ಪಾಂಡೇಶ್ವರ ಪೊಲೀಸ್ ಠಾಣೆ ವಠಾರ ದುರಸ್ತಿ ಮತ್ತು ಠಾಣಾ ಒಳರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ

Thursday, December 24th, 2020
Pandeshwara Station

ಮಂಗಳೂರು : ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ಪಾಂಡೇಶ್ವರ ಪೊಲೀಸ್ ಠಾಣೆ ವಠಾರ ದುರಸ್ತಿ, ಹಾಗೂ ಠಾಣಾ ಒಳರಸ್ತೆ ಕಾಂಕ್ರೀಟೀಕರಣಕ್ಕೆ ಇಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್, ಎಸಿಪಿ ಜಗದೀಶ್, ನಟರಾಜ್, ಪಾಂಡೇಶ್ವರ ಇನ್ ಸ್ಪೆಕ್ಟರ್ ಎ. ಸಿ ಲೋಕೇಶ್, ಸಬ್ ಇನ್ ಸ್ಪೆಕ್ಟರ್ ಸುರೇಶ್, ಶೀತಲ್, ಹಿರಿಯ ಸಿಬ್ಬಂದಿ ಸುನಿಲ್ SB, ಸ್ಥಳೀಯ ಪ್ರಮುಖರಾದ ನಿತಿನ್ ಕಾಮತ್, ಅನಿಲ್ […]

ಶಾಸಕ ಯು.ಟಿ ಖಾದರ್‌ ಅವರ ಕಾರನ್ನು ಫಾಲೋ ಮಾಡಿಕೊಂಡು ಬಂದ ವ್ಯಕ್ತಿಯ ಬಂಧನ

Thursday, December 24th, 2020
utKhader

ಮಂಗಳೂರು : ಮಾಜಿ ಸಚಿವ ಯು.ಟಿ ಖಾದರ್‌ ಅವರ ಕಾರನ್ನು ಬುಧವಾರ ರಾತ್ರಿ  ಬೈಕ್‌ನಲ್ಲಿ ಫಾಲೋ ಮಾಡಿಕೊಂಡು ಬಂದ ವ್ಯಕ್ತಿಯೊಬ್ಬನನ್ನು ಮಂಗಳೂರು ಪೊಲೀಸರು ತಡರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಯುವಕನನ್ನು ಬೋಳೂರು ನಿವಾಸಿ ಅನೀಶ್ ಪೂಜಾರಿ ಎಂದು ಗುರುತಿಸಲಾಗಿದೆ. ಬುಧವಾರ ಮಂಗಳೂರಿನ ದೇರಳಕಟ್ಟೆಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಕ್ಕೆ ಭದ್ರತಾ ವಾಹನದ ಬೆಂಗಾವಲಿನಲ್ಲಿ ಪ್ರಯಾಣ ಮಾಡುತ್ತಿದ್ದ ಸಂದರ್ಭದಲ್ಲಿ ಹೆಲ್ಮೆಟ್ ಧರಿಸಿದ ಅಪರಿಚಿತ ವ್ಯಕ್ತಿಯೋರ್ವ ಸುಮಾರು 15 ಕಿ.ಮೀ ಖಾದರ್‌ ಅವರ ವಾಹನವನ್ನು ಫಾಲೋ ಮಾಡಿದ್ದ ಎನ್ನಲಾಗಿದ್ದು,  ಭದ್ರತಾ […]

