ಶಿಕ್ಷಣದಲ್ಲಿ ನೈತಿಕ ಮೌಲ್ಯಗಳ ಬೋಧನೆಯ ಮೂಲಕ ಯುವಜನರನ್ನು ಸಜ್ಜನರನ್ನಾಗಿ ಪರಿವರ್ತಿಸಲು ಸಾಧ್ಯ :ಎ.ಎಂ.ಪ್ರಸಾದ್

Friday, March 15th, 2013
National level con St Agnes

ಮಂಗಳೂರು : ನಗರದ ಸಂತ ಆಗ್ನೆಸ್ ಕಾಲೇಜಿನ ಮನಃಶಾಸ್ತ್ರ ವಿಭಾಗ ಹಾಗೂ ಮಂಗಳೂರಿನ ಸಮಗ್ರ ಯೋಗ ಸತ್ಸಂಗದ ಜಂಟಿ ಆಯೋಜಕತ್ವದಲ್ಲಿ ಗುರುವಾರ ಆಗ್ನೆಸ್ ಕಾಲೇಜಿನಲ್ಲಿ ಎರಡು ದಿನಗಳ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದ್ದು ಇದರ ಉದ್ಘಾಟನೆಯನ್ನು ಕ್ರೈಮ್ ಮತ್ತು ಟೆಕ್ನಿಕಲ್ ಸರ್ವಿಸ್‌ನ ಅಡಿಷನಲ್ ಡಿಜಿಪಿ ಅಶಿತ್ ಮೋಹನ್ ಪ್ರಸಾದ್ ನೆರವೇರಿಸಿದರು. ನಂತರ ಮಾತನಾಡಿದ ಅವರು ಇಂದಿನ ದಿನಗಳಲ್ಲಿ ಅಪರಾಧ ಚಟುವಟಿಕೆಗಳು ಸಮಾಜದಲ್ಲಿ ದಿನೇ ದಿನೇ ಹೆಚ್ಚುತ್ತಿದ್ದು ಇದರಲ್ಲಿ ಹೆಚ್ಚಾಗಿ ೧೮ ವರ್ಷ ಒಳಗಿನ ಯುವಕರು ಇದ್ದಾರೆ. ಇದಕ್ಕೆ ಪ್ರಮುಖವಾಗಿ […]

ಇಟಲಿ ರಾಯಭಾರಿಗೆ ಸುಪ್ರೀಮ್ ಕೋರ್ಟ್ ನಿಂದ ತಡೆ

Thursday, March 14th, 2013
ಇಟಲಿ ರಾಯಭಾರಿಗೆ ಸುಪ್ರೀಮ್ ಕೋರ್ಟ್ ನಿಂದ ತಡೆ

ನವದೆಹಲಿ : ಭಾರತೀಯ ಮೀನುಗಾರರಿಬ್ಬರನ್ನು ಗುಂಡಿಕ್ಕಿ ಕೊಂದ ಆರೋಪ ಎದುರಿಸುತ್ತಿರುವ ಇಟಲಿ ನೌಕಾಪಡೆಯ ಸಿಬ್ಬಂದಿಯಿ ಬ್ಬರನ್ನು ಮರಳಿ ಒಪ್ಪಿಸುವಂತೆ ಸುಪ್ರೀಮ್ ಕೋರ್ಟ್ ಆದೇಶಿಸಿದೆ. ತಮ್ಮ ದೇಶದಲ್ಲಿನ ಮತದಾನದಲ್ಲಿ ಪಾಲ್ಗೊಳ್ಳಲು ಅನುಮತಿ ಕೋರಿ ಇಟಲಿಗೆ ತೆರಳಿದ ಇಬ್ಬರು ನೌಕಾ ಸಿಬ್ಬಂದಿಯನ್ನು ವಾಪಾಸು ಕಳುಹಿಸುವ ವಿಷಯಕ್ಕೆ ಸಂಬಂಧಪಟ್ಟಂತೆ ಮಾತು ತಪ್ಪಿರುವ ಇಟಲಿಯ ಧೋರಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಮ್ ಕೋರ್ಟ್ ದೆಹಲಿಯಲ್ಲಿರುವ ಇಟಲಿ ರಾಯಭಾರಿ ಭಾರತ ಬಿಟ್ಟು ತೆರಳುವುದಕ್ಕೆ ಗುರುವಾರ ತಡೆಯಾಜ್ಞೆ ನೀಡಿದೆಯಲ್ಲದೆ, ಈ ಕುರಿತು ಮಾರ್ಚ್ 18  ರೊಳಗೆ ಉತ್ತರಿಸುವಂತೆ […]

