ಭಜನಾ ಮಂದಿರಕ್ಕೆ ನುಗ್ಗಿದ ಕಳ್ಳರು, ಬೆಳ್ಳಿ ಪ್ರಭಾವಳಿ ಸಹಿತ 2.74 ಲಕ್ಷ ರೂ. ವೌಲ್ಯದ ಸೊತ್ತು ಕಳವು

Monday, August 1st, 2011
Rama bajana-Mandhir/ ರಾಮ ಭಜನಾ ಮಂದಿರಕ್ಕೆ ನುಗ್ಗಿದ ಕಳ್ಳರು

ಮಂಗಳೂರು : ಯೆಯ್ಯಾಡಿ ಸಮೀಪದ ಶರ್ಬತ್‌ಕಟ್ಟೆ ಬಳಿ ಇರುವ ಶ್ರೀರಾಮ ಭಜನಾ ಮಂದಿರದ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ಬೆಳ್ಳಿ ಮತ್ತು ಚಿನ್ನಾಭರಣ ,ಕಾಣಿಕೆ ಹುಂಡಿಯ ನಗದು ಸೇರಿದಂತೆ ಒಟ್ಟು 2.74 ಲಕ್ಷ ರೂ. ವೌಲ್ಯದ ಸೊತ್ತುಗಳನ್ನು ದೋಚಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಭಜನಾ ಮಂದಿರದ ಹೊರ ಬಾಗಿಲಿನ ಬೀಗ ಮುರಿದ ಕಳ್ಳರು ಗರ್ಭಗುಡಿಯ ಕಿಟಕಿಯ ಸರಳು ಬಗ್ಗಿಸಿ ಒಳ ನುಗ್ಗಿದ್ದಾರೆ. ರಾಮದೇವರ ಮೂರ್ತಿಗೆ ಅಳವಡಿಸಿದ 2 ಕೆಜಿ ಬೆಳ್ಳಿ ಪ್ರಭಾವಳಿ, ಅರ್ಧ ಕೆಜಿ […]

‘ಸಂತೋಷ’ದಿಂದ ಹೋಗುತ್ತಿದ್ದೇನೆ. ಹುದ್ದೆ ಇಲ್ಲದಿದ್ದರೂ, ಪಕ್ಷದ ಅಭಿವೃದ್ಧಿಗೆ ನಿರಂತರ ದುಡಿಯುತ್ತೇನೆ: ಯಡಿಯೂರಪ್ಪ

Sunday, July 31st, 2011
CM Yeddyurappa Resigns/ಯಡಿಯೂರಪ್ಪ ರಾಜೀನಾಮೆ

ಬೆಂಗಳೂರು : ದಕ್ಷಿಣ ಭಾರತದ ಪ್ರಪ್ರಥಮ ಬಿಜೆಪಿ ಸರ್ಕಾರದ ಮುಖ್ಯ ಮಂತ್ರಿ ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅವರು ಸಂಜೆ 3.30ರ ಸುಮಾರಿಗೆ ತಮ್ಮ ಅಸಂಖ್ಯ ಬೆಂಬಲಿಗರೊಂದಿಗೆ ಅಧಿಕೃತ ನಿವಾಸದಿಂದ ರೇಸ್ ಕೋರ್ಸ್ ರಸ್ತೆಯ ಮೂಲಕ ಹೊರಟು ರಾಜಭವನದಲ್ಲಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರಿಗೆ ತಮ್ಮ ಒಂದು ವಾಕ್ಯದ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಸಂವಿಧಾನದ ಕಲಂ 164(1)ರ ಅನ್ವಯ ಯಡಿಯೂರಪ್ಪ ಅವರ ರಾಜೀನಾಮೆಯನ್ನು ಸ್ವೀಕರಿಸಿ, ಅಂಗೀಕಾರ ಮುದ್ರೆ ಒತ್ತಿದ್ದಾರೆ. ಹೊಸ ನಾಯಕನ ಆಯ್ಕೆಯಾಗುವವರೆಗೂ […]

ನರಹರಿ ಬೆಟ್ಟದ ಸದಾಶಿವ ದೇವಸ್ಥಾನದಲ್ಲಿ ಅಸಂಖ್ಯಾತ ಭಕ್ತರಿಂದ ಆಟಿ ಅಮಾವಾಸ್ಯೆ ತೀರ್ಥಸ್ನಾನ

Sunday, July 31st, 2011
Narahari-Parvata/ನರಹರಿ ಬೆಟ್ಟ ತೀರ್ಥಸ್ನಾನ

ವಿಟ್ಲ: ಭೂ ಲೋಕದ ಕೈಲಾಸ ಎಂದೇ ಪ್ರಸಿದ್ದವಾಗಿರುವ ತಾಣ ನರಹರಿ ಪರ್ವತ ಸದಾಶಿವ ದೇವಸ್ಥಾನದಲ್ಲಿ ಶನಿವಾರ ಭಕ್ತರು ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿ ಶ್ರದ್ದಾ ಭಕ್ತಿಯಿಂದ ಆಟಿ ಅಮಾವಾಸ್ಯೆ ತೀರ್ಥಸ್ನಾನ ಮಾಡಿದರು. ನರಹರಿ ಬೆಟ್ಟ ಸಮುದ್ರ ಮಟ್ಟದಿಂದ ಸಾವಿರ ಅಡಿಗೂ ಹೆಚ್ಹು ಎತ್ತರದಲ್ಲಿದ್ದು ಪ್ರಕೃತಿಯ ಸೌಂದರ್ಯದ ನಡುವೆ ಸದಾಶಿವ ದೇವರ ಸಾನಿಧ್ಯವಿದೆ. ತುಳು ಪರಂಪರೆಯ ಆಟಿ ಅಮಾವಾಸ್ಯೆ ತೀರ್ಥಸ್ನಾನದ ಪವಿತ್ರ ದಿನದಂದು ಮುಂಜಾನೆಯೇ ಅಸಂಖ್ಯಾತ ಭಕ್ತರು ಮುಖ್ಯವಾಗಿ ನವವಧೂವರರು ನರಹರಿ ಪರ್ವತ ಏರಿ ಶಂಖ, ಚಕ್ರ, ಗದಾ, ಪದ್ಮಗಳೆಂಬ […]

ಬಿಜೆಪಿ ಯುವ ಮೋರ್ಚಾ ವತಿಯಿಂದ ಯುವ ಸಂಘರ್ಷ ಆಂದೋಲನ

Saturday, July 30th, 2011
BJP Yuva Morcha/ ಬಿಜೆಪಿ ಯುವ ಮೋರ್ಚಾ ವತಿಯಿಂದ ಯುವ ಸಂಘರ್ಷ ಆಂದೋಲನ

ಮಂಗಳೂರು: ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದ ಸಂಘ ನಿಕೇತನದಲ್ಲಿ ಶುಕ್ರವಾರ ಆಯೋಜಿಸಿದ ಯುವ ಸಂಘರ್ಷ ಆಂದೋಲನವನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಭಾರಿ ಪ್ರತಾಪಸಿಂಹ ನಾಯಕ್‌ ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಅವರು ಬಿಜೆಪಿ ವಿವಿಧ ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ಮತ್ತೆಮತ್ತೆ ಎದ್ದುಬಂದಿದೆ, ಸರಕಾರವನ್ನು ಉರುಳಿಸಲು ರಾಜಕೀಯ ವಿರೋಧಿಗಳ ಪ್ರಯತ್ನ ನಿರಂತರ ನಡೆಯುತ್ತಿದೆ ಎಂದರು. ಕಾರ್ಯಕರ್ತರು ಇನ್ನಷ್ಟು ಪಕ್ಷದ ಬೆಳವಣಿಗೆಯಲ್ಲಿ ಶ್ರಮವಹಿಸುವುದು ಅತ್ಯಗತ್ಯ. ದಕ್ಷಿಣ ಭಾರತದಲ್ಲಿ ಪ್ರಥಮ ಬಾರಿಗೆ ಅಸ್ತಿತ್ವಕ್ಕೆ ಬಂದ ಬಿಜೆಪಿ ನೇತೃತ್ವದ ಸರಕಾರವನ್ನು […]

ಅಡುಗೆ ಅನಿಲ ಸಮಸ್ಯೆ ದ.ಕ ಜಿಲ್ಲಾ ಕಾಂಗ್ರೆಸ್‌ ಕಾರ್ಯಕರ್ತರಿಂದ ಪ್ರತಿಭಟನೆ

Saturday, July 30th, 2011
Congress Protest/ ಕಾಂಗ್ರೆಸ್‌ ಕಾರ್ಯಕರ್ತರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

ಮಂಗಳೂರು: ಅಡುಗೆ ಅನಿಲ ಪೂರೈಕೆಯ ಸಮಸ್ಯೆಯನ್ನು ವಿರೋಧಿಸಿ ದ.ಕ ಜಿಲ್ಲಾ ಕಾಂಗ್ರೆಸ್‌ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು. ಈ ವಿಶೇಷ ರೀತಿಯ ಪ್ರತಿಭಟನೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಒಲೆ ಉರಿಸಿ, ಚಹಾ ತಯಾರಿಸಿ, ಹಪ್ಪಳ ವನ್ನು ಕಾಯಿಸಿ, ಖಾಲಿ ಗ್ಯಾಸ್‌ ಸಿಲಿಂಡರ್‌ಗಳನ್ನು ಪ್ರದರ್ಶಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆಯನ್ನು ನಡೆಸಿದರು. ಪ್ರತಿಭಟನೆಯ ನೇತೃತ್ವವಹಿಸಿದ ಕೆ.ಪಿ.ಸಿ.ಸಿ. ಕಾರ್ಯದರ್ಶಿ ಐವನ್‌ ಡಿ’ಸೋಜಾ ಮಾತನಾಡಿ ರಾಜ್ಯದ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಯು ಗ್ಯಾಸ್‌ […]

ಬಿಜೆಪಿಯ ದಕ್ಷಿಣ ಭಾರತದ ಮೊದಲ ಮುಖ್ಯಮಂತ್ರಿ ಯಡಿಯೂರಪ್ಪ ಭಾನುವಾರ ಪದತ್ಯಾಗ

Friday, July 29th, 2011
cm Yeddyurappa/ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು : ಲೋಕಾಯುಕ್ತ ವರದಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರು ಪ್ರಸ್ತಾಪವಾದ ಬಳಿಕ ಹುದ್ದೆ ತೊರೆಯುವಂತೆ ಹೈಕಮಾಂಡ್‌ನಿಂದ ಸೂಚನೆ ಬಂದ ಬಳಿಕ ಅವರು ಮೊದಲ ಬಾರಿ ಮೌನ ಮುರಿದು ಪಕ್ಷದ ನಿರ್ದೇಶನಕ್ಕೆ ಮಣಿದು ಭಾನುವಾರ (ಜು.31)ರಂದು ಪದತ್ಯಾಗ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಪಕ್ಷವನ್ನು ಶೂನ್ಯದಿಂದ ಕಟ್ಟಿ ಬೆಳೆಸಿದ್ದೇನೆ ಮತ್ತು ಭವಿಷ್ಯದಲ್ಲಿ ಕೂಡ ಪಕ್ಷಕ್ಕಾಗಿ ದುಡಿಯಲು ಸಿದ್ಧ ಎಂದು ಹೇಳಿದ್ದಾರೆ. ತಾನು ಬಿಜೆಪಿಯ ಶಿಸ್ತಿನ ಸಿಪಾಯಿಯಾಗಿದ್ದು, ಆಷಾಢ ಮಾಸವು ಜು.30ರಂದು ಕೊನೆಗೊಳ್ಳುತ್ತದೆ. ಅದರ ಬಳಿಕ ಆ.31ರಂದು ರಾಜೀನಾಮೆ ನೀಡುವುದಾಗಿ […]

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಬಜಪೆ ವಿಮಾನ ನಿಲ್ದಾಣಕ್ಕೆ ವೋಲ್ವೊ ಬಸ್‌ಗಳ ಓಡಾಟಕ್ಕೆ ಅನುಮತಿ

Friday, July 29th, 2011
KSRTC-volvo

ಮಂಗಳೂರು : ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಬಜಪೆ ವಿಮಾನ ನಿಲ್ದಾಣಕ್ಕೆ ವೋಲ್ವೊ ಹವಾನಿಯತ್ರಿತ ಬಸ್‌ಗಳ ಓಡಾಟಕ್ಕೆ ಬುಧವಾರ ದ.ಕ ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸೆಂಟ್ರಲ್ ರೈಲು ನಿಲ್ದಾಣದವರೆಗೆ ಕಾವೂರು, ಬಜ್ಪೆ, ಕೆಎಸ್ಸಾರ್ಟಿಸಿ, ಲಾಲ್ ಬಾಗ್, ಜ್ಯೋತಿ, ಸೆಂಟ್ರಲ್ ರೈಲು ನಿಲ್ದಾಣ, ಕೆ.ಎಸ್.ರಾವ್ ರೋಡ್, ಪಿವಿಎಸ್ ಸರ್ಕಲ್, ಬಂಟ್ಸ್ ಹಾಸ್ಟೆಲ್ ಸರ್ಕಲ್, ಜ್ಯೋತಿ, ಸೈಂಟ್ ಆಗ್ನೆಸ್, ಮಲ್ಲಿಕಟ್ಟೆ, ನಂತೂರು, ಕೆಪಿಟಿ, ಕಾವೂರು, ಬೊಂದೇಲ್ ಮಾರ್ಗವಾಗಿ ಕೆಎಸ್ಸಾರ್ಟಿಸಿ ಅಥವಾ ಯಾವುದೇ ಖಾಸಗಿ ಹವಾನಿಯಂತ್ರಿತ ಎರಡು […]

ಉಡುಪಿ ಜಿಲ್ಲೆಯ ಡಾ.ಹರೀಶ್ ಹಂದೆ ಸೇರಿದಂತೆ ಇಬ್ಬರು ಭಾರತೀಯರಿಗೆ ರಾಮನ್ ಮ್ಯಾಗ್ಸೇಸೆ ಪ್ರಶಸ್ತಿ

Thursday, July 28th, 2011
Harish-Hande-Neelima-Misra

ಬೆಂಗಳೂರು : ಪ್ರತಿಷ್ಠಿತ ರಾಮನ್ ಮ್ಯಾಗ್ಸೇಸೆ ಪ್ರಶಸ್ತಿ ಈ ಬಾರಿ ಇಬ್ಬರು ಭಾರತೀಯರಿಗೆ ಸಿಕ್ಕಿದೆ. ಉಡುಪಿ ಜಿಲ್ಲೆಯ ಡಾ.ಹರೀಶ್ ಹಂದೆ ಹಾಗೂ ಮಹಾರಾಷ್ಟ್ರದ ನೀಲಿಮಾ ಮಿಶ್ರಾ ಈ ಭಾರಿ ಪಡೆದ ಭಾರತೀಯರು. ಒಟ್ಟು ಆರು ಮಂದಿಗೆ ಈ ಪ್ರಶಸ್ತಿ ನೀಡಲಾಗಿದೆ. ಡಾ.ಹರೀಶ್ ಹಂದೆ ಮೂಲತ: ಉಡುಪಿ ಜಿಲ್ಲೆಯ ಕೋಟದ ಹಂದೆ ಕುಟುಂಬಕ್ಕೆ ಸೇರಿದವರು. ಸೌರ ವಿದ್ಯುತನ್ನು ಕರ್ನಾಟಕ ರಾಜ್ಯದ ಹಳ್ಳಿಹಳ್ಳಿಗೂ ಕೊಂಡೊಯ್ದು, ಸುಮಾರು ಒಂದು ಲಕ್ಷ ಬಡ ಕುಟುಂಬಗಳ ಗುಡಿಸಲುಗಳಲ್ಲಿ ಸೌರ ಶಕ್ತಿಯ ಮೂಲಕ ಬೆಳಕನ್ನು ನೀಡಿದ್ದಾರೆ. […]

ಪಣಂಬೂರು ಮತ್ತು ತಣ್ಣೀರುಬಾವಿ ಕಡಲತೀರದಲ್ಲಿ ಪ್ಲಾಸ್ಟಿಕ್ ನಿಷೇಧ

Thursday, July 28th, 2011
Plastic Ban by MCC

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಣಂಬೂರು ಮತ್ತು ತಣ್ಣೀರುಬಾವಿ ಕಡಲ ತೀರದ ಪ್ರದೇಶಗಳಲ್ಲಿ ಬಳಸಿ ಎಸೆಯಲ್ಪಟ್ಟ ಪ್ಲಾಸ್ಟಿಕ್ ವಸ್ತುಗಳು ಮತ್ತು ತ್ಯಾಜ್ಯಗಳು ಕಡಲ ಕಿನಾರೆಯ ಪರಿಸರಕ್ಕೆ ಹಾನಿ ಮಾಡುತ್ತಿದ್ದು,ಇದನ್ನು ಮನಗಂಡ ಮಹಾನಗರ ಪಾಲಿಕೆ ಆಯುಕ್ತರು ಈ ವಲಯವನ್ನು ಪ್ಲಾಸ್ಟಿಕ್ ನಿಷೇಧ ಪ್ರದೇಶವೆಂದು ಘೋಷಿಸಿ ದಿನಾಂಕ 15-7-11 ರಂದು ಆದೇಶ ಹೊರಡಿಸಿದ್ದಾರೆ.ನಿಷೇಧಿತ ಪ್ರದೇಶದಲ್ಲಿ ಯಾವುದೇ ವ್ಯಕ್ತಿ ಯಾವುದೇ ರೀತಿಯ ಪ್ಲಾಸ್ಟಿಕ್ ಕವರುಗಳು,ಲೋಟಗಳು,ತಟ್ಟೆಗಳನ್ನು ಕ್ಯಾರಿ ಬ್ಯಾಗ್ಗಳ ಉಪಯೋಗ,ದಾಸ್ತಾನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಅಲ್ಲದೆ ಪ್ರವೇಶ ದ್ವಾರದಲ್ಲಿ ತನಿಖಾ […]

ಕರ್ನಾಟಕದ ನೂತನ ಲೋಕಾಯುಕ್ತರಾಗಿ ಸುಪ್ರೀಂಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ.ಪಾಟೀಲ್ ನೇಮಕ

Tuesday, July 26th, 2011
Justice Shivraj V. Patil, ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್

ಬೆಂಗಳೂರು: ಕರ್ನಾಟಕದ ನೂತನ ಲೋಕಾಯುಕ್ತರಾಗಿ ಸುಪ್ರೀಂಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್ ಮಂಗಳವಾರ ನೇಮಕಗೊಂಡಿದ್ದಾರೆ. 11.1.2005ರಲ್ಲಿ ಸುಪ್ರೀಂಕೋರ್ಟಿನ ನ್ಯಾಯಮೂರ್ತಿಯಾಗಿ ನಿವೃತ್ತರಾದ ನ್ಯಾ. ಪಾಟೀಲ್ ಅವರು 1962ರಲ್ಲಿ ಗುಲ್ಬರ್ಗಾದಲ್ಲಿ ವಕೀಲಿ ವೃತ್ತಿ ಆರಂಭಿಸಿ, 1979 ರವರೆಗೂ ಅಲ್ಲಿ ನ್ಯಾಯವಾದಿಯಾಗಿದ್ದರು. ಗುಲ್ಬರ್ಗಾದ ಸೇಠ್ ಶಂಕರಲಾಲ್ ಲಹೋಟಿ ಕಾನೂನು ಕಾಲೇಜಿನಲ್ಲಿ ಅರೆಕಾಲಿಕ ಕಾನೂನು ಉಪನ್ಯಾಸಕರಾಗಿದ್ದರು. 1975ರಿಂದ 78ರವರೆಗೂ ಇದೇ ಕಾಲೇಜಿನಲ್ಲಿ ಪ್ರಿನ್ಸಿಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಹೈದರಾಬಾದಿನ ಶ್ರೀ ಶರಣ ಬಸವೇಶ್ವರ ಸಂಸ್ಥಾನದ ಕರ್ನಾಟಕ ಶಿಕ್ಷಣ ಸಂಸ್ಥೆಯ ಕಾನೂನು ಸಲಹೆಗಾರಾಗಿದ್ದರು. 1940ರ […]