ಜೆಡಿಎಸ್ ಪ್ರಜಾ ವಿರೋಧಿ ಪ್ರಜಾಪ್ರಭುತ್ವ ಎಷ್ಟು ಸರಿ?

Monday, May 21st, 2018
kumara swamy

ಮಂಗಳೂರು : ಕೇವಲ 37 ಸೀಟುಗಳನ್ನು ಗೆದ್ದುಕೊಂಡಿರುವ ಜೆಡಿಯಸ್, ಕಾಂಗ್ರೆಸ್ಸ್ ಬೆಂಬಲಕೊಡುತ್ತೇನೆ ಎಂದ ಮಾತ್ರಕ್ಕೆ ರಾಜ್ಯಭಾರಮಾಡವುದುದು ಎಷ್ಟು ಸರಿ. ಅಷ್ಷಕ್ಕೂ ಕಾಂಗ್ರೆಸ್ಸ್‌ಗಾಗಲಿ, ಜೆಡಿಯಸ್‌ಗಾಗಲೀ ಮತದಾರರು ಸ್ಪಷ್ಟ ಬಹುಮತ ನೀಡಿಲ್ಲ. ಚುನಾವಣಾ ಪೂರ್ವ ಮೈತ್ರಿಯಂತೂ ಮಾಡಿಕೊಂಡೇ ಇರಲಿಲ್ಲಿ. ಈಗ ನಡೆಯುತ್ತಿರುವುದು ಮತದಾರರಿಗೆ ಒಪ್ಪಿಗೆ ಇಲ್ಲದೆ ಎರಡು ಪಕ್ಷಗಳು ಸೇರಿ ಅಧಿಕಾರಕ್ಕಾಗಿ ಮಾಡುತ್ತಿರುವ ಪ್ರಜಾ ವಿರೋಧಿ ಕೆಲಸ ಎಂಬುದು ಜನತೆಗೆ ಸ್ಪಷ್ಟವಾಗಿದೆ. ಸಿದ್ದರಾಮಯ್ಯ 1999 ರಲ್ಲಿ  ದೇವೆಗೌಡರ ಜ್ಯಾತ್ಯಾತೀತ ಜನತಾದಳ ಪಕ್ಷಕ್ಕೆ ಸೇರಿ ಆ  ಪಕ್ಷದ ರಾಜ್ಯಾಧ್ಯಕ್ಷರಾಗಿದ್ದರು. 2004 ರಲ್ಲಿ ಕಾಂಗ್ರೆಸ್-ಜೆಡಿಎಸ್ […]

ಕುಮಾರಸ್ವಾಮಿಗೆ ಮುಖ್ಯಮಂತ್ರಿ ಪಟ್ಟ-ಜೆಡಿಎಸ್-ಕೈ ಕಾರ್ಯಕರ್ತರಿಂದ ಮಂಗಳೂರಿನಲ್ಲಿ ಸಂಭ್ರಮಾಚರಣೆ

Saturday, May 19th, 2018
jds

ಮಂಗಳೂರು: ರಾಜ್ಯಪಾಲ ವಜುಭಾಯಿ ವಾಲ ಅವರು ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಕೂಟ ಕ್ಕೆ ಅಹ್ವಾನ ನೀಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಜೆ‌ಡಿಎಸ್ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಮಂಗಳೂರಿನ ಬೆಂದೂರ್‌‌ವೆಲ್‌‌ನಲ್ಲಿರುವ ಜೆಡಿಎಸ್ ಕಚೇರಿ ಮುಂಭಾಗದಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ, ‌ಕುಮಾರಸ್ವಾಮಿಗೆ ಜೈಕಾರ ಹಾಕುತ್ತ ಸಿಹಿ ವಿತರಿಸಿ ಸಂಭ್ರಮಿಸಿದರು. ಇನ್ನು ನಗರದ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಸಿದ್ದರಾಮಯ್ಯ, ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್‌‌ಗೆ ಜೈಕಾರ ಹಾಕುತ್ತ ಪಟಾಕಿ ಸಿಡಿಸಿ, ಸಿಹಿ […]

