಭವಿಸಿದೆ. ನಾಲ್ವರು ವಿದೇಶಿಯರು ಮತ್ತು ಓರ್ವ ಭಾರತೀಯ ಸೇರಿದಂತೆ ಐದು ಮಂದಿ ವಿದ್ಯಾರ್ಥಿಗಳೂ ಕಾಪು ಕಡಲ ಕಿನಾರೆಗೆ ಆಗಮಿಸಿದ್ದರು. ಲೈಟ್‌ ಹೌಸ್‌ನ ಮುಂಭಾಗದಲ್ಲಿ ಕಡಲು ಸಂಪೂರ್ಣವಾಗಿ ವಿಸ್ತರಿಸಿಕೊಂಡಿರುವುದರಿಂದ ಐವರು ಕೂಡಾ ಕಡಲಿಗೆ ಇಳಿದಿದ್ದರು. ಆದರೆ ಸಮುದ್ರದ ಅಲೆಗಳ ರಭಸಕ್ಕೆ ಅಂಜಿದ ಮೂವರು ದಡದಲ್ಲೇ ಕುಳಿತರೆ, ಅಭಿಜಿತ್‌ ಸಿಂಗ್‌ (18)ಮತ್ತು ಜಾನಾ ಕಿಶ್‌ (೨೧ ಈಜುವ ಉದ್ದೇಶದಿಂದ […]

ರಸ್ತೆ ಅಫಘಾತ ಮಂಜೇಶ್ವರ ಆನೆಕಲ್ಲು ನಿವಾಸಿ ಸಾವು

Tuesday, August 9th, 2011
Car Accident/ ರಸ್ತೆ ಅಫಘಾತ

ನೆಲ್ಯಾಡಿ : ರಾಷ್ಟ್ರೀಯ ಹೆದ್ದಾರಿ 48 ರ ನೆಲ್ಯಾಡಿ ಸಮೀಪದ ಗೋಳಿತ್ತೂಟ್ಟು ಎಂಬಲ್ಲಿ ರಿಟ್ಜ್ ಕಾರು ಮತ್ತು ಟಿಪ್ಪರ್‌ ಡಿಕ್ಕಿ ಹೊಡೆದು ಓರ್ವ ಆಸ್ಪತ್ರೆಗೆ ಸಾಗಿಸುವಾಗ ದಾರಿಯಲ್ಲೇ ಮೃತ ಪಟ್ಟ ಘಟನೆ ನಿನ್ನೆ ನಡೆದಿದೆ. ಮೃತರು ಮಂಜೇಶ್ವರ ಆನೆಕಲ್ಲು ನಿವಾಸಿ ಮಮ್ಮದರ ಪುತ್ರ ಅಬ್ದುಲ್‌ ರಝಾಕ್‌(36ವ).ಇವರು ಈಗ 2 ವರ್ಷಗಳಿಂದ ಉಪ್ಪಿನಂಗಡಿ ಸಮೀಪದ 34ನೇ ನೆಕ್ಕಿಲಾಡಿಯಲ್ಲಿ ಬಾಡಿಗೆಗೆ ವಾಸವಿದ್ದು ಬ್ರೋಕರ್‌ ಕೆಲಸ ಮಾಡುತ್ತಿದ್ದರು.ಇವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿರುತ್ತಾರೆ. ಟಿಪ್ಪರ್‌ ಜಲ್ಲಿ ಇಳಿಸಲು ಹಿಂದಕ್ಕೆ ಚಲಾಸುತ್ತಿದ್ದಾಗ […]

