ಸರ್ಕಾರಿ ಅಧಿಕಾರಿಗಳ ಮನೆಗೆ ಎಸಿಬಿ ಅಧಿಕಾರಿಗಳ ದಾಳಿ, ಬಾತ್‌ ರೂಮ್ ಪೈಪಿನಲ್ಲೂ ಹಣ

Wednesday, November 24th, 2021
Jewarshi

ಬೆಂಗಳೂರು : ಬುಧವಾರ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಒಟ್ಟು 68 ಸ್ಥಳಗಳಲ್ಲಿ 503 ಅಧಿಕಾರಿ ಹಾಗೂ ಸಿಬ್ಬಂದಿ ದಾಳಿ ನಡೆಸಿದರು. ಸರ್ಕಾರಿ ನೌಕರರು ಹೊಂದಿರುವ ಆಸ್ತಿಗಳ ಮೌಲ್ಯ, ಅವರು ಹೊಂದಿರುವ ಚಿನ್ನಾಭರಣಗಳು, ಇತರೆ, ಬ್ಯಾಂಕ್ ಠೇವಣಿಗಳ ಕುರಿತ ವಿವರಗಳು ಇಲ್ಲಿದೆ. 1) ಎಂ. ಆರಾದರ್, ಕಿರಿಯ ಇಂಜಿನಿಯರ್, ಲೋಕೋಪಯೋಗಿ ಇಲಾಖೆ, ಜೇವರ್ಗಿ ಕಲಬುರಗಿಯಲ್ಲಿ 2 ವಾಸದ ಮನೆಗಳು, ಬೆಂಗಳೂರು ನಗರದಲ್ಲಿ 1 ನಿವೇಶನ, 3 ವಿವಿಧ ಕಂಪನಿಯ ಕಾರುಗಳು, 1 ದ್ವಿಚಕ್ರ ವಾಹನ, 1 […]

ಮುರುಡೇಶ್ವರ ಶಿವನ ವಿಗ್ರಹ ದ ಶಿರವನ್ನು ಕತ್ತರಿಸಿದ ಫೋಟೊ ವೈರಲ್, ದೇವಸ್ಥಾನದ ಭದ್ರತೆ ಇನ್ನಷ್ಟು ಬಿಗಿ

Tuesday, November 23rd, 2021
Murudeshwara-Shiva-Statue

ಭಟ್ಕಳ  : ಅತ್ಯಂತ ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಕರ್ನಾಟಕದ ಪ್ರಸಿದ್ಧ ಯಾತ್ರಾತಾಣಗಳಲ್ಲಿ ಒಂದಾದ ಉತ್ತರ ಕನ್ನಡದ ಮುರುಡೇಶ್ವರ ದ ಬೃಹತ್ ಈಶ್ವರ ಪ್ರತಿಮೆ ಚಿತ್ರ  ಕುಖ್ಯಾತ ಉಗ್ರ ಸಂಘಟನೆಯ ಪತ್ರಿಕೆಯಲ್ಲಿ ಪ್ರಕಟವಾಗಿದ್ದು, ಇದು ಉಗ್ರ ಸಂಘಟನೆಯ ದಾಳಿ ಸಂಚು ಎಂದು ಹೇಳಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರ ಶಿವನ ವಿಗ್ರಹ ದ ಶಿರವನ್ನು ಕತ್ತರಿಸಿದಂತೆ ಎಡಿಟ್ ಮಾಡಲಾದ ಫೋಟೊವನ್ನು ಉಗ್ರ ಸಂಘಟನೆ ‘ಐಸಿಸ್’(ISIS)ನ ಪತ್ರಿಕೆಯಲ್ಲಿ ಪ್ರಕಟಿಸಲಾಗಿದ್ದು, ಈ ಚಿತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ […]

ಬಿಟ್ ಕಾಯಿನ್ ಹಗರಣದ ಆರೋಪದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು ಕೂಡ ಇದೆ : ರಮಾನಾಥ ರೈ