ಪೆಟ್ರೋಲ್ ಬೆಲೆ ೧ ರೂ. ಅಗ್ಗ, ಡೀಸೆಲ್ ೫೦ ಪೈಸೆ ಹೆಚ್ಚಳ

Thursday, March 14th, 2013
Petrol and deasel price

ನವ ದೆಹಲಿ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಬೆಲೆಗಳು ಇಳಿಯುತ್ತಿರುವ ಪರಿಣಾಮ ಪೆಟ್ರೋಲ್ ಬೆಲೆಯೂ ಒಂದು ರೂಪಾಯಿಯಷ್ಟು ಇಳಿಯಲಿದೆ. ಪೆಟ್ರೋಲ್ ಬೆಲೆ ಒಂದು ರೂಪಾಯಿಯಷ್ಟು  ಇಳಿಕೆಯಾಗಲಿದ್ದರೆ, ಜನವರಿಯಲ್ಲಿ ಪ್ರತಿ ತಿಂಗಳು ಡೀಸೆಲ್ ಬೆಲೆಯನ್ನು ಹೆಚ್ಚಿಸುವ ನಿರ್ಧಾರ ಕೈಗೊಂಡಿರುವುದರಿಂದ, ಡೀಸೆಲ್ ಬೆಲೆ ೪೦ ರಿಂದ ೫೦ ಪೈಸೆ ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಬೆಲೆಯು  ಮಾರ್ಚ್ ೧೫ ಶುಕ್ರವಾರ ಅಥವಾ ಮಾರ್ಚ್ ೧೬ ಶನಿವಾರದಿಂದು ಪ್ರಕಟಗೊಳ್ಳುವ  ಸಾಧ್ಯತೆಯಿದೆ.

ಮಾರ್ಚ್ 18 ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ವೈಮಾನಿಕ ಸರಕು ನಿರ್ವಹಣಾ ಸಂಕೀರ್ಣ ದ ಉದ್ಘಾಟನೆ

Thursday, March 14th, 2013
Mangalore International Airport

ಮಂಗಳೂರು : ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು  ವೈಮಾನಿಕ ಸರಕು ನಿರ್ವಹಣಾ ಸಂಕೀರ್ಣ ದ ಉದ್ಘಾಟನಾ ಸಮಾರಂಭವು ಮಾರ್ಚ್ 18 ರಂದು ನಡೆಯಲಿರಿರುವುದಾಗಿ ಅಧಿಕೃತ ಮೂಲಗಳಿಂದ ತಿಳಿದುಬಂದಿದೆ. ಉದ್ಘಾಟನೆಯನ್ನು ಕೇಂದ್ರ ವಿಮಾನ ಯಾನ ಸಚಿವ ಅಜಿತ್‌ ಸಿಂಗ್‌ ನೆರವೇರಿಸಲಿರುವರು. ಮುಖ್ಯಮಂತ್ರಿ ಜಗದೀಶ ಶೆಟ್ಟರ್‌, ಕೇಂದ್ರ ಸಚಿವರಾದ ಎಂ. ವೀರಪ್ಪ ಮೊಲಿ ಮೊದಲಾದವರು ಆಗಮಿಸಲಿದ್ದಾರೆ.

ನಿರಂತರ ಕಲಿಕೆಯಿಂದ ಜೀವನದಲ್ಲಿ ಉನ್ನತವಾದುದನ್ನು ಸಾಧಿಸಲು ಸಾಧ್ಯ : ಡಾ| ಎಚ್‌.ಎಸ್‌. ಬಲ್ಲಾಳ್‌

Thursday, March 14th, 2013
ನಿರಂತರ ಕಲಿಕೆಯಿಂದ ಜೀವನದಲ್ಲಿ ಉನ್ನತವಾದುದನ್ನು ಸಾಧಿಸಲು ಸಾಧ್ಯ : ಡಾ| ಎಚ್‌.ಎಸ್‌. ಬಲ್ಲಾಳ್‌

