ಮೀನುಗಾರಿಕೆಗೆ ತೆರಳಿದ ಮೀನುಗಾರನ ಆಕಸ್ಮಿಕ ಸಾವು

Friday, October 26th, 2012
Malpe beach

ಉಡುಪಿ: ಬಡಾನಿಡಿಯೂರು ಕದಿಕೆಯ ಮಹಾಲಿಂಗ ಕುಂದರ್ ಎಂಬುವವರು ಗುರುವಾರ ಮಲ್ಪೆಯ ಸೈಂಟ್ ಮೇರೀಸ್ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ ಸಂದರ್ಭದಲ್ಲಿ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಸೀ ಮದರ್ ಎಂಬ ಬೋಟಿನಲ್ಲಿ ಕೆಲಸ ಮಾಡುತ್ತಿದ್ದ ಇವರು ಬಲೆ ಎಳೆಯುವ ಸಂದರ್ಭದಲ್ಲಿ ಜಾರಿ ದೋಣಿಯ ದಂಡೆಯ ಮೇಲೆ ಬಿದ್ದಿದ್ದಾರೆ. ಬೋಟಿನ ದಂಡೆಗೆ ಹಣೆಗೆ ತಾಗಿ ಅಲ್ಲಿಂದ ಸಮುದ್ರಕ್ಕೆ ಬಿದ್ದಿದ್ದಾರೆ. ಜೊತೆಯಲ್ಲಿದ್ದವರು ತಕ್ಷಣ ಅವರನ್ನು ಮೇಲೆತ್ತಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. […]

ರಕ್ತ ಚಂದನ ಕಳ್ಳಸಾಗಾಟ ಯತ್ನ ನಾಲ್ವರು ಆರೋಪಿಗಳ ಸೆರೆ

Thursday, October 25th, 2012
ರಕ್ತ ಚಂದನ ಕಳ್ಳಸಾಗಾಟ ಯತ್ನ ನಾಲ್ವರು ಆರೋಪಿಗಳ ಸೆರೆ

ಮಂಗಳೂರು: ಪಣಂಬೂರಿನ ನವಮಂಗಳೂರು ಬಂದರಿನ ಮೂಲಕ ದುಬೈಗೆ ಅಕ್ರಮವಾಗಿ ರಫ್ತು ಮಾಡಲೆತ್ನಿಸಿದ ಸುಮಾರು 3ಕೋಟಿ ರೂಪಾಯಿ ಮೌಲ್ಯದ ಕೆಂಪು ಶ್ರೀಗಂಧದ ದಿಮ್ಮಿಗಳನ್ನು ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ ಅಧಿಕಾರಿಗಳು ಮಂಗಳವಾರ ವಶಪಡಿಸಿಕೊಂಡಿದ್ದಾರೆ. ಬಂಧಿತರು ಕೇರಳದವರಾಗಿದ್ದು, ಆರೋಪಿಗಳನ್ನು ಮುಸ್ತಫಾ ಅಬ್ದುಲ್ ರೆಹಮಾನ್, ಎಂ.ಕೆ.ಸಲೀಹ್, ಅಬ್ದಲ್ ಕಲಾಂ, ಎಡ್ವರ್ಡ್ ಜಾರ್ಜ್ಎಂದು ಗುರುತಿಸಲಾಗಿದೆ. ಕೊಚ್ಚಿನ್ನ ಎಕ್ಸ್ಪೋರ್ಟ್ ಸಂಸ್ಥೆಯ ಮೂಲಕ ದುಬೈಯ ಜೆಬೆಲ್ ಆಲಿ ಎಂಬ ಸಂಸ್ಥೆಗೆ ಫ್ಲೈವುಡ್ ಕಳುಹಿಸಲಾಗುತ್ತಿದೆ ಎಂಬುದಾಗಿ ದಾಖಲೆ ನಿರ್ಮಿಸಿ ಕಂಟೈನರ್ ನಲ್ಲಿ ಫ್ಲೈವುಡ್ ನೆಪದಲ್ಲಿ ಕೆಂಪು ಶ್ರೀ […]