ಕಾಯಿಸಿದ ಮೀನು ತಿಂದು ಪಿಯುಸಿ ವಿದ್ಯಾರ್ಥಿನಿ ಸಾವು

Monday, August 8th, 2011
Fish Fry/ ಕಾಯಿಸಿದ ಮೀನು

ಮಂಗಳೂರು : ಮಂಗಳೂರು ಹೊರವಲಯ ಪಚ್ಚನಾಡಿ ದೇವಿ ನಗರದಲ್ಲಿ ಕಾಯಿಸಿದ ಮೀನು ತಿಂದು ಯುವತಿಯೋರ್ವಳು ಅಸ್ವಸ್ಥಳಾಗಿ ಬಳಿಕ ಸಾವನ್ನಪ್ಪಿದ ಘಟನೆ ಭಾನುವಾರ ಸಂಭವಿಸಿದೆ. ಪಚ್ಚನಾಡಿ ದೇವಿ ನಗರದ ಮಂಜುನಾಥ ಅವರ ಪುತ್ರಿ ಸುಶ್ಮಿತಾ (17) ಸಾವನ್ನಪ್ಪಿದ ಯುವತಿ. ಈಕೆ‌ ವಾಮಂಜೂರಿನ ಕಾಲೇಜೊಂದರ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದಳು. ಶನಿವಾರ ರಾತ್ರಿ ಸುಶ್ಮಿತಾ ಅವರು ಮನೆಯಲ್ಲಿ ರಿಫೈನ್‌ ಆಯಿಲ್‌ನಲ್ಲಿ ಮೀನು ಕಾಯಿಸಿದ್ದರು. ಅದರಲ್ಲಿ ಎರಡು ಮೀನುಗಳನ್ನು ಆಕೆ ತಿಂದಿದ್ದು, ಕೆಲವೇ ಹೊತ್ತಿನಲ್ಲಿ ಆಕೆಗೆ ಸ್ಮೃತಿ ತಪ್ಪಿತ್ತು. ಕೂಡಲೇ ಆಕೆಯನ್ನು ಸಮೀಪದ […]

ಕೊಣಾಜೆ ಬಳಿ ಬಾಲಕನನ್ನು ಕಟ್ಟಿ ಹಾಕಿ 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಲೂಟಿ

Monday, August 8th, 2011
House theft/ ಮನೆ ದರೋಡೆ

ಮಂಗಳೂರು : ಕೊಣಾಜೆ ಪೋಲಿಸ್ ಠಾಣಾ ವ್ಯಾಪ್ತಿಯ ಪಜೀರು ಪೆರ್ನದ ಮನೆಯೊಂದರಿಂದ ಭಾನುವಾರ ಮುಂಜಾನೆ ಸುಮಾರು 3 ಲಕ್ಷ ರೂ. ಮೌಲ್ಯದ 15 ಪವನ್‌ ಚಿನ್ನಾಭರಣ ಕಳವು ಮಾಡಲಾಗಿದೆ. ಕಳ್ಳರು ಮನೆಯಲ್ಲಿ ಇಬ್ಬರೇ ಇರುವುದನ್ನು ಗಮನಿಸಿ ಕಳ್ಳತನದ ಕೃತ್ಯ ನಡೆಸಿದ್ದಾರೆ . ಮನೆಯ ಮಾಲೀಕ ಡೆನಿಸ್‌ ಅಪೋಸ್‌ ವಿದೇಶದಲ್ಲಿದ್ದು ಫಜೀರು ಪೆರ್ನದ ಅವರ ಮನೆಯಲ್ಲಿ ಡೆನಿಸ್‌ ಅಪೋಸ್‌ರವರ ಹತ್ತು ವರ್ಷದ ಮಗ ಮತ್ತು ಅತ್ತೆ ಮಾತ್ರ ಮನೆಯಲಿದ್ದರು. ಅವರ ಮನೆಯಲ್ಲಿ ಪತ್ನಿ ಡೊಡ್ಡಿ, ಪುತ್ರ ಡೆನ್ಮರ್‌,ಅತ್ತೆ ರೊಸಾಲಿನ್‌ […]

ಮುಂಬಯಿ- ಮಂಗಳೂರು ಖಾಸಗಿ ಬಸ್ಸಿನಲ್ಲಿ ಪ್ರಜ್ಞೆ ತಪ್ಪಿಸಿ ಪ್ರಯಾಣಿಕನ ಲೂಟಿ

Friday, August 5th, 2011
Bus-Passenger-Luted/ಬಸ್ಸಿನಲ್ಲಿ ಪ್ರಜ್ಞೆ ತಪ್ಪಿಸಿ ಪ್ರಯಾಣಿಕನ ಲೂಟಿ