ರಾಜ್ಯಪಾಲರ ನಿಲುವು ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ನೇತೃತ್ವದಲ್ಲಿ ಪ್ರತಿಭಟನೆ

Friday, May 18th, 2018
congress-protest

ಮಂಗಳೂರು: ಪೂರ್ಣ ಬಹುಮತವಿಲ್ಲದ ಬಿಜೆಪಿಗೆ ಸರಕಾರ ನಡೆಸಲು ರಾಜ್ಯಪಾಲರು ಅವಕಾಶ ನೀಡಿರುವುದು ಪ್ರಜಾಪ್ರಭುತ್ವ ವಿರೋಧಿ ನಿರ್ಧಾರ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಗುರುವಾರ ಸಂಜೆ ಮಂಗಳೂರು ಪುರಭವನ ಮುಂಭಾಗದ ಮಹಾತ್ಮಾ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಯಿತು. ಮಾಜಿ ಶಾಸಕ ಜೆ.ಆರ್‌.ಲೋಬೋ ಮಾತನಾಡಿ, ದೇಶದಲ್ಲಿ ಪ್ರಜಾ ಪ್ರಭುತ್ವ ವಿರೋಧಿ ನಿಲುವು ಹಾಗೂ ನಡವಳಿಕೆಗಳು ನಡೆಯುತ್ತಲೇ ಇವೆ. ಇದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಹುಮತವಿಲ್ಲದ ಬಿಜೆಪಿ ಪಕ್ಷಕ್ಕೆ ರಾಜ್ಯಪಾಲರು ಸರಕಾರ ರಚನೆಗೆ ಅವಕಾಶ […]

‘ಮಂಗಳೂರು ದಕ್ಷಿಣ’ದಲ್ಲಿ ಬಿಜೆಪಿ ಜಯಭೇರಿಗೆ ಹಾಗೂ ಕಾಂಗ್ರೆಸ್ ಸೋಲಿಗೆ ಕಾರಣ ಏನು ?

Thursday, May 17th, 2018
Vedavyas

ಮಂಗಳೂರು:  ಮಂಗಳೂರು ದಕ್ಷಿಣ ಕ್ಷೇತ್ರವನ್ನು ಮತ್ತೆ ಬಿಜೆಪಿ ವಶಪಡಿಸಿಕೊಂಡಿದೆ. ಈ ಹಿಂದೆ 2013ರ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ದ ತನ್ನ ಅಸಮಾಧಾನ ಹೊರಹಾಕಿ ಕಾಂಗ್ರೆಸ್ ಅಭ್ಯರ್ಥಿಯನ್ನುಗೆಲ್ಲಿಸಿದ್ದ ಮತದಾರ ಪ್ರಭು ಈ ಬಾರಿ ಮತ್ತೆ ಬಿಜೆಪಿಗೆ ಜೈ ಎಂದಿದ್ದಾನೆ. ಅಭಿವೃದ್ಧಿಯ ಜಪದೊಂದಿಗೆ ಮತ್ತೆ ಜನರ ಮುಂದೆ ಹೋಗಿದ್ದ ಕಾಂಗ್ರೆಸ್ ನ ಕೈ ಹಿಡಿಯಲು ಮತದಾರ ನಿರಾಕರಿಸಿದ್ದಾನೆ. ಇಲ್ಲಿ ಅತಿಯಾದ ಆತ್ಮ ವಿಶ್ವಾಸವೇ ಕಾಂಗ್ರೆಸಿಗೆ ಮುಳುವಾಯಿತೇ ಎಂದು ವಿಶ್ಲೇಷಿಸಲಾಗುತ್ತಿದೆ. ಅದಲ್ಲದೇ ನಮ್ಮ ಕಾರ್ಪೊರೇಟರ್ ಗಳೇ ಸೋಲಿಗೆ ಕಾರಣರಾದರು ಎನ್ನುವ ಅನುಮಾನಗಳು […]

ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲರು ಅವಕಾಶ ಕೊಡುವುದು ಬಹುತೇಕ ಖಚಿತ..!