ಯುವತಿಗೆ ಹಾಡಹಗಲೇ ನಡುರಸ್ತೆಯಲ್ಲಿ ತಲವಾರಿನಿಂದ ಇರಿದ ಆಟೋ ಚಾಲಕ

Tuesday, December 22nd, 2020
Asha

ಹುಬ್ಬಳ್ಳಿ: ಆಟೋರಿಕ್ಷಾ ಚಾಲಕ  ಹುಚ್ಚುಪ್ರೇಮಿಯೊಬ್ಬ ಯುವತಿಗೆ ಹಾಡಹಗಲೇ ನಡುರಸ್ತೆಯಲ್ಲಿ ತಲವಾರಿನಿಂದ ಮನಬಂದಂತೆ ಇರಿದು ಗಂಭೀರ ಗಾಯಗೊಳಿಸಿದ ಘಟನೆ ಸೋಮವಾರ ಬೆಳಗ್ಗೆ ಇಲ್ಲಿನ ದೇಶಪಾಂಡೆ ನಗರದಲ್ಲಿ ನಡೆದಿದೆ. ಕುಂದಗೋಳ ತಾಲೂಕ ರಾಮಾಪೂರ ಗ್ರಾಮದ ಆಟೋರಿಕ್ಷಾ ಚಾಲಕ ಇಸ್ಮಾಯಿಲ್ ಕೆ. ಕುಂಕುರ ಹಲ್ಲೆ ಮಾಡಿದ ಆರೋಪಿ. ಇಲ್ಲಿನ ದುರ್ಗದ ಬಯಲಿನ ಜುವೆಲ್ಲರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಆಶಾ ಡಿ. ಅಗಸರ ಹಲ್ಲೆಗೊಳಗಾಗಿದ್ದಾಳೆ. ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಈ ದಿನದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Monday, December 21st, 2020
subrahmanya

ಶ್ರೀ ಸುಬ್ರಹ್ಮಣ್ಯ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕೆಲಸದಲ್ಲಿ ನಿಮ್ಮ ಬಗೆಗೆ ಮೆಚ್ಚುಗೆ ಭಾವನೆ ಬರಲಿದೆ. ದೊಡ್ಡ ಯೋಜನೆಗಾಗಿ ಆಸ್ಪದ ನೀಡಲಿದ್ದಾರೆ. ಸಮಾರಂಭಗಳ ಪೂರ್ಣ ತಯಾರಿ ನಿಮ್ಮ ವಿಚಾರಗಳಂತೆ ನಡೆಯಲು ಚಾಲನೆ ನೀಡುವರು. ಆತುರದ ವರ್ತನೆಗಳು ಸರಿಯಲ್ಲ. ಯೋಜನೆಗಳಲ್ಲಿ ನೀವು ಚೈತನ್ಯದಿಂದ ವರ್ತಿಸುವುದು ಅವಶ್ಯಕವಿದೆ. ಮನೆಯಲ್ಲಿ ಲಗುಬಗೆಯಿಂದ ವಸ್ತುಗಳು […]

ದಕ್ಷಿಣ ಕನ್ನಡ ಜಿಲ್ಲೆಯ 5 ಅಭಿವೃದ್ಧಿ ಕಾಮಗಾರಿಗಳಿಗೆ ನಿತಿನ್ ಗಡ್ಕರಿ ಚಾಲನೆ

Saturday, December 19th, 2020
Nithin Gadkari

ಮಂಗಳೂರು : ದ.ಕ ಜಿಲ್ಲೆಯ 214.22 ಕೋಟಿ ರೂ. ವೆಚ್ಚದ 5 ಅಭಿವೃದ್ಧಿ ಕಾಮಗಾರಿಗಳಿಗೆ ರಾಷ್ಟ್ರೀಯ ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವರ್ಚುವಲ್ ಕಾರ್ಯಕ್ರಮದ ಮೂಲಕ ಚಾಲನೆ ನೀಡಿದರು. ರಾಷ್ಟ್ರೀಯ ಹೆದ್ದಾರಿ 66ರ ಕೂಳೂರಿನಲ್ಲಿರುವ ಫಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ 69.02 ಕೋಟಿ ರೂ. ವೆಚ್ಚದ ನೂತನ ಷಟ್ಪಥ ಕೂಳೂರು ಸೇತುವೆ, ರಾಷ್ಟ್ರೀಯ ಹೆದ್ದಾರಿ 275ರಲ್ಲಿರುವ ಸಂಪಾಜೆ ಘಾಟ್ನ ತಡೆಗೋಡೆ ಹಾಗೂ ರಸ್ತೆ 2.53 ಕಿ.ಮೀ. […]

