ತವರಿನಿಂದ ಹಣ ಹಾಗೂ ಬೈಕ್‍ ಕೊಡಿಸುವಂತೆ ಪೀಡಿಸುತ್ತಿದ್ದ ಪತಿ, ಮದ್ವೆಯಾಗಿ 8 ತಿಂಗಳಲ್ಲೇ ಪತ್ನಿಆತ್ಮಹತ್ಯೆ

Friday, March 19th, 2021
Hajira

ದಾವಣಗೆರೆ : ವ್ಯಾಪಾರ ಮಾಡಲು ತವರಿನಿಂದ ಹಣ ತರಲು ಪೀಡಿಸುತ್ತಿದ್ದ ಪತಿಯ ಕಾಟ ತಾಳಲಾರದೆ  ಗೃಹಿಣಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆಯ ಬಂಬೂ ಬಜಾರ್ ನ ಮನೆಯೊಂದರಲ್ಲಿ ನಡೆದಿದೆ. ಬಿಬೀ ಅಜೀರಾ (19) ಆತ್ಮಹತ್ಯೆಗೀಡಾದ ಗೃಹಿಣಿ. ಈಕೆ ವರದಕ್ಷಿಣೆ ಕಿರುಕುಳಕ್ಕೆ ಮನನೊಂದು ಅತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಬಿಬೀ ಅಜಿರಾ-ಇಮ್ರಾನ್ ಮದುವೆಯಾಗಿ 8 ತಿಂಗಳಷ್ಟೆ ಕಳೆದಿತ್ತು. ಅಜಿರಾ ಕುಟುಂಬಸ್ಥರು 1ಲಕ್ಷ ರೂ ನಗದು, 3 ತೊಲೆ ಚಿನ್ನಾಭರಣ ಕೊಟ್ಟು ಮದುವೆ ಮಾಡಿ ಕೊಟ್ಟಿದ್ದರು. ಆದರೆ ಇತ್ತೀಚಿಗೆ ಪತಿ ಹಾಗೂ […]

ಕಾಲೇಜಿಗೆ ಹೋಗು ಎಂದಿದ್ದಕ್ಕೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವತಿ

Thursday, March 18th, 2021
Divya

ಚಾಮರಾಜನಗರ: ಲಾಕ್‍ಡೌನ್ ಬಳಿಕ ಮನೆಯಲ್ಲೇ ಇದ್ದ ಮಗಳನ್ನು ಕಾಲೇಜಿಗೆ ಹೋಗು ಎಂದು ಬಲವಂತ ಮಾಡಿದ್ದಕ್ಕೆ ಮನನೊಂದ ಯುವತಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲದ ಮೇಗಲದೊಡ್ಡಿ ಗ್ರಾಮದ ಲೂರ್ಧಸ್ವಾಮಿ ಅವರ ಮಗಳು ದಿವ್ಯಾ(19) ಮೃತ ದುರ್ದೈವಿ. ಈಕೆ ಕಳೆದ ವರ್ಷ ಕೊರೊನಾ ಹಿನ್ನೆಲೆ ಲಾಕ್‍ಡೌನ್ ನಿಂದ ಕಾಲೇಜಿಗೆ ಹೋಗದೆ ಕೂಲಿ ಕೆಲಸ ಮಾಡಿಕೊಂಡಿದ್ದಳು. ಆದರೆ ಕಾಲೇಜು ಆರಂಭವಾದ ಬಳಿಕ ಓದಲು ಹೋಗು ಎಂದು ಪೋಷಕರು ಬಲವಂತ ಮಾಡಿ ಕಾಲೇಜಿಗೆ ಕಳುಹಿಸಿದ್ದರು. ಕಾಲೇಜಿಗೆ ಹೋಗಲು ಇಷ್ಟವಿಲ್ಲದ […]

ತಮಿಳುನಾಡು ವಿಧಾನಸಭೆ ಚುನಾವಣೆ : ಅಣ್ಣಾಮಲೈ ಹಾಗೂ ನಟಿ ಖುಷ್ಬೂ ಸುಂದರ್ ಅವರಿಗೆ ಟಿಕೆಟ್

Sunday, March 14th, 2021
Annamalai

ಚೆನ್ನೈ:  ತಮಿಳುನಾಡು ವಿಧಾನಸಭೆ ಚುನಾವಣೆಯ 20 ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸುತ್ತಿದೆ. ಪಕ್ಷ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಹಾಗೂ ನಟಿ ಖುಷ್ಬೂ ಸುಂದರ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಇದೀಗ ಒಟ್ಟೂ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದರು. ಅಣ್ಣಾಮಲೈ ಅವರು ಅರವಕುರಿಚಿ ಕ್ಷೇತ್ರದಿಂದಲೂ ಖುಷ್ಬೂ ಥೌಸಂಡ್ ಲೈಟ್ಸ್ ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ. ಇನ್ನೊಂದೆಡೆ ಕಾರೈಕುಡಿ […]