ಮಂಗಳಾದೇವಿಯಲ್ಲಿ ವೈಭವದ ರಥೋತ್ಸವದೊಂದಿಗೆ ದಸರಾ ಉತ್ಸವದ ಸಮಾಪನೆ

Thursday, October 25th, 2012
Mangaladevi Temple

ಮಂಗಳೂರು: ಮಂಗಳೂರಿನ ಪ್ರಸಿದ್ಧ ದೇವಾಲಯವಾದ ಬೋಳಾರದ ಮಂಗಳಾದೇವಿ ದೇವಸ್ಥಾನದಲ್ಲಿ ನವರಾತ್ರಿಯ ಸಂದರ್ಭದಲ್ಲಿ ನವದುರ್ಗೆಯರ ಆರಾಧನೆ ವಿಶಿಷ್ಟವಾಗಿ ನಡೆಯುತ್ತಿದ್ದು ಅಸಂಖ್ಯಾತ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ದಸರಾ ಸಂಭ್ರಮದಲ್ಲಿ ಪಾಲ್ಗೊಳ್ಳುತ್ತಾರೆ. ದೇವಾಲಯದಲ್ಲಿ ನವರಾತ್ರಿಯ ಒಂಭತ್ತು ದಿನಗಳಲ್ಲಿಯೂ ನವದುರ್ಗೆಗೆ ಮಧ್ಯಾಹ್ನ ಕಲ್ಪೋಕ್ತ ಪೂಜೆಗಳು ನಡೆಯುತ್ತವೆ. ಮಂಗಳಾದೇವಿಯಲ್ಲಿ ದೇವಿಯನ್ನು ಒಂಭತ್ತು ದಿನಗಳಲ್ಲಿ ಒಂಭತ್ತು ರೀತಿಗಳಲ್ಲಿ ಅಲಂಕರಿಸುವ ಸಂಪ್ರದಾಯವಿದ್ದು, ಪ್ರತಿದಿನ ದಿನಕ್ಕೊಂದರಂತೆ ದೇವಿಯರ ಪೂಜೆ ನಡೆಯುತ್ತದೆ. ದುರ್ಗಾದೇವಿ, ಆರ್ಯದೇವಿ, ಭಗವತಿ, ಕೌಮಾರಿ, ಅಂಬಿಕೆ, ಮಹಿಷಮರ್ಧಿ ನಿ, ಚಂಡಿಕೆ, ಸರಸ್ವತಿ, ನಾಗೇಶ್ವರಿ ಹೀಗೆ ವಿವಿಧ […]

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವರ್ಣರಂಜಿತ ದಸರಾ ಶೋಭಾಯಾತ್ರೆ

Thursday, October 25th, 2012
Kudroli Sharadha

ಮಂಗಳೂರು: ಮಂಗಳೂರು ದಸರಾದ ಭವ್ಯ ಶೋಭಾಯಾತ್ರೆಯು ಬುಧವಾರ ವೈಭವದಿಂದ ನಡೆಯಿತು. ನೂರರ ಸಂಭ್ರಮ ಆಚರಣೆಯ ಅಲೆಯಲ್ಲಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನನರಾತ್ರಿಯ ಉತ್ಸವದ ಅಂಗವಾಗಿ ನಡೆಯುವ ನವದುರ್ಗೆಯರು ಸೇರಿದಂತೆ ಟ್ಯಾಬ್ಲೋಗಳ ಭವ್ಯ ಮೆರವಣಿಗೆ ಸಂಜೆ 4.15ರ ವೇಳಗೆ ಕ್ಷೇತ್ರದ ನವೀಕರಣ ಮತ್ತು ಮಂಗಳೂರು ದಸರಾ ರೂವಾರಿ, ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಅವರು ಶೋಭಾಯಾತ್ರೆಗೆ ಚಾಲನೆ ನೀಡಿದರು. ಕುದ್ರೋಳಿ ದೇವಸ್ಥಾನದ ಸ್ವರ್ಣ ಮಂಟಪದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ, ಆದಿಶಕ್ತಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ, ಸ್ಕಂದ […]

