ದಿ.ದೊರೆಸ್ವಾಮಿ ಪತ್ರ ಬರೆದ ಕುರಿತು ವಿಪ ಸಭಾಪತಿ ಹೊರಟ್ಟಿ ಸಿಎಂ ಗೆ ಮನವಿ

Saturday, May 29th, 2021
doreswamy

ಹುಬ್ಬಳ್ಳಿ: ಶತಾಯುಷಿ, ಮಹಾತ್ಮ ಗಾಂಧೀಜಿಯವರ ತಲೆಮಾರಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಹಲವು ಸಾಮಾಜಿಕ ಚಳವಳಿಗಳ ಮುಂಚೂಣಿಯಲ್ಲಿದ್ದ ಹಿರಿಯ ಗಾಂಧಿವಾದಿ ದಿ. ಎಚ್.ಎಸ್.ದೊರೆಸ್ವಾಮಿ ಅವರ ಮನೆಯಲ್ಲಿ 10-04-2021 ರಂದು ಅವರ ಮನೆಯಲ್ಲಿ ಖುದ್ದಾಗಿ ಭೇಟಿಯಾಗಿ ಅವರ ಜನ್ಮದಿನಾಚರಣೆಯ ಶುಭಾಶಯ ಸಲ್ಲಿಸಲು ಹೋದಾಗ ರೈತರ ಅಕ್ರಮ ಸಕ್ರಮ ಜಮೀನು ಕುರಿತ ವಿಷಯವನ್ನು ನನ್ನೊಂದಿಗೆ ಸುದೀರ್ಘವಾಗಿ ಚರ್ಚಿಸಿದ್ದರು ಎಂದು ವಿಧಾನ ಪರಿಷತ್‌ ಸಭಾಪತಿ ಹೇಳಿದ್ದಾರೆ. ಇದೇ ವಿಷಯವಾಗ ಸಭಾಪತಿ ಹೊರಟ್ಟಿಯವರು ಸಿಎಂ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸದ್ದಾರೆ. ಅವರ ಪತ್ರದ ವಿವರ ಈ […]

ಸಿಎಂ ಪಟ್ಟಕ್ಕಾಗಿ ಕಸರತ್ತು, ಮುಖ್ಯಮಂತ್ರಿ ಸೀಟಲ್ಲಿ ಕೂರಲು ಯಾರೆಲ್ಲ ರೆಡಿಯಾಗಿದ್ದಾರೆ ಎಂದು ನೀವೇ ನೋಡಿ !

Thursday, May 27th, 2021
yedyurappa

ಬೆಂಗಳೂರು :  ಕೊರೋನಾ ಸಂದಿಗ್ಧತೆ ನಡುವೆಯೂ ಬಿಜೆಪಿಯಲ್ಲಿ ರಾಜಕೀಯ ಚಟುವಟಿಗೆ ಬಿರುಸಿನಿಂದ ಕೂಡಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ದಾಟುತ್ತಿದ್ದಂತೆ ಸಿಎಂ ಸ್ಥಾನದ ಆಕಾಂಕ್ಷಿಗಳು ಹೈಕಮಾಂಡ್  ಕದ ತಟ್ಟಲು ಶುರು ಮಾಡಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಡಿಸಿಎಂ ಲಕ್ಷ್ಮಣ ಸವದಿ, ಅರವಿಂದ್ ಬೆಲ್ಲದ, ಬಸವರಾಜ ಬೊಮ್ಮಾಯಿ ಮತ್ತು ಮುರುಗೇಶ್ ನಿರಾಣಿ ಅವರು ಸಿಎಂ ಸ್ಥಾನದ ರೇಸಿನಲ್ಲಿದ್ದಾರೆ ಎನ್ನಲಾಗುತ್ತಿದೆ. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿವೆ. ವಿಜಯೇಂದ್ರ ಆಡಳಿತದಲ್ಲಿ ಮೂಗು […]

ಲಾಕ್‍ಡೌನ್ ನಡುವೆ ಗ್ರಾಮ ಪಂಚಾಯತ್ ಸದಸ್ಯನ ಮಗಳ ಅದ್ಧೂರಿ ಮದುವೆ, ಮುಂದೇನಾಯ್ತು ನೋಡಿ !