ತಾಲೂಕು ಕಚೇರಿಯಲ್ಲಿ ಕೆಲಸ ದೊರಕಿಸಿಕೊಡುವುದಾಗಿ ವಂಚಿಸಿದವನಿಗೆ ಬೆಲ್ಟ್ ನಿಂದ ಹಲ್ಲೆ

Thursday, March 4th, 2021
Jeetu Shetty

ಮಂಗಳೂರು: ಫೇಸ್ ಬುಕ್ ಮೂಲಕ ಪರಿಚಯ ಮಾಡಿಸಿಕೊಂಡು ತಾಲೂಕು ಕಚೇರಿಯಲ್ಲಿ ಕೆಲಸ ದೊರಕಿಸಿಕೊಡುವುದಾಗಿ ಹೇಳಿ ಮಹಿಳೆಯರ ಸಹಿತ ಹಲವು ಮಂದಿಗೆ ವಂಚನೆಗೈದ ಆರೋಪಿಗೆ ಕೆಲವು ವ್ಯಕ್ತಿಗಳು  ಬೆಲ್ಟ್ ನಿಂದ ಮತ್ತು ಗುಂಪಾಗಿ ಸೇರಿ ಹಲ್ಲೆ ನಡೆಸಿರುವ ಘಟನೆ ಮುಲ್ಕಿ ಸಮೀಪ ನಡೆದಿದೆ. ಪುನರೂರು ಎಂಬಲ್ಲಿನ ಜೀತು ಶೆಟ್ಟಿ ಅಲಿಯಾಸ್ ಅಜಯ್ ಶೆಟ್ಟಿ ಎಂಬಾತ, ತನಗೆ ಶಾಸಕ ಡಾ.ವೈ.ಭರತ್ ಶೆಟ್ಟಿಯವರ ಪರಿಚಯ ಇದೆ ಎಂದು ಏಳೆಂಟು ಮಂದಿಗೆ ನಂಬಿಸಿದ್ದಾನೆ. ಎಫ್ಬಿ ಮುಖಾಂತರ ಅವರನ್ನು ಪರಿಚಯಿಸಿಕೊಂಡು ತಾಲೂಕು ಆಫೀಸ್ ನಲ್ಲಿ ಕೆಲಸ ದೊರಕಿಸುವ ಭರವಸೆ ನೀಡಿದ್ದಾನೆ. […]

ಧಾರ್ಮಿಕ ಭಾವನೆಗಳೊಂದಿಗೆ ಆಟ ಆಡುತ್ತಿರುವ ಟಿಎಂಸಿ ಸರ್ಕಾರಕ್ಕೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ : ಯೋಗಿ ಆದಿತ್ಯನಾಥ್

Tuesday, March 2nd, 2021
Adityanath

ಮಾಲ್ಡಾ: ಪಶ್ಚಿಮ ಬಂಗಾಳದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗುವುದಕ್ಕೆ ನಿರ್ಬಂಧ ಇದೆ. ಧಾರ್ಮಿಕ ಭಾವನೆಗಳೊಂದಿಗೆ ಆಟ ಆಡುತ್ತಿರುವ ಟಿಎಂಸಿ ಸರ್ಕಾರಕ್ಕೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಸಿಎಂ ಮಮತಾ ಬ್ಯಾನರ್ಜಿ ಓಲೈಕೆ ರಾಜಕಾರಣ ಹಾಗೂ ರಾಷ್ಟ್ರೀಯ ಭದ್ರತೆಗೆ ಧಕ್ಕೆಯಾಗುವಂತಹ ಕೆಲಸಗಳಲ್ಲಿ ತೊಡಗಿದ್ದಾರೆ ಎಂದು ಆದಿತ್ಯನಾಥ್  ಆರೋಪಿಸಿದ್ದಾರೆ. ವಿಧಾನಸಭೆ ಚುನಾವಣೆ ಪ್ರಚಾರದ ಅಂಗವಾಗಿ ಮಾ.02 ರಂದು ಮಾಲ್ಡಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಯೋಗಿ ಆದಿತ್ಯನಾಥ್, ಮಮತಾ ಬ್ಯಾನರ್ಜಿ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಅಕ್ರಮ ವಲಸಿಗರನ್ನು […]

