ಸಾಮಾನ್ಯ ಕಾರ್ಯಕರ್ತರ ಸಂಘಟನೆಯಿಂದ ಮತ್ತೆ ಬಿಜೆಪಿ ಅಧಿಕಾರಕ್ಕೆ :ಎನ್. ಯೋಗೀಶ್ ಭಟ್

Saturday, November 3rd, 2012
BJP

ಮಂಗಳೂರು: ಇಂದು ನಗರದ ಸಂಘನಿಕೆತನದಲ್ಲಿ ನಡೆದ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಾಮಾನ್ಯ ಸಭೆಯನ್ನುದ್ದೇಶಿಸಿ ರಾಜ್ಯ ವಿದಾನ ಸಭೆಯ ಉಪ ಸಭಾಪತಿ ಎನ್. ಯೋಗೀಶ್ ಭಟ್ ರವರು ಮಾತನಾಡಿದರು. ಬಿ.ಜೆ.ಪಿ ತನ್ನ ಸಾಮಾನ್ಯ ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಮತ್ತೆ ಅಧಿಕಾರಕ್ಕೆ ಬರುವುದು ಎಂದರು. ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರವು ವಿವಿದ ಹಗರಣಗಳಲ್ಲಿ ಮುಳುಗಿದ್ದು ನಮ್ಮ ದೇಶವನ್ನು ಜಗತ್ತಿನ ಮುಂದೆ ತಲೆ ತಗ್ಗಿಸುವಂತೆ ಮಾಡಿದೆ ಆದ್ದರಿಂದ ಮುಂದಿನ ಚುನಾವಣೆಯಲ್ಲಿ ಜನರು ಖಂಡಿತ ಕಾಂಗ್ರೆಸ್ಸನ್ನು ತಿರಸ್ಕರಿಸುತ್ತಾರೆ, ರಾಜ್ಯ ಸರಕಾರವು ಕಳೆದ 50 […]

ಪುತ್ತೂರು :ಕೃಷಿ ಯಂತ್ರಮೇಳ 2012 ರ ಉದ್ಘಾಟನಾ ಸಮಾರಂಭ

Saturday, November 3rd, 2012
Krushi Yantra Mela

ಪುತ್ತೂರು: ಪ್ರತಿಷ್ಠಿತ ಸಹಕಾರ ಸಂಸ್ಥೆ ಕ್ಯಾಂಪ್ಕೋ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ ಮತ್ತು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ಶುಕ್ರವಾರದಿಂದ ರವಿವಾರ ತನಕ ವಿವೇಕಾನಂದ ತಾಂತ್ರಿಕ ಮಹಾ ವಿದ್ಯಾಲಯದ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಕೃಷಿ ಯಂತ್ರಮೇಳ -2012 ಇದರ ಉದ್ಘಾಟನೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಮಾಹಿತಿ ತಂತ್ರಜ್ಞಾನ ಕ್ಷೇತ್ರವು ಸಾರ್ವಜನಿಕ ರಂಗದಲ್ಲಿ ವಿಶೇಷವಾದ ಸಾಧನೆ ಮಾಡಿದ ಕ್ಷೇತ್ರವಾಗಿದ್ದು ಕೃಷಿ ರಂಗಕ್ಕೆ ಅಗತ್ಯವಾದ ಆಧುನಿಕತೆಯನ್ನು ಪರಿಚಯಿಸುವಲ್ಲಿ ಐಟಿ ಕ್ಷೇತ್ರದ […]

ಮಂಗಳೂರಿನ ನೆಹರೂ ಮೈದಾನದಲ್ಲಿ ಯಾಕಾಗಿ ಪಾಪ್ಯುಲರ್ ಫ್ರಂಟ್’ ರಾಷ್ಟ್ರೀಯ ಅಭಿಯಾನದ ಬೃಹತ್ ಸಾರ್ವಜನಿಕ ಸಮಾವೇಶ

