ತಾಯಿ-ಮಗಳನ್ನು ಒಳಗೆ ಕರೆದುಕೊಂಡು ಹೋಗಿ ಸಮಸ್ಯೆ ಕೇಳಿದ್ದೇ ತಪ್ಪಾಯಿತು : ಯಡಿಯೂರಪ್ಪ

Friday, March 15th, 2024
yedyurappa

ಬೆಂಗಳೂರು : ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಪೋಕ್ಸೋ ಕಾಯ್ದೆ ದಾಖಲಾದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ್ದಾರೆ. ಒಂದು-ಒಂದೂವರೆ ತಿಂಗಳ ಹಿಂದೆ ಮಹಿಳೆಯೊಬ್ಬರು ಕಣ್ಣೀರು ಹಾಕುತ್ತಿದ್ದರು ಎಂದು ಒಳಗೆ ಕರೆದುಕೊಂಡು ಹೋಗಿ ಏನಮ್ಮಾ ಸಮಸ್ಯೆ ಎಂಂದು ತಾಯಿ-ಮಗಳು ಇಬ್ಬರನ್ನೂ ಕೇಳಿದೆ. ನಮಗೆ ತುಂಬಾ ಅನ್ಯಾಯ ಆಗಿದೆ ಎಂದು ಹೇಳಿದ್ರು. ಅಮ್ಮ-ಮಗಳ ಕತೆ ಕೇಳಿ ನಾನು ಪೊಲೀಸ್ ಕಮಿಷನರ್‌ ದಯಾನಂದ್‌ ಗೆ ಫೋನ್ ಮಾಡಿ ಮಾತನಾಡಿ. ಇವರಿಗೆ ಅನ್ಯಾಯ ಆಗಿದೆಯಂತೆ ನ್ಯಾಯ ಒದಗಿಸಿಕೊಡಿ ಎಂದು ತಾಯಿ-ಮಗಳು ಇಬ್ಬರನ್ನೂ ಕಳುಹಿಸಿಕೊಟ್ಟಿದ್ದೆ. ಅದಾದ […]

“ಕಾಂಗ್ರೆಸ್ ಸರಕಾರದಿಂದ ಜನರಿಗೆ ತೊಂದರೆ” -ಶಾಸಕ ಡಿ.ವೇದವ್ಯಾಸ ಕಾಮತ್

Friday, November 3rd, 2023
Vedavyas-Kamath

ಮಂಗಳೂರು: ಮಂಗಳೂರಿನಲ್ಲಿ ಸಂಪ್ರದಾಯಿಕ ಮರಳುಗಾರಿಕೆ ನಿಲ್ಲಿಸಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ 7 ಮಂದಿ ತಜ್ಞರ ವರದಿಯನ್ನು ತಯಾರಿಸಿ ಈಗಾಗಲೇ ಸಂಬಂಧಪಟ್ಟ ಇಲಾಖೆಗಳಿಗೆ ರವಾನಿಸಲಾಗಿದೆ. ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಪ್ರತ್ಯೇಕ ಮರಳು ನೀತಿಯನ್ನು ಜಾರಿ ಮಾಡುವುದಾಗಿ ಹೇಳಿದ್ದರೂ ಇಲ್ಲಿಯವರೆಗೆ ಆ ಬಗ್ಗೆ ಕ್ರಮ ಕೈಗೊಳ್ಳಲಿಲ್ಲ. ಇದರಿಂದ ಮರಳುಗಾರಿಕೆಯನ್ನೇ ನಂಬಿರುವ ವ್ಯಾಪಾರಿಗಳು, ಕೂಲಿ ಕಾರ್ಮಿಕರು ಕಂಗಾಲಾಗಿದ್ದಾರೆ. ಮರಳನ್ನು ಬ್ಲ್ಯಾಕ್ ಮಾರ್ಕೆಟ್ ನಲ್ಲಿ ದುಪ್ಪಟ್ಟು ಹಣ ಕೊಟ್ಟು ಖರೀದಿ ಮಾಡುವ ಪರಿಸ್ಥಿತಿ ಒದಗಿದೆ” ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ […]