ವಿಚ್ಛೇದನ ಸಮಸ್ಯೆಯಿಂದ ಪಾರಾಗಲು ಇಲ್ಲಿದೆ ಸರಳ ತಂತ್ರ

Tuesday, February 16th, 2021
Tambula

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ : ದಾಂಪತ್ಯದಲ್ಲಿ ಉದ್ಭವಿಸುವಂತಹ ಸಣ್ಣ ಪುಟ್ಟ ಜಗಳಗಳು ದೊಡ್ಡದಾಗುತ್ತದೆ. ಇಲ್ಲಿ ಅನಗತ್ಯ ಮಾತುಗಳು ಆಗದೇ ಇರುವಂತಹ ಜನಗಳ ದುಷ್ಟ ಬುದ್ಧಿಯಿಂದ ವಿಚ್ಛೇದನ ಹಂತಕ್ಕೆ ಈ ಸಮಸ್ಯೆ ತಲುಪಬಹುದು. ಪತಿ ಅಥವಾ ಪತ್ನಿ ಪರಸ್ಪರ ಒಪ್ಪಿಗೆ ಮೇರೆಗೆ ಆದರೆ ಅದು ವಿಚ್ಛೇದನ ಪರವಾಗಿಲ್ಲ. ಆದರೆ ಒಬ್ಬರಿಗೆ ಬಾಳುವ ಇಷ್ಟ ಇದ್ದರೂ ಸಹ ಅದನ್ನು ಅರಿಯದೆ ಮತ್ತೊಬ್ಬರು ಹಟ ಸಾಧನೆ ಮಾಡುತ್ತಾರೆ. ಇಂತಹ ಸಮಸ್ಯೆಯಿಂದ ನೀವು ನೊಂದಿದ್ದರೆ ಈ ಸರಳ […]

ಪಕ್ಕದ ಮನೆಯ ಮಹಿಳೆಯೊಂದಿಗೆ ಲವ್ ಅಪೈರ್. ವ್ಯಕ್ತಿಯ ಕೊಲೆ ಮಾಡಿದ ಆರು ಜನರ ಬಂಧನ

Tuesday, February 16th, 2021
brammavar Murder

ಬ್ರಹ್ಮಾವರ : ಪಕ್ಕದ ಮನೆಯ ಮಹಿಳೆಯೊಂದಿಗೆ ಲವ್ ಅಪೈರ್ ಇಟ್ಟುಕೊಂಡಿದ್ದ ಯುವಕನನ್ನು ಪಶ್ನಿಸಿದಕ್ಕೆ ಗೆಳೆಯರೊಂದಿಗೆ ಸೇರಿ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಭಂದಿಸಿದಂತೆ  ಅಪರಾಧ ಮಾಡಿದ 24 ಗಂಟೆಯೊಳಗೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಗೌತಮ್ (27), ಮನೋಜ್ ಭಂಡಾರಿ (30), ಧನುಷ್ (27), ಚೇತನ್ ಕುಮಾರ್ (24), ತಿಲಕ್ ರಾಜ್ (36) ಮತ್ತು ಸಿದ್ಧಾರ್ಥ್ ಎಂದು ಗುರುತಿಸಲಾಗಿದೆ. ಸಿದ್ಧಾರ್ಥ್ ಹೊರತುಪಡಿಸಿ ಉಳಿದವರೆಲ್ಲರೂ ಮಲ್ಪೆ ನಿವಾಸಿಗಳಾಗಿದ್ದರೆಂದು ತಿಳಿದು ಬಂದಿದೆ. ಗುಡ್ಡೆಯಂಗಡಿ ಬಳಿಯ ಹೊಸೂರಿನಲ್ಲಿ ನವೀನ್‌‌ ನಾಯ್ಕ್  […]