Monday, May 24th, 2021
Ambagilu Marraige

ಮಂಡ್ಯ:  ಬಿ.ಹೊಸೂರು ಗ್ರಾಮದ ಹೊರ ಹೊಲಯದಲ್ಲಿರುವ ಅಂಬೆಗಾಲು ಕೃಷ್ಣ ದೇವಾಲಯದಲ್ಲಿ ಗ್ರಾ.ಪಂ ಸದಸ್ಯರೊಬ್ಬರು ಲಾಕ್‍ಡೌನ್ ನಿಯಮ ಮೀರಿ  ಮಗಳ ಮದುವೆಯನ್ನು ಅದ್ಧೂರಿಯಾಗಿ ನಡೆಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮದುವೆಗೆ ಯಾವುದೇ ಅನುಮತಿ ಪಡೆಯದೆ ಗ್ರಾ.ಪಂ ಸದಸ್ಯ ಮಹೇಶ್ ಎಂಬವರು ಲಾಕ್‍ಡೌನ್ ನಿಯಮ ಮೀರಿ ಮದುವೆ ಕಾರ್ಯಕ್ರಮ ನಡೆಸಿದ್ದರು. ಈ ಮದುವೆ ಕಾರ್ಯಕ್ರಮದಲ್ಲಿ ಸುಮಾರು 300ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಈ ವಿಚಾರ ತಿಳಿದು ಅಧಿಕಾರಿಗಳು ಮಂಡ್ಯ ತಹಶಿಲ್ದಾರ್ ಚಂದ್ರಶೇಖರ್ ಶಂಗಾಳಿ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಮದುವೆ ಕಾರ್ಯಕ್ರಮದ ಮೇಲೆ ದಾಳಿ ಮಾಡಿದ ತಹಶೀಲ್ದಾರ್ […]

ಬ್ಲಾಕ್ ಫಂಗಸ್ ಕಾಯಿಲೆಗೆ ಉಡುಪಿ ಜಿಲ್ಲೆಯಲ್ಲಿ ಮೊದಲ ಬಲಿ

Saturday, May 22nd, 2021
sooda

ಉಡುಪಿ : ಮ್ಯೂಕರ್ ಮೈಕೋಸಿಸ್- ಬ್ಲಾಕ್ ಫಂಗಸ್  ಕಾಯಿಲೆಗೆ ಸಂತೆಕಟ್ಟೆಯ 76 ವರ್ಷ ಪ್ರಾಯದ ಮಹಿಳೆ ಬಲಿಯಾಗಿದ್ದಾರೆ. ಇದು ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್  ಕಾಯಿಲೆಗೆ  ಮೊದಲ ಬಲಿ ಎಂದು ದಾಖಲಾಗಿದೆ. ಸಂತೆಕಟ್ಟೆಯ 76 ವರ್ಷ ಪ್ರಾಯದ ಮಹಿಳೆ ನಗರದ ಆದರ್ಶ ಆಸ್ಪತ್ರೆಯಲ್ಲಿ ಸೋಂಕಿಗೆ ತುತ್ತಾಗಿ ಕಳೆದೊಂದು ವಾರದಿಂದ ವೆಂಟಿಲೇಟರ್‌ನಲ್ಲಿ ಚಿಕಿತ್ಸೆಯಲ್ಲಿದ್ದರು . ಅವರು ಚಿಕಿತ್ಸೆ ಫಲಿಸದೆ  ಇಂದು ಮೃತಪಟ್ಟಿದ್ದಾರೆ. ಅದೇ ಆಸ್ಪತ್ರೆಯಲ್ಲಿ ಕಳೆದೆರಡು ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಪಡುಬಿದ್ರಿ ಸಮೀಪದ ನಂದಿಕೂರಿನ 45 ವರ್ಷದ ಪುರುಷರೊಬ್ಬರು ಚೇತರಿಸಿಕೊಳ್ಳುತಿದ್ದಾರೆ. ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ […]

ಚಿತ್ರರಂಗದ ಕಾರ್ಮಿಕರಿಗೂ ಪ್ಯಾಕೇಜ್ ಘೋಷಿಸಲು ಸಿಎಂಗೆ ಮನವಿ

Friday, May 21st, 2021
KFCC

ಬೆಂಗಳೂರು : ಕೋವಿಡ್ ನಿಂದಾಗಿ ಲಾಕ್ ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ ಚಿತ್ರರಂಗದ ಕಾರ್ಮಿಕರು, ತಂತ್ರಜ್ಞರು, ಸಹ ಹಾಗೂ ಸಹಾಯಕ ನಿರ್ದೇಶಕರಿಗೂ ಸರ್ಕಾರ ಪ್ಯಾಕೇಜ್ ಘೋಷಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಇಂದು ಮುಖ್ಯಮಂತ್ರಿಗಳನ್ನ ಭೇಟಿ ಮಾಡಿದ ಚಲನಚಿತ್ರ ಕಾರ್ಮಿಕ ಒಕ್ಕೂಟದ ಗೌರವಾಧ್ಯಕ್ಷ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾ ರಾ ಗೋವಿಂದು, ವಾಣಿಜ್ಯ ಮಂಡಳಿಯ ಗೌರವ ಕಾರ್ಯದರ್ಶಿ ಎನ್ ಎಂ ಸುರೇಶ್, ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಹಾಗೂ ನಟಿ […]

