ಡಾ.ಜಯಂತ ಆಠವಲೆಯವರ 77ನೇ ಜನ್ಮೋತ್ಸವದ ನಿಮಿತ್ತ ಮಂಗಳೂರಿನಲ್ಲಿ ಹಿಂದೂ ಏಕತಾ ಮೆರವಣಿಗೆ
Tuesday, May 21st, 2019ಮಂಗಳೂರು : ಸನಾತನ ಸಂಸ್ಥೆಯ ಸಂಸ್ಥಾಪಕರಾದ ಪರಾತ್ಪರ ಗುರು ಡಾ. ಜಯಂತ ಬಾಳಾಜಿ ಆಠವಲೆಯವರ 77 ನೇ ಜನ್ಮೋತ್ಸವ ನಿಮಿತ್ತ ಹಿಂದೂ ಐಕ್ಯತೆ ಮೆರವಣಿಗೆಯು ಸೋಮವಾರ ಜ್ಯೋತಿ ವೃತ್ತದಿಂದ ಧರ್ಮ ಧ್ವಜದ ಪೂಜೆಯೊಂದಿಗೆ ಪ್ರಾರಂಭವಾಗಿ ಮೆರವಣಿಗೆಯ ಮೂಲಕ ಪುರಭವನದಲ್ಲಿ ಸಮಾರೂಪ ಕಾರ್ಯಕ್ರಮದಿಂದ ಮುಕ್ತಾಯವಾಯಿತು. ಮೆರವಣೆಗೆಯಲ್ಲಿ ನೂರಾರು ಸಂಖ್ಯೆಯಲ್ಲಿ ವಿವಿಧ ಹಿಂದೂ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಮೆರವಣಿಗೆಯಲ್ಲಿ ಇಸ್ಕಾನ್ ಸಂಸ್ಥೆ, ಶ್ರೀರಾಮ ಸೇನೆ, ನವಜೀವನ ವ್ಯಾಯಾಮ ಶಾಲೆ ಮಾರ್ನಬೈಲ್ , ಖಾವಂತಾಯ ಗೆಳೆಯರು ಮಾರ್ನಬೈಲು, ಚಿರಂಜೀವಿ ಯುವಕ ಮಂಡಳಿಯ ಕಾರ್ಯಕರ್ತರು […]