ಮಂಗಳೂರು : ಭಾರತದಲ್ಲಿ ಶೇಕಡಾ 70 ಜನರು ಹಳ್ಳಿ ಪ್ರದೇಶದಲ್ಲಿ ವಾಸವಿದ್ದು, ಅವರಲ್ಲಿ ಶೇಕಡಾ 20 ಮಂದಿಗೆ ಮಾತ್ರ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯ ದೊರಕುತ್ತಿದೆ,  ಜಗತ್ತಿನ ಇತರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಉನ್ನತ ಶಿಕ್ಷಣಕ್ಕೆ ಸೇರುವವರ ಪ್ರಮಾಣ ಬಹಳಳಷ್ಟು ಕಡಿಮೆ ಇದ್ದು, ಪ್ರಸ್ತುತ ಕೇವಲ ಶೇಕಡಾ 14 ಮಂದಿ ಮಾತ್ರ ಉನ್ನತ ಶಿಕ್ಷಣ ಪಡೆಯುತ್ತಿದ್ದು, ಈ ಪ್ರಮಾಣ 2030ರಲ್ಲಿ ಶೇಕಡಾ 30 ಕ್ಕೇರಬೇಕು ಈ ಪ್ರಮಾಣವನ್ನು ಹೆಚ್ಚಿಸುವ ಗುರುಯನ್ನು ಸರ್ಕಾರ ಹಾಕಿಕೊಂಡಿದ್ದು ಇದಕ್ಕೆ ಖಾಸಗಿಯವರ ಸಹಕಾರವು […]

ಕಾಪು : ಹಿಂದೂ ಯುವಕರ ಮೇಲೆ ಹಲ್ಲೆ , ಆರೋಪಿಗಳ ಬಂಧನಕ್ಕೆ ಹಿಂದೂ ಸಂಘಟನೆ ಆಗ್ರಹ

Thursday, March 14th, 2013
Kaup

ಉಡುಪಿ : ಮಣಿಪಾಲದಿಂದ ಎಕ್ಷ್ ಪ್ರೆಸ್ ಬಸ್ ವೊಂದರಲ್ಲಿ  ಮಂಗಳೂರಿಗೆ ವಾಪಾಸಾಗುತ್ತಿದ್ದ  ಮಂಗಳೂರು – ಕಾಟಿಪಳ್ಳದ ಯುವಕರ ಮೇಲೆ ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ಬುಧವಾರ ಸಂಜೆ ಕಾಪುವಿನಲ್ಲಿ ನಡೆದಿದೆ. ಮಣಿಪಾಲದಿಂದ ಮಂಗಳೂರಿಗೆ ತೆರಳುತ್ತಿದ್ದ ಮಂಗಳೂರು – ಕಾಟಿಪಳ್ಳದ ಯುವಕರಾದ ಶ್ರೀನಾಥ್‌ (23), ರಾಜೇಶ್‌ (24) ಹಲ್ಲೆಗೊಳಗಾದವರಾಗಿದ್ದಾರೆ. ಯುವಕರು ಅನ್ಯಕೋಮಿನ ವಿದ್ಯಾರ್ಥಿನಿಯರೊಂದಿಗೆ ಮಾತನಾಡುತ್ತಿರುವುದನ್ನು ಗಮನಿಸಿ ಬಸ್‌ ನಲ್ಲಿದ್ದ  ಅನ್ಯ ಮತೀಯ ಯುವಕನೋರ್ವ ಸ್ಥಳೀಯ ಮುಸ್ಲಿಂ ಸಂಘಟನೆಯ ಕಾರ್ಯಕರ್ತರಿಗೆ ತಿಳಿಸಿದ್ದು, ಈ ಮಾಹಿತಿಯಾನ್ನಾಧರಿಸಿ ಅನ್ಯ ಮತೀಯ ಸಂಘಟನೆಗೆ […]

ಕಾಸೀಮ್ ಉಳ್ಳಾಲ್ ರವರ ‘ಬೆಸುಗೆ’ ಕನ್ನಡ ಕಾದಂಬರಿ ಬಿಡುಗಡೆ

Thursday, March 14th, 2013
Kaseem ullal's Besuge Novel released

ಮಂಗಳೂರು : ಪ್ರತಿಭಾ ಪ್ರಿಂಟರ್ಸ್ ಬೆಂಗಳೂರು ಇವರ ಮುದ್ರಣದಲ್ಲಿ ಸಾಹಿತಿ ಯು.ಎ ಕಾಸೀಮ್  ಉಳ್ಳಾಲ್ ರಚಿಸಿರುವ ಕನ್ನಡ ಕಾದಂಬರಿ ‘ಬೆಸುಗೆ’ ಬಿಡುಗಡೆ ಸಮಾರಂಭ ಇಂದು ಸಂಜೆ ನಗರದ ವುಡ್ ಲ್ಯಾಂಡ್ ಹೋಟೆಲ್ ನಲ್ಲಿ ನಡೆಯಿತು. ಕಾದಂಬರಿ ಬಿಡುಗಡೆಯನ್ನು ಕನ್ನಡ ಬ್ಯಾರಿ ಸಾಹಿತ್ಯ ಅಕಾಡಮಿಯ ನಿಕಟಪೂರ್ವ ಅಧ್ಯಕ್ಷ ಹಾಗೂ ಹಿರಿಯ ಸಾಹಿತಿ ಎಂ.ಬಿ.ಅಬ್ದುಲ್ ರಹಿಮಾನ್ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಸಾಹಿತ್ಯ ಎನ್ನುವುದು ಸಾಮಾಜಿಕ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ. ಉತ್ತಮ ಸಾಹಿತ್ಯ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ […]