Saturday, November 20th, 2021
Ramanatha Rai

ಮಂಗಳೂರು : ಸಚಿನ್ ಮಾಮನಿ  ಬಿಟ್ ಕಾಯಿನ್ ಹಗರಣದ  ಬಗ್ಗೆ ಪ್ರಧಾನಮಂತ್ರಿಗೆ ಪತ್ರ ಬರೆದಿರುವ ಆರೋಪದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು ಕೂಡ ಇದೆ ಎಂದು ಮಾಜಿ ಸಚಿವ ರಮಾನಾಥ ರೈ ತಿಳಿಸಿದ್ದಾರೆ. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ಪ್ರಕರಣದ ಬಗ್ಗೆ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ ಎಂದು ಆಗ್ರಹಿಸಿದ್ದಾರೆ. ಹೆಸರನ್ನು ಉಲ್ಲೇಖಿಸದೆ ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಮತ್ತು ಪ್ರಸಿದ್ಧ ಶೆಟ್ಟಿ ಮೊದಲಾದವರ ಹೆಸರನ್ನು ಸಹ ಸಚಿನ್ ಮಾಮನಿ ಅವರು ಪ್ರಧಾನಮಂತ್ರಿಗೆ ಬರೆದಿರುವ ಆರೋಪ […]

ದ.ಕ. ಜಿಲ್ಲೆಯಿಂದ ಪರಿಷತ್ ಚುನಾವಣೆಗೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿಗೆ ಟಿಕೆಟ್

Friday, November 19th, 2021
srinivas Poojary

ಮಂಗಳೂರು :ವಿಧಾನ ಪರಿಷತ್  ಚುನಾವಣೆಗೆ ದ.ಕ. ಜಿಲ್ಲೆಯಿಂದ ಬಿಜೆಪಿಯಿಂದ ಹಾಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರು ಟಿಕೆಟ್ ಪಡೆದುಕೊಂಡಿದ್ದಾರೆ. ದ.ಕ. ಜಿಲ್ಲೆಯಲ್ಲಿ ಎರಡು ಸ್ಥಾನಗಳಲ್ಲಿ ಬಿಜೆಪಿಯಿಂದ ಒಂದು ಸ್ಥಾನವನ್ನು ಕೋಟ ಶ್ರೀನಿವಾಸ್ ಪೂಜಾರಿಯವರು  ಪಡೆದಿದ್ದು , ಈ ಹಿಂದೆಯೂ ಕೂಡ ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಒಂದು ಸ್ಥಾನಕ್ಕೆ ಅವರನ್ನೇ ಆಯ್ಕೆ ಮಾಡಲಾಗಿದ್ದು, ಗೆಲುವು ಬಹುತೇಕ ಫಿಕ್ಸ್ ಆಗಿದೆ. ಇನ್ನೊಂದೆಡೆ ಕೋಟ ಶ್ರೀನಿವಾಸ್ ಪೂಜಾರಿ ಈ ಹಿಂದೆ ಸಿಎಂ ಆಗಿದ್ದ ಬಿಎಸ್ ಯಡಿಯೂರಪ್ಪನವರ […]

ಪತ್ನಿಗೆ ಹೈಡೋಸ್ ಇಂಜೆಕ್ಷನ್ ಕೊಟ್ಟು ಕೊಲೆ ಮಾಡಿದ ವೈದ್ಯ

Sunday, October 24th, 2021
shilpa

ದಾವಣಗೆರೆ: ವೈದ್ಯನೋರ್ವ ತನ್ನ ಮಡದಿಗೆ ಹೈಡೋಸ್ ಇಂಜೆಕ್ಷನ್ ಕೊಟ್ಟು ಕೊಲೆಗೈದಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ರಾಮೇಶ್ವರ ಗ್ರಾಮದಲ್ಲಿ  ತಡವಾಗಿ ಬೆಳಕಿಗೆ ಬಂದಿದೆ. ಶಿಲ್ಪಾ(36) ಮೃತ ಮಹಿಳೆ. ಚನ್ನೇಶಪ್ಪ (45) ಶಿಲ್ಪಾಳನ್ನು ಕೊಲೆ ಮಾಡಿದ ಪತಿ. ಕಳೆದ ಹತ್ತು ತಿಂಗಳ ಹಿಂದೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಶಿಲ್ಪಾಳ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಡಾ. ಚನ್ನೇಶಪ್ಪ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಪತ್ನಿಗೆ ಹೆಕ್ಸಾಮೆಟಜೋನ್ ಸ್ಪಿರಾಯಡ್ ಹೈಡೋಸ್ ನೀಡಿ ಕೊಲೆಗೈದಿದ್ದಾನೆ. ಬಳಿಕ ಪತ್ನಿಯನ್ನು ಆಸ್ಪತ್ರೆಗೆ ಕರೆದುಕೊಂಡು […]