ಶಾಪ ವಿಮೋಚನೆಗೆ ಮೈಲಾರಲಿಂಗೇಶ್ವರನಿಗೆ ಬೆಳ್ಳಿಯ ಹೆಲಿಕಾಪ್ಟರ್ ಹರಕೆ ಕೊಟ್ಟ ಡಿಕೆ ಶಿವಕುಮಾರ್

Friday, December 18th, 2020
DK Shivakumar

ಬಳ್ಳಾರಿ:  ಹೂವಿನಹಡಗಲಿ ತಾಲ್ಲೂಕಿನ   ಪ್ರಸಿದ್ಧ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಹೆಲಿಕಾಪ್ಟರ್ ನೀಡುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮ್ಮ ಹರಕೆ ತೀರಿಸಿಕೊಂಡಿದ್ದಾರೆ. ಮೂರು ವರ್ಷಗಳ ಹಿಂದೆ ಡಿ ಕೆ ಶಿವಕುಮಾರ್ ಅವರು ಹೆಲಿಕಾಪ್ಟರ್ ನಲ್ಲಿ ಕ್ಷೇತ್ರ ಮೈಲಾರಲಿಂಗೇಶ್ವರ ದೇವಸ್ಥಾನದ ಮೇಲೆ ಆಕಾಶದಲ್ಲಿ ಹಾದುಹೋಗಿದ್ದರು. ಇದರಿಂದಾಗಿ ಅವರು ಕ್ಷೇತ್ರಕ್ಕೆ ಅಪಚಾರ ಎಸಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ನಂತರ ಅವರಿಗೆ ಸಂಕಷ್ಟಗಳೇ ಎದುರಾದವು. ಅವರ ಮೇಲೆ ಎರಡು-ಮೂರು ಬಾರಿ ಐಟಿ ಇಲಾಖೆ ದಾಳಿ ನಡೆಯಿತು, ತಿಹಾರ್ ಜೈಲಿಗೂ […]

ಮನೆಯಲ್ಲಿ ಧನಾತ್ಮಕ ಶಕ್ತಿಯು ವೃದ್ಧಿಯಾಗಿ ಈ ರೀತಿ ಮಾಡಿ

Saturday, December 12th, 2020
lakshmi

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ರಾತ್ರಿ ಮಲಗುವ ಮುನ್ನ ಈ ಆಚರಣೆ ಮಾಡುವುದರಿಂದ ಬಹಳಷ್ಟು ಲಾಭ ಪಡೆಯುವುದು. ಹೌದು ರಾತ್ರಿ ಹೊತ್ತು ಪಶ್ಚಿಮ ಮತ್ತು ದಕ್ಷಿಣ ದಿಕ್ಕಿನಲ್ಲಿ ದೀಪವನ್ನು ಬೆಳಗಿ ಹಾಗೂ ದೇವರಕೋಣೆಯಲ್ಲಿ ದೀಪವಿರಲಿ ಮತ್ತು ನೀವು ಮಲಗುವ ಕೋಣೆಯಲ್ಲಿ ಕರ್ಪೂರವನ್ನು ಹಚ್ಚಿ ಇದರಿಂದ ಲಕ್ಷ್ಮಿಯ ಕೃಪಾ ಕಟಾಕ್ಷ ನಿಮ್ಮ ಮೇಲೆ ಹೆಚ್ಚಾಗಿ ಪ್ರಭಾವ ಬೀರುತ್ತದೆ. ದಾಂಪತ್ಯದಲ್ಲಿನ ಸಮಸ್ಯೆಗಳಿಗೆ ಪರಿಹಾರ […]

ನಗರದಲ್ಲಿ ತಾಲಿಬಾನ್ ಪರ ಗೋಡೆಬರಹ, ಮತ್ತೋರ್ವ ಆರೋಪಿ ಸೆರೆ

Wednesday, December 9th, 2020
Terorist

ಮಂಗಳೂರು : ನಗರದಲ್ಲಿ ತಾಲಿಬಾನ್ ಉಗ್ರರ ಪರ ಗೋಡೆಬರಹ ಬರೆದು ಆತಂಕ ಮೂಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಮಂಗಳೂರು ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳ ಸಂಬಂಧಿ, ತೀರ್ಥಹಳ್ಳಿಯ ಸಾದತ್ ಎಂಬಾತ ಪೊಲೀಸ್ ವಶದಲ್ಲಿರುವ ಆರೋಪಿ ಎಂದು ತಿಳಿದುಬಂದಿದೆ. ವಶದಲ್ಲಿರುವ ಆರೋಪಿಯು ಪ್ರಕರಣದ ಮೊದಲ ಆರೋಪಿ ಮುಹಮ್ಮದ್ ಶಾರೀಕ್‌ನ ಸಂಬಂಧಿ ಎನ್ನಲಾಗಿದೆ. ಪ್ರಕರಣದಲ್ಲಿ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದ್ದು, ಮೂರನೇ ಆರೋಪಿಯನ್ನು ತೀರ್ಥಹಳ್ಳಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗ: ಆಸ್ಪತ್ರೆಗೆ ಬಂದಿದ್ದ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದ ಸಾಮೂಹಿಕ ಅತ್ಯಾಚಾರ