ನಗರದ ನೆಹರೂ ಮೈದಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ

Wednesday, March 13th, 2013
congress convention

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಮಾರ್ಚ್ 18 ರಂದು ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು ಕೇಂದ್ರ ಸರ್ಕಾರದ ಪೆಟ್ರೋಲಿಯಂ ಖಾತೆ ಸಚಿವ ವೀರಪ್ಪ ಮೊಯಿಲಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫೆರ್ನಾಂಡಿಸ್, ಮಾಜಿ ಸಂಸದ ವಿನಯ್ ಕುಮಾರ್ ಸೊರಕೆ ಹಾಗೂ ಇತರ ರಾಜ್ಯ ಮತ್ತು ಜಿಲ್ಲಾ ನಾಯಕರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬುದಾಗಿ ಕಾಂಗ್ರೆಸ್ ಮುಖಂಡ ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ ಪೂಜಾರಿ  ತಿಳಿಸಿದರು. ಅವರು […]

ಭಟ್ಕಳ ಸಮೀಪದ ಮುಗ್ಳಿಹೊಂಡದಲ್ಲಿ ಭೀಕರ ಅಪಘಾತ ಬೈಕ್ ಸವಾರರಿಬ್ಬರ ಸಾವು

Wednesday, March 13th, 2013
Bhatkal bike accsident

ಕುಂದಾಪುರ : ಭಟ್ಕಳದ ಹೊಟೇಲ್ ವೊಂದರಲ್ಲಿ ಪಾರ್ಟಿ ಮುಗಿಸಿ ಶಿರೂರಿನ ತಮ್ಮ ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದ ಬೈಕ್ ಸವಾರರಿಬ್ಬರು ಭಟ್ಕಳ ಸಮೀಪದ ಮುಗ್ಳಿಹೊಂಡ ಎಂಬಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ಬೈಂದೂರು ಸಮೀಪದ ಶಿರೂರಿನ ಮಾರ್ಕೆಟ್ ರಸ್ತೆ ನಿವಾಸಿಗಳಾದ ಹುರೈಸ್(೧೮) ಹಾಗೂ ತನೀರ್ ಅಧಮ್(೧೮) ಮೃತ ಬೈಕ್ ಸವಾರರಾಗಿದ್ದಾರೆ. ಹುರೈಸ್ ಹಾಗೂ ತನೀರ್ ಅಧಮ್ ಭಟ್ಕಳದ ಹೊಟೇಲ್ ವೊಂದರಲ್ಲಿ ಪಾರ್ಟಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಮುಗ್ಳಿಹೊಂಡ ಎಂಬಲ್ಲಿ ಎದುರಿನಿಂದ […]

ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ, ಮಾರ್ಚ್ 28ರವರೆಗೆ ಪರೀಕ್ಷಾ ಕೇಂದ್ರಗಳ ಸುತ್ತ 144 ಸೆಕ್ಷನ್ ಜಾರಿ

Wednesday, March 13th, 2013
Second PU examination at DK

ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯು ಇಂದಿನಿಂದ 28ರ ವರೆಗೆ ನಡೆಯಲಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ  ವರ್ಷ 49 ಪರೀಕ್ಷಾ ಕೇಂದ್ರಗಳಲ್ಲಿ  170 ಕಾಲೇಜುಗಳ 32,267 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ದ್ವಿತೀಯ ಪಿಯು ಪರೀಕ್ಷೆಯು ಸುಸೂತ್ರವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯುವ ಹಿನ್ನಲೆಯಲ್ಲಿ  ಜಿಲ್ಲೆಯಲ್ಲಿ  ಮಾರ್ಚ್ 28ರವರೆಗೆ ಪರೀಕ್ಷಾ ಕೇಂದ್ರಗಳ ಸುತ್ತ 144 ಸೆಕ್ಷನ್ ಪ್ರಕಾರ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ವಿವಿಧ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷಾ ಕೇಂದ್ರದ ಸುತ್ತಲಿನ 200 […]