ದುಬೈಯಿಂದ ಮಂಗಳೂರಿಗೆ ಬಂದಿದ್ದ ವ್ಯಕ್ತಿ ನಾಪತ್ತೆ

Tuesday, March 26th, 2013
Mohammad Ashraf

ಮಂಗಳೂರು : ದುಬೈಯಿಂದ ಮಂಗಳೂರಿಗೆ ಬಂದಿದ್ದ ಕಾಸರಗೋಡು ತ್ರಿಕಾರಿಪುರ ನಿವಾಸಿ ಮಹಮ್ಮದ್ ಅಶ್ರಫ್ ಎಂಬಾತ ನಾಪತ್ತೆಯಾದ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಸರಗೋಡು ತ್ರಿಕ್ಕಾರಿಪುರದ ಮುಹಮ್ಮದ್ ಕುಂಞಿ ಎಂಬವರ ಪುತ್ರ ಮುಹಮ್ಮದ್‌ಅಶ್ರಫ್ (24) ಎಂಬವರು ಮಾರ್ಚ್ 21ರಂದು ದುಬೈಯಿಂದ ಮಂಗಳೂರಿಗೆ 12:30 ಗಂಟೆಗೆ ತಲುಪಿ ಮಂಗಳೂರು ಸ್ಟೇಟ್ ಬ್ಯಾಂಕ್ ಬಳಿಯ ಕಾಯಿನ್ ಬಾಕ್ಸ್‌ನಿಂದ ತನ್ನ ಮನೆಗೆ ದೂರವಾಣಿ ಕರೆ ಮಾಡಿ ತಾನು ದುಬೈಯಿಂದ ಬಂದಿದ್ದಾಗಿ ಮತ್ತು ಬೆಂಗಳೂರಿನಲ್ಲಿರುವ ಮುನೀಫ್ ಎಂಬವರ ಮನೆಗೆ ಹೋಗುವುದಾಗಿ ತಿಳಿಸಿದ್ದಾರೆ. […]

ಕುಂದಾಪುರ ನ್ಯಾಯಾಲಯದಲ್ಲಿ ಶಂಕಿತ ನಕ್ಸಲ್ ಆರೋಪಿ ಸರೋಜಾಳ ಕೊನೆ ಪ್ರಕರಣದ ವಿಚಾರಣೆ, ಬಿದ್ದು ಹೋದ ಕೇಸ್

Saturday, March 23rd, 2013
Naxal suspect Saroja

ಕುಂದಾಪುರ : ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾಳೆ ಎಂಬ ಆರೋಪದಡಿ ಬಂಧನಕ್ಕೆ ಒಳಗಾಗಿ, ಕುಂದಾಪುರ ಜೆ.ಎಮ್.ಎಫ್.ಸಿ. ನ್ಯಾಯಾಲಯದಲ್ಲಿ ಸುಮಾರು ಹತ್ತು ಪ್ರಕರಣಗಳಲ್ಲಿ ಸಿಲುಕಿ ಎರಡೂವರೆ ವರ್ಷ ಜೈಲುವಾಸ ಶಿಕ್ಷೆಯನ್ನು ಪಡೆದಿದ್ದ ಹೊರಲೆ ಸರೋಜಾಳ ಕೊನೆ ಪ್ರಕರಣದ  ವಿಚಾರಣೆಯು ಕುಂದಾಪುರ ನ್ಯಾಯಾಲಯದಲ್ಲಿ  ಶುಕ್ರವಾರ ನಡೆಯಿತು. ಹೊರಲೆ ಸರೋಜಾಳ ಮೇಲೆ ಈ ಹಿಂದೆ  ಒಟ್ಟು ೧೦ ಪ್ರಕರಣಗಳು ದಾಖಲಾಗಿತ್ತು. ಎಲ್ಲಾ ಹತ್ತು ಪ್ರಕರಣಗಳಲ್ಲಿ  ಈ ಹಿಂದೆ ಸಾಕ್ಷ್ಯಾಧಾರಗಳಿಲ್ಲದೇ ೯ ಪ್ರಕರಣಗಳು ಖುಲಾಸೆಗೊಂಡಿದ್ದು ಬಾಕಿ ಉಳಿದ ಒಂದು ಪ್ರಕರಣದ ವಿಚಾರಣೆ ಮಾರ್ಚ್ ೨೨ […]

ವಿದಾನಸಭಾ ಚುನಾವಣೆ : ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ

Saturday, March 23rd, 2013
Indipendent candidate Halady Shreenivasa shetty

ಕುಂದಾಪುರ : ಕುಂದಾಪುರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ವಿದಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವುದಾಗಿ ಮುಲಗಳಿಂದ  ತಿಳಿದುಬಂದಿದೆ. ಬಿಜೆಪಿ ಸಚಿವ ಸ್ಥಾನದಿಂದ ವಂಚಿತರಾದ ಮೇಲೆ ಬಿಜೆಪಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಬಹುತೇಕ ರಾಜಕೀಯದಿಂದ ದೂರ ಉಳಿದಿದ್ದ ಕುಂದಾಪುರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಯವರು ಕಾರ್ಯಕರ್ತರ ಹಾಗೂ ಅಭಿಮಾನಿಗಳ ಆಕಾಂಕ್ಷೆಯಂತೆ ಪಕ್ಷೇತರ ಆಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿದುಬಂದಿದೆ.

ಏರ್ ಇಂಡಿಯಾ ಹಾಗು ಜೆಟ್ ಏರ್ ವೇಸ್ ನ ಮಂಗಳೂರು – ದುಬೈ ವಿಮಾನ ಯಾನದಲ್ಲಿ ಬದಲಾವಣೆ

Thursday, March 21st, 2013
Jet Air flights

ಮಂಗಳೂರು : ಭಾರತದ ಪ್ರಮುಖ ವಿಮಾನ ಯಾನ ಸಂಸ್ಥೆಗಳಾದ  ಏರ್ ಇಂಡಿಯಾ ಹಾಗು ಜೆಟ್ ಏರ್ ವೇಸ್ ಸಂಸ್ಥೆಗಳು ಮಂಗಳೂರು – ದುಬಾಯಿಗೆ ಪ್ರಾರಂಭಿಸಿದ್ದ ತಮ್ಮ ವಿಮಾನ ಯಾನದ ಸಮಯವನ್ನು ಬದಲಿಸಿದ್ದು ಇದು ಮಾರ್ಚ್ ೩೧ ರಿಂದ ಜಾರಿಗೆ ಬರಲಿದೆ. ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಎರಡು ವಿಮಾನಗಳಲ್ಲಿ ಮೊದಲ ವಿಮಾನವು ದುಬಾಯಿಯಿಂದ ಮುಂಜಾನೆ ಬೆಳಿಗ್ಗೆ 4.25 ಕ್ಕೆ ಹೊರಟು ಬೆಳಿಗ್ಗೆ 9.30 ಕ್ಕೆ ಮಂಗಳೂರು ತಲುಪಲಿದೆ. ಎರಡನೇ ವಿಮಾನದ ಸಮಯವನ್ನು ಬದಲಿಸದೇ ಇದ್ದು, ಈ […]

ಬಿಎಂಎಸ್ ಕಾರ್ಯಕರ್ತ ಜ್ಯೋತಿಷ್ ಕೊಲೆಯತ್ನ, ಪ್ರಮುಖ ಆರೋಪಿ ಸೈನುಲ್‌ ಅಬೀದ್‌ ನ ಬಂಧನ

Monday, March 18th, 2013
KS Sainul Abid

ಕಾಸರಗೋಡು : ಬಿಎಂಎಸ್ ಕಾರ್ಯಕರ್ತ ಅಣಂಗೂರು ಜೆಪಿ ಕಾಲನಿಯ ಜ್ಯೋತಿಷ್(26) ರ ಕೊಲೆಗೆ ಯತ್ನಿಸಿದ ಪ್ರಕರಣದ ಪ್ರಮುಖ ಆರೋಪಿ ತಾಯಲಂಗಾಡಿಯ ಸಿ.ಎ.ಪಿ.ಹೌಸ್‌ನ ಅಬಿ ಯಾನೆ ಕೆ.ಎಸ್‌.ಸೈನುಲ್‌ ಅಬೀದ್‌(22) ನನ್ನು ಬಜ್ಪೆ ವಿಮಾನ ನಿಲ್ದಾಣದಲ್ಲಿ ಕಾಸರಗೋಡು ಡಿವೈಎಸ್ಪಿ ಮೋಹನ್ ಕುಮಾರ್ ನೇತೃತ್ವದ ಪೊಲೀಸ್ ತಂಡವು ಶನಿವಾರ ಬಂಧಿಸಿದ್ದಾರೆ. ೨೦೧೩  ಫೆಬ್ರವರಿ 5,  ರ ರಾತ್ರಿ ತನ್ನ ವಿವಾಹ ಆಮಂತ್ರಣ ಪತ್ರಿಕೆಯನ್ನು ಹಂಚಿ ವಾಪಸ್ಸಾಗುತ್ತಿದ್ದ ಜ್ಯೋತಿಷ್ ಅವರನ್ನು ಆರು ಮಂದಿಯ ತಂಡ  ಅಡ್ಡಗಟ್ಟಿ ವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ […]

ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಟಿಪ್ಪರ್ – ಟಾಟಾ ಏಸ್ ನ ನಡುವೆ ಅಪಘಾತ, ಇಬ್ಬರು ಗಂಭೀರ

Saturday, March 16th, 2013
Accsident near Jalady

ಕುಂದಾಪುರ : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸರಕು ತುಂಬಿದ ಟಿಪ್ಪರ್ ಹಾಗೂ ಟಾಟಾ ಏಸ್ ಪರಸ್ಪರ ಢಿಕ್ಕಿಯಾದ ಪರಿಣಾಮ ಟಾಟಾ ಏಸ್ ನ ವಾಹನ ಚಾಲಕ ಯಶವಂತಪುರ ಪೀಣ್ಯದ ಬಶೀರ್ ಹಾಗೂ  ಟಿ. ನರಸೀಪುರ ಮೂಲದ ಸಿದ್ಧ ಎಂಬುವರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ಬೆಂಗಳೂರಿನ ವೊಡಾಫೋನ್ ಕಂಪೆನಿಯ ಶ್ರೀ ವಿಘ್ನೇಶ್ವರ ಲಾಜಿಸ್ಟಿಕ್‌ಗೆ ಸೇರಿದ ಟಾಟಾ ಏಸ್ ವಾಹನವು ಬೆಂಗಳೂರಿನಿಂದ ವೊಢಾಫೋನ್ ಟವರ್‌ಗೆ ಸಂಬಂಧಿಸಿದ ಸಲಕರಣೆಗಳನ್ನು ಗೋಕರ್ಣದಲ್ಲಿ ಇಳಿಸಿ ವಾಪಾಸ್ಸಾಗುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ […]

ಡಾ|ಪಿ.ವಿ.ಭಂಡಾರಿಯವರಿಗೆ, ಡಾ| ಹೆಗ್ಗಡೆ ಯವರಿಂದ ‘ಸಂಯಮ’ ಪ್ರಶಸ್ತಿ ಪ್ರಧಾನ

Saturday, March 16th, 2013
Samyama award 2013

ಉಡುಪಿ : ಅಜ್ಜರಕಾಡು ಪುರಭವನದಲ್ಲಿ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಉಡುಪಿಯ ಡಾ|ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ನಿರ್ದೇಶಕ ಡಾ|ಪಿ.ವಿ.ಭಂಡಾರಿಯವರಿಗೆ  ‘ಸಂಯಮ 2013’ ಪ್ರಶಸ್ತಿಯನ್ನು ಶುಕ್ರವಾರ ಡಾ|ಹೆಗ್ಗಡೆಯವರು ಪ್ರದಾನ ಮಾಡಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ|ಪಿ.ವಿ.ಭಂಡಾರಿಯವರು  ಪ್ರಶಸ್ತಿ ಜೊತೆಗೆ ಬಂದ 1 ಲ.ರೂ. ಮೊತ್ತವನ್ನು ತಾನು ಕೆಲಸ ಮಾಡುತ್ತಿರುವ ಎ.ವಿ.ಬಾಳಿಗಾ ಚಾರಿಟೀಸ್‌ಗೆ ನೀಡುವುದಾಗಿ ಘೋಷಿಸಿದರು ಮತ್ತು  ಪ್ರಶಸ್ತಿಯು ಇನ್ನಷ್ಟು ಕೆಲಸ ಮಾಡಲು ಪ್ರೇರಣೆ ನೀಡಿದೆ ಎಂದರು. ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದ ಡಾ|ಡಿ.ವೀರೇಂದ್ರ ಹೆಗ್ಗಡೆ ಯವರು ಮದ್ಯ ಮಾರಾಟದ […]

ಬಂಟ್ವಾಳ-ಕಡೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ, ಬೈಕ್ ಸವಾರ ಗಂಭೀರ

Friday, March 15th, 2013
Bike Pickup accident at bantwal

ಬಂಟ್ವಾಳ : ಬಂಟ್ವಾಳ-ಕಡೂರು ರಾಷ್ಟ್ರೀಯ ಹೆದ್ದಾರಿಯ ನಾವೂರ ಗ್ರಾಮದ ಫರ್ಲಾದಲ್ಲಿ  ಪಿಕಪ್ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಗುರುವಾರ ನಡೆದಿದೆ. ಬೈಕ್ ಸವಾರ ಮೂರ್ಜೆ ನಿವಾಸಿ ವೀರಪ್ಪ ಮೂಲ್ಯ(42) ಅವರು ಬಿಸಿ.ರೋಡ್ ನಿಂದ ಮೂರ್ಜೆ ಕಡೆ ಹೋಗುತ್ತಿರುವಾಗ ಹಿಂದಿನಿಂದ ಬಂದ ಪಿಕಪ್ ಡಿಕ್ಕಿ ಹೊಡೆದಿದೆ. ಘಟನೆಯಿಂದ ಬೈಕ್ ಸವಾರ ವೀರಪ್ಪ ಮೂಲ್ಯ ಬೈಕ್ ಸಹಿತ ರಸ್ತೆ ಬದಿಯ ಚರಂಡಿಗೆ ಎಸೆಯಲ್ಪಟ್ಟಿದ್ದರು. ಘಟನೆಯಿಂದ ತೀವ್ರ ಅಸ್ವಸ್ಥ ರಾದ ಅವರನ್ನು […]