ಕೊರೊನಾ ಸೋಂಕಿತ ಅಣ್ಣ ಮನೆಗೆ ಬಂದಿದಕ್ಕೆ ಕೊಚ್ಚಿ ಕೊಲೆ ಮಾಡಿದ ತಮ್ಮ

Monday, May 17th, 2021
kalasa

ಚಿಕ್ಕಮಗಳೂರು: ಆಸ್ಪತ್ರೆಯಿಂದ ಮನೆಗೆ ಬಂದಕೊರೊನಾ ಸೋಂಕಿತ ಅಣ್ಣನನ್ನು ತಮ್ಮನೇ ಕೊಚ್ಚಿ ಕೊಲೆಗೈದಿರುವ ಆಘಾತಕಾರಿ ಘಟನೆ ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು 45 ವರ್ಷದ ಮಹಾವೀರ್ ಎಂದು ಗುರುತಿಸಲಾಗಿದೆ. ಅಣ್ಣ ತಮ್ಮಂದಿರ ಜಗಳ ನಡೆಯುವಾಗ ಮಹಾವೀರ್ ಅಮ್ಮ ಅಕ್ಕಪಕ್ಕದ ಮನೆಯವರನ್ನು ಕರೆದರೂ  ಸೋಂಕಿಗೆ ಹೆದರಿ ಜಗಳ ಬಿಡಿಸಲು ಯಾರೂ ಬರಲಿಲ್ಲ ಎನ್ನಲಾಗಿದೆ. ಮೂಡಿಗೆರೆ ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ಅಣ್ಣ ಮಹಾವೀರ  ಕೊರೊನಾ ದೃಢ ಪಟ್ಟು ದಾಖಲಾಗಿದ್ದ. ಆದರೆ ಮಹಾವೀರ್ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ನರ್ಸ್‍ಗಳ ಜೊತೆ […]

ಕಾಂಗ್ರೆಸ್ ಜಿಲ್ಲೆಗೆ ಕೆಟ್ಟ ಹೆಸರು ತರುವುದಲ್ಲದೆ, ಸರಕಾರಿ ಆಸ್ಪತ್ರೆಗೆ ಬರದಂತೆ ಜನರಲ್ಲಿ ಭಯ ತುಂಬುತ್ತಿದೆ

Saturday, May 8th, 2021
vedavyas kamath

ಮಂಗಳೂರು : ವೆನ್ಲಾಕ್ ಆಸ್ಪತ್ರೆಯ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡಿ ಜಿಲ್ಲೆಗೆ ಕೆಟ್ಟ ಹೆಸರು ತರುವುದಲ್ಲದೆ, ಜನತೆ ವೆನ್ಲಾಕ್‌ಗೆ ಬರಲು ಭಯಪಡುವ ವಾತಾವರಣವನ್ನು ಕಾಂಗ್ರೆಸ್ ನಿರ್ಮಿಸುತ್ತಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೆನ್ಲಾಕ್ ಆಸ್ಪತ್ರೆಯಲ್ಲಿ ಬಡವರಿಗೆ ಬೇಕಾದ ಎಲ್ಲಾ ವ್ಯವಸ್ಥೆಗಳಿವೆ. ಆದರೆ ಕಾಂಗ್ರೆಸ್ ಜನತೆಯ ದಿಕ್ಕು ತಪ್ಪಿಸುತ್ತಿದ್ದು, ಬಡವರು ಸರಕಾರಿ ಆಸ್ಪತ್ರೆಗೆ ಬರದಂತೆ ಭಯ ತುಂಬುತ್ತಿದೆ. ಆರೋಗ್ಯ ವಿಷಯದ ಈ ರೀತಿಯ ರಾಜಕಾರಣ ಕಾಂಗ್ರೆಸ್‌ಗೆ […]

‘ಕೊರೋನಾ ಕಾಲ’ದಲ್ಲಿ ‘ಮಾನಸಿಕ ಆರೋಗ್ಯ’ ಕಾಪಾಡಿಕೊಳ್ಳೋದು ಹೇಗೆ.?