Saturday, November 3rd, 2012
Why Popular Front

ಮಂಗಳೂರು : ನಗರದ ನೆಹರೂ ಮೈದಾನದಲ್ಲಿ ಶುಕ್ರವಾರ ‘ಯಾಕಾಗಿ ಪಾಪ್ಯುಲರ್ ಫ್ರಂಟ್’ ರಾಷ್ಟ್ರೀಯ ಅಭಿಯಾನದ ಬೃಹತ್ ಸಾರ್ವಜನಿಕ ಸಮಾವೇಶ ನಡೆಯಿತು. ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಶರೀಫ್ ರವರು ಜಗತ್ತಿನಲ್ಲೆ ಹೆಮ್ಮೆ ಪಡುವಂತಹ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮಲ್ಲಿದೆ. ಎಲ್ಲ ವರ್ಗದ ನಾಗರಿಕರಿಗೆ ಸಮಾನ ನ್ಯಾಯ ಖಾತರಿಪಡಿಸುವ ಸಂವಿಧಾನ ನಮ್ಮಲ್ಲಿದೆ. ಇದರಂತೆ ಕಾರ್ಯನಿರ್ವಹಿಸುತ್ತಾರೆ ಎಂಬ ಆಶಯದಲ್ಲಿ ಜನಪ್ರತಿನಿಧಿಗಳನ್ನು ಆರಿಸಿ ಕಳುಹಿಸುತ್ತೇವೆ. ಆದರೆ 65 ವರ್ಷಗಳಿಂದ ಶೇ.90ರಷ್ಟು ನಾಗರಿಕರು ಸಾಮಾಜಿಕ ನ್ಯಾಯದಿಂದ ವಂಚಿತರಾಗಿದ್ದಾರೆ […]

ಕರಾವಳಿ ಕರ್ನಾಟಕ ಜನಾಭಿವೃದ್ದಿ ವೇದಿಕೆಯ ನೇತೃತ್ವದಲ್ಲಿ ನಗರದಲ್ಲಿ ನೀರಿನ ಸಂರಕ್ಷಣೆಯ ಕುರಿತು ಬೀದಿ ನಾಟಕ

Friday, November 2nd, 2012
ಕರಾವಳಿ ಕರ್ನಾಟಕ ಜನಾಭಿವೃದ್ದಿ ವೇದಿಕೆಯ ನೇತೃತ್ವದಲ್ಲಿ ನಗರದಲ್ಲಿ ನೀರಿನ ಸಂರಕ್ಷಣೆಯ ಕುರಿತು ಬೀದಿ ನಾಟಕ

ಮಂಗಳೂರು: ಕರಾವಳಿ ಕರ್ನಾಟಕ ಜನಾಭಿವೃದ್ದಿ ವೇದಿಕೆಯ ನೇತೃತ್ವದಲ್ಲಿ ನಗರದಲ್ಲಿ ಇಂದು ನೀರಿನ ಸಂರಕ್ಷಣೆ ಕುರಿತಂತೆ ಜಾಗೃತಿ ಮೂಡಿಸುವ ಬೀದಿ ನಾಟಕ ಕಾರ್ಯಕ್ರಮವು ನಡೆಯಿತು. ಹಿರಿಯ ಮುಂದಾಳು ಸೆಲೀನಾ ರಾಣಾರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಿಕೆಯ ಸಂಚಾಲಕಾರಾದ ವಿದ್ಯಾದಿನಕರ್ ರವರು ನೇತ್ರಾವತಿ ನದಿಯು ಮಂಗಳೂರು ನಗರಕ್ಕೆ ಪ್ರಮುಖ ನೀರಿನ ಮೂಲವಾಗಿದ್ದು ತುಂಬೆ ಅಣೆಕಟ್ಟಿನ ಮೂಲಕ ನಗರಕ್ಕೆ ಹಾಗೂ ಕೈಗಾರಿಕೆಗಳಿಗೆ ನೀರಿನ ಪೂರೈಕೆಯಾಗುತಿದೆ. ಆದರೆ ಬೇಸಿಗೆಯಲ್ಲಿ ನೀರಿನ ಅಭಾವ ಕಂಡುಬರುವುದರಿಂದ ತುಂಬೆ ಅಣೆಕಟ್ಟಿನ ಎತ್ತರವನ್ನು ಹೆಚ್ಚಿಸುವ ಅಗತ್ಯವಿದೆ ಎಂದವರು ಹೇಳಿದರು. […]

ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವ ಸರಕಾರದ ಆದೇಶಕ್ಕೆ ವಿರೋದ ವ್ಯಕ್ತಪಡಿಸಿದ ಎಸ್ಎಫ್ಐ ಕಾರ್ಯಕರ್ತರ ಮೇಲೆ ಎಫ್ಐಆರ್ ದಾಖಲು

Friday, November 2nd, 2012
Kannada Rajyithsava

ಮಂಗಳೂರು : ಮಂಗಳೂರು ಗುರುವಾರ ನೆಹರೂ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆದ ರಾಜ್ಯೋತ್ಸವದ ಆಚರಣೆಯ ಸಂದರ್ಭದಲ್ಲಿ ಕನ್ನಡ ಶಾಲೆಗಳನ್ನು ಮುಚ್ಚವ ಆದೇಶಕ್ಕೆ ವಿರೋದ ವ್ಯಕ್ತಪಡಿಸಿ, ಗಲಭೆಯನ್ನೆಬ್ಬಿಸಿದ ಎಸ್ಎಫ್ಐ ಕಾರ್ಯಕರ್ತರನ್ನು ಬಂದಿಸಿ, ಅವರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ದೆಹಲಿ ವಿಶ್ವವಿದ್ಯಾನಿಲಯದ ಉಪನ್ಯಾಸಕ ಪ್ರೊ.ಗೋವಿಂದ ತನ್ನ ವರದಿಯಲ್ಲಿ ವಿದ್ಯಾರ್ಥಿಗಳ ಕೊರತೆಯಿದೆ ಎಂದು ರಾಜ್ಯದ 12,740 ಕನ್ನಡ ಶಾಲೆಗಳನ್ನು ಮುಚ್ಚಲು ಶಿಫಾರಸ್ಸು ಮಾಡಿದ್ದು, ಅದರಂತೆ ರಾಜ್ಯ ಸರಕಾರವು ಕೂಡ ಆ ಶಾಲೆಗಳನ್ನು ಮುಚ್ಚುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಈ ಹಿನ್ನಲೆಯಲ್ಲಿ ನಿನ್ನೆ ನೆಹರೂ […]

ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾದಿಂದ ನವೆಂಬರ್ 3 ರಂದು ಜನ ಜಾಗೃತಿ ಸಭೆ

Friday, November 2nd, 2012
SIO Rally in Mangalore

ಮಂಗಳೂರು: ನಿನ್ನೆ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್ .ಐ.ಓ. ರಾಜ್ಯ ಕ್ಯಾಂಪಸ್ ಕಾರ್ಯದರ್ಶಿ ತೌಸೀಫ್ ಅಹಮ್ಮದ್ ರವರು ನವೆಂಬರ್ 3 ರಂದು ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾದಿಂದ ಮಂಗಳೂರಿನಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳ ವಿದ್ಯಾರ್ಥಿ ಸಮುದಾಯಗಳೊಂದಿಗೆ ನಗರದ ಜ್ಯೋತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ವಿದ್ಯಾರ್ಥಿ ಜಾಥಾ ಹಾಗೂ ಜನ ಜಾಗೃತಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜು ಕ್ಯಾಂಪಸ್ ಗಳಲ್ಲಿ ಸಾಮಾನ್ಯವಾಗಿ ಕಂಡುಬರುತ್ತಿರುವ ಗುಂಪುಗಾರಿಕೆ, ದ್ವೇಷ ಮನೋಭಾವ, ಕೋಮುವಾದ, […]