ಮಂಗಳೂರು ಕಾಂಗ್ರೆಸ್ ನಲ್ಲಿ ಟಿಕೇಟ್ ರಾಜಕೀಯ

Wednesday, October 24th, 2012
Rohan Lobo

ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ರಾಜಕೀಯ ಈಗ ಗರಿಕೆದರಿಕೊಂಡಿದೆ. ಕ್ರಿಶ್ಚಿಯನ್ ಕೊಂಕಣಿಗರು ದೊಡ್ಡ ಸಂಖ್ಯೆಯಲ್ಲಿ ಮತದಾರರಾಗಿರುವ ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಂಗಣದಲ್ಲಿ ಟಿಕೇಟ್ ಆಕಾಂಕ್ಷಿಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಎನ್ನುವ ವಿಚಾರ ಮತದಾರ ಪ್ರಭುಗಳಿಗೆ ಗೊಂದಲಕ್ಕೆ ಕಾರಣವಾಗುತ್ತಿದೆ. ಕಾಂಗ್ರೆಸ್ ಟಿಕೇಟ್ ಮಂಗಳೂರು ವಿಧಾನಸಭಾದ ಲೆಕ್ಕಚಾರದ ಪ್ರಕಾರ ಕ್ರಿಶ್ಚಿಯನ್ ಸಮುದಾಯವರಿಗೆ ಸಿಗಬೇಕು ಎನ್ನುವ ನಿಯಮ ಚಾಲ್ತಿಯಲ್ಲಿತ್ತು. ಆದರೆ ಪ್ರತಿ ಬಾರಿನೂ ಇಂತಹ ಟಿಕೇಟ್ ಕ್ರಿಶ್ಚಿಯನ್ ಅಭ್ಯರ್ಥಿಗೆ ಸಿಕ್ಕಿದಾಗ ಸೋಲನ್ನೇ ನೆಚ್ಚಿಕೊಂಡರು. ಕಾಂಗ್ರೆಸ್ […]

ಕರಾವಳಿಯಲ್ಲಿ ಪುರುಷರೇ ಬಂಜೆಯರು !

Wednesday, October 24th, 2012
Banje

ಮಂಗಳೂರು : ದೇಶದಲ್ಲಿ ಬಂಜೆ ಪುರಷರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮಂಗಳೂರು ನಗರವೊಂದರಲ್ಲೇ ಕಳೆದ ಕೆಲವು ವರ್ಷಗಳ ಪರೀಕ್ಷೆಯಲ್ಲಿ ಶೇಕಡಾ 40 ಪುರುಷರು ಸಂತಾನೋತ್ಪತ್ತಿಗೆ ವಿಫಲರಾಗಿರುವ ಆತಂಕಕಾರಿ ಅಂಶವೊಂದನ್ನು ವೈದ್ಯರೊಬ್ಬರು ಬಹಿರಂಗ ಪಡಿಸಿದ್ದಾರೆ. `ಒಂದು ಕಾಲದಲ್ಲಿ ದಂಪತಿಯೊಂದು ಮಗುವನ್ನು ಪಡೆಯಲು ವಿಫಲವಾಗಿದ್ದರೆ ಅದಕ್ಕೆ ಹೆಣ್ಮಕ್ಕಳೇ ಕಾರಣ ಎಂದು ಪರಿಗಣಿಸಲಾಗುತ್ತಿತ್ತು. ಆದರೆ ಈಗ ಈ ಪರಿಕಲ್ಪನೆ ಬದಲಾಗಿದ್ದು, ವೈದ್ಯರು ಹೇಳುವ ಪ್ರಕಾರ ಶೇಕಡಾ 40ಕ್ಕಿಂತಲೂ ಅಧಿಕ ಪ್ರಕರಣಗಳಲ್ಲಿ ಪುರುಷನೇ ಬಂಜೆಯಾಗಿರುವುದು ಪತ್ತೆಯಾಗಿದೆ. ಹಿಂದೆ ಬಹುತೇಕ ಟ್ರಕ್ ಡ್ರೈವರ್ […]

ಕುದ್ರೋಳಿ ದಸರಾ ಮೆರವಣಿಗೆ ವಾಹನ ಸಂಚಾರದಲ್ಲಿ ಬದಲಾವಣೆ

Wednesday, October 24th, 2012
Kudroli Temple

ಮಂಗಳೂರು: ಅ.24 ರಂದು ಸಂಜೆ 4 ಗಂಟೆಗೆ ಕುದ್ರೋಳಿ ದಸರಾ ಶೋಭಾಯಾತ್ರೆಯು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ಹೊರಡಲಿದೆ. ಮಣ್ಣಗುಡ್ಡೆ, ಲೇಡಿಹಿಲ್, ಲಾಲ್ ಬಾಗ್, ಪಿವಿಎಸ್, ನವಭಾರತ್ ವೃತ್ತ, ಕೆ.ಎಸ್.ರಾವ್ ರಸ್ತೆ, ಕೆ.ಬಿ.ವೃತ್ತ, ಗಣಪತಿ ಹೈಸ್ಕೂಲ್ ರಸ್ತೆ, ಮೋಹಿನಿ ವಿಲಾಸ, ಓಂ ಮಹಲ್ ಜಂಕ್ಷನ್, ರಥಬೀದಿ, ಲೋವರ್ ಕಾರ್ ಸ್ಟ್ರೀಟ್, ನ್ಯೂಚಿತ್ರ, ಅಳಕೆಯ ಮೂಲಕ ಕುದ್ರೋಳಿ ದೇವಳಕ್ಕೆ ಬಂದು  ದೇವಳದ ಕೆರೆಯಲ್ಲಿ ವಿಗ್ರಹ ಜಲಸ್ತಂಭನಗೊಳ್ಳಲಿದೆ. ಈ ಸಂದರ್ಭದಲ್ಲಿ 30,000 ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆಯಿರುವುದರಿಂದ […]

ಬಿಜೆಪಿ ಪಕ್ಷಕ್ಕೆ ದ್ರೋಹ ಮಾಡಿದರೆ ಅದು ಹೆತ್ತ ತಾಯಿಗೆ ದ್ರೋಹ ಮಾಡಿದಂತೆ :ಸಿ.ಟಿ.ರವಿ

Wednesday, October 24th, 2012
C T Ravi

ಮಂಗಳೂರು: ಮಂಗಳವಾರ ಮಂಗಳೂರಿಗೆ ಭೇಟಿ ಕೊಟ್ಟ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಟಿ.ರವಿ ಸರ್ಕ್ಯೂಟ್ ಹೌಸ್ ನಲ್ಲಿ  ನಡೆದ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಅವರು  ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡ್ಡಿಯೂರಪ್ಪನವರು ಬಿಜೆಪಿ ಪಕ್ಷವನ್ನು ಬಿಟ್ಟು ಹೊಸ ಪಕ್ಷವನ್ನು ಸ್ಥಾಪಿಸುವ ಉದ್ದೇಶವನ್ನು ಹೊಂದಿಲ್ಲ, ಒಂದು ವೇಳೆ ಯಡ್ಡಿಯೂರಪ್ಪನವರು ಬಿಜೆಪಿಯಿಂದ ಹೊರನಡೆದರೆ ಅದರಿಂದ ಅವರಿಗೆ ನಷ್ಟವೇ ಹೊರತು ಪಕ್ಷಕ್ಕೆ ಯಾವ ನಷ್ಟವೂ ಇಲ್ಲ, ಅವರ ಹೊರತಾಗಿಯೂ ಪಕ್ಷ ಇನ್ನಷ್ಟು ಬಲಿಷ್ಟವಾಗಿ ಬದುಕಲಿದೆ ಎಂದರು. ಬಿಜೆಪಿ ಪಕ್ಷಕ್ಕೆ ದ್ರೋಹ ಮಾಡಿದರೆ ಅದು ಹೆತ್ತ […]