Saturday, May 1st, 2021
Covid Vaccine

ಬೆಂಗಳೂರು : ಸಾಂಕ್ರಾಮಿಕ ರೋಗದಂತಹ ಬಿಕ್ಕಟ್ಟಿನ ಸಮಯದಲ್ಲಿ ಮಾನಸಿಕ ಆರೋಗ್ಯದ ಸಮಸ್ಯೆಗಳು ತೀರಾ ಸಾಮಾನ್ಯ. ಕೋವಿಡ್ 2ನೇ ಅಲೆಯ ಇಂದಿನ ಪರಿಸ್ಥಿತಿಯಲ್ಲಿ ಕೊರೋನಾಗೆ ತುತ್ತಾಗುವ ಭೀತಿಯು ಜನರಲ್ಲಿ ಅತೀ ಒತ್ತಡವನ್ನು ಹಾಗು ತಡೆದುಕೊಳ್ಳಲು ಆಗದಂತಹ ಆತಂಕವನ್ನು ಹುಟ್ಟು ಹಾಕಿದೆ. ಇಂತಹ ಸಂದರ್ಭದಲ್ಲೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳೋದು ಬಹುಮುಖ್ಯವಾಗಿದೆ. ಹಾಗಾದ್ರೇ.. ಅದನ್ನು ಹೇಗೆ ಕಾಪಾಡಿಕೊಳ್ಳೋದು ಅಂತ ಆಪ್ತ ಸಮಾಲೋಚಕರು ಹಾಗೂ ಮನೋಚಿಕಿತ್ಸಕರಾದಂತ ಡಾ. ಗಿರಿಧರರಾವ್ ಹವಲ್ದಾರ್ ಅವರ ಸಲಹೆಯನ್ನು ಮುಂದೆ ಓದಿ.. ಕೋವಿಡ್ ಕುರಿತಾದ ಗೊಂದಲ, ಅನುಮಾನಗಳು, ರೋಗ […]

ಕರ್ನಾಟಕ ಯಕ್ಷಗಾನ, ಬಯಲಾಟ ಅಕಾಡೆಮಿ ಅಧ್ಯಕ್ಷ ಎಂ.ಎ.ಹೆಗಡೆ ಕೊರೋನಾ ಸೋಂಕಿನಿಂದ ನಿಧನ

Sunday, April 18th, 2021
MA Hegde

ಶಿರಸಿ : ಕರ್ನಾಟಕ ಯಕ್ಷಗಾನ, ಬಯಲಾಟ ಅಕಾಡೆಮಿ ಅಧ್ಯಕ್ಷ ಎಂ.ಎ.ಹೆಗಡೆ (74) ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಏಪ್ರಿಲ್ 13 ರಂದು ಕೊರೋನಾ ಸೋಂಕು ತಗುಲಿದ್ದು, ತೀವ್ರ ಉಸಿರಾಟದ ತೊಂದರೆಯಿಂದ ಎಂ.ಎ.ಹೆಗಡೆ ಭಾನುವಾರ ಬೆಳಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಎಂ.ಎ.ಹೆಗಡೆ ಅವರು ಸಿದ್ದಾಪುರ ತಾಲೂಕಿನ ಜೋಗಿಮನೆಯವರಾಗಿದ್ದು 1948ರಲ್ಲಿ ಜನಿಸಿದರು. ಇಲ್ಲಿನ ಹೆಗ್ಗರಣಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಹೆಗಡೆ ಅವರು ಶಿರಸಿಯಲ್ಲಿ ಪದವಿ ಪಡೆದು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಬಳಿಕ ಪ್ರಾಧ್ಯಾಪಕರಾಗಿಯೂ ಅವರು ಕಾರ್ಯನಿರ್ವಹಿಸಿದರು. ಯಕ್ಷಗಾನ ಅವರ ಹವ್ಯಾಸವಾಗಿದ್ದು […]

ಕಾಂಗ್ರೆಸ್ ಮುಖಂಡನನ್ನ ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಕೊಲೆ

Saturday, March 20th, 2021
Amzad

ಚಿಕ್ಕಬಳ್ಳಾಪುರ:  ಕಾಂಗ್ರೆಸ್ ಮುಖಂಡನನ್ನ ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದಲ್ಲಿ ಶನಿವಾರ ನಡೆದಿದೆ. ಕೊಲೆಯಾದ ಕಾಂಗ್ರೆಸ್ ಮುಖಂಡ ಅಮಜದ್ (43) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ತೆರಳುತ್ತಿದ್ದ ಅಮಜದ್ ನನ್ನು ಒಮ್ನಿ ಕಾರಿನ ಮೂಲಕ ಹಿಂಬಾಲಿಸಿ ಬಂದ ಅಪರಿಚಿತರು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಮೃತ ಅಮಜದ್ ಮಿನಲ್ ಹಿನ್ನೆಲೆ ಹೊಂದಿದ್ದವನಾಗಿದ್ದು, ಸ್ಥಳೀಯ ಕಾಂಗ್ರೆಸ್ ಮುಖಂಡನಾಗಿದ್ದ. ಶಿಡ್ಲಘಟ್ಟ ನಗರ ಪೊಲೀಸರು ಮೃತದೇಹವನ್ನ ಶವಾಗಾರಕ್ಕೆ ರವಾನಿಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಕೊಲೆಯ ಉದ್ದೇಶ ತಿಳಿದುಬಂದಿಲ್ಲ. ಹಾಡಹಗಲೇ […]