ಕನ್ನಡದ ಅಭಿಮಾನ ಇಲ್ಲದವರಿಂದಲೇ ಕನ್ನಡಕ್ಕೆ ಅಪಾಯವಿದೆ : ಸಿ ಟಿ ರವಿ

Thursday, November 1st, 2012
Kannada Rajyothsava Mangalore

ಮಂಗಳೂರು : ದ.ಕ.ಜಿಲ್ಲಾಡಳಿತದ ವತಿಯಿಂದ ಮಂಗಳೂರು ನೆಹರೂ ಮೈದಾನಿನಲ್ಲಿ (ನ.1) ಕನ್ನಡ ರಾಜ್ಯೋತ್ಸವವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ 7.45 ಕ್ಕೆ ನಗರದ ಅಂಬೇಡ್ಕರ್ ವೃತ್ತದಿಂದ ಸುರಿಯುವ ತುಂತುರು ಮಳೆಯನ್ನೂ ಲೆಕ್ಕಿಸದೆ ಕನ್ನಡಾಭಿಮಾನದ ಸಂದೇಶವನ್ನು ಸಾರುವ ಅನೇಕ ವಾಹನಗಳ ಜಾಥ ಕನ್ನಡ ರಾಜ್ಯೋತ್ಸವಕ್ಕೆ ಮೆರುಗನ್ನು ನೀಡಿತು. ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಅವರು ಪಥಸಂಚಲನದ ಕಮಾಂಡರ್ ನಿಂದ ಗೌರವ ಸ್ವೀಕರಿಸಿ, ಪ್ಯಾರೆಡ್ ವೀಕ್ಷಿಸಿದರು. ಬಳಿಕ ಜಿಲ್ಲೆಯ ಜನತೆಗೆ ಸಂದೇಶ ನೀಡಿದರು. ಕನ್ನಡಿಗರಿಗೆ ರಾಜ್ಯೋತ್ಸವ ನಿತ್ಯನೂತನವಾಗಿರಬೇಕು ಅದು ನವೆಂಬರ್ […]

ಮಂಗಳೂರು ರಾಜೋತ್ಸವ ಆಚರಣೆಗೆ ಎಸ್.ಎಫ್.ಐ. ಕಾರ್ಯಕರ್ತರಿಂದ ಅಡ್ಡಿ; ಬಂಧನ

Thursday, November 1st, 2012
Rajyotsava Lathi Charge

ಮಂಗಳೂರು :  ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಏರ್ಪಡಿಸಿದ್ದ ರಾಜೋತ್ಸವದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ರಾಜ್ಯೋತ್ಸವದ ಸಂದೇಶ ನೀಡಲು ಪ್ರಾರಂಬಿಸುತ್ತಿದ್ದಂತೆ ಮೈದಾನದ ಹೊರಗಿನಿಂದ ರಾಜ್ಯ ಸರಕಾರದ ವಿರುದ್ದ ಘೋಷಣೆಗಳನ್ನು ಕೂಗುತ್ತ ಒಳ ಪ್ರವೇಶಿಸಿದ ಎಸ್.ಎಫ್.ಐ. ಕಾರ್ಯಕರ್ತರು, ಕನ್ನಡ ಶಾಲೆಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರಕಾರಕ್ಕೆ ರಾಜ್ಯೋತ್ಸವ ಆಚರಿಸುವ ಅರ್ಹತೆಯಿಲ್ಲ ಎಂದು ಘೋಷಣೆ ಕೂಗುತ್ತ ರಾಜೋತ್ಸವ ಆಚರಣೆಗೆ ಅಡ್ಡಿಪಡಿಸಲು ಮುಂದಾದರು. ಕಾರ್ಯಕರ್ತರು ದೆಹಲಿ ವಿಶ್ವವಿದ್ಯಾನಿಲಯದ ಉಪನ್ಯಾಸಕ ಪ್ರೊ.ಗೋವಿಂದ ತನ್ನ ವರದಿಯಲ್ಲಿ ವಿದ್ಯಾರ್ಥಿಗಳ ಕೊರತೆಯಿದೆ […]