ಮಂಗಳೂರು : ಮುಂಬಯಿನಿಂದ ಮಂಗಳೂರಿಗೆ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸಿದ್ದ ಕಾಸರಗೋಡಿನ ಕುಂಬಳೆಯ ವಿಶ್ವನಾಥ ಶೆಟ್ಟಿ (36) ಯವರನ್ನು ಬುಧವಾರ ರಾತ್ರಿ ಮತ್ತು ಬರುವ ಪದಾರ್ಥ ನೀಡಿ. ಪ್ರಜ್ಞೆ ತಪ್ಪಿಸಿ ನಗದು ಹಾಗೂ ಚಿನ್ನಾಭರಣಗಳನ್ನು ಲೂಟಿಗೈಯಲಾಗಿದೆ. ಮಂಗಳೂರಿಗೆ ತಲುಪುವಾಗ ಅರೆ ಪ್ರಜ್ಞಾವಸ್ಥೆಯಲ್ಲಿ ಉಟ್ಟ ಬಟ್ಟೆ ಮತ್ತು ಮೊಬೈಲ್‌ ಫೋನ್‌ ಹೊರತು ಪಡಿಸಿ ಉಳಿದೆಲ್ಲವನ್ನೂ ಕಳೆದುಕೊಂಡಿದ್ದಾರೆ. ಬುಧವಾರ ಮಧ್ಯಾಹ್ನ ಮುಂಬಯಿನ ಮಲಾಡ್‌ನಿಂದ ಖಾಸಗಿ ಸಂಸ್ಥೆಯ ವೋಲ್ವೊ ಬಸ್ಸನ್ನೇರಿದ ವಿಶ್ವನಾಥ ಶೆಟ್ಟಿ ಅವರು ಗುರುವಾರ ಪೂರ್ವಾಹ್ನ 10.30 ಕ್ಕೆ ಮಂಗಳೂರಿಗೆ ತಲುಪಿದಾಗ […]

ಪುರಾಣ ಕತೆಯನ್ನು ನೆನಪಿಸುವ ಯೋಗರಾಜ

Thursday, August 4th, 2011
ಪುರಾಣ ಕತೆಯನ್ನು ನೆನಪಿಸುವ ಯೋಗರಾಜ

ಬೆಂಗಳೂರು : ಮನಶ್ಯಾಸ್ತ್ರದ ಪದವೀಧರನಾದ ಯೋಗರಾಜ (ನವೀನ್‌ ಕೃಷ್ಣ) ಜ್ಯೋತಿಷ್ಯ ಮತ್ತು ಲಂಡನ್‌ನಲ್ಲಿ ವ್ಯಾಸಂಗ ಮಾಡಬೇಕೆಂಬ ಮಹತ್ವಾಕಾಂಕ್ಷೆಯನ್ನು ಹೊಂದಿರುವ ಸಿಹಿ (ನೀತು) ಇವರಿಬ್ಬರ ಪ್ರೇಮಕತೆಯ ‘ಯೋಗರಾಜ’ ಪುರಾಣ ಕತೆಯ ಸನ್ನಿವೇಷವನ್ನು ನೆನೆಪಿಸುತ್ತದೆ. ಯೋಗರಾಜ ಮತ್ತು ಸಿಹಿ ಭೇಟಿ ಮಾಡಿ ಪರಿಚಯವಾಗುತ್ತದೆ. ಕಾಲಾನಂತರದಲ್ಲಿ ಯೋಗರಾಜನಿಗೆ ಅವಳಲ್ಲಿ ಮನಸ್ಸಾಗುತ್ತದೆ. ಓರ್ವ ಅನಾಥೆಯಾಗಿರುವ ಸಿಹಿಯಲ್ಲಿ ತನ್ನ ಮನದಾಳದ ಮಾತುಗಳನ್ನು ಯೋಗರಾಜ ಹೇಳಿಕೊಳ್ಳುತ್ತಾನೆ. ಆದರೆ ಅವಳಿಂದ ಒಪ್ಪಿಗೆಯ ಮಾತು ಕೇಳಬೇಕೆನ್ನುವಷ್ಟರಲ್ಲಿ ಅಪಘಾತವೊಂದರಲ್ಲಿ ಯೋಗರಾಜ ಸಾವಿಗೀಡಾಗುತ್ತಾನೆ. ಅವನ ಪ್ರಾಣವನ್ನು ತೆಗೆದುಕೊಂಡು ಹೋಗಲು ಯಮರಾಜ ಬಂದಾಗ, […]

