ಪ್ಲಾಸ್ಟಿಕ್ ನಿಷೇಧದ ಬಗ್ಗೆ ಜಾಗೃತಿ ಮೂಡಿಸುವ ವಾಹನ ಜಾಥಕ್ಕೆ ಚಾಲನೆ
Saturday, October 27th, 2012ಮಂಗಳೂರು: ಮಂಗಳೂರು ತಾಲೂಕಿನಾದ್ಯಂತ ಪ್ಲಾಸ್ಟಿಕ್ ನಿಂದ ತಯಾರಿಸಲ್ಪಟ್ಟ ವಸ್ತುಗಳನ್ನು ನವೆಂಬರ್ 1ರಿಂದ ನಿಷೇಧಿಸಲು ಹಂತಹಂತವಾಗಿ ಕ್ರಮ ಕೈಗೊಳ್ಳಲಾಗುತ್ತಿದ್ದು, ಈ ಬಗ್ಗೆ ಸಾಕಷ್ಟು ಎಚ್ಚರಿಕೆ ನೀಡಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಗುಲ್ಜಾರ್ ಬಾನುರವರು ಶುಕ್ರವಾರ ಜಿಲ್ಲಾಧಿಕಾರಿ ಬಳಿಯಲ್ಲಿ ಪ್ಲಾಸ್ಟಿಕ್ ಬಗ್ಗೆ ನಾಗರೀಕರಲ್ಲಿ ಜಾಗೃತಿ ಮೂಡಿಸುವ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಪ್ಲಾಸ್ಟಿಕ್ ನಿಂದಾಗುವ ತೊಂದರೆಯ ಬಗ್ಗೆ ಜನರಲ್ಲಿ ಈ ವಾಹನವು ಜಾಗೃತಿ ಮೂಡಿಸಲಿದ್ದು ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು ಎಂದರು. […]