ಪ್ಲಾಸ್ಟಿಕ್‌ ನಿಷೇಧ ಜಿಲ್ಲಾಡಳಿತದ ನಿರ್ಧಾರಕ್ಕೆ ಬದ್ಧ : ಡಾ.ಹರೀಶ್ ಕುಮಾರ್

Thursday, November 1st, 2012
MCC Commissioner

ಮಂಗಳೂರು: ಮಂಗಳೂರು ನಗರದಾದ್ಯಂತ ಪ್ಲಾಸ್ಟಿಕ್‌ ನಿಷೇಧಕ್ಕೆ ನ. 1ರಿಂದ ನಿರ್ಧರಿಸಲಾಗಿದೆ. ಈ ಸಂಬಂಧ ಮುಂದಿನ ಒಂದು ತಿಂಗಳ ಕಾಲಾವಕಾಶ ನೀಡಲಾಗುವುದು. ಬಳಿಕ ಹಾಲಿನ ತೊಟ್ಟೆ ಸೇರಿದಂತೆ ಪ್ಲಾಸ್ಟಿಕ್‌ ಎಸೆಯುವುದು ಕಂಡುಬಂದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮನೆ ಮನೆಯಿಂದ ಇಂತಹ ಪ್ಲಾಸ್ಟಿಕ್‌ಗಳನ್ನು ಸಂಗ್ರಹಿಸುವ ಸಂಬಂಧ ಕ್ರಮ ಕೈಗೊಳ್ಳಲಾಗುವುದು. ಈ ನೆಲೆಯಲ್ಲಿ ಜಿಲ್ಲಾಡಳಿತ ಕೈಗೊಳ್ಳುವ ನಿರ್ಧಾರಕ್ಕೆ ಮಂಗಳೂರು ಮಹಾನಗರ ಪಾಲಿಕೆ ಬದ್ಧ ಬದ್ಧವಾಗಿದೆ ಎಂದು ಮಂಗಳಾ ಸಭಾಂಗಣದಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಪಾಲಿಕೆ ಆಯುಕ್ತ ಡಾ| ಹರೀಶ್‌ […]

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ

Wednesday, October 31st, 2012
Indira Gandhi Death Aniversary

ಮಂಗಳೂರು: ದಿವಂಗತ ಇಂದಿರಾಗಾಂದಿಯವರ ಪುಣ್ಯತಿಥಿಯ ಸ್ಮರಣಾರ್ಥ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ ಪುರಭವನದಲ್ಲಿ ಇಂದು ನಡೆಯಿತು. ಈ ಕಾರ್ಯಕ್ರಮಕ್ಕೆ ದಕ್ಷಿಣ ಭಾರತ ಸೇವಾದಳ ಉಸ್ತುವಾರಿ ವಿನಯ್ ಕುಮಾರ್ ಸೊರಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಇಂಧಿರಾಗಾಂಧಿಯವರು ಮಹಾತ್ಮಗಾಂಧಿಯವರ ಬಡತನ ನಿರ್ಮೂಲನೆಯ ಕನಸನ್ನು ನನಸಾಗಿಸಲು ಸಾಕಷ್ಟು ಶ್ರಮಿಸಿದರು. ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟರು ಅವರ ಪುಣ್ಯತಿಥಿಯ ಈ ದಿನವನ್ನು ಜನ ಸೇವೆಗೆ ಮುಡಿಪಾಗಿಡಬೇಕು ಎಂದು ಕರೆನೀಡಿದರು. ಎಐಸಿಸಿ […]