ಇಟಲಿ ರಾಯಭಾರಿಗೆ ಸುಪ್ರೀಮ್ ಕೋರ್ಟ್ ನಿಂದ ತಡೆ

Thursday, March 14th, 2013
ಇಟಲಿ ರಾಯಭಾರಿಗೆ ಸುಪ್ರೀಮ್ ಕೋರ್ಟ್ ನಿಂದ ತಡೆ

ನವದೆಹಲಿ : ಭಾರತೀಯ ಮೀನುಗಾರರಿಬ್ಬರನ್ನು ಗುಂಡಿಕ್ಕಿ ಕೊಂದ ಆರೋಪ ಎದುರಿಸುತ್ತಿರುವ ಇಟಲಿ ನೌಕಾಪಡೆಯ ಸಿಬ್ಬಂದಿಯಿ ಬ್ಬರನ್ನು ಮರಳಿ ಒಪ್ಪಿಸುವಂತೆ ಸುಪ್ರೀಮ್ ಕೋರ್ಟ್ ಆದೇಶಿಸಿದೆ. ತಮ್ಮ ದೇಶದಲ್ಲಿನ ಮತದಾನದಲ್ಲಿ ಪಾಲ್ಗೊಳ್ಳಲು ಅನುಮತಿ ಕೋರಿ ಇಟಲಿಗೆ ತೆರಳಿದ ಇಬ್ಬರು ನೌಕಾ ಸಿಬ್ಬಂದಿಯನ್ನು ವಾಪಾಸು ಕಳುಹಿಸುವ ವಿಷಯಕ್ಕೆ ಸಂಬಂಧಪಟ್ಟಂತೆ ಮಾತು ತಪ್ಪಿರುವ ಇಟಲಿಯ ಧೋರಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಮ್ ಕೋರ್ಟ್ ದೆಹಲಿಯಲ್ಲಿರುವ ಇಟಲಿ ರಾಯಭಾರಿ ಭಾರತ ಬಿಟ್ಟು ತೆರಳುವುದಕ್ಕೆ ಗುರುವಾರ ತಡೆಯಾಜ್ಞೆ ನೀಡಿದೆಯಲ್ಲದೆ, ಈ ಕುರಿತು ಮಾರ್ಚ್ 18  ರೊಳಗೆ ಉತ್ತರಿಸುವಂತೆ […]

ಪೆಟ್ರೋಲ್ ಬೆಲೆ ೧ ರೂ. ಅಗ್ಗ, ಡೀಸೆಲ್ ೫೦ ಪೈಸೆ ಹೆಚ್ಚಳ

Thursday, March 14th, 2013
Petrol and deasel price

ನವ ದೆಹಲಿ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಬೆಲೆಗಳು ಇಳಿಯುತ್ತಿರುವ ಪರಿಣಾಮ ಪೆಟ್ರೋಲ್ ಬೆಲೆಯೂ ಒಂದು ರೂಪಾಯಿಯಷ್ಟು ಇಳಿಯಲಿದೆ. ಪೆಟ್ರೋಲ್ ಬೆಲೆ ಒಂದು ರೂಪಾಯಿಯಷ್ಟು  ಇಳಿಕೆಯಾಗಲಿದ್ದರೆ, ಜನವರಿಯಲ್ಲಿ ಪ್ರತಿ ತಿಂಗಳು ಡೀಸೆಲ್ ಬೆಲೆಯನ್ನು ಹೆಚ್ಚಿಸುವ ನಿರ್ಧಾರ ಕೈಗೊಂಡಿರುವುದರಿಂದ, ಡೀಸೆಲ್ ಬೆಲೆ ೪೦ ರಿಂದ ೫೦ ಪೈಸೆ ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಬೆಲೆಯು  ಮಾರ್ಚ್ ೧೫ ಶುಕ್ರವಾರ ಅಥವಾ ಮಾರ್ಚ್ ೧೬ ಶನಿವಾರದಿಂದು ಪ್ರಕಟಗೊಳ್ಳುವ  ಸಾಧ್ಯತೆಯಿದೆ.