Wednesday, May 16th, 2018
governor

ಬೆಂಗಳೂರು: ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನಕ್ಕೆ ಇಂದು ರಾಜ್ಯಪಾಲರು ಒಪ್ಪಿಗೆ ಸೂಚಿಸಿದರೆ ನಾಳೆ ರಾಜಭವನದಲ್ಲಿ ಯಡಿಯೂರಪ್ಪ ಒಬ್ಬರೇ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಬಹುಮತ ಸಾಬೀತಿನ ನಂತರ ಸಂಪುಟ ರಚನೆ ಮಾಡಲಿದ್ದಾರೆ ಎನ್ನಲಾಗಿದೆ. ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲರು ಅವಕಾಶ ಕೊಡುವುದು ಬಹುತೇಕ ಖಚಿತವಾಗಿದ್ದು, ಇಂದು ಸಂಜೆ 6 ಗಂಟೆ ಬಳಿಕ ರಾಜ್ಯಪಾಲ ವಜುಭಾಯ್ ವಾಲಾ ತಮ್ಮ ನಿರ್ಧಾರ ಪ್ರಕಟ ಮಾಡಲಿದ್ದಾರೆ. ರಾಜ್ಯಪಾಲರು ಅನುಮತಿ ಕೊಟ್ಟರೆ ಮಾತ್ರ ನಾಳೆ ಯಡಿಯೂರಪ್ಪ ಒಬ್ಬರಿಂದ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ. ರಾಜಭವನದಲ್ಲಿ ನಾಳೆ ಮಧ್ಯಾಹ್ನ […]

ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಆಭ್ಯರ್ಥಿಗಳ ಮತಗಳಿಕೆ ವಿವಿರ

Wednesday, May 16th, 2018
election

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಆಭ್ಯರ್ಥಿಗಳ ಕ್ಷೇತ್ರವಾರು ವಿವರ ಹಾಗೂ, ಯಾರು ಎಲ್ಲಿ ಎಷ್ಟು ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ, ಸೋತಿದ್ದಾರೆ ಎನ್ನುವ ಲೆಕ್ಕಾಚಾರದ ಪಟ್ಟಿ 200 ಬೆಳ್ತಂಗಡಿ ಕ್ಷೇತ್ರ 1) ಕೆ. ವಸಂತ ಬಂಗೇರ(ಕಾಂಗ್ರೆಸ್) -75443 2) ಸುಮತಿ ಎಸ್. ಹೆಗ್ಡೆ(ಜೆ.ಡಿ.ಎಸ್)-1612 3) ಹರೀಶ್ ಪೂಂಜಾ (ಬಿ.ಜೆ.ಪಿ) -98417 4) ವೆಂಕಟೇಶ್ ಬೆಂಡೆ (ಪಕ್ಷೇತರ)-654 5) ಜಗನ್ನಾಥ(ಎಂಇಪಿ) -1806 6) ಸೈಯದ್ ಹಸನ್(ಪಕ್ಷೇತರ) -373 7) ನೋಟಾ – 1245 201 […]