ನಾಡಿನೆಲ್ಲೆಡೆ ಶೃದ್ದಾ ಭಕ್ತಿಯ ‘ನಾಗರಪಂಚಮಿ’

Thursday, August 4th, 2011
Nagara Panchami/ನಾಗರಪಂಚಮಿ

ಮಂಗಳೂರು : ಇಂದು ದೇಶದಾದ್ಯಂತ ನಾಗರ ಪಂಚಮಿಯನ್ನು ಶೃದ್ದಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ‘ನಾಗರ ಪಂಚಮಿ’ ಕೃಷಿ ಮತ್ತು ಮಳೆಯಿಂದಾಗಿ ಸ್ಥಗಿತಗೊಂಡಿದ್ದ ನಮ್ಮ ಎಲ್ಲ ಶ್ರದ್ಧೆಯ, ಉತ್ಸಾಹದ ಆಚರಣೆಗಳೆಲ್ಲ ಮತ್ತೆ ಆರಂಭವಾಗುವ ಮೊದಲ ಹಬ್ಬ. ನಾಡಿಗೆ ದೊಡ್ಡ ಹಬ್ಬವೆಂದೇ ಪ್ರತೀತಿ. ಆಟಿ ತಿಂಗಳ ಅಮಾವಾಸ್ಯೆ ಯಂದು ಕಹಿ ಮದ್ದು ಸೇವಿಸಿ ನಮ್ಮ ಮೂಲದ ನಾಗನ ಸ್ಥಾನಕ್ಕೆ ಹೊರಡಲು ಸಿದ್ಧತೆಗಳಾಗುತ್ತವೆ. ಮುಂದೆ ಐದನೇ ದಿನ ‘ನಾಗರಪಂಚಮಿ’ ಅಥವಾ ‘ನಾಗ ಪಂಚಮಿ’. ನಾಗನಿಗೆ ಹಲವು ನಾಮಗಳಿವೆ, ಉಭಯ ಜೀವಿಗಳಲ್ಲಿ ಹೆಚ್ಚು ಶಕ್ತಿ […]

ಭಜನಾ ಮಂದಿರಕ್ಕೆ ನುಗ್ಗಿದ ಕಳ್ಳರು, ಬೆಳ್ಳಿ ಪ್ರಭಾವಳಿ ಸಹಿತ 2.74 ಲಕ್ಷ ರೂ. ವೌಲ್ಯದ ಸೊತ್ತು ಕಳವು

Monday, August 1st, 2011
Rama bajana-Mandhir/ ರಾಮ ಭಜನಾ ಮಂದಿರಕ್ಕೆ ನುಗ್ಗಿದ ಕಳ್ಳರು

ಮಂಗಳೂರು : ಯೆಯ್ಯಾಡಿ ಸಮೀಪದ ಶರ್ಬತ್‌ಕಟ್ಟೆ ಬಳಿ ಇರುವ ಶ್ರೀರಾಮ ಭಜನಾ ಮಂದಿರದ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ಬೆಳ್ಳಿ ಮತ್ತು ಚಿನ್ನಾಭರಣ ,ಕಾಣಿಕೆ ಹುಂಡಿಯ ನಗದು ಸೇರಿದಂತೆ ಒಟ್ಟು 2.74 ಲಕ್ಷ ರೂ. ವೌಲ್ಯದ ಸೊತ್ತುಗಳನ್ನು ದೋಚಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಭಜನಾ ಮಂದಿರದ ಹೊರ ಬಾಗಿಲಿನ ಬೀಗ ಮುರಿದ ಕಳ್ಳರು ಗರ್ಭಗುಡಿಯ ಕಿಟಕಿಯ ಸರಳು ಬಗ್ಗಿಸಿ ಒಳ ನುಗ್ಗಿದ್ದಾರೆ. ರಾಮದೇವರ ಮೂರ್ತಿಗೆ ಅಳವಡಿಸಿದ 2 ಕೆಜಿ ಬೆಳ್ಳಿ ಪ್ರಭಾವಳಿ, ಅರ್ಧ ಕೆಜಿ […]