ಗುರುಕೃಪಾಯೋಗಾನುಸಾರ ಸಾಧನೆ ಮಾಡುವಾಗ ಪ್ರತಿಭಾಶಕ್ತಿಯು ಬೇಗನೇ ಜಾಗೃತವಾಗುವುದು

Tuesday, June 30th, 2020
Guru Poornima

ಅ.ಅರ್ಥ ಕೃಪೆ ಶಬ್ದವು ‘ಕೃಪ್’ ಧಾತುವಿನಿಂದ ನಿರ್ಮಾಣವಾಗಿದೆ. ‘ಕೃಪ್’ ಎಂದರೆ ದಯೆ ತೋರಿಸುವುದು ಮತ್ತು ಕೃಪೆ ಎಂದರೆ ದಯೆ, ಕರುಣೆ, ಅನುಗ್ರಹ ಅಥವಾ ಪ್ರಸಾದ. ಗುರುಕೃಪೆಯ ಮಾಧ್ಯಮದಿಂದ ಜೀವವು ಶಿವನೊಂದಿಗೆ ಏಕರೂಪವಾಗುವುದಕ್ಕೆ, ಅಂದರೆ ಜೀವಕ್ಕೆ ಈಶ್ವರಪ್ರಾಪ್ತಿಯಾಗುವುದಕ್ಕೆ ‘ಗುರುಕೃಪಾಯೋಗ’ ಎಂದು ಹೇಳುತ್ತಾರೆ. ಆ.ಮಹತ್ವ ಬೇರೆಬೇರೆ ಯೋಗಮಾರ್ಗಗಳಿಂದ ಸಾಧನೆ ಮಾಡುವುದರಲ್ಲಿ ಅನೇಕ ವರ್ಷಗಳನ್ನು ವ್ಯರ್ಥಗೊಳಿಸದೇ, ಅಂದರೆ ಈ ಎಲ್ಲಾ ಮಾರ್ಗಗಳನ್ನು ಬದಿಗಿರಿಸಿ, ಗುರುಕೃಪೆಯನ್ನು ಬೇಗನೇ ಹೇಗೆ ಪಡೆಯುವುದು ಎಂಬುದನ್ನು ಗುರುಕೃಪಾಯೋಗವು ಕಲಿಸುತ್ತದೆ. ಆದುದರಿಂದ ಸಹಜವಾಗಿಯೇ ಈ ಮಾರ್ಗದಿಂದ ಆಧ್ಯಾತ್ಮಿಕ ಉನ್ನತಿಯು […]

ರಿಕ್ಷಾ ಚಾಲಕ, ಪಡೀಲ್ ನಿವಾಸಿ ಮುಖೇಶ್ ಮೇಲೆ ಹಲ್ಲೆ

Thursday, July 7th, 2016
Mukhesh

ಮಂಗಳೂರು: ವೃತ್ತಿಯಲ್ಲಿ ರಿಕ್ಷಾ ಚಾಲಕನಾಗಿರುವ ಪಡೀಲ್ ಭಜರಂಗದಳದ ಸದಸ್ಯನೂ ಆಗಿರುವ ಯುವಕನೋರ್ವನ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ ಘಟನೆ ನಿನ್ನೆ ಸಂಜೆ ನಗರದ ಫೈಸಲ್‍ನಗರದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಪಡೀಲ್ ನಿವಾಸಿ ಮುಖೇಶ್ ಎಂದು ಗುರುತಿಸಲಾಗಿದೆ. ಮುಖೇಶ್ ತನ್ನ ರಿಕ್ಷಾದಲ್ಲಿ ಫೈಸಲ್‍ನಗರಕ್ಕೆ ಬಾಡಿಗೆಗೆ ತೆರಳಿದ್ದ. ಈ ವೇಳೆ ರಸ್ತೆಯಲ್ಲಿ ಶೇಖರಣೆಯಾಗಿದ್ದ ಕೆಸರು ನೀರು ರಸ್ತೆ ಬದಿ ನಿಂತಿದ್ದ ಯುವಕನೋರ್ವನ ಮೇಲೆ ಎರಚಿದೆ. ಇದನ್ನೇ ನೆಪವಾಗಿರಿಸಿದ ಸ್ಥಳೀಯ ಯುವಕರು ಮುಖೇಶ್‍ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಸ್ಥಳಕ್ಕೆ […]

ಸರ್ವೀಸ್ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಸಾವು

Thursday, July 7th, 2016
Sarfaraj

ಮಂಗಳೂರು: ಸರ್ವೀಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ನಗರದ ಮೋತಿಮಹಲ್ ಹೋಟೆಲ್ ಬಳಿ ನಡೆದಿದೆ. ಗೋವಾ ಮೂಲದ ಸರ್ಫರಾಜ್(34) ಮೃತ ವ್ಯಕ್ತಿ. ಬಿ.ಸಿ.ರೋಡ್‌ನಿಂದ ಮಂಗಳೂರಿಗೆ ವೇಗವಾಗಿ ಬರುತ್ತಿದ್ದ ಎನ್ಎಸ್‌ ಬಸ್ ಮೋತಿ ಮಹಲ್ ಬಳಿ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಸರ್ಫರಾಜ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ , ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಮಂಗಳೂರಿನ ಎಕ್ಕೂರು ಗ್ರಾಮದ ಯುವತಿಯನ್ನು ಮದುವೆಯಾಗಿದ್ದ […]

ಉಡುಪಿ:27 ಕೇಂದ್ರಗಳಲ್ಲಿ -15,680 ವಿದ್ಯಾರ್ಥಿಗಳು ಪಿ.ಯು.ಸಿ. ಪರೀಕ್ಷೆ

Wednesday, March 12th, 2014
II-PUC

ಮಂಗಳೂರು/ಉಡುಪಿ : ದ್ವಿತೀಯ ಪಿ.ಯು.ಸಿ. ಪರೀಕ್ಷೆ ಮಾ.12ರಿಂದ 27ರ ವರೆಗೆ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12.25ರವರೆಗೆ ನಡೆಯಲಿದೆ. ದ.ಕ. ಜಿಲ್ಲೆಯಲ್ಲಿ 34,185 ಮತ್ತು ಉಡುಪಿ ಜಿಲ್ಲೆಯಲ್ಲಿ 15,680 ವಿದ್ಯಾರ್ಥಿಗಳು ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಷಯಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ದ.ಕ. ಜಿಲ್ಲೆಯಲ್ಲಿ ಒಟ್ಟು 49 ಪರೀûಾ ಕೇಂದ್ರಗಳಿದ್ದು, 183 ಕಾಲೇಜುಗಳ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಇವರಲ್ಲಿ 30617 ಫ್ರೆಶ್‌, 1200 ರಿಪೀಟರ್, 2468 ಖಾಸಗಿ ವಿದ್ಯಾರ್ಥಿಗಳು ಇದ್ದಾರೆ. ವಿದ್ಯಾರ್ಥಿನಿಯರ ಸಂಖ್ಯೆ 17502 ಆಗಿದ್ದು, ವಿದ್ಯಾರ್ಥಿಗಳ ಸಂಖ್ಯೆ […]

ಸ್ಟೇಟ್ ಬ್ಯಾಂಕ್ ಬಳಿ ಓಮ್ನಿ ಕಾರಿಗೆ ಸಾರ್ಟ್ ಸರ್ಕ್ಯೂಟ್ ; ತಪ್ಪಿದ ಅನಾಹುತ

Wednesday, September 25th, 2013
Car-fair

ಮಂಗಳೂರು : ನಗರದ ಸ್ಟೇಟ್ ಬ್ಯಾಂಕ್  ಬಳಿ ಇರುವ ಹ್ಯಾಮಿಲ್ಟನ್ ಕಟ್ಟಡದ ಮುಂಬಾಗದಲ್ಲಿ ನಿಲ್ಲಿಸಿದ್ದ ಓಮ್ನಿ ಕಾರನ್ನು ಸಾರ್ಟ್ ಮಾಡುವಾಗ ಸಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹತ್ತಿಕೊಂಡ ಘಟನೆ ಮಂಗಳವಾರ ಸಂಜೆ 3.30ಕ್ಕೆ ನಡೆದಿದೆ. KA 19 N 9475 ನಂಬರಿನ ಓಮ್ನಿ ಕಾರಿನಲ್ಲಿ ಕಾರಿನ ಮಾಲಿಕ ಮಹಮ್ಮದ್ ಪೈಗಂಬರ್ ರವರು ಕಂಕನಾಡಿಯಿಂದ ಮಂಗಳೂರಿನ ಹ್ಯಾಮಿಲ್ಟನ್ ಕಟ್ಟಡದ ವಕೀಲರಲ್ಲಿಗೆ ನೋಟರಿಗಾಗಿ ಬಂದಿದ್ದರು ಕಾರಿನ ಎಲ್ ಪಿಜಿ ಮುಗಿಯುವ ಹಂತದಲ್ಲಿದ್ದುದರಿಂದ ಮೂರು ಲೀಟರ್ ಪೆಟ್ರೋಲ್ ತುಂಬಿಸಿದ್ದರು. ನೋಟರಿ ಮುಗಿಸಿ ವಾಪಾಸಾಗುವಾಗ ಅವರ […]

ಉಡುಪಿ ಕೃಷ್ಣ ಮಠ ಹಾಗೂ ಇತರ ದೇವಸ್ಥಾನಗಳಲ್ಲಿ ಪಂಕ್ತಿಭೇದದ ವಿರುದ್ದ ದಲಿತ ಸಮಿತಿ ಪ್ರತಿಭಟನೆ

Wednesday, July 10th, 2013
Dalith samithi protest

ಮಂಗಳೂರು: ದ.ಕ. ಜಿಲ್ಲಾ ಸಮಿತಿ,  ಸಿಪಿಐಎಂ ಹಾಗೂ ದಲಿತ ಹಕ್ಕುಗಳ ಸಮಿತಿ ವತಿಯಿಂದ ಉಡುಪಿ ಕೃಷ್ಣ ಮಠ ಹಾಗೂ ಸರಕಾರದ ಸ್ವಾಧೀನದಲ್ಲಿರುವ ಇತರ ಸಂಸ್ಥೆಗಳಲ್ಲಿ ಮಡೆಮಡಸ್ನಾನ ಹಾಗೂ ಭೋಜನದಲ್ಲಿ ಪಂಕ್ತಿಭೇದ ನಡೆಸುವುದನ್ನು ನಿಲ್ಲಿಸ ಬೇಕು ಎಂದು ಒತ್ತಾಯಿಸಿ  ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು. ಸಿಪಿಐಎಂ ಪಕ್ಷದ ಕಾರ್ಯದರ್ಶಿ ಮಂಡಳಿ ಸದಸ್ಯ ವಸಂತ ಆಚಾರಿ, ಮಾತನಾಡಿ ಉಡುಪಿಯ ಪೇಜಾವರ ಶ್ರೀಗಳು ಒಂದೆಡೆ ದಲಿತರ ಕೇರಿಗಳಲ್ಲಿ ಪಾದಯಾತ್ರೆ ಮಾಡುತ್ತಾರೆ ಇನ್ನೊಂದೆಡೆ ಕೃಷ್ಣ ಮಠ ದಲ್ಲೆ ಪಂಕ್ತಿಬೇಧ ಮಾಡುತ್ತಾರೆ. ಅರಕೆ […]

ಕೊಟ್ಟಾರ ಸಮೀಪ ಬಂಗ್ರಕೂಳೂರು ಬಳಿ ಸೇತುವೆಗೆ ಡಿಕ್ಕಿ ಹೊಡೆದ ಬಸ್, ತಪ್ಪಿದ ಅನಾಹುತ

Tuesday, May 28th, 2013
bus skids Bangrakulur

ಮಂಗಳೂರು : ಮಂಗಳವಾರ ಹುಬ್ಬಳ್ಳಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕೊಟ್ಟಾರ ಸಮೀಪದ ಬಂಗ್ರಕೂಳೂರು ಬಳಿಯ ಕಿರು ಸೇತುವೆಯ ತಡೆಗೋಡೆಗೆ ಹೊಡೆದು ನಿಂತ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಹೊರಟ ಕೆ.ಎಸ್.ಆರ್.ಟಿ.ಸಿ ಬಸ್ ಮಂಗಳೂರಿನ ಕೂಳೂರು ಸಮೀಪಿಸುತ್ತಿದ್ದಂತೆ ಬಸ್ ನಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡು, ಬಸ್ ನ ಸ್ಟೀರಿಂಗ್ ವ್ಹೀಲ್ ತುಂಡಾಗಿದೆ. ಚಾಲಕ ಬಸ್ ನ್ನು ನಿಧಾನವಾಗಿ ಚಲಾಯಿಸಿಕೊಂಡು ಬಂದರೂ ಬಂಗ್ರಕೂಳೂರು ಸಮೀಪ  ಸುರಿದ ಮಳೆಯಿಂದಾಗಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್  ಕಿರು […]

ದೇವಾಲಯಗಳನ್ನು ವಶಕ್ಕೆ ತೆಗೆದುಕೊಳ್ಳುವ ಸರ್ಕಾರದ ನಿರ್ಧಾರಕ್ಕೆ ಬಿಜೆಪಿಯಿಂದ ತೀವ್ರ ವಿರೋಧ

Friday, May 24th, 2013
Nalin Kumar Kateel

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉಡುಪಿ ಕೃಷ್ಣಮಠ ಹಾಗು ಗೋಕರ್ಣ ದೇವಾಲಯಗಳನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವ ಕ್ರಮವನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ ಎಂದು  ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಸಿದ್ದರಾಮಯ್ಯನವರ, ದೇವಾಲಯಗಳನ್ನು ಸರ್ಕಾರದ ವಶಕ್ಕೆ ಒಳಪಡಿಸುವ ನಿರ್ಧಾರ ಭಕ್ತರ ಧಾರ್ಮಿಕ ಭಾವನೆ ಮತ್ತು ಮಠದ ಪರಂಪರೆಗೆ ಧಕ್ಕೆಯುಂಟುಮಾಡುವಂತದ್ದಾಗಿದೆ. ಯಾರದೇ ಧಾರ್ಮಿಕ ಭಾವನೆಗಳಿಗೆ  ಮತ್ತು ಮಠದ ಪರಂಪರೆಗೆ ಧಕ್ಕೆ ತರುವ ಕೆಲಸಕ್ಕೆ ಸರ್ಕಾರ ಕೈ ಹಾಕಬಾರದು  ಒಂದು ವೇಳೆ ಸರ್ಕಾರ ಮುಂದಾದರೆ ಇದರ ವಿರುದ್ದ ಬಿಜೆಪಿ ಬೃಹತ್ […]