ಕಾಪು ವಿನ ಅಭಿವೃದ್ಧಿಯ ಹರಿಕಾರ ವಿನಯ್ ಕುಮಾರ್ ಸೊರಕೆ

Friday, May 11th, 2018
Vinayakumar Sorake

ಕಾಪು : ನೈಜ ಸಮಾಜ ಸೇವಕ ಎಂದೂ ಅಧಿಕಾರಕ್ಕಾಗಿ ಹಂಬಲಿಸುವುದಿಲ್ಲ. ಅಧಿಕಾರ ಬಂದಾಗ ಸಮರ್ಥವಾಗಿ ನಿರ್ವಹಿಸಬಲ್ಲ, ಜನಪರವಾಗಿ ಕೆಲಸ ಮಾಡಬಲ್ಲವೇ ನೀಜವಾದ ನಾಯಕ. ನಾವೀಗ ಮಾತನಾಡುತ್ತಿರುವ ವ್ಯಕ್ತಿ ನಿಮ್ಮೆಲ್ಲರ ಮೆಚ್ಚಿನ ವಿನಯ ಕುಮಾರ್ ಸೊರಕೆ. ಸೊರಕೆ ಬಗ್ಗೆ ನಿಮಗೆಲ್ಲರಿಗೂ ಗೊತ್ತೆ ಇದೆ. ಶಾಸಕನಾಗ ಬೇಕು, ಸಂಸದನಾಗ ಬೇಕು, ಸಚಿವನಾಗ ಬೇಕು ಎಂದು ಬಯಸಿದವರವಲ್ಲ ಸೊರಕೆ. ಚುನಾವಣೆ ಅವರನ್ನು ಹುಡುಕಿ ಕೊಂಡು ಬಂದಿತ್ತು. ಕಾಂಗ್ರೆಸ್ ಪಕ್ಷ ಅವರಿಗೆ ಮಹತ್ವದ ಹುದ್ದೆಯನ್ನು ನೀಡಿತ್ತು. ಕಾಪು ಕ್ಷೇತ್ರದ ಅಭಿವೃದ್ಧಿಯ ನೇತಾರ ವಿನಯ […]

ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಇಳಿದ ನಟ ದರ್ಶನ್..!

Saturday, May 5th, 2018
Darshan

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುತ್ತಿರುವ ಚಾಮುಂಡೇಶ್ವರಿ ಕ್ಷೇತ್ರದ ಪ್ರಚಾರಕ್ಕೆ ಒಬ್ಬರಾದಂತೆ ಒಬ್ಬರು ಬಂದು ಸಿಎಂ ಪರ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಪ್ರಚಾರದ ಬಿಸಿ ದಿನದಿಂದ ದಿನಕ್ಕೆ ಏರತೊಡಗಿದ್ದು , ಸಿನೆಮಾ ಲೋಕದ ಕೆಲವರು ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಇಳಿದಿದ್ದಾರೆ. ಶನಿವಾರ ನಟ ದರ್ಶನ್ ‌ ಸಿಎಂ ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಆಗಮಿಸಿದ್ದರು. ಆದರೆ ನಾಗನಹಳ್ಳಿಯಲ್ಲಿ ಜೆಡಿಎಸ್ ‌ ಕಾಯಕರ್ತರು ದರ್ಶನ್ ವಿರುದ್ಧ ಪ್ರತಿಭಟನೆ ನಡೆಸಿದರು. ದರ್ಶನ್ ಹಿರಿಯ ರಾಜಕಾರಣಿ ಅಂಬರೀಷ್ ‌ಅವರ ಸಚಿವ ಸ್ಥಾನ ಕಸಿದುಕೊಂಡಾಗ ಮಾತನಾಡಿರಲಿಲ್ಲ. ಕಾವೇರಿ […]

ಪುತ್ತೂರು ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ, ಕಾಂಗ್ರೆಸ್ಸ್ ಕಾರ್ಯಕರ್ತರು ತಟಸ್ಥ

