ಪಲಿಮಾರು ಮಠದ ಉತ್ತರಾಧಿಕಾರಿಯಾಗಿ ಶೈಲೇಶ ಉಪಾಧ್ಯಾಯ
Saturday, May 11th, 2019ಉಡುಪಿ: ಶ್ರೀ ಪಲಿಮಾರು ಮಠದ ಉತ್ತರಾಧಿಕಾರಿಯಾಗಿ ನಿಯುಕ್ತಿಗೊಳ್ಳಲಿರುವ ವಟು ಶೈಲೇಶ ಉಪಾಧ್ಯಾಯ ಅವರು ಶುಕ್ರವಾರ ಪ್ರಾತಃಶುಭಕಾಲದಲ್ಲಿ ಸನ್ಯಾಸಾಶ್ರಮವನ್ನು ಸ್ವೀಕರಿಸಿದರು. ಗುರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಶಿಷ್ಯನಿಗೆ ಪ್ರಣವ ಮಂತ್ರೋಪದೇಶವನ್ನು ನೀಡಿದರು. ಅಕ್ಷಯ ತೃತೀಯಾದ ಶುಭ ದಿನ ಆರಂಭವಾದ ಶಿಷ್ಯ ಸ್ವೀಕಾರ ಪ್ರಕ್ರಿಯೆಯ ಭಾಗವಾಗಿ ಗುರು ವಾರ ರಾತ್ರಿ ಶಾಕಲ ಮಂತ್ರದ ಹೋಮ ನಡೆಯಿತು. ಶಾಸ್ತ್ರದಂತೆ ಉಪವಾಸವಿದ್ದು ಜಾಗರಣೆ ಮಾಡಿದ ಶೈಲೇಶರು ಪ್ರಾತಃಕಾಲ ಸನ್ಯಾಸಾಶ್ರಮವನ್ನು ಸ್ವೀಕರಿಸಿದರು. ಇದಕ್ಕೆ ಪೂರ್ವಭಾವಿಯಾಗಿ ರಾತ್ರಿ ನಡೆದ ಹೋಮದ ಅಗ್ನಿಯನ್ನು ಉಳಿಸಿಕೊಂಡು ಶುಕ್ರವಾರ ಬೆಳಗ್ಗೆ […]