ದುಷ್ಟ ಶಕ್ತಿ ಮತ್ತು ದುಷ್ಟ ಜನಗಳಿಂದ ರಕ್ಷಣೆ ನೀಡುವ ತಂತ್ರ

Monday, February 15th, 2021
Theertha

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ : ನಾವು ನಡೆಯುವ ಹಾದಿಯಲ್ಲಿ ಕಲ್ಲುಮುಳ್ಳುಗಳು ಸಹಜ ಆದರೆ ಎಲ್ಲಾ ರಂಗದಲ್ಲೂ ಇದೇ ರೀತಿಯ ಸಮಸ್ಯೆಯನ್ನು ಎಷ್ಟುದಿನ ಸಹಿಸಿಕೊಳ್ಳಲು ಸಾಧ್ಯವಿದೆ. ದುಷ್ಟಶಕ್ತಿ ಮತ್ತು ದುಷ್ಟಜನ ಒಂದೇ ನಾಣ್ಯದ ಎರಡು ಮುಖಗಳಂತೆ ನಮ್ಮ ಏಳಿಗೆ ಹಾಗೂ ಒಳ್ಳೆಯ ವಿಚಾರಗಳಲ್ಲಿ ಹಸ್ತಕ್ಷೇಪ ನಡೆಸಿ ಕೆಡುಕು ಮಾಡುವುದು ಮತ್ತು ಬಯಸುವುದು. ಇಲ್ಲಿ ನೇರ ಶತ್ರುತ್ವ ಕಾಣುತ್ತೇವೆ ಮತ್ತು ಹಿತಶತ್ರುಗಳು ಸಹ ಕಾಣುತ್ತೇವೆ. ಇವರ ಕ್ರೂರ ದೃಷ್ಟಿಯಿಂದ ನಮ್ಮ ಏಳಿಗೆ ಅಸಾಧ್ಯ. ದುಷ್ಟಶಕ್ತಿ […]

ವಿವಾಹ ಬೇಗ ಕೂಡಿಬರಲು ಮತ್ತು ಅದರಲ್ಲಿನ ಸಮಸ್ಯೆಗೆ ಸೂಕ್ತ ಪರಿಹಾರ

Sunday, February 14th, 2021
anjaneya

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ : ದಿನಗಳು ಕಳೆಯುತ್ತಿರುವುದು ಆದರೆ ಮದುವೆ ಮುಂದೂಡುತ್ತಾ ನೀವು ಸಮಸ್ಯೆ ಅನುಭವಿಸುವ ಸಾಧ್ಯತೆಗಳು ಕಾಣಬಹುದು. ಸಮಯ ಹಿಂದೆ ಸರಿಯುವುದಿಲ್ಲ ಆದಷ್ಟು ಸಮಯದ ಜೊತೆಗೆ ಪ್ರಯಾಣ ಬೆಳೆಸುವುದು ಉತ್ತಮ. ನಿಮ್ಮ ಮದುವೆಯಲ್ಲಿ ಅಡ್ಡಿ-ಆತಂಕಗಳು ಮೂಡುತ್ತಿರುತ್ತದೆ. ಈಗಿನ ಸಂದರ್ಭದಲ್ಲಿ ಸೂಕ್ತ ವಧು-ವರರ ಅನ್ವೇಷಣೆಯಲ್ಲಿ ತೊಡಗಿದ್ದರೂ ಸಹ ಅದು ಪ್ರಗತಿದಾಯಕ ವಾಗದಿರಬಹುದು, ಮನೆಯವರ ಅಲಕ್ಷತನ ಕಂಡುಬರುತ್ತದೆ ಅಥವಾ ನಿಮ್ಮ ಮಕ್ಕಳು ಮದುವೆಗೆ ಹಿಂದೇಟು ಹಾಕಬಹುದು. ಇದಲ್ಲದೆ ಅನ್ಯ ವ್ಯಕ್ತಿ ಗಳಿಂದ ಸಮಸ್ಯೆ […]

ಬೈಕಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಬೊಲೆರೊ, ಓರ್ವ ಮೃತ್ಯು

Monday, February 8th, 2021
Kashi Matt Accident

ಬಂಟ್ವಾಳ : ಬೈಕ್ ಹಾಗೂ ಬೊಲೆರೊ ವಾಹನದ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕಾಶಿಮಠ ಎಂಬಲ್ಲಿ ಸೋಮವಾರ ನಡೆದಿದೆ. ಮಾಣಿ ಬರಿಮಾರು ನಿವಾಸಿ ಬಾಲಕೃಷ್ಣ (55) ಮೃತರು ಎಂದು ಗುರುತಿಸಲಾಗಿದೆ. ಬೈಕ್ ಹಾಗೂ ಬೊಲೆರೊ ವಿಟ್ಲದಿಂದ ಉಕ್ಕುಡ ಮಾರ್ಗವಾಗಿ ತೆರಳುತ್ತಿದ್ದು, ಕಾಶಿಮಠ ಸಮೀಪ ಬೊಲೆರೊ ಬೈಕಿನ ಹಿಂಭಾಗಕ್ಕೆ ಢಿಕ್ಕಿಯಾಗಿದೆ. ಈ ವೇಳೆ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರ ಬಾಲಕೃಷ್ಣ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ […]