ಜನರಲ್ಲಿ ಕಾನೂನು ಬಗ್ಗೆ ಅರಿವು ಮೂಡಿಸಿ ಜಾಗೃತಿ ಮೂಡಿಸಬೇಕು

Saturday, April 30th, 2011
ನ್ಯಾಯಾಲಯ ಹಾಗೂ ನ್ಯಾಯಾಂಗ ಅಧಿಕಾರಿಗಳ ವಸತಿಗೃಹಕ್ಕೆ ಶಂಕುಸ್ಥಾಪನೆ

ಮಂಗಳೂರು : ತನ್ನ ಸುತ್ತ ನಡೆಯುತ್ತಿರುವ  ಅನ್ಯಾಯ ಶೋಷಣೆ,ಭ್ರಷ್ಠಾಚಾರ,ಕೊಲೆಸುಲಿಗೆಗಳು ನಿಲ್ಲಬೇಕಾದರೆ ಪ್ರತಿಯೊಬ್ಬರೂ ಕಾನೂನಿನ ಅರಿವನ್ನು ಹೊಂದಬೇಕು.ಆಗ ಮಾತ್ರ ಭ್ರಷ್ಠಾಚಾರಿಗಳು,ಸ್ವಜನ ಪಕ್ಷಪಾತಿಗಳು,ಕೊಲೆಗಡುಕರು ಮುಂತಾದವರು ಸಮಾಜದಿಂದ ದೂರ ಹೋಗುತ್ತಾರೆ.ಇದರಿಂದ ಸಮಾಜದಲ್ಲಿ ನೆಮ್ಮದಿ ಶಾಂತಿ ಸೌಹಾರ್ಧತೆ ಮೂಡಿ ಜನರ ಜೀವನ ಸುಖಮಯವೂ,ಪ್ರಗತಿದಾಯಕವೂ ಆಗಿರುತ್ತದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ದ.ಕ. ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಶ್ರೀ ಎಚ್.ಎನ್.ನಾಗಮೋಹನದಾಸ್ ಅವರು ತಿಳಿಸಿದ್ದಾರೆ. ಅವರು ಇಂದು ಮೂಡಬಿದ್ರೆಯಲ್ಲಿ ರೂ.4ಕೋಟಿ ವೆಚ್ಚದಲ್ಲಿ ನಿರ್ಮಿಸಲಿರುವ ಸಿವಿಲ್ ಹಾಗೂ ಪ್ರಥಮ ದರ್ಜೆ ನ್ಯಾಯಿಕದಂಡಾಧಿಕಾರಿಗಳ ನ್ಯಾಯಾಲಯ ಹಾಗೂ […]

ಕಾನೂನು ಸಚಿವ ಎಂ.ವೀರಪ್ಪ ಮೊಲಿಯವರಿಂದ ನೂತನ ಆರೋಗ್ಯ ಕೇಂದ್ರದ ಕಟ್ಟಡಕ್ಕೆ ಶಿಲಾನ್ಯಾಸ

Friday, April 29th, 2011
ಕಾನೂನು ಸಚಿವ ಎಂ.ವೀರಪ್ಪ ಮೊಲಿಯವರಿಂದ ನೂತನ ಆರೋಗ್ಯ ಕೇಂದ್ರದ ಕಟ್ಟಡಕ್ಕೆ ಶಿಲಾನ್ಯಾಸ

ಮಂಗಳೂರು : ಮಂಜನಾಡಿ ಗ್ರಾಮದ ನಾಟೆಕಲ್ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಮಂಜನಾಡಿ, ರಕ್ಷಾ ಸಮಿತಿ ಪ್ರಾಥಮಿಕ ಆರೋಗ್ಯ ಕೇಂದ್ರ ನಾಟೆಕಲ್ ಇಲ್ಲಿ ಸುಮಾರು 1ಕೋಟಿ. ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಕಟ್ಟಡಕ್ಕೆ ಕೇಂದ್ರ ಕಾನೂನು ಸಚಿವ ಎಂ.ವೀರಪ್ಪ ಮೊಲಿ ಶಂಕುಸ್ಥಾಪನೆಗೈದರು. ಬಳಿಕ ಮಾತನಾಡಿದ ಅವರು ಜಿಲ್ಲೆಯಲ್ಲಿ ಸಮುದ್ರ ಸೇರುವ ನದಿ ನೀರಿಗೆ ಅಲ್ಲಲ್ಲಿ ಅಣೆಕಟ್ಟು ನಿರ್ಮಿಸಿ, ಸಂಗ್ರಹವಾದ ನೀರಿಂದ ಕುಡಿಯುವ ನೀರಿನ ಸಮಸ್ಯೆ ನೀಗಿಸಬಹುದು. ವ್ಯರ್ಥವಾಗಿ ಪೋಲಾಗುವ ನದಿ ನೀರನ್ನು […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಆಡಳಿತ ಅನುಭವ ತಂದಿದೆ- ರೋಹಿಣಿ ಸಿಂಧೂರಿ

Wednesday, April 27th, 2011
ರೋಹಿಣಿ ಸಿಂಧೂರಿ

ಮಂಗಳೂರು : ಭಾರತ ಆಡಳಿತ ಸೇವೆ ಖಾಯಂ ಪೂರ್ವ ಅವಧಿ (ಪ್ರೊಬೇಷನರಿ)ಸೇವೆಗೆ ದಕ್ಷಿಣಕನ್ನಡ ಜಿಲ್ಲೆಗೆ ನಿಯೋಜಿಸಿದ ತಮಗೆ ಜಿಲ್ಲೆಯಲ್ಲಿ ವಿಶಿಷ್ಟವಾದ ಉತ್ತಮ ಆಡಳಿತ ಅನುಭವ ಆಗಿದೆ. ಇದರಿಂದ ನನ್ನ ಮುಂದಿನ ಸರ್ಕಾರಿ ಸೇವೆಗೆ ಬಹಳಷ್ಟು ನೆರವಾಗಲಿದೆ ಎಂದು ಐಎಎಸ್ ಪ್ರೊಬೇಷನರಿ ಜಿಲ್ಲಾಧಿಕಾರಿ ಶ್ರೀಮತಿ ರೋಹಿಣಿ ಸಿಂಧೂರಿ ಅವರು ಜಿಲ್ಲೆಯ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತ ಪಡಿಸಿದರು. ಅವರು ಇಂದು ಪ್ರೋಬೆಷನರಿ ಅವಧಿ ಮುಗಿಸಿದ ಬಗ್ಗೆ  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಬೀಳ್ಕೊಡುಗೆ ಸ್ವೀಕರಿಸಿ ಮಾತನಾಡಿದರು. ಇಲ್ಲಿಯ […]

ಎಪಿಎಂಸಿ ಚುನಾವಣೆಯಲ್ಲಿ ಕಾಂಗ್ರೆಸ್ಸ್ ಗೆ ಮೇಲುಗೈ

Tuesday, April 26th, 2011
ಎಪಿಎಂಸಿ ಚುನಾವಣೆ

ಮಂಗಳೂರು : ಮಂಗಳೂರು ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಭಾನುವಾರ ನಡೆದ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಹದಿನಾಲ್ಕು ಸ್ಥಾನಗಳ ಪೈಕಿ ಏಳು ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಬಿಜೆಪಿ ನಾಲ್ಕು ಸ್ಥಾನಗಳನ್ನು ಪಡೆದ ಎರಡನೆ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದು, ಜೆಡಿಎಸ್ ಮೂರು ಕ್ಷೇತ್ರಗಳನ್ನು ತನ್ನದಾಗಿಸಿಕೊಂಡಿದೆ. 14 ಕ್ಷೇತ್ರಗಳ ಪೈಕಿ ಮೂಲ್ಕಿ, ವಾಮಂಜೂರು, ಎಡಪದವು, ಬಜಪೆ, ಬೆಳುವಾಯಿ, ಸುರತ್ಕಲ್ ಹಾಗೂ ಪುತ್ತಿಗೆ(ಕಾಂಗ್ರೆಸ್ ಬೆಂಬಲಿತ ರೈತ ಸಂಘ) ಕ್ಷೇತ್ರಗಳು ಕಾಂಗ್ರೆಸ್‌ನ ಪಾಲಾಗಿವೆ. ಕೋಟೆಕಾರ್, ವರ್ತಕರ […]

ದೇವ ಮಾನವ, ಪವಾಡ ಪುರುಷ ಸತ್ಯ ಸಾಯಿ ಬಾಬ ಅಸ್ತಂಗತ

Sunday, April 24th, 2011
ಸತ್ಯಸಾಯಿಬಾಬಾ

ಪುಟ್ಟಪರ್ತಿ : ನ್ಯೂಮೋನಿಯಾ, ಉಸಿರಾಟ ಮತ್ತು ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಸಾಯಿ ಬಾಬ (86) ಸುಮಾರು ಒಂದು ತಿಂಗಳ ಕಾಲ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿ ಭಾನುವಾರ ಬೆಳಗ್ಗೆ 7.40ಕ್ಕೆ ಕೊನೆಯುಸಿರೆಳೆದಿದ್ದಾರೆ. ಸಾಯಿಬಾಬಾ ಆರೋಗ್ಯದಲ್ಲಿ ಚೇತರಿಕೆ ಕಾಣದೆ ಹೃದಯ ಸ್ತಂಭನಗೊಂಡು ಸಾವನ್ನಪ್ಪಿದ್ದಾರೆ. ಈ ಕುರಿತು ಸತ್ಯಸಾಯಿ ಬಾಬಾ ಟ್ರಸ್ಟ್ 10.10ಕ್ಕೆ ಅಧಿಕೃತ ಘೋಷಣೆ ಮಾಡಿದೆ. ಪುಟ್ಟಪರ್ತಿಯಲ್ಲಿ ಸ್ಮಶಾನ ಮೌನ ನೆಲೆಸಿದೆ. ಸಾಯಿ ಕುಲವಂತ್ ಹಾಲ್ ನಲ್ಲಿ ಸಾಯಿಬಾಬಾ ಅಂತಿಮ ದರ್ಶನಕ್ಕೆ ಇಂದು ಸಂಜೆ 6 ಗಂಟೆಗೆ […]

ಮಹಾನಗರಪಾಲಿಕೆ ಕಾಮಗಾರಿ-ಗುತ್ತಿಗೆದಾರರಿಗೆ ಕಾಲಮಿತಿಯಲ್ಲಿ ಬಿಲ್ ಪಾವತಿಸಿ-ಶ್ರೀ ಜೆ.ಕೃಷ್ಣ ಪಾಲೇಮಾರ್

Saturday, April 23rd, 2011
ಜೆ.ಕೃಷ್ಣ ಪಾಲೇಮಾರ್

ಮಂಗಳೂರು : ಮಂಗಳೂರು ನಗರದಲ್ಲಿ ಮೂಲಭೂತ ಸೌಲಭ್ಯಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಮಾನ್ಯ ಮುಖ್ಯ ಮಂತ್ರಿಗಳು ನೀಡಿರುವ ವಿಶೇಷ ಅನುದಾನದಡಿಯಲ್ಲಿ ವಿವಿಧ ಕಾಮಗಾರಿಗಳ ಗುತ್ತಿಗೆ ಪಡೆದಿರುವ ಗುತ್ತಿಗೆದಾರರಿಗೆ ಕಾಮಗಾರಿ ಪೂರ್ಣಗೊಂಡ   20 ದಿನಗಳೊಳಗೆ ಬಿಲ್ಲಿನ ಹಣ ಪಾವತಿ ಮಾಡುವಂತೆ ಮಹಾನಗರಪಾಲಿಕೆಯ ಅಧಿಕಾರಿಗಳಿಗೆ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ,ಮೀನುಗಾರಿಕೆ,ಪರಿಸರ ಸಚಿವರಾದ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೃಷ್ಣ ಜೆ.ಪಾಲೇಮಾರ್ರವರು ಸೂಚಿಸಿದ್ದಾರೆ. ಅವರು  ನಿನ್ನೆ ಮಂಗಳೂರು ಮಹಾನಗರಪಾಲಿಕೆಯಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಈ ವಿಷಯ ತಿಳಿಸಿದರು. […]

‘ಅಡಿಕೆಯಿಂದ ಆಹಾರ ಬೆಳೆಯತ್ತ ಮುಖ ಮಾಡುವ ರೈತರಿಗೆ ಪೈಲಟ್ ಯೋಜನೆ ರೂಪಿಸಿ’

Thursday, April 21st, 2011
ಜಿಲ್ಲಾಧಿಕಾರಿ ಕಚೇರಿಯಲ್ಲಿ ರೈತರ ಸಭೆ

ಮಂಗಳೂರು : ಅಡಿಕೆ ಕೃಷಿಯಿಂದ ಆಹಾರ ಬೆಳೆಯನ್ನು ಬೆಳೆಯಲು ಉತ್ಸುಕರಾಗಿರುವ ರೈತರಿಗೆ ಪ್ರೋತ್ಸಾಹ ನೀಡಲು ಸರ್ಕಾರ ರೈತರಿಗಾಗಿ ಪೈಲಟ್ ಯೋಜನೆಯನ್ನು ರೂಪಿಸಬೇಕು ಎಂದು ರೈತ ಮುಖಂಡರಲ್ಲೊಬ್ಬರಾದ ಶ್ರೀ ರವಿಕಿರಣ ಪುಣಚ ಹೇಳಿದರು. ಅವರಿಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅವರ ಕಚೇರಿಯಲ್ಲಿ ಆಯೋಜಿಸಿದ್ದ ರೈತರ ಸಭೆಯಲ್ಲಿ ಮಾತನಾಡುತ್ತಿದ್ದರು. ಸಾಲಮನ್ನಾ ಯೋಜನೆ, ಅಡಿಕೆ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ, ಹಳದಿರೋಗ, ಕೊಳೆ ರೋಗ ತಡೆಗೆ ಕ್ರಮ, ಕುಮ್ಕಿ ಜಮೀನು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ರೈತರು ಜಿಲ್ಲಾಡಳಿತದ ಗಮನ ಸೆಳೆದರು. ರೈತರ […]

ಗಜಾನನ ಮಿತ್ರ ಮಂಡಳಿ ವತಿಯಿಂದ ಕೋಟೆಕಾರಿನಲ್ಲಿ ಬಿಸುಪರ್ಬ

Wednesday, April 20th, 2011
ಗಜಾನನ ಮಿತ್ರ ಮಂಡಳಿ

ಮಂಗಳೂರು : ಕೋಟೆಕಾರಿನಲ್ಲಿ ಗಜಾನನ ಮಿತ್ರ ಮಂಡಳಿ ಆಶ್ರಯದಲ್ಲಿ ದಿ. 17-4-2011 ರಂದು ವಿಜೃಂಭಣೆಯಿಂದ ಬಿಸುಪರ್ಬ ಆಚರಿಸಲಾಯಿತು. ಬೆಳಿಗ್ಗೆ ಕೋಟೆಕಾರಿನ  ಸಿಂಹವಾಹಿನಿಯ ದೇವಸ್ಥಾನದ ಎದುರಿನ ಮೈದಾನದಲ್ಲಿ ಗ್ರಾಮೀಣ ಕ್ರೀಡಾಕೂಟ  ಉದ್ಘಾಟನೆ ನಡೆಯಿತು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಪಂಚಾಯತ್  ಸದಸ್ಯರಾದ ಗೀತಾ.ಜಿ.ಪ್ರಭು ವಹಿಸಿದ್ದರು. ಉದ್ಘಾಟನೆಯನ್ನು ತುಳುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಜೆಪ್ಪು ವಹಿಸಿ ತುಳುನಾಡಿನ ಪ್ರಮುಖ ಹಬ್ಬವಾದ ಬಿಸುಪರ್ಬ ಕಳೆದ ಜೀವನದಲ್ಲಿ ಸುಖ ಹಾಗೂ ದು:ಖವನ್ನು ಮರೆತು  ಮುಂದಿನ ವರ್ಷದಲ್ಲಿ    ಸಂತೋಷವನ್ನು ತರಲಿ ಎಂದು ಹಾರೈಸಿದರು. […]

ಮೀನುಗಾರಿಕೆ ಬಂದರ್ ವರೆಗೆ ಸಿಟಿ ಬಸ್

Monday, April 18th, 2011
ಮೀನುಗಾರಿಕೆ ಬಂದರ್ ವರೆಗೆ ಸಿಟಿ ಬಸ್ ಮೀನುಗಾರಿಕೆ ಬಂದರ್ ವರೆಗೆ ಸಿಟಿ ಬಸ್

ಮಂಗಳೂರು : ಮೀನುಗಾರರಿಗೆ ಅನುಕೂಲವಾಗುವಂತೆ ಈ ಹಿಂದೆ ಇದ್ದಂತೆ ರೂಟ್ ಸಂ.26,32 ಹಾಗೂ ಇನ್ನು ಕೆಲವು ಮಾರ್ಗದ ಬಸ್ಸುಗಳನ್ನು ಹಳೆ ಬಂದರು ಪ್ರದೇಶದ ಮೀನುಗಾರಿಕಾ ಬಂದರ್ ವರೆಗೆ ವಿಸ್ತರಣೆ ಮಾಡಲು ಕ್ರಮಕೈಗೊಳ್ಳುವುದಾಗಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಶ್ರೀ ಸುಭೋದ್ ಯಾದವ್ ಅವರು ಮೀನುಗಾರರ ಸಂಘದ ಪದಾಧಿಕಾರಿಗಳಿಗೆ ತಿಳಿಸಿದ್ದಾರೆ. ಅವರು ಇಂದು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಮೀನುಗಾರಿಕೆಗೆ ಸಂಬಂಧಿಸಿದ ವಿಷಯಗಳ ಕುರಿತ ಸಭೆಯಲ್ಲಿ ಈ ವಿಷಯ ತಿಳಿಸಿದರು. ಮೀನುಗಾರರ ಸೂಕ್ತ ರಕ್ಷಣೆಗೆ ಸಂಘದ ಸದಸ್ಯರು ಜಿಲ್ಲಾಧಿಕಾರಿಗಳನ್ನು ವಿನಂತಿಸಿದರು. ಇತ್ತೀಚೆಗೆ ಮೀನುಗಾರರಿಗೆ […]

ಲೇಡಿಗೋಶನ್ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಿಲಾನ್ಯಾಸ

Saturday, April 16th, 2011
ಲೇಡಿಗೋಶನ್ ಆಸ್ಪತ್ರೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಿಲಾನ್ಯಾಸ

ಮಂಗಳೂರು : ಸರ್ಕಾರಿ ಲೇಡಿಗೋಶನ್ ಆಸ್ಪತ್ರೆಯ ಆವರಣದಲ್ಲಿ 18 ಕೋಟಿ ರೂ. ವೆಚ್ಚದಲ್ಲಿ ಆಂಧ್ರ ಪ್ರದೇಶದ ಉದ್ಯಮಿ ರಾಘವ ನಾಯ್ಡು ನಿರ್ಮಿಸಿ ಕೊಡಲಿರುವ ಎಂಟು ಅಂತಸ್ತುಗಳ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯ ಕಟ್ಟಡಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಶಿಲಾನ್ಯಾಸ ನೆರವೇರಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕೆ.ಆರ್. ಕೀರ್ತಿ ಫೌಂಡೇಶನ್ ಟ್ರಸ್ಟ್ ನ ಆಡಳಿತ ಟ್ರಸ್ಟಿ ರಾಘವ ನಾಯ್ಡು ರವರು ತನ್ನ ಕೀರ್ತಿ ಶೇಷ ಪುತ್ರಿ ಕೆ.ಆರ್.ಕೀರ್ತಿ ಯ ಹೆಸರಿ ನಲ್ಲಿ ಮಂಗಳೂರಿನ ಜನತೆಗೆ […]