ಉಳ್ಳಾಲದಲ್ಲಿ 15 ಕ್ಕೂ ಅಧಿಕ ಮನೆಗಳ ಗೇಟುಗಳಲ್ಲಿ ಕ್ರೈಸ್ತ ಧರ್ಮ ಪ್ರಚೋದಿಸುವ ಭಿತ್ತಿ ಪತ್ರ ಹಾಗೂ ಪುಸ್ತಕಗಳು ಪತ್ತೆ

Friday, September 24th, 2021
Christian

ಮಂಗಳೂರು  : ಉಳ್ಳಾಲ ರೈಲ್ವೇ ನಿಲ್ದಾಣದ ಹಿಂಭಾಗದ  15 ಕ್ಕೂ ಅಧಿಕ ಮನೆಗಳ ಗೇಟುಗಳಲ್ಲಿ  ಕ್ರೈಸ್ತ ಧರ್ಮ ಪ್ರಚೋದಿಸುವ ಭಿತ್ತಿ ಪತ್ರ ಹಾಗೂ ಪುಸ್ತಕಗಳು ಪತ್ತೆಯಾಗಿದ್ದು ಸೋಮೇಶ್ವರ ಪರಿಸರದಲ್ಲಿ  ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಅಪರಿಚಿತ ವ್ಯಕ್ತಿಯೋರ್ವ ಸೆ.21ರ ಶುಕ್ರವಾರ ಸೋಮೇಶ್ವರ ಪರಿಸರದಲ್ಲಿ ಇದನ್ನು ಮನೆಯ ಗೇಟುಗಳಲ್ಲಿ  ಸಿಕ್ಕಿಸಿರುವುದಾಗಿ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಬಜರಂಗದಳ ಘಟಕ ಭೇಟಿ ನೀಡಿ ಭಿತ್ತಿ ಪತ್ರಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಅದರಲ್ಲಿರುವ ಮೊಬೈಲ್ ನಂಬರಿರುವ ವ್ಯಕ್ತಿಯನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದಾರೆ‌. ಬೆಳಿಗ್ಗೆ ಲುಂಗಿ ಧರಿಸಿದ್ದ ಅಪರಿಚಿತ ವ್ಯಕ್ತಿ 15 ರಷ್ಟು […]

ಕಾಲೇಜು ವಿದ್ಯಾರ್ಥಿಯೋರ್ವ ಪ್ರೇಮ ವೈಫಲ್ಯದಿಂದ ರೈಲ್ವೇ ಹಳಿಗೆ ಬಿದ್ದು ಆತ್ಮಹತ್ಯೆ

Sunday, September 19th, 2021
Basayya Vastrada

ಹುಬ್ಬಳ್ಳಿ:  ಕಾಲೇಜು ವಿದ್ಯಾರ್ಥಿಯೋರ್ವ ಪ್ರೇಮ ವೈಫಲ್ಯದಿಂದ ರೈಲ್ವೇ ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಅಮರಗೋಳದ ಬಸಯ್ಯ ವಸ್ತ್ರದ ಎಂಬ ಯುವಕ ರೈಲು ಹಳಿಗೆ ತೆಲೆ ಕೊಟ್ಟ ಸಾವನಪ್ಪಿದ ಪ್ರೇಮಿಯಾಗಿದ್ದಾನೆ. ಪಿಯುಸಿ ವ್ಯಾಸಂಗ ಮಾಡಿರುವ ಬಸಯ್ಯ, ಅಮರಗೋಳ ಪ್ರದೇಶದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಯುವತಿ ಬಸಯ್ಯನ ಪ್ರೀತಿಯನ್ನು ನಿರಾಕರಣೆ ಮಾಡಿದ್ದರಿಂದಲೇ ರೈಲು ಹಳಿಗೆ ತೆಲೆ ಕೊಟ್ಟು ಸಾವನಪ್ಪಿದ್ದಾನೆ ಎಂದು ಶಂಕಿಸಲಾಗಿದೆ. ಈತನ ತಂದೆ ಸಿಎಂ ಬಸವರಾಜ ಬೊಮ್ಮಾಯಿಯವರ ತಂದೆ-ತಾಯಿಯವರನ್ನು ಅಂತ್ಯಕ್ರಿಯೆ ಮಾಡಿದ ಪುತ್ಥಳಿ ಕಾವಲು […]