ಕಡಂದಲೆಯಲ್ಲಿ ಭಾರೀ ಪ್ರಮಾಣದ ಸ್ಪೋಟಕ ಪೊಲೀಸರ ವಶಕ್ಕೆ

Monday, October 22nd, 2012
Huge cache

ಮೂಡುಬಿದಿರೆ: ಕಡಂದಲೆ ಹಾಗೂ ಪಾಲಡ್ಕ ಗ್ರಾಮದ ಸಮೀಪದಲ್ಲಿರುವ ಅಡ್ಡಲ್ ಶೆಡ್ ಎಂಬ ಪ್ರದೇಶದಲ್ಲಿನ ಮೋರಿಯೊಂದರಲ್ಲಿ ಸ್ಪೋಟಕಕ್ಕೆ ಬಳಸಿ ನಿರುಪಯುಕ್ತವಾಗಿರು ಸುಮಾರು 4953 ಇಲೆಕ್ಟ್ರಿಕ್ ಡಿಟೋನೇಟರ್ ಕಡ್ಡಿಗಳಿರುವ ಚೀಲಗಳನ್ನು ಮೂಡುಬಿದಿರೆ ಪೊಲೀಸರು ರವಿವಾರದಂದು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಪ್ರದೇಶದಲ್ಲೆ ಕಾರ್ಯನಿರ್ವಹಿಸುತ್ತಿರುವ ಕಲ್ಲು ಗಣಿಗಾರಿಕ ಕಂಪನಿಯಾದ ಪೋಬ್ ಸನ್ಸ್  ಎಂಬ ಕಂಪನಿಯು ಕಲ್ಲಿನ ಕೋರೆಯಲ್ಲಿ ಸ್ಪೋಟಕಕ್ಕೆ ಬಳಸಿ ನಿರುಪಯುಕ್ತವಾದ  ಈ ಕಡ್ಡಿಗಳನ್ನು ಯಾರ ಗಮನಕ್ಕೂ ಬಾರದಂತೆ ಮೋರಿಯಲ್ಲಿ ಗೋಣಿ ಚೀಲ ಹಾಗೂ ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿಸಿಡಲಾಗಿತ್ತು. ಸ್ಥಳೀಯ […]

ಕರಾವಳಿ ಜಿಲ್ಲೆಗಳಲ್ಲಿ ರವಿವಾರ ಗುಡುಗು ಮಿಂಚಿನಿಂದ ಕೂಡಿದ ಮಳೆ

Monday, October 22nd, 2012
Heavy rain

ಮಂಗಳೂರು: ಕರಾವಳಿ ಜಿಲ್ಲೆಯ ಹಲವು ಭಾಗಗಳಲ್ಲಿ ರವಿವಾರ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಮಳೆಯಿಂದಾಗಿ ಹಲವೆಡೆ ಹಾನಿ ಸಂಭವಿಸಿರುವ ಘಟನೆಯು ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಹಾಗೂ ಸುಳ್ಯದಲ್ಲಿ ಶನಿವಾರ ರಾತ್ರಿ ಹಾಗೂ ರವಿವಾರ ಬೆಳಗಿನ ಜಾವ ಸಾಧಾರಣ ಮಳೆಯಾಗಿದೆ. ಉಳಿದಂತೆ ಪುತ್ತೂರು ಹಾಗೂ ಬಂಟ್ವಾಳ ತಾಲ್ಲೂಕಿನಲ್ಲಿ ಮಳೆಯು ಜೋರಾಗಿದ್ದು ಗುಡುಗು-ಸಿಡಿಲಿನಿಂದ ಕೂಡಿತ್ತು. ಮಂಗಳೂರು ತಾಲೂಕು ಹಾಗೂ ನಗರ ಪ್ರದೇಶಗಳಲ್ಲಿ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಸಂಜೆ ಪ್ರಾರಂಭವಾದ ಮಳೆ ರಾತ್ರಿಯವರೆಗೂ ಮುಂದುವರಿದಿತ್ತು, ಬೆಳ್ತಂಗಡಿ ತಾಲೂಕಿನಲ್ಲಿ […]