Sunday, December 6th, 2020
Rape

ಶಿವಮೊಗ್ಗ: ತಾಯಿಯನ್ನು ನೋಡಿಕೊಳ್ಳಲು  ಆಸ್ಪತ್ರೆಗೆ ಬಂದಿದ್ದ ಬಾಲಕಿಗೆ ಊಟ ಕೊಡಿಸುವುದಾಗಿ ಹೇಳಿ ಕಾರಿನಲ್ಲಿ ಕರೆದೊಯ್ದ ಮೆಗ್ಗಾನ್ ಆಸ್ಪತ್ರೆ ವಾರ್ಡ್ ಬಾಯ್ ಮತ್ತು ಆತನ ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬಾಲಕಿ ತಾಯಿ ಆರೋಗ್ಯ ಸಮಸ್ಯೆ ಹಿನ್ನೆಲೆ  ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೈಕೆ ಮಾಡಲು ಬಾಲಕಿ ಕೆಲ ದಿನದಿಂದ ಆಸ್ಪತ್ರೆಯಲ್ಲಿದ್ದಳು. ತಾಯಿಯನ್ನು ವಾರ್ಡ್ ಗೆ ಕರೆದೊಯ್ಯುವುದು, ಚಿಕಿತ್ಸೆಗೆ ಕರೆದೊಯ್ಯುವಾಗ ವಾರ್ಡ್ ಬಾಯ್ ಮನೋಜ್ ಎಂಬಾತನ ಪರಿಚಯವಾಗಿದೆ. ವೀಲ್ ಚೇರ್ ತಂದು ಬಾಲಕಿಯ ತಾಯಿಯನ್ನು […]

ಸದ್ಯದಲ್ಲೇ ಸೆಟ್ ಏರಲಿರುವ ಮಾಜಿ ಭೂಗತ ದೊರೆ ಮುತ್ತಪ್ಪ ರೈ ಜೀವನ ಕಥೆಯ ಸಿನಿಮಾ

Friday, December 4th, 2020
Muttappa Rai

ಪುತ್ತೂರು : ಡೆಡ್ಲಿ ಸೋಮ ಚಿತ್ರದ ನಿರ್ದೇಶಕ ರವಿ ಶ್ರೀವತ್ಸ ಮುತ್ತಪ್ಪ ರೈ ಸಿನಿಮಾ ಆರಂಭಿಸಿದ್ದಾರೆ. ಮಾಜಿ ಭೂಗತ ದೊರೆ ಮುತ್ತಪ್ಪ ರೈ ಜೀವನದ ಕಥೆಗಳನ್ನು ಒಳಗೊಂಡ ಬಯೋ ಪಿಕ್ ‘ಎಂ ಆರ್” ಸಿನಿಮಾ ಸದ್ಯದಲ್ಲೇ ಸೆಟ್ ಏರಲಿದೆ. ಡೆಡ್ಲಿ  ಸಿನಿಮಾ ಚಿತ್ರಿಕರಣ ಆರಂಭಕ್ಕೆ ಪೂರ್ವಭಾವಿಯಾಗಿ ಸಿನಿಮಾದ ಯಶಸ್ಸಿಗಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಚಿತ್ರ ನಿರ್ಮಾಣದ ಬಳಿಕ ಶ್ರೀ ದೇವಾಲಯದಲ್ಲಿ ಮಹಾಲಿಂಗೇಶ್ವರ ದೇವರಿಗೆ ಶತರುದ್ರಾಭಿಷೇಕ ಸೇವೆ ಸಲ್ಲಿಸುವ ಸಂಕಲ್ಪವನ್ನು ಚಿತ್ರ […]