Friday, May 4th, 2018
hemanath shetty

ಪುತ್ತೂರು : ಈ ಬಾರಿ ಪುತ್ತೂರು ಕಾಂಗ್ರೆಸ್ಸ್ ನಲ್ಲಿ ಎರಡು ಬಣಗಳಾಗಿದ್ದು, ಪಕ್ಷದೊಳಗೆ ಶಕುಂತಳಾ ಶೆಟ್ಟಿಯವರನ್ನು ಸೋಲಿಸಲು ರಣತಂತ್ರ ನಡೆಯುತ್ತಿದೆ. ಅದನ್ನು ಸರಿಪಡಿಸಲು ಪುತ್ತೂರು ಚುನಾವಣಾ ಕಚೇರಿಯಲ್ಲಿ ಗುರುವಾರ ನಡೆದ ಸಭೆಗೆ ದ.ಕ ಜಿಲ್ಲಾ ಕಾಂಗ್ರೆಸ್ಸ್ ಅಧ್ಯಕ್ಷ ಹರೀಶ್ ಕುಮಾರ್ ಹಾಗೂ ಎಐಸಿಸಿ ರಾಷ್ಟ್ರೀಯ ಕಾರ್ಯದರ್ಶಿ, ಮೈಸೂರು ವಿಭಾಗದ ಉಸ್ತುವಾರಿ ವಿಷ್ಣುನಾಥನ್ ಆಗಮಿಸಿದ್ದರು. ಅದರೂ ಭಿನ್ನಮತೀಯರು ಬಾರದೆ ಸಂಧಾನ ವಿಫಲಗೊಂಡಿದೆ. ಕಾವು ಹೇಮನಾಥ ಶೆಟ್ಟಿಯವರು ಹಾಗೂ ಪುತ್ತೂರು ನಗರಸಭೆಯ ಸದಸ್ಯರು ಶಕುಂತಳಾ ಶೆಟ್ಟಿಯವರನ್ನು ಬೆಂಬಲಿಸದೆ, ಪಚಾರಕ್ಕೂ ಹೋಗದೆ […]

ಬೆಳ್ತಂಗಡಿಯಲ್ಲಿ ಕಾಂಗ್ರೆಸ್ಸ್ ಕಾರ್ಯಕರ್ತರ ಮೇಲೆ ವಾಮಾಚಾರ, ವೋಟಿಗಾಗಿ ದುಡ್ಡಿನ ಕಂತೆ ಎಸೆಯುತ್ತಾರೆ

Tuesday, May 1st, 2018
Vasanth Bangera

ಬೆಳ್ತಂಗಡಿ : ಈ ಬಾರಿ ಕಾಂಗ್ರೆಸ್ಸ್‌ನ್ನು ಹೇಗಾದರು ಮಾಡಿ ಸೋಲಿಸ ಬೇಕು, ಅದಕ್ಕಾಗಿ ನಮ್ಮ ಕಾರ್ಯಕರ್ತರ ಮೇಲೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಗೆಳೆಯರು ವಾಮಾಚಾರ ಮಾಡುತ್ತಾರೆ ಎಂದು ವಸಂತ ಬಂಗೇರ ಆರೋಪಿಸಿದ್ದಾರೆ. ಹರೀಶ್ ಪೂಂಜಾ ಗೆಳೆಯ ಪಿಡಬ್ಲೂಡಿ ಕಾಂಟ್ಟ್ರಾಕ್ಟರ್ ರಾಜೇಶ್ ಶೆಟ್ಟಿ ಮದ್ದಡ್ಕ ಎಂಬವರು ಕಾಂಗ್ರೆಸ್ಸ್ ಕಾರ್ಯಕರ್ತರಾದ ನಗರ ಪಂಚಾಯತ್ ಅಧ್ಯಕ್ಷ ನಾರಾಯಣ ರಾವ್ ಮತ್ತು ಗೇರು ಕಟ್ಟೆ ಕರೀಂ ಅವರ ಮನೆಯ ಮುಂದೆ ವಾಮಾಚಾರ ಮಾಡಿದ್ದಾರೆ. ಗೇರು ಕಟ್ಟೆ ಕರೀಂ ಅವರ ಮನೆಯ ಮುಂದೆ […]