ಕೆಪಿಟಿ ಜಂಕ್ಷನ್ ಬಳಿ ಹೆದ್ದಾರಿ ಓವರ್ ಪಾಸ್ ನಿರ್ಮಾಣ

Wednesday, September 15th, 2021
ಕೆಪಿಟಿ ಜಂಕ್ಷನ್ ಬಳಿ ಹೆದ್ದಾರಿ ಓವರ್ ಪಾಸ್ ನಿರ್ಮಾಣ

ಮಂಗಳೂರು  : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಪಿಟಿ ಜಂಕ್ಷನ್ ಬಳಿ ಫ್ಲೈಓವರ್ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅನುಮೋದನೆ ನೀಡಿದ್ದು, ಅಂದಾಜು ರೂಪಾಯಿ 34.60 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಕಾಮಗಾರಿಗೆ ಶೀಘ್ರದಲ್ಲಿ ಟೆಂಡರ್ ಕರೆಯಲಾಗುವುದು. ಕೆಪಿಟಿ ಜಂಕ್ಷನ್ ನಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಿರುವ ಈ ಕಾಮಗಾರಿಗೆ ಅನುಮೋದನೆ ನೀಡಿದ ಕೇಂದ್ರ ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರಿಗೆ ದಕ್ಷಿಣ ಕನ್ನಡ ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಇವರು […]

ಕೊರಗರು ತಮ್ಮ ಕೀಳರಿಮೆ ಬಿಟ್ಟು ಸಮಾಜದ ಮುಖ್ಯ ವಾಹಿನಿಯಲ್ಲಿ ತೊಡಗಿಸಿಕೊಳ್ಳಬೇಕು : ಸಚಿವ ಎಸ್.ಅಂಗಾರ

Sunday, September 12th, 2021
Angara

ಪುತ್ತೂರು  : ಸರಕಾರದ ಸೌಲ್ಯಭ್ಯಗಳಿಂದ ಇಂದಿಗೂ ವಂಚಿತರಾಗಿರುವ ಕೊರಗ ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದ್ದು, ಈ ಕುರಿತು ಆಯಾಯ ತಾಲೂಕುಗಳಲ್ಲೇ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಬಂದರು, ಮೀನುಗಾರಿಕೆ, ಒಳನಾಡು ಮತ್ತು ಜಲಸಾರಿಗೆ ಸಚಿವ ಎಸ್.ಅಂಗಾರ ಮಾಹಿತಿ ನೀಡಿದರು. ಪುತ್ತೂರಿನಲ್ಲಿ ನಡೆದ ಕೊರಗ ಸಮುದಾಯದ ಮುಖಂಡರ ಜೊತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಸಚಿವರು ಈ ಮಾಹಿತಿ ನೀಡಿದರು. ಕೊರಗ ಸಮುದಾಯಗಳು ಜಮೀನು ಹಕ್ಕು ಪತ್ರ, […]

ಕಲ್ಬುರ್ಗಿ ಹಾಗೂ ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ಮಾತುಕತೆ : ಸಚಿವ ಅಶೋಕ

Saturday, September 11th, 2021
R ashoka

ಬೆಂಗಳೂರು  : ಇತ್ತೀಚಿಗೆ ನಡೆದ ಪಾಲಿಕೆ ಚುನಾವಣೆಯಲ್ಲಿ ಆಡಳಿತ ಹಿಡಿಯುವುದಕ್ಕಾಗಿ ಮೂರು ಪಕ್ಷಗಳು ಮೈತ್ರಿ ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ ಇಂದು ಕಂದಾಯ ಸಚಿವ ಆರ್ ಅಶೋಕ ಬಿಡದಿಯ ಫಾರ್ಮ್ ಹೌಸ್ ನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರನ್ನ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ಜೆಡಿ ಎಸ್ ಮಾಜಿ ಸಚಿವ ಸಾ ರಾ ಮಹೇಶ್ ಅವರ ಆಹ್ವಾನದ ಮೇರೆಗೆ ಕುಮಾರಸ್ವಾಮಿಯವರನ್ನ ಭೇಟಿ ಮಾಡಿ ದೊಡ್ಡಬಳ್ಳಾಪುರ ಹಾಗೂ ಕಲ್ಬುರ್ಗಿ ಪಾಲಿಕೆಗಳಲ್ಲಿ ಮೈತ್ರಿ ಆಡಳಿತ ನಡೆಸುವ ಕುರಿತಂತೆ ಒಂದು […]